ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅಪಾರ ಔಷಧ ಗುಣ ಹೊಂದಿರುವ ನುಗ್ಗೆ ಸೊಪ್ಪನ್ನು ನೇರವಾಗಿ ಮಾರಾಟ ಮಾಡಿದರೆ ಮಾರುಕಟ್ಟೆಯಲ್ಲಿ ಬೆಲೆ ಕಡಿಮೆ ಎಂದು ತಿಳಿದ, ತಾಲೂಕಿನ ತಾವರಗೇರಾ ಪ್ರದೇಶದ ರೈತರೊಬ್ಬರು, ಸೊಪ್ಪಿನಿಂದ ತಯಾರಿಸಿದ ಪುಡಿಯನ್ನು ವಿದೇಶಗಳಿಗೆ ರಫ್ತುಮಾಡಿ ಗಮನಸೆಳೆದಿದ್ದಾರೆ.

ಮೂಲತಃ ಗಂಗಾವತಿ ತಾಲೂಕಿನವರಾದ ಬಸಯ್ಯ ಹಿರೇಮಠ, ತಾವರಗೇರಾ ಪ್ರದೇಶದಲ್ಲಿ 30ಎಕರೆ ಜಮೀನು ಖರೀದಿಸಿ, ನುಗ್ಗೆ ಬೇಸಾಯದಲ್ಲಿ ತೊಡಗಿದ್ದಾರೆ. ತೋಟಗಾರಿಕೆ ಕೃಷಿಯನ್ನು ವಿಶಿಷ್ಟ ರೀತಿಯಲ್ಲಿ ಕೈಗೊಳ್ಳಲು ಅವರಿಗೆ ಸಾಮಾಜಿಕ ಜಾಲತಾಣ ನೆರವಿಗೆ ಬಂದಿದೆ. ನುಗ್ಗೆ ಸೊಪ್ಪನ್ನು ನಿಗದಿತ ಉಷ್ಣಾಂಶದಲ್ಲಿ ಒಣಗಿಸಿ ಪೌಡರ್ ಆಗಿ ಪರಿವರ್ತಿಸಿದರೆ 2 ವರ್ಷಗಳವರೆಗೆ ದಾಸ್ತಾನು ಮಾಡಬಹುದು. ಆಹಾರವಸ್ತುವಾಗಿ ಬಳಸಬಹುದಾಗಿದೆ ಎಂಬ ಅಂಶ ಅವರ ಗಮನಸೆಳೆದಿದೆ. 20ಎಕರೆ ಪ್ರದೇಶದಲ್ಲಿ ನುಗ್ಗೆ ಸಸಿಗಳನ್ನು ನಾಟಿ ಮಾಡಿದ್ದಾರೆ. ತಮ್ಮ ಹೊಲಕ್ಕೆ ಹೊಂದಿಕೊಂಡಿರುವ ಇತರ ರೈತರ 15 ಎಕರೆಯನ್ನು ಲೀಸ್ಗೆ ಪಡೆದು ಅಲ್ಲೂ ನುಗ್ಗೆ ಸಸಿಗಳನ್ನು ಬೆಳೆಸಿದ್ದಾರೆ.

ಪೌಡರ್ ತಯಾರಿಸುವ ವಿಧಾನ:
ನುಗ್ಗೆ ಸಸಿಗಳಲ್ಲಿ ಕಾಯಿಯಾಗುವವರೆಗೆ ಈ ರೈತ ಕಾಯುವುದಿಲ್ಲ. ಗಿಡಗಳಲ್ಲಿನ ಸೊಪ್ಪನ್ನು ಆಗಾಗ್ಗೆ ಕೊಯ್ಲು ಮಾಡುತ್ತಾರೆ. ಎಲೆಗಳ ಬಣ್ಣ ಕೆಡದಂತೆ ಪಾಲಿ ಡ್ರೈಯಿಂಗ್ ವಿಧಾನದ ಮೂಲಕ ಕನಿಷ್ಠ 26 ಡಿಗ್ರಿ, ಗರಿಷ್ಠ 48 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶದಲ್ಲಿ ಎಲೆಗಳನ್ನು ಒಣಗಿಸಲಾಗುತ್ತದೆ. ನಂತರ ಪೌಡರ್ಮಾಡಿ ಪ್ಯಾಕ್ ಮಾಡಲಾಗುತ್ತದೆ.
