News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
govt

ಈ ಲಿಂಕ್‌ ಕ್ಲಿಕ್‌ ಮಾಡಿದರೆ ಗೃಹಲಕ್ಷ್ಮೀ ಯೋಜನೆಯ ಅರ್ಜಿ

338

ಗೃಹಲಕ್ಷ್ಮೀ ಯೋಜನೆಯ ಅರ್ಜಿ ನಮೂನೆ ಬಿಡುಗಡೆ. ಈ ಡೈರೆಕ್ಟ್‌ ಲಿಂಕ್‌ ಕ್ಲಿಕ್‌ ಮಾಡಿ ಅರ್ಜಿ ಸಲ್ಲಿಸಿ.! ಈ ಲಿಂಕ್‌ ಕ್ಲಿಕ್‌ ಮಾಡಿದರೆ ಗೃಹಲಕ್ಷ್ಮೀ ಯೋಜನೆಯ ಅರ್ಜಿ ನಿಮ್ಮ ಸ್ಕ್ರೀನ್‌ ಮೇಲೆ ಡಿಸ್ಪ್ಲೇ ಆಗಲಿದೆ. ಇದನ್ನು ಜಾಗರೂಕರಾಗಿ ಓದಿ ಅರ್ಜಿ ತುಂಬಿರಿ.

https://drive.google.com/file/d/1-14JW0nJ2hfXT-TAHsIykVdha9D9_eZC/view

ಚುನಾವಣೆಗೂ ಮುನ್ನ ಘೋಷಿಸಿದ್ದ 5 ಗ್ಯಾರಂಟಿಗಳನ್ನು ಕಾಂಗ್ರೆಸ್ ಸರ್ಕಾರ ಜಾರಿ ಮಾಡಿದೆ. ಆದರೆ, ಈ ಯೋಜನೆಗಳಿಗೆ ಕೆಲವು ಷರತ್ತುಗಳನ್ನು ವಿಧಿಸಿದೆ. ಮಹಿಳಾ & ಮಕ್ಕಳ ಕಲ್ಯಾಣ ಇಲಾಖೆಯು ಗುರುವಾರ 5 ಗ್ಯಾರೆಂಟಿಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆಯ ಅರ್ಜಿ ನಮೂನೆಯನ್ನು (Gruha Lakshmi Scheme Application Form) ಬಿಡುಗಡೆ ಮಾಡಿದೆ. ಅರ್ಜಿಯಲ್ಲಿ ಜಾತಿ ನಮೂನೆಯನ್ನು ಕಡ್ಡಾಯ ಮಾಡಿದೆ.

ಅರ್ಜಿ ನಮೂನೆಯ ಮೇಲ್ಭಾಗದಲ್ಲಿ ಸಿಎಂ, ಡಿಸಿಎಂ, ಮಹಿಳಾ & ಮಕ್ಕಳ ಕಲ್ಯಾಣ ಸಚಿವೆ ಸೇರಿಂತೆ ಮೂವರ ಭಾವಚಿತ್ರವಿರುವ ‘ಗೃಹಲಕ್ಷ್ಮೀ’ಅರ್ಜಿ ನಮೂನೆ ಬಿಡುಗಡೆ ಮಾಡಲಾಗಿದೆ. ಆಧಾರ್ ಗೆ ಲಿಂಕ್ ಹೊಂದಿರುವ ಫೋನ್ ನಂಬರ್ ಕಡ್ಡಾಯವಾಗಿ ನಮೂದು ಮಾಡಬೇಕಿದೆ. ಅರ್ಜಿಯಲ್ಲಿ ಪತಿಯ ಆಧಾರ್ ಕಾರ್ಡ್, ವೋಟರ್ ಐಡಿ ಕೇಳಲಾಗಿದೆ. ಜೂನ್‌ 15 ರಿಂದ ಜುಲೈ 15 ರತನಕ ಅರ್ಜಿ ಸಲ್ಲಿಸಲು ಅವಕಾಶವಿದೆ. ಅಲ್ಲದೇ ಫಲಾನುಭವಿಯು ತಾನು ಮತ್ತು ತನ್ನ ಪತಿ ಜಿಎಸ್‌ಟಿ ಪಾವತಿದಾರರು ಅಲ್ಲ ಎಂದು ಘೋಷಣೆ ಮಾಡಬೇಕಿದೆ. ಕುಟುಂಬದಲ್ಲಿ ಒಬ್ಬರಿಗಿಂತ ಹೆಚ್ಚು ಮಹಿಳೆಯರಿದ್ದರೆ ಅರ್ಜಿದಾರರೇ ಯಜಮಾನಿ ಯಾರು ಎಂದು ಘೋಷಣೆ ಮಾಡಿ ಅರ್ಜಿ ಸಲ್ಲಿಸಬೇಕು.

