govt

ಈ ಲಿಂಕ್‌ ಕ್ಲಿಕ್‌ ಮಾಡಿದರೆ ಗೃಹಲಕ್ಷ್ಮೀ ಯೋಜನೆಯ ಅರ್ಜಿ

316

ಗೃಹಲಕ್ಷ್ಮೀ ಯೋಜನೆಯ ಅರ್ಜಿ ನಮೂನೆ ಬಿಡುಗಡೆ. ಈ ಡೈರೆಕ್ಟ್‌ ಲಿಂಕ್‌ ಕ್ಲಿಕ್‌ ಮಾಡಿ ಅರ್ಜಿ ಸಲ್ಲಿಸಿ.! ಈ ಲಿಂಕ್‌ ಕ್ಲಿಕ್‌ ಮಾಡಿದರೆ ಗೃಹಲಕ್ಷ್ಮೀ ಯೋಜನೆಯ ಅರ್ಜಿ ನಿಮ್ಮ ಸ್ಕ್ರೀನ್‌ ಮೇಲೆ ಡಿಸ್ಪ್ಲೇ ಆಗಲಿದೆ. ಇದನ್ನು ಜಾಗರೂಕರಾಗಿ ಓದಿ ಅರ್ಜಿ ತುಂಬಿರಿ.

https://drive.google.com/file/d/1-14JW0nJ2hfXT-TAHsIykVdha9D9_eZC/view

ಚುನಾವಣೆಗೂ ಮುನ್ನ ಘೋಷಿಸಿದ್ದ 5 ಗ್ಯಾರಂಟಿಗಳನ್ನು ಕಾಂಗ್ರೆಸ್ ಸರ್ಕಾರ ಜಾರಿ ಮಾಡಿದೆ. ಆದರೆ, ಈ ಯೋಜನೆಗಳಿಗೆ ಕೆಲವು ಷರತ್ತುಗಳನ್ನು ವಿಧಿಸಿದೆ. ಮಹಿಳಾ & ಮಕ್ಕಳ ಕಲ್ಯಾಣ ಇಲಾಖೆಯು ಗುರುವಾರ 5 ಗ್ಯಾರೆಂಟಿಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆಯ ಅರ್ಜಿ ನಮೂನೆಯನ್ನು (Gruha Lakshmi Scheme Application Form) ಬಿಡುಗಡೆ ಮಾಡಿದೆ. ಅರ್ಜಿಯಲ್ಲಿ ಜಾತಿ ನಮೂನೆಯನ್ನು ಕಡ್ಡಾಯ ಮಾಡಿದೆ.

ಅರ್ಜಿ ನಮೂನೆಯ ಮೇಲ್ಭಾಗದಲ್ಲಿ ಸಿಎಂ, ಡಿಸಿಎಂ, ಮಹಿಳಾ & ಮಕ್ಕಳ ಕಲ್ಯಾಣ ಸಚಿವೆ ಸೇರಿಂತೆ ಮೂವರ ಭಾವಚಿತ್ರವಿರುವ ‘ಗೃಹಲಕ್ಷ್ಮೀ’ಅರ್ಜಿ ನಮೂನೆ ಬಿಡುಗಡೆ ಮಾಡಲಾಗಿದೆ. ಆಧಾರ್ ಗೆ ಲಿಂಕ್ ಹೊಂದಿರುವ ಫೋನ್ ನಂಬರ್ ಕಡ್ಡಾಯವಾಗಿ ನಮೂದು ಮಾಡಬೇಕಿದೆ. ಅರ್ಜಿಯಲ್ಲಿ ಪತಿಯ ಆಧಾರ್ ಕಾರ್ಡ್, ವೋಟರ್ ಐಡಿ ಕೇಳಲಾಗಿದೆ. ಜೂನ್‌ 15 ರಿಂದ ಜುಲೈ 15 ರತನಕ ಅರ್ಜಿ ಸಲ್ಲಿಸಲು ಅವಕಾಶವಿದೆ. ಅಲ್ಲದೇ ಫಲಾನುಭವಿಯು ತಾನು ಮತ್ತು ತನ್ನ ಪತಿ ಜಿಎಸ್‌ಟಿ ಪಾವತಿದಾರರು ಅಲ್ಲ ಎಂದು ಘೋಷಣೆ ಮಾಡಬೇಕಿದೆ. ಕುಟುಂಬದಲ್ಲಿ ಒಬ್ಬರಿಗಿಂತ ಹೆಚ್ಚು ಮಹಿಳೆಯರಿದ್ದರೆ ಅರ್ಜಿದಾರರೇ ಯಜಮಾನಿ ಯಾರು ಎಂದು ಘೋಷಣೆ ಮಾಡಿ ಅರ್ಜಿ ಸಲ್ಲಿಸಬೇಕು.

