News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ರಾಜಕೀಯ

ನ್ಯಾಯ ಸಿಗದೇ ಆತ್ಮಹತ್ಯಗೆ ಪ್ರಯತ್ನಿಸಿ ಆಸ್ಪತ್ರೆ ಸೇರಿದ ಶಾಸಕ..!

114


ಮಾಜಿ ಸಚಿವ ಹಾಗೂ ಹೊಸದುರ್ಗ ಹಾಲಿ ಬಿಜೆಪಿ ಶಾಸಕ ಗೂಳಿಹಟ್ಟಿ ಶೇಖರ್ ಅವರು ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಭಾನುವಾರ ನಡೆದಿದೆ. ಮರಳು ಸಾಗಿಸಲು ಪರ್ಮಿಟ್ ಪಡೆದರು ಪೊಲೀಸರು ಅನಗತ್ಯವಾಗಿ ತಮ್ಮ ಬೆಂಬಲಿಗರ ವಿರುದ್ಧ ಕೇಸ್ ದಾಖಲಿಸುವ ಮೂಲಕ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಇಂದು ಹೊಸದುರ್ಗ ಪೊಲೀಸ್ ಠಾಣೆ ಮುಂದೆ ಗೂಳಿಹಟ್ಟಿ ಶೇಖರ್ ತಮ್ಮ ಬೆಂಬಲಿಗರೊಂದಿಗೆ ಪ್ರತಿಭಟನೆ ನಡೆಸಿದರು.

ತಮ್ಮನ್ನು ಭೇಟಿ ಮಾಡಲು ಬಂದಿದ್ದ ಶಿವಮೊಗ್ಗ  ಕ್ಷೇತ್ರದ ಶಾಸಕ ಕೆ.ಎಸ್.ಈಶ್ವರಪ್ಪ ಅವರ ಜೊತೆ ಮಾತನಾಡಿದ ಗೂಳಿಹಟ್ಟಿ ಶೇಖರ್, ತಮ್ಮ ಕ್ಷೇತ್ರದಲ್ಲಿ ಆದ ಘಟನೆಯನ್ನು ವಿವರಿಸಿದರು.

ತಮ್ಮ ಕ್ಷೇತ್ರದಲ್ಲಿ ಅಕ್ರಮ ಮರಳುಗಾರಿಕೆ ಎಗ್ಗಿಲ್ಲದೇ ಸಾಗುತ್ತಿದೆ. ಅಧಿಕಾರಿಗಳು ಇದರಲ್ಲಿ ಶಾಮೀಲಾಗಿದ್ದಾರೆ. ಪ್ರತಿದಿನ ಸುಮಾರು 200 ಲೋಡ್ ಮರಳು ದೂರದ ಊರಿಗೆ ಅಕ್ರಮ ಸಾಗಾಣೆಯಾಗುತ್ತಿದೆ. ಒಂದು ಟ್ರಾಕ್ಟರ್ ಲೋಡ್ಗೆ 25 ಸಾವಿರದಂತೆ ಪೊಲೀಸರು ವಸೂಲಿ ಮಾಡುತ್ತಿದ್ದಾರೆ. ಅನೇಕ ಲಾರಿ ಮತ್ತು ಟ್ರಾಕ್ಟರ್ ಗಳನ್ನು ನಾನೇ ಖುದ್ದಾಗಿ ಹಿಡಿದಿದ್ದೇನೆ ಆದರೂ ಈ ದಂಧೆ ಮುಂದುವರೆಯುತ್ತಿದೆ ಎಂದರು.

ಬಡವರಿಗೆ ಮರಳೇ ಸಿಕ್ಕುತ್ತಿಲ್ಲ. ಸರ್ಕಾರದ ಕೆಲಸಕ್ಕೂ ಮರಳು ಇಲ್ಲ, ದೇವಸ್ಥಾನ ಕಟ್ಟಲು ಮರಳು ಸಿಗುತ್ತಿಲ್ಲ. ಸ್ಥಳೀಯರು ಇದರಿಂದ ಕೆಲಸ ಕಳೆದುಕೊಂಡು ಗುಳೇ ಹೋಗುತ್ತಿದ್ದಾರೆ. ಹೋಗಲಿ ಸಣ್ಣ ಹಳ್ಳ ಅಥವಾ ಮನೆ ಬಾಗಿಲಿನಿಂದ ಹರಿದ ನೀರಿನಿಂದ ಉಂಟಾದ ಮರಳನ್ನು ಕೂಡ ಬಡವರು ತೆಗೆದುಕೊಳ್ಳಲು ಈ ಅಧಿಕಾರಿಗಳು ಬಿಡುತ್ತಿಲ್ಲ.