ಗೃಹಲಕ್ಷ್ಮೀ ಯೋಜನೆಗೆ ಪ್ರಮುಖ ಷರತ್ತುಗಳೇನು?

1. ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯು ವಿತರಿಸುವ ಅಂತ್ಯೋದಯ, ಬಿಪಿಎಲ್ ಮತ್ತು ಎಪಿಎಲ್ ಪಡಿತರ ಚೀಟಿಗಳಲ್ಲಿ ಕುಟುಂಬದ ಯಜಮಾನಿ ಎಂದು ನಮೂದಿಸಿರುವ ಮಹಿಳೆಯು ಈ ಯೋಜನೆಯ ಅರ್ಹ ಫಲಾನುಭವಿಯಾಗಿರುತ್ತಾರೆ.
2. ಒಂದೇ ಕುಟುಂಬದಲ್ಲಿ ಒಂದಕ್ಕಿಂತ ಹೆಚ್ಚು ಮಹಿಳೆಯರಿದ್ದಲ್ಲಿ ಒಬ್ಬ ಮಹಿಳೆಗೆ ಮಾತ್ರ ಯೋಜನೆ ಅನ್ವಯಿಸಲಿದೆ.
3. ಈ ಯೋಜನೆಯ ಸೌಲಭ್ಯ ಪಡೆಯಲು ಫಲಾನುಭವಿಯ ಬ್ಯಾಂಕ್‌ ಖಾತೆ ಮತ್ತು ಆಧಾರ ಕಾರ್ಡ್‌ ಗಳನ್ನು ಜೋಡಣೆ ಮಾಡಬೇಕು.
4. ಕುಟುಂಬದ ಯಜಮಾನಿ ಅಥವಾ ಯಜಮಾನಿಯ ಪತಿ ಆದಾಯ ಪಾವತಿದಾರರಾಗಿದ್ದಲ್ಲಿ ಸೌಲಭ್ಯ ಸಿಗುವುದಿಲ್ಲ.
5. ಕುಟುಂಬದ ಯಜಮಾನಿ ಅಥವಾ ಯಜಮಾನಿಯ ಪತಿಯು ಜಿಎಸ್‌ಟಿ ರಿಟರ್ನ್ ಸಲ್ಲಿಸುವವರಾಗಿದ್ದಲ್ಲಿ ಈ ಯೋಜನೆಗೆ ಅರ್ಹರಾಗಿರುವುದಿಲ್ಲ.

ಯಾವೆಲ್ಲ ದಾಖಲೆಗಳು ಬೇಕು ?

* ಅರ್ಜಿಯಲ್ಲಿ ಮನೆಯ ಯಜಮಾನಿ ಹಾಗೂ ಪತಿಯ ದಾಖಲೆಗಳನ್ನು ಕೇಳಲಾಗಿದೆ. ಪತಿಯ ಆಧಾರ್ ಕಾರ್ಡ್ ವೋಟರ್ ಐಡಿ ದಾಖಲೆ ಕೂಡ ಅರ್ಜಿ ಸಲ್ಲಿಕೆ ವೇಳೆ ಅಗತ್ಯವಾಗಿದೆ.
* ಅರ್ಜಿಯಲ್ಲಿ ಮೊದಲಿಗೆ ಹೆಸರು, ಆಧಾರ್ ಕಾರ್ಡ್, ವೋಟರ್ ಐಡಿ, ಪಡಿತರ ಚೀಟಿ, ಉದ್ಯೋಗ, ಪತಿಯ ಹೆಸರು, ಪತಿಯ ಆಧಾರ್ ಹಾಗೂ ವೋಟರ್ ಐಡಿ ಮುಂತಾದ ಮಾಹಿತಿಯನ್ನು ಕೇಳಲಾಗಿದೆ.
* ಅದರೊಂದಿಗೆ ಜಾತಿ ಪ್ರಮಾಣಪತ್ರ, ಆಧಾರ್ ಜತೆ ಲಿಂಕ್ ಆಗಿರುವ ಮೊಬೈಲ್ ನಂ. ಬ್ಯಾಂಕ್ ಖಾತೆ ಮಾಹಿತಿಯನ್ನು ನಮೂದಿಸಲು ಜಾಗ ನೀಡಲಾಗಿದೆ.