ಗೃಹಲಕ್ಷ್ಮೀ ಯೋಜನೆಗೆ ಪ್ರಮುಖ ಷರತ್ತುಗಳೇನು?

1. ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯು ವಿತರಿಸುವ ಅಂತ್ಯೋದಯ, ಬಿಪಿಎಲ್ ಮತ್ತು ಎಪಿಎಲ್ ಪಡಿತರ ಚೀಟಿಗಳಲ್ಲಿ ಕುಟುಂಬದ ಯಜಮಾನಿ ಎಂದು ನಮೂದಿಸಿರುವ ಮಹಿಳೆಯು ಈ ಯೋಜನೆಯ ಅರ್ಹ ಫಲಾನುಭವಿಯಾಗಿರುತ್ತಾರೆ.
2. ಒಂದೇ ಕುಟುಂಬದಲ್ಲಿ ಒಂದಕ್ಕಿಂತ ಹೆಚ್ಚು ಮಹಿಳೆಯರಿದ್ದಲ್ಲಿ ಒಬ್ಬ ಮಹಿಳೆಗೆ ಮಾತ್ರ ಯೋಜನೆ ಅನ್ವಯಿಸಲಿದೆ.
3. ಈ ಯೋಜನೆಯ ಸೌಲಭ್ಯ ಪಡೆಯಲು ಫಲಾನುಭವಿಯ ಬ್ಯಾಂಕ್‌ ಖಾತೆ ಮತ್ತು ಆಧಾರ ಕಾರ್ಡ್‌ ಗಳನ್ನು ಜೋಡಣೆ ಮಾಡಬೇಕು.
4. ಕುಟುಂಬದ ಯಜಮಾನಿ ಅಥವಾ ಯಜಮಾನಿಯ ಪತಿ ಆದಾಯ ಪಾವತಿದಾರರಾಗಿದ್ದಲ್ಲಿ ಸೌಲಭ್ಯ ಸಿಗುವುದಿಲ್ಲ.
5. ಕುಟುಂಬದ ಯಜಮಾನಿ ಅಥವಾ ಯಜಮಾನಿಯ ಪತಿಯು ಜಿಎಸ್‌ಟಿ ರಿಟರ್ನ್ ಸಲ್ಲಿಸುವವರಾಗಿದ್ದಲ್ಲಿ ಈ ಯೋಜನೆಗೆ ಅರ್ಹರಾಗಿರುವುದಿಲ್ಲ.

ಯಾವೆಲ್ಲ ದಾಖಲೆಗಳು ಬೇಕು ?

