ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತುಂಬಾ ಕೂದಲು ಉದುರುತ್ತಿದೆ ಅಂತ ಚಿಂತೆ ಶುರುವಾಗಿದ್ಯಾ? ಕೂದಲು ಯಾಕೆ ಉದುರುತ್ತೆ? ಈ ಸಮಸ್ಯೆಗೆ ನೈಸರ್ಗಿಕ ಮದ್ದು ಏನು? ಯಾವೆಲ್ಲಾ ಆಹಾರವನ್ನೂ ಸೇವಿಸಬೇಕು? ಹೇಗೆ ಕೂದಲಿನ ರಕ್ಷಣೆ ಮಾಡಬೇಕು ಎನ್ನುವ ಚಿಂತೆಯಲ್ಲಿದ್ದೀರಾ? ಏನಪ್ಪಾ ಮಾಡೋದು ಈ ಸಮಸ್ಯೆಗೆ ಅಂತ ಯೋಚನೆ ಮಾಡೋದನ್ನ ಬಿಡಿ.

ಸಾಮಾನ್ಯವಾಗಿ ಎಲ್ಲರನ್ನೂ ಕಾಡುವ ಸಮಸ್ಯೆ ಅಂದ್ರೆ ಅದು ಹೇರ್ ಫಾಲ್. ದೇಹಕ್ಕೆ ಆರೋಗ್ಯಕರ, ಪೌಷ್ಠಿಕಾಂಶವುಳ್ಳ ಆಹಾರ ಸೇವಿಸದಿದ್ದರೆ ಈ ಹೇರ್ ಫಾಲ್ ಸಮಸ್ಯೆ ಬರುತ್ತದೆ. ಅಲ್ಲದೆ ಅತಿಯಾದ ಯೋಚನೆ, ನಿದ್ರಾಹೀನತೆ ಹಾಗೂ ಟೆನ್ಶನ್ನಿಂದ ಕೂಡ ಕೂದಲು ಉದುರೋಕೆ ಶುರುವಾಗುತ್ತದೆ. ಸಾಮಾನ್ಯವಾಗಿ ಎಲ್ಲರಿಗೂ ಕೂದಲು ಉದುರತ್ತೆ. ಆದ್ರೆ ಕೂದಲು ಉದುರಿರುವ ಸ್ಥಳದಲ್ಲಿ ಮತ್ತೆ ಕೂದಲು ಬೆಳೆಯದಿದ್ದರೆ ಅದಕ್ಕೆ ಹೇರ್ ಫಾಲ್ ಸಮಸ್ಯೆ ಎನ್ನುತ್ತಾರೆ. ನಾವು ತಿಳಿಸುವ ಸುಲಭ ಹಾಗೂ ನೈಸರ್ಗಿಕ ಮದ್ದನ್ನು ಹಾಗೂ ಕೆಲವು ಆರೋಗ್ಯದ ಸಲಹೆಯನ್ನು ಪಾಲಿಸಿದರೆ ನೀವು ನಿಮ್ಮ ಹೇರ್ ಫಾಲ್ ಸಮಸ್ಯೆಯಿಂದ ಹೊರಬರಬಹುದು. ಹೌದು ಆ ಸುಲಭ, ನೈಸರ್ಗಿಕ ಸಲಹೆಗಳು ಇಲ್ಲಿವೆ ನೋಡಿ.

ಯಾವೆಲ್ಲಾ ವಿಟಮಿನ್ಸ್ ಬರಿತ ಆಹಾರ ಸೇವಿಸಬೇಕು? ಹೇರ್ ಫಾಲ್ ನಿಯಂತ್ರಿಸಲು ವಿಟಿಮಿನ್-ಎ, ವಿಟಮಿನ್-ಬಿ, ಓಮೆಗಾ-3 ಹಾಗೂ ವಿಟಮಿನ್-ಇ ಸಮೃದ್ಧವಾಗಿರುವ ಆಹಾರವನ್ನು ಸೇವಿಸಬೇಕು. ಇದರಿಂದ ಕೂದಲ ಬೆಳವಣಿಗೆಗೆ ಉತ್ತಮ ವಿಟಮಿನ್ ಅಂಶ ದೊರಕಿ ಹೇರ್ ಫಾಲ್ ಕಡಿಮೆಯಾಗುತ್ತದೆ.
