News

ಕರ್ನಾಟಕದಲ್ಲಿ ಪ್ರಪ್ರಥಮವಾಗಿ ಬಸವ ಜಯಂತಿ ಆಚರಣೆ ಎಲ್ಲಿ?
ಬೆಂಗಳೂರು IPL ಟಿಕೆಟ್ ಸ್ಕ್ಯಾಮ್: 11 ಮಂದಿ ಬಂಧನ
Strait of Hormuz ಪ್ರದೇಶದಲ್ಲಿ ಎರಡು ಭಾರತೀಯ ಹಡಗುಗಳ ಮೇಲೆ ದಾಳಿ
ಕೆ. ಎಲ್. ರಾಹುಲ್ – (ಕಣ್ಣೂರು ಲೋಕೇಶ್ ರಾಹುಲ್) – ಕನ್ನಡದ ಹುಡುಗ ರಾಹುಲ್
ವಿಶ್ವದ ಅತಿ ಎತ್ತರದ ರಾಷ್ಟ್ರೀಯ ಉದ್ಯಾನವನಗಳಿವು.!
ಬೇಸಿಗೆ ರಜೆಗಳಲ್ಲಿ ಮಕ್ಕಳ ಸುರಕ್ಷತೆಗಾಗಿ ಪೋಷಕರಿಗೆ ಮಹತ್ವದ ಸೂಚನೆ
ಜನಗಣತಿ ಹೆಸರಿನಲ್ಲಿ ಮನೆಗಳಿಗೆ ಬರುವವರ ಬಗ್ಗೆ ಎಚ್ಚರಿಕೆ! – ಜನಗಣತಿ ಹೆಸರಿನಲ್ಲಿ ವಂಚನೆ
ಮುಂದಿನ 5 ದಿನಗಳಲ್ಲಿ ಕರ್ನಾಟಕದಲ್ಲಿ ಭಾರೀ ಬಿಸಿಲು
ಅಂಬೇಡ್ಕರ್ 135ನೇ ಜಯಂತಿ 2026 – ಅಂಗವಾಗಿ ನಿವೃತ್ತ ಸೈನಿಕ: ಹರೀಶ್ ಕುಮಾರ್ ಎಚ್.ಎಸ್. ಹುಂಗೇನಹಳ್ಳಿ ಗ್ರಾಮ ಅವರಿಗೆ ಭವ್ಯ ಸನ್ಮಾನ
MIಗೆ ವಾಂಖೆಡೆಯಲ್ಲಿ ಸೋಲಿನ ರುಚಿ ತೋರಿಸಿದ RCB
ಸುದ್ದಿ

ಹೇರ್ ಫಾಲ್ ಟೆನ್ಶನ್ ಇಲ್ಲಿಗೆ ಬಿಡಿ, ಇನ್ಮುಂದೆ ನ್ಯಾಚುರಲ್ ಪರಿಹಾರ ಟ್ರೈ ಮಾಡಿ,..!

186

ತುಂಬಾ ಕೂದಲು ಉದುರುತ್ತಿದೆ ಅಂತ ಚಿಂತೆ ಶುರುವಾಗಿದ್ಯಾ? ಕೂದಲು ಯಾಕೆ ಉದುರುತ್ತೆ? ಈ ಸಮಸ್ಯೆಗೆ ನೈಸರ್ಗಿಕ ಮದ್ದು ಏನು? ಯಾವೆಲ್ಲಾ ಆಹಾರವನ್ನೂ ಸೇವಿಸಬೇಕು? ಹೇಗೆ ಕೂದಲಿನ ರಕ್ಷಣೆ ಮಾಡಬೇಕು ಎನ್ನುವ ಚಿಂತೆಯಲ್ಲಿದ್ದೀರಾ? ಏನಪ್ಪಾ ಮಾಡೋದು ಈ ಸಮಸ್ಯೆಗೆ ಅಂತ ಯೋಚನೆ ಮಾಡೋದನ್ನ ಬಿಡಿ.