* ಅರ್ಜಿಯಲ್ಲಿ ಮನೆಯ ಯಜಮಾನಿ ಹಾಗೂ ಪತಿಯ ದಾಖಲೆಗಳನ್ನು ಕೇಳಲಾಗಿದೆ. ಪತಿಯ ಆಧಾರ್ ಕಾರ್ಡ್ ವೋಟರ್ ಐಡಿ ದಾಖಲೆ ಕೂಡ ಅರ್ಜಿ ಸಲ್ಲಿಕೆ ವೇಳೆ ಅಗತ್ಯವಾಗಿದೆ.
* ಅರ್ಜಿಯಲ್ಲಿ ಮೊದಲಿಗೆ ಹೆಸರು, ಆಧಾರ್ ಕಾರ್ಡ್, ವೋಟರ್ ಐಡಿ, ಪಡಿತರ ಚೀಟಿ, ಉದ್ಯೋಗ, ಪತಿಯ ಹೆಸರು, ಪತಿಯ ಆಧಾರ್ ಹಾಗೂ ವೋಟರ್ ಐಡಿ ಮುಂತಾದ ಮಾಹಿತಿಯನ್ನು ಕೇಳಲಾಗಿದೆ.
* ಅದರೊಂದಿಗೆ ಜಾತಿ ಪ್ರಮಾಣಪತ್ರ, ಆಧಾರ್ ಜತೆ ಲಿಂಕ್ ಆಗಿರುವ ಮೊಬೈಲ್ ನಂ. ಬ್ಯಾಂಕ್ ಖಾತೆ ಮಾಹಿತಿಯನ್ನು ನಮೂದಿಸಲು ಜಾಗ ನೀಡಲಾಗಿದೆ.

* ಈ ಅರ್ಜಿಯನ್ನು ಭರ್ತಿ ಮಾಡುವ ಜತೆಗೆ, ಮನೆಯ ಯಜಮಾನಿ ಹಾಗೂ ಆಕೆಯ ಪತಿಯ ಆಧಾರ್ ಕಾರ್ಡ್ ಪ್ರತಿ ಹಾಗೂ ವೋಟರ್ ಐಡಿ ಜೆರಾಕ್ಸ್‌ ಪ್ರತಿಯನ್ನು ಲಗತ್ತಿಸಬೇಕು. * ಅದರೊಂದಿಗೆ ಬ್ಯಾಂಕ್ ಪಾಸ್ ಪುಸ್ತಕದ ಜೆರಾಕ್ಸ್‌ ಪ್ರತಿಯನ್ನೂ ಲಗತ್ತಿಸಬೇಕು.
ಫಲಾನುಭವಿಯ ಹೆಸರನ್ನು ಬಿಪಿಎಲ್ ಅಥವಾ ಎಪಿಎಲ್ ಅಥವಾ ಅಂತ್ಯೋದಯ ಕಾರ್ಡ್‌ಗಳಲ್ಲಿ ಕುಟುಂಬದ ಮುಖ್ಯಸ್ಥ ಎಂದು ನಮೂದಿಸರಬೇಕು. ಈ ಬಿಪಿಎಲ್‌ / ಎಪಿಎಲ್‌/ ಅತ್ಯೋದಯ ಕಾರ್ಡ್‌ಗಳಿಲ್ಲದ ಜನರು ಈ ಯೋಜನೆಗೆ ಅರ್ಹರಲ್ಲ ಎಂದು ತಿಳಿಸಿದೆ.

ಈ ಲಿಂಕ್‌ ಕ್ಲಿಕ್‌ ಮಾಡಿ

https://drive.google.com/file/d/1-14JW0nJ2hfXT-TAHsIykVdha9D9_eZC/view

ಅರ್ಜಿ ಸಲ್ಲಿಕೆ ಹೇಗೆ?

ಈ ಯೋಜನೆಯ ಫಲಾನುಭವಿಗಳು ಜೂನ್ 15 ರಿಂದ ಜುಲೈ 15 ರವರೆಗೆ ಅರ್ಜಿ ಸಲ್ಲಿಸಬಹುದು. ಜುಲೈ 15 ರಿಂದ ಫಲಾನುಭವಿಗಳ ಆಯ್ಕೆ ಮಾಡಲಾಗುತ್ತದೆ. ಆಯ್ಕೆಗೊಂಡ ಫಲಾನುಭವಿಗಳಿಗೆ ಆಗಸ್ಟ್ 15 ರಂದು ಅವರ ಬ್ಯಾಂಕ್‌ ಖಾತೆಗೆ ಹಣ ವರ್ಗಾವಣೆ ಮಾಡಲಾಗುತ್ತದೆ. ಅರ್ಜಿದಾರರು ಸೇವಾ ಸಿಂಧು ಪೋರ್ಟಲ್‌ ಮೂಲಕ ಅಥವಾ ಭೌತಿಕವಾಗಿಯಾಗಲಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

