News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸುದ್ದಿ

ಆನಂದ್ ಸಿಂಗ್ ಬೆನ್ನಲ್ಲೇ 10 ಮಂದಿ ಶಾಸಕರು ರಾಜೀನಾಮೆ?– ದೋಸ್ತಿ ಸರ್ಕಾರಕ್ಕೆ ಆಷಾಢ ಕಂಟಕ…..!

94

ಸಿಎಂ ಅಮೆರಿಕ ಪ್ರವಾಸಕ್ಕೆ ತೆರಳಿದ್ದು ರಾಜ್ಯದಲ್ಲಿ ದಿಢೀರ್ ರಾಜಕೀಯ ಬೆಳವಣಿಗೆಗಳು ನಡೆಯುತ್ತಿವೆ. ಆಷಾಢದ ಮೊದಲ ದಿನವೇ ದೋಸ್ತಿ ಸರ್ಕಾರಕ್ಕೆ ಕಂಟಕ ಎದುರಾದಂತೆ ಕಾಣುತ್ತಿದೆ. ಹೊಸಪೇಟೆ ಶಾಸಕ ಆನಂದ್ ಸಿಂಗ್ ಅವರು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಬೆನ್ನಲ್ಲೇ ಒಟ್ಟು 10 ಶಾಸಕರು ರಾಜೀನಾಮೆಗೆ ಸಿದ್ಧತೆ ನಡೆಸಿದ್ದಾರೆ ಎನ್ನಲಾಗಿದೆ.

ಜಿಂದಾಲ್‍ಗೆ ಭೂಮಿ ನೀಡಿದ್ದನ್ನು ನೆಪವಾಗಿಟ್ಟುಕೊಂಡು ಶಾಸಕ ಸ್ಥಾನಕ್ಕೆ ಆನಂದ್ ಸಿಂಗ್ ರಾಜೀನಾಮೆ ನೀಡಿದ್ದಾರೆ ಎನ್ನಲಾಗಿದೆ. ಈ ಮೂಲಕ ಕಾಂಗ್ರೆಸ್ ಸಂಖ್ಯಾಬಲ 78ಕ್ಕೆ ಕುಸಿದಿದೆ. ಇತ್ತ ಮೂರು ದಿನಗಳಿಂದ ರಮೇಶ್ ಜಾರಕಿಹೊಳಿಯವರು ಎಲ್ಲೂ ಕಾಣಿಸುತ್ತಿಲ್ಲ. ಗೋಕಾಕ್ ನಲ್ಲೂ ಇಲ್ಲ. ಬೆಂಗಳೂರಿನಲ್ಲೂ ಇಲ್ಲ. ಈ ಮೂಲಕ ಆಪರೇಷನ್ ಕಮಲಕ್ಕೆ ಮುಹೂರ್ತ ಫಿಕ್ಸ್ ಮಾಡಿ ಗೌಪ್ಯ ಜಾಗಕ್ಕೆ ಹೋದ್ರಾ ಎಂಬ ಪ್ರಶ್ನೆ ಎದ್ದಿದೆ.

ಯಾರ್ಯಾರು ರಾಜೀನಾಮೆ?:

ಗಣೇಶ್, ಕಂಪ್ಲಿ ಶಾಸಕ
ರಮೇಶ್ ಜಾರಕಿಹೊಳಿ, ಗೋಕಾಕ್ ಶಾಸಕ
ನಾಗೇಂದ್ರ, ಬಳ್ಳಾರಿ ಗ್ರಾಮೀಣ ಶಾಸಕ
ಮಹೇಶ್ ಕುಮಟಳ್ಳಿ, ಅಥಣಿ ಶಾಸಕ
ಬಿಸಿ ಪಾಟೀಲ್, ಹಿರೆಕೇರೂರು ಶಾಸಕ
ಶ್ರೀಮಂತ್ ಪಾಟೀಲ್, ಕಾಗವಾಡ ಶಾಸಕ
ನಾರಾಯಣಗೌಡ, ಕೆಆರ್ ಪೇಟೆ ಶಾಸಕ
ಮಹಾದೇವ್, ಪಿರಿಯಾಪಟ್ಟಣ ಶಾಸಕ
ಪ್ರತಾಪ್ ಗೌಡ ಪಾಟೀಲ್, ಮಸ್ಕಿ ಶಾಸಕ
ಬಸವರಾಜ್ ದದ್ದಲ್- ರಾಯಚೂರು ಗ್ರಾಮೀಣ

