News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

ಹೇರ್ ಫಾಲ್ ಟೆನ್ಶನ್ ಇಲ್ಲಿಗೆ ಬಿಡಿ, ಇನ್ಮುಂದೆ ನ್ಯಾಚುರಲ್ ಪರಿಹಾರ ಟ್ರೈ ಮಾಡಿ,..!

193

ತುಂಬಾ ಕೂದಲು ಉದುರುತ್ತಿದೆ ಅಂತ ಚಿಂತೆ ಶುರುವಾಗಿದ್ಯಾ? ಕೂದಲು ಯಾಕೆ ಉದುರುತ್ತೆ? ಈ ಸಮಸ್ಯೆಗೆ ನೈಸರ್ಗಿಕ ಮದ್ದು ಏನು? ಯಾವೆಲ್ಲಾ ಆಹಾರವನ್ನೂ ಸೇವಿಸಬೇಕು? ಹೇಗೆ ಕೂದಲಿನ ರಕ್ಷಣೆ ಮಾಡಬೇಕು ಎನ್ನುವ ಚಿಂತೆಯಲ್ಲಿದ್ದೀರಾ? ಏನಪ್ಪಾ ಮಾಡೋದು ಈ ಸಮಸ್ಯೆಗೆ ಅಂತ ಯೋಚನೆ ಮಾಡೋದನ್ನ ಬಿಡಿ.

ಸಾಮಾನ್ಯವಾಗಿ ಎಲ್ಲರನ್ನೂ ಕಾಡುವ ಸಮಸ್ಯೆ ಅಂದ್ರೆ ಅದು ಹೇರ್ ಫಾಲ್. ದೇಹಕ್ಕೆ ಆರೋಗ್ಯಕರ, ಪೌಷ್ಠಿಕಾಂಶವುಳ್ಳ ಆಹಾರ ಸೇವಿಸದಿದ್ದರೆ ಈ ಹೇರ್ ಫಾಲ್ ಸಮಸ್ಯೆ ಬರುತ್ತದೆ. ಅಲ್ಲದೆ ಅತಿಯಾದ ಯೋಚನೆ, ನಿದ್ರಾಹೀನತೆ ಹಾಗೂ ಟೆನ್ಶನ್‍ನಿಂದ ಕೂಡ ಕೂದಲು ಉದುರೋಕೆ ಶುರುವಾಗುತ್ತದೆ. ಸಾಮಾನ್ಯವಾಗಿ ಎಲ್ಲರಿಗೂ ಕೂದಲು ಉದುರತ್ತೆ. ಆದ್ರೆ ಕೂದಲು ಉದುರಿರುವ ಸ್ಥಳದಲ್ಲಿ ಮತ್ತೆ ಕೂದಲು ಬೆಳೆಯದಿದ್ದರೆ ಅದಕ್ಕೆ ಹೇರ್ ಫಾಲ್ ಸಮಸ್ಯೆ ಎನ್ನುತ್ತಾರೆ. ನಾವು ತಿಳಿಸುವ ಸುಲಭ ಹಾಗೂ ನೈಸರ್ಗಿಕ ಮದ್ದನ್ನು ಹಾಗೂ ಕೆಲವು ಆರೋಗ್ಯದ ಸಲಹೆಯನ್ನು ಪಾಲಿಸಿದರೆ ನೀವು ನಿಮ್ಮ ಹೇರ್ ಫಾಲ್ ಸಮಸ್ಯೆಯಿಂದ ಹೊರಬರಬಹುದು. ಹೌದು ಆ ಸುಲಭ, ನೈಸರ್ಗಿಕ ಸಲಹೆಗಳು ಇಲ್ಲಿವೆ ನೋಡಿ.

