ಸುದ್ದಿ

ಹೇರ್ ಫಾಲ್ ಟೆನ್ಶನ್ ಇಲ್ಲಿಗೆ ಬಿಡಿ, ಇನ್ಮುಂದೆ ನ್ಯಾಚುರಲ್ ಪರಿಹಾರ ಟ್ರೈ ಮಾಡಿ,..!

181

ತುಂಬಾ ಕೂದಲು ಉದುರುತ್ತಿದೆ ಅಂತ ಚಿಂತೆ ಶುರುವಾಗಿದ್ಯಾ? ಕೂದಲು ಯಾಕೆ ಉದುರುತ್ತೆ? ಈ ಸಮಸ್ಯೆಗೆ ನೈಸರ್ಗಿಕ ಮದ್ದು ಏನು? ಯಾವೆಲ್ಲಾ ಆಹಾರವನ್ನೂ ಸೇವಿಸಬೇಕು? ಹೇಗೆ ಕೂದಲಿನ ರಕ್ಷಣೆ ಮಾಡಬೇಕು ಎನ್ನುವ ಚಿಂತೆಯಲ್ಲಿದ್ದೀರಾ? ಏನಪ್ಪಾ ಮಾಡೋದು ಈ ಸಮಸ್ಯೆಗೆ ಅಂತ ಯೋಚನೆ ಮಾಡೋದನ್ನ ಬಿಡಿ.

ಸಾಮಾನ್ಯವಾಗಿ ಎಲ್ಲರನ್ನೂ ಕಾಡುವ ಸಮಸ್ಯೆ ಅಂದ್ರೆ ಅದು ಹೇರ್ ಫಾಲ್. ದೇಹಕ್ಕೆ ಆರೋಗ್ಯಕರ, ಪೌಷ್ಠಿಕಾಂಶವುಳ್ಳ ಆಹಾರ ಸೇವಿಸದಿದ್ದರೆ ಈ ಹೇರ್ ಫಾಲ್ ಸಮಸ್ಯೆ ಬರುತ್ತದೆ. ಅಲ್ಲದೆ ಅತಿಯಾದ ಯೋಚನೆ, ನಿದ್ರಾಹೀನತೆ ಹಾಗೂ ಟೆನ್ಶನ್‍ನಿಂದ ಕೂಡ ಕೂದಲು ಉದುರೋಕೆ ಶುರುವಾಗುತ್ತದೆ. ಸಾಮಾನ್ಯವಾಗಿ ಎಲ್ಲರಿಗೂ ಕೂದಲು ಉದುರತ್ತೆ. ಆದ್ರೆ ಕೂದಲು ಉದುರಿರುವ ಸ್ಥಳದಲ್ಲಿ ಮತ್ತೆ ಕೂದಲು ಬೆಳೆಯದಿದ್ದರೆ ಅದಕ್ಕೆ ಹೇರ್ ಫಾಲ್ ಸಮಸ್ಯೆ ಎನ್ನುತ್ತಾರೆ. ನಾವು ತಿಳಿಸುವ ಸುಲಭ ಹಾಗೂ ನೈಸರ್ಗಿಕ ಮದ್ದನ್ನು ಹಾಗೂ ಕೆಲವು ಆರೋಗ್ಯದ ಸಲಹೆಯನ್ನು ಪಾಲಿಸಿದರೆ ನೀವು ನಿಮ್ಮ ಹೇರ್ ಫಾಲ್ ಸಮಸ್ಯೆಯಿಂದ ಹೊರಬರಬಹುದು. ಹೌದು ಆ ಸುಲಭ, ನೈಸರ್ಗಿಕ ಸಲಹೆಗಳು ಇಲ್ಲಿವೆ ನೋಡಿ.

ಯಾವೆಲ್ಲಾ ವಿಟಮಿನ್ಸ್ ಬರಿತ ಆಹಾರ ಸೇವಿಸಬೇಕು ಹೇರ್ ಫಾಲ್ ನಿಯಂತ್ರಿಸಲು ವಿಟಿಮಿನ್-ಎ, ವಿಟಮಿನ್-ಬಿ, ಓಮೆಗಾ-3 ಹಾಗೂ ವಿಟಮಿನ್-ಇ ಸಮೃದ್ಧವಾಗಿರುವ ಆಹಾರವನ್ನು ಸೇವಿಸಬೇಕು. ಇದರಿಂದ ಕೂದಲ ಬೆಳವಣಿಗೆಗೆ ಉತ್ತಮ ವಿಟಮಿನ್ ಅಂಶ ದೊರಕಿ ಹೇರ್ ಫಾಲ್ ಕಡಿಮೆಯಾಗುತ್ತದೆ.

