ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಟೆಕ್ ಗುರು ಎನಿಸಿಕೊಂಡಿರುವ ಗೂಗಲ್ ವಿಡಿಯೊ ಕಾಲಿಂಗ್ಗಾಗಿ ‘ಗೂಗಲ್ ಡುಯೋ'(Google Duo) ಆಪ್ ಅನ್ನು ಪರಿಚಯಿಸಿದೆ. ಈ ಆಪ್ನಲ್ಲಿ ವಿಡಿಯೊ ಕಾಲಿಂಗ್ ಗುಣಮಟ್ಟವು ಅತ್ಯುತ್ತಮವಾಗಿದ್ದು, ಬಹುಬೇಗನೆ ಜನಪ್ರಿಯತೆ ಪಡೆದುಕೊಂಡಿದೆ. ಸದ್ಯ ವಿಡಿಯೊ ಕಾಲಿಂಗ್ ಭಾರೀ ಟ್ರೆಂಡ್ ಪಡೆದುಕೊಳ್ಳುತ್ತಿದ್ದು, ಈ ನಿಟ್ಟಿನಲ್ಲಿ ಮುಂದುವರೆದಿರುವ ಕಂಪನಿಯು ತನ್ನ ‘ಗೂಗಲ್ ಡುಯೋ’ ಆಪ್ನಲ್ಲಿ ಮತ್ತಷ್ಟು ಹೊಸತನಗಳನ್ನು ಅಳವಡಿಸಲು ಸಜ್ಜಾಗಿದೆ.

ಹೌದು, ಗೂಗಲ್ ತನ್ನ ‘ಗೂಗಲ್ ಡುಯೋ’ ಆಪ್ನಲ್ಲಿ ಇದೀಗ ‘ಗ್ರೂಪ್ ವಿಡಿಯೊ ಕಾಲಿಂಗ್’ ಮತ್ತು ‘ಡಾಟಾ ಸೇವಿಂಗ್ ಮೋಡ್’ ಫೀಚರ್ಸ್ಗಳನ್ನು ಸೇರಿಸಲಿದೆ. ಜನರು ತಮ್ಮ ಪ್ರೀತಿ ಪಾತ್ರರೊಂದಿಗೆ ಫೇಸ್ ಟು ಫೇಸ್ ವಿಡಿಯೊ ಕಾಲಿಂಗ್ ಮಾಡಲು ಇಚ್ಚಿಸುತ್ತಿದ್ದು, ಈಗಾಗಲೇ ಭಾರತದಲ್ಲಿ ದೊಡ್ಡ ಮಾರುಕಟ್ಟೆಯಾಗಿ ಗುರುತಿಸಿಕೊಂಡಿದೆ. ಹೀಗಾಗಿ ಗೂಗಲ್ ಡುಯೋ ಆಪ್ನ ಬಳಕೆದಾರರ ಸಂಖ್ಯೆಯು ಸಹ ಏರಿಕೆಗತಿಯಲ್ಲಿದೆ. ಎಂದು ಗೂಗಲ್ ಪ್ರೊಡೆಕ್ಟ್ ಮ್ಯಾನೇಜರ ಶ್ವೇತಾ ವೈದ್ಯ ಹೇಳಿದ್ದಾರೆ.ಎರಡು ಹೊಸ ಫೀಚರ್ಸ್ಗಳೊಂದಿಗೆ ಕಂಪನಿಯು ಬಳಕೆದಾರರು ಖಾಸಗಿತನದ ಸುರಕ್ಷತೆಗೆ ಹೆಚ್ಚಿನ ಗಮನ ನೀಡಿದ್ದು, ವಿಡಿಯೊ ಕಾಲಿಂಗ್ ಗುಣಮಟ್ಟವು ಹೈ ಕ್ವಾಲಿಟಿಯಲ್ಲಿರುತ್ತದೆ. ಹಾಗಾದರೇ ಗೂಗಲ್ ಡುಯೋ ಕಾಲಿಂಗ್ ಆಪ್ ನೂತನ ಫೀಚರ್ಸ್ಗಳು ಏನೆಲ್ಲಾ ಪ್ರಯೋಜನ ಒದಗಿಸಲಿವೆ ಎಂಬುದನ್ನು ಮುಂದೆ ನೋಡೋಣ ಬನ್ನಿರಿ.