ಯಾವೆಲ್ಲಾ ವಿಟಮಿನ್ಸ್ ಬರಿತ ಆಹಾರ ಸೇವಿಸಬೇಕು ಹೇರ್ ಫಾಲ್ ನಿಯಂತ್ರಿಸಲು ವಿಟಿಮಿನ್-ಎ, ವಿಟಮಿನ್-ಬಿ, ಓಮೆಗಾ-3 ಹಾಗೂ ವಿಟಮಿನ್-ಇ ಸಮೃದ್ಧವಾಗಿರುವ ಆಹಾರವನ್ನು ಸೇವಿಸಬೇಕು. ಇದರಿಂದ ಕೂದಲ ಬೆಳವಣಿಗೆಗೆ ಉತ್ತಮ ವಿಟಮಿನ್ ಅಂಶ ದೊರಕಿ ಹೇರ್ ಫಾಲ್ ಕಡಿಮೆಯಾಗುತ್ತದೆ.

ಆಂಟಿ ಆಕ್ಸಿಡೆಂಟ್ ಗುಣಗಳುಳ್ಳ ವಿಟಮಿನ್-ಎ ಪದಾರ್ಥಗಳು ಆರೋಗ್ಯಕರ ಕೂದಲು ಮತ್ತು ಕೂದಲು ಬೆಳವಣಿಗೆಯನ್ನು ಉತ್ತೇಜಿಸುತ್ತದೆ. ಸಿಹಿ ಆಲೂಗೆಡ್ಡೆ, ಕ್ಯಾರೆಟ್, ಕರಿಬೇವಿನ ಸೊಪ್ಪು, ಒಣಗಿದ ಏಪ್ರಿಕಾಟ್, ಸ್ವೀಟ್ ಕೆಂಪು ಮೆಣಸು, ಟ್ಯೂನಾ ಮೀನು, ಉಷ್ಣವಲಯದ ಹಣ್ಣುಗಳು(ಮಾವು) ವಿಟಮಿನ್-ಎ ಅಂಶವನ್ನು ಒಳಗೊಂಡಿರುತ್ತದೆ. ಇದು ಕೂದಲ ಬೆಳವಣಿಗೆಯನ್ನು ಉತ್ತೇಜಿಸುತ್ತದೆ ಮತ್ತು ಕೂದಲು ನಷ್ಟವನ್ನು ತಡೆಯುತ್ತದೆ. ಮೊಟ್ಟೆ, ಮೀನು, ಮತ್ತು ಹಾಲು ನಮ್ಮ ಆಹಾರದಲ್ಲಿ ಒಮೆಗಾ -3 ಅಂಶವಿರುತ್ತದೆ. ಬೀಜಗಳು (ಬಾದಾಮಿ), ಶೆಲ್ಫಿಶ್, ಮೀನು, ಆಲಿವ್ ಎಣ್ಣೆ, ಬ್ರೊಕೊಲಿನಲ್ಲಿ ವಿಟಮಿನ್ ಇ ಅಂಶ ಅಡಕವಾಗಿರುತ್ತದೆ. ವಿಟಮಿನ್ ಇ ಆರೋಗ್ಯ ಸುಧಾರಣೆಗೆ ಸಹಾಯ ಮಾಡಿ ದೇಹದಲ್ಲಿ ರಕ್ತದ ಸಂಚಲನವನ್ನು ಉತ್ತಮಗೊಳಿಸುತ್ತದೆ. ಮಾಂಸ, ಮೊಟ್ಟೆಗಳು, ಮೀನುಗಳು ಅಥವಾ ಡೈರಿ ಆಹಾರಗಳು ವಿಟಮಿನ್-ಬಿಯಿಂದ ಸಮೃದ್ಧವಾಗಿವೆ. ಈ ವಿಟಮಿನ್‍ಗಳು ಮೆಲನಿನ್ ಅನ್ನು ಉತ್ಪಾದಿಸಲು ಸಹಾಯ ಮಾಡುತ್ತವೆ, ಇದು ಕೂದಲಿಗೆ ಆರೋಗ್ಯಕರ ಬಣ್ಣವನ್ನು ನೀಡುತ್ತದೆ. ಜೊತೆಗೆ ರಕ್ತ ಸಂಚಲವನ್ನು ಸುಧಾರಿಸುತ್ತದೆ ಮತ್ತು ಕೂದಲು ಉದುರುವಿಕೆಯನ್ನು ನಿಲ್ಲುಸುತ್ತದೆ.


