News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
govt

ಗೃಹಜ್ಯೋತಿ ಯೋಜನೆಗೆ ಅರ್ಜಿಸಲ್ಲಿಕೆ ಹೇಗೆ? ಜೂನ್‌ 15 ರಿಂದ ಅರ್ಜಿ ಆಹ್ವಾನ

128

ಬೆಂಗಳೂರು:ಗೃಹಜ್ಯೋತಿ ಯೋಜನೆ ಜಾರಿಗೆ ಎಲ್ಲಾ ಸಿದ್ದತೆ ಕೈಗೊಳ್ಳಲಾಗಿದ್ದು,  ಒಟ್ಟು ಅಂದಾಜು ಸರಾಸರಿ 13ಸಾವಿರ ಕೋಟಿ ವೆಚ್ಚವಾಗಲಿದೆ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್‌ ತಿಳಿಸಿದರು.

ಬೆಸ್ಕಾಂ ಕಚೇರಿಯಲ್ಲಿ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಸಚಿವರು, ಗೃಹಜ್ಯೋತಿ ಯೋಜನೆಯಡಿ 200 ಯೂನಿಟ್‌ ವರೆಗೆ ಉಚಿತ ವಿದ್ಯುತ್‌ ನೀಡಲಾಗುತ್ತಿದ್ದು, ಗೃಹಬಳಕೆದಾರರ ಸರಾಸರಿ ಒಂದು ವರ್ಷದ ವಿದ್ಯುತ್  ಬಳಕೆಯ ಪ್ರಮಾಣವನ್ನು  ಪಡೆದುಕೊಂಡ ಬಳಿಕ ಉಚಿತವಾಗಿ ವಿದ್ಯುತ್ ಪ್ರಮಾಣವನ್ನು ನಿಗದಿಪಡಿಸಲಾಗುವುದು ಎಂದು ತಿಳಿಸಿದರು.

ರಾಜ್ಯದಲ್ಲಿಒಟ್ಟು 2.16 ಕೋಟಿ ಗ್ರಾಹಕರಿದ್ದು, ಈ ಪೈಕಿ 200 ಯೂನಿಟ್‌ ಗಿಂತ ಕಡಿಮೆ ಬಳಕೆ ಮಾಡುವ ಗ್ರಾಹಕರು 2.14 ಕೋಟಿ ಇದ್ದಾರೆ. ಇವರ ವಾರ್ಷಿಕ ಬಳಕೆ 13,575 ಮಿಲಿಯನ್ ಯೂನಿಟ್ಗಳು. ಈ ಗ್ರಾಹಕರು ಪ್ರತಿ ತಿಂಗಳು ಸರಾಸರಿ 53 ಯೂನಿಟ್‌ ವಿದ್ಯುತ್‌ ಬಳಕೆ ಮಾಡುತ್ತಾರೆ. 2 ಲಕ್ಷಜ ನರು 200 ಯೂನಿಟ್‌ ಹೆಚ್ಚು ಬಳಕೆ ಮಾಡುತ್ತಾರೆ ಎಂದರು.