ಸುಳ್ಳು ಕೇಸುಗಳನ್ನು ಬಡವರ ಮೇಲೆ ಅನ್ಯಾಯವಾಗಿ ಹಾಕಲಾಗುತ್ತಿದೆ. ಆದರೆ ಉಳ್ಳವರು ಮಾತ್ರ ತಮಗೆ ಬೇಕಾದಷ್ಟು ಮರಳನ್ನು ಅಕ್ರಮವಾಗಿ ಸಾಗಿಸುತ್ತಿದ್ದಾರೆ. ಇದು ತಮಗೆ ನೋವುಂಟು ಮಾಡಿದೆ ಎಂದು ಗೂಳಿಹಟ್ಟಿ ಶೇಖರ್ ಈಶ್ವರಪ್ಪನವರ ಹತ್ತಿರ ಹೇಳಿಕೊಂಡರು.

ಇದರಿಂದ ಬೇಸತ್ತ ತಾವು ತಮ್ಮ ಬೆಂಬಲಿಗರಿಗಾದ ಅನ್ಯಾಯ ಖಂಡಿಸಿ ಬಡವರಿಗೆ ಮರಳು ಸಿಗದಿರುವುದನ್ನು ವಿರೋಧಿಸಿ ಆತ್ಮಹತ್ಯೆಗೆ ಪ್ರಯತ್ನಿಸಿದೆ ಅಷ್ಟೆ. ಮರಳನ್ನು ಕೂಡ ನೀಡದ ಈ ಸರ್ಕಾರಕ್ಕೆ ಏನು ಹೇಳಬೇಕೋ ತಮಗೆ ಗೊತ್ತಿಲ್ಲ. ಇದುವರೆಗೂ ಸುಮಾರು 500ಕ್ಕೂ ಹೆಚ್ಚು ಬಡವರನ್ನು ಜೈಲಿಗೆ ಕಳಿಸಲಾಗಿದೆ. ಹೀಗೆ ಸುಳ್ಳು ಸುಳ್ಳು ಕೇಸು ಹಾಕುವುದನ್ನು ಅಧಿಕಾರಿಗಳು ನಿಲ್ಲಿಸಬೇಕು ಎಂದರು.

ಅಕ್ರಮವಾಗಿ ಮರಳು ಸಾಗಾಣೆ ಮಾಡುವವರನ್ನು ಬಿಟ್ಟು ಪರ್ಮಿಟ್ ಇದ್ದವರ ವಿರುದ್ದವೇ ಕೇಸು ದಾಖಲಿಸಿಕೊಳ್ಳುತ್ತಿದ್ದಾರೆ. ಈ ಬಗ್ಗೆ ವಿಚಾರಿಸಿದರೆ ಅಧಿಕಾರಿಗಳು ಉದ್ದಟತನದ ಮಾತನಾಡುತ್ತಾರೆ ಎಂದರು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಗುಂಡೇಟಿಗೆ ಬಲಿಯಾದ ಟಿಕ್ ಟಾಕ್ ಖ್ಯಾತಿಯ ಮೋಹಿತ್…..!

    ಸಾಮಾಜಿಕ ಜಾಲತಾಣದಲ್ಲಿ ಹೆಸರು ಮಾಡಿದ್ದ 24 ವರ್ಷದ ಮೋಹಿತ್ ಮೋರ್ ಅವರನ್ನು ಮೂವರು ಅಪರಿಚಿತ ವ್ಯಕ್ತಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಟಿಕ್ ಟಾಕ್ ಮೂಲಕ ಅರ್ಧ ಮಿಲಿಯನ್ ಸಂಖ್ಯೆಯ ಫಾಲೋಯರ್ಸ್ ಗಳನ್ನು ಹೊಂದಿರುವ ಮೋಹಿತ್ ಅವರು ಫಿಟ್ ನೆಸ್ ಗೆ ಸಂಬಂಧಿಸಿದಂತೆ ನಿರಂತರವಾಗಿ ವಿಡಿಯೋ ಅಪ್ ಲೋಡ್ ಮಾಡುತ್ತಿದ್ದರು. ಮಂಗಳವಾರ ಸಂಜೆ ಐದು ಗಂಟೆ ವೇಳೆಗೆ ನಜಾಫ್ ಗಡದಲ್ಲಿ ಅವರು ಗೆಳೆಯನೊಂದಿಗೆ ಮಾತನಾಡುತ್ತಿದ್ದಾಗ ಈ ಘಟನೆ ನಡೆದಿದ್ದು, ಏಕಾಏಕಿ ಮೂರು ಜನ ದಾಳಿ ಮಾಡಿದ್ದು, ಸಿಸಿ ಟಿವಿಯಲ್ಲಿ…