ಆಂಟಿ ಆಕ್ಸಿಡೆಂಟ್ ಗುಣಗಳುಳ್ಳ ವಿಟಮಿನ್-ಎ ಪದಾರ್ಥಗಳು ಆರೋಗ್ಯಕರ ಕೂದಲು ಮತ್ತು ಕೂದಲು ಬೆಳವಣಿಗೆಯನ್ನು ಉತ್ತೇಜಿಸುತ್ತದೆ. ಸಿಹಿ ಆಲೂಗೆಡ್ಡೆ, ಕ್ಯಾರೆಟ್, ಕರಿಬೇವಿನ ಸೊಪ್ಪು, ಒಣಗಿದ ಏಪ್ರಿಕಾಟ್, ಸ್ವೀಟ್ ಕೆಂಪು ಮೆಣಸು, ಟ್ಯೂನಾ ಮೀನು, ಉಷ್ಣವಲಯದ ಹಣ್ಣುಗಳು(ಮಾವು) ವಿಟಮಿನ್-ಎ ಅಂಶವನ್ನು ಒಳಗೊಂಡಿರುತ್ತದೆ. ಇದು ಕೂದಲ ಬೆಳವಣಿಗೆಯನ್ನು ಉತ್ತೇಜಿಸುತ್ತದೆ ಮತ್ತು ಕೂದಲು ನಷ್ಟವನ್ನು ತಡೆಯುತ್ತದೆ. ಮೊಟ್ಟೆ, ಮೀನು, ಮತ್ತು ಹಾಲು ನಮ್ಮ ಆಹಾರದಲ್ಲಿ ಒಮೆಗಾ -3 ಅಂಶವಿರುತ್ತದೆ. ಬೀಜಗಳು (ಬಾದಾಮಿ), ಶೆಲ್ಫಿಶ್, ಮೀನು, ಆಲಿವ್ ಎಣ್ಣೆ, ಬ್ರೊಕೊಲಿನಲ್ಲಿ ವಿಟಮಿನ್ ಇ ಅಂಶ ಅಡಕವಾಗಿರುತ್ತದೆ. ವಿಟಮಿನ್ ಇ ಆರೋಗ್ಯ ಸುಧಾರಣೆಗೆ ಸಹಾಯ ಮಾಡಿ ದೇಹದಲ್ಲಿ ರಕ್ತದ ಸಂಚಲನವನ್ನು ಉತ್ತಮಗೊಳಿಸುತ್ತದೆ. ಮಾಂಸ, ಮೊಟ್ಟೆಗಳು, ಮೀನುಗಳು ಅಥವಾ ಡೈರಿ ಆಹಾರಗಳು ವಿಟಮಿನ್-ಬಿಯಿಂದ ಸಮೃದ್ಧವಾಗಿವೆ. ಈ ವಿಟಮಿನ್‍ಗಳು ಮೆಲನಿನ್ ಅನ್ನು ಉತ್ಪಾದಿಸಲು ಸಹಾಯ ಮಾಡುತ್ತವೆ, ಇದು ಕೂದಲಿಗೆ ಆರೋಗ್ಯಕರ ಬಣ್ಣವನ್ನು ನೀಡುತ್ತದೆ. ಜೊತೆಗೆ ರಕ್ತ ಸಂಚಲವನ್ನು ಸುಧಾರಿಸುತ್ತದೆ ಮತ್ತು ಕೂದಲು ಉದುರುವಿಕೆಯನ್ನು ನಿಲ್ಲುಸುತ್ತದೆ.


