ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇದ್ದಿದ್ದು ಇದ್ದ ಹಾಗೆ ಹೇಳಿದರೆ ಎದ್ದು ಬಂದು ಎದೆಗೆ ಒದ್ದಂಗಾಯ್ತು ಎಂಬುವುದು ನನ್ನ ಪರಿಸ್ಥತಿ. ನಾನು ಯಾರನ್ನು ದೋಷಿಸಿಲ್ಲ. ಕೊಡಗು ಸಂತ್ರಸ್ಥರಿಗೆ ಸರ್ಕಾರ ಚೆನ್ನಾಗಿರುವ ಮನೆ ನಿರ್ಮಿಸಿ ಕೊಡಲಿ ಎಂದು ಮನವಿ ಮಾಡಿದ್ದು ಎಂದು ಸಚಿವ ಸಾರಾ ಮಹೇಶ್ಗೆ ನಟಿ ಹರ್ಷಿಕಾ ಪೂಣಚ್ಚ ತಿರುಗೇಟು ನೀಡಿದ್ದಾರೆ.ವಿಡಿಯೋ ಮೂಲಕ ಶನಿವಾರ ತಾವು ಕೊಡಗು ಸಂಸ್ರಸ್ಥರ ಬಗ್ಗೆ ನೀಡಿದ ಹೇಳಿಕೆಗೆ ಹರ್ಷಿಕಾ ಪೂಣಚ್ಚ ಸ್ಪಷ್ಟನೆ ನೀಡಿದ್ದಾರೆ. ವಿಡಿಯೋದಲ್ಲಿ ಇದ್ದಿದ್ದು ಇದ್ದ ಹಾಗೆ ಹೇಳಿದರೆ ಎದ್ದು ಬಂದು ಎದೆಗೆ ಒದ್ದಂಗಾಯ್ತು ನನ್ನ ಪರಿಸ್ಥತಿ. ಮೈಸೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ನಾನು ಹೇಳಿದ್ದು, ಕೆಲವು ಮಾಡೆಲ್ ಮನೆಗಳ ಫೋಟೋ ನೋಡದೆ. ಅದು ನನಗೆ ಇಷ್ಟವಾಗಿಲ್ಲ. ಯಾಕೆಂದರೆ ಆ ಮನೆಗಳು ಶೀಟ್ ಮನೆ ತರಹ,

ಗಾಳಿ ಬೆಳಕಿಲ್ಲದಂತೆ ಕೆಟ್ಟದಾಗಿ ಇತ್ತು. ಹೀಗಾಗಿ ರಾಜ್ಯ ಸರ್ಕಾರ ಕೊಡಗು ಸಂತ್ರಸ್ಥರಿಗೆ ಮನೆ ಕಟ್ಟಿಕೊಡುವಾಗ ಚೆನ್ನಾಗಿರುವ ಮನೆ ಕಟ್ಟಿಕೊಡಿ. ಕೊಡಗಿನ ಸಂತ್ರಸ್ಥರ ಸ್ವಾಭಿಮಾನಕ್ಕೆ ದಕ್ಕೆ ಬರದಂತೆ ಒಳ್ಳೆಯ ಮನೆಗಳನ್ನ ಕಟ್ಟಿಕೊಡಿ ಎಂದು ನಾನು ಮನವಿ ಮಾಡಿದ್ದೇನೆ ಅಷ್ಟೆ. ನಾನು ಈ ವಿಷಯಕ್ಕೆ ಯಾರನ್ನೂ ದೂರಿಲ್ಲ ಎಂದು ಸ್ಪಷ್ಟಪಡಿಸಿದರು.ಈ ಬಗ್ಗೆ ಮಾತನಾಡಲು ಅವರು ಯಾರು? ಏನು ಓದಿದ್ದಾರೆ? ಎಂದು ಕೇಳಿದ್ದಾರೆ. ನಾನು ಇಂಜಿನಿಯರ್ ಬಿ.ಇ ಪದವಿ ಪಡೆದಿದ್ದೇನೆ. ನಾನು ಕೊಡಗಿನ ಮಗಳು, ಭಾರತದ ಪ್ರಜೆ ನನಗೆ ಈ ಬಗ್ಗೆ ಕೇಳುವ ಎಲ್ಲಾ ಹಕ್ಕಿದೆ. ನಮ್ಮ ದೇಶದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಸ್ಮೃತಿ ಇರಾನಿ ಅವರು ಕೂಡ ಸಿನಿಮಾದವರು. ತಮಿಳುನಾಡಿನ ಸಾಕಷ್ಟು ಮಂತ್ರಿಗಳು ಸಿನಿಮಾದವರು.