ಹಸಿ ಎಲೆಗಳನ್ನು ನೇರವಾಗಿ ಅಡುಗೆಗೆ ಅಥವಾ ಸೇವನೆಗೆ ಬಳಸಲು ಜನರು ಹಿಂದೇಟು ಹಾಕುತ್ತಾರೆ. ನಿಗದಿತ ಉಷ್ಣಾಂಶದಲ್ಲಿ ಎಲೆಗಳನ್ನು ಒಣಗಿಸಿ ಪೌಡರ್ ತಯಾರಿಸಿ ಮಾರಾಟ ಮಾಡಿದರೆ ಬೇಡಿಕೆಯ ಜತೆಗೆ ಬೆಲೆಯೂ ಹೆಚ್ಚು ಎಂಬುದು ರೈತ ಬಸಯ್ಯ ಹಿರೇಮಠ ಅವರ ಅನುಭವದ ಮಾತಾಗಿದೆ. ಹೀಗೆ ಸ್ಥಳೀಯವಾಗಿ ತಯಾರಿಸಿದ ನುಗ್ಗೆ ಪೌಡರ್ಗೆ ಜರ್ಮನಿ ಮತ್ತು ಫ್ರಾನ್ಸ್ ದೇಶಗಳಿಂದ ಆರ್ಡರ್ ಬಂದಿರುವುದೇ ಅವರ ಉತ್ಸಾಹ ಇಮ್ಮಡಿಗೊಳಿಸಿದೆ.

ನುಗ್ಗೆ ಎಲೆಯಲ್ಲಿ ಸಾಕಷ್ಟು ಪೋಷಕಾಂಶಗಳು ಇರುವುದು ಪ್ರಯೋಗಗಳಿಂದ ರುಜುವಾತಾಗಿದೆ. ಇದರಲ್ಲಿ ಪೊಟ್ಯಾಷಿಯಂ, ಅಮಿನೋ ಆ್ಯಸಿಡ್, ಕ್ಯಾಲ್ಸಿಯಂ, ಕಬ್ಬಿಣಾಂಶ, ಕ್ಲೊರೊಫೆರಿಲ್ ನಾರಿನಾಂಶ ಇದೆ. ಮಧುಮೇಹ ರೋಗಿಗಳಿಗೆ ಇದು ಸೂಕ್ತ ಆಹಾರ. ಬಿ.ಪಿ. ನಿಯಂತ್ರಿಸುವ, ಕ್ಯಾನ್ಸರ್ಕಾರಕ ಅಂಶಗಳನ್ನು ನಾಶಮಾಡುವ ಗುಣವನ್ನು ನುಗ್ಗೆ ಸೊಪ್ಪು ಹೊಂದಿದೆ. ಸೊಪ್ಪನ್ನು ಸಾಂಬರ್ಗೆ ಹಾಕಬಹುದಾಗಿದೆ.
ನುಗ್ಗೆ ಸೊಪ್ಪಿನಿಂದ ಪೌಡರ್ ತಯಾರಿಸುವ ಘಟಕ ಆರಂಭಿಸುವುದಾಗಿ ಬಸಯ್ಯ ಹಿರೇಮಠ ಹೇಳಿದಾಗ ಆ ಬಗ್ಗೆ ಅಧ್ಯಯನ ನಡೆಸಲಾಯಿತು. ವೈಜ್ಞಾನಿಕವಾಗಿ ಇದು ಎಷ್ಟು ಸರಿ ಎಂಬುದನ್ನು ನಾನಾ ಆಕರಗಳ ಮೂಲಕ ತಿಳಿದು, ನುಗ್ಗೆ ಬೆಳೆ ಮತ್ತು ಪ್ರೊಸೆಸಿಂಗ್ ಯುನಿಟ್ಗೆ ಇಲಾಖೆಯಿಂದ ನೆರವು ನೀಡಲು ಪ್ರಸ್ತಾವನೆ ಕಳುಹಿಸಲಾಗಿತ್ತು. ಇದೀಗ ಅದು ಸಾಕಾರಗೊಂಡಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
70 ಮತ್ತು 80ರ ದಶಕಗಳಲ್ಲಿನ ನಿಮ್ಮ ಬಾಲ್ಯದ ಅದ್ಭುತ ನೆನಪುಗಳು…
ನಾವು ಪ್ರತಿದಿನ ಕನಿಷ್ಠ ಎಂಟು ಗ್ಲಾಸ್ ನೀರನ್ನು ಕುಡಿಯಬೇಕು ಎನ್ನುವುದು ಎಲ್ಲರಿಗೂ ಗೊತ್ತು. ಆದರೆ ನೀರು ಕುಡಿಯಲು ಸರಿಯಾದ ಸಮಯ ಯಾವುದು? ಶರೀರದಲ್ಲಿ ನೀರಿನ ಪರಿಣಾಮವನ್ನು ಗರಿಷ್ಠವಾಗಿಸಲು ಅದನ್ನು ಸೇವಿಸಲು ಅತ್ಯುತ್ತಮ ಸಮಯ ಯಾವುದು ಮತ್ತು ಹಾನಿಕಾರಕ ಪರಿಣಾಮವನ್ನು ತಪ್ಪಿಸಲು ನೀರನ್ನು ಯಾವ ಸಮಯ ದಲ್ಲಿ ಸೇವಿಸಬಾರದು ಎಂಬ ಬಗ್ಗೆ ಮಾಹಿತಿ ಇಲ್ಲಿದೆ.
