News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

ಹೇರ್ ಫಾಲ್ ಟೆನ್ಶನ್ ಇಲ್ಲಿಗೆ ಬಿಡಿ, ಇನ್ಮುಂದೆ ನ್ಯಾಚುರಲ್ ಪರಿಹಾರ ಟ್ರೈ ಮಾಡಿ,..!

191

ತುಂಬಾ ಕೂದಲು ಉದುರುತ್ತಿದೆ ಅಂತ ಚಿಂತೆ ಶುರುವಾಗಿದ್ಯಾ? ಕೂದಲು ಯಾಕೆ ಉದುರುತ್ತೆ? ಈ ಸಮಸ್ಯೆಗೆ ನೈಸರ್ಗಿಕ ಮದ್ದು ಏನು? ಯಾವೆಲ್ಲಾ ಆಹಾರವನ್ನೂ ಸೇವಿಸಬೇಕು? ಹೇಗೆ ಕೂದಲಿನ ರಕ್ಷಣೆ ಮಾಡಬೇಕು ಎನ್ನುವ ಚಿಂತೆಯಲ್ಲಿದ್ದೀರಾ? ಏನಪ್ಪಾ ಮಾಡೋದು ಈ ಸಮಸ್ಯೆಗೆ ಅಂತ ಯೋಚನೆ ಮಾಡೋದನ್ನ ಬಿಡಿ.

ಸಾಮಾನ್ಯವಾಗಿ ಎಲ್ಲರನ್ನೂ ಕಾಡುವ ಸಮಸ್ಯೆ ಅಂದ್ರೆ ಅದು ಹೇರ್ ಫಾಲ್. ದೇಹಕ್ಕೆ ಆರೋಗ್ಯಕರ, ಪೌಷ್ಠಿಕಾಂಶವುಳ್ಳ ಆಹಾರ ಸೇವಿಸದಿದ್ದರೆ ಈ ಹೇರ್ ಫಾಲ್ ಸಮಸ್ಯೆ ಬರುತ್ತದೆ. ಅಲ್ಲದೆ ಅತಿಯಾದ ಯೋಚನೆ, ನಿದ್ರಾಹೀನತೆ ಹಾಗೂ ಟೆನ್ಶನ್‍ನಿಂದ ಕೂಡ ಕೂದಲು ಉದುರೋಕೆ ಶುರುವಾಗುತ್ತದೆ. ಸಾಮಾನ್ಯವಾಗಿ ಎಲ್ಲರಿಗೂ ಕೂದಲು ಉದುರತ್ತೆ. ಆದ್ರೆ ಕೂದಲು ಉದುರಿರುವ ಸ್ಥಳದಲ್ಲಿ ಮತ್ತೆ ಕೂದಲು ಬೆಳೆಯದಿದ್ದರೆ ಅದಕ್ಕೆ ಹೇರ್ ಫಾಲ್ ಸಮಸ್ಯೆ ಎನ್ನುತ್ತಾರೆ. ನಾವು ತಿಳಿಸುವ ಸುಲಭ ಹಾಗೂ ನೈಸರ್ಗಿಕ ಮದ್ದನ್ನು ಹಾಗೂ ಕೆಲವು ಆರೋಗ್ಯದ ಸಲಹೆಯನ್ನು ಪಾಲಿಸಿದರೆ ನೀವು ನಿಮ್ಮ ಹೇರ್ ಫಾಲ್ ಸಮಸ್ಯೆಯಿಂದ ಹೊರಬರಬಹುದು. ಹೌದು ಆ ಸುಲಭ, ನೈಸರ್ಗಿಕ ಸಲಹೆಗಳು ಇಲ್ಲಿವೆ ನೋಡಿ.

