Health

ವಿದೇಶದಲ್ಲಿ ಬೇಡಿಕೆಯನ್ನು ಪಡೆದ ನುಗ್ಗೆ ಸೊಪ್ಪಿನ ಪುಡಿ…!

279

ಅಪಾರ ಔಷಧ ಗುಣ ಹೊಂದಿರುವ ನುಗ್ಗೆ ಸೊಪ್ಪನ್ನು ನೇರವಾಗಿ ಮಾರಾಟ ಮಾಡಿದರೆ ಮಾರುಕಟ್ಟೆಯಲ್ಲಿ ಬೆಲೆ ಕಡಿಮೆ ಎಂದು ತಿಳಿದ, ತಾಲೂಕಿನ ತಾವರಗೇರಾ ಪ್ರದೇಶದ ರೈತರೊಬ್ಬರು, ಸೊಪ್ಪಿನಿಂದ ತಯಾರಿಸಿದ ಪುಡಿಯನ್ನು ವಿದೇಶಗಳಿಗೆ ರಫ್ತುಮಾಡಿ ಗಮನಸೆಳೆದಿದ್ದಾರೆ.

ಮೂಲತಃ ಗಂಗಾವತಿ ತಾಲೂಕಿನವರಾದ ಬಸಯ್ಯ ಹಿರೇಮಠ, ತಾವರಗೇರಾ ಪ್ರದೇಶದಲ್ಲಿ 30ಎಕರೆ ಜಮೀನು ಖರೀದಿಸಿ, ನುಗ್ಗೆ ಬೇಸಾಯದಲ್ಲಿ ತೊಡಗಿದ್ದಾರೆ. ತೋಟಗಾರಿಕೆ ಕೃಷಿಯನ್ನು ವಿಶಿಷ್ಟ ರೀತಿಯಲ್ಲಿ ಕೈಗೊಳ್ಳಲು ಅವರಿಗೆ ಸಾಮಾಜಿಕ ಜಾಲತಾಣ ನೆರವಿಗೆ ಬಂದಿದೆ. ನುಗ್ಗೆ ಸೊಪ್ಪನ್ನು ನಿಗದಿತ ಉಷ್ಣಾಂಶದಲ್ಲಿ ಒಣಗಿಸಿ ಪೌಡರ್‌ ಆಗಿ ಪರಿವರ್ತಿಸಿದರೆ 2 ವರ್ಷಗಳವರೆಗೆ ದಾಸ್ತಾನು ಮಾಡಬಹುದು. ಆಹಾರವಸ್ತುವಾಗಿ ಬಳಸಬಹುದಾಗಿದೆ ಎಂಬ ಅಂಶ ಅವರ ಗಮನಸೆಳೆದಿದೆ. 20ಎಕರೆ ಪ್ರದೇಶದಲ್ಲಿ ನುಗ್ಗೆ ಸಸಿಗಳನ್ನು ನಾಟಿ ಮಾಡಿದ್ದಾರೆ. ತಮ್ಮ ಹೊಲಕ್ಕೆ ಹೊಂದಿಕೊಂಡಿರುವ ಇತರ ರೈತರ 15 ಎಕರೆಯನ್ನು ಲೀಸ್‌ಗೆ ಪಡೆದು ಅಲ್ಲೂ ನುಗ್ಗೆ ಸಸಿಗಳನ್ನು ಬೆಳೆಸಿದ್ದಾರೆ.

