ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇದ್ದಿದ್ದು ಇದ್ದ ಹಾಗೆ ಹೇಳಿದರೆ ಎದ್ದು ಬಂದು ಎದೆಗೆ ಒದ್ದಂಗಾಯ್ತು ಎಂಬುವುದು ನನ್ನ ಪರಿಸ್ಥತಿ. ನಾನು ಯಾರನ್ನು ದೋಷಿಸಿಲ್ಲ. ಕೊಡಗು ಸಂತ್ರಸ್ಥರಿಗೆ ಸರ್ಕಾರ ಚೆನ್ನಾಗಿರುವ ಮನೆ ನಿರ್ಮಿಸಿ ಕೊಡಲಿ ಎಂದು ಮನವಿ ಮಾಡಿದ್ದು ಎಂದು ಸಚಿವ ಸಾರಾ ಮಹೇಶ್ಗೆ ನಟಿ ಹರ್ಷಿಕಾ ಪೂಣಚ್ಚ ತಿರುಗೇಟು ನೀಡಿದ್ದಾರೆ.ವಿಡಿಯೋ ಮೂಲಕ ಶನಿವಾರ ತಾವು ಕೊಡಗು ಸಂಸ್ರಸ್ಥರ ಬಗ್ಗೆ ನೀಡಿದ ಹೇಳಿಕೆಗೆ ಹರ್ಷಿಕಾ ಪೂಣಚ್ಚ ಸ್ಪಷ್ಟನೆ ನೀಡಿದ್ದಾರೆ. ವಿಡಿಯೋದಲ್ಲಿ ಇದ್ದಿದ್ದು ಇದ್ದ ಹಾಗೆ ಹೇಳಿದರೆ ಎದ್ದು ಬಂದು ಎದೆಗೆ ಒದ್ದಂಗಾಯ್ತು ನನ್ನ ಪರಿಸ್ಥತಿ. ಮೈಸೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ನಾನು ಹೇಳಿದ್ದು, ಕೆಲವು ಮಾಡೆಲ್ ಮನೆಗಳ ಫೋಟೋ ನೋಡದೆ. ಅದು ನನಗೆ ಇಷ್ಟವಾಗಿಲ್ಲ. ಯಾಕೆಂದರೆ ಆ ಮನೆಗಳು ಶೀಟ್ ಮನೆ ತರಹ,

ಗಾಳಿ ಬೆಳಕಿಲ್ಲದಂತೆ ಕೆಟ್ಟದಾಗಿ ಇತ್ತು. ಹೀಗಾಗಿ ರಾಜ್ಯ ಸರ್ಕಾರ ಕೊಡಗು ಸಂತ್ರಸ್ಥರಿಗೆ ಮನೆ ಕಟ್ಟಿಕೊಡುವಾಗ ಚೆನ್ನಾಗಿರುವ ಮನೆ ಕಟ್ಟಿಕೊಡಿ. ಕೊಡಗಿನ ಸಂತ್ರಸ್ಥರ ಸ್ವಾಭಿಮಾನಕ್ಕೆ ದಕ್ಕೆ ಬರದಂತೆ ಒಳ್ಳೆಯ ಮನೆಗಳನ್ನ ಕಟ್ಟಿಕೊಡಿ ಎಂದು ನಾನು ಮನವಿ ಮಾಡಿದ್ದೇನೆ ಅಷ್ಟೆ. ನಾನು ಈ ವಿಷಯಕ್ಕೆ ಯಾರನ್ನೂ ದೂರಿಲ್ಲ ಎಂದು ಸ್ಪಷ್ಟಪಡಿಸಿದರು.ಈ ಬಗ್ಗೆ ಮಾತನಾಡಲು ಅವರು ಯಾರು? ಏನು ಓದಿದ್ದಾರೆ? ಎಂದು ಕೇಳಿದ್ದಾರೆ. ನಾನು ಇಂಜಿನಿಯರ್ ಬಿ.ಇ ಪದವಿ ಪಡೆದಿದ್ದೇನೆ. ನಾನು ಕೊಡಗಿನ ಮಗಳು, ಭಾರತದ ಪ್ರಜೆ ನನಗೆ ಈ ಬಗ್ಗೆ ಕೇಳುವ ಎಲ್ಲಾ ಹಕ್ಕಿದೆ. ನಮ್ಮ ದೇಶದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಸ್ಮೃತಿ ಇರಾನಿ ಅವರು ಕೂಡ ಸಿನಿಮಾದವರು. ತಮಿಳುನಾಡಿನ ಸಾಕಷ್ಟು ಮಂತ್ರಿಗಳು ಸಿನಿಮಾದವರು.