* ಈ ಅರ್ಜಿಯನ್ನು ಭರ್ತಿ ಮಾಡುವ ಜತೆಗೆ, ಮನೆಯ ಯಜಮಾನಿ ಹಾಗೂ ಆಕೆಯ ಪತಿಯ ಆಧಾರ್ ಕಾರ್ಡ್ ಪ್ರತಿ ಹಾಗೂ ವೋಟರ್ ಐಡಿ ಜೆರಾಕ್ಸ್‌ ಪ್ರತಿಯನ್ನು ಲಗತ್ತಿಸಬೇಕು. * ಅದರೊಂದಿಗೆ ಬ್ಯಾಂಕ್ ಪಾಸ್ ಪುಸ್ತಕದ ಜೆರಾಕ್ಸ್‌ ಪ್ರತಿಯನ್ನೂ ಲಗತ್ತಿಸಬೇಕು.
ಫಲಾನುಭವಿಯ ಹೆಸರನ್ನು ಬಿಪಿಎಲ್ ಅಥವಾ ಎಪಿಎಲ್ ಅಥವಾ ಅಂತ್ಯೋದಯ ಕಾರ್ಡ್‌ಗಳಲ್ಲಿ ಕುಟುಂಬದ ಮುಖ್ಯಸ್ಥ ಎಂದು ನಮೂದಿಸರಬೇಕು. ಈ ಬಿಪಿಎಲ್‌ / ಎಪಿಎಲ್‌/ ಅತ್ಯೋದಯ ಕಾರ್ಡ್‌ಗಳಿಲ್ಲದ ಜನರು ಈ ಯೋಜನೆಗೆ ಅರ್ಹರಲ್ಲ ಎಂದು ತಿಳಿಸಿದೆ.

ಈ ಲಿಂಕ್‌ ಕ್ಲಿಕ್‌ ಮಾಡಿ

https://drive.google.com/file/d/1-14JW0nJ2hfXT-TAHsIykVdha9D9_eZC/view

ಅರ್ಜಿ ಸಲ್ಲಿಕೆ ಹೇಗೆ?

ಈ ಯೋಜನೆಯ ಫಲಾನುಭವಿಗಳು ಜೂನ್ 15 ರಿಂದ ಜುಲೈ 15 ರವರೆಗೆ ಅರ್ಜಿ ಸಲ್ಲಿಸಬಹುದು. ಜುಲೈ 15 ರಿಂದ ಫಲಾನುಭವಿಗಳ ಆಯ್ಕೆ ಮಾಡಲಾಗುತ್ತದೆ. ಆಯ್ಕೆಗೊಂಡ ಫಲಾನುಭವಿಗಳಿಗೆ ಆಗಸ್ಟ್ 15 ರಂದು ಅವರ ಬ್ಯಾಂಕ್‌ ಖಾತೆಗೆ ಹಣ ವರ್ಗಾವಣೆ ಮಾಡಲಾಗುತ್ತದೆ. ಅರ್ಜಿದಾರರು ಸೇವಾ ಸಿಂಧು ಪೋರ್ಟಲ್‌ ಮೂಲಕ ಅಥವಾ ಭೌತಿಕವಾಗಿಯಾಗಲಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

ಒಂದು ವೇಳೆ ಅರ್ಜಿದಾರರು ತಪ್ಪು ಮಾಹಿತಿ ನೀಡಿದ್ದೇ ಆದರೆ, ಸರ್ಕಾರ ನೀಡಿದ್ದ ಹಣವನ್ನು ವಾಪಸ್ ನೀಡಬೇಕಾಗುತ್ತದೆ. ಈ ಯೋಜನೆಗೆ ಅರ್ಜಿ ಸಲ್ಲಿಸುವವರು ಬ್ಯಾಂಕ್ ಖಾತೆಗಳನ್ನು ತಮ್ಮ ಆಧಾರ್‌ಗೆ ಲಿಂಕ್ ಮಾಡಿರಬೇಕು.