ಪೌಡರ್‌ ತಯಾರಿಸುವ ವಿಧಾನ:
ನುಗ್ಗೆ ಸಸಿಗಳಲ್ಲಿ ಕಾಯಿಯಾಗುವವರೆಗೆ ಈ ರೈತ ಕಾಯುವುದಿಲ್ಲ. ಗಿಡಗಳಲ್ಲಿನ ಸೊಪ್ಪನ್ನು ಆಗಾಗ್ಗೆ ಕೊಯ್ಲು ಮಾಡುತ್ತಾರೆ. ಎಲೆಗಳ ಬಣ್ಣ ಕೆಡದಂತೆ ಪಾಲಿ ಡ್ರೈಯಿಂಗ್‌ ವಿಧಾನದ ಮೂಲಕ ಕನಿಷ್ಠ 26 ಡಿಗ್ರಿ, ಗರಿಷ್ಠ 48 ಡಿಗ್ರಿ ಸೆಲ್ಸಿಯಸ್‌ ಉಷ್ಣಾಂಶದಲ್ಲಿ ಎಲೆಗಳನ್ನು ಒಣಗಿಸಲಾಗುತ್ತದೆ. ನಂತರ ಪೌಡರ್‌ಮಾಡಿ ಪ್ಯಾಕ್‌ ಮಾಡಲಾಗುತ್ತದೆ.
ಹಸಿ ಎಲೆಗಳನ್ನು ನೇರವಾಗಿ ಅಡುಗೆಗೆ ಅಥವಾ ಸೇವನೆಗೆ ಬಳಸಲು ಜನರು ಹಿಂದೇಟು ಹಾಕುತ್ತಾರೆ. ನಿಗದಿತ ಉಷ್ಣಾಂಶದಲ್ಲಿ ಎಲೆಗಳನ್ನು ಒಣಗಿಸಿ ಪೌಡರ್‌ ತಯಾರಿಸಿ ಮಾರಾಟ ಮಾಡಿದರೆ ಬೇಡಿಕೆಯ ಜತೆಗೆ ಬೆಲೆಯೂ ಹೆಚ್ಚು ಎಂಬುದು ರೈತ ಬಸಯ್ಯ ಹಿರೇಮಠ ಅವರ ಅನುಭವದ ಮಾತಾಗಿದೆ. ಹೀಗೆ ಸ್ಥಳೀಯವಾಗಿ ತಯಾರಿಸಿದ ನುಗ್ಗೆ ಪೌಡರ್‌ಗೆ ಜರ್ಮನಿ ಮತ್ತು ಫ್ರಾನ್ಸ್‌ ದೇಶಗಳಿಂದ ಆರ್ಡರ್‌ ಬಂದಿರುವುದೇ ಅವರ ಉತ್ಸಾಹ ಇಮ್ಮಡಿಗೊಳಿಸಿದೆ.

ನುಗ್ಗೆ ಎಲೆಯಲ್ಲಿ ಸಾಕಷ್ಟು ಪೋಷಕಾಂಶಗಳು ಇರುವುದು ಪ್ರಯೋಗಗಳಿಂದ ರುಜುವಾತಾಗಿದೆ. ಇದರಲ್ಲಿ ಪೊಟ್ಯಾಷಿಯಂ, ಅಮಿನೋ ಆ್ಯಸಿಡ್‌, ಕ್ಯಾಲ್ಸಿಯಂ, ಕಬ್ಬಿಣಾಂಶ, ಕ್ಲೊರೊಫೆರಿಲ್‌ ನಾರಿನಾಂಶ ಇದೆ. ಮಧುಮೇಹ ರೋಗಿಗಳಿಗೆ ಇದು ಸೂಕ್ತ ಆಹಾರ. ಬಿ.ಪಿ. ನಿಯಂತ್ರಿಸುವ, ಕ್ಯಾನ್ಸರ್‌ಕಾರಕ ಅಂಶಗಳನ್ನು ನಾಶಮಾಡುವ ಗುಣವನ್ನು ನುಗ್ಗೆ ಸೊಪ್ಪು ಹೊಂದಿದೆ. ಸೊಪ್ಪನ್ನು ಸಾಂಬರ್‌ಗೆ ಹಾಕಬಹುದಾಗಿದೆ.
ನುಗ್ಗೆ ಸೊಪ್ಪಿನಿಂದ ಪೌಡರ್‌ ತಯಾರಿಸುವ ಘಟಕ ಆರಂಭಿಸುವುದಾಗಿ ಬಸಯ್ಯ ಹಿರೇಮಠ ಹೇಳಿದಾಗ ಆ ಬಗ್ಗೆ ಅಧ್ಯಯನ ನಡೆಸಲಾಯಿತು. ವೈಜ್ಞಾನಿಕವಾಗಿ ಇದು ಎಷ್ಟು ಸರಿ ಎಂಬುದನ್ನು ನಾನಾ ಆಕರಗಳ ಮೂಲಕ ತಿಳಿದು, ನುಗ್ಗೆ ಬೆಳೆ ಮತ್ತು ಪ್ರೊಸೆಸಿಂಗ್‌ ಯುನಿಟ್‌ಗೆ ಇಲಾಖೆಯಿಂದ ನೆರವು ನೀಡಲು ಪ್ರಸ್ತಾವನೆ ಕಳುಹಿಸಲಾಗಿತ್ತು. ಇದೀಗ ಅದು ಸಾಕಾರಗೊಂಡಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಸಿನಿಮಾಗೆ ಎಂಟ್ರಿ ಕೊಟ್ಟ ಐ.ಪಿ.ಎಸ್. ಅಣ್ಣಾಮಲೈ. ಮೊದಲ ಚಿತ್ರಕ್ಕೆ ಅಣ್ಣಾಮಲೈ ಪಡೆದ ಸಂಭಾವನೆ ಕೇಳಿದ್ರೆ ಶಾಕ್ ಆಗೋದು ಗ್ಯಾರಂಟಿ.