ಅಷ್ಟೇ ಅಲ್ಲದೆ ಸಿನಿಮಾದವರು ಏನು ಮಾಡಬಹುದು ಅನ್ನೋದು ಇತ್ತೀಚಿಗೆ ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಗೊತ್ತಾಗಿದೆ. ದಯವಿಟ್ಟು ಸಿನಿಮಾದವರ ಬಗ್ಗೆ ಹಗುರವಾಗಿ ಮಾತನಾಡಬೇಡಿ ಎಂದು ಸಚಿವ ಸಾರಾ ಮಹೇಶ್ ಅವರಿಗೆ ಮಾತಿನ ಚಾಟಿ ಬೀಸಿದ್ದಾರೆ.ಹಾಗೆಯೇ ಕೊಡಗಿನಲ್ಲಿ ತುರ್ತು ಚಿಕಿತ್ಸಾ ಆಸ್ಪತ್ರೆ ಮಾಡಿ ಎನ್ನುವುದು ನಮ್ಮ ಮನವಿ. ಕೊಡಗಿನಲ್ಲಿ 7 ಲಕ್ಷಕ್ಕೂ ಅಧಿಕ ಮಂದಿ ವಾಸಿಸುತ್ತಿದ್ದಾರೆ. ಅಲ್ಲದೆ 35 ಲಕ್ಷಕ್ಕೂ ಅಧಿಕ ಮಂದಿ ಪ್ರವಾಸಿಗರು ಪ್ರತಿ ವರ್ಷ ಕೊಡಗಿಗೆ ಪ್ರವಾಸಕ್ಕೆ ಬರುತ್ತಾರೆ. ಇಷ್ಟೆಲ್ಲಾ ಜನಸಂಖ್ಯೆ ಇರುವ ಜಿಲ್ಲೆಯಲ್ಲಿ ಒಂದು ತುರ್ತು ಚಿಕಿತ್ಸಾ ಆಸ್ಪತ್ರೆ ಇಲ್ಲವೆಂದರೆ ಅದಕ್ಕಿಂತ ಬೇಸರದ ಸಂಗತಿ ಮತ್ತೊಂದಿಲ್ಲ. ಹೀಗಾಗಿ ಕೊಡಗಿಗೆ ತುರ್ತು ಚಿಕಿತ್ಸಾ ಆಸ್ಪತ್ರೆ ಬೇಕು ಎಂದು ನಾವು ಅಭಿಯಾನ ಮಾಡುತ್ತಿದ್ದೇವೆ. ಅದಕ್ಕೆ ನಿಮ್ಮ ಸಹಕಾರ ಬೇಕು.

ಆಸ್ಪತ್ರೆ ನಿರ್ಮಾಣ ಮಾಡಿ ಎಂದು ಮನವಿ ಮಾಡುತ್ತಿದ್ದೇವೆ. ಅಲ್ಲದೆ ಮಳೆಗಾಲ ಆರಂಭವಾಗುವ ಮುನ್ನ ಕೊಡಗು ಜನರಿಗೆ ಮನೆ ನಿರ್ಮಿಸಿಕೊಡಿ, ಮಳೆ ಆರಂಭವಾದರೆ ಅವರಿಗೆ ಬೇರೆ ಕಡೆ ಶಿಫ್ಟ್ ಆಗಲು ಕಷ್ಟವಾಗುತ್ತೆ ಎಂದು ಮನವಿ ಮಾಡಿಕೊಂಡರು.