ಈ ಲಿಂಕ್‌ ಕ್ಲಿಕ್‌ ಮಾಡಿ

https://drive.google.com/file/d/1-14JW0nJ2hfXT-TAHsIykVdha9D9_eZC/view

About the author / 

KOLAR NEWS CHANDRU

KOLAR NEWS CHANDRU editor : kolar news paper/ www.nammakolar.com presschandrukolar@gmail.com mobile-9448715409 kolar.karnataka.563101

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    70 ವರ್ಷದ ಈ ವೃದ್ದನ ಬಯಕೆ ಕೇಳಿದ್ರೆ ಅಚ್ಚ್ಚರಿಯಂತು ಗ್ಯಾರಂಟಿ..ಅಷ್ಟಕ್ಕೂ ಆ ವಿಷಯವಾದ್ರು ಏನು?

    ಯಾರ್ಯಾರಿಗೋ ಏನೋ ಆಸೆಯಾದರೆ, ಈ ವೃದ್ಧನದ್ದು ಬಲು ವಿಚಿತ್ರ ಹಾಗೂ ವಿಲಕ್ಷಣ ಆಸೆ…! ತಮಿಳುನಾಡಿನ ರಾಮನಾಥಪುರ ಜಿಲ್ಲೆಯ ಮಲೈಸ್ವಾಮಿ ಎಂಬ 70 ವರ್ಷದ ಈ ವೃದ್ಧನಿಗೆ ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್ 24 ವರ್ಷದ ಪಿ.ವಿ. ಸಿಂಧುವನ್ನು ಮದುವೆಯಾಗಬೇಕಂತೆ..! ಒಂದು ವೇಳೆ ಸಿಂಧು ಮದುವೆಯಾಗಲು ಒಪ್ಪದಿದ್ದರೆ ಆಕೆಯನ್ನು ಕಿಡ್ನಾಪ್ ಮಾಡಿಕೊಂಡು ಹೋಗಿ ಮದುವೆಯಾಗುತ್ತಾನಂತೆ. ಸಾರ್ವಜನಿಕರ ಕುಂದುಕೊರತೆ ನಿವಾರಣೆಗೆಂದು ಜಿಲ್ಲಾಧಿಕಾರಿಗಳು ನಡೆಸುವ ವಾರದ ಜನತಾದರ್ಶನದಲ್ಲಿ ಸಿಂಧು ಫೋಟೋ ಸಹಿತ ಪತ್ರವೊಂದನ್ನು ಜಿಲ್ಲಾಧಿಕಾರಿಗಳ ಕೈಗಿತ್ತು, ನನ್ನನ್ನು ಮದುವೆಯಾಗುವಂತೆ ಸಿಂಧು ಅವರಿಗೆ ಸೂಚಿಸಬೇಕೆಂದು…

  • ಸುದ್ದಿ

    ಈ ಕಂಪನಿಯಲ್ಲಿ ವಾರಕ್ಕೆ ಮೂರು ದಿನ ರಜೆ……!

    ಆರಂಭದಲ್ಲಿ ವಾರದಲ್ಲಿ ಒಂದು ದಿನ ರಜೆ ಪಡೆಯಲು ವಿಶ್ವದ ಜನರು ಪರದಾಡಿದ್ದರು. ನಂತ್ರ ಕೆಲ ಕಂಪನಿಗಳು ವಾರದಲ್ಲಿ ಎರಡು ದಿನ ರಜೆ ನೀಡಲು ಶುರು ಮಾಡಿದ್ವು. ಇಷ್ಟಾದ್ರೂ ಉದ್ಯೋಗಿಗಳು ವಾರದಲ್ಲಿ ಮೂರು ದಿನ ರಜೆ ಸಿಕ್ಕರೆ ಎಷ್ಟು ಚೆಂದವೆಂದು ಆಲೋಚನೆ ಮಾಡ್ತಾರೆ. ಭಾರತದಲ್ಲಿ ಇದು ಇನ್ನೂ ಸಾಧ್ಯವಾಗಿಲ್ಲ. ಆದ್ರೆ ಬ್ರಿಟನ್ ಕಂಪನಿಯೊಂದು ಉದ್ಯೋಗಿಗಳಿಗೆ ಖುಷಿ ಸುದ್ದಿ ನೀಡಿದೆ. ಪೋರ್ಟ್ಕುಲಸ್ ಲೆಗ್ಸ್ ಹೆಸರಿನ ಕಂಪನಿ ವಾರದಲ್ಲಿ ಮೂರು ದಿನ ರಜೆ ನೀಡುವುದಾಗಿ ಹೇಳಿದೆ. ಅಂದ್ರೆ ಕೆಲಸಗಾರರು ವಾರದಲ್ಲಿ ನಾಲ್ಕು…

  • ಸುದ್ದಿ

    ಭಾರತೀಯ ಸೇನೆ ಪಾಕ್ ನೆಲದಲ್ಲಿ ದಾಳಿ ನಡೆಸಿದ ವೇಳೆ ನರೇಂದ್ರ ಮೋದಿ ಏನ್ ಮಾಡ್ತಾ ಇದ್ರು ಗೊತ್ತಾ..?

