ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈಗಿನ ಕಾಲದಲ್ಲಿ ಗೂಗಲ್ ಬಳಸದೆ ಇರುವ ವ್ಯಕ್ತಿಯನ್ನು ಕಂಡುಹಿಡಿಯಲು ಸಾಧ್ಯವಾಗದು ಏಕೆಂದರೆ ಪ್ರತಿಯೊಬ್ಬರೂ ತಮ್ಮದೇ ಆದ ಕೆಲಸ ಕಾರ್ಯಗಳನ್ನು ಮಾಡುವುದಕ್ಕೆ ಗೂಗಲ್ ಸಹಾಯ ಪಡೆಯುತ್ತಾರೆ.ಆಗೆಯೇ ಗೂಗಲ್ ನಮ್ಮ ನಿಮ್ಮೆಲ್ಲರ ಸಮಸ್ಯೆಗೆ ಪರಿಹಾರ ನೀಡುವುದು ಮಾತ್ರವಲ್ಲದೆ ಹಣವನ್ನು ಸಂಪಾದಿಸುವ ದಾರಿಯು ತೋರಿಸುತ್ತದೆ. ಐಟಿ ತಂತ್ರಜ್ಞಾನ ಕ್ಷೇತ್ರದಲ್ಲಿ ಪರಿಣತರಾಗಿದ್ದರೆ ಸರ್ಚ್ ಎಂಜಿನ್ ದೈತ್ಯ ಗೂಗಲ್ ನಿಮಗೊಂದು ಬಿಗ್ ಆಫರ್ ನೀಡಿದೆ. ಗೂಗಲ್ ನೀಡಿರುವ ಚಾಲೆಂಜ್ ಒಂದರಲ್ಲಿ ನೀವು ಗೆದ್ದರೆ ಬರೋಬ್ಬರಿ 10.76 ಕೋಟಿ ಬಹುಮಾನವನ್ನು ನಿಮ್ಮ ತೆಕ್ಕೆಗೆ ಹಾಕಿಕೊಳ್ಳಬಹುದಾಗಿದೆ.!ಹೌದು, ತನ್ನ ಬಳಕೆದಾರರ ಮಾಹಿತಿ ಸುರಕ್ಷತೆ ಮತ್ತು ಮೊಬೈಲ್ ಸುರಕ್ಷತೆಯನ್ನು ಮೇಲೆರಿಸುವ ಬಹುದೊಡ್ಡ ಹೊಣೆಗಾರಿಕೆಯನ್ನು ಸಮರ್ಥವಾಗಿ ನಿಭಾಯಿಸಲು ಕಂಪೆನಿ ಮುಂದಾಗಿದ್ದು, ಇದಕ್ಕಾಗಿ 10.76 ಕೋಟಿ ಹಣವನ್ನುಸ್ಪರ್ಧೆಯ ಮೂಲಕ ನೀಡುತ್ತಿದೆ.!

ಇದಕ್ಕೆ ನೀವು ಮಾಡಬೇಕಿರುವುದು ಇಷ್ಟೇ. ಗೂಗಲ್ ಒಡೆತನದ ಗೂಗಲ್ ಪಿಕ್ಸೆಲ್ ಸ್ಮಾರ್ಟ್ಫೋನ್ ಅನ್ನು ಹ್ಯಾಕ್ ಮಾಡಬೇಕು. ಹೀಗೆ ಹ್ಯಾಕ್ ಮಾಡಿದ ಯಾರಿಗಾದರೂ ಕಂಪನಿಯು 1.5 ಮಿಲಿಯನ್ ಡಾಲರ್ ಅಥವಾ 10.76 ಕೋಟಿ ಹಣವನ್ನು ಪಾವತಿಸಲಿದೆ. ಗೂಗಲ್ ಪಿಕ್ಸೆಲ್ ಸ್ಮಾರ್ಟ್ಫೋನ್ಗಳಲ್ಲಿ ಅಂತರ್ನಿರ್ಮಿತ ಭದ್ರತೆ ಹೊಂದಿರುವ ಚಿಪ್ ಅನ್ನು ಪ್ರಬಲ ಚಿಪ್ಸೆಟ್ಎಂದು ಗುರುತಿಸಲಾಗಿದ್ದು, ಇದನ್ನು ಮತ್ತಷ್ಟು ಶಕ್ತಿಯುತವಾಗಿರುವ ನಿಟ್ಟಿನಲ್ಲಿ ಗೂಗಲ್ ಇಂತಹದೊಂದು ಚಾಜೆಂಜ್ ಗೆದ್ದವರಿಗೆ ಭಾರೀ ಬಹುಮಾನವನ್ನು ಸಹ ಪ್ರಕಟಿಸಿದೆ.
