ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಾಸನಾಂಬೆಯ ದೇವಾಲಯ ಬಾಗಿಲು ಬುಧವಾರ ಮುಚ್ಚಲಾಗಿದ್ದು, 13 ದಿನಗಳ ದರ್ಶನ ನಂತರ ನಿನ್ನೆ ಮಧ್ಯಾಹ್ನ 1.20 ಕ್ಕೆ ದೇವಾಲಯದ ಬಾಗಿಲು ಮುಚ್ಚಲಾಗಿದೆ. ಇಂದು ಹುಂಡಿ ಎಣಿಕೆ ಕಾರ್ಯ ನಡೆಯಲಿದೆ. ಹಾಸನಾಂಬೆಗೆ ಭಕ್ತರಿಂದ ವಿಶಿಷ್ಟ ಮನವಿ ಪತ್ರಗಳು ಬಂದಿದ್ದು, ಹಲವು ಬೇಡಿಕೆಗಳನ್ನು ಭಕ್ತರು ಪತ್ರದಲ್ಲಿ ನಮೂದಿಸಿದ್ದಾರೆ, ಹಳೇ ನೋಟುಗಳು ಸಿಕ್ಕಿದೆ.

ಅದರಲ್ಲೂ ಬ್ಯಾನ್ ಆಗಿರುವ ಹಳೆಯ ಸಾವಿರ ರೂಪಾಯಿ ಮುಖಬೆಲೆಯುಳ್ಳ ನೋಟುಗಳು ಜಾಸ್ತಿ ಪತ್ತೆಯಾಗಿದೆ. ಅಲ್ಲದೇ, ಭಕ್ತರು ತಮ್ಮ ಬೇಡಿಕೆ ಈಡೇರಿಸುವಂತೆ ಬರೆದು ವೆರೈಟಿ ವೆರೈಟಿ ಪತ್ರಗಳು, ಲವ್ ಲೆಟರ್ ಸಿಕ್ಕಿದೆ. ಎಸ್. ಎಸ್.ಎಲ್.ಸಿಯಲ್ಲಿ ರಾಜ್ಯಕ್ಕೆ ಪ್ರಥಮ ಬರುವಂತೆ ವಿದ್ಯಾರ್ಥಿ ಹಾಸನಾಂಬೆಗೆ ಕೋರಿ ಪತ್ರ ಬರೆದಿದ್ದಾನೆ. ಜೈಲಿನಲ್ಲಿರುವ ತನ್ನ ಪ್ರಿಯಕರ ಬೇಗ ರಿಲೀಸ್ ಆಗಿ ಬಂದು ತನ್ನನ್ನು ಮದುವೆಯಾಗಲಿ ಎಂದು ಕೋರಿ ಯುವತಿಯೊಬ್ಬಳು ಲೆಟರ್ ಬರೆದಿದ್ದಾಳೆ.

ಭೂ ಮಾಫಿಯಾ ದಾಖಲೆ ತಿದ್ದುಪಡಿಯ ಬಗ್ಗೆ ರಾಜಕಾರಣಿಗಳ ಹೆಸರು ಬರೆದು ಅವರಿಗೆ ಬುದ್ದಿ ಕಲಿಸುವಂತೆ ಕೋರಿಕೊಂಡಿರುವ ಲೆಟರ್ ಕೊಡ ಪತ್ತೆಯಾಗಿದೆ. ಅಲ್ಲದೇ, ಮದುವೆ, ಭೂಮಾಫೀಯದ ಬಗ್ಗೆ ಬರೆದಿರುವ ಲೆಟರ್ಗಳು ಪತ್ತೆಯಾಗಿದೆ. ತೇಜಸ್ವಿನಿ ಎಂಬ ವಿದ್ಯಾರ್ಥಿನಿಯೊಬ್ಬಳು ತನ್ನನ್ನು ಸೆಲೆಬ್ರಿಟಿ ಮಾಡು ಎಂದು ಕೇಳಿಕೊಂಡಿದ್ದಾರೆ. ಮಹಿಳೆಯೊಬ್ಬರು ಮಗಳಿಗೆ ಮೆಡಿಕಲ್ ಸೀಟ್ ಕೊಡಿಸಿ ಕಾಪಾಡವ್ವ ಎಂದು ಪತ್ರ ಬರೆದಿದ್ದಾರೆ.

