ಸುದ್ದಿ

ಹಾಸನಾಂಬೆ ದೇವಿಯಾ ದರ್ಶನೋತ್ಸವಕ್ಕೆ ಇಂದು ಕೊನೆ…!

41

ಹಾಸನದ ಅಧಿದೇವತೆ ಹಾಸನಾಂಬೆಯ ಈ ಬಾರಿಯ ದರ್ಶನೋತ್ಸವ ತೆರೆಗೆ ಕ್ಷಣಗಣನೆ ಆರಂಭವಾಗಿದೆ. ಮಂಗಳವಾರ ಮಧ್ಯಾಹ್ನ ನಂತರ ಶಾಸ್ತ್ರೋಕ್ತವಾಗಿ ದೇವಿಯ ಗರ್ಭಗುಡಿ ಬಾಗಿಲು ಮುಚ್ಚಲಿದೆ. ಬಾಗಿಲು ಮುಚ್ಚುವ ಮುನ್ನಾ ದಿನವಾದ ಇಂದು ಗಣ್ಯರು ಹಾಗೂ ಭಕ್ತರು ಅಪಾರ ಸಂಖ್ಯೆಯಲ್ಲಿ ಆಗಮಿಸಿ ದೇವಿಯ ದರ್ಶನ ಪಡೆದರು.

ಹಾಸನದ ಅಧಿದೇವತೆ ಹಾಸನಾಂಬೆಯ ಈ ಬಾರಿಯ ದರ್ಶನೋತ್ಸವ ತೆರೆಗೆ ಕ್ಷಣಗಣನೆ ಆರಂಭವಾಗಿದೆ. ಮಂಗಳವಾರ ಮಧ್ಯಾಹ್ನ ನಂತರ ಶಾಸ್ತ್ರೋಕ್ತವಾಗಿ ದೇವಿಯ ಗರ್ಭಗುಡಿ ಬಾಗಿಲು ಮುಚ್ಚಲಿದೆ. ಬಾಗಿಲು ಮುಚ್ಚುವ ಮುನ್ನಾ ದಿನವಾದ ಇಂದು ಗಣ್ಯರು ಹಾಗೂ ಭಕ್ತರು ಅಪಾರ ಸಂಖ್ಯೆಯಲ್ಲಿ ಆಗಮಿಸಿ ದೇವಿಯ ದರ್ಶನ ಪಡೆದರು.

ಹಾಸನಾಂಬೆ ದೇವಾಲಯದ ಬಾಗಿಲು ಮುಚ್ಚುವ ಮುನ್ನಾ ದಿನವಾದ ಇಂದು ಭಕ್ತರ ಸಂಖ್ಯೆ ಗಣನೀಯವಾಗಿ ಏರಿಕೆಯಾಗಿತ್ತುಲ. ಬೆಳಗ್ಗೆಯಿಂದಲೂ ದೇವಾಲಯದ ಒಳ-ಹೊರಗು ಭಕ್ತರಿಂದ ತುಂಬಿ ತುಳುಕುತ್ತಿತ್ತು. ಇಂದು ಮುಜರಾಯಿ ಇಲಾಖೆ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ, ನಟ ಸೃಜನ್ ಲೋಕೇಶ್, ಶಾಸಕರಾದ ಸಿ.ಎಸ್.ಪುಟ್ಟರಾಜು, ಶ್ರೀಕಂಠೇಗೌಡ, ವಿನಯ್ ಗುರೂಜಿ ಅವರು ತಾಯಿಯ ದರ್ಶನ ಪಡೆದರು.

ಇನ್ನು ಹಾಸನಾಂಬ ದೇವಿ ಒಂದು ವರ್ಷಗಳ ಕಾಲ ದೊರೆಯುವುದಿಲ್ಲ ಈ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ ಮಾಧುಸ್ವಾಮಿ ಅವರು ಹಾಗೂ ಜಿಲ್ಲಾಡಳಿತ ಸಮ್ಮುಖದಲ್ಲಿ ಮಧ್ಯಾಹ್ನ 12.30ಕ್ಕೆ ಅರ್ಚಕರು ಬಾಗಿಲು ಮುಚ್ಚಲಿದ್ದಾರೆ. 13 ದಿನಗಳ ದರ್ಶನೋತ್ಸವದಲ್ಲಿ 12 ದಿನ ಸಾರ್ವಜನಿಕ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಈ ವರೆಗೆ 4ಲಕ್ಷಕ್ಕೂ ಹೆಚ್ಚು ಭಕ್ತಾಧಿಗಳು ದೇವಿ ದರ್ಶನ ಪಡೆದಿದ್ದಾರೆ. ಸದ್ಯ ಮಹಾ ಮಂಗಳಾರತಿ ನಂತರ ಜಿಲ್ಲಾಡಳಿತ ಶಾಸ್ತ್ರೋಕ್ತವಾಗಿ ಬಾಗಿಲು ಮುಚ್ಚಲಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆಟೋಮೊಬೈಲ್ಸ್