    ಅಣ್ಣಾಮಲೈ ಅವರು ಅರಬ್ಬಿ ಎನ್ನುವ ಸಿನಿಮಾದಲ್ಲಿ ನಟಿಸುತ್ತಿದ್ದಾರೆ ಎನ್ನಲಾಗಿದ್ದು, ಈ ಸಿನಿಮಾ ಕೆನಡಾ ಮತ್ತು ಜರ್ಮನಿಯಲ್ಲಿ ನಡೆದ ಪ್ಯಾರಾ ಈಜು ಸ್ಪರ್ಧೆಯಲ್ಲಿ ಚಿನ್ನ ಹಾಗೂ ಕಂಚು ಗೆದ್ದು ಭಾರತಕ್ಕೆ ಕೀರ್ತಿಯನ್ನು ತಂದು ಕೊಟ್ಟಂತಹ ಅಂತರರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಿರುವ, ಭಾರತದ ಹೆಮ್ಮೆ ಎನಿಸಿರುವ ಪ್ಯಾರಾ ಈಜುಪಟು ಕೆ.ಎಸ್.ವಿಶ್ವಾಸ್ ಅವರ ಜೀವನಾಧಾರಿತ ಸಿನಿಮಾ ಆಗಿದೆ. ಸಣ್ಣ ವಯಸ್ಸಿನಲ್ಲೇ ವಿದ್ಯುತ್ ಅವಘಡದಿಂದ ತನ್ನ ಕೈಗಳನ್ನು ಕಳೆದುಕೊಂಡರೂ, ಗುರಿ ಸಾಧನೆಯ ಛಲ ಬಿಡದೆ ಸಾಧಕೆನಾಗಿ ಮೆರದ ವಿಶ್ವಾಸ್ ಅವರ ಜೀವನಾಧಾರಿತ ಸಿನಿಮಾ…

  • ಸುದ್ದಿ

    ಆನ್‌ ಲೈನ್‌ ವ್ಯಾಪಾರಕ್ಕೆ ಬೀಳಲಿದೆಯಾ ಬ್ರೇಕ್…?

    ಹಬ್ಬಗಳ ದಿನ ಇ-ಕಾಮರ್ಸ್ ಕಂಪನಿಗಳು ಭಾರಿ ರಿಯಾಯಿತಿ ನೀಡಿ ಸಾಮಾನ್ಯ ವ್ಯಾಪಾರಿಗಳಿಗೆ ಹೊಡೆತ ನೀಡುತ್ತಿವೆ ಎಂದು ಅಖಿಲ ಭಾರತೀಯ ವ್ಯಾಪಾರಿಗಳ ಒಕ್ಕೂಟ(ಸಿಎಐಟಿ) ಭಾರತ ಸರ್ಕಾರಕ್ಕೆ ದೂರು ನೀಡಿದೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ವಾಣಿಜ್ಯ ಸಚಿವ ಪಿಯೂಷ್ ಗೋಯಲ್ ಅವರಿಗೆ ದೂರು ನೀಡಿದ್ದಾರೆ. ಸಿಎಐಟಿ ಅಧ್ಯಕ್ಷ ಬಿ.ಸಿ. ಭಾರತೀಯಾ ಹಾಗೂ ಕಾರ್ಯದರ್ಶಿ ಪ್ರವೀಣ್ ಖಂಡೇಲ್‌ವಾಲ್ ಇ-ಕಾಮರ್ಸ್ ಕಂಪನಿಗಳ ವಿರುದ್ಧ ಅಪಸ್ವರ ಎತ್ತಿದ್ದಾರೆ. ಇ-ಕಾಮರ್ಸ್ ಕಂಪನಿಗಳು ಕೇವಲ ಆನ್‌ಲೈನ್ ಮಾರುಕಟ್ಟೆಗಳಾಗಿದ್ದು, ಅವಾಗಿಯೇ ಸಾಮಾನುಗಳ ಸಂಗ್ರಹಣೆ ಹಾಗೂ…