  • ಉಪಯುಕ್ತ ಮಾಹಿತಿ

    ನೀವು ಎಷ್ಟುತೂಕ ಇದ್ದೀರಿ ..? ಹಾಗಾದ್ರೆ ನೀವು ದಿನನಿತ್ಯ ಎಷ್ಟು ಲೀ ನೀರು ಕುಡಿಯಬೇಕು ಗೊತ್ತಾ ..? ತಿಳಿಯಲು ಈ ಲೇಖನ ಓದಿ…

    ಉತ್ತಮ ಆರೋಗ್ಯಕ್ಕೆ ನೀರು ಅತ್ಯಾವಶ್ಯಕ ಅಂಶ.ನೀರಿನ ಆವಶ್ಯಕತೆಯ ಮಟ್ಟವು ಬೇರೆ ಬೇರೆ ವ್ಯಕ್ತಿಗಳಲ್ಲಿ ಭಿನ್ನವಾಗಿರಬಹುದು. ನೀವು ಸಾಕಷ್ಟು ದ್ರವಾಹಾರ ಸೇವಿಸುತ್ತಿರುವಿರೇ ಎಂಬುದನ್ನು ಖಚಿತಪಡಿಸಿಕೊಳ್ಳಲು ಈ ಲೇಖನವು ನಿಮಗೆ ಸಹಾಯ ಮಾಡಲಿದೆ.

  • ಜ್ಯೋತಿಷ್ಯ

    ಹೊರನಾಡು ಅನ್ನಪೂರ್ಣೇಶ್ವರಿಯನ್ನು ನೆನೆಯುತ್ತ ನಿಮ್ಮ ಇಂದಿನ ರಾಶಿ ಭವಿಷ್ಯದ ಬಗ್ಗೆ ತಿಳಿಯಿರಿ

    ಮೇಷ ರಾಶಿ ಭವಿಷ್ಯ (Friday, November 26, 2021) ಪ್ರತಿ ವ್ಯಕ್ತಿಯನ್ನೂ ಆಲಿಸಿ ನಿಮ್ಮ ಸಮಸ್ಯೆಗಳಿಗೆ ಪರಿಹಾರ ದೊರಕಬಹುದು. ಇಂದು ಮನೆಯಿಂದ ಹೊರಗೆ ಹಿರಿಯರ ಆಶೀರ್ವಾದವನ್ನು ತೆಗೆದುಕೊಂಡು ಹೋಗಿ, ಇದರಿಂದ ನೀವು ಹಣದ ಲಾಭವನ್ನು ಪಡೆಯಬಹುದು. ಗೃಹ ಜೀವನ ಶಾಂತಿಯುತ ಮತ್ತು ಉತ್ತಮವಾಗಿರುತ್ತದೆ ಪ್ರೀತಿಯಲ್ಲಿ ಬೀಳುವುದು ಇಂದು ನಿಮಗೆ ಕೆಟ್ಟದಾಗಿರಬಹುದಾದ್ದರಿಂದ ನೀವು ಜಾಗರೂಕರಾಗಿರಿ. ಹೆಚ್ಚಿನ ಕೆಲಸದ ಹೊರೆತಾಗಿಯೂ ಇಂದು ಕೆಲಸದ ಸ್ಥಳದಲ್ಲಿ ನಿಮ್ಮಲ್ಲಿ ಶಕ್ತಿಯನ್ನು ನೋಡಬಹುದು. ಇಂದು ನಿಮಗೆ ನೀಡಲಾಗಿರುವ ಕೆಲಸವನ್ನು ನಿರ್ಧರಿಸಿರುವ ಸಮಯಕ್ಕಿಂತ ಮೊದಲೇ ಪೂರೈಸಬಹುದು….