ಆಂಟಿ ಆಕ್ಸಿಡೆಂಟ್ ಗುಣಗಳುಳ್ಳ ವಿಟಮಿನ್-ಎ ಪದಾರ್ಥಗಳು ಆರೋಗ್ಯಕರ ಕೂದಲು ಮತ್ತು ಕೂದಲು ಬೆಳವಣಿಗೆಯನ್ನು ಉತ್ತೇಜಿಸುತ್ತದೆ. ಸಿಹಿ ಆಲೂಗೆಡ್ಡೆ, ಕ್ಯಾರೆಟ್, ಕರಿಬೇವಿನ ಸೊಪ್ಪು, ಒಣಗಿದ ಏಪ್ರಿಕಾಟ್, ಸ್ವೀಟ್ ಕೆಂಪು ಮೆಣಸು, ಟ್ಯೂನಾ ಮೀನು, ಉಷ್ಣವಲಯದ ಹಣ್ಣುಗಳು(ಮಾವು) ವಿಟಮಿನ್-ಎ ಅಂಶವನ್ನು ಒಳಗೊಂಡಿರುತ್ತದೆ. ಇದು ಕೂದಲ ಬೆಳವಣಿಗೆಯನ್ನು ಉತ್ತೇಜಿಸುತ್ತದೆ ಮತ್ತು ಕೂದಲು ನಷ್ಟವನ್ನು ತಡೆಯುತ್ತದೆ. ಮೊಟ್ಟೆ, ಮೀನು, ಮತ್ತು ಹಾಲು ನಮ್ಮ ಆಹಾರದಲ್ಲಿ ಒಮೆಗಾ -3 ಅಂಶವಿರುತ್ತದೆ. ಬೀಜಗಳು (ಬಾದಾಮಿ), ಶೆಲ್ಫಿಶ್, ಮೀನು, ಆಲಿವ್ ಎಣ್ಣೆ, ಬ್ರೊಕೊಲಿನಲ್ಲಿ ವಿಟಮಿನ್ ಇ ಅಂಶ ಅಡಕವಾಗಿರುತ್ತದೆ. ವಿಟಮಿನ್ ಇ ಆರೋಗ್ಯ ಸುಧಾರಣೆಗೆ ಸಹಾಯ ಮಾಡಿ ದೇಹದಲ್ಲಿ ರಕ್ತದ ಸಂಚಲನವನ್ನು ಉತ್ತಮಗೊಳಿಸುತ್ತದೆ. ಮಾಂಸ, ಮೊಟ್ಟೆಗಳು, ಮೀನುಗಳು ಅಥವಾ ಡೈರಿ ಆಹಾರಗಳು ವಿಟಮಿನ್-ಬಿಯಿಂದ ಸಮೃದ್ಧವಾಗಿವೆ. ಈ ವಿಟಮಿನ್ಗಳು ಮೆಲನಿನ್ ಅನ್ನು ಉತ್ಪಾದಿಸಲು ಸಹಾಯ ಮಾಡುತ್ತವೆ, ಇದು ಕೂದಲಿಗೆ ಆರೋಗ್ಯಕರ ಬಣ್ಣವನ್ನು ನೀಡುತ್ತದೆ. ಜೊತೆಗೆ ರಕ್ತ ಸಂಚಲವನ್ನು ಸುಧಾರಿಸುತ್ತದೆ ಮತ್ತು ಕೂದಲು ಉದುರುವಿಕೆಯನ್ನು ನಿಲ್ಲುಸುತ್ತದೆ.

ಹೆಡ್ ಮಸಾಜ್ ಪ್ರತಿ ನಿತ್ಯ 15 ನಿಮಿಷಗಳ ಕಾಲ ನಿಮ್ಮ ತಲೆಯನ್ನು ಮಸಾಜ್ ಮಾಡುವುದರಿಂದ ನೆತ್ತಿಯಲ್ಲಿ ರಕ್ತ ಸಂಚಲನ ಉತ್ತಮ ರೀತಿಯಲ್ಲಿ ಆಗುತ್ತದೆ. ತಲೆ ಮಸಾಜ್ ಮಾಡಲು ತೆಂಗಿನ ಎಣ್ಣೆ ಅಥವಾ ಬಾದಾಮಿ ತೈಲವನ್ನು ಬಳಸಿದರೆ ಉತ್ತಮ. ಯಾಕೆಂದರೆ ಬಾದಾಮಿ ತೈಲ ನಿಮ್ಮ ನೆತ್ತಿಯನ್ನು ಮೃದುಗೊಳಿಸುವುದು. ಸಾಧ್ಯವಾದರೆ, ವಾರಕ್ಕೆ ಕನಿಷ್ಠ ಎರಡು ಬಾರಿ ಕೂದಲು ಉದುರುವಿಕೆಯನ್ನು ನಿಲ್ಲಿಸಲು ಬಾದಾಮಿ ತೈಲದಿಂದ ತಲೆಗೆ ಮಸಾಜ್ ಮಾಡಿಕೊಳ್ಳಿ ಉತ್ತಮ ಫಲಿತಾಂಶ ಪಡೆಯಿರಿ.