ಆನಂದ್ ಸಿಂಗ್ ರಾಜೀನಾಮೆ ಬಗ್ಗೆ ರಾಯಚೂರಿನಲ್ಲಿ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ವೆಂಕಟರಾವ್ ನಾಡಗೌಡ, ಆನಂದ್ ಸಿಂಗ್ ರಾಜಿನಾಮೆ ಕೊಟ್ಟ ಮಾತ್ರಕ್ಕೆ ಸರ್ಕಾರ ಬೀಳಲ್ಲ. ಆನಂದ್ ಸಿಂಗ್ ಜಿಂದಾಲ್ ವಿಚಾರಕ್ಕೆ ಅಸಮಧಾನಗೊಂಡಿದ್ದರು. ಜಿಂದಾಲ್ ವಿಚಾರಕ್ಕೆ ಅವರು ರಾಜಿನಾಮೆ ಕೊಟ್ಟಿರಬಹುದು. ಅವರ ಜೊತೆ ಬೇರೆ ಯಾವ ಶಾಸಕರೂ ಇಲ್ಲ. ಇದ್ದಿದ್ದರೆ ಉಳಿದವರು ರಾಜೀನಾಮೆ ಕೊಡುತ್ತಿದ್ದರು ಎಂದು ಹೇಳಿದ್ದಾರೆ.

ಒಂದೆರಡು ದಿನಗಳಲ್ಲಿ ಎಲ್ಲವೂ ಸರಿಹೋಗುತ್ತದೆ. ಬೇರೆ ಯಾವ ಶಾಸಕರೂ ರಾಜೀನಾಮೆ ಕೊಡಲ್ಲ. ಅದು ಕೇವಲ ಊಹಾಪೋಹ. ಸರ್ಕಾರ ಬೀಳಿಸುವ ಉದ್ದೇಶದಿಂದ ಆನಂದ್ ಸಿಂಗ್ ರಾಜೀನಾಮೆ ಕೊಟ್ಟಿಲ್ಲ ಎಂದು ನಾಡಗೌಡ ಸ್ಪಷ್ಟಪಡಿಸಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ವಿದ್ಯಾರ್ಥಿಗಳೇ ಎಚ್ಚರ, ಕಾಲೇಜ್​ಗೆ ಮೊಬೈಲ್​ ತೆಗೆದುಕೊಂಡು ಹೋದರೆನಿಮ್ಮ ಪೋನ್ ಆಗಬಹುದು ಪೀಸ್ ಪೀಸ್​​…!!ಯಾಕೆ ಗೊತ್ತ?

    ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಚೈತನ್ಯ ಪಿಯು ಕಾಲೇಜಿನಲ್ಲಿ ಮೊಬೈಲ್​ ಬ್ಯಾನ್ ಮಾಡಿ ಕಾಲೇಜು ಆಡಳಿತ ಆದೇಶ ಹೊರಡಿಸಿತ್ತು. ಆ ಕಾಲೇಜು ಆವರಣದಲ್ಲಿ, ಕ್ಲಾಸ್​ನಲ್ಲಿ ಮೊಬೈಲ್​ ಬ್ಯಾನ್​ ಮಾಡಿ ಆದೇಶ ಹೊರಡಿಸಲಾಗಿತ್ತು. ಆದರೆ ವಿದ್ಯಾರ್ಥಿಗಳು ಮಾತ್ರ ಉಪನ್ಯಾಸಕರ ಕಣ್ಣುತಪ್ಪಿಸಿ ಮೊಬೈಲ್​ ಬಳಸುತ್ತಿದ್ದರು. ಇದು ಪ್ರಿನ್ಸಿಪಾಲ್​ ಗಮನಕ್ಕೆ ಬಂದಿದ್ದೆ ತಡ ವಿದ್ಯಾರ್ಥಿಗಳ ಮೊಬೈಲ್​​ ಪುಡಿ ಪುಡಿಯಾಗಿದ್ದು, ಈ ವಿಡಿಯೋ ಇದೀಗ ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್​ ಆಗಿದೆ. ಆದರೂ ಪಿಯು ವಿದ್ಯಾರ್ಥಿಗಳು ಕದ್ದುಮುಚ್ಚಿ ಮೊಬೈಲ್​ ಬಳಸುತ್ತಿದ್ದರು. ಇದನ್ನು ಗಮನಿಸಿದ…