  • ಜ್ಯೋತಿಷ್ಯ

    ದಿನ ಭವಿಷ್ಯ ಶನಿವಾರ…ಇಂದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಶನಿವಾರ, 14/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಪಂಡಿತ್ ಸುದರ್ಶನ್ ಭಟ್  ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಸೂರ್ಯೋದಯ06:08:40 ಸೂರ್ಯಾಸ್ತ18:46:04 ಹಗಲಿನ ಅವಧಿ12:37:24 ರಾತ್ರಿಯ ಅವಧಿ11:21:42 ಚಂದ್ರಾಸ್ತ17:16:30 ಚಂದ್ರೋದಯ29:42:29* ಋತು:ವಸಂತ ಆಯನ:ಉತ್ತರಾಯಣ ಸಂವತ್ಸರ:ವಿಲಂಬಿ ಸಂವತ್ಸರ (ಉತ್ತರ):ವಿರೋಧಿಕೃತ್…

  • ಸುದ್ದಿ

    ಪ್ರೇಯಸಿ ಕೊಕ್ಕರೆಯ ಕಾಲು ಮುರಿದ ಬೇಟೆಗಾರ, ನಂತರ ಗಂಡು ಕೊಕ್ಕರೆ ಮಾಡಿದ ಕೆಲಸ ನೋಡಿ.

    ಮನುಷ್ಯ ಪ್ರೀತಿಗಾಗಿ ಏನು ಮಾಡಲು ಕೂಡ ತಯಾರು ಇರುತ್ತಾನೆ, ಹಾಗೆ ಪ್ರಾಣಿ ಮತ್ತು ಪಕ್ಷಿಗಳು ಕೂಡ, ಬೇಟೆಗಾರನಿಂದ ಕಾಲು ಕಳೆದುಕೊಂಡ ಹೆಣ್ಣು ಕೊಕ್ಕರೆಗಾಗಿ ಈ ಗಂಡು ಕೊಕ್ಕರೆ ಮಾಡಿದ ಕೆಲಸವನ್ನ ಕೇಳಿದರೆ ನಿಮ್ಮ ಕಣ್ಣಲ್ಲಿ ಕೂಡ ನೀರು ಜಿನುಗುತ್ತದೆ. ಹಾಗಾದರೆ ಈ ಗಂಡು ಕೊಕ್ಕರೆ ಮಾಡಿದ್ದೇನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ. ಸ್ನೇಹಿತರೆ ಈ ಕೊಕ್ಕರೆಯ ಪ್ರೇಮ ಕಥೆ…

  • ಕ್ರೀಡೆ

    ಈ ಭಾರಿಯ ಐಪಿಎಲ್ ವಿದೇಶದಲ್ಲೋ? ಅಥವಾ ಭಾರತದಲ್ಲೋ? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ..

    ಈ ಬಾರಿಯ ಐಪಿಎಲ್ ಕ್ರಿಕೆಟ್ ಸರಣಿ ವಿದೇಶದಲ್ಲಿ ನಡೆಯುತ್ತದೆ ಎಂಬ ಸುದ್ಧಿ ಎಲ್ಲೆಡೆ ಹರಡಿತ್ತು. ಎಲ್ಲಾ ಊಹಾಪೋಹಗಳಿಗೆ ತೆರೆ ಎಳೆದಿರುವ ಬಿಸಿಸಿಐ ಈ ಬಾರಿಯ ಐಪಿಎಲ್ ಎಲ್ಲಿ ನಡೆಯುತ್ತದೆ ಎಂಬುದನ್ನು ಸ್ಪಷ್ಟ ಪಡಿಸಿದೆ. ಭಾರತದಲ್ಲಿ ಲೋಕಸಭಾ ಚುನಾವಣೆ ಇರುವ ಕಾರಣ ವಿದೇಶದಲ್ಲಿ ಐಪಿಎಲ್ ನಡೆಯಲಿದೆ ಎನ್ನಲಾಗಿತ್ತು. 2009 ದಿಲ್ಲಿ ಭಾರತದಲ್ಲಿ ಲೋಕಸಭಾ ಚುನಾವಣೆ ಇದ್ದ ಕಾರಣ ದಕ್ಷಿಣ ಆಫ್ರಿಕಾದಲ್ಲಿ ಐಪಿಎಲ್ ನಡೆಸಲಾಗಿತ್ತು. ಈ ಬಾರಿಯೂ ಸಹ ವಿದೇಶದಲ್ಲಿ ಸರಣಿ ನಡೆಯಲಿದೆ ಎಂಬ ಮಾತುಗಳು ಕೇಳಿ ಬಂದಿದ್ದವು.ಆದರೆ ಈ…