ಹೆಡ್ ಮಸಾಜ್  ಪ್ರತಿ ನಿತ್ಯ 15 ನಿಮಿಷಗಳ ಕಾಲ ನಿಮ್ಮ ತಲೆಯನ್ನು ಮಸಾಜ್ ಮಾಡುವುದರಿಂದ ನೆತ್ತಿಯಲ್ಲಿ ರಕ್ತ ಸಂಚಲನ ಉತ್ತಮ ರೀತಿಯಲ್ಲಿ ಆಗುತ್ತದೆ. ತಲೆ ಮಸಾಜ್ ಮಾಡಲು ತೆಂಗಿನ ಎಣ್ಣೆ ಅಥವಾ ಬಾದಾಮಿ ತೈಲವನ್ನು ಬಳಸಿದರೆ ಉತ್ತಮ. ಯಾಕೆಂದರೆ ಬಾದಾಮಿ ತೈಲ ನಿಮ್ಮ ನೆತ್ತಿಯನ್ನು ಮೃದುಗೊಳಿಸುವುದು. ಸಾಧ್ಯವಾದರೆ, ವಾರಕ್ಕೆ ಕನಿಷ್ಠ ಎರಡು ಬಾರಿ ಕೂದಲು ಉದುರುವಿಕೆಯನ್ನು ನಿಲ್ಲಿಸಲು ಬಾದಾಮಿ ತೈಲದಿಂದ ತಲೆಗೆ ಮಸಾಜ್ ಮಾಡಿಕೊಳ್ಳಿ ಉತ್ತಮ ಫಲಿತಾಂಶ ಪಡೆಯಿರಿ.

ಮೊಟ್ಟೆ  ವಾರದಲ್ಲಿ ಎರಡು ಬಾರಿ ಮೊಟ್ಟೆಯ ಬಿಳಿಯ ಬಿಳಿಯ ಭಾಗವನ್ನು ಬೇರ್ಪಡಿಸಿ ಅದನ್ನು ನಿಮ್ಮ ನೆತ್ತಿಯನ್ನು ಮಸಾಜ್ ಮಾಡುವುದರಿಂದ ಇದು ನಿಮ್ಮ ಕೂದಲನ್ನು ಬಲಪಡಿಸುತ್ತದೆ ಮತ್ತು ಪೋಷಣೆ ನೀಡುತ್ತದೆ. ಕೂದಲು ಉದುರುವಿಕೆಯನ್ನು ತಡೆಗಟ್ಟಿ ಕೂದಲು ವೇಗವಾಗಿ ಬೆಳೆಯಲು ಸಹಾಯ ಮಾಡುತ್ತದೆ.

ಬಿಸಿ ತೈಲ ಮಸಾಜ್  ತೆಂಗಿನ ಎಣ್ಣೆ, ಆಲಿವ್ ಎಣ್ಣೆ ಅಥವಾ ಕ್ಯಾನೋಲ ಎಣ್ಣೆಯನ್ನು ತೆಗೆದುಕೊಂಡು ಅದನ್ನು ಕೊಂಚ ಬಿಸಿ ಮಾಡಿ, ಕೆಲವು ನಿಮಿಷಗಳ ಕಾಲ ಈ ಬಿಸಿ ಎಣ್ಣೆಯಿಂದ ನಿಮ್ಮ ನೆತ್ತಿಯನ್ನು ಮಸಾಜ್ ಮಾಡಿ. ಬಳಿಕ ಒಂದು ಗಂಟೆ ಬಿಟ್ಟು ತಲೆ ಸ್ನಾನ ಮಾಡಿ. ಇದರಿಂದ ಕೂದಲು ಉದುರುವುದು ಕಡಿಮೆಯಾಗುತ್ತದೆ. ಹಾಗೂ ಕೂದಲ ಬೆಳವಣಿಗೆ ಆಗಲು ಕೂಡ ಇದು ಸಹಾಯ ಮಾಡುತ್ತದೆ.