  • ಸುದ್ದಿ

    ಸದನದಲ್ಲಿ ಪತ್ನಿಯನ್ನು ಹೊಗಳಿ, ಸಾಮಾಜಿಕ ತಾಣಕ್ಕೆ ಛೀ ತೂ ಅಂದ ಎಚ್‌ಡಿ ಕುಮಾರಸ್ವಾಮಿ…!

    ಬೆಂಗಳೂರು: ಸಿಎಂ ಕುಮಾರಸ್ವಾಮಿ ಕಲಾಪದಲ್ಲಿ ಮಾಡಿದ ಭಾಷಣದಲ್ಲಿ ತಮ್ಮ ಪತ್ನಿ ಅನಿತಾ ಕುಮಾರಸ್ವಾಮಿ ಅವರನ್ನು ಹೊಗಳಿದ್ದಾರೆ. ಆಕೆ ಪ್ರತಿ ಹಂತದಲ್ಲೂ ನನ್ನ ಜತೆಯಲ್ಲಿದ್ದಾಳೆ ಎಂದು ಹೇಳಿದರು.  ಪತ್ನಿ ಹಾಗೂ ಶಾಸಕಿ ಅನಿತಾ ಕುಮಾರಸ್ವಾಮಿ ಅವರನ್ನು ಉಸ್ತುವಾರಿ ಸಿಎಂ ಸದನದಲ್ಲಿ ಕೊಂಡಾಡಿದ್ದಾರೆ. ಇನ್ನೊಂದೆಡೆ ಸಾಮಾಜಿಕ ಜಾಲತಾಣಗಳ ವಿರುದ್ಧ ಕುಮಾರಸ್ವಾಮಿ ಕೆಂಡಾಮಂಡಲವಾಗಿದ್ದಾರೆ.  ವಿಶ್ವಾಸಮತ ಯಾಚನೆ ನಿರ್ಣಯದ ಚರ್ಚೆಗೆ ಉತ್ತರಿಸುವ ವೇಳೆ, ನಾನು ಉದ್ದೇಶ ಪೂರ್ವಕವಾಗಿ ರಾಜಕೀಯಕ್ಕೆ ಬಂದವನಲ್ಲ. ರಾಜಕೀಯದಲ್ಲಿ ಇರುವವರನ್ನು ನಾನು ಮದುವೆಯಾಗುವುದಿಲ್ಲ ಎಂದಿದ್ದಳು ನನ್ನ ಪತ್ನಿ. ಆದರೆ ಈಗ ಅವರೂ ನನ್ನ…