ಸಾರಾ ಮಹೇಶ್ ಹೇಳಿದ್ದೇನು?
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಾ.ರಾ ಮಹೇಶ್, ಯಾರವರು? ಹರ್ಷಿಕಾ ಪೂಣಚ್ಚ ಏನಾಗಿದ್ದಾರೆ?. ಅವರೇನು ಸಿನಿಮಾ ನಟಿನಾ? ಸಿನಿಮಾ ನಟಿ ಆದರೆ ಅವರು ಸಿನಿಮಾ ಬಗ್ಗೆ ಮಾತ್ರ ಮಾತನಾಡಬೇಕು. ಅದನ್ನು ಬಿಟ್ಟು ಕೊಡಗು ಸಂತ್ರಸ್ತರ ಮನೆಗಳ ಬಗ್ಗೆ ಹರ್ಷಿಕಾ ಪೂಣಚ್ಚ ಅವರಿಗೆ ಏನು ಗೊತ್ತು? ಅವರ ವಿದ್ಯಾಭ್ಯಾಸ ಹಿನ್ನೆಲೆ ಏನು?. ವಾಸ್ತವ ಅರ್ಥ ಮಾಡಿಕೊಳ್ಳದೆ ತಜ್ಞರಂತೆ ಮಾತನಾಡಬಾರದು ಎಂದು ಪೂಣಚ್ಚ ವಿರುದ್ಧ ಸಚಿವರು ಕಿಡಿಕಾರಿದ್ದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸರಿಗಮಪ ಸಂಗೀತ ಕಾರ್ಯಕ್ರಮದ ಮೂಲಕ ಕರುನಾಡಿನಲ್ಲಿ ಗಾಯಕ ಹನುಮಂತ ಚಿರಪರಿಚಿತರಾಗಿದ್ದಾರೆ. ಹಾವೇರಿ ಜಿಲ್ಲೆಯ ಗ್ರಾಮದಲ್ಲಿ ಕುರಿ ಕಾಯುತ್ತಿದ್ದ ಹನುಮಂತ ಅವರು ‘ಸರಿಗಮಪ’ ವೇದಿಕೆಯಲ್ಲಿ ಹಾಡುವ ಮೂಲಕ ನಾಡಿನಲ್ಲಿ ಮನೆ ಮಾತಾಗಿದ್ದಾರೆ. ಮೊದಲ ಹಾಡಿನಿಂದ ಈವರೆಗೂ ಹನುಮಂತ ಹಾಡುವ ಪರಿ ನೋಡಿದರೆ ಸಾಕಷ್ಟು ಬದಲಾಗಿರುವುದು ಗಮನಕ್ಕೆ ಬರುತ್ತದೆ. ಹೊಸ ವರ್ಷ ಆರಂಭವಾಗುವ ಹೊಸ್ತಿಲಲ್ಲಿ ಹನುಮಂತನ ಪಾಲಿನ ಅದೃಷ್ಟದ ಬಾಗಿಲು ತೆರೆದಿದೆ. ಸಿನಿಮಾ ಸಂಗೀತಕ್ಕೆ ಹಿನ್ನೆಲೆ ಗಾಯಕನಾಗುವ ಅವಕಾಶ ಸಿಕ್ಕಿದೆ. ಇದುವರೆಗೆ ಸರಿಗಮಪ ವೇದಿಕೆಯಲ್ಲಿ ಹಾಡುತ್ತಿದ್ದ ಹನುಮಂತನ ಬಗ್ಗೆ ನಿರ್ದೇಶಕ…
ನಾವು ಮನೆ ಮುಂದೆ ಕೆಲವೊಂದು ಗಿಡ ಗಳನ್ನು ನೆಡುವುದು ಸಾಮಾನ್ಯ. ಆದರೆ ಕೆಲವೊಂದು ಗಿಡಗಳನ್ನು ನೆಟ್ಟರೆ ಶ್ರೀಮಂತಿಕೆ ಬರುತ್ತೆ ಎನ್ನುವ ನಂಬಿಕೆ ಇದೆ. ಅದರಲ್ಲಿ ಒಂದು ಗಿಡದ ಹೆಸರು ಮನಿಪ್ಲಾಂಟ್.
