ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತುಂಬಾ ಕೂದಲು ಉದುರುತ್ತಿದೆ ಅಂತ ಚಿಂತೆ ಶುರುವಾಗಿದ್ಯಾ? ಕೂದಲು ಯಾಕೆ ಉದುರುತ್ತೆ? ಈ ಸಮಸ್ಯೆಗೆ ನೈಸರ್ಗಿಕ ಮದ್ದು ಏನು? ಯಾವೆಲ್ಲಾ ಆಹಾರವನ್ನೂ ಸೇವಿಸಬೇಕು? ಹೇಗೆ ಕೂದಲಿನ ರಕ್ಷಣೆ ಮಾಡಬೇಕು ಎನ್ನುವ ಚಿಂತೆಯಲ್ಲಿದ್ದೀರಾ? ಏನಪ್ಪಾ ಮಾಡೋದು ಈ ಸಮಸ್ಯೆಗೆ ಅಂತ ಯೋಚನೆ ಮಾಡೋದನ್ನ ಬಿಡಿ.

ಸಾಮಾನ್ಯವಾಗಿ ಎಲ್ಲರನ್ನೂ ಕಾಡುವ ಸಮಸ್ಯೆ ಅಂದ್ರೆ ಅದು ಹೇರ್ ಫಾಲ್. ದೇಹಕ್ಕೆ ಆರೋಗ್ಯಕರ, ಪೌಷ್ಠಿಕಾಂಶವುಳ್ಳ ಆಹಾರ ಸೇವಿಸದಿದ್ದರೆ ಈ ಹೇರ್ ಫಾಲ್ ಸಮಸ್ಯೆ ಬರುತ್ತದೆ. ಅಲ್ಲದೆ ಅತಿಯಾದ ಯೋಚನೆ, ನಿದ್ರಾಹೀನತೆ ಹಾಗೂ ಟೆನ್ಶನ್ನಿಂದ ಕೂಡ ಕೂದಲು ಉದುರೋಕೆ ಶುರುವಾಗುತ್ತದೆ. ಸಾಮಾನ್ಯವಾಗಿ ಎಲ್ಲರಿಗೂ ಕೂದಲು ಉದುರತ್ತೆ. ಆದ್ರೆ ಕೂದಲು ಉದುರಿರುವ ಸ್ಥಳದಲ್ಲಿ ಮತ್ತೆ ಕೂದಲು ಬೆಳೆಯದಿದ್ದರೆ ಅದಕ್ಕೆ ಹೇರ್ ಫಾಲ್ ಸಮಸ್ಯೆ ಎನ್ನುತ್ತಾರೆ. ನಾವು ತಿಳಿಸುವ ಸುಲಭ ಹಾಗೂ ನೈಸರ್ಗಿಕ ಮದ್ದನ್ನು ಹಾಗೂ ಕೆಲವು ಆರೋಗ್ಯದ ಸಲಹೆಯನ್ನು ಪಾಲಿಸಿದರೆ ನೀವು ನಿಮ್ಮ ಹೇರ್ ಫಾಲ್ ಸಮಸ್ಯೆಯಿಂದ ಹೊರಬರಬಹುದು. ಹೌದು ಆ ಸುಲಭ, ನೈಸರ್ಗಿಕ ಸಲಹೆಗಳು ಇಲ್ಲಿವೆ ನೋಡಿ.

ಯಾವೆಲ್ಲಾ ವಿಟಮಿನ್ಸ್ ಬರಿತ ಆಹಾರ ಸೇವಿಸಬೇಕು? ಹೇರ್ ಫಾಲ್ ನಿಯಂತ್ರಿಸಲು ವಿಟಿಮಿನ್-ಎ, ವಿಟಮಿನ್-ಬಿ, ಓಮೆಗಾ-3 ಹಾಗೂ ವಿಟಮಿನ್-ಇ ಸಮೃದ್ಧವಾಗಿರುವ ಆಹಾರವನ್ನು ಸೇವಿಸಬೇಕು. ಇದರಿಂದ ಕೂದಲ ಬೆಳವಣಿಗೆಗೆ ಉತ್ತಮ ವಿಟಮಿನ್ ಅಂಶ ದೊರಕಿ ಹೇರ್ ಫಾಲ್ ಕಡಿಮೆಯಾಗುತ್ತದೆ.
