News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ದೇವರು-ಧರ್ಮ

ಹಾಸನಾಂಬೆಯ ಕಾಣಿಕೆ ಹುಂಡಿ ಎಣಿಕೆ ವೇಳೆ ಸಿಕ್ಕಿದ್ದೇನು ಗೊತ್ತಾ..?

53

ಹಾಸನಾಂಬೆಯ ದೇವಾಲಯ ಬಾಗಿಲು ಬುಧವಾರ ಮುಚ್ಚಲಾಗಿದ್ದು, 13 ದಿನಗಳ ದರ್ಶನ ನಂತರ ನಿನ್ನೆ ಮಧ್ಯಾಹ್ನ 1.20 ಕ್ಕೆ  ದೇವಾಲಯದ ಬಾಗಿಲು ಮುಚ್ಚಲಾಗಿದೆ. ಇಂದು ಹುಂಡಿ ಎಣಿಕೆ ಕಾರ್ಯ ನಡೆಯಲಿದೆ. ಹಾಸನಾಂಬೆಗೆ ಭಕ್ತರಿಂದ ವಿಶಿಷ್ಟ ಮನವಿ ಪತ್ರಗಳು ಬಂದಿದ್ದು, ಹಲವು ಬೇಡಿಕೆಗಳನ್ನು ಭಕ್ತರು ಪತ್ರದಲ್ಲಿ ನಮೂದಿಸಿದ್ದಾರೆ, ಹಳೇ ನೋಟುಗಳು ಸಿಕ್ಕಿದೆ.

ಅದರಲ್ಲೂ ಬ್ಯಾನ್ ಆಗಿರುವ ಹಳೆಯ ಸಾವಿರ ರೂಪಾಯಿ ಮುಖಬೆಲೆಯುಳ್ಳ ನೋಟುಗಳು ಜಾಸ್ತಿ ಪತ್ತೆಯಾಗಿದೆ. ಅಲ್ಲದೇ, ಭಕ್ತರು ತಮ್ಮ ಬೇಡಿಕೆ ಈಡೇರಿಸುವಂತೆ ಬರೆದು ವೆರೈಟಿ ವೆರೈಟಿ ಪತ್ರಗಳು, ಲವ್ ಲೆಟರ್ ಸಿಕ್ಕಿದೆ. ಎಸ್. ಎಸ್.ಎಲ್.ಸಿಯಲ್ಲಿ ರಾಜ್ಯಕ್ಕೆ ಪ್ರಥಮ ಬರುವಂತೆ ವಿದ್ಯಾರ್ಥಿ ಹಾಸನಾಂಬೆಗೆ ಕೋರಿ ಪತ್ರ ಬರೆದಿದ್ದಾನೆ. ಜೈಲಿನಲ್ಲಿರುವ ತನ್ನ ಪ್ರಿಯಕರ ಬೇಗ ರಿಲೀಸ್ ಆಗಿ ಬಂದು ತನ್ನನ್ನು ಮದುವೆಯಾಗಲಿ ಎಂದು ಕೋರಿ ಯುವತಿಯೊಬ್ಬಳು ಲೆಟರ್ ಬರೆದಿದ್ದಾಳೆ.

ಭೂ ಮಾಫಿಯಾ ದಾಖಲೆ ತಿದ್ದುಪಡಿಯ ಬಗ್ಗೆ ರಾಜಕಾರಣಿಗಳ ಹೆಸರು ಬರೆದು ಅವರಿಗೆ ಬುದ್ದಿ ಕಲಿಸುವಂತೆ ಕೋರಿಕೊಂಡಿರುವ ಲೆಟರ್ ಕೊಡ ಪತ್ತೆಯಾಗಿದೆ. ಅಲ್ಲದೇ, ಮದುವೆ, ಭೂಮಾಫೀಯದ ಬಗ್ಗೆ ಬರೆದಿರುವ ಲೆಟರ್‌ಗಳು ಪತ್ತೆಯಾಗಿದೆ. ತೇಜಸ್ವಿನಿ ಎಂಬ ವಿದ್ಯಾರ್ಥಿನಿಯೊಬ್ಬಳು ತನ್ನನ್ನು ಸೆಲೆಬ್ರಿಟಿ ಮಾಡು ಎಂದು ಕೇಳಿಕೊಂಡಿದ್ದಾರೆ. ಮಹಿಳೆಯೊಬ್ಬರು ಮಗಳಿಗೆ ಮೆಡಿಕಲ್ ಸೀಟ್ ಕೊಡಿಸಿ ಕಾಪಾಡವ್ವ ಎಂದು ಪತ್ರ ಬರೆದಿದ್ದಾರೆ.