ಸೇವಾ ಸಿಂಧು ಪೋರ್ಟ್‌ಲ್‌ ನಲ್ಲಿ ಜೂನ್‌ 15 ರಿಂದ ಅರ್ಜಿ ಸಲ್ಲಿಸಲು ಅವಕಾಶ ನೀಡುವ ಮೂಲಕ ಯೋಜನೆಯನ್ನು ಜಾರಿಗೊಳಿಸುತ್ತೇವೆ. ಗ್ರಾಹಕರು ಸರಾಸರಿ ಬಿಲ್‌ ಗಿಂತ ಹೆಚ್ಚು ಉಪಯೋಗ ಮಾಡಿದರೆ ಹೆಚ್ಚುವರಿ ಬಳಕೆಗೆ ಬಿಲ್‌ ಕಟ್ಟಬೇಕಿದೆ. ಆದರೆ ಉಚಿತ ಯೋಜನೆಅಡಿಯಲ್ಲಿ ಗ್ರಾಹಕರು ನಿಗದಿತ ಶುಲ್ಕವನ್ನು ಕಟ್ಟುವಹಾಗಿಲ್ಲ. ಸರಾಸರಿ ಬಳಕೆಗಿಂತ ಹೆಚ್ಚುವರಿ ಬಳಕೆ ಮಾಡಿದರೆ ಅಂತಹ ಗ್ರಾಹಕರು ನಿಗದಿತ ಶುಲ್ಕ ಕಟ್ಟಬೇಕಾಗಿಲ್ಲ. ಹೆಚ್ಚುವರಿ ಬಳಕೆಗೆ ಮಾತ್ರ ಇಂಧನ ಶುಲ್ಕವನ್ನು ಕಟ್ಟಬೇಕಾಗುತ್ತದೆ.

ಅರ್ಜಿಸಲ್ಲಿಕೆಹೇಗೆ?

ಸೇವಾ ಸಿಂಧು ಪೋರ್ಟಲ್‌ ನಲ್ಲಿ ಗೃಹಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಕೆ ಮಾಡಲು ಅವಕಾಶ ಕಲ್ಪಿಸಲಾಗಿದ್ದು, ಗ್ರಾಹಕರ ಅನುಕೂಲಕ್ಕಾಗಿ ಕಂಪ್ಯೂಟರ್, ಮೊಬೈಲ್‌ ನಿಂದ ಅರ್ಜಿ ಸಲ್ಲಿಸುವ ಅವಕಾಶವನ್ನು ಕಲ್ಪಿಸಲಾಗುವುದು ಹಾಗೂ ಬೆಂಗಳೂರುಒನ್‌, ಕರ್ನಾಟಕಒನ್‌, ಗ್ರಾಮಒನ್‌ ಸೆಂಟರ್‌ ಗಳಲ್ಲೂ ಅವಕಾಶ ಕಲ್ಪಿಸಲಾಗುತ್ತಿದ್ದು ಜೂನ್‌ 15 ರಿಂದ ಅರ್ಜಿ ಪ್ರಾರಂಭ ಮಾಡುತ್ತೇವೆ. ಗ್ರಾಹಕರ ದೃಷ್ಟಿಯಿಂದ ಸರ್ವರ್‌ ಸಮಸ್ಯೆಯಾಗದಂತೆ ಕ್ರಮ ಕೈಗೊಳ್ಳಲು ಎಲ್ಲಾ ಸಿದ್ಧತೆಗಳನ್ನುE-Governance ಇಲಾಖೆ ಮಾಡಿಕೊಂಡಿರುತ್ತದೆ.

ಯೋಜನೆಯಡಿ ಬಾಡಿಗೆದಾರರು ಸೌಲಭ್ಯ ಪಡೆಯುವುದುಹೇಗೆ?

 

ವಿದ್ಯುತ್ ಬಿಲ್’ನಲ್ಲಿ ನಮೂದಿಸಲಾಗಿರುವ ಗ್ರಾಹಕರ ಸಂಖ್ಯೆ/ಖಾತೆ ಸಂಖ್ಯೆ,  ಬಾಡಿಗೆ/ಭೋಗ್ಯದ ಕರಾರು ಪತ್ರಸಲ್ಲಿಸುವುದು ಅಥವಾ ಸಂಬಂಧಿತ ವಿಳಾಸವನ್ನು ಸೂಚಿಸುವ ವೋಟರ್ ಐಡಿ ಜೊತೆಗೆ ಆಧಾರ್ ಅನ್ನು ಸಲ್ಲಿಸುವುದು.

ಅರ್ಜಿ ಸಲ್ಲಿಕೆಗೆ ಕೊನೆಯ ದಿನ ಯಾವುದು?

