ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಾಜಿ ಸಚಿವ ಹಾಗೂ ಹೊಸದುರ್ಗ ಹಾಲಿ ಬಿಜೆಪಿ ಶಾಸಕ ಗೂಳಿಹಟ್ಟಿ ಶೇಖರ್ ಅವರು ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಭಾನುವಾರ ನಡೆದಿದೆ. ಮರಳು ಸಾಗಿಸಲು ಪರ್ಮಿಟ್ ಪಡೆದರು ಪೊಲೀಸರು ಅನಗತ್ಯವಾಗಿ ತಮ್ಮ ಬೆಂಬಲಿಗರ ವಿರುದ್ಧ ಕೇಸ್ ದಾಖಲಿಸುವ ಮೂಲಕ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಇಂದು ಹೊಸದುರ್ಗ ಪೊಲೀಸ್ ಠಾಣೆ ಮುಂದೆ ಗೂಳಿಹಟ್ಟಿ ಶೇಖರ್ ತಮ್ಮ ಬೆಂಬಲಿಗರೊಂದಿಗೆ ಪ್ರತಿಭಟನೆ ನಡೆಸಿದರು.
ತಮ್ಮನ್ನು ಭೇಟಿ ಮಾಡಲು ಬಂದಿದ್ದ ಶಿವಮೊಗ್ಗ ಕ್ಷೇತ್ರದ ಶಾಸಕ ಕೆ.ಎಸ್.ಈಶ್ವರಪ್ಪ ಅವರ ಜೊತೆ ಮಾತನಾಡಿದ ಗೂಳಿಹಟ್ಟಿ ಶೇಖರ್, ತಮ್ಮ ಕ್ಷೇತ್ರದಲ್ಲಿ ಆದ ಘಟನೆಯನ್ನು ವಿವರಿಸಿದರು.
ತಮ್ಮ ಕ್ಷೇತ್ರದಲ್ಲಿ ಅಕ್ರಮ ಮರಳುಗಾರಿಕೆ ಎಗ್ಗಿಲ್ಲದೇ ಸಾಗುತ್ತಿದೆ. ಅಧಿಕಾರಿಗಳು ಇದರಲ್ಲಿ ಶಾಮೀಲಾಗಿದ್ದಾರೆ. ಪ್ರತಿದಿನ ಸುಮಾರು 200 ಲೋಡ್ ಮರಳು ದೂರದ ಊರಿಗೆ ಅಕ್ರಮ ಸಾಗಾಣೆಯಾಗುತ್ತಿದೆ. ಒಂದು ಟ್ರಾಕ್ಟರ್ ಲೋಡ್ಗೆ 25 ಸಾವಿರದಂತೆ ಪೊಲೀಸರು ವಸೂಲಿ ಮಾಡುತ್ತಿದ್ದಾರೆ. ಅನೇಕ ಲಾರಿ ಮತ್ತು ಟ್ರಾಕ್ಟರ್ ಗಳನ್ನು ನಾನೇ ಖುದ್ದಾಗಿ ಹಿಡಿದಿದ್ದೇನೆ ಆದರೂ ಈ ದಂಧೆ ಮುಂದುವರೆಯುತ್ತಿದೆ ಎಂದರು.
ಬಡವರಿಗೆ ಮರಳೇ ಸಿಕ್ಕುತ್ತಿಲ್ಲ. ಸರ್ಕಾರದ ಕೆಲಸಕ್ಕೂ ಮರಳು ಇಲ್ಲ, ದೇವಸ್ಥಾನ ಕಟ್ಟಲು ಮರಳು ಸಿಗುತ್ತಿಲ್ಲ. ಸ್ಥಳೀಯರು ಇದರಿಂದ ಕೆಲಸ ಕಳೆದುಕೊಂಡು ಗುಳೇ ಹೋಗುತ್ತಿದ್ದಾರೆ. ಹೋಗಲಿ ಸಣ್ಣ ಹಳ್ಳ ಅಥವಾ ಮನೆ ಬಾಗಿಲಿನಿಂದ ಹರಿದ ನೀರಿನಿಂದ ಉಂಟಾದ ಮರಳನ್ನು ಕೂಡ ಬಡವರು ತೆಗೆದುಕೊಳ್ಳಲು ಈ ಅಧಿಕಾರಿಗಳು ಬಿಡುತ್ತಿಲ್ಲ.