ಸಾಮಾನ್ಯವಾಗಿ ಎಲ್ಲರನ್ನೂ ಕಾಡುವ ಸಮಸ್ಯೆ ಅಂದ್ರೆ ಅದು ಹೇರ್ ಫಾಲ್. ದೇಹಕ್ಕೆ ಆರೋಗ್ಯಕರ, ಪೌಷ್ಠಿಕಾಂಶವುಳ್ಳ ಆಹಾರ ಸೇವಿಸದಿದ್ದರೆ ಈ ಹೇರ್ ಫಾಲ್ ಸಮಸ್ಯೆ ಬರುತ್ತದೆ. ಅಲ್ಲದೆ ಅತಿಯಾದ ಯೋಚನೆ, ನಿದ್ರಾಹೀನತೆ ಹಾಗೂ ಟೆನ್ಶನ್‍ನಿಂದ ಕೂಡ ಕೂದಲು ಉದುರೋಕೆ ಶುರುವಾಗುತ್ತದೆ. ಸಾಮಾನ್ಯವಾಗಿ ಎಲ್ಲರಿಗೂ ಕೂದಲು ಉದುರತ್ತೆ. ಆದ್ರೆ ಕೂದಲು ಉದುರಿರುವ ಸ್ಥಳದಲ್ಲಿ ಮತ್ತೆ ಕೂದಲು ಬೆಳೆಯದಿದ್ದರೆ ಅದಕ್ಕೆ ಹೇರ್ ಫಾಲ್ ಸಮಸ್ಯೆ ಎನ್ನುತ್ತಾರೆ. ನಾವು ತಿಳಿಸುವ ಸುಲಭ ಹಾಗೂ ನೈಸರ್ಗಿಕ ಮದ್ದನ್ನು ಹಾಗೂ ಕೆಲವು ಆರೋಗ್ಯದ ಸಲಹೆಯನ್ನು ಪಾಲಿಸಿದರೆ ನೀವು ನಿಮ್ಮ ಹೇರ್ ಫಾಲ್ ಸಮಸ್ಯೆಯಿಂದ ಹೊರಬರಬಹುದು. ಹೌದು ಆ ಸುಲಭ, ನೈಸರ್ಗಿಕ ಸಲಹೆಗಳು ಇಲ್ಲಿವೆ ನೋಡಿ.

ಯಾವೆಲ್ಲಾ ವಿಟಮಿನ್ಸ್ ಬರಿತ ಆಹಾರ ಸೇವಿಸಬೇಕು ಹೇರ್ ಫಾಲ್ ನಿಯಂತ್ರಿಸಲು ವಿಟಿಮಿನ್-ಎ, ವಿಟಮಿನ್-ಬಿ, ಓಮೆಗಾ-3 ಹಾಗೂ ವಿಟಮಿನ್-ಇ ಸಮೃದ್ಧವಾಗಿರುವ ಆಹಾರವನ್ನು ಸೇವಿಸಬೇಕು. ಇದರಿಂದ ಕೂದಲ ಬೆಳವಣಿಗೆಗೆ ಉತ್ತಮ ವಿಟಮಿನ್ ಅಂಶ ದೊರಕಿ ಹೇರ್ ಫಾಲ್ ಕಡಿಮೆಯಾಗುತ್ತದೆ.