ಜೂನ್‌ 15 ರಿಂದ ಅರ್ಜಿ ಸಲ್ಲಿಕೆಗೆ ಅವಕಾಶ ಇದೆ.

  1. ಹೊಸ ಮನೆ ನಿರ್ಮಾಣ ಮಾಡಿದವರಿಗೆ ಈ ಯೋಜನೆ ಅನ್ವಯ ಆಗುತ್ತಾ?
  2. ಒಂದು ಮನೆಯಿಂದ ಮತ್ತೊಂದು ಮನೆಗೆ ಸ್ಥಳಾಂತರವಾದಾಗ ಈ ಯೋಜನೆ ಯಾವ ರೀತಿ ಅನ್ವಯವಾಗುತ್ತದೆ?

ಎಂಬ ಎರಡೂ ಅಂಶಗಳ ಬಗ್ಗೆ ಮಾನ್ಯ ಮುಖ್ಯಮಂತ್ರಿಗಳು ಹಾಗು ಸಚಿವ ಸಂಪುಟದ ಗಮನಕ್ಕೆ ತಂದು ತುರ್ತಾಗಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಮಾನ್ಯ ಇಂಧನ ಸಚಿವರು ಹೇಳಿದರು.

 

ಈ ಯೋಜನೆಗೆ ಸಂಬಂಧಿಸಿದಂತಹ ಮೇಲಿಂದ ಮೇಲೆ ಕೇಳಲಾಗುವ ಪ್ರಶ್ನೆಗಳು ಮತ್ತು ಸಂಶಯಗಳನ್ನು ನಿವಾರಿಸುವ ದೃಷ್ಠಿಯಿಂದ FAQ’s ತಯಾರಿಸಲಾಗಿದ್ದು,ಅದನ್ನು ಈ ಟಿಪ್ಪಣಿಯೊಂದಿಗೆ ಲಗತ್ತಿಸಿದೆ. ಈ ಮೂಲಕ ಗೃಹಬಳಕೆಯ ಗ್ರಾಹಕರಲ್ಲಿ ಮೂಡಿರುವ ಎಲ್ಲಾ ಗೊಂದಲಗಳಿಗೆ ತೆರೆ ಎಳೆಯಲು ಪ್ರಯತ್ನಿಸಲಾಗಿದೆ.

ಆದಾಗ್ಯೂ ಈ ಯೋಜನೆಯ ಜಾರಿಯ ಸಂದರ್ಭದಲ್ಲಿ ಆಗ್ಗಾಗ್ಗೆ ಉದ್ಬವಿಸಬಹುದಾದ ಸಮಸ್ಯೆಗಳನ್ನು ಸಂದರ್ಭಕ್ಕೆ ಅನುಗುಣವಾಗಿ ಸ್ಪಂದಿಸಿ, ಅದಕ್ಕೆ ಸರ್ಕಾರದ ಮಟ್ಟದಲ್ಲಿ ಚರ್ಚಿಸಿ ಪರಿಹಾರ ಕಂಡುಕೊಳ್ಳಲಾಗುವುದು. ಒಟ್ಟಾರೆ ಕರ್ನಾಟಕ ಸರ್ಕಾರದ ಈ ಮಹತ್ವದ ಯೋಜನೆಯನ್ನು ಅತ್ಯಂತ ಸಮರ್ಥವಾಗಿ ಜಾರಿಗೊಳಿಸಲು ಎಲ್ಲಾ ಸಿದ್ದತೆಗಳನ್ನು ಮಾಡಿಕೊಳ್ಳಲಾಗುತ್ತಿದೆ ಎಂದು ಸಚಿವರು ತಿಳಿಸಿದರು.

ಪತ್ರಿಕಾಗೋಷ್ಟಿಯಲ್ಲಿ ಇಂಧನ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳಾದ ಗೌರವ್ ಗುಪ್ತ,  ಬೆಸ್ಕಾಂನ ವ್ಯವಸ್ಥಾಪಕ ನಿರ್ದೇಶಕರಾದ ಮಹಾಂತೇಶ ಬೀಳಗಿ, ಹಣಕಾಸು ನಿರ್ದೇಶಕರಾದ ದರ್ಶನ್.     ಜೆರವರು ಉಪಸ್ಥಿತರಿದ್ದರು.