ಒಂದು ವೇಳೆ ಅರ್ಜಿದಾರರು ತಪ್ಪು ಮಾಹಿತಿ ನೀಡಿದ್ದೇ ಆದರೆ, ಸರ್ಕಾರ ನೀಡಿದ್ದ ಹಣವನ್ನು ವಾಪಸ್ ನೀಡಬೇಕಾಗುತ್ತದೆ. ಈ ಯೋಜನೆಗೆ ಅರ್ಜಿ ಸಲ್ಲಿಸುವವರು ಬ್ಯಾಂಕ್ ಖಾತೆಗಳನ್ನು ತಮ್ಮ ಆಧಾರ್‌ಗೆ ಲಿಂಕ್ ಮಾಡಿರಬೇಕು.

ಈ ಲಿಂಕ್‌ ಕ್ಲಿಕ್‌ ಮಾಡಿ

https://drive.google.com/file/d/1-14JW0nJ2hfXT-TAHsIykVdha9D9_eZC/view

About the author / 

KOLAR NEWS CHANDRU

KOLAR NEWS CHANDRU editor : kolar news paper/ www.nammakolar.com presschandrukolar@gmail.com mobile-9448715409 kolar.karnataka.563101

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ಮಕರ ಸಂಕ್ರಾಂತಿ ಹಬ್ಬಕ್ಕೆ ಸರಿಯಾದ ಕ್ರಮದಲ್ಲಿ ಎಳ್ಳು ಬೆಲ್ಲ ಮಾಡುವ ವಿಧಾನ.

    ಎಳ್ಳು ಬೆಲ್ಲ ತಿಂದು, ಒಳ್ಳೆಯ ಮಾತನಾಡಿ’ ಎಂಬ ಗಾದೆ ಇದೆ. ಅದರಂತೆಯೇ ಸಂಕ್ರಾಂತಿ ಹಬ್ಬದಂದು ಎಲ್ಲರೂ ಎಳ್ಳು ಬೆಲ್ಲ ತಿಂದು ಹೊಸ ವರ್ಷದ ಮೊದಲ ಹಬ್ಬವನ್ನು ಸಿಹಿಯಾಗಿ ಬರಮಾಡಿಕೊಳ್ಳುತ್ತಾರೆ. ಆದ್ದರಿಂದ ಹಬ್ಬಕ್ಕಾಗಿ ಅಂಗಡಿಯಿಂದ ತಂದು ಮಾಡುವ ಬದಲು ಮನೆಯಲ್ಲಿಯೇ ಸುಲಭವಾಗಿ ತಯಾರು ಮಾಡಿ. ನಿಮಗಾಗಿ ಎಳ್ಳು-ಬೆಲ್ಲ ತಯಾರು ಮಾಡುವ ವಿಧಾನ ಇಲ್ಲಿದೆ. ಮಾಡುವ ವಿಧಾನಕಡ್ಲೆಕಾಯಿ ಬೀಜವನ್ನು ಚೆನ್ನಾಗಿ ಹುರಿದು ಸಿಪ್ಪೆ ತೆಗೆದು ಬಿಡಿ ಬಿಡಿ ಮಾಡಿಕೊಳ್ಳಿ.ಎಳ್ಳನ್ನು ಸ್ವಲ್ಪ ಹುರಿದುಕೊಳ್ಳಿ.ಅಚ್ಚು ಬೆಲ್ಲವನ್ನು ಚಾಕುವಿನಿಂದ ಸಣ್ಣ ಸಣ್ಣದಾಗಿ ಕಟ್ ಮಾಡಿ.ಕೊಬ್ಬರಿ ಕಪ್ಪು ಭಾಗವನ್ನು…

  • ಸೌಂದರ್ಯ

    ಮನೆಯ ಡಬ್ಬಿಯಲ್ಲಿರುವ ಇದು ಈ 5 ಆರೋಗ್ಯ ಮತ್ತು ಸೌಂದರ್ಯ ತರುವ ಗುಣಗಳನ್ನು ಹೊಂದಿದೆ!!!