ಯಾವೆಲ್ಲಾ ವಿಟಮಿನ್ಸ್ ಬರಿತ ಆಹಾರ ಸೇವಿಸಬೇಕು ಹೇರ್ ಫಾಲ್ ನಿಯಂತ್ರಿಸಲು ವಿಟಿಮಿನ್-ಎ, ವಿಟಮಿನ್-ಬಿ, ಓಮೆಗಾ-3 ಹಾಗೂ ವಿಟಮಿನ್-ಇ ಸಮೃದ್ಧವಾಗಿರುವ ಆಹಾರವನ್ನು ಸೇವಿಸಬೇಕು. ಇದರಿಂದ ಕೂದಲ ಬೆಳವಣಿಗೆಗೆ ಉತ್ತಮ ವಿಟಮಿನ್ ಅಂಶ ದೊರಕಿ ಹೇರ್ ಫಾಲ್ ಕಡಿಮೆಯಾಗುತ್ತದೆ.

ಆಂಟಿ ಆಕ್ಸಿಡೆಂಟ್ ಗುಣಗಳುಳ್ಳ ವಿಟಮಿನ್-ಎ ಪದಾರ್ಥಗಳು ಆರೋಗ್ಯಕರ ಕೂದಲು ಮತ್ತು ಕೂದಲು ಬೆಳವಣಿಗೆಯನ್ನು ಉತ್ತೇಜಿಸುತ್ತದೆ. ಸಿಹಿ ಆಲೂಗೆಡ್ಡೆ, ಕ್ಯಾರೆಟ್, ಕರಿಬೇವಿನ ಸೊಪ್ಪು, ಒಣಗಿದ ಏಪ್ರಿಕಾಟ್, ಸ್ವೀಟ್ ಕೆಂಪು ಮೆಣಸು, ಟ್ಯೂನಾ ಮೀನು, ಉಷ್ಣವಲಯದ ಹಣ್ಣುಗಳು(ಮಾವು) ವಿಟಮಿನ್-ಎ ಅಂಶವನ್ನು ಒಳಗೊಂಡಿರುತ್ತದೆ. ಇದು ಕೂದಲ ಬೆಳವಣಿಗೆಯನ್ನು ಉತ್ತೇಜಿಸುತ್ತದೆ ಮತ್ತು ಕೂದಲು ನಷ್ಟವನ್ನು ತಡೆಯುತ್ತದೆ. ಮೊಟ್ಟೆ, ಮೀನು, ಮತ್ತು ಹಾಲು ನಮ್ಮ ಆಹಾರದಲ್ಲಿ ಒಮೆಗಾ -3 ಅಂಶವಿರುತ್ತದೆ. ಬೀಜಗಳು (ಬಾದಾಮಿ), ಶೆಲ್ಫಿಶ್, ಮೀನು, ಆಲಿವ್ ಎಣ್ಣೆ, ಬ್ರೊಕೊಲಿನಲ್ಲಿ ವಿಟಮಿನ್ ಇ ಅಂಶ ಅಡಕವಾಗಿರುತ್ತದೆ. ವಿಟಮಿನ್ ಇ ಆರೋಗ್ಯ ಸುಧಾರಣೆಗೆ ಸಹಾಯ ಮಾಡಿ ದೇಹದಲ್ಲಿ ರಕ್ತದ ಸಂಚಲನವನ್ನು ಉತ್ತಮಗೊಳಿಸುತ್ತದೆ. ಮಾಂಸ, ಮೊಟ್ಟೆಗಳು, ಮೀನುಗಳು ಅಥವಾ ಡೈರಿ ಆಹಾರಗಳು ವಿಟಮಿನ್-ಬಿಯಿಂದ ಸಮೃದ್ಧವಾಗಿವೆ. ಈ ವಿಟಮಿನ್‍ಗಳು ಮೆಲನಿನ್ ಅನ್ನು ಉತ್ಪಾದಿಸಲು ಸಹಾಯ ಮಾಡುತ್ತವೆ, ಇದು ಕೂದಲಿಗೆ ಆರೋಗ್ಯಕರ ಬಣ್ಣವನ್ನು ನೀಡುತ್ತದೆ. ಜೊತೆಗೆ ರಕ್ತ ಸಂಚಲವನ್ನು ಸುಧಾರಿಸುತ್ತದೆ ಮತ್ತು ಕೂದಲು ಉದುರುವಿಕೆಯನ್ನು ನಿಲ್ಲುಸುತ್ತದೆ.