    ಭಾರತದಲ್ಲಿ ಲಾಂಚ್ ಆಗಲಿದೆ ಆಸೂಸ್ ‘ಝೆನ್‌ಫೋನ್ 6’!..ಟು ಇನ್‌ ಒನ್‌ ಕ್ಯಾಮೆರಾ!

    ಟೆಕ್‌ ವಲಯದಲ್ಲಿ ಭಾರೀ ಹೆಸರು ಮಾಡಿರುವ ‘ಆಸೂಸ್’ ಕಂಪನಿಯು ಇತ್ತೀಚಿಗೆ ವಿಶ್ವ ಮೊಬೈಲ್‌ ಮಾರುಕಟ್ಟೆಗೆ ‘ಝೆನ್‌ಫೋನ್ 6’ ಸ್ಮಾರ್ಟ್‌ಫೋನ್‌ ಅನ್ನು ಬಿಡುಗಡೆ ಮಾಡಿ ಸಖತ್ ಸುದ್ದಿ ಮಾಡಿತ್ತು. ವಿಶೇಷ ಫ್ಲಿಪ್‌ ಸೆಲ್ಫಿ ಕ್ಯಾಮೆರಾ ಫೀಚರ್‌ ಹೊಂದಿರುವ ಈ ಸ್ಮಾರ್ಟ್‌ಫೋನ್‌ ಅನ್ನು ಕಂಪನಿಯು ಈಗ ಭಾರತೀಯ ಮಾರುಕಟ್ಟೆಗೂ ಬಿಡುಗಡೆ ಮಾಡಲು ಮುಂದಾಗಿದ್ದು, ಆದರೆ ದೇಶಿಯ ಮಾರುಕಟ್ಟೆಯಲ್ಲಿ ಅದರ ಹೆಸರು ಬದಲಾಗಲಿದೆ. ಅದಕ್ಕಾಗಿ ಬಿಡುಗಡೆಯ ದಿನಾಂಕವನ್ನು ಫಿಕ್ಸ್‌ ಮಾಡಿಕೊಂಡಿದೆ ಹೌದು, ಆಸೂಸ್‌ ಕಂಪನಿಯು ತನ್ನ ಹೊಸ ‘ಝೆನ್‌ಫೋನ್ 6’ ಸ್ಮಾರ್ಟ್‌ಫೋನ್‌…

  • ಸುದ್ದಿ

    ಶ್ರೀರಾಮನ ಬಂಟ ಹನುಮನನ್ನು ಮದುವೆ ಆಮಂತ್ರಣ ಪತ್ರಿಕೆಯಲ್ಲಿ ಮುದ್ರಿಸಿ ಭಕ್ತಿ ಮೆರೆದ ಅಯೋಧ್ಯೆಯ ಮುಸ್ಲಿಂ ಕುಟುಂಬ.