    ಅರಿಶಿನವು ಭಾರತೀಯ ಅಡುಗೆಮನೆಯಲ್ಲಿ ಬಳಸಲಾಗುವ ಪ್ರಸಿದ್ಧ ಮಸಾಲೆಯಾಗಿದೆ. ಆಹಾರಕ್ಕಾಗಿ ಸುವಾಸನೆಯನ್ನು ಮತ್ತು ರುಚಿಯನ್ನು ಸೇರಿಸುವುದರ ಜೊತೆಗೆ, ನಿಮಗೆ ಗೊತ್ತಿಲ್ಲದ ಅರಿಶಿನದ ಇನ್ನೂ 5 ಉಪಯೋಗಗಳಿವೆ.

  • ಸುದ್ದಿ

    ಮೀನಿಗೆ ಬಲೇ ಬಿಸಿದಾಗ ಈತನಿಗೆ ಸಿಕ್ಕಿದ್ದು ಎಷ್ಟು ಕೋಟಿ ರೂಪಾಯಿ ಗೊತ್ತಾ.

    ಸ್ನೇಹಿತರೆ ಅದೃಷ್ಟ ಅನ್ನುವುದು ಯಾವಾಗ ಬರುತ್ತದೆ ಮತ್ತು ಯಾವಾಗ ಹೋಗುತ್ತದೆ ಅನ್ನುವುದನ್ನ ಊಹೆ ಮಾಡಲು ಸಾಧ್ಯವಿಲ್ಲ ಮತ್ತು ಕೆಲವೊಮ್ಮೆ ಅದೃಷ್ಟ ನಮ್ಮ ಸುತ್ತಮುತ್ತ ಇದ್ದರೂ ಕೂಡ ನಮಗೆ ತಿಳಿಯುವುದಿಲ್ಲ. ನಾವು ಹೇಳುವ ಈತನ ವಿಷಯದಲ್ಲಿ ನಡೆದಿದ್ದು ಮಾತ್ರ ಒಂದು ದೊಡ್ಡ ವಿಚಿತ್ರ ಎಂದು ಹೇಳಿದರೆ ತಪ್ಪಾಗಲ್ಲ, ಅದೃಷ್ಟ ಈತನ ಕೈ ಹಿಡಿದರೂ ಕೂಡ ಅದರ ಬಗ್ಗೆ ಅವನಿಗೆ ತಿಳಿಯದೆ ಪ್ರತಿದಿನ ಎಂದಿನಂತೆ ಕಷ್ಟಪಡುತ್ತಿದ್ದ. ಹಾಗಾದರೆ ಅಲ್ಲಿ ನಡೆದಿದ್ದು ಏನು ಮತ್ತು ಆ ಅದೃಷ್ಟ ಆತನಿಗೆ ಯಾವ ರೂಪದಲ್ಲಿ…