ಹೆಡ್ ಮಸಾಜ್  ಪ್ರತಿ ನಿತ್ಯ 15 ನಿಮಿಷಗಳ ಕಾಲ ನಿಮ್ಮ ತಲೆಯನ್ನು ಮಸಾಜ್ ಮಾಡುವುದರಿಂದ ನೆತ್ತಿಯಲ್ಲಿ ರಕ್ತ ಸಂಚಲನ ಉತ್ತಮ ರೀತಿಯಲ್ಲಿ ಆಗುತ್ತದೆ. ತಲೆ ಮಸಾಜ್ ಮಾಡಲು ತೆಂಗಿನ ಎಣ್ಣೆ ಅಥವಾ ಬಾದಾಮಿ ತೈಲವನ್ನು ಬಳಸಿದರೆ ಉತ್ತಮ. ಯಾಕೆಂದರೆ ಬಾದಾಮಿ ತೈಲ ನಿಮ್ಮ ನೆತ್ತಿಯನ್ನು ಮೃದುಗೊಳಿಸುವುದು. ಸಾಧ್ಯವಾದರೆ, ವಾರಕ್ಕೆ ಕನಿಷ್ಠ ಎರಡು ಬಾರಿ ಕೂದಲು ಉದುರುವಿಕೆಯನ್ನು ನಿಲ್ಲಿಸಲು ಬಾದಾಮಿ ತೈಲದಿಂದ ತಲೆಗೆ ಮಸಾಜ್ ಮಾಡಿಕೊಳ್ಳಿ ಉತ್ತಮ ಫಲಿತಾಂಶ ಪಡೆಯಿರಿ.

ಮೊಟ್ಟೆ  ವಾರದಲ್ಲಿ ಎರಡು ಬಾರಿ ಮೊಟ್ಟೆಯ ಬಿಳಿಯ ಬಿಳಿಯ ಭಾಗವನ್ನು ಬೇರ್ಪಡಿಸಿ ಅದನ್ನು ನಿಮ್ಮ ನೆತ್ತಿಯನ್ನು ಮಸಾಜ್ ಮಾಡುವುದರಿಂದ ಇದು ನಿಮ್ಮ ಕೂದಲನ್ನು ಬಲಪಡಿಸುತ್ತದೆ ಮತ್ತು ಪೋಷಣೆ ನೀಡುತ್ತದೆ. ಕೂದಲು ಉದುರುವಿಕೆಯನ್ನು ತಡೆಗಟ್ಟಿ ಕೂದಲು ವೇಗವಾಗಿ ಬೆಳೆಯಲು ಸಹಾಯ ಮಾಡುತ್ತದೆ.

ಬಿಸಿ ತೈಲ ಮಸಾಜ್  ತೆಂಗಿನ ಎಣ್ಣೆ, ಆಲಿವ್ ಎಣ್ಣೆ ಅಥವಾ ಕ್ಯಾನೋಲ ಎಣ್ಣೆಯನ್ನು ತೆಗೆದುಕೊಂಡು ಅದನ್ನು ಕೊಂಚ ಬಿಸಿ ಮಾಡಿ, ಕೆಲವು ನಿಮಿಷಗಳ ಕಾಲ ಈ ಬಿಸಿ ಎಣ್ಣೆಯಿಂದ ನಿಮ್ಮ ನೆತ್ತಿಯನ್ನು ಮಸಾಜ್ ಮಾಡಿ. ಬಳಿಕ ಒಂದು ಗಂಟೆ ಬಿಟ್ಟು ತಲೆ ಸ್ನಾನ ಮಾಡಿ. ಇದರಿಂದ ಕೂದಲು ಉದುರುವುದು ಕಡಿಮೆಯಾಗುತ್ತದೆ. ಹಾಗೂ ಕೂದಲ ಬೆಳವಣಿಗೆ ಆಗಲು ಕೂಡ ಇದು ಸಹಾಯ ಮಾಡುತ್ತದೆ.