ನೈಸರ್ಗಿಕ ರಸಗಳು  ಬೆಳ್ಳುಳ್ಳಿ ರಸ, ಈರುಳ್ಳಿ ರಸ ಅಥವಾ ಶುಂಠಿಯ ರಸವನ್ನು ತೆಗೆದುಕೊಂಡು ಕೆಲವು ನಿಮಿಷಗಳ ಕಾಲ ನಿಮ್ಮ ನೆತ್ತಿಯನ್ನು ಮಸಾಜ್ ಮಾಡಿ. ಇದು ಉತ್ತಮ ಕೂದಲು ಬೆಳವಣಿಗೆಯನ್ನು ಸಹಾಯಕಾರಿ ಹಾಗೂ ಕೂದಲು ಉದುರುವುದನ್ನು ತಡೆಯುತ್ತದೆ.


ಯೋಗಾಸನ ಕೂದಲು ಉದುರುವಿಕೆಯನ್ನು ತಡೆಯಲು ಮತ್ತು ಕೂದಲ ಬೆಳವಣಿಗೆಯನ್ನು ಸುಧಾರಿಸಲು ಖಾಲಿ ಹೊಟ್ಟೆಯಲ್ಲಿ ಪ್ರತಿನಿತ್ಯ ಬೆಳಿಗ್ಗೆ ಅಥವಾ ಸಂಜೆ ಯೋಗಾಸನ ಮಾಡಬೇಕು. ಯೋಗಾಸನ ಮಾಡುವುದರಿಂದ ಒತ್ತಡ ಕಡಿಮೆಯಾಗುತ್ತದೆ. ಸೂರ್ಯನಮಸ್ಕಾರ, ವಜ್ರಾಸನ, ಸರ್ವಂಗಾಸನ,ಹಲಾಸನ. ಪ್ರಾಣಾಯಾಮ ಮಾಡಿದರೆ ಉಳ್ಳೆದು.ಕೂದಲು ಉದುರುವಿಕೆಯನ್ನು ನೈಸರ್ಗಿಕವಾಗಿ ನಿಲ್ಲಿಸುವುದರಲ್ಲಿ ಪ್ರಾಣಾಯಾಮ ಪ್ರಮುಖ ಪಾತ್ರ ವಹಿಸುತ್ತದೆ. ನಿತ್ಯವೂ ಪ್ರಾಣಾಯಾಮ ಮಾಡುವುದರಿಂದ ಒತ್ತಡ ಮತ್ತು ಖಿನ್ನತೆ ಕಡಿಮೆಯಾಗುತ್ತದೆ. ನಿಮ್ಮ ಒತ್ತಡ ಮತ್ತು ಖಿನ್ನತೆಯನ್ನು ನೀವು ಕಡಿಮೆ ಮಾಡಿದರೆ, ನೀವು ಕೂದಲ ಉದುರುವಿಕೆಯನ್ನು ಕಡಿಮೆಗೊಳಿಸಬಹುದು. ಹೆಚ್ಚಿನ ಸಂದರ್ಭಗಳಲ್ಲಿ ಒತ್ತಡ ಮತ್ತು ಖಿನ್ನತೆಯೇ ಹೇರ್ ಫಾಲ್‍ಗೆ ಕಾರಣವಾಗಿರುತ್ತದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ನಿಮ್ಮ ಉಗುರಿನ ಮೇಲೆ ಅರ್ಧ ಚಂದ್ರಾಕೃತಿ ಇದೆಯೇ?ಇದು ನಿಮ್ಮ ಜೀವನದಲ್ಲಿ ಏನನ್ನು ಸೂಚಿಸುತ್ತೆ ಗೊತ್ತಾ?

