ಆರೋಗ್ಯ

10 ಸಾವಿರ ಮಂದಿಯಿಂದ ಗಿನ್ನೀಸ್ ದಾಖಲೆಯ ಬೃಹತ್ ಯೋಗ ಪ್ರದರ್ಶನ

80

ಜಿಲ್ಲಾಡಳಿತ, ಜಿಪಂ,ಯುವ ಸಬಲೀಕರಣ ಮತ್ತು ಕ್ರೀಡಾಇಲಾಖೆ,ವಿವಿಧ ಯೋಗ ಸಂಸ್ಥೆಗಳ ಸಹಯೋಗದಲ್ಲಿ ನಗರದ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ನಡೆದ ಗಿನ್ನೀಸ್ ದಾಖಲೆಯ ಯೋಗಾಥಾನ್ ಅಂಗವಾಗಿ ನಡೆದ 10 ಸಾವಿರಕ್ಕೂ ಹೆಚ್ಚು ಮಂದಿಯೋಗ ಪ್ರದರ್ಶನದಲ್ಲಿ ಪಾಲ್ಗೊಂಡಿದರು. ನಡುಗುವ ಚಳಿಯಲ್ಲೂ ಸಹಸ್ರ ಸಹಸ್ರ ಸಂಖ್ಯೆಯಲ್ಲಿ ಯುವಜನರು ಜಿಲ್ಲಾ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಸೇರಿದರು. ವಿವಿಧ ಶಾಲೆ,ಕಾಲೇಜುಗಳಿಂದ ಆಗಮಿಸಿದ್ದ 10 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಯೋಗ ಪ್ರದರ್ಶನದಲ್ಲಿ ಗಮನ ಸೆಳೆದರು.ನಗರ ಮಾತ್ರವಲ್ಲದೇ ತಾಲ್ಲೂಕಿನ ವಿವಿಧ ಶಾಲೆಗಳ ಮಕ್ಕಳು ಪಾಲ್ಗೊಂಡಿದ್ದರು.

ಯೋಗ ಪ್ರದರ್ಶನಕ್ಕೆ 1100 ಮಕ್ಕಳನ್ನು ಕರೆತಂದಿದ್ದ ಚಿನ್ಮಯ ಶಾಲೆ, 450ಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ಕರೆತಂದಿದ್ದ ನಗರದ ಬಾಲಕಿಯರ ಪಿಯು ಕಾಲೇಜಿಗೆ ಕಾಲೇಜು ಹಂತದಲ್ಲಿ ಪ್ರಥಮ ಸ್ಥಾನ, ಗ್ರಾಮೀಣ ಶಾಲೆಗಳಲ್ಲಿ ಅತಿ ಹೆಚ್ಚು ಮಕ್ಕಳನ್ನು ಕರೆತಂದಿದ್ದ ಬೆಗ್ಲಿ ಪ್ರೌಢಶಾಲೆಗೆ ಪ್ರಥಮ ಸ್ಥಾನದ ಗೌರವ ಲಭಿಸಿದ್ದು, ಸಂಸದರು ಪ್ರಮಾಣಪತ್ರ ವಿತರಿಸಿದರು.

ಯೋಗ ಶಿಕ್ಷಕರಾದ ಮಾರ್ಕಂಡೇಶ್ವರ್. ಚಂದ್ರಣ್ಣ, ಮಂಜುಳಕ್ಕ ಹಾಗೂ ವೆಂಕಟ, ಸೋಮಣ್ಣ ಯೋಗ ಪ್ರದರ್ಶನದಲ್ಲಿ ಮಕ್ಕಳಿಗೆ ತರಬೇತಿ ನೀಡಿದರು.

ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಎಂ.ನಾರಾಯಣ, ಯುವಕರ ಶೈಕ್ಷಣಿಕ, ಭೌತಿಕ ಅಭಿವೃದ್ದಿಗೂ ಯೋಗ ಸಹಕಾರಿಯಾಗಿದ್ದು, ಎಲ್ಲರೂ ಯೋಗ ಮುಂದುವರೆಸಿ, ನಿರಂತರ ಯೋಗದಿಂದ ಉತ್ತಮ ಆರೋಗ್ಯ ಪಡೆಯಿರಿ ಎಂದರು.

ಯೋಗದ ಮೂಲಕ ವಿಶ್ವಗುರುವಾಗಿರುವ ಭಾರತದಲ್ಲಿ ಯುವಕರು ದುಶ್ಚಟಗಳಿಗೆ ಬಲಿಯಾಗುವುದಿಲ್ಲ, ಮೊಬೈಲ್‌ಗೆ ದಾಸರಾಗುವುದಿಲ್ಲ ಎಂದು ಸಂಕಲ್ಪ ಮಾಡಿ ಎಂದು ಸಂಸದ ಎಸ್.ಮುನಿಸ್ವಾಮಿ ಕರೆ ನೀಡಿದರು.

ಜಿಲ್ಲಾಧಿಕಾರಿ ವೆಂಕಟ್‌ರಾಜಾ, ಯೋಗ ಪ್ರದರ್ಶನದ ಮೂಲಕ ಗಿನ್ನೀಸ್ ದಾಖಲೆ ಬರೆಯುವ ಐತಿಹಾಸಿಕ ಕ್ಷಣಕ್ಕೆ ಕೋಲಾರವೂ ಸಾಕ್ಷಿಯಾಗಿದೆ, ಈ ವರ್ಷ ಯುವಜನೋತ್ಸವದ ಅಂಗವಾಗಿ ನಡೆಸಿರುವ ಈ ಪ್ರದರ್ಶನ ಭಾರತದ ಯುವಶಕ್ತಿಯ ಕೊಡುಗೆಯಾಗಿದೆ, ಶಾಲಾ ಸಾಕ್ಷರತಾ ಇಲಾಖೆ, ಪದವಿ ಪೂರ್ವ ಶಿಕ್ಷಣ ಇಲಾಖೆ, ಕ್ರೀಡಾ,ಯುವ ಸಬಲೀಕರಣ ಇಲಾಖೆ ಎಲ್ಲರ ಪ್ರಯತ್ನ ಯಶಸ್ವಿಯಾಗಿದೆ, ಸಂಕ್ರಾಂತಿಯನ್ನು ಸಂಭ್ರಮದಿAದ ಆಚರಿಸೋಣ ಎಂದು ಎಲ್ಲರಿಗೂ ಶುಭಾಷಯ ತಿಳಿಸಿದರು.

ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಅಮರೇಶ್,ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪನಿರ್ದೇಶಕ ಕೃಷ್ಣಮೂರ್ತಿ, ಪಿಯು ಡಿಸಿ ರಾಮಚಂದ್ರಪ್ಪ, ಶಿಕ್ಷಣಾಧಿಕಾರಿ ಸಿ.ಆರ್.ಅಶೋಕ್, ಬಿಇಒ ಕನ್ನಯ್ಯ, ಯುವ ಸಬಲೀಕರಣ ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕಿ ಶಶಿಕಲಾ, ಪತ್ರಕರ್ತರ ಸಂಘದ ರಾಜ್ಯಕಾರ್ಯಕಾರಿ ಸದಸ್ಯ ವಿ.ಮುನಿರಾಜು ಮತ್ತಿತರರು ಉಪಸ್ಥಿತರಿದ್ದರು.

 

About the author / 

KOLAR NEWS CHANDRU

KOLAR NEWS CHANDRU editor : kolar news paper/ www.nammakolar.com presschandrukolar@gmail.com mobile-9448715409 kolar.karnataka.563101

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ಕೇಂದ್ರ ಸರ್ಕಾರದಿಂದ ದಿಟ್ಟ ನಿರ್ಧಾರ, ವೋಟರ್ ಕಾರ್ಡ್ ಇದ್ದವರಿಗೂ ಇಲ್ಲದವರಿಗೂ ಸಿಹಿಸುದ್ದಿ.