ಗೂಗಲ್ ಪಿಕ್ಸೆಲ್ ಸಾಧನಗಳಲ್ಲಿ ಕಂಡುಬರುವ ಎಂಟರ್ಪ್ರೈಸ್-ಗ್ರೇಡ್ ಸೆಕ್ಯುರಿಟಿ ಚಿಪ್ ಸಾಧನ ಮತ್ತು ಆಪರೇಟಿಂಗ್ ಸಿಸ್ಟಂನಲ್ಲಿ ಸೂಕ್ಷ್ಮ ಡೇಟಾವನ್ನು ಸುರಕ್ಷಿತವಾಗಿರಿಸಲು ನಿರ್ಮಿಸಲಾಗಿದೆ. ಇದನ್ನು ಗ್ರಾಹಕರ ಸುರಕ್ಷತೆಯನ್ನು ಹೆಚ್ಚು ಖಾತ್ರಿಗೊಳಿಸುವ ಪ್ರಬಲ ಸಾಧನ ಎಂದು ಕರೆಯಲಾಗಿದೆ. ಆದ್ದರಿಂದ ಇದನ್ನು ಹ್ಯಾಕ್ ಮಾಡಲು ಅಸಾಧ್ಯ ಎನ್ನುತ್ತಿವೆ ವರದಿಗಳು. ಆದರೆ, ಇಂತಹ ಸಮಸ್ಯೆಗಳನ್ನು ಸುಲಭವಾಗಿ ಎದುರಿಸುವ ತಜ್ಞರು ನಮ್ಮ ಮಧ್ಯದಲ್ಲೇ ಇರುತ್ತಾರೆ. ಗೂಗಲ್ ತಂತ್ರಜ್ಞಾನ ಕೂಡ ಅಂತಿಮವಲ್ಲ ಎಂಬುದನ್ನು ಈಗಾಗಲೇ ಸಾಬೀತುಪಡಿಸಿದ್ದಾರೆ.

ಆಂಡ್ರಾಯ್ಡ್ ಓಎಸ್ ಡೆವಲಪರ್ ಆವೃತ್ತಿಗಳಲ್ಲಿನ ನ್ಯೂನತೆಗಳನ್ನು ಹ್ಯಾಕ್ ಮಾಡುವ ಅಥವಾ ಎತ್ತಿ ತೋರಿಸುವ ವ್ಯಕ್ತಿಗಳಿಗೆ ಗೂಗಲ್ ಪ್ರತಿವರ್ಷ ಬಗ್ ಬೌಂಟಿ ಕಾರ್ಯಕ್ರಮದಡಿಯಲ್ಲಿ ಬಹುಮಾನ ನೀಡುತ್ತಿದೆ. ಗೂಗಲ್ ತನ್ನ ಬಗ್ ಬೌಂಟಿ ಕಾರ್ಯಕ್ರಮವನ್ನು ಪ್ರಾರಂಭಿಸಿದಾಗಿನಿಂದ ಇಲ್ಲಿಯವರೆಗೂ 4 ಮಿಲಿಯನ್ ಡಾಲರ್ಗಳನ್ನು ಇಂತಹ ತಂತ್ರಜ್ಞರಿಗೆ ಪಾವತಿಸಿರುವುದಾಗಿ ತಿಳಿಸಿದೆ. ಭಾರತದ ಕೆಲ ಐಟಿ ತಂತ್ರಜ್ಞರು ಕೂಡ ಗೂಗಲ್ ನೂನ್ಯತೆಯನ್ನು ಎತ್ತಿ ತೋರಿಸಿ ಬಗ್ ಬೌಂಟಿ ಮೂಲಕ ಲಕ್ಷಾಂತಹ ಬಹುಮಾನ ಪಡೆದಿರುವುದನ್ನು ನಾವು ನೋಡಬಹುದು.