ನೈಸರ್ಗಿಕ ರಸಗಳು  ಬೆಳ್ಳುಳ್ಳಿ ರಸ, ಈರುಳ್ಳಿ ರಸ ಅಥವಾ ಶುಂಠಿಯ ರಸವನ್ನು ತೆಗೆದುಕೊಂಡು ಕೆಲವು ನಿಮಿಷಗಳ ಕಾಲ ನಿಮ್ಮ ನೆತ್ತಿಯನ್ನು ಮಸಾಜ್ ಮಾಡಿ. ಇದು ಉತ್ತಮ ಕೂದಲು ಬೆಳವಣಿಗೆಯನ್ನು ಸಹಾಯಕಾರಿ ಹಾಗೂ ಕೂದಲು ಉದುರುವುದನ್ನು ತಡೆಯುತ್ತದೆ.


ಯೋಗಾಸನ ಕೂದಲು ಉದುರುವಿಕೆಯನ್ನು ತಡೆಯಲು ಮತ್ತು ಕೂದಲ ಬೆಳವಣಿಗೆಯನ್ನು ಸುಧಾರಿಸಲು ಖಾಲಿ ಹೊಟ್ಟೆಯಲ್ಲಿ ಪ್ರತಿನಿತ್ಯ ಬೆಳಿಗ್ಗೆ ಅಥವಾ ಸಂಜೆ ಯೋಗಾಸನ ಮಾಡಬೇಕು. ಯೋಗಾಸನ ಮಾಡುವುದರಿಂದ ಒತ್ತಡ ಕಡಿಮೆಯಾಗುತ್ತದೆ. ಸೂರ್ಯನಮಸ್ಕಾರ, ವಜ್ರಾಸನ, ಸರ್ವಂಗಾಸನ,ಹಲಾಸನ. ಪ್ರಾಣಾಯಾಮ ಮಾಡಿದರೆ ಉಳ್ಳೆದು.ಕೂದಲು ಉದುರುವಿಕೆಯನ್ನು ನೈಸರ್ಗಿಕವಾಗಿ ನಿಲ್ಲಿಸುವುದರಲ್ಲಿ ಪ್ರಾಣಾಯಾಮ ಪ್ರಮುಖ ಪಾತ್ರ ವಹಿಸುತ್ತದೆ. ನಿತ್ಯವೂ ಪ್ರಾಣಾಯಾಮ ಮಾಡುವುದರಿಂದ ಒತ್ತಡ ಮತ್ತು ಖಿನ್ನತೆ ಕಡಿಮೆಯಾಗುತ್ತದೆ. ನಿಮ್ಮ ಒತ್ತಡ ಮತ್ತು ಖಿನ್ನತೆಯನ್ನು ನೀವು ಕಡಿಮೆ ಮಾಡಿದರೆ, ನೀವು ಕೂದಲ ಉದುರುವಿಕೆಯನ್ನು ಕಡಿಮೆಗೊಳಿಸಬಹುದು. ಹೆಚ್ಚಿನ ಸಂದರ್ಭಗಳಲ್ಲಿ ಒತ್ತಡ ಮತ್ತು ಖಿನ್ನತೆಯೇ ಹೇರ್ ಫಾಲ್‍ಗೆ ಕಾರಣವಾಗಿರುತ್ತದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ವಿಚಿತ್ರ ಆದರೂ ಸತ್ಯ

    ಈ ಮಹಿಳೆ ಪುರುಷರ ಜೊತೆ ಸಂಬಂಧ ಬೆಳೆಸಿ ಹೇಳೋದೇನು ಗೊತ್ತಾ…?ತಿಳಿಯಲು ಈ ಲೇಖನ ಓದಿ..