ಅಷ್ಟೇ ಅಲ್ಲದೆ ಸಿನಿಮಾದವರು ಏನು ಮಾಡಬಹುದು ಅನ್ನೋದು ಇತ್ತೀಚಿಗೆ ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಗೊತ್ತಾಗಿದೆ. ದಯವಿಟ್ಟು ಸಿನಿಮಾದವರ ಬಗ್ಗೆ ಹಗುರವಾಗಿ ಮಾತನಾಡಬೇಡಿ ಎಂದು ಸಚಿವ ಸಾರಾ ಮಹೇಶ್ ಅವರಿಗೆ ಮಾತಿನ ಚಾಟಿ ಬೀಸಿದ್ದಾರೆ.ಹಾಗೆಯೇ ಕೊಡಗಿನಲ್ಲಿ ತುರ್ತು ಚಿಕಿತ್ಸಾ ಆಸ್ಪತ್ರೆ ಮಾಡಿ ಎನ್ನುವುದು ನಮ್ಮ ಮನವಿ. ಕೊಡಗಿನಲ್ಲಿ 7 ಲಕ್ಷಕ್ಕೂ ಅಧಿಕ ಮಂದಿ ವಾಸಿಸುತ್ತಿದ್ದಾರೆ. ಅಲ್ಲದೆ 35 ಲಕ್ಷಕ್ಕೂ ಅಧಿಕ ಮಂದಿ ಪ್ರವಾಸಿಗರು ಪ್ರತಿ ವರ್ಷ ಕೊಡಗಿಗೆ ಪ್ರವಾಸಕ್ಕೆ ಬರುತ್ತಾರೆ. ಇಷ್ಟೆಲ್ಲಾ ಜನಸಂಖ್ಯೆ ಇರುವ ಜಿಲ್ಲೆಯಲ್ಲಿ ಒಂದು ತುರ್ತು ಚಿಕಿತ್ಸಾ ಆಸ್ಪತ್ರೆ ಇಲ್ಲವೆಂದರೆ ಅದಕ್ಕಿಂತ ಬೇಸರದ ಸಂಗತಿ ಮತ್ತೊಂದಿಲ್ಲ. ಹೀಗಾಗಿ ಕೊಡಗಿಗೆ ತುರ್ತು ಚಿಕಿತ್ಸಾ ಆಸ್ಪತ್ರೆ ಬೇಕು ಎಂದು ನಾವು ಅಭಿಯಾನ ಮಾಡುತ್ತಿದ್ದೇವೆ. ಅದಕ್ಕೆ ನಿಮ್ಮ ಸಹಕಾರ ಬೇಕು.

ಆಸ್ಪತ್ರೆ ನಿರ್ಮಾಣ ಮಾಡಿ ಎಂದು ಮನವಿ ಮಾಡುತ್ತಿದ್ದೇವೆ. ಅಲ್ಲದೆ ಮಳೆಗಾಲ ಆರಂಭವಾಗುವ ಮುನ್ನ ಕೊಡಗು ಜನರಿಗೆ ಮನೆ ನಿರ್ಮಿಸಿಕೊಡಿ, ಮಳೆ ಆರಂಭವಾದರೆ ಅವರಿಗೆ ಬೇರೆ ಕಡೆ ಶಿಫ್ಟ್ ಆಗಲು ಕಷ್ಟವಾಗುತ್ತೆ ಎಂದು ಮನವಿ ಮಾಡಿಕೊಂಡರು.
ಸಾರಾ ಮಹೇಶ್ ಹೇಳಿದ್ದೇನು?