ಮೊಟ್ಟೆ ವಾರದಲ್ಲಿ ಎರಡು ಬಾರಿ ಮೊಟ್ಟೆಯ ಬಿಳಿಯ ಬಿಳಿಯ ಭಾಗವನ್ನು ಬೇರ್ಪಡಿಸಿ ಅದನ್ನು ನಿಮ್ಮ ನೆತ್ತಿಯನ್ನು ಮಸಾಜ್ ಮಾಡುವುದರಿಂದ ಇದು ನಿಮ್ಮ ಕೂದಲನ್ನು ಬಲಪಡಿಸುತ್ತದೆ ಮತ್ತು ಪೋಷಣೆ ನೀಡುತ್ತದೆ. ಕೂದಲು ಉದುರುವಿಕೆಯನ್ನು ತಡೆಗಟ್ಟಿ ಕೂದಲು ವೇಗವಾಗಿ ಬೆಳೆಯಲು ಸಹಾಯ ಮಾಡುತ್ತದೆ.
ಬಿಸಿ ತೈಲ ಮಸಾಜ್ ತೆಂಗಿನ ಎಣ್ಣೆ, ಆಲಿವ್ ಎಣ್ಣೆ ಅಥವಾ ಕ್ಯಾನೋಲ ಎಣ್ಣೆಯನ್ನು ತೆಗೆದುಕೊಂಡು ಅದನ್ನು ಕೊಂಚ ಬಿಸಿ ಮಾಡಿ, ಕೆಲವು ನಿಮಿಷಗಳ ಕಾಲ ಈ ಬಿಸಿ ಎಣ್ಣೆಯಿಂದ ನಿಮ್ಮ ನೆತ್ತಿಯನ್ನು ಮಸಾಜ್ ಮಾಡಿ. ಬಳಿಕ ಒಂದು ಗಂಟೆ ಬಿಟ್ಟು ತಲೆ ಸ್ನಾನ ಮಾಡಿ. ಇದರಿಂದ ಕೂದಲು ಉದುರುವುದು ಕಡಿಮೆಯಾಗುತ್ತದೆ. ಹಾಗೂ ಕೂದಲ ಬೆಳವಣಿಗೆ ಆಗಲು ಕೂಡ ಇದು ಸಹಾಯ ಮಾಡುತ್ತದೆ.
ನೈಸರ್ಗಿಕ ರಸಗಳು ಬೆಳ್ಳುಳ್ಳಿ ರಸ, ಈರುಳ್ಳಿ ರಸ ಅಥವಾ ಶುಂಠಿಯ ರಸವನ್ನು ತೆಗೆದುಕೊಂಡು ಕೆಲವು ನಿಮಿಷಗಳ ಕಾಲ ನಿಮ್ಮ ನೆತ್ತಿಯನ್ನು ಮಸಾಜ್ ಮಾಡಿ. ಇದು ಉತ್ತಮ ಕೂದಲು ಬೆಳವಣಿಗೆಯನ್ನು ಸಹಾಯಕಾರಿ ಹಾಗೂ ಕೂದಲು ಉದುರುವುದನ್ನು ತಡೆಯುತ್ತದೆ.