ಸುಳ್ಳು ಕೇಸುಗಳನ್ನು ಬಡವರ ಮೇಲೆ ಅನ್ಯಾಯವಾಗಿ ಹಾಕಲಾಗುತ್ತಿದೆ. ಆದರೆ ಉಳ್ಳವರು ಮಾತ್ರ ತಮಗೆ ಬೇಕಾದಷ್ಟು ಮರಳನ್ನು ಅಕ್ರಮವಾಗಿ ಸಾಗಿಸುತ್ತಿದ್ದಾರೆ. ಇದು ತಮಗೆ ನೋವುಂಟು ಮಾಡಿದೆ ಎಂದು ಗೂಳಿಹಟ್ಟಿ ಶೇಖರ್ ಈಶ್ವರಪ್ಪನವರ ಹತ್ತಿರ ಹೇಳಿಕೊಂಡರು.
ಇದರಿಂದ ಬೇಸತ್ತ ತಾವು ತಮ್ಮ ಬೆಂಬಲಿಗರಿಗಾದ ಅನ್ಯಾಯ ಖಂಡಿಸಿ ಬಡವರಿಗೆ ಮರಳು ಸಿಗದಿರುವುದನ್ನು ವಿರೋಧಿಸಿ ಆತ್ಮಹತ್ಯೆಗೆ ಪ್ರಯತ್ನಿಸಿದೆ ಅಷ್ಟೆ. ಮರಳನ್ನು ಕೂಡ ನೀಡದ ಈ ಸರ್ಕಾರಕ್ಕೆ ಏನು ಹೇಳಬೇಕೋ ತಮಗೆ ಗೊತ್ತಿಲ್ಲ. ಇದುವರೆಗೂ ಸುಮಾರು 500ಕ್ಕೂ ಹೆಚ್ಚು ಬಡವರನ್ನು ಜೈಲಿಗೆ ಕಳಿಸಲಾಗಿದೆ. ಹೀಗೆ ಸುಳ್ಳು ಸುಳ್ಳು ಕೇಸು ಹಾಕುವುದನ್ನು ಅಧಿಕಾರಿಗಳು ನಿಲ್ಲಿಸಬೇಕು ಎಂದರು.
ಅಕ್ರಮವಾಗಿ ಮರಳು ಸಾಗಾಣೆ ಮಾಡುವವರನ್ನು ಬಿಟ್ಟು ಪರ್ಮಿಟ್ ಇದ್ದವರ ವಿರುದ್ದವೇ ಕೇಸು ದಾಖಲಿಸಿಕೊಳ್ಳುತ್ತಿದ್ದಾರೆ. ಈ ಬಗ್ಗೆ ವಿಚಾರಿಸಿದರೆ ಅಧಿಕಾರಿಗಳು ಉದ್ದಟತನದ ಮಾತನಾಡುತ್ತಾರೆ ಎಂದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚಿಕ್ಕಮಗಳೂರು: ಹೆಣ್ಣು ಮಗು ಭವಿಷ್ಯಕ್ಕೆ ಕಂಟಕ ಎಂದು ಹೇಳಿದ್ದ ಜ್ಯೋತಿಷಿಯೊಬ್ಬನ ಮಾತು ಕೇಳಿ 1.5 ತಿಂಗಳ ಹೆಣ್ಣು ಹಸುಗೂಸನ್ನು ಸ್ವತಃ ತಂದೆಯೇ ಹತ್ಯೆ ಮಾಡಿದ ಹೃದಯವಿದ್ರಾವಕ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ಚಿಕ್ಕಮಗಳೂರು ತಾಲೂಕಿನ ಬೂಚೇನಹಳ್ಳಿ ಕಾವಲ್ನಲ್ಲಿ ನವಜಾತ ಹೆಣ್ಣು ಶಿಶುವನ್ನು ಹತ್ಯೆ ಮಾಡಿದ ಘಟನೆ ನಡೆದಿದೆ. 27 ವರ್ಷದ ಮಂಜುನಾಥ್ ನವಜಾತ ಕಂದಮ್ಮನ್ನು ಹತ್ಯೆ ಮಾಡಿದ ಆರೋಪ ಎದುರಿಸುತ್ತಿದ್ದಾರೆ. ಹೆಣ್ಣು ಮಗು ಭವಿಷ್ಯಕ್ಕೆ ಕಂಟಕ ಎಂದು ಜ್ಯೋತಿಷಿ ಹೇಳಿದ್ದರಿಂದ ಅದನ್ನು ಕುರುಡಾಗಿ ನಂಬಿದ ತಂದೆ ಮಗುವನ್ನು ಕತ್ತು…