ಡೇಟಾ ಸೇವಿಂಗ್ ಹೆಚ್ಚು ಜನಪ್ರಿಯವಾಗುತ್ತಿರುವ ಗೂಗಲ್ ಡುಯೋ ವಿಡಿಯೊ ಕಾಲಿಂಗ್ ಆಪ್ನಲ್ಲಿ ಬಳಕೆದಾರರಿಗೆ ಅನುಕೂಲವಾಗಲೆಂದು ಡೇಟಾ ಸೇವಿಂಗ್ ಮೋಡ್ ಆಯ್ಕೆಯನ್ನು ಸೇರಿಸಲಿದ್ದು, ಈ ಆಯ್ಕೆಯನ್ನು ಸಕ್ರಿಯ ಮಾಡಿಕೊಳ್ಳುವ ಮೂಲಕ ಬಳಕೆದಾರರು ಶೇ.50% ಮೊಬೈಲ್ ಡಾಟಾ ಉಳಿಸಿಬಹುದು. ಸೆಟ್ಟಿಂಗ್ನಲ್ಲಿ ಈ ಆಯ್ಕೆ ಸೇರಿಕೊಳ್ಳಲಿದೆ ಎನ್ನಲಾಗಿದೆ.
ಗ್ರೂಪ್ ವಿಡಿಯೊ ಕಾಲಿಂಗ್ ಗೂಗಲ್ ಡುಯೋ ಆಪ್ನಲ್ಲಿ ಸಂಸ್ಥೆಯು ಹೊಸದಾಗಿ ಗ್ರೂಪ್ ವಿಡಿಯೊ ಕಾಲಿಂಗ್ ಆಯ್ಕೆಯನ್ನು ಸೇರಿಸಲಿದ್ದು, ಗ್ರೂಪ್ ಕಾಲಿಂಗ್ ಫೀಚರ್ನಲ್ಲಿ ಒಂದು ಬಾರಿಗೆ ಗರಿಷ್ಠ 8 ಸದಸ್ಯರೊಂದಿಗೆ ಕಾಲ್ ಕನೆಕ್ಟ್ ಮಾಡಬಹುದಾಗಿದೆ. ಗ್ರೂಪ್ ವಿಡಿಯೊ ಕಾಲಿಂಗ್ ಆಯ್ಕೆ ಹೊಸ ಟ್ರೆಂಡ್ ಹುಟ್ಟುಹಾಕಲಿದೆ ಎನ್ನಲಾಗುತ್ತಿದೆ.

ಭದ್ರತೆ ಗೂಗಲ್ ಎರಡು ಮಹತ್ತರ ಫೀಚರ್ಸ್ಗಳನ್ನು ಸೇರಿಸಲಿದ್ದು, ಇದರೊಂದಿಗೆ ಬಳಕೆದಾರರ ಕಾಲಿಂಗ್ ಮತ್ತು ಮೆಸೆಜ್ಗೆ ಸುರಕ್ಷತೆ ಒಸಗಿಸಲು ಎಂಡ್ ಟು ಎಂಡ್ ಎನ್ಕ್ರಿಪ್ಶನ್ ಭದ್ರತೆ ನೀಡುತ್ತದೆ. ಬಳಕೆದಾರಿಗೆ ತಮ್ಮ ಗ್ರೂಪ್ ಕಾಲಿಂಗ್ನಲ್ಲಿ ಖಾಸಗಿತನ ಕಾಪಾಡಲು ಈ ಆಯ್ಕೆ ಉಪಯುಕ್ತವೆನಿಸಲಿದೆ.
ಡಾಟಾ ಬಳಕೆ ಲಿಮಿಟ್ ಡಾಟಾ ಬಳಕೆಯಲ್ಲಿ ಲಿಮಿಟ್ ಆಯ್ಕೆ ಸಹ ಇರಲಿದ್ದು, ಈ ಆಯ್ಕೆಯು ಮೊಬೈಲ್ ಡಾಟಾ ಮತ್ತು ವೈಫೈ ನೆಟವರ್ಕ್ ಸೌಲಭ್ಯದ ಬಳಕೆಯಲ್ಲಿಯು ಲಭ್ಯವಾಗಲಿದೆ. ಭಾರತ, ಇಂಡೊನೇಷ್ಯಾ ಮತ್ತು ಬ್ರೆಜಿಲ್ ರಾಷ್ಟ್ರಗಳ ಬಳಕೆದಾರರಿಗೆ ಡಾಟಾ ಬಳಕೆಯಲ್ಲಿ ಲಿಮಿಟ್ ಆಯ್ಕೆ ದೊರೆಯಲಿದೆ.