ಯೋಗಾಸನ ಕೂದಲು ಉದುರುವಿಕೆಯನ್ನು ತಡೆಯಲು ಮತ್ತು ಕೂದಲ ಬೆಳವಣಿಗೆಯನ್ನು ಸುಧಾರಿಸಲು ಖಾಲಿ ಹೊಟ್ಟೆಯಲ್ಲಿ ಪ್ರತಿನಿತ್ಯ ಬೆಳಿಗ್ಗೆ ಅಥವಾ ಸಂಜೆ ಯೋಗಾಸನ ಮಾಡಬೇಕು. ಯೋಗಾಸನ ಮಾಡುವುದರಿಂದ ಒತ್ತಡ ಕಡಿಮೆಯಾಗುತ್ತದೆ. ಸೂರ್ಯನಮಸ್ಕಾರ, ವಜ್ರಾಸನ, ಸರ್ವಂಗಾಸನ,ಹಲಾಸನ. ಪ್ರಾಣಾಯಾಮ ಮಾಡಿದರೆ ಉಳ್ಳೆದು.ಕೂದಲು ಉದುರುವಿಕೆಯನ್ನು ನೈಸರ್ಗಿಕವಾಗಿ ನಿಲ್ಲಿಸುವುದರಲ್ಲಿ ಪ್ರಾಣಾಯಾಮ ಪ್ರಮುಖ ಪಾತ್ರ ವಹಿಸುತ್ತದೆ. ನಿತ್ಯವೂ ಪ್ರಾಣಾಯಾಮ ಮಾಡುವುದರಿಂದ ಒತ್ತಡ ಮತ್ತು ಖಿನ್ನತೆ ಕಡಿಮೆಯಾಗುತ್ತದೆ. ನಿಮ್ಮ ಒತ್ತಡ ಮತ್ತು ಖಿನ್ನತೆಯನ್ನು ನೀವು ಕಡಿಮೆ ಮಾಡಿದರೆ, ನೀವು ಕೂದಲ ಉದುರುವಿಕೆಯನ್ನು ಕಡಿಮೆಗೊಳಿಸಬಹುದು. ಹೆಚ್ಚಿನ ಸಂದರ್ಭಗಳಲ್ಲಿ ಒತ್ತಡ ಮತ್ತು ಖಿನ್ನತೆಯೇ ಹೇರ್ ಫಾಲ್ಗೆ ಕಾರಣವಾಗಿರುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
2019 ರ ಜನವರಿಯಿಂದ ಮಾರ್ಚ್ ವೇಳೆ ವಿವಾಹವಾಗಬೇಕೆಂದು ಪ್ಲಾನ್ ಮಾಡಿದ್ದ ಉತ್ತರ ಪ್ರದೇಶದ ಪ್ರಯಾಗ್ ರಾಜ್ ಜನತೆಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರ ಶಾಕ್ ನೀಡಿದೆ. ಕುಂಭ ಮೇಳದ ಹಿನ್ನೆಲೆಯಲ್ಲಿ ಈ ಅವಧಿಯಲ್ಲಿ ವಿವಾಹದ ದಿನಾಂಕ ನಿಗದಿಯಾಗಿದ್ದರೆ ಅದನ್ನು ಮುಂದೂಡಿ ಇಲ್ಲವೇ ಸ್ಥಳ ಬದಲಾಯಿಸಿಕೊಳ್ಳಿ ಎಂದು ಸೂಚಿಸಿದೆ. ಜನವರಿ ತಿಂಗಳಿನಲ್ಲಿ ಮಕರ ಸಂಕ್ರಾಂತಿಯ ಹಾಗೂ ಪುಷ್ಯ ಪೂರ್ಣಿಮಾದಂದು ಪ್ರಯಾಗ್ ರಾಜ್ ನಲ್ಲಿ ಪುಣ್ಯ ಸ್ನಾನ ಮಾಡಲಾಗುತ್ತದೆ. ಹಾಗೆಯೇ ಫೆಬ್ರವರಿಯಲ್ಲಿ ಮೌನಿ ಅಮಾವಾಸ್ಯೆ, ಬಸಂತ ಪಂಚಮಿ ಹಾಗೂ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663953892 call/ whatsapp/ mail raghavendrastrology@gmail.com ಮೇಷ(11 ನವೆಂಬರ್, 2018) ದಿನದಲ್ಲಿ ನಂತರ ಹಣಕಾಸು ಪರಿಸ್ಥಿತಿಗಳು ಸುಧಾರಿಸುತ್ತವೆ. ನಿಮ್ಮ ನಿರ್ಲಕ್ಷತನದ ಮತ್ತು…