    ಸ್ನೇಹಿತರೆ ನಿಮಗೆಲ್ಲ ತಿಳಿರುವ ಹಾಗೆ ಪ್ರಸ್ತುತ ದಿನಗಳಲ್ಲಿ ನಮ್ಮ ಪ್ರಪಂಚ ತಂತ್ರಜ್ಞಾನದಿಂದ ಎಷ್ಟೋ ಮುಂದಕ್ಕೆ ಸಾಗುತ್ತಿದೆ. ಇನ್ನು ಇದಕ್ಕೆ ತಂಜ್ರಜ್ಞಾನಕ್ಕೆ ಅನುಗುಣವಾಗಿ ನಮ್ಮ ಕೇಂದ್ರ ಸರ್ಕಾರ ಅದೆಷ್ಟೋ ಬದಲಾವಣೆಗಳನ್ನ ಜಾರಿಗೆ ತರುತ್ತಲೇ ಇದೆ, ಇನ್ನು ಈಗ ವೋಟರ್ ಕಾರ್ಡ್ ಗಳಲ್ಲಿ ಭಾರಿ ಪ್ರಮಾಣದ ಬದಲಾವಣೆಯನ್ನ ಜಾರಿಗೆ ತರಲು ಕೇಂದ್ರ ಸರ್ಕಾರ ನಿರ್ಧಾರ ಮಾಡಿದ್ದು ಇದರಿಂದ ಜನರಿಗೆ ತುಂಬಾ ಸಂತಸವಾಗಿದೆ, ಹಾಗಾದರೆ ವೋಟರ್ ಕಾರ್ಡ್ ನಲ್ಲಿ ಆಗುತ್ತಿರುವ ಬದಲಾವಣೆಗಳು ಏನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ…

  • ಜ್ಯೋತಿಷ್ಯ

    ಮಂಗಳವಾರದ ನಿಮ್ಮ ದಿನ ಭವಿಷ್ಯ ಮಂಗಳವೋ ಅಮಂಗಳವೋ ನೋಡಿ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 ಮೇಷ(20 ನವೆಂಬರ್, 2018) ಹಣಕಾಸಿನಲ್ಲಿ ಸುಧಾರಣೆ ನೀವು ಪ್ರಮುಖ ಖರೀದಿಗಳನ್ನುಮಾಡುವುದನ್ನು ಅನುಕೂಲಕರವಾಗಿಸುತ್ತದೆ. ಮನೆಯಲ್ಲಿನ ಕೆಲವು ಬದಲಾವಣೆಗಳು ನಿಮ್ಮನ್ನು ಭಾವುಕರನ್ನಾಗಿಸಬಹುದು- ಆದರೆ ನಿಮಗೆ ಮುಖ್ಯವಾದವರಿಗೆನೀವು…

  • ಸಿನಿಮಾ

    ಹುಟ್ಟಿದ ಊರಿನಲ್ಲಿ 80ಎಕರೆ ತೋಟ ಖರಿದಿಸಿದ ರಾಕಿಂಗ್ ಸ್ಟಾರ್…ಕಾರಣ ಕೇಳಿದ್ರೆ ಸಲಾಂ ರಾಕಿ ಭಾಯ್ ಅಂತೀರಾ…

