ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈಗಿನ ಕಾಲದಲ್ಲಿ ಗೂಗಲ್ ಬಳಸದೆ ಇರುವ ವ್ಯಕ್ತಿಯನ್ನು ಕಂಡುಹಿಡಿಯಲು ಸಾಧ್ಯವಾಗದು ಏಕೆಂದರೆ ಪ್ರತಿಯೊಬ್ಬರೂ ತಮ್ಮದೇ ಆದ ಕೆಲಸ ಕಾರ್ಯಗಳನ್ನು ಮಾಡುವುದಕ್ಕೆ ಗೂಗಲ್ ಸಹಾಯ ಪಡೆಯುತ್ತಾರೆ.ಆಗೆಯೇ ಗೂಗಲ್ ನಮ್ಮ ನಿಮ್ಮೆಲ್ಲರ ಸಮಸ್ಯೆಗೆ ಪರಿಹಾರ ನೀಡುವುದು ಮಾತ್ರವಲ್ಲದೆ ಹಣವನ್ನು ಸಂಪಾದಿಸುವ ದಾರಿಯು ತೋರಿಸುತ್ತದೆ. ಐಟಿ ತಂತ್ರಜ್ಞಾನ ಕ್ಷೇತ್ರದಲ್ಲಿ ಪರಿಣತರಾಗಿದ್ದರೆ ಸರ್ಚ್ ಎಂಜಿನ್ ದೈತ್ಯ ಗೂಗಲ್ ನಿಮಗೊಂದು ಬಿಗ್ ಆಫರ್ ನೀಡಿದೆ. ಗೂಗಲ್ ನೀಡಿರುವ ಚಾಲೆಂಜ್ ಒಂದರಲ್ಲಿ ನೀವು ಗೆದ್ದರೆ ಬರೋಬ್ಬರಿ 10.76 ಕೋಟಿ ಬಹುಮಾನವನ್ನು ನಿಮ್ಮ ತೆಕ್ಕೆಗೆ ಹಾಕಿಕೊಳ್ಳಬಹುದಾಗಿದೆ.!ಹೌದು, ತನ್ನ ಬಳಕೆದಾರರ ಮಾಹಿತಿ ಸುರಕ್ಷತೆ ಮತ್ತು ಮೊಬೈಲ್ ಸುರಕ್ಷತೆಯನ್ನು ಮೇಲೆರಿಸುವ ಬಹುದೊಡ್ಡ ಹೊಣೆಗಾರಿಕೆಯನ್ನು ಸಮರ್ಥವಾಗಿ ನಿಭಾಯಿಸಲು ಕಂಪೆನಿ ಮುಂದಾಗಿದ್ದು, ಇದಕ್ಕಾಗಿ 10.76 ಕೋಟಿ ಹಣವನ್ನುಸ್ಪರ್ಧೆಯ ಮೂಲಕ ನೀಡುತ್ತಿದೆ.!

ಇದಕ್ಕೆ ನೀವು ಮಾಡಬೇಕಿರುವುದು ಇಷ್ಟೇ. ಗೂಗಲ್ ಒಡೆತನದ ಗೂಗಲ್ ಪಿಕ್ಸೆಲ್ ಸ್ಮಾರ್ಟ್ಫೋನ್ ಅನ್ನು ಹ್ಯಾಕ್ ಮಾಡಬೇಕು. ಹೀಗೆ ಹ್ಯಾಕ್ ಮಾಡಿದ ಯಾರಿಗಾದರೂ ಕಂಪನಿಯು 1.5 ಮಿಲಿಯನ್ ಡಾಲರ್ ಅಥವಾ 10.76 ಕೋಟಿ ಹಣವನ್ನು ಪಾವತಿಸಲಿದೆ. ಗೂಗಲ್ ಪಿಕ್ಸೆಲ್ ಸ್ಮಾರ್ಟ್ಫೋನ್ಗಳಲ್ಲಿ ಅಂತರ್ನಿರ್ಮಿತ ಭದ್ರತೆ ಹೊಂದಿರುವ ಚಿಪ್ ಅನ್ನು ಪ್ರಬಲ ಚಿಪ್ಸೆಟ್ಎಂದು ಗುರುತಿಸಲಾಗಿದ್ದು, ಇದನ್ನು ಮತ್ತಷ್ಟು ಶಕ್ತಿಯುತವಾಗಿರುವ ನಿಟ್ಟಿನಲ್ಲಿ ಗೂಗಲ್ ಇಂತಹದೊಂದು ಚಾಜೆಂಜ್ ಗೆದ್ದವರಿಗೆ ಭಾರೀ ಬಹುಮಾನವನ್ನು ಸಹ ಪ್ರಕಟಿಸಿದೆ.
