ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈಗಿನ ಕಾಲದಲ್ಲಿ ಗೂಗಲ್ ಬಳಸದೆ ಇರುವ ವ್ಯಕ್ತಿಯನ್ನು ಕಂಡುಹಿಡಿಯಲು ಸಾಧ್ಯವಾಗದು ಏಕೆಂದರೆ ಪ್ರತಿಯೊಬ್ಬರೂ ತಮ್ಮದೇ ಆದ ಕೆಲಸ ಕಾರ್ಯಗಳನ್ನು ಮಾಡುವುದಕ್ಕೆ ಗೂಗಲ್ ಸಹಾಯ ಪಡೆಯುತ್ತಾರೆ.ಆಗೆಯೇ ಗೂಗಲ್ ನಮ್ಮ ನಿಮ್ಮೆಲ್ಲರ ಸಮಸ್ಯೆಗೆ ಪರಿಹಾರ ನೀಡುವುದು ಮಾತ್ರವಲ್ಲದೆ ಹಣವನ್ನು ಸಂಪಾದಿಸುವ ದಾರಿಯು ತೋರಿಸುತ್ತದೆ. ಐಟಿ ತಂತ್ರಜ್ಞಾನ ಕ್ಷೇತ್ರದಲ್ಲಿ ಪರಿಣತರಾಗಿದ್ದರೆ ಸರ್ಚ್ ಎಂಜಿನ್ ದೈತ್ಯ ಗೂಗಲ್ ನಿಮಗೊಂದು ಬಿಗ್ ಆಫರ್ ನೀಡಿದೆ. ಗೂಗಲ್ ನೀಡಿರುವ ಚಾಲೆಂಜ್ ಒಂದರಲ್ಲಿ ನೀವು ಗೆದ್ದರೆ ಬರೋಬ್ಬರಿ 10.76 ಕೋಟಿ ಬಹುಮಾನವನ್ನು ನಿಮ್ಮ ತೆಕ್ಕೆಗೆ ಹಾಕಿಕೊಳ್ಳಬಹುದಾಗಿದೆ.!ಹೌದು, ತನ್ನ ಬಳಕೆದಾರರ ಮಾಹಿತಿ ಸುರಕ್ಷತೆ ಮತ್ತು ಮೊಬೈಲ್ ಸುರಕ್ಷತೆಯನ್ನು ಮೇಲೆರಿಸುವ ಬಹುದೊಡ್ಡ ಹೊಣೆಗಾರಿಕೆಯನ್ನು ಸಮರ್ಥವಾಗಿ ನಿಭಾಯಿಸಲು ಕಂಪೆನಿ ಮುಂದಾಗಿದ್ದು, ಇದಕ್ಕಾಗಿ 10.76 ಕೋಟಿ ಹಣವನ್ನುಸ್ಪರ್ಧೆಯ ಮೂಲಕ ನೀಡುತ್ತಿದೆ.!

ಇದಕ್ಕೆ ನೀವು ಮಾಡಬೇಕಿರುವುದು ಇಷ್ಟೇ. ಗೂಗಲ್ ಒಡೆತನದ ಗೂಗಲ್ ಪಿಕ್ಸೆಲ್ ಸ್ಮಾರ್ಟ್ಫೋನ್ ಅನ್ನು ಹ್ಯಾಕ್ ಮಾಡಬೇಕು. ಹೀಗೆ ಹ್ಯಾಕ್ ಮಾಡಿದ ಯಾರಿಗಾದರೂ ಕಂಪನಿಯು 1.5 ಮಿಲಿಯನ್ ಡಾಲರ್ ಅಥವಾ 10.76 ಕೋಟಿ ಹಣವನ್ನು ಪಾವತಿಸಲಿದೆ. ಗೂಗಲ್ ಪಿಕ್ಸೆಲ್ ಸ್ಮಾರ್ಟ್ಫೋನ್ಗಳಲ್ಲಿ ಅಂತರ್ನಿರ್ಮಿತ ಭದ್ರತೆ ಹೊಂದಿರುವ ಚಿಪ್ ಅನ್ನು ಪ್ರಬಲ ಚಿಪ್ಸೆಟ್ಎಂದು ಗುರುತಿಸಲಾಗಿದ್ದು, ಇದನ್ನು ಮತ್ತಷ್ಟು ಶಕ್ತಿಯುತವಾಗಿರುವ ನಿಟ್ಟಿನಲ್ಲಿ ಗೂಗಲ್ ಇಂತಹದೊಂದು ಚಾಜೆಂಜ್ ಗೆದ್ದವರಿಗೆ ಭಾರೀ ಬಹುಮಾನವನ್ನು ಸಹ ಪ್ರಕಟಿಸಿದೆ.