  • ಸಿನಿಮಾ

    ಪಾಕ್ ಧ್ವಜ ಹಿಡಿದು ಸುದ್ದಿಯಾದ ಬಾಲಿವುಡ್ ನಟಿ…

    ಬಾಲಿವುಡ್ ನ ಡ್ರಾಮಾ ಕ್ವೀನ್ ರಾಖಿ ಸಾವಂತ್ ಮತ್ತೊಮ್ಮೆ ಸುದ್ದಿಗೆ ಬಂದಿದ್ದಾಳೆ. ರಾಖಿ ಸಾವಂತ್ ಫೋಟೋ ಒಂದು ವೈರಲ್ ಆಗಿದೆ. ಅದ್ರಲ್ಲಿ ರಾಖಿ ಸಾವಂತ್, ಪಾಕಿಸ್ತಾನದ ಧ್ವಜ ಹಿಡಿದು ನಿಂತಿದ್ದಾಳೆ. ಸುಂದರ ಸ್ಥಳದಲ್ಲಿ ಪಾಕಿಸ್ತಾನದ ಧ್ವಜ ಹಿಡಿದು ನಿಂತು ಫೋಟೋಕ್ಕೆ ಫೋಸ್ ನೀಡಿದ್ದಾಳೆ. ರಾಖಿ ಸಾವಂತ್ ಫೋಟೋ ನೋಡ್ತಿದ್ದಂತೆ ಕೋಪಗೊಂಡ ಅಭಿಮಾನಿಗಳು ಶೀರ್ಷಿಕೆ ನೋಡಿದ ಮೇಲೆ ತಣ್ಣಗಾಗಿದ್ದಾರೆ. ನನಗೆ ನನ್ನ ದೇಶ ಭಾರತ ತುಂಬಾ ಇಷ್ಟ. ಆದ್ರೆ ಇದು ಬರ್ತಿರುವ ನನ್ನ ಮುಂದಿನ ಚಿತ್ರದ ಒಂದು ದೃಶ್ಯವೆಂದು…

  • ಜ್ಯೋತಿಷ್ಯ

    ಮಹಾಕಾಳೇಶ್ವರನ ಕೃಪೆಯಿಂದ ಈ ರಾಶಿಗಳಿಗೆ ಶುಭಯೋಗವಿದ್ದು ನಿಮ್ಮ ರಾಶಿಯೂ ಇದೆಯಾ ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(11 ಮಾರ್ಚ್, 2019) ಇದು ಜೀವನದ ಸಮಸ್ಯೆಗಳನ್ನು ಪರಿಹರಿಸುವಲ್ಲಿ ಸಹಾಯ ಮಾಡುತ್ತದೆ ಮತ್ತು ಅಗತ್ಯವಿರುವ ಬೆಳಕನ್ನು ನೀಡುತ್ತದೆ….

  • ಕ್ರೀಡೆ

    RCB ಅಭಿಮಾನಿಗಳಿಗೆ ಶಾಕಿಂಗ್ ಸುದ್ದಿ..!

    ಈ ಬಾರಿಯ ಐಪಿಎಲ್ ಟೂರ್ನಿಯ ಆರಂಭಕ್ಕೆ ಅಭಿಮಾನಿಗಳು ಕಾದು ಕುಳಿತಿದ್ದು ಆದರೆ ಮೊದಲ ಪಂದ್ಯದಲ್ಲಿ ಚೆನ್ನೈ ತಂಡವನ್ನು ಎದುರಿಸುತ್ತಿರುವ ಆರ್‍ಸಿಬಿಗೆ ಶಾಕಿಂಗ್ ಸುದ್ದಿ ಲಭಿಸಿದೆ. 360 ಡಿಗ್ರಿ ಶಾಟ್ ಖ್ಯಾತಿಯ ಎಬಿ ಡಿವಿಲಿಯರ್ಸ್ ಪಾಕಿಸ್ತಾನದ ಸೂಪರ್ ಲೀಗ್‍ನಲ್ಲಿ ಕಳೆದ 2 ದಿನಗಳ ಹಿಂದೆ ಬೆನ್ನು ನೋವಿನ ಸಮಸ್ಯೆಗೆ ಒಳಗಾಗಿದ್ದು, ಸದ್ಯ ಟೂರ್ನಿಯಿಂದ ಹೊರ ನಡೆದಿದ್ದಾರೆ. ಇದರ ಬೆನ್ನಲ್ಲೇ ಎಬಿಡಿ ಐಪಿಎಲ್ ವೇಳೆಗೆ ಫಿಟ್ ಆಗುತ್ತಾರ ಎಂಬ ಅನುಮಾನಗಳು ಅಭಿಮಾನಿಗಳನ್ನು ಕಾಡುತ್ತಿದೆ. ಐಪಿಎಲ್ ಆರಂಭಕ್ಕೆ ಇನ್ನು 3 ವಾರಗಳಷ್ಟೇ…