    ಹಿಂದೂ, ಮುಸ್ಲಿಂ ಎಂಬ ಭೇದವಿಲ್ಲದೆ ಅಯೋಧ್ಯೆಯಲ್ಲಿ ಶ್ರೀರಾಮನನ್ನು ಆರಾಧಿಸಲಾಗುತ್ತಿದೆ. ಇದಕ್ಕೆ ಅಯೋಧ್ಯೆಯ ಮುಸ್ಲಿಂ ಕುಟುಂಬವೊಂದು ಸಾಕ್ಷಿಯಾಗಿದೆ. ತಮ್ಮ ಮಗ, ಮಗಳ ಮದುವೆ ಆಮಂತ್ರಣ ಪ್ರತಿಕೆಯಲ್ಲಿ ರಾಮನ ಭಂಟ ಹನುಮನ ಚಿತ್ರವನ್ನು ಮುದ್ರಿಸಿ ಕುಟುಂಬ ಭಕ್ತಿ ಮೆರೆದಿದೆ. ಹೌದು. ಉತ್ತರ ಪ್ರದೇಶ ಚಾರೇರ ಗ್ರಾಮದ ಮುಸ್ಲಿಂ ಕುಟುಂಬ ಶ್ರೀರಾಮನ ಬಂಟ ಹನುಮನ ಚಿತ್ರವುಳ್ಳ ಕ್ಯಾಲೆಂಡರ್ ಒಂದನ್ನು ಮದುವೆ ಆಮಂತ್ರಣ ಪತ್ರಿಕೆಯಲ್ಲಿ ಮುದ್ರಿಸಿದೆ. ಅಷ್ಟೇ ಅಲ್ಲದೆ ಈ ಪತ್ರಿಕೆಯಲ್ಲಿ ಬ್ರಹ್ಮ, ವಿಷ್ಣು, ಶಿವ ಹಾಗೂ ನಾರದರ ಚಿತ್ರವನ್ನೂ ಕೂಡ ಕುಟುಂಬ…

  • ರಾಜಕೀಯ

    ಚಾಮುಂಡೇಶ್ವರಿ ಕ್ಷೇತ್ರದ ವಿಧಾಸಭೆ ಚುನಾವಣೆಯಲ್ಲಿ ಸಿದ್ದರಾಮಯ್ಯ ಸೋಲಲು ಇದೇ ಕಾರಣ ಎಂದ ದೇವೇಗೌಡರು..?

    ಕಳೆದ ವಿಧಾನಸಭಾ ಚುನಾವಣೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದಿಂದ ಕಣಕ್ಕಿಳಿದಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪರಾಭವಗೊಂಡಿದ್ದರು. ಇದಕ್ಕೆ ಜೆಡಿಎಸ್ ನಾಯಕರೇ ಕಾರಣವೆಂಬುದನ್ನು ಹಲವು ಸಂದರ್ಭಗಳಲ್ಲಿ ಸಿದ್ದರಾಮಯ್ಯ ಪರೋಕ್ಷವಾಗಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದರು. ಇದೀಗ ಚಾಮುಂಡೇಶ್ವರಿಯಲ್ಲಿನ ಸಿದ್ದರಾಮಯ್ಯನವರ ಸೋಲಿನ ಕುರಿತು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡ ಮಾತನಾಡಿದ್ದಾರೆ. ಹಾಸನದಲ್ಲಿ ಮಾತನಾಡಿರುವ ಅವರು, ಸಿದ್ದರಾಮಯ್ಯನವರ ಸೋಲಿಗೆ ಜಿ.ಟಿ. ದೇವೇಗೌಡ ಕಾರಣರಲ್ಲ. ಅಲ್ಲದೇ ತಾವೂ ಅಲ್ಲಿಗೆ ಪ್ರಚಾರಕ್ಕೆ ತೆರಳಿರಲಿಲ್ಲ ಎಂದಿದ್ದಾರೆ. ಜನತೆಯ ವಿರೋಧದ ಕಾರಣಕ್ಕೆ ಸಿದ್ದರಾಮಯ್ಯ ಸೋಲಬೇಕಾಯಿತು ಎಂದು ದೇವೇಗೌಡ ವಿಶ್ಲೇಷಿಸಿದ್ದಾರೆ….