ಆಂಟಿ ಆಕ್ಸಿಡೆಂಟ್ ಗುಣಗಳುಳ್ಳ ವಿಟಮಿನ್-ಎ ಪದಾರ್ಥಗಳು ಆರೋಗ್ಯಕರ ಕೂದಲು ಮತ್ತು ಕೂದಲು ಬೆಳವಣಿಗೆಯನ್ನು ಉತ್ತೇಜಿಸುತ್ತದೆ. ಸಿಹಿ ಆಲೂಗೆಡ್ಡೆ, ಕ್ಯಾರೆಟ್, ಕರಿಬೇವಿನ ಸೊಪ್ಪು, ಒಣಗಿದ ಏಪ್ರಿಕಾಟ್, ಸ್ವೀಟ್ ಕೆಂಪು ಮೆಣಸು, ಟ್ಯೂನಾ ಮೀನು, ಉಷ್ಣವಲಯದ ಹಣ್ಣುಗಳು(ಮಾವು) ವಿಟಮಿನ್-ಎ ಅಂಶವನ್ನು ಒಳಗೊಂಡಿರುತ್ತದೆ. ಇದು ಕೂದಲ ಬೆಳವಣಿಗೆಯನ್ನು ಉತ್ತೇಜಿಸುತ್ತದೆ ಮತ್ತು ಕೂದಲು ನಷ್ಟವನ್ನು ತಡೆಯುತ್ತದೆ. ಮೊಟ್ಟೆ, ಮೀನು, ಮತ್ತು ಹಾಲು ನಮ್ಮ ಆಹಾರದಲ್ಲಿ ಒಮೆಗಾ -3 ಅಂಶವಿರುತ್ತದೆ. ಬೀಜಗಳು (ಬಾದಾಮಿ), ಶೆಲ್ಫಿಶ್, ಮೀನು, ಆಲಿವ್ ಎಣ್ಣೆ, ಬ್ರೊಕೊಲಿನಲ್ಲಿ ವಿಟಮಿನ್ ಇ ಅಂಶ ಅಡಕವಾಗಿರುತ್ತದೆ. ವಿಟಮಿನ್ ಇ ಆರೋಗ್ಯ ಸುಧಾರಣೆಗೆ ಸಹಾಯ ಮಾಡಿ ದೇಹದಲ್ಲಿ ರಕ್ತದ ಸಂಚಲನವನ್ನು ಉತ್ತಮಗೊಳಿಸುತ್ತದೆ. ಮಾಂಸ, ಮೊಟ್ಟೆಗಳು, ಮೀನುಗಳು ಅಥವಾ ಡೈರಿ ಆಹಾರಗಳು ವಿಟಮಿನ್-ಬಿಯಿಂದ ಸಮೃದ್ಧವಾಗಿವೆ. ಈ ವಿಟಮಿನ್‍ಗಳು ಮೆಲನಿನ್ ಅನ್ನು ಉತ್ಪಾದಿಸಲು ಸಹಾಯ ಮಾಡುತ್ತವೆ, ಇದು ಕೂದಲಿಗೆ ಆರೋಗ್ಯಕರ ಬಣ್ಣವನ್ನು ನೀಡುತ್ತದೆ. ಜೊತೆಗೆ ರಕ್ತ ಸಂಚಲವನ್ನು ಸುಧಾರಿಸುತ್ತದೆ ಮತ್ತು ಕೂದಲು ಉದುರುವಿಕೆಯನ್ನು ನಿಲ್ಲುಸುತ್ತದೆ.


ಹೆಡ್ ಮಸಾಜ್  ಪ್ರತಿ ನಿತ್ಯ 15 ನಿಮಿಷಗಳ ಕಾಲ ನಿಮ್ಮ ತಲೆಯನ್ನು ಮಸಾಜ್ ಮಾಡುವುದರಿಂದ ನೆತ್ತಿಯಲ್ಲಿ ರಕ್ತ ಸಂಚಲನ ಉತ್ತಮ ರೀತಿಯಲ್ಲಿ ಆಗುತ್ತದೆ. ತಲೆ ಮಸಾಜ್ ಮಾಡಲು ತೆಂಗಿನ ಎಣ್ಣೆ ಅಥವಾ ಬಾದಾಮಿ ತೈಲವನ್ನು ಬಳಸಿದರೆ ಉತ್ತಮ. ಯಾಕೆಂದರೆ ಬಾದಾಮಿ ತೈಲ ನಿಮ್ಮ ನೆತ್ತಿಯನ್ನು ಮೃದುಗೊಳಿಸುವುದು. ಸಾಧ್ಯವಾದರೆ, ವಾರಕ್ಕೆ ಕನಿಷ್ಠ ಎರಡು ಬಾರಿ ಕೂದಲು ಉದುರುವಿಕೆಯನ್ನು ನಿಲ್ಲಿಸಲು ಬಾದಾಮಿ ತೈಲದಿಂದ ತಲೆಗೆ ಮಸಾಜ್ ಮಾಡಿಕೊಳ್ಳಿ ಉತ್ತಮ ಫಲಿತಾಂಶ ಪಡೆಯಿರಿ.