ಗೂಗಲ್ನ ಆಂಡ್ರಾಯ್ಡ್ ಸ್ಮಾರ್ಟ್ಫೋನ್ಗೆ ಆ್ಯಪ್ಸ್ಒದಗಿಸುವ ಪ್ಲೇ ಸ್ಟೋರ್ ಈಬಾರಿ ಮತ್ತೆ ಸುದ್ದಿಯಾಗಿದೆ. ಪ್ಲೇಸ್ಟೋರ್ ತುಂಬಾ ಇರುವ ಆ್ಯಪ್ಗಳ ಪೈಕಿ ಬಹುತೇಕಆ್ಯಪ್ಸ್ ನಕಲಿ ಮತ್ತು ಮಾಹಿತಿಕದಿಯುವ ಕೆಲಸ ಮಾಡುತ್ತಿವೆ. ಮಾಲ್ವೇರ್ಮತ್ತು ವೈರಸ್ ಹೊಂದಿರುವ ಆ್ಯಪ್ಸ್ಬಗ್ಗೆ ಗೂಗಲ್ ಪ್ಲೇ ಸ್ಟೋರ್ ಮತ್ತೆಸುದ್ದಿಯಲ್ಲಿದೆ. ಕಂಪ್ಯೂಟರ್ ಮತ್ತು ಸ್ಮಾರ್ಟ್ಫೋನ್ ಭದ್ರತೆ, ಸುರಕ್ಷತೆ ಒದಗಿಸುವ ಸೈಮಂಟೆಕ್ ಸಂಸ್ಥೆ ಹೊಸದಾಗಿ ಪ್ರಕಟಿಸಿರುವ ವರದಿಯಲ್ಲಿ ಗೂಗಲ್ ಪ್ಲೇ ಸ್ಟೋರ್ನಲ್ಲಿನ ಕೆಲವೊಂದು ಆ್ಯಪ್ಸ್ ನಕಲಿಯಾಗಿದ್ದು, ಗ್ರಾಹಕರ ಮಾಹಿತಿ ಕದಿಯುವ ಕೆಲಸದ ಜತೆಗೆ, ಪಾಪ್ ಅಪ್ ಜಾಹೀರಾತಿನ ಮೇಲೆ ಕ್ಲಿಕ್ ನೀಡುವ ಕೆಲಸ ಮಾಡುತ್ತಿವೆ ಎಂದು…
ಕಡಲೆಯಿಂದ ನಾವು ಅನೇಕ ಅಡುಗೆಗಳನ್ನು ಮಾಡುತ್ತೇವೆ. ಇದರಲ್ಲಿ ಪಲ್ಯ ಮಾಡುತ್ತೇವೆ. ಕಾಳಿನಂತೆ ಬೇಯಿಸಿಕೊಂಡು ತಿನ್ನುತ್ತೇವೆ. ಹಲವು ಖಾದ್ಯಗಳನ್ನು ಮಾಡುತ್ತಾರೆ. ಅದೆಷ್ಟೋ ಆಹಾರದಲ್ಲಿ ಕಡಲೆ ಬಳಸುತ್ತಾರೆ. ಕಡಲೆ ಕಾಳಿನಲ್ಲಿ ಸಾಕಷ್ಟು ಪೋಷಕಾಂಶವಿದೆ ಎಂಬುದು ಬೆರಳೆಣಿಕೆಯಷ್ಟು ಮಂದಿಗೆ ಮಾತ್ರ ಗೊತ್ತು. ದುಬಾರಿ ಬೆಲೆಯ ಬಾದಾಮಿ, ಒಣ ಹಣ್ಣುಗಳಿಗಿಂತ ಇದು ಬಹಳ ಒಳ್ಳೆಯದು. ನೆನಸಿದ ಕಡಲೆ ಕಾಳಿನಲ್ಲಿ ಪ್ರೋಟೀನ್, ಫೈಬರ್, ಮಿನರಲ್ ಹಾಗೂ ವಿಟಮಿನ್ ಬಹಳ ಪ್ರಮಾಣದಲ್ಲಿರುತ್ತದೆ. ನೆನಸಿದ ಕಡಲೆಕಾಳು ಸೇವನೆ ಮಾಡುವುದರಿಂದ ಅನೇಕ ರೋಗಗಳು ದೂರವಾಗುವ ಜೊತೆಗೆ ದೇಹಕ್ಕೆ ಹೆಚ್ಚಿನ…