ಆಂಟಿ ಆಕ್ಸಿಡೆಂಟ್ ಗುಣಗಳುಳ್ಳ ವಿಟಮಿನ್-ಎ ಪದಾರ್ಥಗಳು ಆರೋಗ್ಯಕರ ಕೂದಲು ಮತ್ತು ಕೂದಲು ಬೆಳವಣಿಗೆಯನ್ನು ಉತ್ತೇಜಿಸುತ್ತದೆ. ಸಿಹಿ ಆಲೂಗೆಡ್ಡೆ, ಕ್ಯಾರೆಟ್, ಕರಿಬೇವಿನ ಸೊಪ್ಪು, ಒಣಗಿದ ಏಪ್ರಿಕಾಟ್, ಸ್ವೀಟ್ ಕೆಂಪು ಮೆಣಸು, ಟ್ಯೂನಾ ಮೀನು, ಉಷ್ಣವಲಯದ ಹಣ್ಣುಗಳು(ಮಾವು) ವಿಟಮಿನ್-ಎ ಅಂಶವನ್ನು ಒಳಗೊಂಡಿರುತ್ತದೆ. ಇದು ಕೂದಲ ಬೆಳವಣಿಗೆಯನ್ನು ಉತ್ತೇಜಿಸುತ್ತದೆ ಮತ್ತು ಕೂದಲು ನಷ್ಟವನ್ನು ತಡೆಯುತ್ತದೆ. ಮೊಟ್ಟೆ, ಮೀನು, ಮತ್ತು ಹಾಲು ನಮ್ಮ ಆಹಾರದಲ್ಲಿ ಒಮೆಗಾ -3 ಅಂಶವಿರುತ್ತದೆ. ಬೀಜಗಳು (ಬಾದಾಮಿ), ಶೆಲ್ಫಿಶ್, ಮೀನು, ಆಲಿವ್ ಎಣ್ಣೆ, ಬ್ರೊಕೊಲಿನಲ್ಲಿ ವಿಟಮಿನ್ ಇ ಅಂಶ ಅಡಕವಾಗಿರುತ್ತದೆ. ವಿಟಮಿನ್ ಇ ಆರೋಗ್ಯ ಸುಧಾರಣೆಗೆ ಸಹಾಯ ಮಾಡಿ ದೇಹದಲ್ಲಿ ರಕ್ತದ ಸಂಚಲನವನ್ನು ಉತ್ತಮಗೊಳಿಸುತ್ತದೆ. ಮಾಂಸ, ಮೊಟ್ಟೆಗಳು, ಮೀನುಗಳು ಅಥವಾ ಡೈರಿ ಆಹಾರಗಳು ವಿಟಮಿನ್-ಬಿಯಿಂದ ಸಮೃದ್ಧವಾಗಿವೆ. ಈ ವಿಟಮಿನ್ಗಳು ಮೆಲನಿನ್ ಅನ್ನು ಉತ್ಪಾದಿಸಲು ಸಹಾಯ ಮಾಡುತ್ತವೆ, ಇದು ಕೂದಲಿಗೆ ಆರೋಗ್ಯಕರ ಬಣ್ಣವನ್ನು ನೀಡುತ್ತದೆ. ಜೊತೆಗೆ ರಕ್ತ ಸಂಚಲವನ್ನು ಸುಧಾರಿಸುತ್ತದೆ ಮತ್ತು ಕೂದಲು ಉದುರುವಿಕೆಯನ್ನು ನಿಲ್ಲುಸುತ್ತದೆ.