ಗೂಗಲ್ ಪಿಕ್ಸೆಲ್ ಸಾಧನಗಳಲ್ಲಿ ಕಂಡುಬರುವ ಎಂಟರ್ಪ್ರೈಸ್-ಗ್ರೇಡ್ ಸೆಕ್ಯುರಿಟಿ ಚಿಪ್ ಸಾಧನ ಮತ್ತು ಆಪರೇಟಿಂಗ್ ಸಿಸ್ಟಂನಲ್ಲಿ ಸೂಕ್ಷ್ಮ ಡೇಟಾವನ್ನು ಸುರಕ್ಷಿತವಾಗಿರಿಸಲು ನಿರ್ಮಿಸಲಾಗಿದೆ. ಇದನ್ನು ಗ್ರಾಹಕರ ಸುರಕ್ಷತೆಯನ್ನು ಹೆಚ್ಚು ಖಾತ್ರಿಗೊಳಿಸುವ ಪ್ರಬಲ ಸಾಧನ ಎಂದು ಕರೆಯಲಾಗಿದೆ. ಆದ್ದರಿಂದ ಇದನ್ನು ಹ್ಯಾಕ್ ಮಾಡಲು ಅಸಾಧ್ಯ ಎನ್ನುತ್ತಿವೆ ವರದಿಗಳು. ಆದರೆ, ಇಂತಹ ಸಮಸ್ಯೆಗಳನ್ನು ಸುಲಭವಾಗಿ ಎದುರಿಸುವ ತಜ್ಞರು ನಮ್ಮ ಮಧ್ಯದಲ್ಲೇ ಇರುತ್ತಾರೆ. ಗೂಗಲ್ ತಂತ್ರಜ್ಞಾನ ಕೂಡ ಅಂತಿಮವಲ್ಲ ಎಂಬುದನ್ನು ಈಗಾಗಲೇ ಸಾಬೀತುಪಡಿಸಿದ್ದಾರೆ.

ಆಂಡ್ರಾಯ್ಡ್ ಓಎಸ್ ಡೆವಲಪರ್ ಆವೃತ್ತಿಗಳಲ್ಲಿನ ನ್ಯೂನತೆಗಳನ್ನು ಹ್ಯಾಕ್ ಮಾಡುವ ಅಥವಾ ಎತ್ತಿ ತೋರಿಸುವ ವ್ಯಕ್ತಿಗಳಿಗೆ ಗೂಗಲ್ ಪ್ರತಿವರ್ಷ ಬಗ್ ಬೌಂಟಿ ಕಾರ್ಯಕ್ರಮದಡಿಯಲ್ಲಿ ಬಹುಮಾನ ನೀಡುತ್ತಿದೆ. ಗೂಗಲ್ ತನ್ನ ಬಗ್ ಬೌಂಟಿ ಕಾರ್ಯಕ್ರಮವನ್ನು ಪ್ರಾರಂಭಿಸಿದಾಗಿನಿಂದ ಇಲ್ಲಿಯವರೆಗೂ 4 ಮಿಲಿಯನ್ ಡಾಲರ್ಗಳನ್ನು ಇಂತಹ ತಂತ್ರಜ್ಞರಿಗೆ ಪಾವತಿಸಿರುವುದಾಗಿ ತಿಳಿಸಿದೆ. ಭಾರತದ ಕೆಲ ಐಟಿ ತಂತ್ರಜ್ಞರು ಕೂಡ ಗೂಗಲ್ ನೂನ್ಯತೆಯನ್ನು ಎತ್ತಿ ತೋರಿಸಿ ಬಗ್ ಬೌಂಟಿ ಮೂಲಕ ಲಕ್ಷಾಂತಹ ಬಹುಮಾನ ಪಡೆದಿರುವುದನ್ನು ನಾವು ನೋಡಬಹುದು.