    ಪುಲ್ವಾಮ ದಾಳಿ ನಂತ್ರ ಭಾರತ ಪ್ರತೀಕಾರ ತೀರಿಸಿಕೊಂಡಿದೆ. ಭಾರತೀಯ ಸೇನೆ ಪಾಕಿಸ್ತಾನ ಆಕ್ರಮಿತ ಕಾಶ್ಮೀರಕ್ಕೆ ನುಗ್ಗಿ ಏರ್ ಸ್ಟ್ರೈಕ್ ನಡೆಸಿದೆ. ಗಡಿ ನಿಯಂತ್ರಣ ರೇಖೆಯಲ್ಲಿರುವ ಜೈಷ್ ಉಗ್ರ ಸಂಘಟನೆ ಅಡಗು ತಾಣದ ಮೇಲೆ ರಾತ್ರಿ ಸುಮಾರು 3.30 ರ ಸುಮಾರಿಗೆ ಬಾಂಬ್ ದಾಳಿ ನಡೆಸಿದ್ದವು. 12 ಮಿರಾಜ್-2000 ಯುದ್ಧ ವಿಮಾನಗಳು 1000 ಕೆ.ಜಿ ಬಾಂಬ್ ದಾಳಿ ಮಾಡಿದ್ದವು. ದಾಳಿ ಬಗ್ಗೆ ಪಾಕಿಸ್ತಾನಕ್ಕೆ ಸಣ್ಣ ಸುಳಿವೂ ಇರಲಿಲ್ಲ. ವ್ಯವಸ್ಥಿತವಾಗಿ ದಾಳಿ ನಡೆಸಿದ್ದ ಸೇನೆ ಕಾರ್ಯಕ್ಕೆ ಎಲ್ಲೆಡೆಯಿಂದ ಮೆಚ್ಚುಗೆ ವ್ಯಕ್ತವಾಗ್ತಿದೆ….

  • ಸುದ್ದಿ

    ರಮ್ಯಾ ಎಲ್ಲಿದಿಯಮ್ಮಾ? ನಟಿ ಕಮ್ ರಾಜಕಾರಣಿ ರಮ್ಯಾ ಕಾಲೆಳೆದ ಶಿಲ್ಪಾ ಗಣೇಶ್!

    ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಿವಾದಾತ್ಮಕ ಟ್ವೀಟ್ ಗಳನ್ನು ಮಾಡುತ್ತಾ ಚುನಾವಣಾ ಪ್ರಚಾರದ ಸಮಯದಲ್ಲಿ ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಿದ್ದ ನಟಿ ಕಮ್ ರಾಜಕಾರಣಿ ರಮ್ಯಾ ಅವರಿಗೆ ಶಿಲ್ಪಾ ಗಣೇಶ್ ಅವರು ಕಾಲೆಳೆದಿದ್ದಾರೆ. ದೇಶಾದ್ಯಂತ ಬಿಜೆಪಿ ಭರ್ಜರಿ ಜಯ ಗಳಿಸಿದ್ದು ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಮುಖ್ಯಸ್ಥೆ ನಟಿ ರಮ್ಯಾಗೆ ಶಿಲ್ಪಾ ಗಣೇಶ್ ಅವರು ಟ್ವೀಟ್ ಮಾಡಿ ರಮ್ಯಾ ಎಲ್ಲಿದಿಯಮ್ಮಾ? ಎಲ್ಲಿ ನಿಮ್ಮ ಅಧ್ಯಕ್ಷ ರಾಹುಲ್? ಎಲ್ಲಿ ನಿಮ್ಮ ಫೇಕ್ ಅಕೌಂಟ್ ಸೈನ್ಯ? ಎಲ್ಲಿ ನಿಮ್ಮ ತಲೆಬುಡವಿಲ್ಲದ…

  • ಆರೋಗ್ಯ

    ರಾತ್ರಿ ಮಲಗುವ ಮೊದಲು ಬೆಲ್ಲ ತಿಂದರೆ ಏನಾಗುತ್ತದೆ ಗೊತ್ತಾ, ಬಹಳಷ್ಟು ಜನರಿಗೆ ಗೊತ್ತಿಲ್ಲ ಬೆಲ್ಲದ ಮಹತ್ವ.