ಶಾಸಕ ಆನಂದ್ಸಿಂಗ್ ರಾಜೀನಾಮೆ ನೀಡಿರುವ ಬೆನ್ನಲ್ಲೇ ಕಾಂಗ್ರೆಸ್-ಜೆಡಿಎಸ್ನಲ್ಲಿ ಅಸಮಾಧಾನಗೊಂಡಿರುವ ಇನ್ನಷ್ಟು ಅತೃಪ್ತ ಶಾಸಕರು ರಾಜೀನಾಮೆ ನೀಡಲು ಮುಂದಾಗಿದ್ದಾರೆ. ಮೂಲಗಳ ಪ್ರಕಾರ ಶುಕ್ರವಾರದೊಳಗೆ 8ರಿಂದ 13 ಮಂದಿ ಶಾಸಕರು ಯಾವುದೇ ಕ್ಷಣದಲ್ಲಾದರೂ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ಧರಾಗಿದ್ದು, ಆಪರೇಷನ್ ಕಮಲ ಆಷಾಢ ಪರ್ವ ಆರಂಭವಾಗಿದೆ. ಶಾಸಕರಾದ ಪ್ರತಾಪ್ಗೌಡ ಪಾಟೀಲ್(ಮಸ್ಕಿ), ಬಸವರಾಜ್ ದದ್ದಲ್ (ರಾಯಚೂರು ಗ್ರಾಮೀಣ), ಬಿ.ಸಿ.ಪಾಟೀಲ್ (ಹಿರೇಕೆರೂರು), ರಮೇಶ್ ಜಾರಕಿಹೊಳಿ (ಗೋಕಾಕ್), ಮಹೇಶ್ಕುಮಟಳ್ಳಿ (ಅಥಣಿ), ಮಹಂತೇಶ್ ಕೌಜಲಗಿ (ಬೈಲಹೊಂಗಲ), ಬಿ.ನಾಗೇಂದ್ರ (ಬಳ್ಳಾರಿ ಗ್ರಾಮೀಣ), ಜೆ.ಗಣೇಶ್ (ಕಂಪ್ಲಿ),…
ಜನಪ್ರಿಯ ಮೆಸೆಜಿಂಗ್ ಆಪ್ ವಾಟ್ಸಪ್ ಸದಾ ಒಂದಲ್ಲೊಂದು ವಿಷಯಕ್ಕೆ ಸುದ್ದಿಯಲ್ಲಿರುತ್ತಲೇ ಇರುತ್ತದೆ. ಇತ್ತೀಚಿಗೆ ಬಳಕೆದಾರರ ಖಾತೆಗಳು ಹ್ಯಾಕ್ ಆಗಿ ಭಾರಿ ದೊಡ್ಡ ಸುದ್ದಿ ಆಗಿತ್ತು. ಹಾಗೆಯೇ ತನ್ನ ಅಪ್ಡೇಟ್ ವರ್ಷನ್ಗಳಲ್ಲಿ ನೂತನ ಫೀಚರ್ಗಳನ್ನು ಅಳವಡಿಸುತ್ತಲೇ ಸಾಗಿ ಬಂದಿದ್ದ ಕಂಪನಿ, ಇದೀಗ ಸದ್ಯ ಬಳಕೆಯಲ್ಲಿರುವ ವಾಟ್ಸಪ್ನ ಫೀಚರ್ ಒಂದಕ್ಕೆ ಬ್ರೇಕ್ ಹಾಕಿದ್ದು, ಇದು ಐಓಎಸ್ ಬಳಕೆದಾರರಿಗೆ ಅಚ್ಚರಿ ತಂದಿದೆ. ಹೌದು, ವಾಟ್ಸಪ್ ಕಂಪನಿಯು IOS ಬೆಂಬಲಿತ ಐಫೋನ್ಗಳಲ್ಲಿ ಪ್ರೊಫೈಲ್ ಫೋಟೊಗಳನ್ನು ಸೇವ್ ಮಾಡಿಕೊಳ್ಳುವ ಆಯ್ಕೆಯನ್ನು ತೆಗೆದು ಹಾಕಿದ್ದು, ಇನ್ಮುಂದೇ…