  • ಸುದ್ದಿ

    ಇಷ್ಟು ದಿನ ಸ್ಯಾಂಡಲ್​ವುಡ್​ನಲ್ಲಿ ಮಿಂಚಿದ ದರ್ಶನ್ ಈಗ ಮಾಲಿವುಡ್​ನಲ್ಲಿ ತೆರೆಕಾಣಲಿದ್ದಾರೆ,…

    ಚಾಲೆಂಜಿಂಗ್​ ಸ್ಟಾರ್​ ದರ್ಶನ್​  ಅಂದರೆ ಯಾರಿಗೆ  ತಾನೇ ಇಷ್ಟ ಇರಲ್ಲ ಹೇಳಿ, ಇಷ್ಟು ದಿನ ಸ್ಯಾಂಡಲ್​ವುಡ್​ನಲ್ಲಿ ಮಿಂಚಿದವರು. ಈಗ ಅವರು ಮಾಲಿವುಡ್​ಗೆ ಕಾಲಿಡುತ್ತಿದ್ದಾರೆ. ಹಾಗಂತ ಅವರು ಯಾವುದೇ ಮಲಯಾಳಂ ಸಿನಿಮಾ ಮಾಡುತ್ತಿದ್ದಾರೆ ಅಂತ ಅಲ್ಲ , ಅವರು ಯಾವ ಸಿನಿಮಾ ಮಾಡಲು ಒಪ್ಪಿಕೊಂಡಿಲ್ಲ . ಅಸಲಿ ವಿಚಾರ ಏನೆಂದರೆ, ‘ಕುರಕ್ಷೇತ್ರ’ ಸಿನಿಮಾ ಮಲಯಾಳಂನಲ್ಲಿ ನಾಳೆ ತೆರೆಕಾಣುತ್ತಿರುವ  ಕಾರಣಕ್ಕಾಗಿ ಈ ಸಮಾಚಾರ ಹುಟ್ಟುಹಾಕಿದೆ. ದರ್ಶನ್​, ಹಿರಿಯ ನಟ ಅಂಬರೀಶ್​, ನಟ ನಿಖಿಲ್​ ಕುಮಾರಸ್ವಾಮಿ, ರವಿಚಂದ್ರನ್​ ಸೇರಿ ಅನೇಕರು ಈ…

  • ಸಿನಿಮಾ

    ಮಂಡ್ಯ ಲೋಕಸಭಾ ಕ್ಷೇತ್ರದ ಮತದಾರರಾಗಿರುವ ರಮ್ಯಾ ಈ ಬಾರಿಯಾದ್ರೂ ತಮ್ಮ ವೋಟ್ ಹಾಕಿದ್ರಾ..?

    ಮಂಡ್ಯ ಲೋಕಸಭಾ ಕ್ಷೇತ್ರದ ಮಾಜಿ ಸಂಸದೆ ಹಾಗೂ ನಟಿ ರಮ್ಯಾ ಸದ್ಯ ಕಾಂಗ್ರೆಸ್ ಸಾಮಾಜಿಕ ಜಾಲತಾಣಗಳ ಉಸ್ತುವಾರಿಯನ್ನು ನಿರ್ವಹಿಸುತ್ತಿದ್ದು, ಕೇರಳದ ವಯನಾಡಿನಲ್ಲಿ ಸ್ಪರ್ಧಿಸಿರುವ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಯವರ ಪ್ರಚಾರ ಕಾರ್ಯದಲ್ಲೂ ಪಾಲ್ಗೊಂಡಿದ್ದಾರೆ. ಮಂಡ್ಯ ಚುನಾವಣೆಯಲ್ಲಿ ಸೋತ ಬಳಿಕ ರಮ್ಯಾ ರಾಜ್ಯ ರಾಜಕಾರಣದಿಂದ ದೂರವಾಗಿದ್ದು, ಕಳೆದ ವಿಧಾನಸಭಾ ಚುನಾವಣೆಯಲ್ಲೂ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ಕಾರ್ಯ ಕೈಗೊಂಡಿರಲಿಲ್ಲ. ಅಷ್ಟೇ ಅಲ್ಲ, ಮಂಡ್ಯ ಕ್ಷೇತ್ರದಲ್ಲಿ ಮತದಾನ ಮಾಡುವ ಗೋಜಿಗೂ ರಮ್ಯಾ ಹೋಗಿರಲಿಲ್ಲ. ಇದೀಗ ಗುರುವಾರದಂದು ರಾಜ್ಯದಲ್ಲಿ ಮೊದಲ ಹಂತದ…

  • ದೇಶ-ವಿದೇಶ

    ಈ ಪುಟ್ಟ ದೇಶ ಮಿಸೈಲ್ ಎಸೆದವನ ಇಡೀ ದೇಶವನ್ನೇ ಸುಟ್ಟು ಹಾಕುವುದಂತೂ ಖಚಿತ!ಮುಸ್ಲಿಂ ನಿಮ್ಮ ವೈರಿಯೇ ಹಾಗಿದ್ರೆ ನಾನು ನಿಮ್ಮ ಸ್ನೇಹಿತ ಎಂಬುದು ಈ ದೇಶದ ನಿಯಮ!ಮುಂದೆ ಓದಿ ಶೇರ್ ಮಾಡಿ..