ವ್ಯಾಪಾರ ಹಾಗು ಉದ್ಯಮಗಳನ್ನು ನಡೆಸಲು ಬೇಕಿರುವ, ಅವಶ್ಯಕವಿರುವ ವೆಬ್ಸೈಟುಗಳು, ತಂತ್ರಾಂಶಗಳಲ್ಲಿ ಇರುವ ಅನೇಕ ಲೋಪ ದೋಷಗಳನ್ನು ಹುಡುಕಲು ಸಾಕಷ್ಟು ಖರ್ಚಾಗುತ್ತದೆ. ಹಲವು ತಂತ್ರಜ್ಞರ ಮೇಲೆ ಉದ್ಯಮಗಳು ಹಣ ಹೂಡಬೇಕಾಗುತ್ತದೆ. ಇದರಿಂದ ಖರ್ಚು ವಿಪರೀತ ಬರುತ್ತದೆ. ಕೆಲವೊಮ್ಮೆ ಅದೆಷ್ಟು ಖರ್ಚು ಮಾಡಿದರೂ ಎಲ್ಲ ಲೋಪ ದೋಷಗಳನ್ನು ಸರಿಪಡಿಸುವುದು ಎಷ್ಟೇ ತಜ್ಞರಿದ್ದರೂ ಸಾಧ್ಯವಾಗದ ಮಾತು ಎಂಬಂತಿರುತ್ತದೆ. ಹೀಗೆ ಇರುವಾಗ ಕಂಪೆನಿಗಳು “ಬಗ್ ಬೌಂಟಿ” ಎನ್ನುವ ಯೋಜನೆ ಮೊರೆ ಹೋಗುತ್ತಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಫಿಟ್ನೆಸ್ ಕಾಯ್ದುಕೊಳ್ಳಲು ಜನರು ಇನ್ನಿಲ್ಲದ ಕಸರತ್ತು ಮಾಡ್ತಾರೆ. ಉತ್ತಮ ಆಹಾರದಿಂದ ಹಿಡಿದು ವ್ಯಾಯಾಮದವರೆಗೆ ಎಲ್ಲವೂ ಫಿಟ್ನೆಸ್ ಗೆ ಸಹಕಾರಿ. ಬೆಳಿಗ್ಗಿನ ವಾಕ್ ಕೂಡ ಆರೋಗ್ಯಕ್ಕೆ ಬಹಳ ಒಳ್ಳೆಯದು. ಜಿಮ್, ಯೋಗಕ್ಕಿಂತ ವಾಕಿಂಗ್ ಬೆಸ್ಟ್ ಎನ್ನುವವರಿದ್ದಾರೆ. ಆದ್ರೆ ಈ ವಾಕ್ ವೇಳೆ ನಾವು ಮಾಡುವ ಸಣ್ಣಪುಟ್ಟ ತಪ್ಪುಗಳು ನಮ್ಮ ಆರೋಗ್ಯವನ್ನು ಸುಧಾರಿಸುವ ಬದಲು ಹಾಳು ಮಾಡುತ್ತವೆ. ವಾಕಿಂಗ್ ಮಾಡಲು ವಾಹನ ಓಡಾಡದ ಹಾಗೂ ಹಸಿರು ಪ್ರದೇಶವನ್ನು ಆಯ್ಕೆ ಮಾಡಿಕೊಳ್ಳಬೇಕು. ಅನೇಕರು ತಡವಾಗಿ ಏಳ್ತಾರೆ. ಪಾರ್ಕ್ ಗೆ ಹೋಗಲು ಸಮಯವಿರುವುದಿಲ್ಲ….
ರೈತರಿಗೆ ಆರ್ಥಿಕ ನೆರವು ನೀಡುವ ಉದ್ದೇಶದಿಂದ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ‘ಕಿಸಾನ್ ಸಮ್ಮಾನ್’ ಯೋಜನೆಗೆ ಅರ್ಜಿ ಸಲ್ಲಿಸಲು ಜೂನ್ 30 ಅಂತಿಮ ದಿನವಾಗಿದೆ. ಇದುವರೆಗೂ ಅರ್ಜಿ ಸಲ್ಲಿಸದ ರೈತರು ಈ ಕೂಡಲೇ ಅರ್ಜಿ ಸಲ್ಲಿಸಬೇಕಿದೆ. ಈ ಯೋಜನೆಯನ್ವಯ ರೈತರಿಗೆ ಒಟ್ಟು ಮೂರು ಕಂತುಗಳಲ್ಲಿ 6000 ರೂ. ಸಹಾಯ ಧನ ನೀಡಲಾಗುತ್ತಿದ್ದು, ಫಲಾನುಭವಿಗಳು ನಾಡಕಚೇರಿ, ಅಟಲ್ ಜನ ಸ್ನೇಹಿ ಕೇಂದ್ರ ಸೇರಿದಂತೆ ವಿವಿಧೆಡೆ ಲಭ್ಯವಿರುವ ಅರ್ಜಿಗಳನ್ನು ಭರ್ತಿ ಮಾಡಿ ನೀಡಬೇಕಾಗುತ್ತದೆ. ರೈತರ ಖಾತೆಗೆ ನೇರವಾಗಿ ಹಣ ಬರಲಿದ್ದು,…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ದೈಹಿಕ ಲಾಭಕ್ಕಾಗಿ…