ಎದುರಾಳಿಗಳು ಕೇಸ್ ವಾಪಸ್ ತೆಗೆದುಕೊಳ್ಳುವಂತೆ ಮಾಡು, ರಾಜು ರೆಡ್ಡಿ ನನ್ನಿಂದ ಪಡೆದಿರುವ 8.50 ಲಕ್ಷ ಹಣ ವಾಪಸ್ ಕೊಡಲು ಹೇಳು ಎಂದು ಹಾಸನಾಂಬೆಗೆ ಭಕ್ತನೊಬ್ಬನ ಪತ್ರ ಬರೆದು ಕೇಳಿಕೊಂಡಿದ್ದಾನೆ. ಇನ್ನೊಬ್ಬ ಮಹಿಳೆ ತನಗೆ ಸೈಟ್ ಸಿಗುವಂತೆ ಮಾಡಿ, ನಾನು ಹೇಳಿದ ಹಾಗೆ ನನ್ನ ಗಂಡ ಕೇಳುವಂತೆ ಮಾಡು ಎಂದು ಪತ್ರ ಬರೆದಿದ್ದಾರೆ. ನಮ್ಮ ಮನವಿ ಆಲಿಸಿ ಹಾರೈಸಿದರೆ 101, 1001 ಈಡುಗಾಯಿ ಒಡೆಯುತ್ತೀವೆಂದು ಭಕ್ತರ ಹರಕೆ ಹೇಳೀಕೊಂಡಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
78 ವರ್ಷದ ವೃದ್ಧರೊಬ್ಬರು 1500 ಮೀ. ಓಡಿ ಚಿನ್ನದ ಪದಕ ಗೆದ್ದು ಮೈದಾನದಲ್ಲೇ ಮೃತಪಟ್ಟ ಘಟನೆಯೊಂದು ಪಂಜಾಬ್ನ ಸಂಗ್ರೂರ್ನಲ್ಲಿ ನಡೆದಿದೆ. ಬಕ್ಷೀಶ್ ಸಿಂಗ್ ಮೃತಪಟ್ಟ ವ್ಯಕ್ತಿ. ಪಂಜಾಬ್ ಮಾಸ್ಟರ್ ಅಥ್ಲೆಟಿಕ್ ಅಸೋಸಿಯೇಷನ್ ವೃದ್ಧರಿಗೆ ಅಥ್ಲೆಟಿಕ್ ಮೀಟ್ ಆಯೋಜಿಸಿದ್ದರು. ಈ ಕಾರ್ಯಕ್ರಮದಲ್ಲಿ ಬಕ್ಷೀಶ್ ಸಿಂಗ್ ಭಾಗವಹಿಸಿ ಚಿನ್ನದ ಪದಕವನ್ನು ಗೆದ್ದಿದ್ದಾರೆ. ಬಳಿಕ ಮೈದಾನದಲ್ಲಿಯೇ ಹೃದಯಾಘಾತವಾಗಿ ಮೃತಪಟ್ಟಿದ್ದಾರೆ. 1500 ಮೀ. ರೇಸ್ ಪೂರ್ಣಗೊಳಿಸಿದ ನಂತರ ಬಕ್ಷೀಶ್ ವಿಶ್ರಾಂತಿ ಪಡೆಯುತ್ತಿದ್ದರು. ಇದೇ ವೇಳೆ ಅವರಿಗೆ ಹೃದಯಾಘಾತವಾಗಿದೆ. ತಕ್ಷಣ ಅವರನ್ನು ಸಿಂಗ್ರೂರ್ ನ…
ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಸುಮಲತಾ ಅಂಬರೀಶ್ ಅವರಿಗೆ ನಟರಾದ ದರ್ಶನ್ ಮತ್ತು ಯಶ್ ಸಾಥ್ ನೀಡಿದ್ದಾರೆ. ರಾಜ್ಯದ ಹೈ ವೋಲ್ಟೇಜ್ ಕ್ಷೇತ್ರವಾಗಿರುವ ಮಂಡ್ಯದಲ್ಲಿ ಸುಮಲತಾ ಅಂಬರೀಶ್ ನಾಮಪತ್ರ ಸಲ್ಲಿಕೆಯ ವೇಳೆ ಜನಸಾಗರವೇ ಹರಿದು ಬಂದಿದ್ದು, ಶಕ್ತಿ ಪ್ರದರ್ಶನದ ಮೂಲಕ ಸುಮಲತಾ ಚುನಾವಣಾ ರಣಕಹಳೆ ಮೊಳಗಿಸಿದ್ದಾರೆ. ನಾಮಪತ್ರ ಸಲ್ಲಿಕೆ ಬಳಿಕ ನಡೆದ ಸಮಾವೇಶದಲ್ಲಿ ಮಾತನಾಡಿದ ದರ್ಶನ್, ನಾನು ಇಲ್ಲಿ ನಿಂತಿದ್ದಕ್ಕೆ ಹಳೆ ಮ್ಯಾಟರ್ ಓಪನ್ ಆಗುತ್ತಿದೆ. ಅದಕ್ಕೆಲ್ಲ ತಲೆಕೆಡಿಸಿಕೊಳ್ಳಲ್ಲ, ಅದೂ ಆಗಲಿ, ಅದರಿಂದ ಖುಷಿ,…
ಈಗಂತೂ ಎಲ್ಲಾ ನಕಲಿ. ಸ್ವಲ್ಪ ಯಾಮಾರಿದರೂ ನಕಲಿ ಆಹಾರ ಪದಾರ್ಥಗಳನ್ನೂ ಸಹ ತಿನ್ನಿಸುವ ಕಾಲ ಇದು.ಇತ್ತೀಚಿಗೆ ಮಾರುಕಟ್ಟೆಗೆ ನಕಲಿ ಮೊಟ್ಟೆ ಕಾಲಿಟ್ಟಿದೆ. ಕೃತಕ ಮೊಟ್ಟೆ ಮಾರಾಟ ಮಾಡಿದ ವ್ಯಾಪಾರಿಯೊಬ್ಬನನ್ನು ಕೋಲ್ಕತ್ತಾ ಪೊಲೀಸರು ಬಂಧಿಸಿದ್ದಾರೆ. ಆದರೆ ನಕಲಿ ಯಾವುದು ಅಸಲಿ ಯಾವುದು ಎಂಬುದನ್ನು ತಿಳಿಯೋದು ಕಷ್ಟ. ನಕಲಿ ಮೊಟ್ಟೆ ಬಗ್ಗೆ ನೀವೂ ಜಾಗರೂಕರಾಗಿರಬೇಕು. ನಕಲಿ ಮೊಟ್ಟೆ ಹೇಗಿರುತ್ತೆ ಎಂಬುದನ್ನು ತಿಳಿದುಕೊಂಡಲ್ಲಿ ಯಾವುದು ಅಸಲಿ ಯಾವುದು ನಕಲಿ ಎಂಬುದನ್ನು ಸುಲಭವಾಗಿ ಪತ್ತೆ ಹಚ್ಚಬಹುದು. *ಸಾಮಾನ್ಯವಾಗಿ ಅಸಲಿ ಮೊಟ್ಟೆ ಹೊಳಪಿರುವುದಿಲ್ಲ. ನಕಲಿ…