ಹೆಡ್ ಮಸಾಜ್ ಪ್ರತಿ ನಿತ್ಯ 15 ನಿಮಿಷಗಳ ಕಾಲ ನಿಮ್ಮ ತಲೆಯನ್ನು ಮಸಾಜ್ ಮಾಡುವುದರಿಂದ ನೆತ್ತಿಯಲ್ಲಿ ರಕ್ತ ಸಂಚಲನ ಉತ್ತಮ ರೀತಿಯಲ್ಲಿ ಆಗುತ್ತದೆ. ತಲೆ ಮಸಾಜ್ ಮಾಡಲು ತೆಂಗಿನ ಎಣ್ಣೆ ಅಥವಾ ಬಾದಾಮಿ ತೈಲವನ್ನು ಬಳಸಿದರೆ ಉತ್ತಮ. ಯಾಕೆಂದರೆ ಬಾದಾಮಿ ತೈಲ ನಿಮ್ಮ ನೆತ್ತಿಯನ್ನು ಮೃದುಗೊಳಿಸುವುದು. ಸಾಧ್ಯವಾದರೆ, ವಾರಕ್ಕೆ ಕನಿಷ್ಠ ಎರಡು ಬಾರಿ ಕೂದಲು ಉದುರುವಿಕೆಯನ್ನು ನಿಲ್ಲಿಸಲು ಬಾದಾಮಿ ತೈಲದಿಂದ ತಲೆಗೆ ಮಸಾಜ್ ಮಾಡಿಕೊಳ್ಳಿ ಉತ್ತಮ ಫಲಿತಾಂಶ ಪಡೆಯಿರಿ.
ಮೊಟ್ಟೆ ವಾರದಲ್ಲಿ ಎರಡು ಬಾರಿ ಮೊಟ್ಟೆಯ ಬಿಳಿಯ ಬಿಳಿಯ ಭಾಗವನ್ನು ಬೇರ್ಪಡಿಸಿ ಅದನ್ನು ನಿಮ್ಮ ನೆತ್ತಿಯನ್ನು ಮಸಾಜ್ ಮಾಡುವುದರಿಂದ ಇದು ನಿಮ್ಮ ಕೂದಲನ್ನು ಬಲಪಡಿಸುತ್ತದೆ ಮತ್ತು ಪೋಷಣೆ ನೀಡುತ್ತದೆ. ಕೂದಲು ಉದುರುವಿಕೆಯನ್ನು ತಡೆಗಟ್ಟಿ ಕೂದಲು ವೇಗವಾಗಿ ಬೆಳೆಯಲು ಸಹಾಯ ಮಾಡುತ್ತದೆ.
ಬಿಸಿ ತೈಲ ಮಸಾಜ್ ತೆಂಗಿನ ಎಣ್ಣೆ, ಆಲಿವ್ ಎಣ್ಣೆ ಅಥವಾ ಕ್ಯಾನೋಲ ಎಣ್ಣೆಯನ್ನು ತೆಗೆದುಕೊಂಡು ಅದನ್ನು ಕೊಂಚ ಬಿಸಿ ಮಾಡಿ, ಕೆಲವು ನಿಮಿಷಗಳ ಕಾಲ ಈ ಬಿಸಿ ಎಣ್ಣೆಯಿಂದ ನಿಮ್ಮ ನೆತ್ತಿಯನ್ನು ಮಸಾಜ್ ಮಾಡಿ. ಬಳಿಕ ಒಂದು ಗಂಟೆ ಬಿಟ್ಟು ತಲೆ ಸ್ನಾನ ಮಾಡಿ. ಇದರಿಂದ ಕೂದಲು ಉದುರುವುದು ಕಡಿಮೆಯಾಗುತ್ತದೆ. ಹಾಗೂ ಕೂದಲ ಬೆಳವಣಿಗೆ ಆಗಲು ಕೂಡ ಇದು ಸಹಾಯ ಮಾಡುತ್ತದೆ.
ನೈಸರ್ಗಿಕ ರಸಗಳು ಬೆಳ್ಳುಳ್ಳಿ ರಸ, ಈರುಳ್ಳಿ ರಸ ಅಥವಾ ಶುಂಠಿಯ ರಸವನ್ನು ತೆಗೆದುಕೊಂಡು ಕೆಲವು ನಿಮಿಷಗಳ ಕಾಲ ನಿಮ್ಮ ನೆತ್ತಿಯನ್ನು ಮಸಾಜ್ ಮಾಡಿ. ಇದು ಉತ್ತಮ ಕೂದಲು ಬೆಳವಣಿಗೆಯನ್ನು ಸಹಾಯಕಾರಿ ಹಾಗೂ ಕೂದಲು ಉದುರುವುದನ್ನು ತಡೆಯುತ್ತದೆ.