ಮೊಟ್ಟೆ  ವಾರದಲ್ಲಿ ಎರಡು ಬಾರಿ ಮೊಟ್ಟೆಯ ಬಿಳಿಯ ಬಿಳಿಯ ಭಾಗವನ್ನು ಬೇರ್ಪಡಿಸಿ ಅದನ್ನು ನಿಮ್ಮ ನೆತ್ತಿಯನ್ನು ಮಸಾಜ್ ಮಾಡುವುದರಿಂದ ಇದು ನಿಮ್ಮ ಕೂದಲನ್ನು ಬಲಪಡಿಸುತ್ತದೆ ಮತ್ತು ಪೋಷಣೆ ನೀಡುತ್ತದೆ. ಕೂದಲು ಉದುರುವಿಕೆಯನ್ನು ತಡೆಗಟ್ಟಿ ಕೂದಲು ವೇಗವಾಗಿ ಬೆಳೆಯಲು ಸಹಾಯ ಮಾಡುತ್ತದೆ.

ಬಿಸಿ ತೈಲ ಮಸಾಜ್  ತೆಂಗಿನ ಎಣ್ಣೆ, ಆಲಿವ್ ಎಣ್ಣೆ ಅಥವಾ ಕ್ಯಾನೋಲ ಎಣ್ಣೆಯನ್ನು ತೆಗೆದುಕೊಂಡು ಅದನ್ನು ಕೊಂಚ ಬಿಸಿ ಮಾಡಿ, ಕೆಲವು ನಿಮಿಷಗಳ ಕಾಲ ಈ ಬಿಸಿ ಎಣ್ಣೆಯಿಂದ ನಿಮ್ಮ ನೆತ್ತಿಯನ್ನು ಮಸಾಜ್ ಮಾಡಿ. ಬಳಿಕ ಒಂದು ಗಂಟೆ ಬಿಟ್ಟು ತಲೆ ಸ್ನಾನ ಮಾಡಿ. ಇದರಿಂದ ಕೂದಲು ಉದುರುವುದು ಕಡಿಮೆಯಾಗುತ್ತದೆ. ಹಾಗೂ ಕೂದಲ ಬೆಳವಣಿಗೆ ಆಗಲು ಕೂಡ ಇದು ಸಹಾಯ ಮಾಡುತ್ತದೆ.

ನೈಸರ್ಗಿಕ ರಸಗಳು  ಬೆಳ್ಳುಳ್ಳಿ ರಸ, ಈರುಳ್ಳಿ ರಸ ಅಥವಾ ಶುಂಠಿಯ ರಸವನ್ನು ತೆಗೆದುಕೊಂಡು ಕೆಲವು ನಿಮಿಷಗಳ ಕಾಲ ನಿಮ್ಮ ನೆತ್ತಿಯನ್ನು ಮಸಾಜ್ ಮಾಡಿ. ಇದು ಉತ್ತಮ ಕೂದಲು ಬೆಳವಣಿಗೆಯನ್ನು ಸಹಾಯಕಾರಿ ಹಾಗೂ ಕೂದಲು ಉದುರುವುದನ್ನು ತಡೆಯುತ್ತದೆ.