  • ಸುದ್ದಿ

    ಫಿಕ್ಸ್ ಆಯ್ತು ಲೋಕಸಭಾ ಎಲೆಕ್ಷನ್ ದಿನಾಂಕ?ಕರ್ನಾಟಕದಲ್ಲಿ ಯಾವಾಗ ಗೊತ್ತಾ ಎಲೆಕ್ಷನ್?ಈ ಸುದ್ದಿ ನೋಡಿ

    2019 ರ ಲೋಕಸಭಾ ಚುನಾವಣೆಗೆ ಚುನಾವಣಾ ಆಯೋಗ ಮಾ.10 ರಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ದಿನಾಂಕ ಘೋಷಿಸಿದ್ದು 7 ಹಂತಗಳಲ್ಲಿ ಚುನಾವಣೆ ನಡೆಯಲಿದ್ದು ಇಂದಿನಿಂದಲೇ ಚುನಾವಣಾ ನೀತಿ ಸಂಹಿತೆ ಜಾರಿಯಾಗಿದೆ. ದೆಹಲಿ ವಿಜ್ಞನ ಭವನದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿರುವ ಮುಖ್ಯ ಚುನಾವಣಾ ಆಯುಕ್ತ ಸುನಿಲ್ ಅರೋರಾ, 2019 ಲೋಕಸಭಾ ಚುನಾವಣೆಗೆ ದಿನಾಂಕ ಘೋಷಿಸಿದ್ದಾರೆ. ದೇಶಾದ್ಯಂತ ಒಟ್ಟಾರೆ 7 ಹಂತಗಳಲ್ಲಿ ಚುನಾವಣೆ ನಡೆಯಲಿದ್ದು ಮೇ.23 ರಂದು ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ ಎಂದು ತಿಳಿಸಿದ್ದಾರೆ. ಏ. ರಂದು 11 ಮೊದಲ ಹಂತದ ಮತದಾನ…

  • ಜ್ಯೋತಿಷ್ಯ

    ದಿನ ಭವಿಷ್ಯ ಗುರುವಾರ..ಈ ದಿನದ ರಾಶಿ ಭವಿಷ್ಯದಲ್ಲಿ ಏನಿದೆ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(21 ಮಾರ್ಚ್, 2019) ಇಂದು ನೀವು ಸುಲಭವಾಗಿ ಬಂಡವಾಳ ಪಡೆಯಬಹುದು -ಬಾಕಿಯಿರುವ ಸಾಲಗಳನ್ನು ಸಂಗ್ರಹಿಸಬಹುದು ಅಥವಾ ಹೊಸ…

  • ಸುದ್ದಿ

    ಅನ್ನದಾತನಿಗೆ ಬಂಪರ್ ಆಫರ್!ಪ್ರತೀ ರೈತನ ಅಕೌಂಟ್’ಗೆ ಬೀಳಲಿದೆ 10,000.!ಏನಿದು ಯೋಜನೆ ಮುಂದೆ ಓದಿ…

    ಮುಖ್ಯಮಂತ್ರಿ ಸಿದ್ದರಾಮಯ್ಯನವರು 2018-19ನೇ ಸಾಲಿನ ಬಜೆಟ್ ಮಂಡಿಸಿದ್ದು,ಹಲವಾರು ಹೊಸ ಯೋಜನೆಗಳನ್ನು ಪ್ರಕಟಿಸಿದ್ದಾರೆ.ಇದರಲ್ಲಿ ರೈತರಿಗೂ ಹಲವಾರು ಯೋಜನೆಗಳನ್ನು ಪ್ರಕಟಿಸಿದ್ದು,ಕೃಷಿಗೆ ಹೆಚ್ಚು ಮಾನ್ಯತೆ ನೀಡಿದ್ದಾರೆ.

  • ಆರೋಗ್ಯ

    ಕಂಕುಳ ದುರ್ವಾಸನೆಯಿಂದ ಮುಕ್ತರಾಗಲು ಈ ವಿಧಾನಗಳನ್ನು ಅನುಸರಿಸಿ…….

    ಕಾಲ ಕಾಲಕ್ಕೆ ಬದಲಾಗುವ ವಾತಾವರಣದ ಜೊತೆಗೆ ಆರೋಗ್ಯದ ಹೊಂದಾಣಿಕೆ ಮಾಡಿಕೊಳ್ಳುವುದು ಸಾಹಸವೇ ಸರಿ. ಬೇಸಿಗೆ ಕಾಲದಲ್ಲಿ ಬಿಸಿಲಿನ ಬೇಗೆಯಿಂದ ಶರೀರದಿಂದ ಒಸರುವ ಬೆವರು ನೀಡುವ ಬಾಧೆಯಂತು ಹೇಳತೀರದು.