ಶಾಲಾ ಬಾಲಕನೊಬ್ಬ ಎಂಟು ಡಾಲರ್ ಮೌಲ್ಯದ ಊಟ ಮಾಡಿ, ಬಳಿಕ ಹಣ ಪಾವತಿಸಲು ಸಾಧ್ಯವಾಗಿಲ್ಲವೆಂದು ಸರ್ವ್ ಮಾಡಿದ ಲಂಚ್ ಲೇಡಿಯನ್ನು ವಜಾಗೊಳಿಸಿರುವ ಘಟನೆ ನಡೆದಿದೆ. ಈ ಘಟನೆ ನ್ಯೂ ಹ್ಯಾಮ್ಶೈರ್ ಭಾಗದ ಮಸ್ಕೋಮಾ ವ್ಯಾಲಿಯಲ್ಲಿರುವ ಶಾಲಾ ಭಾಗದಲ್ಲಿ ನಡೆದಿದೆ. ಬೋನಿ ಕಿಂಬಲ್ ಎನ್ನುವ ಲಂಚ್ ಲೇಡಿ, ಬಾಲಕ ಕೇಳಿರುವ ಆಹಾರ ಒದಗಿಸಿದ್ದಾಳೆ. ಆದರೆ ತಿಂದ ಬಳಿಕ ಪಾವತಿಸಲು ಬಾಲಕನ ಬಳಿ ಹಣವಿಲ್ಲ. ಆದ್ದರಿಂದ ಹಣವಿಲ್ಲದ ಬಾಲಕನಿಗೆ ಆಹಾರ ನೀಡಿದ್ದಕ್ಕೆ ಆಕೆಯನ್ನು ವಜಾಗೊಳಿಸಲಾಗಿದೆ. ಈ ವಿಷಯ ಹರಡುತ್ತಿದ್ದಂತೆ ವಿದ್ಯಾರ್ಥಿಗಳು…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 ಮೇಷ(23 ನವೆಂಬರ್, 2018) ಸಂಜೆಯಲ್ಲಿ ವಿಶ್ರಾಂತಿ ತೆಗೆದುಕೊಳ್ಳಿ. ವಿಳಂಬಿತ ಪಾವತಿಗಳನ್ನು ಮಾಡುತ್ತಿದ್ದ ಹಾಗೆ ಹಣದ ಪರಿಸ್ಥಿತಿ ಸುಧಾರಿಸುತ್ತದೆ. ಕುಟುಂಬ ಮತ್ತು ಸ್ನೇಹಿತರೊಂದಿಗೆ ಆಹ್ಲಾದಕರ…
ತುಮಕೂರು: ಸುಳ್ವಾಡಿ ವಿಷ ಪ್ರಸಾದ ದುರಂತ ಮರೆಮಾಚುವ ಮುನ್ನವೇ ತುಮಕೂರು ಜಿಲ್ಲೆ ಅಂತಹದ್ದೇ ಘಟನೆ ಮರುಕಳಿಸಿದ್ದು, ಓರ್ವ ಬಾಲಕ ಸಾವನ್ನಪ್ಪಿದ್ದಾನೆ. ಶಿರಾ ತಾಲೂಕಿನ ವೀರಭದ್ರ (16) ಮೃತ ಬಾಲಕ. ಗಂಗಾಧರ್, ತಿಪ್ಪೇಸ್ವಾಮಿ, ರುದ್ರೇಶ್, ನಾಗರತ್ನ, ಪವನ್, ಅರ್ಪಿತಾ, ವಿರೂಪಾಕ್ಷ ಸೇರಿದಂತೆ 20ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿದ್ದಾರೆ. ಶಿರಾ ವ್ಯಾಪ್ತಿಯ ಜನರಿಗೆ ಶಿರಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಬೆಂಗಳೂರಿನಿಂದ ಬಂದಿದ್ದ ಭಕ್ತರಿಗೆ ಬೆಂಗಳೂರಿನಲ್ಲಿಯೇ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗಿದೆ.ಆಗಿದ್ದೇನು?: ಪಾವಗಡ ತಾಲೂಕಿನ ನಿಡಗಲ್ಲು ಗ್ರಾಮದ ವೀರಭಧ್ರಸ್ವಾಮಿ ದೇವಾಲಯದಲ್ಲಿ ಸೋಮವಾರ ವಿಶೇಷ…
ನಟ, ನಟಿಯರು ಶೂಟಿಂಗ್ಗೆ ತೆರಳುವಾಗ ಅವರೊಂದಿಗೆ “ವ್ಯಾನಿಟಿ ವ್ಯಾನ್’ ಕೂಡಾ ತೆರಳುವುದು ಸಾಮಾನ್ಯ. ಕೆಲವರದ್ದು ಸಾಮಾನ್ಯ ಸೌಲಭ್ಯ ಇರುವ ವ್ಯಾನ್ ಆದರೆ ಇನ್ನು ಕೆಲವರನ್ನು ಅತ್ಯಾಧುನಿಕ ಸೌಲಭ್ಯ ಇರುವ ವ್ಯಾನಿಟಿ ವ್ಯಾನ್. ಈ ಅತ್ಯಾಧುನಿಕ ವ್ಯಾನಿಟಿ ವ್ಯಾನ್ ಹೊಂದಿರುವವರ ಸಾಲಿಗೆ ಇದೀಗ ನಟ ಶಾರುಖ್ ಖಾನ್ ಕೂಡಾ ಸೇರ್ಪಡೆಯಾಗಿದ್ದಾರೆ.