ಭಾರತ ದೇಶವನ್ನು ತನ್ನ ಕೈ ಬೆರಳುಗಳಿಂದಲೇ ಶಾಸಿಸುವಷ್ಟು ಶಕ್ತಿ ಇರುವ ದಿಗ್ಗಜ, ರಿಲಯೆನ್ಸ್ ಅಧಿನೇತ ಮುಖೇಶ್ ಅಂಬಾನೀ ಪುತ್ರ ಆಕಾಶ್ ಅಂಬಾನೀ ವಿವಾಹ ಇಷ್ಟರಲ್ಲೇ ಜರುಗಲಿದೆ.
ಜಗತ್ತಿನಲ್ಲೇ ಅತೀ ಹೆಚ್ಚಾಗಿ ಸೇವಿಸುವ ಹಣ್ಣು ಬಾಳೆಹಣ್ಣು. ಬಾಳೆಹಣ್ಣು ಅತ್ಯಂತ ಹೆಚ್ಚು ಪೋಷಕಾಂಶವುಳ್ಳ ಆಹಾರ ಎಂದು ವೈದ್ಯರಿಂದ ಹಿಡಿದು ಪ್ರತಿಯೊಬ್ಬರು ಶಿಫಾರಸು ಮಾಡುತ್ತಾರೆ. ಇದನ್ನು ಸೇವಿಸುವುದರಿಂದ ತಕ್ಷಣವೇ ಶಕ್ತಿ ತುಂಬುತ್ತದೆ. ಒಂದು ರೀತಿಯಲ್ಲಿ ಗ್ಲೂಕೊಸ್ ರೀತಿಯಲ್ಲಿ ಕೆಲಸ ಮಾಡುತ್ತದೆ ಎಂದು ಕೂಡ ಹೇಳಬಹುದು.
ಇಂದು ಬುಧವಾರ, 14/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ನಿಮ್ಮಲ್ಲಿ ಬಹಳಷ್ಟು ಜನ ಈ ಹಣ್ಣನ್ನ ತಿಂದೇ ಇರುವುದಿಲ್ಲ. ಇನ್ನೂ ಕೆಲವರು ಈ ಹಣ್ಣನ್ನು ತಿಂದರೂ ಇದರ ಬಗ್ಗೆ ಸರಿಯಾಗಿ ತಿಳಿದುಕೊಂಡಿರುವುದಿಲ್ಲ. ಈ ಹಣ್ಣನ್ನ ಸ್ಟಾರ್ ಫ್ರೂಟ್ ಅಂತ ಕರೆಯುತ್ತಾರೆ. ಈ ಹಣ್ಣು ಸಾಮಾನ್ಯವಾಗಿ ಎಲ್ಲಾ ಊರುಗಳಲ್ಲಿ ಸಿಗುವುದಿಲ್ಲ. ಈ ಹಣ್ಣು ನಮ್ಮ ದೇಶದೇ ಆದರೂ ಸಹ ಕೇವಲ ಕೆಲವು ಊರುಗಳಲ್ಲಿ ಮಾತ್ರ ಈ ಹಣ್ಣನ್ನ ಬೆಳೆಯುತ್ತಾರೆ. ಇನ್ನೂ ನಮ್ಮ ದೇಶದಿಂದ ಬೇರೆ ದೇಶಗಳಿಗೆ ಈ ಹಣ್ಣು ಎಕ್ಸ್ಪೋರ್ಟ್ ಕೂಡ ಆಗುತ್ತದೆ. ಈ ಸ್ಟಾರ್ ಫ್ರೂಟ್ ಅನ್ನ…