    ನಟ ರಾಕಿಂಗ್ ಸ್ಟಾರ್ ಯಶ್ ಹಾಸನದಲ್ಲಿ ಮನೆ ಹಾಗೂ 80 ಎಕರೆ ತೋಟ ಖರೀದಿಸಿದ್ದಾರೆ. ಹಾಸನ ದೊಡ್ಡಕೊಂಡಗೋಳ ಯಶ್ ತಾಯಿ ಪುಷ್ಪಾ ಅವರ ತವರಾಗಿದೆ.ಯಶ್ ಜನಿಸಿದ್ದು ಹಾಸನ ಜಿಲ್ಲಾಸ್ಪತ್ರೆಯಲ್ಲಿ. ಈ ನಂಟಿನಿಂದ ಹುಟ್ಟೂರು ಹಾಸನದಲ್ಲಿ ಮನೆ ಹಾಗೂ ತೋಟವನ್ನು ಅವರು ಖರೀದಿಸಿದ್ದಾರೆ. ರಾಕಿಂಗ್ ಸ್ಟಾರ್ ಯಶ್ ಅವರು ಈಗಾಗಲೇ ತನ್ನುರಿನ ಕೆರೆಯನ್ನು ಕೋಟಿಗಳ ವೆಚ್ಛದಲ್ಲಿ ಹೂಳು ತೆಗೆಸಿ ಸುತ್ತಮುತ್ತಲಿನ ಹತ್ತಾರು ಗ್ರಾಮಗಳಿಗೆ ಕುಡಿಯುವ ನೀರಿನ ತೊಂದರೆಯನ್ನು ಹೋಗಲಾಡಿಸಿದ್ದರು. ಈಗ ಅದರ ಜೊತೆಗೆ ತನ್ನ ಹುಟ್ಟೂರಿನಲ್ಲಿ ಜಮೀನು ಮತ್ತು…

  • ವಿಸ್ಮಯ ಜಗತ್ತು

    ಈ ಹುಡುಗಿರು ಊರಿನ ಯಾರ ಜೊತೆಗೆ ಬೇಕಿದ್ರೂ ಸಂಭಂದ ಇಟ್ಕೊಬಹುದು.!ಇದನ್ನು ಮನೆಯವರಾಗಲೀ,ಗಂಡನಾಗಲೀ ಪ್ರಶ್ನಿಸುವಂತಿಲ್ಲ.!ಪ್ರಶ್ನಿಸಿದ್ರೆ ಅಕ್ಕಪಕ್ಕದ ಹೆಂಗಸರೆಲ್ಲಾ ಸೇರಿಕೊಂಡು ಮಕ್ ಮಕ್ಕೆ ಕುಟ್ಟಿಬಿಡುತ್ತಾರೆ…

    ಅದೊಂದು ಊರು ಇದೆ ಅಲ್ಲಿ ಹೆಂಗಸರದ್ದೇ ಕಾರುಬಾರು ! ಅಲ್ಲಿನ ಮನೆಯ ಪ್ರತಿಯೊಂದು ನಿರ್ಣಯಗಳೂ ಕೂಡ ಮಹಿಳಾ ನಿರ್ಧರಿತವಾಗಿರುತ್ತವೆ. ಅದೂ ಸಾಲದೆಂಬಂತೆ ನಮ್ಮ ಕಡೆ ಹುಟ್ಟಿದ ಮಕ್ಕಳ ಹೆಸರಿನ ಜೊತೆಗೆ ತಂದೆಯ ಹೆಸರು ಸೇರಿಸುವುದು ಸಂಪ್ರದಾಯಿಕವಾಗಿದೆ. ಆದರೆ ಆ ಊರಿನಲ್ಲಿ ಮಕ್ಕಳ ಹೆಸರಿನ ಜೊತೆ ತಾಯಿಯ ಹೆಸರನ್ನು ಸೇರಿಸುತ್ತಾರೆ ಎಂಬುದು ಆಶ್ಚರ್ಯಕರ ವಿಚಾರ . ಅದಲ್ಲದೆ ಈ ಊರಿನ ವಿಚಾರವು ಬಿ.ಬಿ.ಸಿ ಯಂತಹಾ ಅಂತರಾಷ್ಟ್ರೀಯ ಚಾನಲ್ ಗಳಲ್ಲೂ ಕೂಡ ಬಹಳ ಸಲ ಹೊಗಳಲ್ಪಟ್ಟಿದೆ !ಅಂದರೆ “ಈ ಊರಿನಾಗೆ…

  • ಜ್ಯೋತಿಷ್ಯ

    ವಿಘ್ನ ವಿನಾಯಕನನನ್ನು ಸ್ಮರಿಸಿ ಈ ದಿನದ ನಿಮ್ಮ ರಾಶಿಯ ಶುಭ ಫಲಗಳನ್ನು ತಿಳಿಯಿರಿ.

    ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ (ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು )9901077772 call/ what ಮೇಷ ನೀವು ಇಂದು ನಿಮಗಾಗಿ ಸಾಕಷ್ಟು ಸಮಯ ಹೊಂದಿರುವುದರಿಂದ ನಿಮ್ಮ ಒಳ್ಳೆಯ ಆರೋಗ್ಯದ ಸಲುವಾಗಿ ಒಂದು ಧೀರ್ಘ ನಡಿಗೆಗೆ ಹೋಗಿ. ಹೆಚ್ಚುವರಿ ಹಣವನ್ನು ರಿಯಲ್ ಎಸ್ಟೇಟ್‌ನಲ್ಲಿ ಹೂಡಿಕೆ ಮಾಡಬೇಕು. ಇಂದು ನೀವು ಇತರರ ಅಗತ್ಯಗಳಿಗೆ ಗಮನ ನೀಡಬೇಕಾದರೂ ಮಕ್ಕಳೊಂದಿಗೆ ಅತೀ ಉದಾರತೆ ತೋರಿಸುವುದು…

  • ಸುದ್ದಿ

    ನೀವು ʼಟೀʼ ಪ್ರಿಯರೆ …? ಹಾಗಾದ್ರೆ ತಪ್ಪದೇ ಈ ಸುದ್ದಿ ಓದಿ…

    ನೀವು ಟೀ ಕುಡಿಯುತ್ತೀರಾ…? ಹಾಗಿದ್ದರೆ ನಿಮ್ಮ ಬುದ್ಧಿಮತ್ತೆ ಭಾರಿ ಚುರುಕಾಗಿರುತ್ತೆ. ನಾವು ಇದನ್ನು ಹೇಳುತ್ತಿಲ್ಲ. ಅಧ್ಯಯನ ಒಂದು ಹೇಳುತ್ತಿದೆ. ಚಹಾ ಕುಡಿಯುವವರು ಮತ್ತು ಕುಡಿಯದವರನ್ನು ಅಧ್ಯಯನಕ್ಕೆ ಒಳಪಡಿಸಿದಾಗ, ಚಹಾ ಕುಡಿಯುವವರ ಮೆದುಳಿನ ಬೆಳವಣಿಗೆ ಚೆನ್ನಾಗಿರುವುದಲ್ಲದೆ, ಅವರ ಬುದ್ಧಿ ಮತ್ತೆ ಸಹ ಚುರುಕಾಗಿರುತ್ತದೆ ಎನ್ನುವ ಅಂಶ ತಿಳಿದು ಬಂದಿದೆ. ‘ನಮ್ಮ ಸಂಶೋಧನೆಯಲ್ಲಿ ತಿಳಿದು ಬಂದ ಮೊದಲ ಸಕಾರಾತ್ಮಕ ಅಂಶವೆಂದರೆ ನಿತ್ಯವೂ ಚಹಾ ಸೇವಿಸುವವರ ಮೆದುಳು ಚುರುಕಾಗಿರುವುದಲ್ಲದೆ, ವಯಸ್ಸಾದ ಬಳಿಕ ಕುಂಠಿತವಾಗುವ ಸಾಮರ್ಥ್ಯವನ್ನು ರಕ್ಷಣೆ ಮಾಡುವಲ್ಲಿ ಸಹಕರಿಸುತ್ತದೆ’ ಎಂದು ಸಿಂಗಾಪುರದ…