ಯೋಗಾಸನ ಕೂದಲು ಉದುರುವಿಕೆಯನ್ನು ತಡೆಯಲು ಮತ್ತು ಕೂದಲ ಬೆಳವಣಿಗೆಯನ್ನು ಸುಧಾರಿಸಲು ಖಾಲಿ ಹೊಟ್ಟೆಯಲ್ಲಿ ಪ್ರತಿನಿತ್ಯ ಬೆಳಿಗ್ಗೆ ಅಥವಾ ಸಂಜೆ ಯೋಗಾಸನ ಮಾಡಬೇಕು. ಯೋಗಾಸನ ಮಾಡುವುದರಿಂದ ಒತ್ತಡ ಕಡಿಮೆಯಾಗುತ್ತದೆ. ಸೂರ್ಯನಮಸ್ಕಾರ, ವಜ್ರಾಸನ, ಸರ್ವಂಗಾಸನ,ಹಲಾಸನ. ಪ್ರಾಣಾಯಾಮ ಮಾಡಿದರೆ ಉಳ್ಳೆದು.ಕೂದಲು ಉದುರುವಿಕೆಯನ್ನು ನೈಸರ್ಗಿಕವಾಗಿ ನಿಲ್ಲಿಸುವುದರಲ್ಲಿ ಪ್ರಾಣಾಯಾಮ ಪ್ರಮುಖ ಪಾತ್ರ ವಹಿಸುತ್ತದೆ. ನಿತ್ಯವೂ ಪ್ರಾಣಾಯಾಮ ಮಾಡುವುದರಿಂದ ಒತ್ತಡ ಮತ್ತು ಖಿನ್ನತೆ ಕಡಿಮೆಯಾಗುತ್ತದೆ. ನಿಮ್ಮ ಒತ್ತಡ ಮತ್ತು ಖಿನ್ನತೆಯನ್ನು ನೀವು ಕಡಿಮೆ ಮಾಡಿದರೆ, ನೀವು ಕೂದಲ ಉದುರುವಿಕೆಯನ್ನು ಕಡಿಮೆಗೊಳಿಸಬಹುದು. ಹೆಚ್ಚಿನ ಸಂದರ್ಭಗಳಲ್ಲಿ ಒತ್ತಡ ಮತ್ತು ಖಿನ್ನತೆಯೇ ಹೇರ್ ಫಾಲ್‍ಗೆ ಕಾರಣವಾಗಿರುತ್ತದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಶ್ರೀರಾಮನ ಬಂಟ ಹನುಮನನ್ನು ಮದುವೆ ಆಮಂತ್ರಣ ಪತ್ರಿಕೆಯಲ್ಲಿ ಮುದ್ರಿಸಿ ಭಕ್ತಿ ಮೆರೆದ ಅಯೋಧ್ಯೆಯ ಮುಸ್ಲಿಂ ಕುಟುಂಬ.

    ಹಿಂದೂ, ಮುಸ್ಲಿಂ ಎಂಬ ಭೇದವಿಲ್ಲದೆ ಅಯೋಧ್ಯೆಯಲ್ಲಿ ಶ್ರೀರಾಮನನ್ನು ಆರಾಧಿಸಲಾಗುತ್ತಿದೆ. ಇದಕ್ಕೆ ಅಯೋಧ್ಯೆಯ ಮುಸ್ಲಿಂ ಕುಟುಂಬವೊಂದು ಸಾಕ್ಷಿಯಾಗಿದೆ. ತಮ್ಮ ಮಗ, ಮಗಳ ಮದುವೆ ಆಮಂತ್ರಣ ಪ್ರತಿಕೆಯಲ್ಲಿ ರಾಮನ ಭಂಟ ಹನುಮನ ಚಿತ್ರವನ್ನು ಮುದ್ರಿಸಿ ಕುಟುಂಬ ಭಕ್ತಿ ಮೆರೆದಿದೆ. ಹೌದು. ಉತ್ತರ ಪ್ರದೇಶ ಚಾರೇರ ಗ್ರಾಮದ ಮುಸ್ಲಿಂ ಕುಟುಂಬ ಶ್ರೀರಾಮನ ಬಂಟ ಹನುಮನ ಚಿತ್ರವುಳ್ಳ ಕ್ಯಾಲೆಂಡರ್ ಒಂದನ್ನು ಮದುವೆ ಆಮಂತ್ರಣ ಪತ್ರಿಕೆಯಲ್ಲಿ ಮುದ್ರಿಸಿದೆ. ಅಷ್ಟೇ ಅಲ್ಲದೆ ಈ ಪತ್ರಿಕೆಯಲ್ಲಿ ಬ್ರಹ್ಮ, ವಿಷ್ಣು, ಶಿವ ಹಾಗೂ ನಾರದರ ಚಿತ್ರವನ್ನೂ ಕೂಡ ಕುಟುಂಬ…