ಮಕ್ಕಳ ಶೈಕ್ಷಣಿಕ ಅಡಿಪಾಯ ಚೆನ್ನಾಗಿರಲಿ ಎಂಬ ಉದ್ದೇಶದಿಂದ ನಾವು ದೊಡ್ಡ ದೊಡ್ಡ ಶಾಲೆಗಳಿಗೆ ಸೇರಿಸುವುದು ಸಾಮಾನ್ಯ, ಆದರೆ ತಮಿಳುನಾಡಿನ ತಿರುವನೆಲ್ಲಿ ಜಿಲ್ಲಾಧಿಕಾರಿ ಕರ್ನಾಟಕ ಮೂಲದ ಶಿಲ್ಪಾ ಪ್ರಭಾಕರ್ ಸತೀಶ್ ವಿಭಿನ್ನವಾಗಿ ನಿಂತಿದ್ದಾರೆ, ತಮ್ಮ ಮಗಳನ್ನು ಪಲಾಯಕಮೊಟ್ಟಿಯಲ್ಲಿರುವ ಅಂಗನವಾಡಿಗೆ ಸೇರಿಸಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಅಂಗನವಾಡಿಗೆ ಸೇರಿಸಿದ ಮೇಲೆ ತಮ್ಮ ಮಗಳ ತಮಿಳು ಸುಧಾರಿಸಿದೆ, ಸಮಾಜದ ಎಲ್ಲಾ ರೀತಿಯ ಜನಗಳ ಜೊತೆ ನನ್ನ ಮಗಳು ಸೇರಬೇಕು, ಅವರ ಜೊತೆ ಸೇರಿ ಕಲಿಯಬೇಕು, ಹೀಗಾಗಿ ನರ್ಸರಿ ಶಾಲೆ ಬದಲು ಅಂಗನವಾಡಿಗೆ…
ಒಣ ದ್ರಾಕ್ಷಿಯನ್ನು ಎಲ್ಲರೂ ಇಷ್ಟಪಡ್ತಾರೆ. ಈ ದ್ರಾಕ್ಷಿ ಬಾಯಿಗೆ ರುಚಿಯೊಂದೇ ಅಲ್ಲ ಆರೋಗ್ಯಕರ. ಒಣ ದ್ರಾಕ್ಷಿಯನ್ನು ನೀರಿನಲ್ಲಿ ಕುದಿಸಿ ಆ ನೀರನ್ನು ರಾತ್ರಿ ಪೂರ್ತಿ ಹಾಗೆ ಇಟ್ಟು ಬೆಳಗ್ಗೆ ಸೇವಿಸುವುದ್ರಿಂದ ಸಾಕಷ್ಟು ಪ್ರಯೋಜನವಿದೆ. ಪ್ರತಿದಿನ ಬೆಳಿಗ್ಗೆ ಒಣದ್ರಾಕ್ಷಿ ಕುದಿಸಿದ ನೀರನ್ನು ಕುಡಿಯುವುದ್ರಿಂದ ಮಲಬದ್ಧತೆ, ಎಸಿಡಿಟಿ ಹಾಗೂ ಆಯಾಸ ಸಮಸ್ಯೆ ಕಡಿಮೆಯಾಗುತ್ತದೆ. ಈ ನೀರು ಕೊಲೆಸ್ಟ್ರಾಲ್ ಮಟ್ಟವನ್ನು ಸರಿಯಾಗಿಡುತ್ತದೆ. ಇದು ದೇಹದಲ್ಲಿರುವ ಟ್ರೈಗ್ಲಿಸರೈಡ್ ಮಟ್ಟವನ್ನು ಕಡಿಮೆ ಮಾಡಲು ನೆರವಾಗುತ್ತದೆ. ಒಣದ್ರಾಕ್ಷಿ ಕುದಿಸಿಟ್ಟ ನೀರು ಮುಖದ ಮೇಲಿನ ಸುಕ್ಕನ್ನು ಕಡಿಮೆ…
ಬಾಯಲ್ಲಿ ನೀರೂರಿಸುವ ಖಾದ್ಯವೆಂದರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ? ಅದರಲ್ಲೂ ಫಟಾಫಟ್ ಎಂದು ತಯಾರಿಸಲಾಗುವ ಖಾದ್ಯಗಳು ನಮ್ಮ ಜಂಜಾಟಗಳಿಂದ ಕೂಡಿದ ಜೀವನ ಶೈಲಿಗೆ ಅತ್ಯಂತ ಸಹಕಾರಿ.ಅದರಲ್ಲೂ ಎಗ್ ಪಲಾವ್ ಎಂದರೆ ಯಾರಿಗೆ ತಾನೇ ಇಷ್ಟ ಇಲ್ಲ. ಕೇವಲ 15 ನಿಮಿಷಗಳಲ್ಲಿ ಎಗ್ ಪಲಾವ್ ಮಾಡಿ…