ಸಾಮಾಜಿಕ ಜಾಲತಾಣದಲ್ಲಿ ಹೆಸರು ಮಾಡಿದ್ದ 24 ವರ್ಷದ ಮೋಹಿತ್ ಮೋರ್ ಅವರನ್ನು ಮೂವರು ಅಪರಿಚಿತ ವ್ಯಕ್ತಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಟಿಕ್ ಟಾಕ್ ಮೂಲಕ ಅರ್ಧ ಮಿಲಿಯನ್ ಸಂಖ್ಯೆಯ ಫಾಲೋಯರ್ಸ್ ಗಳನ್ನು ಹೊಂದಿರುವ ಮೋಹಿತ್ ಅವರು ಫಿಟ್ ನೆಸ್ ಗೆ ಸಂಬಂಧಿಸಿದಂತೆ ನಿರಂತರವಾಗಿ ವಿಡಿಯೋ ಅಪ್ ಲೋಡ್ ಮಾಡುತ್ತಿದ್ದರು. ಮಂಗಳವಾರ ಸಂಜೆ ಐದು ಗಂಟೆ ವೇಳೆಗೆ ನಜಾಫ್ ಗಡದಲ್ಲಿ ಅವರು ಗೆಳೆಯನೊಂದಿಗೆ ಮಾತನಾಡುತ್ತಿದ್ದಾಗ ಈ ಘಟನೆ ನಡೆದಿದ್ದು, ಏಕಾಏಕಿ ಮೂರು ಜನ ದಾಳಿ ಮಾಡಿದ್ದು, ಸಿಸಿ ಟಿವಿಯಲ್ಲಿ…
ಪ್ರಕೃತಿ ತನ್ನದ್ದನ್ನು ಹೇಳಿಕೊಳ್ಳುತ್ತಿದೆ ಎಂದು ತೋರುತ್ತದೆ. ಮಾನವರು ಮಾರಣಾಂತಿಕ ಕೊರೊನಾವೈರಸ್ ಏಕಾಏಕಿ ಬಳಲುತ್ತಿದ್ದರೆ, ಪ್ರಪಂಚದಾದ್ಯಂತದ ಪ್ರಾಣಿಗಳು ರಸ್ತೆಗಳನ್ನು ಸ್ವಾಧೀನಪಡಿಸಿಕೊಂಡಿವೆ.
ಹಿಂದು ಧರ್ಮದಲ್ಲಿ ಮದುವೆಗೆ ಸಂಬಂಧಿಸಿದಂತೆ ಅನೇಕ ಸಂಪ್ರದಾಯ, ಪದ್ಧತಿಗಳನ್ನು ಹಿಂದಿನಿಂದಲೂ ನಡೆಸಿಕೊಂಡು ಬರಲಾಗ್ತಾ ಇದೆ. ಮದುವೆಯ ಮೊದಲ ರಾತ್ರಿ ವಧು ವರನಿಗೆ ಕೇಸರಿಯುಕ್ತ ಬಾದಾಮಿ ಹಾಲು ನೀಡ್ತಾಳೆ. ಇದಕ್ಕೆ ಕಾರಣ ಏನು ಎಂಬುದು ನಿಮಗೆ ಗೊತ್ತಾ? ಇದು ಕೇವಲ ಒಂದು ಪದ್ಧತಿಯಲ್ಲ. ಇದರ ಹಿಂದೆ ಒಂದು ವೈಜ್ಞಾನಿಕ ಕಾರಣ ಕೂಡ ಇದೆ. ಹಿಂದು ಧರ್ಮದಲ್ಲಿ ಹಾಲು, ಕೇಸರಿ ಹಾಗೂ ಬಾದಾಮಿಗೆ ಬಹಳ ಮಹತ್ವವಿದೆ. ಹಾಗಾಗಿ ಮದುವೆಯ ಮೊದಲ ರಾತ್ರಿ ವಧು ಕೇಸರಿ, ಬಾದಾಮಿಯುಕ್ತ ಹಾಲನ್ನು ವರನಿಗೆ ನೀಡ್ತಾಳೆ….