ವ್ಯಾಪಾರ ಹಾಗು ಉದ್ಯಮಗಳನ್ನು ನಡೆಸಲು ಬೇಕಿರುವ, ಅವಶ್ಯಕವಿರುವ ವೆಬ್ಸೈಟುಗಳು, ತಂತ್ರಾಂಶಗಳಲ್ಲಿ ಇರುವ ಅನೇಕ ಲೋಪ ದೋಷಗಳನ್ನು ಹುಡುಕಲು ಸಾಕಷ್ಟು ಖರ್ಚಾಗುತ್ತದೆ. ಹಲವು ತಂತ್ರಜ್ಞರ ಮೇಲೆ ಉದ್ಯಮಗಳು ಹಣ ಹೂಡಬೇಕಾಗುತ್ತದೆ. ಇದರಿಂದ ಖರ್ಚು ವಿಪರೀತ ಬರುತ್ತದೆ. ಕೆಲವೊಮ್ಮೆ ಅದೆಷ್ಟು ಖರ್ಚು ಮಾಡಿದರೂ ಎಲ್ಲ ಲೋಪ ದೋಷಗಳನ್ನು ಸರಿಪಡಿಸುವುದು ಎಷ್ಟೇ ತಜ್ಞರಿದ್ದರೂ ಸಾಧ್ಯವಾಗದ ಮಾತು ಎಂಬಂತಿರುತ್ತದೆ. ಹೀಗೆ ಇರುವಾಗ ಕಂಪೆನಿಗಳು “ಬಗ್ ಬೌಂಟಿ” ಎನ್ನುವ ಯೋಜನೆ ಮೊರೆ ಹೋಗುತ್ತಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಎರಡನೇ ಬಾರಿಗೆ ನರೇಂದ್ರ ಮೋದಿ ನೇತೃತ್ವದಲ್ಲಿ ಇಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಕೇಂದ್ರ ಚೊಚ್ಚಲ ಬಜೆಟ್ ಮಂಡನೆ ಮಾಡಿದ್ದಾರೆ. ಕೆಲ ವಸ್ತುಗಳು ಹಾಗೂ ಸೇವೆಗಳು ದುಬಾರಿಯಾದರೆ ,ಕೆಲವಸ್ತುಗಳ ಬೆಲೆಯಲ್ಲಿ ಇಳಿಕೆಯಾಗಿದೆ.ಯಾವ ವಸ್ತುಗಳ ಬೆಲೆ ಏರಿಕೆಯಾಗಲಿದೆ? ಯಾವ ವಸ್ತುಗಳ ಬೆಲೆ ಇಳಿಕೆಯಾಗಲಿದೆ? ಎಂಬುದರ ಪೂರ್ತಿ ವಿವರ ಇಲ್ಲಿದೆ ನೋಡಿ.. ಯಾವ ವಸ್ತುಗಳ ಬೆಲೆ ಏರಿಕೆಯಾಗಿದೆ ಎಂಬುದರ ವಿವರ ಇಲ್ಲಿದೆ. ಪ್ರಮುಖವಾಗಿ ಚಿನ್ನ ಮತ್ತು ಆಭರಣಗಳ ದರ ಏರಿಕೆಯಾಗಿದ್ದು, ಪೆಟ್ರೋಲ್ ಮತ್ತು ಡಿಸೇಲ್ ಮೇಲಿನ ಸೆಸ್ ಏರಿಕೆಯಾಗಿದ್ದು, ಒಂದು…
ತೀವ್ರ ಕುತೂಹಲ ಕೆರಳಿಸಿರುವ ಬಹು ನಿರೀಕ್ಷಿತ ಕರ್ನಾಟಕ ವಿಧಾನಸಭೆ ಚುನಾವಣೆಗೆ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗದಿಂದ ದಿನಾಂಕವನ್ನು ಪ್ರಕಟಿಸಲಾಗಿದೆ. ಮಹೂರ್ತ ಫಿಕ್ಸ್… ಮೇ 12 ರಂದು ಮತದಾನ ನಡೆಯಲಿದೆ.