  • ಜ್ಯೋತಿಷ್ಯ

    ಆಂಜನೇಯ ಸ್ವಾಮಿ ಕೃಪೆಯಿಂದ ಈ ರಾಶಿಗಳಿಗೆ ರಾಜಯೋಗ ಕಟ್ಟಿಟ್ಟಬುತ್ತಿ,. ನಿಮ್ಮ ರಾಶಿ ಇದೆಯಾ….!

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ನಿಮ್ಮ ಸಹನೆಯೇ ನಿಮ್ಮ ದೊಡ್ಡ ಅಸ್ತ್ರವಾಗಿದೆ. ಅಪರೂಪದ ಪ್ರಭಾವಿ ಜನರು ನಿಮ್ಮ ಸಂಪರ್ಕಕ್ಕೆ ಬರಲಿದ್ದಾರೆ ಮತ್ತು ನಿಮ್ಮ ಸಹಾಯವನ್ನು ಯಾಚಿಸುವರು. ಹಣಕಾಸಿನ ಸ್ಥಿತಿ ಉತ್ತಮವಾಗಿರುತ್ತದೆ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ…

  • ಜ್ಯೋತಿಷ್ಯ

    ದಿನ ಭವಿಷ್ಯ ಶುಕ್ರವಾರ, ಕಾರ್ತೀಕ ಹುಣ್ಣಿಮೆಯ ದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 ಮೇಷ(23 ನವೆಂಬರ್, 2018) ಸಂಜೆಯಲ್ಲಿ ವಿಶ್ರಾಂತಿ ತೆಗೆದುಕೊಳ್ಳಿ. ವಿಳಂಬಿತ ಪಾವತಿಗಳನ್ನು ಮಾಡುತ್ತಿದ್ದ ಹಾಗೆ ಹಣದ ಪರಿಸ್ಥಿತಿ ಸುಧಾರಿಸುತ್ತದೆ. ಕುಟುಂಬ ಮತ್ತು ಸ್ನೇಹಿತರೊಂದಿಗೆ ಆಹ್ಲಾದಕರ…

  • ಸರ್ಕಾರದ ಯೋಜನೆಗಳು

    ರಾಜಕಾರಣಿಗಳ ಮತ್ತು ಸರಕಾರಿ ಅಧಿಕಾರಿಗಳ ಮಕ್ಕಳು ಸರಕಾರಿ ಶಾಲೆಗೆ..! ತಿಳಿಯಲು ಈ ಲೇಖನ ಓದಿ ..

    ಖಾಸಗಿ ಶಾಲೆಗಳು ಇದೀಗ ಎಲ್ಲೆಂದರೆಲ್ಲಿ ತಲೆಯೆತ್ತುತ್ತಿವೆ. ಗಲ್ಲಿಗೊಂದರಂತೆ ಶಾಲೆಗಳು ನಮಗೆ ಕಾಣಸಿಗುತ್ತವೆ. ಶಿಕ್ಷಣವು ಮೂಲಭೂತ ಹಕ್ಕಾಗಿರದೇ, ಇದೀಗ ವ್ಯಾಪಾರದ ಸರಕಾಗಿ ಮಾರ್ಪಟ್ಟಿದೆ.

  • ಸೌಂದರ್ಯ

    ‘ಮೊಡವೆ’ ಸಮಸ್ಯೆಗೆ ಇಲ್ಲಿದೆ ಮನೆಮದ್ದು…!