    ಮನುಷ್ಯನ ದೇಹದ ರಚನೆ ಆತನ ಭವಿಷ್ಯವನ್ನು ಹೇಳುತ್ತದೆ. ನಮ್ಮ ಕೈ, ಕಾಲು ಸೇರಿದಂತೆ ದೇಹದ ಪ್ರತಿಯೊಂದು ಭಾಗವೂ ನಮ್ಮ ಜೀವನದಲ್ಲಿ ಮಹತ್ವದ ಪಾತ್ರ ವಹಿಸುತ್ತದೆ. ನಮ್ಮ ಕೈ, ಕಾಲು, ಮಚ್ಚೆಯನ್ನೇ ನೋಡಿ ಪಂಡಿತರು ನಮ್ಮ ಭವಿಷ್ಯ ಹೇಳ್ತಾರೆ. ಸಾಮಾನ್ಯವಾಗಿ ಮನುಷ್ಯನ ಕೈ, ಕಾಲಿನ ಸೌಂದರ್ಯವನ್ನು ಉಗುರು ಹೆಚ್ಚಿಸುತ್ತದೆ. ಇದೇ ಕಾರಣಕ್ಕೆ ಮಹಿಳೆಯರು ಉಗುರಿನ ಸೌಂದರ್ಯಕ್ಕೆ ಹೆಚ್ಚಿನ ಗಮನ ನೀಡ್ತಾರೆ. ಉಗುರಿಗೆ ಚೆಂದದ ಆಕಾರ ನೀಡಿ, ಬಣ್ಣ ಹಚ್ಚಿಕೊಳ್ತಾರೆ. ಆದ್ರೆ ಜ್ಯೋತಿಷ್ಯ ಶಾಸ್ತ್ರದಲ್ಲಿ ಉಗುರಿನ ಬಗ್ಗೆ ಬೇರೆಯದೇ ನಂಬಿಕೆಯಿದೆ….

  • ಉಪಯುಕ್ತ ಮಾಹಿತಿ

    ಅಪ್ಪಿ ತಪ್ಪಿಯೂ ಇಂತಹ ಸಮಯದಲ್ಲಿ ಕಲ್ಲಂಗಡಿ ಹಣ್ಣನ್ನು ತಿನ್ನಬೇಡಿ..!

    ಇನ್ನೇನು ಬೇಸಿಗೆ ಶುರುವಾಯಿತು. ಇಂತಹ ಸಮಯದಲ್ಲಿ ನಮ್ಮ ದೇಹವನ್ನು ತಂಪಾಗಿ, ಫ್ರೆಶ್ ಆಗಿ ಇಟ್ಕೋಬೇಕು. ಇದಕ್ಕಾಗಿ ಕಲ್ಲಂಗಡಿ ಹಣ್ಣಿಗಿಂತ ಉತ್ತಮವಾದದ್ದು ಇನ್ಯಾವುದಿದೆ ಹೇಳಿ? ಕಲ್ಲಂಗಡಿ ಹಣ್ಣು ಟೇಸ್ಟಿ ಜೊತೆಗೆ ಆರೋಗ್ಯಕ್ಕೂ ಉತ್ತಮ. ಅದರಲ್ಲೂ ತೂಕ ಕಳೆದುಕೊಳ್ಳಲು ಕಸರತ್ತು ಮಾಡುತ್ತಿರುವವರಿಗೆ ಕಲ್ಲಂಗಡಿ ಬೆಸ್ಟ್. ಹೃದಯ, ಕಿಡ್ನಿ, ಹೀಟ್ ಸ್ಟ್ರೋಕ್, ಅಧಿಕ ರಕ್ತದೊತ್ತಡ ಎಲ್ಲದಕ್ಕೂ ಕಲ್ಲಂಗಡಿ ಸೇವನೆಯಿಂದ ಪ್ರಯೋಜನ ಮತ್ತು ಪರಿಹಾರವಿದೆ. ಕ್ಯಾಲೋರಿ ಬಗ್ಗೆ ಭಯ ಬೇಡ. ಕಲ್ಲಂಗಡಿಯಲ್ಲಿ ಶೇ.94ರಷ್ಟು ನೀರಿನ ಅಂಶವಿದೆ. ಲೈಕೋಪೀನ್, ಪೊಟ್ಯಾಶಿಯಂ ಸೇರಿದಂತೆ ಹಲವು ಬಗೆಯ…

  • ಸುದ್ದಿ

    ಕೊಡಗು ನೆರೆ ಸಂತಸ್ತರಿಗೆ ನಿರ್ಮಿಸುತ್ತಿರೋ ಮನೆಗಳು ಚೆನ್ನಾಗಿಲ್ಲ ಎಂದು ಹೇಳಿಕೆ ನೀಡಿದ ಹರ್ಷಿಕಾ ಪೂಣಚ್ಚ….!