    ಬ್ರಿಟನ್’ನಿನ ಮಾಜಿ ಮಾಡೆಲ್ ಹಾಗೂ ವಿಧವೆ ಮಹಿಳೆಯೊಬ್ಬಳು ಆಕೆ ಮದುವೆಯಾದ 100 ಪುರುಷರ ಜೊತೆ ಸಂಬಂಧ ಬೆಳೆಸಿರುವುದಾಗಿ ತಿಳಿಸಿದ್ದಾಳೆ. ಕೆಲ ಪತಿಯರನ್ನು ಖುಷಿಪಡಿಸಿ ಅವರು ಪತ್ನಿಯರ ಜೊತೆ ಸುಖ ಜೀವನ ನಡೆಸಲು ನೆರವಾಗಿದ್ದೇನೆಂದು ಹೇಳಿಕೆ ನೀಡಿದ್ದಾಳೆ.

  • inspirational

    ನೇರಳೆ ಬೀಜದ ಪುಡಿ ಮಧುಮೇಹವನ್ನು ಕಂಟ್ರೋಲ್‌ ಮಾಡಲು ನಿಜಕ್ಕೂ ಸಹಕಾರಿಯೇ?

    ಆರೋಗ್ಯಕರ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಾಪಾಡಿಕೊಳ್ಳಲು ನೇರಳೆ ಬೀಜದ ಪುಡಿಯನ್ನು ನೈಸರ್ಗಿಕ ಮಾರ್ಗವಾಗಿ ಬಳಸಲಾಗುತ್ತದೆ. ಇದು ಶುಗರ್ ಲೆವೆಲ್‌ನ್ನು ನಿಯಂತ್ರಿಸಲು ಯಾವ ರೀತಿ ಸಹಕಾರಿಯಾಗಬಲ್ಲದು ಎನ್ನುವುದನ್ನು ತಿಳಿಯೋಣ. ಅಧಿಕ ರಕ್ತದ ಸಕ್ಕರೆಯಿಂದ ಉಂಟಾಗುವ ದೀರ್ಘಕಾಲೀನ ತೊಡಕುಗಳನ್ನು ತಡೆಗಟ್ಟಲು, ದೇಹದಾದ್ಯಂತ ರಕ್ತನಾಳಗಳು ಮತ್ತು ನರಗಳಿಗೆ ಹಾನಿಯಾಗದಂತೆ ಮಧುಮೇಹವನ್ನು ನಿರ್ವಹಿಸುವುದು ಅತ್ಯಗತ್ಯ. ಆರೋಗ್ಯಕರ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಾಪಾಡಿಕೊಳ್ಳುವುದು ಒಟ್ಟಾರೆ ಜೀವನದ ಗುಣಮಟ್ಟವನ್ನು ಸುಧಾರಿಸುತ್ತದೆ. ಆಹಾರದ ಮಧ್ಯಸ್ಥಿಕೆಗಳು ಈ ನಿರ್ವಹಣೆಯಲ್ಲಿ ಮಹತ್ವದ ಪಾತ್ರವನ್ನು ವಹಿಸುತ್ತವೆ, ಏಕೆಂದರೆ ಅವು ರಕ್ತದಲ್ಲಿನ ಸಕ್ಕರೆ…

  • ಆರೋಗ್ಯ

    ಈ ಸೊಳ್ಳೆಗಳು ಬೇರೆಯವರಿಗಿಂತ ನಿಮ್ಮನ್ನೇ ಯಾಕೆ ಹೆಚ್ಚು ಕಚ್ಚುತ್ತವೆ ಗೊತ್ತಾ…!ಈ ಲೇಖನಿ ಓದಿ, ಗೊತ್ತಾಗುತ್ತೆ…