ಫೀಚರ್ಸ್ ಸೇರ್ಪಡೆ ಗೂಗಲ್ನ ಎರಡು ಹೊಸ ಫೀಚರ್ಸ್ಗಳು ಭಾರತದ ಅಂಡ್ರಾಯ್ಡ್ ಓಎಸ್ ಬಳಕೆದಾರರಿಗೆ ಲಭ್ಯವಾಗಲಿದ್ದು, ಮುಂದಿನ ದಿನಗಳಲ್ಲಿ ಐಓಎಸ್ ಮಾದರಿಯ ಓಎಸ್ ಬಳಕೆದಾರರಿಗೂ ದೊರೆಯಲಿದೆ. ನೂತನ ಅಪ್ಡೇಟ್ ವರ್ಷನ್ನಲ್ಲಿ ಈ ಫೀಚರ್ಸ್ಗಳು ಸೇರಿಕೊಳ್ಳಲಿವೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂಡೊನೇಶಿಯದ ಸಣ್ಣ ಗ್ರಾಮ ಸೆಮರೆಂಗ್ ಇಂಟರ್ನೆಟ್ನಲ್ಲಿ ಸೆನ್ಸೇಶನ್ ನ್ಯೂಸ್ ಆಗಿದೆ. ಪ್ರತಿಯೊಬ್ಬರು ಈಗ ಈ ಗ್ರಾಮದ ಬಗ್ಗೆ ತಿಳಿಯಲು ಇಂಟರ್ನೆಟ್ನಲ್ಲಿ ಹುಡುಕುತ್ತಿದ್ದಾರೆ. ಪರ್ವತ ಪ್ರದೇಶಗಳಲ್ಲಿರುವ ಈ ಗ್ರಾಮವು ಪ್ರವಾಸಿಗರನ್ನು ಅದರಲ್ಲೂ ವಿದೇಶಿ ಪ್ರವಾಸಿಗರನ್ನು ಹೆಚ್ಚಾಗಿ ಆಕರ್ಷಿಸುತ್ತಿದೆ.
ಟ್ರಾಫ್ರಿಕ್ ನಿಯಮ ಉಲ್ಲಂಘಿಸಿ, ದುಬಾರಿ ದಂಡ ಕಟ್ಟಲು ಸಾಧ್ಯವಾಗದೇ ಗೋಗೆರೆದ, ಮನವಿ ಮಾಡಿದ, ಪೊಲೀಸರಿಂದ ತಪ್ಪಿಸಿಕೊಂಡು ಹೋದ ಘಟನೆಗಳು ವರಿದಿಯಾಗಿದೆ. ಆದರೆ ದಂಡ ಮೊತ್ತ ಕೇಳಿ ತನ್ನ ಬೈಕನ್ನೇ ಸುಟ್ಟ ಘಟನೆ ನಡೆದಿದೆ. ಹೆಲ್ಮೆಟ್ ಹಾಕದೆ, ಸಿಗ್ನಲ್ ನೋಡದೆ, ಒನ್ ವೇ, ಪಾರ್ಕಿಂಗ್ ಗಮನಿಸದೆ, ನಾವು ನಡೆದಿದ್ದೇ ದಾರಿ ಎಂದು ಸವಾರಿ ಮಾಡುತ್ತಿದ್ದ ವಾಹನ ಸವಾರರು ಇದೀಗ ಟ್ರಾಫಿಕ್ ನಿಯಮ ಪಾಲಿಸುವಂತಾಗಿದೆ. ಒಂದೆರಡು ಸಿಗ್ನಲ್ ಜಂಪ್ ಮಾಡಿದರೆ ಸಾಕು ದಂಡ 20,000 ರೂಪಾಯಿ ದಾಟಿರುತ್ತೆ. ಹೀಗೆ ನಿಯಮ…
ಎರಡು ವರ್ಷಗಳ ಕಾಲ ಐಪಿಎಲ್ ಮೇಲೆ ಆರ್ಸಿಬಿ ಸಾಮ್ರಾಜ್ಯ! ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಬೆಂಗಳೂರು Royal Challengers Bengaluru ತಂಡ ಮತ್ತೊಮ್ಮೆ ಐಪಿಎಲ್ ಕ್ರಿಕೆಟ್ ಜಗತ್ತನ್ನು ತನ್ನತ್ತ ತಿರುಗಿಸಿಕೊಂಡಿದೆ. 2025ರಲ್ಲಿ ಮೊದಲ ಬಾರಿಗೆ ಐಪಿಎಲ್ ಟ್ರೋಫಿ ಗೆದ್ದು 18 ವರ್ಷಗಳ ನಿರೀಕ್ಷೆಗೆ ತೆರೆ ಎಳೆದಿದ್ದ ಆರ್ಸಿಬಿ, ಇದೀಗ 2026ರಲ್ಲೂ ಚಾಂಪಿಯನ್ ಆಗಿ ಸತತ ಎರಡನೇ ಬಾರಿ ಪ್ರಶಸ್ತಿ ಗೆದ್ದು ಹೊಸ ಇತಿಹಾಸ ನಿರ್ಮಿಸಿದೆ. ಈ ಮೂಲಕ ಐಪಿಎಲ್ನಲ್ಲಿ ಬ್ಯಾಕ್ ಟು ಬ್ಯಾಕ್…