    ಇಸ್ರೇಲ್ ಮೇಲೆ ವೈರಿಗಳು ಕ್ಷಿಪಣಿಯನ್ನು ಎಸೆದರೆ ಇಸ್ರೇಲ್ ಅದನ್ನ ಎದುರಿಸಿಲು ಸಾಧ್ಯವಾ ?ಖಂಡಿತಾ ಸಾದ್ಯವಿಲ್ಲ ! ಯಾಕೆಂದರೆ ಇಸ್ರೇಲಿನಲ್ಲಿರುವುದು ಬೆರಳೆಣಿಕೆಯಷ್ಟು ಜನ ಹಾಗಾಗಿ ಸುತ್ತಲಿನ ಆರು ವೈರಿ ರಾಷ್ಟ್ರಗಳಿಂದ ಆರು ಮಿಸೈಲ್ಗಳು ವಿವಿಧ ದಿಕ್ಕಿನಿಂದ ಬಂದು ಇಸ್ರೇಲಿಗೆ ಬಿದ್ದವೆಂದರೆ ಮಿಕ್ಕರ್ಧ ಗಂಟೆಯಲ್ಲಿ ಇಸ್ರೇಲ್ ಏನೂ ಮಾಡಲಾಗದೆ ನುಣ್ಣಗಾಗಿ ಹೋಗುತ್ತದೆ ! ಇಸ್ರೇಲ್ ಮೇಲೆ ಮಿಸೈಲ್ ಎಸೆಯುವುದಕ್ಕೆ ಮುಂಚೆ ವೈರಿಗಳು ಯೋಚಿಸಬೇಕಾದದ್ದು ಏನು ಗೊತ್ತಾ..? ಇಸ್ರೇಲ್ ಮೇಲೆ ಮಿಸೈಲ್ ಎಸೆಯುವುದಕ್ಕೆ ಮುಚೆ ವೈರಿಗಳು, ಒಂದು ವೇಳೆ ಮಿಸೈಲ್ ಸಿಡಿಯದಿದ್ದರೆ, ಎಸೆದವನ…

  • Uncategorized

    ಬಾಳೆಹಣ್ಣಿನ ಉಪಯೋಗ ಕೇಳಿದ್ರೇ ನೀವು ಮರೆಯದೆ ದಿನಾ ಬಾಳೆಹಣ್ಣು ತಿಂತೀರ…

    ಬುದ್ಧಿಮತ್ತೆ :
    ಅಧ್ಯಯನದ ಪ್ರಕಾರ, ಪೊಟಾಷಿಯಮ್ ಜಾಗೃತಗೊಳಿಸುವ ಕೆಲಸದಲ್ಲಿ ನೆರವಾಗಿದೆ.

    ಮಲಬದ್ಧತೆ :
    ನಾರಿನ ಅಂಶ ಯತೇಚ್ಛ. ಕೃತಕ ವಿರೇಚಕಗಳಿಲ್ಲದೆ, ಮಲಬದ್ಧತೆಯ ಸಮಸ್ಯೆಯನ್ನು, ಹೋಗಲಾಡಿಸಲು ಅತ್ಯಂತ ಸಹಾಯಕಾರಿ.

    ಈ‌ ಸಮಸ್ಯೆ ಇದ್ದವರು ತಪ್ಪಿಯೂ ಬಾಳೆಹಣ್ಣು ತಿನ್ನಬಾರದು…!!!

    ಅಸಿಡಿಟಿ ಸಮಸ್ಯೆ ಇರುವವರು ಇದನ್ನು ತಿನ್ನಬಾರದು.

    ಹೃದಯ ಸಂಬಂಧಿತ ಖಾಯಿಲೆ ಇದ್ದವರು ಇದನ್ನು ಸೇವಿಸಬಾರದು

    ಮಧುಮೇಹ ರೋಗಿಗಳಿಗೂ ಇದರ ಸೇವನೆ ಒಳ್ಳೆಯದಲ್ಲ.

    ಹೆಚ್ಚು ತಲೆನೋವು ಸಮಸ್ಯೆ ಎದುರಿಸುವವರು. ಅಜೀರ್ಣತೆ ಸಮಸ್ಯೆಯಿಂದ ಬಳಲುತ್ತಿರುವವರು..

    ಕಿಡ್ನಿ ಅಲರ್ಜಿ ಸಮಸ್ಯೆ ಇದ್ದವರು ಬಾಳೆಹಣ್ಣು ತಿನ್ನಬಾರದು.