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಾ.ರಾ ಮಹೇಶ್, ಯಾರವರು? ಹರ್ಷಿಕಾ ಪೂಣಚ್ಚ ಏನಾಗಿದ್ದಾರೆ?. ಅವರೇನು ಸಿನಿಮಾ ನಟಿನಾ? ಸಿನಿಮಾ ನಟಿ ಆದರೆ ಅವರು ಸಿನಿಮಾ ಬಗ್ಗೆ ಮಾತ್ರ ಮಾತನಾಡಬೇಕು. ಅದನ್ನು ಬಿಟ್ಟು ಕೊಡಗು ಸಂತ್ರಸ್ತರ ಮನೆಗಳ ಬಗ್ಗೆ ಹರ್ಷಿಕಾ ಪೂಣಚ್ಚ ಅವರಿಗೆ ಏನು ಗೊತ್ತು? ಅವರ ವಿದ್ಯಾಭ್ಯಾಸ ಹಿನ್ನೆಲೆ ಏನು?. ವಾಸ್ತವ ಅರ್ಥ ಮಾಡಿಕೊಳ್ಳದೆ ತಜ್ಞರಂತೆ ಮಾತನಾಡಬಾರದು ಎಂದು ಪೂಣಚ್ಚ ವಿರುದ್ಧ ಸಚಿವರು ಕಿಡಿಕಾರಿದ್ದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೆಲವು ರಹಸ್ಯಗಳನ್ನು ಎಂದಿಗೂ ಭೇದಿಸಲಾಗುವುದಿಲ್ಲ. ಪ್ರತೀ 12 ವರ್ಷಗಳಿಗೊಮ್ಮೆ ಮಹಾದೇವನ ಮಂದಿರಕ್ಕೆ ಸಿಡಿಲು ಬಡಿಯುತ್ತೆ. ಅದರ ಹೊಡೆತಕ್ಕೆ ಶಿವಲಿಂಗ ಛಿದ್ರವಾಗುತ್ತೆ. ಆದರೆ ಬೆಳಗಾಗುವಷ್ಟರಲ್ಲಿ ಮತ್ತೆ ಒಂದಾಗಿರುತ್ತದೆ.
ಹೆಚ್.ಡಿ. ರೇವಣ್ಣ ಅವರ ಕುಟುಂಬ ವೃಕ್ಷ (Family Tree) 🌳 ಹೆಚ್.ಡಿ. ರೇವಣ್ಣ ಕುಟುಂಬ ಹೆಚ್.ಡಿ. ದೇವೇಗೌಡ (ಭಾರತದ ಮಾಜಿ ಪ್ರಧಾನಮಂತ್ರಿ) │ ┌─────────────────────┴──────────────────────┐ │ │ ಹೆಚ್.ಡಿ. ರೇವಣ್ಣ (ವಿಧಾಯಕ) ಹೆಚ್.ಡಿ. ಕುಮಾರಸ್ವಾಮಿ (ಮಾಜಿ ಸಿಎಂ) │ │ │ ಅನಿತಾ ಕುಮಾರಸ್ವಾಮಿ (ಪತ್ನಿ) │ │ │ ನಿಖಿಲ್ ಕುಮಾರಸ್ವಾಮಿ (ನಟ ಹಾಗೂ ರಾಜಕಾರಣಿ) │ ಭಾವನಿ ರೇವಣ್ಣ (ಪತ್ನಿ) │ ┌────────────────────┬────────────────────────┐ │ │ ಪ್ರಜ್ವಲ್ ರೇವಣ್ಣ ಡಾ. ಸೂರಜ್ ರೇವಣ್ಣ (ಮಾಜಿ…
ಬೆಳ್ತಂಗಡಿಯಿಂದ ಆರು ಕಿ.ಮೀ. ಅಂತರದ ಕಾರ್ಕಳ ರಸ್ತೆಯಲ್ಲಿ ಬಂದರೆ ಬದ್ಯಾರ್ ಎಂಬಲ್ಲಿ ಇಳಿದು ಮತ್ತೆ ಒಂದು ಕಿ.ಮೀ. ಸಾಗಿದರೆ ಪುರಾತನವಾದ ಸಂತಾನ ಗೋಪಾಲಕೃಷ್ಣ ದೇವಸ್ಥಾನ ತಲುಪಬಹುದು. ಕರಾವಳಿಯಲ್ಲಿ ಇಂತಹ ದೇವಾಲಯವಿರುವುದು ಒಂದೆರಡು ಮಾತ್ರ. ಈ ಬಾರಿಯ ಜಾತ್ರೆ 2020ರ ಜನವರಿ ಇಂದ ನಡೆಯಲಿದೆ. ಮಕ್ಕಳಿಲ್ಲದ ದಂಪತಿ ಇಷ್ಟಾರ್ಥ ಪ್ರಾಪ್ತಿಯಾದಾಗ ನಿರ್ಮಾಣ ಮಾಡಿದ್ದ ಈ ದೇವಾಲಯಕ್ಕೆ ಆರುನೂರು ವರ್ಷಗಳ ಇತಿಹಾಸವಿದೆ. ಚಾಲುಕ್ಯ ಶಿಲ್ಪ ಶೈಲಿಯ ವೇಣುಗೋಪಾಲನ ವಿಗ್ರಹ ಇಲ್ಲಿದೆ. ಪ್ರತ್ಯೇಕವಾಗಿ ದುರ್ಗೆ ಮತ್ತು ದೈವಗಳಿಗೂ ಆರಾಧನೆ ನಡೆಯುತ್ತದೆ. 2012ರಲ್ಲಿ ದೇವಾಲಯ…
ನಮಗೆ ಬೇಕಾಗಿರೋದು ಕನ್ನಡ, ಎಲ್ಲವನ್ನೂ ಕನ್ನಡದಲ್ಲೇ ಪಡೆಯುವುದು, ಆದರೆ ಕೆಲವರ ಪ್ರಕಾರ ಕನ್ನಡಕ್ಕೆ ಅನ್ಯ ಭಾಷೆಯಿಂದ ಬರುವುದು ತಪ್ಪಂತೆ, ಡಬ್ಬಿಂಗ್ ಭೂತವಂತೆ.