    ಹಳೆಯ ಕಾಲದಲ್ಲಿ ಜನರು ಬೆಲ್ಲವನ್ನು ಮಾತ್ರ ಸಿಹಿ ವಸ್ತುವಾಗಿ ಹೆಚ್ಚು ಸೇವಿಸುತ್ತಿದ್ದರು ಆದರೆ ಕಾಲ ಕಳೆದಂತೆ ಇತ್ತೀಚಿನ ದಿನಗಳಲ್ಲಿ ಜನರು ಸಿಹಿ ಎಂದರೆ ಸಕ್ಕರೆಯ ಮೊರೆ ಹೋಗುತ್ತಾರೆ, ಸಕ್ಕರೆ ಸಿಹಿಯಾಗಿ ಹೆಚ್ಚು ಪ್ರಚಾರ ಪಡೆದಿದೆ. ನಮ್ಮ ಆಯುರ್ವೇದದಲ್ಲಿ ಉತ್ತಮ ಆಹಾರವು ದೇಹಕ್ಕೆ ತುಂಬಾ ಪ್ರಯೋಜನಕಾರಿ ಎಂದು ಹೇಳಲಾಗುತ್ತದೆ. ಬಹಳಷ್ಟು ಜನರಿಗೆ ಗೊತ್ತಿರಲು ಸಾಧ್ಯವಿಲ್ಲ ಬೆಲ್ಲವನ್ನು ತಿನ್ನುವುದರಿಂದ ವಿಟಮಿನ್ ಎ, ವಿಟಮಿನ್ ಸಿ, ವಿಟಮಿನ್ ಬಿ 12, ಆಂಟಿಆಕ್ಸಿಡೆಂಟ್ಸ್, ಕ್ಯಾಲ್ಸಿಯಂ ಮತ್ತು ಫೈಬರ್ ನಂತಹ ಸಾಕಷ್ಟು ಪೋಷಕಾಂಶಗಳು ದೊರೆಯುತ್ತವೆ….

  • ಸುದ್ದಿ

    ಪಿಂಚಣಿ ಹಣಕ್ಕಾಗಿ 100 ವರ್ಷ ವಯಸ್ಸಿನ ತಾಯಿಯನ್ನ ಮಂಚದ ಸಮೇತ ಬ್ಯಾಂಕಿಗೆ ಕರೆತಂದ ಮಗಳು.

    100 ವರ್ಷ ವಯಸ್ಸಿನ ವೃದ್ಧ ತಾಯಿಯ ಪಿಂಚಣಿ ಹಣಕ್ಕಾಗಿ ಮಗಳು ಮಂಚದ ಸಮೇತ ಆಕೆಯನ್ನು ಬ್ಯಾಂಕಿಗೆ ಕರೆತಂದ ಘಟನೆಯೊಂದು ನಡೆದಿದೆ. ಮಗಳು ತನ್ನ ತಾಯಿಯನ್ನು ಮಂಚದ ಸಮೇತ ಕರೆದೊಯ್ಯುವುದನ್ನು ಸ್ಥಳೀಯರು ವಿಡಿಯೋ ಮಾಡಿದ್ದು, ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಪಿಂಚಣಿ ಹಣವನ್ನು ಡ್ರಾ ಮಾಡಲು ಆಕೆಯೇ ಬರಬೇಕು ಎಂದು ಬ್ಯಾಂಕ್ ಸಿಬ್ಬಂದಿ ಸೂಚನೆ ನೀಡಿದ್ದಾರೆ. ಆದರೆ ತಾಯಿಗೆ ಎದ್ದು ನಡೆಯಲು ಸಾಧ್ಯವಿಲ್ಲ. ಹೀಗಾಗಿ ಅವರು ಬ್ಯಾಂಕಿಗೆ ಬರಲು ಆಗುತ್ತಿಲ್ಲ ಎಂದು ಹೇಳಿದರೂ ಸಿಬ್ಬಂದಿ…