    ಮನೆಯಲ್ಲಿ ಫ್ಯಾನ್, ಕೂಲರ್ ಇಲ್ಲಾಂದ್ರೆ ನೀವು ಸೊಳ್ಳೆಮಹರಾಯನಿಂದ ತಪ್ಪಿಸಿಕೊಳ್ಳುವುದು ತುಂಬಾ ಕಷ್ಟ. ಅದರಲ್ಲೂ ಮನೆಯಲ್ಲಿ ಕರೆಂಟ್ ಏನಾದ್ರೂ ಹೋದ್ರೆ ನಿಮ್ಮ ಕತೆ ಮುಗಿದ ಹಾಗೆ. ಇನ್ನೂ ಚಳಿಗಾಲದಲ್ಲಂತೂ ಕೇಳದೇ ಬೇಡ. ಕೆಲವೊಂದು ಸಾರಿ ನಮ್ಗೆ ಅನ್ನಿಸುವುದೇನಂದ್ರೆ ಈ ಸೊಳ್ಳೆಗಳು ನಮಗೆ ಯಾಕೆ ಕಚ್ಚುತ್ತವೆ ಅಂತ ಬಹಳ ತಲೆ ಕೆಡಿಸಿಕೊಳ್ಳುತ್ತೇವೆ.

  • ವ್ಯಕ್ತಿ ವಿಶೇಷಣ

    ತಮ್ಮ ಜೀವನದಲ್ಲಿ ಜಾಸ್ತಿ ಓದದೇ ಇದ್ರೂ ಯಶಸ್ಸು ಕಂಡ ಭಾರತೀಯರ ಬಗ್ಗೆ ನಿಮ್ಗೆ ಗೊತ್ತಾ ..?ತಿಳಿಯಲು ಈ ಲೇಖನ ಓದಿ..

    ಓದು ಜೀವನಕ್ಕೆ ತುಂಬಾನೇ ಮುಖ್ಯ., ವಿದ್ಯೆ ಮುಖ್ಯ ಆದ್ರೆ ವಿನಯ ಅತ್ಯಗತ್ಯ. ವಿನಯಾನ ಯಾವ ಶಾಲೇಲೂ ಹೇಳಿಕೊಡಲ್ಲ. ಯೋಗ ಎಲ್ಲರಿಗೂ ಬರಬಹುದು, ಆದ್ರೆ ಯೋಗ್ಯತೆ ಕೆಲವರಿಗೆ ಮಾತ್ರ ಇರತ್ತೆ.. ” ದೇಶ ಸುತ್ತಿ ನೋಡು, ಕೋಶ ಓದಿ ನೋಡು” ಅಂತಾರೆ ದೊಡ್ಡವರು. ಹಾಗೆ ಎಲ್ಲಾ ಜ್ಞಾನಾನೂ ಪುಸ್ತಕದಿಂದಾನೆ ಸಿಗಲ್ಲ, ಅನುಭಾವಾನೂ ಅಷ್ಟೇ ಮುಖ್ಯ. 1. ಅಕ್ಷಯ್ ಕುಮಾರ್:- ಮಾರ್ಷಲ್ ಆರ್ಟ್ಸ್ ಮುಂದುವರಿಸಬೇಕು ಅಂತ ಕಾಲೇಜನ್ನ ಬಿಟ್ರು. ಇವ್ರೊಂಥರ ಮಲ್ಟಿ ಟ್ಯಾಲೆಂಟೆಡ್. ನಟನೆ ಮಾಡ್ತಾರೆ, ಅಡಿಗೆ ಮಾಡ್ತಾರೆ, ಫೈಟ್…

  • ಸುದ್ದಿ

    ವಾಟ್ಸಾಪ್ ಪ್ರಿಯರಿಗೊಂದು ಶಾಕಿಂಗ್ ನ್ಯೂಸ್…! 2020 ಕ್ಕೆ ಕೊನೆಯಾಗುತ್ತೆ ಈ ಆ್ಯಪ್…!! ಯಾವುದು ಗೊತ್ತೇ,.?