ತದನಂತರ ಮೇ 15 ರಂದು ಮತಎಣಿಕೆ ನಡೆಯಲಿದೆ. ಮೇ 28ಕ್ಕೆ ಪ್ರಸಕ್ತ ವಿಧಾನಸಭೆಯ ಸದಸ್ಯರ ಅವಧಿ ಮುಕ್ತಾಯವಾಗಲಿದ್ದು,ನಂತರ ಕರ್ನಾಟಕದಲ್ಲಿ ಹೊಸ ಸರ್ಕಾರ ಅಸ್ತಿತ್ವಕ್ಕೆ ಬರಲಿದೆ. ನೀತಿ ಸಂಹಿತೆ ಜಾರಿ… ದೆಹಲಿಯ ಕೇಂದ್ರ ಚುನಾವಣಾ ಆಯೋಗದಲ್ಲಿ ಚುನಾವಣಾಧಿಕಾರಿ ಓಂ ಪ್ರಕಾಶ್ ರಾವತ್ ಅವರು ಸುದ್ದಿಗೋಷ್ಠಿ ನಡೆಸಿ ಚುನಾವಣಾ ದಿನಾಂಕ ಮತ್ತು…
ಈಗಾಗಲೇ ನಮಗೆಲ್ಲರಿಗೂ ತಿಳಿದಿರುವ ವಿಷಯವೂ ಕರಾವಳಿ ಭಾಗದಲ್ಲಿ ಕಾಣಿಸಿಕೊಳ್ಳುತ್ತಿರುವ ಕಾರ್ಗಿಲ್ ಮೀನಿನ ಕಾಟವು ಮುಂದುವರೆದಿದೆ ಇದರಿಂದ ಮಂಗಳೂರಿನ ಕಡಲ ತೀರದಲ್ಲಿ ಕಂಡಿದ್ದ ಕಾರ್ಗಿಲ್ ಮೀನುಗಳು, ಕಳೆದೊಂದು ವಾರದಿಂದ ಗಂಗೊಳ್ಳಿ ಮೀನುಗಾರರಿಗೂ ಬಾಧಿಸಿದ್ದು, ಈ ಭಾಗದ ಮೀನುಗಾರರಲ್ಲಿ ಆತಂಕ ಉಂಟು ಮಾಡಿದೆ. ಗಂಗೊಳ್ಳಿ ಬಂದರಿಗೂ ಕಾರ್ಗಿಲ್ ಮೀನುಗಳು ವ್ಯಾಪಿಸುತ್ತಿವೆ. ಹೀಗಾಗಿ, ಮೀನುಗಾರರು ಕಾರ್ಗಿಲ್ ಮೀನುಗಳನ್ನು ಬೇರ್ಪಡಿಸುವಲ್ಲಿ ತೊಡಗಿಕೊಂಡಿದ್ದು, ಬಂಗುಡೆ, ಬೂತಾಯಿ ಹಾಗೂ ಇತರೆ ಮೀನುಗಳ ಸಂಖ್ಯೆಯಲ್ಲಿ ಭಾರೀ ಪ್ರಮಾಣದ ಇಳಿಕೆ ಕಂಡಿದೆ. ಲಕ್ಷದ್ವೀಪ, ಹವಳದ ದಿಬ್ಬಗಳಲ್ಲಿ ಹೆಚ್ಚು ವಾಸಿಸುವ…
ಬ್ರಿಟೀಷರ ಅಟ್ಟಹಾಸ ತಾರಕಕ್ಕೇರಿದಾಗ, ಭಾರತವನ್ನು ಬ್ರಿಟೀಷರ ಕಪಿಮುಷ್ಟಿಯಿಂದ ಬಿಡಿಸಲು ಜನಿಸಿದ ಶಾಂತಿ ಪ್ರವರ್ತಕ ಮಹಾತ್ಮಾ ಗಾಂಧಿ. ಗುಜರಾತ್ ನ ಪೋರ್ ಬಂದರ್ ನಲ್ಲಿ ಅಕ್ಟೋಬರ್ 2, 1869 ರಂದು ಮೋಹನ್ ದಾಸ್ ಕರಮ್ ಚಂದ್ ಗಾಂಧಿಯಾಗಿ ಜನಿಸಿ, ವಿದೇಶದಲ್ಲಿ ಕಾನೂನು ಪದವಿ ಪಡೆದು ದಕ್ಷಿಣ ಭಾರತದಲ್ಲೇ ಹೋರಾಟ ಆರಂಭಿಸಿ ಭಾರತಕ್ಕೆ ಬಂದರು.
ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಭಿನಯದ ‘ಪೈಲ್ವಾನ್’ ಬಿಡುಗಡೆಯಾದಲ್ಲೆಲ್ಲ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಬೆಳಗಿನ ಜಾವದಿಂದಲೇ ಪ್ರದರ್ಶನ ಆರಂಭವಾಗುವ ಮೂಲಕ ಭರ್ಜರಿ ಓಪನಿಂಗ್ ಪಡೆದುಕೊಂಡಿದೆ. ಚಿತ್ರದ ಮೊದಲ ದಿನದ ಗಳಿಕೆ ಕುರಿತಾಗಿ ಲೆಕ್ಕಾಚಾರ ನಡೆದಿದೆ. ಕರ್ನಾಟಕದ 450 ಸ್ಕ್ರೀನ್ ಗಳು, ಅಮೆರಿಕದ 50 ಕ್ಕೂ ಹೆಚ್ಚು ಥಿಯೇಟರ್ ಗಳಲ್ಲಿ ‘ಪೈಲ್ವಾನ್’ ತೆರೆಕಂಡಿದೆ. ರಾಜ್ಯ ಮಾತ್ರವಲ್ಲದೇ, ದೇಶ, ವಿದೇಶಗಳಲ್ಲಿಯೂ ‘ಪೈಲ್ವಾನ್’ ಅಬ್ಬರ ಜೋರಾಗಿದೆ. ಕನ್ನಡ, ತೆಲುಗು ಸೇರಿ ಬಹುಭಾಷೆಗಳಲ್ಲಿ ನಿರ್ಮಾಣವಾಗಿರುವ ‘ಪೈಲ್ವಾನ್’ 3000 ಕ್ಕೂ ಅಧಿಕ ಸ್ಕ್ರೀನ್ ಗಳಲ್ಲಿ…
ನಟ ರಾಕಿಂಗ್ ಸ್ಟಾರ್ ಯಶ್ ಹಾಸನದಲ್ಲಿ ಮನೆ ಹಾಗೂ 80 ಎಕರೆ ತೋಟ ಖರೀದಿಸಿದ್ದಾರೆ. ಹಾಸನ ದೊಡ್ಡಕೊಂಡಗೋಳ ಯಶ್ ತಾಯಿ ಪುಷ್ಪಾ ಅವರ ತವರಾಗಿದೆ.ಯಶ್ ಜನಿಸಿದ್ದು ಹಾಸನ ಜಿಲ್ಲಾಸ್ಪತ್ರೆಯಲ್ಲಿ. ಈ ನಂಟಿನಿಂದ ಹುಟ್ಟೂರು ಹಾಸನದಲ್ಲಿ ಮನೆ ಹಾಗೂ ತೋಟವನ್ನು ಅವರು ಖರೀದಿಸಿದ್ದಾರೆ. ರಾಕಿಂಗ್ ಸ್ಟಾರ್ ಯಶ್ ಅವರು ಈಗಾಗಲೇ ತನ್ನುರಿನ ಕೆರೆಯನ್ನು ಕೋಟಿಗಳ ವೆಚ್ಛದಲ್ಲಿ ಹೂಳು ತೆಗೆಸಿ ಸುತ್ತಮುತ್ತಲಿನ ಹತ್ತಾರು ಗ್ರಾಮಗಳಿಗೆ ಕುಡಿಯುವ ನೀರಿನ ತೊಂದರೆಯನ್ನು ಹೋಗಲಾಡಿಸಿದ್ದರು. ಈಗ ಅದರ ಜೊತೆಗೆ ತನ್ನ ಹುಟ್ಟೂರಿನಲ್ಲಿ ಜಮೀನು ಮತ್ತು…