ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಾಜಿ ಸಚಿವ ಹಾಗೂ ಹೊಸದುರ್ಗ ಹಾಲಿ ಬಿಜೆಪಿ ಶಾಸಕ ಗೂಳಿಹಟ್ಟಿ ಶೇಖರ್ ಅವರು ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಭಾನುವಾರ ನಡೆದಿದೆ. ಮರಳು ಸಾಗಿಸಲು ಪರ್ಮಿಟ್ ಪಡೆದರು ಪೊಲೀಸರು ಅನಗತ್ಯವಾಗಿ ತಮ್ಮ ಬೆಂಬಲಿಗರ ವಿರುದ್ಧ ಕೇಸ್ ದಾಖಲಿಸುವ ಮೂಲಕ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಇಂದು ಹೊಸದುರ್ಗ ಪೊಲೀಸ್ ಠಾಣೆ ಮುಂದೆ ಗೂಳಿಹಟ್ಟಿ ಶೇಖರ್ ತಮ್ಮ ಬೆಂಬಲಿಗರೊಂದಿಗೆ ಪ್ರತಿಭಟನೆ ನಡೆಸಿದರು.

ತಮ್ಮನ್ನು ಭೇಟಿ ಮಾಡಲು ಬಂದಿದ್ದ ಶಿವಮೊಗ್ಗ ಕ್ಷೇತ್ರದ ಶಾಸಕ ಕೆ.ಎಸ್.ಈಶ್ವರಪ್ಪ ಅವರ ಜೊತೆ ಮಾತನಾಡಿದ ಗೂಳಿಹಟ್ಟಿ ಶೇಖರ್, ತಮ್ಮ ಕ್ಷೇತ್ರದಲ್ಲಿ ಆದ ಘಟನೆಯನ್ನು ವಿವರಿಸಿದರು.
ತಮ್ಮ ಕ್ಷೇತ್ರದಲ್ಲಿ ಅಕ್ರಮ ಮರಳುಗಾರಿಕೆ ಎಗ್ಗಿಲ್ಲದೇ ಸಾಗುತ್ತಿದೆ. ಅಧಿಕಾರಿಗಳು ಇದರಲ್ಲಿ ಶಾಮೀಲಾಗಿದ್ದಾರೆ. ಪ್ರತಿದಿನ ಸುಮಾರು 200 ಲೋಡ್ ಮರಳು ದೂರದ ಊರಿಗೆ ಅಕ್ರಮ ಸಾಗಾಣೆಯಾಗುತ್ತಿದೆ. ಒಂದು ಟ್ರಾಕ್ಟರ್ ಲೋಡ್ಗೆ 25 ಸಾವಿರದಂತೆ ಪೊಲೀಸರು ವಸೂಲಿ ಮಾಡುತ್ತಿದ್ದಾರೆ. ಅನೇಕ ಲಾರಿ ಮತ್ತು ಟ್ರಾಕ್ಟರ್ ಗಳನ್ನು ನಾನೇ ಖುದ್ದಾಗಿ ಹಿಡಿದಿದ್ದೇನೆ ಆದರೂ ಈ ದಂಧೆ ಮುಂದುವರೆಯುತ್ತಿದೆ ಎಂದರು.

ಬಡವರಿಗೆ ಮರಳೇ ಸಿಕ್ಕುತ್ತಿಲ್ಲ. ಸರ್ಕಾರದ ಕೆಲಸಕ್ಕೂ ಮರಳು ಇಲ್ಲ, ದೇವಸ್ಥಾನ ಕಟ್ಟಲು ಮರಳು ಸಿಗುತ್ತಿಲ್ಲ. ಸ್ಥಳೀಯರು ಇದರಿಂದ ಕೆಲಸ ಕಳೆದುಕೊಂಡು ಗುಳೇ ಹೋಗುತ್ತಿದ್ದಾರೆ. ಹೋಗಲಿ ಸಣ್ಣ ಹಳ್ಳ ಅಥವಾ ಮನೆ ಬಾಗಿಲಿನಿಂದ ಹರಿದ ನೀರಿನಿಂದ ಉಂಟಾದ ಮರಳನ್ನು ಕೂಡ ಬಡವರು ತೆಗೆದುಕೊಳ್ಳಲು ಈ ಅಧಿಕಾರಿಗಳು ಬಿಡುತ್ತಿಲ್ಲ.