ಒಂದು ಕೋಳಿ ತಲೆ ತೆಗೆದ ಮೇಲೆ ಎಷ್ಟು ಕಾಲ ಬದುಕಬಹುದು..? ಈ ಪ್ರಶ್ನೆ ನಿಮ್ಮನ್ನು ಕೇಳಿದ್ರೆ, ನೀವು ಹೇಳೋದು ಒಂದೇ ನಿನ್ನಷ್ಟು ಮೂರ್ಖ ಬೇರೆ ಯಾರು ಇಲ್ಲ ಅಂತ.ನೀವು ಹಾಗೆ ಅನ್ನೋದ್ರಲ್ಲಿ ಏನೂ ಅಚ್ಚರಿಯಿಲ್ಲ ಬಿಡಿ. ಯಾಕಂದ್ರೆ ಕೋಳಿ ತಲೆ ತೆಗೆದ ಮೇಲೆ ಕೋಳಿ ಬದುಕೋಕೆ ಹೇಗೆ ಸಾಧ್ಯ ಅಲ್ವ. ಆದ್ರೆ, ನೀವೂ ಹಾಗೆ ಅನ್ಕೊಂಡಿದ್ರೆ ಅದು ಸುಳ್ಳು.ಯಾಕಂದ್ರೆ ಇಲ್ಲಿ ಕೋಳಿ ಒಂದರ ಬದುಕಿಗಾಗಿ ನಡೀತಿರುವ ಹೋರಾಟವೋ ಅಥವಾ ಪವಾಡವೋ ಗೊತ್ತಿಲ್ಲ, ತಲೆ ತೆಗೆದ ಮೇಲೇನೂ ಒಂದು…
ಒಂದಿಂಚು ಜಾಗ ಇದ್ದರೆ ಅದರಲ್ಲಿ ಲಾಭ ಪಡೆಯಬೇಕೆನ್ನುವವರೇ ಹೆಚ್ಚು. ಅದರಲ್ಲೂ ಪಿತ್ರಾರ್ಜಿತ ಆಸ್ತಿ ಸಿಕ್ಕಿದರೆ ಅದನ್ನು ತಿಂದು ಮುಗಿಸೋದು ಹೇಗೆ ಅನ್ನೋದನ್ನೇ ಕಾಯುತ್ತಿರುವ ಜನ ಇರೋ ಕಾಲ ಇದು. ಆದರೆ ಇಲ್ಲೊಬ್ಬರು ತಮ್ಮ ಎಕರೆಗಟ್ಟಲೆ ಜಾಗವನ್ನು ಪರಿಸರಕ್ಕಾಗಿಯೇ ಅರ್ಪಣೆಗೈದಿದ್ದಾರೆ. ಅರಣ್ಯ ಇಲಾಖೆ, ಸರ್ಕಾರವನ್ನು ನಾಚಿಸುವಂತೆ ಎಕರೆಗಟ್ಟಲೆ ತಮ್ಮ ಸ್ವಂತ ಜಾಗದಲ್ಲಿ ದಟ್ಟ ಅರಣ್ಯವನ್ನು ಬೆಳೆಸಿದ್ದಾರೆ. ಇಂತಹ ಅಪರೂಪದ ಪರಿಸರ ಪ್ರೇಮಿ ಪುತ್ತೂರು ತಾಲೂಕಿನ ಸಂಟ್ಯಾರು ನಿವಾಸಿ ಪ್ರಗತಿಪರ ಕೃಷಿಕ ಸದಾಶಿವ ಮರಿಕೆ ನಮ್ಮ ಪಬ್ಲಿಕ್ ಹೀರೋ. ಪರಿಸರದ…
ಗರ್ಭಿಣಿ ಸ್ತ್ರೀಯರು ಶಾಂಪೂ, ಹೇರ್ ಕಂಡೀಶನರ್ ಮತ್ತು ಡಿಟರ್ಜೆಂಟ್ ಅತಿಯಾಗಿ ಬಳಸುವುದರಿಂದ ಹುಟ್ಟುವ ಮಕ್ಕಳಿಗೆ ಕೆಲ ನ್ಯೂನತೆಗಳು ಕಾಣಿಸಿಕೊಳ್ಳುತ್ತವೆ ಎಂದು ನೂತನ ಅಧ್ಯಯನವೊಂದು ತಿಳಿಸಿದೆ.