ಹೆಡ್ ಮಸಾಜ್  ಪ್ರತಿ ನಿತ್ಯ 15 ನಿಮಿಷಗಳ ಕಾಲ ನಿಮ್ಮ ತಲೆಯನ್ನು ಮಸಾಜ್ ಮಾಡುವುದರಿಂದ ನೆತ್ತಿಯಲ್ಲಿ ರಕ್ತ ಸಂಚಲನ ಉತ್ತಮ ರೀತಿಯಲ್ಲಿ ಆಗುತ್ತದೆ. ತಲೆ ಮಸಾಜ್ ಮಾಡಲು ತೆಂಗಿನ ಎಣ್ಣೆ ಅಥವಾ ಬಾದಾಮಿ ತೈಲವನ್ನು ಬಳಸಿದರೆ ಉತ್ತಮ. ಯಾಕೆಂದರೆ ಬಾದಾಮಿ ತೈಲ ನಿಮ್ಮ ನೆತ್ತಿಯನ್ನು ಮೃದುಗೊಳಿಸುವುದು. ಸಾಧ್ಯವಾದರೆ, ವಾರಕ್ಕೆ ಕನಿಷ್ಠ ಎರಡು ಬಾರಿ ಕೂದಲು ಉದುರುವಿಕೆಯನ್ನು ನಿಲ್ಲಿಸಲು ಬಾದಾಮಿ ತೈಲದಿಂದ ತಲೆಗೆ ಮಸಾಜ್ ಮಾಡಿಕೊಳ್ಳಿ ಉತ್ತಮ ಫಲಿತಾಂಶ ಪಡೆಯಿರಿ.

ಮೊಟ್ಟೆ  ವಾರದಲ್ಲಿ ಎರಡು ಬಾರಿ ಮೊಟ್ಟೆಯ ಬಿಳಿಯ ಬಿಳಿಯ ಭಾಗವನ್ನು ಬೇರ್ಪಡಿಸಿ ಅದನ್ನು ನಿಮ್ಮ ನೆತ್ತಿಯನ್ನು ಮಸಾಜ್ ಮಾಡುವುದರಿಂದ ಇದು ನಿಮ್ಮ ಕೂದಲನ್ನು ಬಲಪಡಿಸುತ್ತದೆ ಮತ್ತು ಪೋಷಣೆ ನೀಡುತ್ತದೆ. ಕೂದಲು ಉದುರುವಿಕೆಯನ್ನು ತಡೆಗಟ್ಟಿ ಕೂದಲು ವೇಗವಾಗಿ ಬೆಳೆಯಲು ಸಹಾಯ ಮಾಡುತ್ತದೆ.

ಬಿಸಿ ತೈಲ ಮಸಾಜ್  ತೆಂಗಿನ ಎಣ್ಣೆ, ಆಲಿವ್ ಎಣ್ಣೆ ಅಥವಾ ಕ್ಯಾನೋಲ ಎಣ್ಣೆಯನ್ನು ತೆಗೆದುಕೊಂಡು ಅದನ್ನು ಕೊಂಚ ಬಿಸಿ ಮಾಡಿ, ಕೆಲವು ನಿಮಿಷಗಳ ಕಾಲ ಈ ಬಿಸಿ ಎಣ್ಣೆಯಿಂದ ನಿಮ್ಮ ನೆತ್ತಿಯನ್ನು ಮಸಾಜ್ ಮಾಡಿ. ಬಳಿಕ ಒಂದು ಗಂಟೆ ಬಿಟ್ಟು ತಲೆ ಸ್ನಾನ ಮಾಡಿ. ಇದರಿಂದ ಕೂದಲು ಉದುರುವುದು ಕಡಿಮೆಯಾಗುತ್ತದೆ. ಹಾಗೂ ಕೂದಲ ಬೆಳವಣಿಗೆ ಆಗಲು ಕೂಡ ಇದು ಸಹಾಯ ಮಾಡುತ್ತದೆ.

ನೈಸರ್ಗಿಕ ರಸಗಳು  ಬೆಳ್ಳುಳ್ಳಿ ರಸ, ಈರುಳ್ಳಿ ರಸ ಅಥವಾ ಶುಂಠಿಯ ರಸವನ್ನು ತೆಗೆದುಕೊಂಡು ಕೆಲವು ನಿಮಿಷಗಳ ಕಾಲ ನಿಮ್ಮ ನೆತ್ತಿಯನ್ನು ಮಸಾಜ್ ಮಾಡಿ. ಇದು ಉತ್ತಮ ಕೂದಲು ಬೆಳವಣಿಗೆಯನ್ನು ಸಹಾಯಕಾರಿ ಹಾಗೂ ಕೂದಲು ಉದುರುವುದನ್ನು ತಡೆಯುತ್ತದೆ.