ಎದುರಾಳಿಗಳು ಕೇಸ್ ವಾಪಸ್ ತೆಗೆದುಕೊಳ್ಳುವಂತೆ ಮಾಡು, ರಾಜು ರೆಡ್ಡಿ ನನ್ನಿಂದ ಪಡೆದಿರುವ 8.50 ಲಕ್ಷ ಹಣ ವಾಪಸ್ ಕೊಡಲು ಹೇಳು ಎಂದು ಹಾಸನಾಂಬೆಗೆ ಭಕ್ತನೊಬ್ಬನ ಪತ್ರ ಬರೆದು ಕೇಳಿಕೊಂಡಿದ್ದಾನೆ. ಇನ್ನೊಬ್ಬ ಮಹಿಳೆ ತನಗೆ ಸೈಟ್ ಸಿಗುವಂತೆ ಮಾಡಿ, ನಾನು ಹೇಳಿದ ಹಾಗೆ ನನ್ನ ಗಂಡ ಕೇಳುವಂತೆ ಮಾಡು ಎಂದು ಪತ್ರ ಬರೆದಿದ್ದಾರೆ. ನಮ್ಮ ಮನವಿ ಆಲಿಸಿ ಹಾರೈಸಿದರೆ 101, 1001 ಈಡುಗಾಯಿ ಒಡೆಯುತ್ತೀವೆಂದು ಭಕ್ತರ ಹರಕೆ ಹೇಳೀಕೊಂಡಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಕಾನೂನು

    10ರೂ ನಾಣ್ಯವನ್ನು, ಅಂಗಡಿಯವ ಮುಲಾಜಿಲ್ಲದೆ ತಿರಸ್ಕರಿಸಿದಕ್ಕೆ, ಅವನಿಗಾದ ಶಿಕ್ಷೆ ಏನು ಗೊತ್ತಾ..?

    ಹತ್ತು ರುಪಾಯಿಯ ನಾಣ್ಯವನ್ನು ತೆಗೆದುಕೊಳ್ಳುವುದರ ಬಗ್ಗೆ ಸಾಕಷ್ಟು ಊಹಾಪೋಹಗಳಿವೆ.ವ್ಯಾಪಾರಿಗಳು ತಮಗಿರುವ ಗೊಂದಲದಲ್ಲಿ, 10ರುಪಾಯಿಯ ನಾಣ್ಯವನ್ನು ಮುಲಾಜಿಲ್ಲದೆ ತಿರಸ್ಕರಿಸುತ್ತಿದ್ದಾರೆ.

  • inspirational

    ಮಗಳನ್ನು ಸರ್ಕಾರಿ ಅಂಗನವಾಡಿಗೆ ಸೇರಿಸಿ ಮಾದರಿಯಾದ ಕೊಡಗು SP..!

    ಕೊಡಗು ಜಿಲ್ಲಾ ಪೊಲೀಸ್ ವರಷ್ಠಾಧಿಕಾರಿ ಡಾ. ಸುಮನ್ ಪನ್ನೇಕರ್ ತಮ್ಮ ಮಗಳನ್ನು ಸರ್ಕಾರಿ ಅಂಗನವಾಡಿಗೆ ಕಳಿಸುವ ಮೂಲಕ ಮಾದರಿಯಾಗಿದ್ದರೆ. ತಮ್ಮ ಪುಟ್ಟ ಮಗಳನ್ನು ಸರ್ಕಾರಿ ಅಂಗನವಾಡಿಗೆ ಕಳಿಸಿ  ಕನ್ನಡ ಕಲಿಗೆ ಒತ್ತು ನೀಡಿದ್ದಾರೆ.ಗ್ರಾಮೀಣ ಮಕ್ಕಳೊಂದಿಗೆ ಬೆರೆಯುವ ಉದ್ದೇಶದಿಂದ ಮಗುವನ್ನು ಅಂಗನವಾಡಿಗೆ ನಿತ್ಯವೂ ಕಳಿಸಿ ತಾವು ಕೆಲಸಕ್ಕೆ ತೆರಳುತ್ತಾರೆ ಸುಮನ್. ಕಲಿಕೆ, ಆಟ, ಊಟದ ಜೊತೆಗೆ ಮಕ್ಕಳೊಂದಿಗೆ ಈ ಅಂಗನವಾಡಿಯಲ್ಲಿ ಎಸ್‍ಪಿ ಮಗಳು ಸಹ ಬೆರೆಯುತ್ತಿದ್ದಾಳೆ. ಸಾಮಾನ್ಯರ ಮಕ್ಕಳಂತೆ ಸರ್ಕಾರಿ ಅಂಗನವಾಡಿಯಲ್ಲಿ ಎಸ್‍ಪಿ ಪುತ್ರಿ ಖುಷಿ ಸಹ ಪಾಠ…

  • ಕ್ರೀಡೆ, ಸಿನಿಮಾ

    ನೆನ್ನೆ RCB ಮ್ಯಾಚ್ ನೋಡಲು ಹೋಗಿದ್ದ ಕನ್ನಡಗರಿಗೆ ಕಾದಿತ್ತು ಸರ್ಪ್ರೈಸ್..!