    ಕೊಡಗು ನೆರೆ ಸಂತ್ರಸ್ತರಿಗೆ ಸರ್ಕಾರದಿಂದ ನಿರ್ಮಿಸುತ್ತಿರುವ ಮನೆಗಳು ಚೆನ್ನಾಗಿಲ್ಲ ಎಂದು ಸ್ಯಾಂಡಲ್‍ವುಡ್‍ನಟಿ, ಕೊಡಗಿನ ಬೆಡಗಿ ಹರ್ಷಿಕಾ ಪೂಣಚ್ಚ ಬೇಸರ ವ್ಯಕ್ತಪಡಿಸಿದ್ದಾರೆ.ಇಂದು ಮೈಸೂರಿನಲ್ಲಿ ಮಾತನಾಡಿದ ಅವರು, ನಾನು ಇತ್ತೀಚೆಗೆ ಕೊಡಗು ನೆರೆ ಸಂತ್ರಸ್ತರಿಗೆ ನಿರ್ಮಿಸುತ್ತಿರುವ ಮನೆಯ ಮಾದರಿಯನ್ನು ನೋಡಿದೆ. ಅದು ಚೆನ್ನಾಗಿಲ್ಲ. ಅವರಿಗೆ ಒಳ್ಳೆಯ ಮನೆ ನಿರ್ಮಿಸಿಕೊಡುವಂತೆ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದರು. ಪ್ರವಾಹ ನೈಸರ್ಗಿಕವಾಗಿ ಸಂಭವಿಸಿದೆ. ಯಾರೋ ತಾವಾಗಿಯೇ ಮಾಡಿಕೊಂಡಿದ್ದಲ್ಲ. ಹೀಗಾಗಿ ನೆರೆ ಸಂತ್ರಸ್ತರ ಸ್ವಾಭಿಮಾನಕ್ಕೆ ಧಕ್ಕೆಯಾಗದಂತೆ ನೋಡಿಕೊಳ್ಳಬೇಕು. ಘಟನೆಯ ಬಳಿಕ ರಾಜ್ಯ ಸರ್ಕಾರ ಶೀಘ್ರವೇ ಮನೆ…

  • ಆರೋಗ್ಯ

    ಚುಕ್ಕೆ ಬಾಳೆಹಣ್ಣು ತಿಂದರೆ ಏನಾಗುತ್ತೆ ಗೊತ್ತಾ, ನಿಮಗೆ ತಿಳಿದಿಲ್ಲ ಇದರ ಈ ರಹಸ್ಯ.!

    ಬಾಳೆ ಹಣ್ಣು ಯಾರು ತಾನೇ ತಿನ್ನಲ್ಲ ಹೇಳಿ, ಚಿಕ್ಕ ಮಕ್ಕಳಿಂದ ಹಿಡಿದು ಮುದುಕರ ವರೆಗೂ ಬಾಳೆ ಹಣ್ಣನ್ನ ತಿನ್ನುತ್ತಾರೆ, ಬಾಳೆ ಹಣ್ಣಿನಲ್ಲಿ ಸುಕ್ರೋಸ್, ಫ್ರಕ್ಟೋಸ್ ಮತ್ತು ಗ್ಲೋಕೋಸ್ ಎಂಬ ಮೂರು ರೀತಿಯ ಸಕ್ಕರೆ ಅಂಶಗಳನ್ನು ಒಳಗೊಂಡ ಪೈಬರ್ ಇವೆ, ಬಾಳೆಹಣ್ಣು ತ್ವರಿತ ನಿರಂತರ ಮತ್ತು ಗಮನಾರ್ಹ ಶಕ್ತಿ ನೀಡುತ್ತದೆ. ಎರಡು ಬಾಳೆಹಣ್ಣು ತಿಂದರೆ 90 ನಿಮಿಷ ಶ್ರಮದಾಯಕ ಕೆಲಸ ಮಾಡಲು ಸಾಧ್ಯವಾಗುತ್ತದೆ ಎಂದು ಅಧ್ಯನದಿಂದ ತಿಳಿದು ಬಂದಿದೆ, ವಿಶ್ವದ ಪ್ರಮುಖ ಕ್ರೀಡಾ ಪಟುಗಳು ಸೇವಿಸುವ ಹಣ್ಣುಗಳ ಪೈಕಿ…