ಯೋಗಾಸನ ಕೂದಲು ಉದುರುವಿಕೆಯನ್ನು ತಡೆಯಲು ಮತ್ತು ಕೂದಲ ಬೆಳವಣಿಗೆಯನ್ನು ಸುಧಾರಿಸಲು ಖಾಲಿ ಹೊಟ್ಟೆಯಲ್ಲಿ ಪ್ರತಿನಿತ್ಯ ಬೆಳಿಗ್ಗೆ ಅಥವಾ ಸಂಜೆ ಯೋಗಾಸನ ಮಾಡಬೇಕು. ಯೋಗಾಸನ ಮಾಡುವುದರಿಂದ ಒತ್ತಡ ಕಡಿಮೆಯಾಗುತ್ತದೆ. ಸೂರ್ಯನಮಸ್ಕಾರ, ವಜ್ರಾಸನ, ಸರ್ವಂಗಾಸನ,ಹಲಾಸನ. ಪ್ರಾಣಾಯಾಮ ಮಾಡಿದರೆ ಉಳ್ಳೆದು.ಕೂದಲು ಉದುರುವಿಕೆಯನ್ನು ನೈಸರ್ಗಿಕವಾಗಿ ನಿಲ್ಲಿಸುವುದರಲ್ಲಿ ಪ್ರಾಣಾಯಾಮ ಪ್ರಮುಖ ಪಾತ್ರ ವಹಿಸುತ್ತದೆ. ನಿತ್ಯವೂ ಪ್ರಾಣಾಯಾಮ ಮಾಡುವುದರಿಂದ ಒತ್ತಡ ಮತ್ತು ಖಿನ್ನತೆ ಕಡಿಮೆಯಾಗುತ್ತದೆ. ನಿಮ್ಮ ಒತ್ತಡ ಮತ್ತು ಖಿನ್ನತೆಯನ್ನು ನೀವು ಕಡಿಮೆ ಮಾಡಿದರೆ, ನೀವು ಕೂದಲ ಉದುರುವಿಕೆಯನ್ನು ಕಡಿಮೆಗೊಳಿಸಬಹುದು. ಹೆಚ್ಚಿನ ಸಂದರ್ಭಗಳಲ್ಲಿ ಒತ್ತಡ ಮತ್ತು ಖಿನ್ನತೆಯೇ ಹೇರ್ ಫಾಲ್‍ಗೆ ಕಾರಣವಾಗಿರುತ್ತದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ನಾಯಿ ಸಾಕಾಣಿಕೆ ಇಂದ ಹೃದಯ ಆರೋಗ್ಯವಾಗಿ ಇರುತ್ತಂತೆ!

    ಕೆಲವರಿಗೆ ನಾಯಿ ಎಂದರೆ ಅಪಾರ ಪ್ರೀತಿ. ಅವರು ಹೋದಲ್ಲಿ ಬಂದಲ್ಲಿ ಎಲ್ಲಾ ಕಡೆ ನಾಯಿ ಜೊತೆಗಿರಬೇಕು. ಇನ್ನು ಕೆಲವರು ನಾಯಿ ಎಂದರೆ ಮೂಗು ಮುರಿಯುತ್ತಾರೆ. ಆದರೆ ನಾಯಿ ಸಾಕುವುದರಿಂದ ಹೃದಯದ ಆರೋಗ್ಯ ಚೆನ್ನಾಗಿರುತ್ತದೆ. ಹಾಗೂ ಅವರಲ್ಲಿ ಹೃದಯ ಸಂಬಂಧಿ ರೋಗಗಳೂ ಕಡಿಮೆ ಎಂದು ಸಮೀಕ್ಷೆಯೊಂದು ಹೇಳುತ್ತಿದೆ. ಅದರಲ್ಲೂ ನಗರಗಳಲ್ಲಿ ನಾಯಿ ಸಾಕುವುದರಿಂದ ಆ ಮನೆಯವರಿಗೆ ಪ್ರಯೋಜನ ಹೆಚ್ಚು ಎಂದು ವಿಜ್ಞಾನಿಗಳ ತಂಡವೊಂದು ಹೇಳಿದೆ. ಹಲವಾರು ಸಮೀಕ್ಷೆಗಳ ಪ್ರಕಾರ ನಾಯಿ ಮಾಲಿಕರಿಗೆ ರಕ್ತದೊತ್ತಡ ಕಡಿಮೆ ಇರುತ್ತದೆ. ಕಾರಣ ಸಾಕಿದ…