ಗೂಗಲ್ ಪಿಕ್ಸೆಲ್ ಸಾಧನಗಳಲ್ಲಿ ಕಂಡುಬರುವ ಎಂಟರ್ಪ್ರೈಸ್-ಗ್ರೇಡ್ ಸೆಕ್ಯುರಿಟಿ ಚಿಪ್ ಸಾಧನ ಮತ್ತು ಆಪರೇಟಿಂಗ್ ಸಿಸ್ಟಂನಲ್ಲಿ ಸೂಕ್ಷ್ಮ ಡೇಟಾವನ್ನು ಸುರಕ್ಷಿತವಾಗಿರಿಸಲು ನಿರ್ಮಿಸಲಾಗಿದೆ. ಇದನ್ನು ಗ್ರಾಹಕರ ಸುರಕ್ಷತೆಯನ್ನು ಹೆಚ್ಚು ಖಾತ್ರಿಗೊಳಿಸುವ ಪ್ರಬಲ ಸಾಧನ ಎಂದು ಕರೆಯಲಾಗಿದೆ. ಆದ್ದರಿಂದ ಇದನ್ನು ಹ್ಯಾಕ್ ಮಾಡಲು ಅಸಾಧ್ಯ ಎನ್ನುತ್ತಿವೆ ವರದಿಗಳು. ಆದರೆ, ಇಂತಹ ಸಮಸ್ಯೆಗಳನ್ನು ಸುಲಭವಾಗಿ ಎದುರಿಸುವ ತಜ್ಞರು ನಮ್ಮ ಮಧ್ಯದಲ್ಲೇ ಇರುತ್ತಾರೆ. ಗೂಗಲ್ ತಂತ್ರಜ್ಞಾನ ಕೂಡ ಅಂತಿಮವಲ್ಲ ಎಂಬುದನ್ನು ಈಗಾಗಲೇ ಸಾಬೀತುಪಡಿಸಿದ್ದಾರೆ.

ಆಂಡ್ರಾಯ್ಡ್ ಓಎಸ್ ಡೆವಲಪರ್ ಆವೃತ್ತಿಗಳಲ್ಲಿನ ನ್ಯೂನತೆಗಳನ್ನು ಹ್ಯಾಕ್ ಮಾಡುವ ಅಥವಾ ಎತ್ತಿ ತೋರಿಸುವ ವ್ಯಕ್ತಿಗಳಿಗೆ ಗೂಗಲ್ ಪ್ರತಿವರ್ಷ ಬಗ್ ಬೌಂಟಿ ಕಾರ್ಯಕ್ರಮದಡಿಯಲ್ಲಿ ಬಹುಮಾನ ನೀಡುತ್ತಿದೆ. ಗೂಗಲ್ ತನ್ನ ಬಗ್ ಬೌಂಟಿ ಕಾರ್ಯಕ್ರಮವನ್ನು ಪ್ರಾರಂಭಿಸಿದಾಗಿನಿಂದ ಇಲ್ಲಿಯವರೆಗೂ 4 ಮಿಲಿಯನ್ ಡಾಲರ್ಗಳನ್ನು ಇಂತಹ ತಂತ್ರಜ್ಞರಿಗೆ ಪಾವತಿಸಿರುವುದಾಗಿ ತಿಳಿಸಿದೆ. ಭಾರತದ ಕೆಲ ಐಟಿ ತಂತ್ರಜ್ಞರು ಕೂಡ ಗೂಗಲ್ ನೂನ್ಯತೆಯನ್ನು ಎತ್ತಿ ತೋರಿಸಿ ಬಗ್ ಬೌಂಟಿ ಮೂಲಕ ಲಕ್ಷಾಂತಹ ಬಹುಮಾನ ಪಡೆದಿರುವುದನ್ನು ನಾವು ನೋಡಬಹುದು.