  • ಜ್ಯೋತಿಷ್ಯ

    ಶಿರಡಿ ಸಾಯಿಬಾಬಾ ಸ್ವಾಮಿಯ ಕೃಪೆಯಿಂದ ಈ ರಾಶಿಗಳಿಗೆ ವಿಪರೀತ ಧನಲಾಭ…ನಿಮ್ಮ ರಾಶಿ ಇದೆಯಾ ನೋಡಿ..

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(18 ಏಪ್ರಿಲ್, 2019) ನಿಮ್ಮ ಸಕಾರಾತ್ಮಕ ದೃಷ್ಟಿಕೋನ ನಿಮ್ಮ ಸುತ್ತಲಿನವರನ್ನು ಆಕರ್ಷಿಸಬಹುದು. ಇಂದು ನೀವು ಒಳ್ಳೆಯ ಹಣ ಮಾಡುತ್ತೀರಿ…

  • ಸುದ್ದಿ

    ಒಂದೇ ಶಾಲೆಯಲ್ಲಿ ಕೆಲಸ ಮಾಡುತ್ತಿದ್ದ 7 ಟೀಚರ್ ಗಳು ಏಕಕಾಲದಲ್ಲಿ ಗರ್ಭಿಣಿಯರು.!

    ಅಮೆರಿಕದ ಗೊಡಾರ್ಡ್ ನಗರದ ಪ್ರಾಥಮಿಕ ಶಾಲೆಯ ಏಳು ಶಿಕ್ಷಕಿಯರು ಏಕಕಾಲದಲ್ಲಿ ಗರ್ಭಿಣಿಯರಾಗಿದ್ದಾರೆ. ಏಳು ಶಿಕ್ಷಕಿಯರು 15 ರಿಂದ 1 ತಿಂಗಳ ಆಸುಪಾಸಿನಲ್ಲಿ ಏಕಕಾಲದಲ್ಲಿ ಹೆರಿಗೆ ರಜೆಗೆ ಅರ್ಜಿ ಸಲ್ಲಿಸಿದ್ದಾರೆ. ಎಲ್ಲಾ ಮಹಿಳಾ ಸಹದ್ಯೋಗಿಗಳು ಏಕಕಾಲದಲ್ಲಿ ತಾಯಿ ಆಗುತ್ತಿದ್ದೇವೆ. ಏಳು ಶಿಕ್ಷಕಿಯರು ಒಂದೇ ಬಾರಿ ಗರ್ಭಿಣಿ ಆಗಬೇಕೆಂಬುವುದು ದೇವರ ಇಚ್ಛೆ. ಶಿಕ್ಷಕಿ ಟಿಫನಿ ಎಂಬವರು ಮೂರನೇ ಬಾರಿ ಗರ್ಭಿಣಿಯಾಗಿದ್ದು, ಅವರಿಗೆ 9 ಮತ್ತು 7 ವರ್ಷದ ಮಕ್ಕಳಿವೆ ಎಂದು ಶಿಕ್ಷಕಿ ಕೈಟಿ ಸಂತಸ ವ್ಯಕ್ತಪಡಿಸುತ್ತಾರೆ. ನನ್ನ 20 ವರ್ಷದ…