ಸುಳ್ಳು ಕೇಸುಗಳನ್ನು ಬಡವರ ಮೇಲೆ ಅನ್ಯಾಯವಾಗಿ ಹಾಕಲಾಗುತ್ತಿದೆ. ಆದರೆ ಉಳ್ಳವರು ಮಾತ್ರ ತಮಗೆ ಬೇಕಾದಷ್ಟು ಮರಳನ್ನು ಅಕ್ರಮವಾಗಿ ಸಾಗಿಸುತ್ತಿದ್ದಾರೆ. ಇದು ತಮಗೆ ನೋವುಂಟು ಮಾಡಿದೆ ಎಂದು ಗೂಳಿಹಟ್ಟಿ ಶೇಖರ್ ಈಶ್ವರಪ್ಪನವರ ಹತ್ತಿರ ಹೇಳಿಕೊಂಡರು.

ಇದರಿಂದ ಬೇಸತ್ತ ತಾವು ತಮ್ಮ ಬೆಂಬಲಿಗರಿಗಾದ ಅನ್ಯಾಯ ಖಂಡಿಸಿ ಬಡವರಿಗೆ ಮರಳು ಸಿಗದಿರುವುದನ್ನು ವಿರೋಧಿಸಿ ಆತ್ಮಹತ್ಯೆಗೆ ಪ್ರಯತ್ನಿಸಿದೆ ಅಷ್ಟೆ. ಮರಳನ್ನು ಕೂಡ ನೀಡದ ಈ ಸರ್ಕಾರಕ್ಕೆ ಏನು ಹೇಳಬೇಕೋ ತಮಗೆ ಗೊತ್ತಿಲ್ಲ. ಇದುವರೆಗೂ ಸುಮಾರು 500ಕ್ಕೂ ಹೆಚ್ಚು ಬಡವರನ್ನು ಜೈಲಿಗೆ ಕಳಿಸಲಾಗಿದೆ. ಹೀಗೆ ಸುಳ್ಳು ಸುಳ್ಳು ಕೇಸು ಹಾಕುವುದನ್ನು ಅಧಿಕಾರಿಗಳು ನಿಲ್ಲಿಸಬೇಕು ಎಂದರು.

ಅಕ್ರಮವಾಗಿ ಮರಳು ಸಾಗಾಣೆ ಮಾಡುವವರನ್ನು ಬಿಟ್ಟು ಪರ್ಮಿಟ್ ಇದ್ದವರ ವಿರುದ್ದವೇ ಕೇಸು ದಾಖಲಿಸಿಕೊಳ್ಳುತ್ತಿದ್ದಾರೆ. ಈ ಬಗ್ಗೆ ವಿಚಾರಿಸಿದರೆ ಅಧಿಕಾರಿಗಳು ಉದ್ದಟತನದ ಮಾತನಾಡುತ್ತಾರೆ ಎಂದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಿತ್ಯಾನಂದನ ಆಶ್ರಮದಲ್ಲಿದ್ದ ಯುವತಿ ನಾಪತ್ತೆ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದ್ದು, ಸ್ವತಃ ಯುವತಿಯೇ ಫೇಸ್ಬುಕ್ ನಲ್ಲಿ ಲೈವ್ ವಿಡಿಯೋ ಮಾಡುವ ಮೂಲಕ ಎಲ್ಲ ವಿಚಾರಗಳನ್ನು ಸ್ಪಷ್ಟಪಡಿಸಿದ್ದಾಳೆ. ಅಪಹರಣಗೊಂಡಿದ್ದಾಳೆ ಎಂಬ ಆರೋಪ ಕೇಳಿಬಂದ ಯುವತಿ ಫೇಸ್ಪುಕ್ ನಲ್ಲಿ ಪ್ರತ್ಯಕ್ಷವಾಗಿ ತಂದೆಯ ವಿರುದ್ಧವೇ ಕಿಡಿಕಾರಿದ್ದಾಳೆ. ಲೈವ್ ವಿಡಿಯೋ ಮೂಲಕ ತಮ್ಮನ್ನು ಯಾರೂ ಅಪಹರಿಸಿಲ್ಲ. ಆದರೆ ಸುಖಾಸುಮ್ಮನೆ ನಮ್ಮ ಗುರುಗಳಾದ ನಿತ್ಯಾನಂದ ಸ್ವಾಮೀಜಿ ಮೇಲೆ ಆರೋಪಿಸಿದ್ದಾರೆ. ಅಲ್ಲದೆ ಪೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ. ಇದು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ತಡೆ…