    ವಾಟ್ಸಾಪ್ ಬಳಕೆದಾರರಿಗೆ ಬಿಗ್ ಶಾಕ್! ಫೇಸ್‌ಬುಕ್ ಒಡೆತನದ ವಾಟ್ಸಾಪ್ ತನ್ನ ಅಪ್ಲಿಕೇಶನ್‌ನಲ್ಲಿ ಬದಲಾವಣೆ ತರುವ ಉದ್ದೇಶ ಹೊಂದಿದ್ದು, ಫೆಬ್ರವರಿ 1, 2020ರ ಬಳಿಕ ಕೆಲ ಮೊಬೈಲ್‌ಗಳಿಗೆ ತನ್ನ ಸೌಲಭ್ಯವನ್ನು ನಿಲ್ಲಿಸಲು ಕಂಪನಿ ತೀರ್ಮಾನಿಸಿದೆ. ಪ್ರಪಂಚದ ಜನಪ್ರಿಯ ಸಂದೇಶ ರವಾನೆ ಮಾಡುವ ವೇದಿಕೆಗಳಲ್ಲಿ ವಾಟ್ಸಾಪ್ ಹೆಚ್ಚು ಜನಮೆಚ್ಚುಗೆ ಪಡೆದುಕೊಂಡಿದೆ. ಇದೀಗ ವಾಟ್ಸಾಪ್ ಪ್ರಿಯರಿಗೆ ಒಂದ ಕಹಿ ಸುದ್ದಿ ಬಂದಿದ್ದು ಕೆಲ ಮೊಬೈಲ್‌ಗಳಲ್ಲಿ ವಾಟ್ಸಾಪ್ ಸೇವೆ ಬಂದ್ ಆಗಲಿದೆ ಎಂದು ಕೇಳಿ ಬಂದಿದೆ. ಸಾಮಾಜಿಕ ಜಾಲತಾಣದ ದೈತ್ಯ ಮಾದ್ಯಮವಾಗಿ ಬೆಳೆದಿರುವ…

  • ಸುದ್ದಿ

    ಡಾರ್ಲಿಂಗ್ ಪ್ರಭಾಸ್ ಮನ ಕದ್ದ ಚೆಲುವೆ ಇವರೇನಾ..?

    ಟಾಲಿವುಡ್ ನ ಮೋಸ್ಟ್ ಹ್ಯಾಂಡ್ ಸಮ್ ಹಾಗೂ ಎಲಿಜಿಬಲ್ ಬ್ಯಾಚುಲರ್ ನಟ ಪ್ರಭಾಸ್ ಮದುವೆ ಯಾವಾಗ ಯಾವಾಗ ಎಂದು ಕೇಳುತ್ತಿದ್ದ, ಟಾಲಿವುಡ್ ಮಂದಿಗೆ ಡಾರ್ಲಿಂಗ್ ಪ್ರಭಾಸ್ ಮದುವೆ ವಿಚಾರವಾಗಿ ಸಣ್ಣದೊಂದು ಕ್ಲೂ ಸಿಕ್ಕಿದೆ ಹೌದು ಬಾಹುಬಲಿ ಸಿನಿಮಾದ ನಂತರ ನಟ ಪ್ರಭಾಸ್ ನಟಿ ಅನುಷ್ಕಾ ಶೆಟ್ಟಿಯನ್ನು ಮದುವೆಯಾಗುತ್ತಾರೆ ಎಂಬ ಸುದ್ದಿ ಎಲ್ಲೆಡೆ ಹರಿದಾಡುತ್ತಿತ್ತು, ಜೊತೆಗೆ ಇದಕ್ಕೆ ಪುಷ್ಠಿ ನೀಡುವಂತೆ ಈ ಬಾಹುಬಲಿ ಜೋಡಿ ಹಲವು ಸಮಾರಂಭಗಳಲ್ಲಿ, ಅಲ್ಲಿ ಇಲ್ಲಿ ಒಟ್ಟಾಗಿ ಸುತ್ತಾಡಿದ್ದರು.  ಅಷ್ಟೇಲ್ಲದೆ ಕೆಲ ದಿನಗಳ ಹಿಂದೆ…