ಯೋಗಾಸನ ಕೂದಲು ಉದುರುವಿಕೆಯನ್ನು ತಡೆಯಲು ಮತ್ತು ಕೂದಲ ಬೆಳವಣಿಗೆಯನ್ನು ಸುಧಾರಿಸಲು ಖಾಲಿ ಹೊಟ್ಟೆಯಲ್ಲಿ ಪ್ರತಿನಿತ್ಯ ಬೆಳಿಗ್ಗೆ ಅಥವಾ ಸಂಜೆ ಯೋಗಾಸನ ಮಾಡಬೇಕು. ಯೋಗಾಸನ ಮಾಡುವುದರಿಂದ ಒತ್ತಡ ಕಡಿಮೆಯಾಗುತ್ತದೆ. ಸೂರ್ಯನಮಸ್ಕಾರ, ವಜ್ರಾಸನ, ಸರ್ವಂಗಾಸನ,ಹಲಾಸನ. ಪ್ರಾಣಾಯಾಮ ಮಾಡಿದರೆ ಉಳ್ಳೆದು.ಕೂದಲು ಉದುರುವಿಕೆಯನ್ನು ನೈಸರ್ಗಿಕವಾಗಿ ನಿಲ್ಲಿಸುವುದರಲ್ಲಿ ಪ್ರಾಣಾಯಾಮ ಪ್ರಮುಖ ಪಾತ್ರ ವಹಿಸುತ್ತದೆ. ನಿತ್ಯವೂ ಪ್ರಾಣಾಯಾಮ ಮಾಡುವುದರಿಂದ ಒತ್ತಡ ಮತ್ತು ಖಿನ್ನತೆ ಕಡಿಮೆಯಾಗುತ್ತದೆ. ನಿಮ್ಮ ಒತ್ತಡ ಮತ್ತು ಖಿನ್ನತೆಯನ್ನು ನೀವು ಕಡಿಮೆ ಮಾಡಿದರೆ, ನೀವು ಕೂದಲ ಉದುರುವಿಕೆಯನ್ನು ಕಡಿಮೆಗೊಳಿಸಬಹುದು. ಹೆಚ್ಚಿನ ಸಂದರ್ಭಗಳಲ್ಲಿ ಒತ್ತಡ ಮತ್ತು ಖಿನ್ನತೆಯೇ ಹೇರ್ ಫಾಲ್ಗೆ ಕಾರಣವಾಗಿರುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಚುನಾವಣಾ ರಣರಂಗ ದಿನೇ ದಿನೇ ಹೆಚ್ಚು ಹಾಮಾನಾ ಸೆಳೆಯುತ್ತಿದ್ದು, ಮತದಾನ ಮಾಡುವುದಕ್ಕೆ ಇನ್ನೇನು ಕೆಲವೇ ದಿನಗಳು ಬಾಕಿಯಿವೆ. ಈಗಾಗಲೇ ಬಿಜೆಪಿ ಮತ್ತು ಜೆಡಿಎಸ್ ತಮ್ಮ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ್ದವು. ಆದರೆ ಕಾಂಗ್ರೆಸ್ ಮಾತ್ರ ತಾಳ್ಮೆ ತೆಗೆದುಕೊಂಡಿತ್ತು.. ಆದರೆ ನೆನ್ನೆ ಸಂಜೆ ವೇಳೆಗೆ ತನ್ನ ಮೊದಲ ಪಟ್ಟಿಯಲ್ಲಿ ಬಹುತೇಕ ಕರ್ನಾಟಕ ರಾಜ್ಯದ ವಿಧಾನಸಭಾ ಅಭ್ಯರ್ಥಿಗಳ ಹೆಸರನ್ನು ಒಂದೇ ಪಟ್ಟಿಯಲ್ಲಿ ಬಿಡುಗಡೆ ಮಾಡಿದೆ. ನಿನ್ನೆ ದೆಹಲಿಯಿಂದ ಬೆಂಗಳೂರಿಗೆ ಬಂಡ ಜಿ…