ವ್ಯಾಪಾರ ಹಾಗು ಉದ್ಯಮಗಳನ್ನು ನಡೆಸಲು ಬೇಕಿರುವ, ಅವಶ್ಯಕವಿರುವ ವೆಬ್ಸೈಟುಗಳು, ತಂತ್ರಾಂಶಗಳಲ್ಲಿ ಇರುವ ಅನೇಕ ಲೋಪ ದೋಷಗಳನ್ನು ಹುಡುಕಲು ಸಾಕಷ್ಟು ಖರ್ಚಾಗುತ್ತದೆ. ಹಲವು ತಂತ್ರಜ್ಞರ ಮೇಲೆ ಉದ್ಯಮಗಳು ಹಣ ಹೂಡಬೇಕಾಗುತ್ತದೆ. ಇದರಿಂದ ಖರ್ಚು ವಿಪರೀತ ಬರುತ್ತದೆ. ಕೆಲವೊಮ್ಮೆ ಅದೆಷ್ಟು ಖರ್ಚು ಮಾಡಿದರೂ ಎಲ್ಲ ಲೋಪ ದೋಷಗಳನ್ನು ಸರಿಪಡಿಸುವುದು ಎಷ್ಟೇ ತಜ್ಞರಿದ್ದರೂ ಸಾಧ್ಯವಾಗದ ಮಾತು ಎಂಬಂತಿರುತ್ತದೆ. ಹೀಗೆ ಇರುವಾಗ ಕಂಪೆನಿಗಳು “ಬಗ್ ಬೌಂಟಿ” ಎನ್ನುವ ಯೋಜನೆ ಮೊರೆ ಹೋಗುತ್ತಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವೈವಾಹಿಕ ಹಿಂಸೆ, ಕೌಟುಂಬಿಕ ಕಲಹ ಪ್ರಕರಣಗಳಲ್ಲಿ ಮಹಿಳೆಯರಿಂದ ಹೆಚ್ಚಿನ ದೂರು ದಾಖಲಾಗುವುದು ಸಾಮಾನ್ಯ ಸಂಗತಿ. ಆದರೆ, ಉತ್ತರ ಪ್ರದೇಶದಲ್ಲಿ 6500 ಕ್ಕೂ ಅಧಿಕ ಮಂದಿ ತಮ್ಮ ಪತ್ನಿ ಹೊಡಿತಾಳೆ ಎಂದು ಯು.ಪಿ. -100 ಗೆ ಕರೆ ಮಾಡಿದ್ದಾರೆ.
ಮದುವೆಯಾಗದ ಜೋಡಿಗೂ ಕೆಲವೊಂದು ಅಧಿಕಾರವಿದೆ. ಆದ್ರೆ ಅನೇಕರಿಗೆ ಈ ಅಧಿಕಾರದ ಬಗ್ಗೆ ಗೊತ್ತಿಲ್ಲ. ಹೊಟೇಲ್ ನಲ್ಲಿ ಒಂದೇ ರೂಮಿನಲ್ಲಿ ಮದುವೆಯಾಗದ ಜೋಡಿ ಇರುವುದು ತಪ್ಪಲ್ಲ. ಪೊಲೀಸ್ ಈ ವಿಷ್ಯದ ಬಗ್ಗೆ ನಿಮ್ಮನ್ನು ಪ್ರಶ್ನೆ ಮಾಡಿದ್ರೆ ಭಯ ಪಡಬೇಕಾಗಿಲ್ಲ. ನಿಮಗೆ ಸಿಕ್ಕ ಅಧಿಕಾರದ ಬಗ್ಗೆ ನೀವು ತಿಳಿದಿದ್ದರೆ ಭಯವಿಲ್ಲದೆ ವಾದ ಮಾಡಬಹುದು.
ಅನೇಕ ವರ್ಷಗಳ ಹಿಂದೆ, ವಿದ್ಯಾರ್ಥಿಯೋಬ್ಬನು ಕಾನೂನು ಶಿಕ್ಷಣವನ್ನು ಕಲಿಯಲು ಬಂದ. ಆದ್ರೆ ಅವನ ಹತ್ತಿರ ಶುಲ್ಕವನ್ನು ಪಾವತಿಸಲು ಸಾಧ್ಯವಿರಲಿಲ್ಲ. ಹೀಗಾಗಿ ಅವನು ಶಿಕ್ಷಕರ ಜೊತೆ ಒಪ್ಪಂದವೊಂದನ್ನು ಮಾದಿಲೊಂಡನು.ಅದೆಂದರೆ “ನಾನು ನ್ಯಾಯಾಲಯದಲ್ಲಿ ನನ್ನ ಮೊದಲ ಪ್ರಕರಣವನ್ನು ಗೆಲ್ಲುವ ದಿನ ನಿಮ್ಮ ಶುಲ್ಕವನ್ನು ನಾನು ಪಾವತಿಸುತ್ತೇನೆ” ಎಂದು ವಿಧ್ಯಾರ್ಥಿ ಮತ್ತು ಶಿಕ್ಷಕರು ಒಪ್ಪಂದ ಮಾಡಿಕೊಂಡರು.