  • ಸುದ್ದಿ

    ಬ್ರೆಕಿಂಗ್ ಸುದ್ದಿ..ಮುದ್ದಹನುಮೇಗೌಡರು ತಮ್ಮ ನಾಮಪತ್ರ ಹಿಂಪಡೆಯುವುದು ಖಚಿತ.?ಈ ಸುದ್ದಿ ನೋಡಿ

    ತುಮಕೂರು ಲೋಕಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ಮುಂದಾಗಿದ್ದ ಕಾಂಗ್ರೆಸ್ ಸಂಸದ ಮುದ್ದಹನುಮೇಗೌಡ, ಪಕ್ಷದ ನಾಯಕರ ಒತ್ತಡಕ್ಕೆ ಮಣಿದಿದ್ದು, ಚುನಾವಣಾ ಕಣದಿಂದ ಹಿಂದೆ ಸರಿಯಲು ಸಮ್ಮತಿಸಿದ್ದಾರೆನ್ನಲಾಗಿದೆ. ಮುದ್ದಹನುಮೇಗೌಡರು ತುಮಕೂರು ಕ್ಷೇತ್ರದ ಹಾಲಿ ಸಂಸದರಾಗಿದ್ದರೂ ಸಹ ಲೋಕಸಭಾ ಚುನಾವಣೆಗೆ ರಾಜ್ಯದಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದ ಹಿನ್ನಲೆಯಲ್ಲಿ ಈ ಕ್ಷೇತ್ರವನ್ನು ಜೆಡಿಎಸ್ ಗೆ ಬಿಟ್ಟುಕೊಡಲಾಗಿತ್ತು. ಈ ಹಿನ್ನಲೆಯಲ್ಲಿ ತುಮಕೂರು ಲೋಕಸಭಾ ಕ್ಷೇತ್ರದಿಂದ ಜೆಡಿಎಸ್ ವರಿಷ್ಟ ಹೆಚ್.ಡಿ. ದೇವೇಗೌಡರು ಕಣಕ್ಕಿಳಿದಿದ್ದು, ಮುದ್ದಹನುಮೇಗೌಡರು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ಮುಂದಾಗಿದ್ದರಿಂದ ಮೈತ್ರಿ…

  • ಸುದ್ದಿ

    ಆದಿವಾಸಿಗಳ ಪಾಲಿಗೆ ಮರಣ ಶಾಸನವಾದ ನೂತನ ಅರಣ್ಯ ಕಾಯ್ದೆ,.ಇದನ್ನೊಮ್ಮೆ ಓದಿ …!

    ಈ ನೆಲದ ಮೂಲನಿವಾಸಿಗಳಾದ ಆದಿವಾಸಿಗಳ ಬದುಕು ಮತ್ತೊಮ್ಮೆ ಬೀದಿಗೆ ಬೀಳುವ ಸಾಧ್ಯತೆ ನಿಚ್ಚಳವಾಗುತ್ತಿದೆ. ಕಳೆದ ಫೆಬ್ರವರಿ 13ರಂದು ಅರಣ್ಯದಿಂದ ಎಲ್ಲರನ್ನು ಒಕ್ಕಲೆಬ್ಬಿಸಬೇಕು ಎಂಬ ಸರ್ವೋಚ್ಛ ನ್ಯಾಯಾಲಯ ನೀಡಿದ ತೀರ್ಪಿನಿಂದಾಗಿ ತೂಗುಕತ್ತಿಯ ಕೆಳೆಗೆ ಬದುಕುತ್ತಿರುವ ಈ ನತದೃಷ್ಟರಿಗೆ ನೆಮ್ಮದಿ ಎಂಬುದು ಜೀವಮಾನದ ಕನಸು ಎಂಬಂತಾಗಿದೆ. ನ್ಯಾಯಾಲಯದ ತೀರ್ಪಿನ ವಿರುದ್ಧ ಕೇಂದ್ರದ ಬುಡಕಟ್ಟು ವ್ಯವಹಾರಗಳ ಸಚಿವಾಲಯವು ಮೇಲ್ಮನವಿ ಸಲ್ಲಿಸುವುದರ ಮೂಲಕ ತಡೆಯಾಜ್ಞೆ ತಂದಿರುವುದರಿಂದ ತಾತ್ಕಾಲಿಕವಾಗಿ ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ. ಈ ತಡೆಯಾಜ್ಞೆಯ ಜೊತೆಗೆ ರಾಷ್ಟ್ರದ ಹದಿನಾಲ್ಕು ರಾಜ್ಯಗಳ ಅರಣ್ಯಗಳಲ್ಲಿ ಬದುಕುತ್ತಿರುವ…