ಕೆಲವರಿಗೆ ನಾಯಿ ಎಂದರೆ ಅಪಾರ ಪ್ರೀತಿ. ಅವರು ಹೋದಲ್ಲಿ ಬಂದಲ್ಲಿ ಎಲ್ಲಾ ಕಡೆ ನಾಯಿ ಜೊತೆಗಿರಬೇಕು. ಇನ್ನು ಕೆಲವರು ನಾಯಿ ಎಂದರೆ ಮೂಗು ಮುರಿಯುತ್ತಾರೆ. ಆದರೆ ನಾಯಿ ಸಾಕುವುದರಿಂದ ಹೃದಯದ ಆರೋಗ್ಯ ಚೆನ್ನಾಗಿರುತ್ತದೆ. ಹಾಗೂ ಅವರಲ್ಲಿ ಹೃದಯ ಸಂಬಂಧಿ ರೋಗಗಳೂ ಕಡಿಮೆ ಎಂದು ಸಮೀಕ್ಷೆಯೊಂದು ಹೇಳುತ್ತಿದೆ. ಅದರಲ್ಲೂ ನಗರಗಳಲ್ಲಿ ನಾಯಿ ಸಾಕುವುದರಿಂದ ಆ ಮನೆಯವರಿಗೆ ಪ್ರಯೋಜನ ಹೆಚ್ಚು ಎಂದು ವಿಜ್ಞಾನಿಗಳ ತಂಡವೊಂದು ಹೇಳಿದೆ. ಹಲವಾರು ಸಮೀಕ್ಷೆಗಳ ಪ್ರಕಾರ ನಾಯಿ ಮಾಲಿಕರಿಗೆ ರಕ್ತದೊತ್ತಡ ಕಡಿಮೆ ಇರುತ್ತದೆ. ಕಾರಣ ಸಾಕಿದ…
ಕನ್ನಡದ ಹೆಮ್ಮೆಯ ನಟ, ಅಭಿಮಾನಿಗಳ ಡಿ.ಬಾಸ್ ಸ್ಯಾಂಡಲ್ ವುಡ್ ನ ಬ್ರಾಂಡ್ ಅಂತೆಲ್ಲ ಕರೆಸಿಕೊಳ್ಳುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಅಭಿಮಾನಿಗಳು ಕೂಡ ಚೀನಾ ವಸ್ತು ಹಾಗೂ ಅಪ್ಲಿಕೇಷನ್ ಅನ್ನು ಬ್ಯಾನ್ ಮಾಡುವ ನಿರ್ಧಾರ ಕೈಗೊಂಡಿದ್ದು, ಈ ವಿಚಾರವಾಗಿ ದರ್ಶನ್ ಫ್ಯಾನ್ಸ್ ಮೊದಲು ಟಿಕ್ ಟಾಕ್ ಗೆ ಗುಡ್ ಬೈ ಹೇಳಿದ್ದಾರೆ. ಟಿಕ್ ಟಾಕ್ ನಲ್ಲಿಯೂ ಡಿಬಾಸ್ ಹೆಸರು ದಾಖಲೆ ನಿರ್ಮಿಸಿತ್ತು. ಆದರೆ ಇದ್ಯಾವುದನ್ನು ಲೆಕ್ಕಿಸದೆ ದರ್ಶನ್ ಅಭಿಮಾನಿಗಳು ಖಾತೆ ಡಿಲೀಟ್ ಮಾಡಿ ರಾಷ್ಟ್ರ ಪ್ರೇಮ ಮೆರೆದಿದ್ದಾರೆ….