    ಬುಧವಾರ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಕಿಂಗ್ಸ್ ಇಲೆವನ್ ಪಂಜಾಬ್ ಪಂದ್ಯ ನಡೆಯಿತು. ಅಲ್ಲದೆ ಬುಧವಾರ ವರನಟ ಡಾ. ರಾಜ್‍ಕುಮಾರ್ ಅವರ ಹುಟ್ಟುಹಬ್ಬ ಆಗಿದ್ದರಿಂದ ಕ್ರೀಡಾಂಗಣದ ಸ್ಕ್ರೀನ್‍ನಲ್ಲಿ ಅವರ ಫೋಟೋ ಹಾಕಿ ಅಭಿಮಾನಿಗಳಿಗೆ ಸರ್ಪ್ರೈಸ್ ನೀಡಿದೆ. ಬುಧವಾರ ರಾಜ್‍ಕುಮಾರ್ ಅವರ ಹುಟ್ಟುಹಬ್ಬ ಇರುವುದರಿಂದ ಕ್ರೀಡಾಂಗಣದ ಎಲ್‍ಇಡಿ ಸ್ಕ್ರೀನ್‍ನಲ್ಲಿ ಅವರ ಫೋಟೋ ಹಾಕುವ ಮೂಲಕ ಅಭಿಮಾನಿಗಳಿಗೆ ಸರ್ಪ್ರೈಸ್ ನೀಡಿತ್ತು. ಫೋಟೋ ಕೆಳಗೆ ಹುಟ್ಟುಹಬ್ಬದ ಶುಭಾಶಯಗಳು ಎಂದು ಕೂಡ ಬರೆದಿತ್ತು. ಇದನ್ನು ನೋಡಿದ ಅಭಿಮಾನಿಗಳು ಖುಷಿಪಟ್ಟಿದ್ದಾರೆ. ರಾಯಲ್…

  • ಸುದ್ದಿ

    ಇಡೀ ಇಂಡಿಯಾ ಗಮನ ಸೆಳೆದಿದ್ದ ಮಂಡ್ಯ ಚುನಾವಣೆಯಲ್ಲಿ ಸುಮಲತಾ ಮತ್ತು ನಿಖಿಲ್ ಖರ್ಚು ಮಾಡಿದ ಹಣ ಎಷ್ಟು ಗೊತ್ತಾ..?

    ರಾಜ್ಯದಲ್ಲಿ ಲೋಕಸಭೆ ಚುನಾವಣೆಗೆ 2 ಹಂತದಲ್ಲಿ ಮತದಾನ ನಡೆದಿದ್ದು, ಚುನಾವಣೆಯಲ್ಲಿ ಹಣದ ಹೊಳೆಯೇ ಹರಿದಿದೆ. ಇದಕ್ಕೆ ನಿದರ್ಶನವೆನ್ನುವಂತೆ ಚುನಾವಣೆ ಆಯೋಗ ವಿವಿಧೆಡೆ ಕಾರ್ಯಾಚರಣೆ ನಡೆಸಿ ಕೋಟ್ಯಂತರ ರೂ. ಜಪ್ತಿ ಮಾಡಿದೆ. ಅಭ್ಯರ್ಥಿಗಳು ಚುನಾವಣಾ ಆಯೋಗಕ್ಕೆ ಖರ್ಚು ವೆಚ್ಚದ ಮಾಹಿತಿ ನೀಡಿದ್ದು, ಆಯೋಗ ನಿಗದಿಪಡಿಸಿದ 70 ಲಕ್ಷ ರೂ. ಮಿತಿಯನ್ನು ಯಾರೂ ದಾಟಿಲ್ಲ. ಹೈ ವೋಲ್ಟೇಜ್ ಕ್ಷೇತ್ರವಾಗಿದ್ದ ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ 33 ಲಕ್ಷ ರೂ. ಖರ್ಚು ಮಾಡಿರುವುದಾಗಿ ಲೆಕ್ಕ ತೋರಿಸಿದ್ದಾರೆ. ಜೆಡಿಎಸ್…

  • ಕರ್ನಾಟಕ

    ನಿಮ್ಮ ಬೆರಳ ತುದಿಯಲ್ಲಿ ಸರ್ಕಾರದ ಎಲ್ಲಾ ಸೌಲಭ್ಯಗಳು ಲಭ್ಯ!ಹೇಗೆ ಅಂತೀರಾ?ಈ ಲೇಖನಿ ಓದಿ….

    ನಮ್ಮ ಗ್ರಾಮೀಣ ಜನರಿಗಾಗಿ ಗ್ರಾಮ ಪಂಚಾಯತಿ ಕೇಂದ್ರದಲ್ಲಿ ಪಹಣಿ, ಜಾತಿ ಪ್ರಮಾಣ ಪತ್ರ, ಬೆಳೆ ದೃಢೀಕರಣ ಸೇರಿದಂತೆ ನಾನಾ ಇಲಾಖೆಗಳ ಸುಮಾರು 100 ಕ್ಕಿಂತ ಹೆಚ್ಚು ಸೇವೆಗಳು ‘ಪಂಚಾಯತಿ-100 ಬಾಪೂಜಿ ಸೇವಾ ಕೇಂದ್ರ’ಹೆಸರಿನಲ್ಲಿ ಸ್ಥಳೀಯ ಗ್ರಾಮ ಪಂಚಾಯತಿ ಕೇಂದ್ರಗಳಲ್ಲೇ ಸಿಗಲಿವೆ.