    ಮೊಡವೆ ಸಮಸ್ಯೆ ಹರೆಯದಲ್ಲಿ ಬಹುತೇಕರನ್ನು ಕಾಡುತ್ತದೆ. ಒತ್ತಡ, ಹಾರ್ಮೋನ್ ಸಮಸ್ಯೆ, ಔಷಧಗಳ ಅಡ್ಡ ಪರಿಣಾಮ ಸೇರಿದಂತೆ ಇನ್ನೂ ಹಲವು ಕಾರಣಗಳಿಂದ ಉಂಟಾಗುವ ಮೊಡವೆಗಳ ಕಲೆಗಳು ಉಳಿಯುವ ಸಾಧ್ಯತೆ ಇದೆ.ಆದ್ದರಿಂದ ಹಲವರು ಮೊಡವೆಗಳ ನಿವಾರಣೆಗೆ ರಾಸಾಯನಿಕ ವಸ್ತುಗಳನ್ನು ಬಳಸುತ್ತಾರೆ. ಅವುಗಳು ತಾತ್ಕಾಲಿಕ ಪರಿಹಾರ ನೀಡಿದರೂ ಸಮಸ್ಯೆಯನ್ನು ನಿವಾರಿಸುವುದಿಲ್ಲ. ಆದ್ದರಿಂದ ಮನೆಮದ್ದನ್ನು ಟ್ರೈಮಾಡಿ. ಪರಿಣಾಮ ನಿಧಾನವಾದರೂ ಯಾವುದೇ ಅಡ್ಡ ಪರಿಣಾಮ ಇರುವುದಿಲ್ಲ. ಪ್ರತಿದಿನ ಕನಿಷ್ಠ ಎರಡರಿಂದ ಮೂರು ಲೀಟರ್ ನಷ್ಟು ನೀರು ಕುಡಿಯಬೇಕು. ಪ್ರತಿದಿನ ತಪ್ಪದೆ ಆರರಿಂದ ಎಂಟು ಬಾರಿ…

  • ಉಪಯುಕ್ತ ಮಾಹಿತಿ

    ನಿಮ್ಮ ಪಾನ್‌ಕಾರ್ಡ್‌ ಆಧಾರ್‌ ಜೊತೆ ಲಿಂಕ್ ಆಗಿದೆಯೇ? ತಿಳಿಯೋದು ಹೇಗೆ? ಇಲ್ಲಿದೆ ವಿವರ

    ಸರ್ಕಾರ ನಿಗದಿಪಡಿಸಿದ ಸಮಯದ ಒಳಗೆ ಪಾನ್ಅನ್ನು ಆಧಾರ್ ಜೊತೆ ಲಿಂಕ್ ಮಾಡದಿದ್ದರೆ ಅದು ನಿಷ್ಕ್ರೀಯವಾಗುತ್ತದೆ. 31 ಮಾರ್ಚ್ 2022ರ ವರೆಗೆ ಇದ್ದ ಅವಧಿಯನ್ನು ಸರ್ಕಾರ ಮಾರ್ಚ್ 2023ರವರೆಗೆ ವಿಸ್ತರಿಸಿದೆ. ಆದ್ದರಿಂದ  (ಏಪ್ರಿಲ್ 1ರಿಂದ) ಲಿಂಕ್ ಮಾಡುವವರಿಗೆ ಶುಲ್ಕ ಅಪ್ಲೈ ಆಗಲಿದೆ. ಅಂದರೆ ದಂಡ ಶುಲ್ಕ  1000 ರೂಪಾಯಿ ತನಕ ಬೀಳಲಿದೆ. ಹೀಗಾಗಿ ನೀವು ಈಗಾಗಲೇ ಪಾನ್ ಲಿಂಕ್ ಮಾಡಿದ್ದರೆ ಅದು ಯಶಸ್ವಿಯಾಗಿದೆಯೇ? ಇಲ್ಲವೇ ಅನ್ನೋದನ್ನು ತಿಳಿಯೋದು ಹೇಗೆ? ಇಲ್ಲಿದೆ ವಿವರ. ಆದಾಯ ತೆರಿಗೆ ಕಾಯ್ದೆ 139 ಎಎ…