About the author / 

KOLAR NEWS CHANDRU

KOLAR NEWS CHANDRU editor : kolar news paper/ www.nammakolar.com presschandrukolar@gmail.com mobile-9448715409 kolar.karnataka.563101

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ನೀವು ಎಷ್ಟುತೂಕ ಇದ್ದೀರಿ ..? ಹಾಗಾದ್ರೆ ನೀವು ದಿನನಿತ್ಯ ಎಷ್ಟು ಲೀ ನೀರು ಕುಡಿಯಬೇಕು ಗೊತ್ತಾ ..? ತಿಳಿಯಲು ಈ ಲೇಖನ ಓದಿ…

    ಉತ್ತಮ ಆರೋಗ್ಯಕ್ಕೆ ನೀರು ಅತ್ಯಾವಶ್ಯಕ ಅಂಶ.ನೀರಿನ ಆವಶ್ಯಕತೆಯ ಮಟ್ಟವು ಬೇರೆ ಬೇರೆ ವ್ಯಕ್ತಿಗಳಲ್ಲಿ ಭಿನ್ನವಾಗಿರಬಹುದು. ನೀವು ಸಾಕಷ್ಟು ದ್ರವಾಹಾರ ಸೇವಿಸುತ್ತಿರುವಿರೇ ಎಂಬುದನ್ನು ಖಚಿತಪಡಿಸಿಕೊಳ್ಳಲು ಈ ಲೇಖನವು ನಿಮಗೆ ಸಹಾಯ ಮಾಡಲಿದೆ.

  • ರಾಜಕೀಯ

    ಬಿಜೆಪಿ 2023 ಚುನಾವಣಾ ಪ್ರಣಾಳಿಕೆಯಲ್ಲಿ ಏನಿದೆ?

    ಯುಗಾದಿ, ಗಣೇಶ ಚತುರ್ಥಿ, ದೀಪಾವಳಿಗೆ ಉಚಿತ ಗ್ಯಾಸ್, ಅರ್ಧ ಲೀ. ಉಚಿತ ನಂದಿನಿ ಹಾಲು: ಬಿಜೆಪಿಯಿಂದ ಪ್ರಣಾಳಿಕೆ ರಿಲೀಸ್ !!! ಬಿಪಿಎಲ್ (BPL) ಕುಟುಂಬಗಳಿಗೆ ಪ್ರತಿವರ್ಷ ಯುಗಾದಿ, ಗಣೇಶ ಚತುರ್ಥಿ ಮತ್ತು ದೀಪಾವಳಿಗೆ ತಲಾ ಒಂದರಂತೆ 3 ಅಡುಗೆ ಅನಿಲದ ಸಿಲಿಂಡರ್‌ಗಳನ್ನು ಉಚಿತವಾಗಿ ವಿತರಿಸುತ್ತೇವೆ ಎಂದು ಬಿಜೆಪಿ (BJP) ತನ್ನ ಚುನಾವಣಾ (Election) ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿದೆ. ರಾಜ್ಯದ ವಿಧಾನ ಸಭೆಗೆ ಇನ್ನೇನು ಕೆಲವೇ ದಿನಗಳು ಬಾಕಿಯಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ…