ಆನ್ಲೈನ್ ನಲ್ಲಿ ಹುಡುಗಿ ಸಿಗುತ್ತಾಳೆ ಎಂದು ಹುಡುಗರು ಚಾಟ್ ಮಾಡುತ್ತಾ ಸ್ವಲ್ಪ ಯಾಮಾರಿದ್ರೂ ಲಕ್ಷ ಲಕ್ಷ ಹಣ ದೋಚುವವರು ಇದ್ದಾರೆ. ಇಂತಹ ಆನ್ಲೈನ್ ದೋಖಾ ಪ್ರಕರಣಗಳ ಉದಾಹರಣೆಗಳು ಸಾಕಷ್ಟಿದ್ದರೂ ಮತ್ತೆ ಕೆಲವರು ಆನ್ಲೈನ್ ನಲ್ಲಿ ಪರಿಚಯವಾದವರಿಂದ ಪದೇ ಪದೇ ಮೋಸ ಹೋಗುತ್ತಿರುತ್ತಾರೆ.
ಗೋವಾ ಪ್ರವಾಸಮಾಡ ಹೊರಟಿರುವ ಪ್ರವಾಸಿಗರೂ ಮತ್ತು ಮದ್ಯ ಪ್ರಿಯರಿಗೆ ಸಿಹಿ ಸುದ್ದಿ ಇದ್ದು, ಇನ್ನು ಮುಂದೆ ಗೋವಾದಿಂದಹೆಚ್ಚು ಮದ್ಯದ ಬಾಟಲಿಗಳನ್ನು ಮನೆಗೊಯ್ಯಲು ಅಲ್ಲಿನ ಸರ್ಕಾರ ಅವಕಾಶ ನೀಡಿದೆ. ಅಚ್ಚರಿ ಪಡಬೇಡಿಇದು ನಿಜ…. ಹೌದು.. ಗೋವಾ ಪ್ರವಾಸಕ್ಕೆ ಹೋಗುವ ಮದ್ಯಪ್ರಿಯರಿಗೆ ಅಲ್ಲಿನ ಸರ್ಕಾರ ಸಿಹಿ ಸುದ್ದಿನೀಡಿದ್ದು, ಇನ್ನು ಮುಂದೆ ಪ್ರವಾಸ ಮುಗಿಸಿ ಮನೆಗೆ ಮರಳುವ ಇತರೆ ರಾಜ್ಯಗಳ ಪ್ರವಾಸಿಗರು ಹೆಚ್ಚುವರಿಮದ್ಯದ ಬಾಟಲಿಗಳನ್ನು ಮನೆಗೆ ಕೊಂಡೊಯ್ಯಬಹುದು. ಆದಾಯ ಕೊರತೆಯಿಂದ ಕಂಗೆಟ್ಟಿರುವ ಗೋವಾ ಸರ್ಕಾರ ಇಂತಹುದೊಂದು ಪ್ರಸ್ತಾವನೆಯನ್ನು ಮುಂದಿಟ್ಟಿದ್ದು, ಶೀಘ್ರದಲ್ಲಿಯೇ ಈ…
ಮೆಗಾಸ್ಟಾರ್ ಚಿರಂಜೀವಿ ಅಭಿನಯದ ಬಹುನಿರೀಕ್ಷೆಯ ತೆಲುಗು ಚಿತ್ರ ‘ಸೈರಾ ನರಸಿಂಹ ರೆಡ್ಡಿ’ ಆರಂಭದಿಂದಲೂ ಭಾರೀ ಕುತೂಹಲ ಮೂಡಿಸಿದೆ. ಭಾರತೀಯ ಚಿತ್ರರಂಗದ ಗಮನ ಸೆಳೆದಿರುವ ‘ಸೈರಾ ನರಸಿಂಹ ರೆಡ್ಡಿ’ ಚಿತ್ರದಲ್ಲಿ ಘಟಾನುಘಟಿ ಕಲಾವಿದರು ಅಭಿನಯಿಸಿದ್ದಾರೆ. ಬಿಗ್ ಬಿ ಅಮಿತಾಬ್ ಬಚ್ಚನ್, ಕಿಚ್ಚ ಸುದೀಪ್, ವಿಜಯ್ ಸೇತುಪತಿ, ಜಗಪತಿಬಾಬು, ಅನುಷ್ಕಾ ಶೆಟ್ಟಿ, ನಯನ ತಾರಾ, ತಮನ್ನಾ ಸೇರಿದಂತೆ ಹಲವು ಕಲಾವಿದರು ಅಭಿನಯಿಸಿದ್ದಾರೆ. ರಾಮ್ ಚರಣ್ ತೇಜ ನಿರ್ಮಾಣ ಮಾಡಿರುವ ಈ ಚಿತ್ರವನ್ನು ಸುಧೀಂದರ್ ರೆಡ್ಡಿ ನಿರ್ದೇಶಿಸಿದ್ದಾರೆ. ಈಗಾಗಲೇ ‘ಸೈರಾ ನರಸಿಂಹ…