ಚಂಡೀಗಢ, ಅ.9-ಚೀನಾ ಡ್ರೋಣ್ಗಳ ಮೂಲಕ ಪಾಕಿಸ್ತಾನದ ಉಗ್ರಗಾಮಿಗಳು ಪಂಜಾಬ್ ಮತ್ತು ಕಾಶ್ಮೀರದಲ್ಲಿ ವಿಧ್ವಂಸಕ ಕೃತ್ಯಕ್ಕಾಗಿ ಸ್ಫೋಟಕಗಳು ಮತ್ತು ಶಸ್ತ್ರಾಸ್ತ್ರಗಳನ್ನು ಗಡಿ ಭಾಗದಲ್ಲಿ ಎಸೆದ ಘಟನೆ ಬೆನ್ನಲ್ಲೇ ಮತ್ತೊಂದು ಆಘಾತಕಾರಿ ಪ್ರಕರಣ ವರದಿಯಾಗಿದೆ. ಪಂಜಾಬ್ನಲ್ಲಿ ಮತ್ತೆ ಪಾಕಿಸ್ತಾನ ಮೂಲದ ಎರಡು ಡ್ರೋಣ್ಗಳು ಹಾರಾಟ ನಡೆಸಿವೆ.ಪಂಜಾಬ್ನ ಫಿರೋಜ್ಪುರ ಜಿಲ್ಲೆಯ ಹುಸೇನಿವಾಲಾ ಗಡಿಯ ಮೂಲಕ ಡ್ರೋಣ್ ಭಾರತ ಪ್ರವೇಶಿಸುತ್ತಿರುವುದನ್ನು ಪತ್ತೆ ಮಾಡಲಾಗಿದ್ದು, ಪೊಲೀಸರು ಶೋಧ ಕಾರ್ಯಾಚರಣೆ ಮುಂದುವರೆಸಿದ್ದಾರೆ. ಫೀರೋಜïಪುರ ಹುಸೇನಿವಾಲಾ ಪೋಸ್ಟ್ ನಲ್ಲಿರುವ ಗಡಿ ಭದ್ರತಾ ಪಡೆ(ಬಿಎಸ್ಎಫ್) ಸಿಬ್ಬಂದಿ ಪಾಕಿಸ್ತಾನದ ಕಡೆಯಿಂದ…
ಇಂಗ್ಲಿಷ್ ಸಂಬಳಕ್ಕಾದರೆ, ಕನ್ನಡ ಉಂಬಳಕ್ಕೆ ಎಂಬ ಮಾತು ನಾಡಿನಲ್ಲಿ ಪ್ರಚಲಿತದಲ್ಲಿದೆ. ಆದರೆ, ಕನ್ನಡ ನಮ್ಮ ಸಂಬಳ ಹಾಗೂ ಉಂಬಳ ಎರಡಕ್ಕೂ ಆಗಬೇಕು. ಈ ದಿಸೆಯಲ್ಲಿ ಸರ್ಕಾರ ಕಾರ್ಯೋನ್ಮುಖವಾಗಿದ್ದು, ಕನ್ನಡಿಗರಿಗೆ ಹೆಚ್ಚಿನ ಉದ್ಯೋಗ ದೊರಕಿಸಿಕೊಡುವ ದಿಸೆಯಲ್ಲಿ ಪ್ರಯತ್ನ ನಡೆಸಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಶುಕ್ರವಾರ ಆಯೋಜಿಸಿದ್ದ ಸಮಾರಂಭದಲ್ಲಿ ಎರಡು ಸಂಸ್ಥೆಗಳು ಸೇರಿ ವಿವಿಧ ಕ್ಷೇತ್ರಗಳ ಸಾಧಕರಿಗೆ ೨೦೧೯ನೇ ಸಾಲಿನ ‘ರಾಜ್ಯೋತ್ಸವ ಪ್ರಶಸ್ತಿ’ ಪ್ರದಾನ ಮಾಡಿ. ಮಾತನಾಡಿದ…