ವಾಸ್ತುಶಾಸ್ತ್ರವೆನ್ನುವುದು ಶತಮಾನಕ್ಕಿಂತಲೂ ಹಿಂದಿನಿಂದಲೂ ಇತ್ತು. ಆಗಿನ ಕಾಲದಲ್ಲಿ ಕಟ್ಟಡ, ಮನೆ ಹಾಗೂ ಯಾವುದೇ ರೀತಿಯ ನಿರ್ಮಾಣ ಮಾಡಬೇಕಿದ್ದರೂ ವಾಸ್ತು ಪ್ರಕಾರವೇ ಅದನ್ನು ಮಾಡಿಕೊಂಡು ಬರಲಾಗುತ್ತಿತ್ತು. ಇಂದಿನ ದಿನಗಳಲ್ಲಿ ಪ್ರತಿಯೊಂದು ವಿಚಾರವೂ ವಾಣಿಜ್ಯೀಕರಣವಾಗಿರುವ ಹಿನ್ನೆಲೆಯಲ್ಲಿ ವಾಸ್ತು ಶಾಸ್ತ್ರವು ಹಾಗೆ ಆಗಿದೆ. ವಾಸ್ತುಶಾಸ್ತ್ರವು ಅತಿಯಾಗಿ ಜನಪ್ರಿಯತೆ ಪಡೆದುಕೊಂಡಿದೆ. ಇದರಿಂದ ಇಂದು ಯಾವುದೇ ಮನೆ ಅಥವಾ ವಾಣಿಜ್ಯ ಕಟ್ಟಡವನ್ನು ನಿರ್ಮಾಣ ಮಾಡಬೇಕಿದ್ದರೂ ಅಲಂಕಾರ ಅಥವಾ ಯಾವುದೇ ಪೀಠೋಪಕರಣ ಇಡಬೇಕಿದ್ದರೂ ಅದನ್ನು ವಾಸ್ತುಶಾಸ್ತ್ರದ ಪ್ರಕಾರ ಮಾಡಲಾಗುತ್ತದೆ. ಮನೆ ಅಥವಾ ಕಟ್ಟಡದಲ್ಲಿ ಸುಖ, ಸಮೃದ್ಧಿ ನೆಲೆಸಬೇಕಿದ್ದರೆ…
ರಾಯಚೂರಿನ ವೆಂಕಟೇಶ್, ಉತ್ತರ ಕನ್ನಡದ ಆರತಿ ಸೇಠ್ ಶೌರ್ಯ ಪ್ರಶಸ್ತಿ ಪುರಸ್ಕೃತ ಮಕ್ಕಳು. ಇಂದು ದೆಹಲಿಯಲ್ಲಿ ಭಾರತೀಯ ಮಕ್ಕಳ ಕಲ್ಯಾಣ ಮಂಡಳಿ ವತಿಯಿಂದ ರಾಷ್ಟ್ರೀಯ ಶೌರ್ಯ ಪ್ರಶಸ್ತಿ ಘೋಷಣೆಯಾಗಿದ್ದು, ದೇಶದ 22 ಮಕ್ಕಳನ್ನು ಆಯ್ಕೆ ಮಾಡಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಈ ಮಕ್ಕಳಿಗೆ ಪ್ರಶಸ್ತಿ ಪ್ರಧಾನ ಮಾಡಲಿದ್ದಾರೆ. ರಾಯಚೂರು ಜಿಲ್ಲೆ ದೇವದುರ್ಗ ತಾಲೂಕಿನ ವೆಂಕಟೇಶ್, ಪ್ರವಾಹ ಸಂದರ್ಭದಲ್ಲಿ ರಸ್ತೆ ಕಾಣದೆ ನಿಂತಿದ್ದ ಅಂಬುಲೆನ್ಸ್ ಗೆ ದಾರಿ ತೋರಿಸುವ ಮೂಲಕ ಐದು ಮಂದಿಯ ಪ್ರಾಣ ರಕ್ಷಣೆ ಮಾಡಿದ್ದ. ಮೃತ…