  • ಜ್ಯೋತಿಷ್ಯ

    ವಿಘ್ನ ವಿನಾಯಕನನ್ನು ಸ್ಮರಿಸಿ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ನಿಮ್ಮ ಸಭ್ಯ…

  • ಸುದ್ದಿ

    ನನಗೆ ವಯಸ್ಸಾಗಿದೆ ಗನ್ ಹಿಡಿಯಲು ಸಾಧ್ಯವಿಲ್ಲ!ಅಣ್ಣಾ ಅಜಾರೆಯವರು ಈ ಮಾತನ್ನು ಹೇಳಿದ್ದೇಕೆ ಗೊತ್ತಾ?

    ಜಮ್ಮು ಕಾಶ್ಮೀರದಲ್ಲಿ ನಡೆದ ಉಗ್ರರ ದಾಳಿಯಿಂದ ೪೫ ಜನ ಸೈನಿಕರು ಹುತಾತ್ಮರಾಗಿದ್ದು, ಈ ರಕ್ಕಸರ ಕೃತ್ಯಕ್ಕೆ ಪ್ರತೀಕಾರ ಕೈಗೊಳ್ಳಲೇಬೇಕು ಎಂದು ಪ್ರಧಾನಿ ಮೋದಿಯನ್ನು ಎಲ್ಲರೂ ಒತ್ತಾಯಿಸುತ್ತಿದ್ದಾರೆ. ಈ ನಡುವೆ ಸಾಮಾಜಿಕ ಹೋರಾಟಗಾರ ಅಣ್ಣಾ ಅಜಾರೆ ಅವರು ಹೇಳಿರುವ ಮಾತು ಎಂತಹವರಲ್ಲೂ ರಕ್ತ ಕುದಿಯುವಂತೆ ಮಾಡಿದೆ.ನಮ್ಮ ಯೋಧರಿಗೆ ಸಹಾಯ ಮಾಡಲು ಸೇನಾ ವಾಹನದ ಡ್ರೈವರ್ ಆಗಿ ಕೆಲಸ ಮಾಡಲು ಶಕ್ತಿ ನನಗೆ ಇದೆ ಎಂದು ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ಹೇಳಿದ್ದಾರೆ. ಲೋಕಪಾಲ ಮಸೂದೆ ಜಾರಿಗೆ ಒತ್ತಾಯಿಸಿ ಉಪವಾಸ…

  • ಆರೋಗ್ಯ

    ನೀವು ತಿಳಿದಿರದ ಕಮರಾಕ್ಷಿ ಮರದ ಉಪಯೋಗಗಳ ಬಗ್ಗೆ ತಿಳಿಯಲು ಈ ಲೇಖನ ಓದಿ..

    ನಮ್ಮ ದೇಶದಲ್ಲಿ ಹಣ್ಣಿನ ತೋಟಗಳು, ಕೈತೋಟಗಳು, ಸಸ್ಯೋದ್ಯಾನ, ದೊಡ್ಡ ಕಟ್ಟಡಗಳ ಪೌಳಿಗೋಡೆಯ ಆವರಣ, ಸಾಲುಮರವಾಗಿ, ತೋಟಗಾರಿಕೆ ಸಸಿಮಡಿಗಳು ಮುಂತಾದೆಡೆ ಈ ಹಣ್ಣಿನ ಮರವನ್ನು ಕಾಣಬಹುದು.ಒಂದು ರಸವತ್ತಾದ ಮೃದು ಹಣ್ಣು. ನಮ್ಮಲ್ಲಿ ಇದನ್ನು ಇತರ ದೇಶಗಳಲ್ಲಿದ್ದಂತೆ ವಾಣಿಜ್ಯವಾಗಿ ಯಾರೂ ಬೆಳೆಯುತ್ತಿಲ್ಲ. ಕ್ಯಾಲಿಫೋರ್ನಿಯಾ, ಹವಾಯ್‌, ಚೀನಾ ತೈವಾನ್‌, ಕ್ವೀನ್ಸ್‌ಲ್ಯಾಂಡ್‌ ಮುಂತಾದೆಡೆ ಕಮರಾಕ್ಷಿಯ ಮರಗಳು ಹೆಚ್ಚಿನ ಸಂಖ್ಯೆಯಲ್ಲಿ ಕಂಡುಬರುತ್ತವೆ.