ಹಿಂದೂ ಧರ್ಮದಲ್ಲಿ ಬಣ್ಣಕ್ಕೂ, ಶಕುನಕ್ಕೂ ಸಂಬಂಧವಿದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಪ್ರತಿಯೊಂದು ಬಣ್ಣಕ್ಕೂ ಅದ್ರದೇ ಆದ ಮಹತ್ವ, ಪ್ರಾಮುಖ್ಯತೆಯಿರುತ್ತದೆ. ವಾರದಲ್ಲಿ ಏಳು ದಿನ ಏಳು ದೇವತೆಗಳ ಆಧಾರದ ಮೇಲೆ ಬಣ್ಣಕ್ಕೆ ಶುಭ-ಅಶುಭ ಸ್ಥಾನ ನೀಡಲಾಗಿದೆ. ಶಾಸ್ತ್ರಗಳ ಪ್ರಕಾರ, ಗುರುವಾರ ಹಳದಿ ಬಣ್ಣ ಶ್ರೇಷ್ಠ. ಗುರುವಾರ ಹಳದಿ ಬಟ್ಟೆ ಧರಿಸಿದ ಹುಡುಗಿ ಕಣ್ಣ ಮುಂದೆ ಬಂದ್ರೆ ಶೀಘ್ರವೇ ಜೀವನದಲ್ಲಿ ಧನಪ್ರಾಪ್ತಿಯಾಗಲಿದೆ ಎಂದರ್ಥ. ಇನ್ನು ಶುಕ್ರವಾರದ ದಿನ ಅಂಗೈ ತುರಿಸಿದ್ರೆ ಹಣ ಪ್ರಾಪ್ತಿಯಾಗಲಿದೆ ಎಂದರ್ಥ. ಆದಷ್ಟು ಬೇಗ ಆರ್ಥಿಕ ಸಮಸ್ಯೆ…
ಈ ಮಗು ತಿಂಗಳಿಗೆ 2 ಕೆಜಿ ಜಾಸ್ತಿ ಆಗ್ತಾ ಇದೆಯಂತೆ! ಮಗುವಿನ ತೂಕ ಹೆಚ್ಚಾಗದಂತೆ ತಡೆಯಲು ಹೆತ್ತವರು ಚಿಕಿತ್ಸೆ ಕೊಡಿಸುತ್ತಿದ್ದಾರೆ. ಚಿಕಿತ್ಸೆಗಾಗಿಯೇ ತಿಂಗಳಿಗೆ ಬರೋಬ್ಬರಿ 2.5 ಇಂದ 3 ಲಕ್ಷ ರೂಪಾಯಿ ಖರ್ಚಾಗುತ್ತಿದೆಯಂತೆ.
ನವದೆಹಲಿ: ರೈಲ್ವೆ ಸೇವೆಯನ್ನು ಇನ್ನಷ್ಟು ದಕ್ಷ ಹಾಗೂ ಜನಸ್ನೇಹಿಯಾಗಿಸುವ ನಿಟ್ಟಿನಲ್ಲಿ ಹೊಸ ಹೊಸ ಕ್ರಮಗಳನ್ನು ಕೈಗೊಳ್ಳುತ್ತಿರುವ ಕೇಂದ್ರ ಸರ್ಕಾರ ಈಗ ಖಾಸಗಿ ಕಂಪನಿಗಳಿಗೆ ರೈಲು ನಿರ್ವಹಣೆ ಜವಾಬ್ದಾರಿಯನ್ನು ವರ್ಗಾಯಿಸುವ ಬಗ್ಗೆ ಚಿಂತನೆ ನಡೆಸಿದೆ. ಯೋಜನೆಯ ಪ್ರಕಾರ, ಈ ಬಗ್ಗೆ ಮುಂದಿನ 100 