  • ಜ್ಯೋತಿಷ್ಯ

    ನಿಮ್ಮ ಮಂಗಳವಾರದ ರಾಶಿ ಭವಿಷ್ಯ ಶುಭವೋ ಅಶುಭವೋ ಈ ಲೇಖನ ನೋಡಿ ತಿಳಿಯಿರಿ…

    ಮಂಗಳವಾರ, 27/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಅಧಿಕಾರಿಗಳ ಅವಕೃಪೆಗೆ ಪಾತ್ರರಾಗುವ ಸಾಧ್ಯತೆ. ಖರ್ಚುವೆಚ್ಚಗಳಲ್ಲಿ ಮಿತಿ ಇರಲಿ. ಆಗಾಗ ಮಾನಸಿಕ ಸ್ಥಿರತೆ ಇರದು. ನಿರುದ್ಯೋಗಿಗಳಿಗೆ ಉತ್ತಮ ಅವಕಾಶಗಳು ದೊರಕಲಿವೆ. ಹಾಗೆ ಯೋಗ್ಯ ವಯಸ್ಕರಿಗೆ ಕಂಕಣಭಾಗ್ಯ ಒದಗುತ್ತದೆ. ಅತಿಯಾದ ಕೋಪವನ್ನು ಹದ್ದುಬಸ್ತಿನಲ್ಲಿಟ್ಟುಕೊಳ್ಳುವುದು ಉತ್ತಮ. ಕಷ್ಟವಾದರೂ ವ್ಯವಹಾರದಲ್ಲಿ ಉತ್ತಮ ಸಾಧನೆಯನ್ನು ಮಾಡಲಿದ್ದೀರಿ. ವೃಷಭ:- ಸಾಂಸಾರಿಕವಾಗಿ ಪತ್ನಿ ಹಾಗೂ ಮಕ್ಕಳಿಂದ ಸುಖ ಸಮಾಧಾನ ವಿರುತ್ತದೆ. ವ್ಯವಹಾರ ಕ್ಷೇತ್ರದಲ್ಲಿ ಗಳಿಕೆ ಅಧಿಕಗೊಂಡು ಉತ್ತಮ ಆದಾಯ. ಮಕ್ಕಳ ಆರೋಗ್ಯದ ಬಗ್ಗೆ…

  • ರಾಜಕೀಯ

    ಕರ್ನಾಟಕ ರಾಜ್ಯದ ರಾಜಕೀಯ ಇತಿಹಾಸದಲ್ಲಿ ಮೊದಲ ಬಾರಿಗೆ ಹೊಸ ಕ್ರಾಂತಿ..!ತಿಳಿಯಲು ಈ ಲೇಖನ ಓದಿ …

    ರಾಜ್ಯದ ಮೂಲೆ ಮೂಲೆಗಳಲ್ಲೂ ಮಹಾತ್ಮ ಗಾಂಧೀಜಿಯವರ ಸ್ವಾತಂತ್ರ ಸಂಗ್ರಾಮದ ಮಾದರಿಯಲ್ಲಿ ನಮ್ಮ ಕಾಂಗ್ರೆಸ್ ಪಕ್ಷದ ಸಂಘಟನೆ ಚಟುವಟಿಕೆಗಳು ನಡೆಯುತ್ತಿದ್ದು, ಡಿಸಂಬರ್.19 ರಂದು ಕೂಡಲ ಸಂಗಮದಲ್ಲಿ ನಡೆಯುವ ಐತಿಹಾಸಿಕ ಸಮಾವೇಶವು ರಾಜ್ಯದ ರಾಜಕೀಯ ಇತಿಹಾಸದಲ್ಲಿ ಕ್ರಾಂತಿ ಆಗಲಿದೆಯೆಂದು ಪಕ್ಷೇತರ ಶಾಸಕ ವರ್ತೂರು ಪ್ರಕಾಶ್ ಹೇಳಿದ್ದಾರೆ.

  • Health, ಆರೋಗ್ಯ, ಉಪಯುಕ್ತ ಮಾಹಿತಿ

    ಸೇಬುಗಳ ಕುರಿತ೦ತೆ ಪ್ರಮುಖವಾದ ಕೆಲವು ಆರೋಗ್ಯ ಸ೦ಬ೦ಧಿ ಪ್ರಯೋಜನಗಳು!!