ಮೈಸೂರಿನ ಅಧಿದೇವತೆ ಶ್ರೀ ಚಾಮುಂಡೇಶ್ವರಿಯ ಆರಾಧನೆಯೊಡನೆ ಆರಂಭವಾಗುವ ನವರಾತ್ರಿ ವೈಭವದ ವಿಜಯ ದಶಮಿಯ ಮೈಸೂರು ದಸರಾ ಮಹೋತ್ಸವಕ್ಕೆ ಅದರದೇ ಆದ ಐತಿಹಾಸಿಕ ಪರಂಪರೆ ಹಾಗೂ ಸಾಂಸ್ಕೃತಿಕ ಹಿರಿಮೆ ಇದೆ. ವಿಜಯನಗರ ಸಾಮ್ರಾಜ್ಯದ ಅರಸರ ಕಾಲದಲ್ಲಿ ಆರಂಭಗೊಂಡು ಆಚರಿಸಲ್ಪಡುತ್ತಿದ್ದ ನವರಾತ್ರಿ ಉತ್ಸವದ ವಿಜಯ ದಶಮಿಯ ದಸರಾ ಹಬ್ಬಕ್ಕೆ ಇನ್ನೂ ಹೆಚ್ಚಿನ ವೈಭವದ ವರ್ಣಮಯ ಕಳೆ ತಂದುಕೊಟ್ಟವರು ವಿಜಯನಗರ ಅರಸರಲ್ಲೇ ಅತ್ಯಂತ ಪ್ರಖ್ಯಾತರಾಗಿದ್ದ ಶ್ರೀ ಕೃಷ್ಣದೇವರಾಯರು. ಆಗ ಹಂಪೆಯಲ್ಲಿರುವ ಮಹಾನವಮಿ ದಿಬ್ಬ ಮತ್ತು ವಿಜಯ ವಿಠಲ ದೇವಾಲಯಗಳು ಈ ಮಹೋತ್ಸವದ…
ಮಂಡ್ಯ ಲೋಕಸಭಾ ಕ್ಷೇತ್ರದ ಬಿಜೆಪಿ ಬೆಂಬಲಿತ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರ ವಿರುದ್ದ ಜೆಡಿಎಸ್ ನಾಯಕರ ವಾಗ್ದಾಳಿ ಮುಂದುವರೆದಿದೆ. ಸಂಸದ ಎಲ್.ಆರ್. ಶಿವರಾಮೇಗೌಡ, ಸುಮಲತಾ ಗೌಡತಿ ಅಲ್ಲ. ಅವರು ನಾಯ್ಡು ಎಂದು ಹೇಳಿದ್ದರಲ್ಲದೆ ಅಂಬರೀಶ್ ನಿಧನರಾದ ಸಂದರ್ಭದಲ್ಲಿ ಅವರ ಅಂತಿಮ ದರ್ಶನಕ್ಕೆ ಸೇರಿದ್ದ ಜನಸ್ತೋಮ ಕಂಡು ಸುಮಲತಾ ಈ ಚುನಾವಣೆಗೆ ನಿಂತಿದ್ದಾರೆಂದು ಕಾಣಿಸುತ್ತದೆ ಎಂದಿದ್ದರು. ಇದೀಗ ಸಚಿವ ರೇವಣ್ಣ ಸುಮಲತಾ ವಿರುದ್ದ ವಾಗ್ದಾಳಿ ಮುಂದುವರೆಸಿದ್ದು, ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿರುವ ಅವರು, ಮೇ 23 ರ…
ಹಳ್ಳಿ ಪ್ರದೇಶಗಳಲ್ಲಿ ಜನರು ತಮ್ಮ ಹೊಲದಲ್ಲಿ ಬೆಳೆದ ಭತ್ತವನ್ನು ಅಕ್ಕಿ ಮಾಡಿ ಅದನ್ನು ಒಂದು ವರ್ಷದವರೆಗೂ ಉಪಯೋಗಿಸುತ್ತಾರೆ. ಹೀಗೆ ವರ್ಷಗಟ್ಟಲೆ ಅಕ್ಕಿಯನ್ನು ಶೇಖರಿಸಿ ಇಡುವುದರಿಂದ ಅದರಲ್ಲಿ ಹುಳಗಳು ಹುಟ್ಟುತ್ತವೆ.