ದಿನಗಳಲ್ಲಿ ಟೆಂಡರ್ ಆಹ್ವಾನಿಸಲು ನಿರ್ಧರಿಸಲಾಗಿದೆ. ಕಡಿಮೆ ದಟ್ಟಣೆ ಇರುವ ಮತ್ತು ಪ್ರವಾಸಿ ಸ್ಥಳಗಳಿಗೆ ಸಾಗುವ ರೈಲುಗಳನ್ನು ಮಾತ್ರ ಆರಂಭದಲ್ಲಿ ಖಾಸಗಿ ಕಂಪನಿಗಳಿಗೆ ನೀಡಲಾಗುತ್ತದೆ. ಐಆರ್ಸಿಟಿಸಿ ಜೊತೆಗೆ ಪ್ರಯೋಗ: ರೈಲುಗಳನ್ನು ಖಾಸಗಿಗೆ ನಿರ್ವಹಣೆಗಾಗಿ ನೀಡುವುದಕ್ಕೂ ಮುನ್ನ…
ನಾಗವಲ್ಲಿ ಪಾತ್ರ ಜನಪ್ರಿಯವಾದ ಕಾರಣ ಅದೇ ಹೆಸರಿನಲ್ಲಿ ಸಿನಿಮಾ ಸಹ ಆಗಿದೆ. ಆದರೆ, ಚಿತ್ರರಂಗದವರು ಅಷ್ಟಕ್ಕೇ ಬಿಡುವ ಹಾಗೆ ಕಾಣುತ್ತಿಲ್ಲ. ವಿಷ್ಣುವರ್ಧನ್ ಮತ್ತು ಸೌಂದರ್ಯ ಅವರ ಸಾವಿಗೆ ಅದೇ ನಾಗವಲ್ಲಿ ಕಾರಣನಾ ಎಂಬ ವಿಷಯವನ್ನಿಟ್ಟುಕೊಂಡು ಸಿನಿಮಾ ಮಾಡುವ ಪ್ರಯತ್ನ ಸದ್ದಿಲ್ಲದೆ ಕನ್ನಡ ಚಿತ್ರರಂಗದಲ್ಲಿ ಆಗಿದೆ.
ಶಂಕರಪುರ ಸೈಂಟ್ ಜೋನ್ಸ್ ಫ್ರೌಢ ಶಾಲಾ ಭಾರತ ಸೇವಾದಳ, ಸ್ಕೌಟ್, ಗೈಡ್ಸ್, ನೇಸರ ಹಸಿರುಪಡೆಯ 134 ವಿದ್ಯಾರ್ಥಿಗಳು ಶಂಕರಪುರ ಸಮೀಪದ ಕುರ್ಕಾಲು ಗರಡಿಮನೆ ಪ್ರಗತಿಪರ ಕೃಷಿಕ ವಸಂತ ಪೂಜಾರಿಯವರ ಗದ್ದೆಗೆ ಭೇಟಿ ನೀಡಿದರು. ಟಿಲ್ಲರ್ನಲ್ಲಿ ಉಳುಮೆ ಮಾಡಿದ ಗದ್ದೆಗೆ ಇಳಿದರು. ಭಾರತ ಸೇವಾದಳದ ವಿದ್ಯಾರ್ಥಿಗಳು ಇತರ ವಿದ್ಯಾರ್ಥಿಗಳ ಸಹಭಾಗಿತ್ವದಲ್ಲಿ “ಸಾರೇ ಜಾಹಾಂಸೆ ಅಚ್ಚಾ,,,, ಹಿಂದೂಸ್ತಾನ್ ಹಮಾರಾ..! ಗೀತೆಯನ್ನು ಸಾಮೂಹಿವಾಗಿ ಅಭಿನಯದ ಮೂಲಕ ಹಾಡಿದರು. ಗದ್ದೆಯಲ್ಲಿ ಹೆಜ್ಜೆಯ ಮೇಲೆ ಹೆಜ್ಜೆಯನ್ನಿಡುತ್ತಾ, ಸಂಭ್ರಮಿಸಿದರು. ಕೆಸರುಗದ್ದೆಯಲ್ಲಿ ಇಳಿದ ಪ್ರಥಮ ಅನುಭವದ ವಿದ್ಯಾರ್ಥಿಗಳು…