ಆಂಡ್ರಾಯ್ಡ್ ಸ್ಮಾರ್ಟ್ಫೋನ್ ಬಳಕೆದಾರರು ಯಾವುದೇ ಆ್ಯಪ್ ಬೇಕಾದರೂ ಗೂಗಲ್ ಪ್ಲೇಸ್ಟೋರ್ ಮೂಲಕ ಡೌನ್ಲೋಡ್ ಮಾಡಿಕೊಳ್ಳಬೇಕಿದೆ. ಆದರೆ ಪ್ಲೇ ಸ್ಟೋರ್ನಲ್ಲಿ ಲಭ್ಯವಿರುವ ಎಲ್ಲ ಆ್ಯಪ್ಗಳು ಉಚಿತವಲ್ಲ. ಕೆಲವೊಂದು ಆ್ಯಪ್ಗಳಿಗೆ ನಾವು ಹಣ ಪಾವತಿಸಬೇಕಾಗುತ್ತದೆ. ಕೆಲವೊಂದು ಆ್ಯಪ್ಗಳ ಆರಂಭಿಕ ಸೇವೆಗಳು ಉಚಿತವಾಗಿದ್ದರೂ, ಪ್ರೀಮಿಯಂ ಸೇವೆಗಳಿಗೆ ಹೆಚ್ಚುವರಿ ಶುಲ್ಕ ಪಾವತಿಸುವುದು ಅನಿವಾರ್ಯವಾಗುತ್ತದೆ. ಅಂತಹ ಸಂದರ್ಭದಲ್ಲಿ ಯಾವುದಾದರೂ ಆ್ಯಪ್ ಅನ್ನು ಖರೀದಿಸಿದ್ದರೆ ಮತ್ತು ಹಣ ಪಾವತಿಸಿದ್ದರೆ, ಅದನ್ನು ಮರಳಿ ಪಡೆಯುವುದು ಹೇಗೆ ಎಂದು ಇಲ್ಲಿವಿವರಿಸಲಾಗಿದೆ. ಜತೆಗೆ ಕೆಲವೊಂದು ಆ್ಯಪ್ಗಳು ಟ್ರಯಲ್ ಲಭ್ಯವಿದ್ದರೂ, ಅಚಾನಕ್…
ಈ ಅಜ್ಜಿಗೆ ಬರೋಬ್ಬರಿ 80 ವರ್ಷ ವಯಸ್ಸು ಆದ್ರೂ ಇವರು ಛಲ ಬಿಡದೆ ಕೃಷಿಯಲ್ಲಿ ಸಾಧನೆಯನ್ನು ಮಾಡಿದ್ದಾರೆ. ಇವರ ಒಂದು ಸಾಧನೆಯು ಪ್ರತಿಯೊಬ್ಬ ರೈತನಿಗೆ ಸ್ಫೂರ್ತಿ ಅನ್ನಬಹುದು .ಈ ಅಜ್ಜಿಯ ಹೆಸರು ಲಕ್ಷ್ಮೀಬಾಯಿ ಮಲ್ಲಪ್ಪ ಜುಲ್ಪಿ ಎಂಬುದಾಗಿ ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಹುಲ್ಯಾಳ ಗ್ರಾಮದವರು ಇವರಿಗೆ 80 ವರ್ಷ ವಯಸ್ಸು. ಮತ್ತೆ ಇವರಿಗೆ ಹೆಣ್ಣು ಮಕ್ಕಳು ಸೇರಿದಂತೆ ಮೊಮ್ಮಕ್ಕಳಿದ್ದಾರೆ. ಈ ವಯಸ್ಸಿನಲ್ಲೂ ಕೂಡ ಇವರ ಕಾರ್ಯ ವೈಖರಿಯನ್ನು ನೋಡಿದರೆ ಎಂತವರಿಗೂ ಕೂಡ ಅಚ್ಚರಿ ಮೂಡಿಸುತ್ತದೆ. ಆ…
ಜುಲೈ 2, 2019ರಂದು ಸಂಪೂರ್ಣ ಸೂರ್ಯ ಗ್ರಹಣ ಆಗಲಿದೆ. ಈ ಸೂರ್ಯ ಗ್ರಹಣವು ರಾತ್ರಿ 10.25ಕ್ಕೆ (ಭಾರತೀಯ ಕಾಲಮಾನ) ಸಂಭವಿಸಲಿದೆ. ಈ ಗ್ರಹಣವು 4.33 ನಿಮಿಷಗಳ ಕಾಲ ಸಂಭವಿಸಲಿದೆ. ಆ ಸಂದರ್ಭದಲ್ಲಿ ಸೂರ್ಯ ಸಂಪೂರ್ಣವಾಗಿ ಚಂದ್ರನ ನೆರಳಲ್ಲಿ ಮರೆಯಾಗುತ್ತದೆ. ಈ ಗ್ರಹಣವು ಚಿಲಿ, ಅರ್ಜೆಂಟೀನಾ ಹಾಗೂ ದಕ್ಷಿಣ ಪೆಸಿಫಿಕ್ ಸಾಗರದಿಂದ ಗೋಚರವಾಗುತ್ತದೆ. ಹಿಂದೂ ಧಾರ್ಮಿಕ ನಂಬಿಕೆಗಳ ಪ್ರಕಾರ, ಗ್ರಹಣದ ವೇಳೆ ಭೂಮಿಯಲ್ಲಿ ವಾತಾವರಣ ಕಲುಷಿತ ಆಗುತ್ತದೆ. ಆದ್ದರಿಂದ ಯಾವುದೇ ನಕಾರಾತ್ಮಕ ಅಡ್ಡ ಪರಿಣಾಮಗಳು ಸಂಭವಿಸಬಾರದು ಅಂದರೆ ಕೆಲವು…