  • corona, Health

    2022 ಕೋವಿಡ್ ಮುಕ್ತ ರಾಜ್ಯ:-ಮುಖ್ಯಮಂತ್ರಿ

    ರಾಜ್ಯದಲ್ಲಿ ಎಲ್ಲ  ಸಾರ್ವಜನಿಕರು ಮತ್ತು ಅರ್ಹ ಮಕ್ಕಳು ಕರೋನ ಲಸಿಕೆ ಪಡೆಯುವ ಮೂಲಕ 2022 ಅನ್ನು ಕೋವಿಡ್ ಮುಕ್ತ ರಾಜ್ಯ ಮತ್ತು ಆರೋಗ್ಯಭರಿತ ವರ್ಷವನ್ನಾಗಿ ಮಾಡುವ ಸಂಕಲ್ಪಕ್ಕೆ ಜನರು ಸಹಕರಿಸಬೇಕು ಎಂದು ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಕರೋನ ಸೋಂಕು ನಾವು ಯಾರು ನೀರಿಕ್ಷೀಸಿದಂತೆ ಇರುವುದಿಲ್ಲ.ಮೊದಲು ಕಾಣಿಸಿಕೊಂಡಾಗ ಹೇಗೆ ಹರಡುತ್ತದೆ, ಉಲ್ಬಣಗೊಳ್ಳುತ್ತದೆ,ಸೋಂಕಿತರಿಗೆ ಚಿಕಿತ್ಸೆ ಬಗ್ಗೆ ಗೊತ್ತಿರಲಿಲ್ಲ.ಇಂತಹ ವೇಳೆಯಲ್ಲಿಯೇ ಯಶಸ್ವಿಯಾಗಿ ನಿಯಂತ್ರಣ ಕಾರ್ಯ ನಿಭಾಯಿಸಿದ್ದೇವೆ.ಈ ಹಿಂದಿನ ಅನುಭವದಿಂದ ಸೋಂಕು ನಿಯಂತ್ರಣಕ್ಕೆ ಎಲ್ಲ ಸಿದ್ಧತೆ ಮಾಡಿಕೊಂಡಿದ್ದೇವೆ. ಕಳೆದೊಂದು ವಾರದಿಂದ…

    Loading

  • ಆರೋಗ್ಯ

    ಆರೋಗ್ಯ ಸಂಜೀವಿನಿ ಈರುಳ್ಳಿಯ ಈ ಉಪಯೋಗಗಳನ್ನು ಕೇಳಿದ್ರೆ ಶಾಕ್ ಆಗ್ತೀರಾ..!

    ಈರುಳ್ಳಿಯನ್ನು ಕ್ರಮವಾಗಿ ಸೇವಿಸುತ್ತಾ ಬಂದರೆ ಮೂಳೆಗಳು, ನರಗಳು ದೃಢವಾಗಿರುತ್ತವೆಯಂತೆ. ಎರಡೂ ಹೊತ್ತಿನ ಊಟದಲ್ಲಿ ಹಸಿ ಈರುಳ್ಳಿ ಮಜ್ಜಿಗೆ ಅನ್ನದೊಂದಿಗೆ ಸೇವಿಸುವವರು ನಿತ್ಯ ಆರೋಗ್ಯವಂತರಾಗಿ ಮುಂದುವರೆಯುತ್ತಾರೆ.

  • ಸುದ್ದಿ

    ಸುಮಲತಾ ಅಂಬರೀಶ್ ವಿರುದ್ದ ಶಾಕಿಂಗ್ ಹೇಳಿಕೆ ಕೊಟ್ಟ ಮುಖ್ಯಮಂತ್ರಿ ಕುಮಾರಸ್ವಾಮಿ.!

    ಹೈವೋಲ್ಟೇಜ್ ಕಣವಾಗಿರುವ ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಮಾತಿನ ಸಮರ ತಾರಕಕ್ಕೇರಿದೆ. ಸಿಎಂ ಕುಮಾರಸ್ವಾಮಿ ಮತ್ತು ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಏಟಿಗೆ – ಎದುರೇಟು ನೀಡತೊಡಗಿದ್ದಾರೆ. ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಕುಮಾರಸ್ವಾಮಿ, ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿರುವ ಸುಮಲತಾ ಅವರ ಕುರಿತಾಗಿ ನೀಡಿರುವ ಹೇಳಿಕೆ ಚರ್ಚೆಗೆ ಕಾರಣವಾಗಿದೆ. ಪಕ್ಷೇತರ ಅಭ್ಯರ್ಥಿಯ ಭಾಷಣದಲ್ಲಿ ಎಲ್ಲಿಯೂ ಮಂಡ್ಯ ಜಿಲ್ಲೆಯ ಜನರ ಸಮಸ್ಯೆ ಬಗ್ಗೆ ಪ್ರಸ್ತಾಪವಾಗಿಲ್ಲ. ಅವರಲ್ಲಿ ನೋವಿನ ಛಾಯೆಯೂ ಕಾಣುತ್ತಿಲ್ಲ. ನಾಟಕೀಯವಾಗಿ ಸಿನಿಮಾ ಡೈಲಾಗ್ ಹೊಡೆಯುತ್ತಿದ್ದಾರೆ ಎಂದು ಟೀಕಿಸಿದ್ದಾರೆ. ಬಿಜೆಪಿ…