    ಸೇಬು ಗುಲಾಬಿ ಕುಟುಂಬದಲ್ಲಿನ (ರೋಸೇಸೀ) ಜಾತಿಯಾದ  ಮೇಲಸ್ ಡೊಮೆಸ್ಟಿಕಾಕ್ಕೆ ಸೇರಿದ ಪೋಮ್ ಲಕ್ಷಣಗಳಿರುವ ಸೇಬಿನ ಮರದ ಹಣ್ಣು  ಅದು ಅತ್ಯಂತ ವ್ಯಾಪಕವಾಗಿ ಬೇಸಾಯಮಾಡಲಾದ ಮರಹಣ್ಣುಗಳ ಪೈಕಿ ಒಂದು, ಮತ್ತು ಮಾನವರಿಂದ ಬಳಸಲಾಗುವ ಮೇಲಸ್ಪಂಗಡದ ಅನೇಕ ಸದಸ್ಯಗಳ ಪೈಕಿ ಅತ್ಯಂತ ವ್ಯಾಪಕವಾಗಿ ಪರಿಚಿತವಾಗಿರುವ ಸದಸ್ಯವಾಗಿದೆ. ಈ ಮರವು ಮಧ್ಯ ಏಷ್ಯಾದ ಮೂಲದ್ದು, ಮತ್ತು ಇಂದೂ ಕೂಡ ಇದರ ಕಾಡುಪೂರ್ವಜವನ್ನು ಇಲ್ಲಿ ಕಾಣಬಹುದು. ಸೇಬು ಮೂಲತಃ ಸಮಶೀತೋಷ್ಣ ವಲಯದ ಬೆಳೆ. ಕಪ್ಪು ಸಮುದ್ರ ಮತ್ತು ಕ್ಯಾಸ್ಪಿಯನ್ ಸಮುದ್ರ ನಡುವಿನ ಭೂಭಾಗವು ಇದರ ಮೂಲ ಪ್ರದೇಶವೆಂದು ತಿಳಿಯಲಾಗಿದ್ದು,ನಂತರ ಈ ಬೆಳೆ ಸಮಶೀತೋಷ್ಣ ವಲಯದ ಎಲ್ಲ…

  • ಗ್ಯಾಜೆಟ್

    ಜಿಯೋದಿಂದ ಹೊಸ ಆಫರ್’ಗಳ ಸುರಿಮಳೆ…!ಇಲ್ಲಿದೆ ಜಿಯೋ ಆಫರ್’ಗಳ ಫುಲ್ ಡಿಟೈಲ್ಸ್…

    ಜಿಯೋ ಧನ್‌ಧನಾ ಧನ್ ಆಫರ್ ಮುಗಿದ ನಂತರ ಜಿಯೋ ಪ್ಲಾನ್ ಏನು ಎಂಬುದಕ್ಕೆ ಉತ್ತರ ದೊರೆತಿದೆ. ರಿಲಯನ್ಸ್ ಜಿಯೊ ‘ಧನ್ ಧನ ಧನ್’ ಯೋಜನೆಗಳು ಪ್ರಿಪೇಯ್ಡ್ ಮತ್ತು ಪ್ರಿಪೇಯ್ಡ್ ಬಳಕೆದಾರರಿಗೆ ಹೊಸ ಪ್ಯಾಕ್ಗಳನ್ನು 349, ರೂ 399, ರೂ 509 ವರೆಗೆ ಹೆಚ್ಚಿಸಲಾಗಿದೆ ಮತ್ತು ಮುಂದೆ ಉಚಿತವಾದ 4 ಜಿ ಡಾಟಾ ಪ್ಯಾಕ್ ನೀಡುತ್ತದೆ. ರೂ 399 ಪ್ಯಾಕ್ ಈಗ ಬಳಕೆದಾರರಿಗೆ 84 ಜಿಬಿ ಡೇಟಾವನ್ನು ಒದಗಿಸುತ್ತಿದೆ.