ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಎದೆಯುರಿಯು ಸಾಮಾನ್ಯ ಜೀರ್ಣ ಸಮಸ್ಯೆಯಾಗಿದೆ. ಅದನ್ನು ಆಮ್ಲ ಹಿಮ್ಮುಖ ಹರಿವು ಎಂದೂ ಕರೆಯಲಾಗುತ್ತದೆ ಮತ್ತು ಜಠರಾಮ್ಲವು ಅನ್ನನಾಳದಲ್ಲಿ ದೂಡಲ್ಪಟ್ಟಾಗ ಈ ಸಮಸ್ಯೆಯು ಉದ್ಭವವಾಗುತ್ತದೆ.
ನಿದ್ರೆಯ ಕೊರತೆ,ಸೂಕ್ತವಲ್ಲದ ಆಹಾರ,ಧೂಮ್ರಪಾನ,ಸೋಂಕು ಇತ್ಯಾದಿಗಳು ಎದೆಯುರಿಯನ್ನುಂಟು ಮಾಡುತ್ತವೆ. ಇದರಿಂದ ಪಾರಾಗಲು ಕೆಲವು ಸರಳ ಉಪಾಯಗಳಿಲ್ಲಿವೆ.
►ಆಗಾಗ್ಗೆ ಸಣ್ಣ ಊಟಗಳನ್ನು ಮಾಡಿ
ಸಣ್ಣ ಊಟಗಳನ್ನು ಆಗಾಗ್ಗೆ ಮಾಡುವುದು ಎದೆಯುರಿಯಿಂದ ಪಾರಾಗಲು ಅತ್ಯಂತ ಸರಳ ಉಪಾಯವಾಗಿದೆ. ಏಕೆಂದರೆ ನಾವು ಒಂದೇ ಬಾರಿಗೆ ಅತಿಯಾಗಿ ಆಹಾರ ಸೇವಿಸುವುದರಿಂದ ಕೆಳ ಅನ್ನನಾಳದ ಭಾಗದಲ್ಲಿರುವ ಕವಾಟದಂತಹ ಸ್ನಾಯು ‘ಸ್ಫಿಂಕ್ಟರ್ (ಎಲ್ಇಎಸ್) ’ನ ಮೇಲೆ ಹೆಚ್ಚುವರಿ ಒತ್ತಡವುಂಟಾಗುತ್ತದೆ. ಈ ಸ್ನಾಯುವು ಜಠರದಲ್ಲಿಯ ಆಮ್ಲ ಇತ್ಯಾದಿಗಳು ಅನ್ನನಾಳವನ್ನು ಪ್ರವೇಶಿಸುವುದನ್ನು ತಡೆಯುತ್ತದೆ. ಅದರ ಮೇಲೆ ಹೆಚ್ಚುವರಿ ಒತ್ತಡವುಂಟಾದಾಗ ಅದರ ಕಾರ್ಯದಲ್ಲಿ ವ್ಯತ್ಯಯಗಳುಂಟಾಗುತ್ತವೆ.
►ಕಡಿಮೆ ಕಾರ್ಬೊಹೈಡ್ರೇಟ್ ಇರುವ ಆಹಾರ ಸೇವಿಸಿ
ಬೊಜ್ಜುದೇಹಿಗಳು ಕಡಿಮೆ ಕಾರ್ಬೊಹೈಡ್ರೇಟ್ಗಳನ್ನು ಒಳಗೊಂಡಿರುವ ಆಹಾರವನ್ನು ಸೇವಿಸುವುದು ಎದೆಯುರಿಯನ್ನು ತಗ್ಗಿಸಲು ನೆರವಾಗುತ್ತದೆ ಎಂದು ಹಲವಾರು ಅಧ್ಯಯನಗಳು ಬೆಟ್ಟುಮಾಡಿವೆ. ಅತಿಯಾದ ಕಾರ್ಬೊಹೈಡ್ರೇಟ್ಗಳ ಸೇವನೆಯಿಂದ ಹೊಟ್ಟೆಯಲ್ಲಿ ವಾಯು ಸಂಗ್ರಹಗೊಳ್ಳುತ್ತದೆ ಮತ್ತು ಹೊಟ್ಟೆಯುಬ್ಬರ ವುಂಟಾಗುತ್ತದೆ ಹಾಗೂ ಇದು ಎದೆಯುರಿಗೆ ಕಾರಣವಾಗುತ್ತದೆ.
►ಆಹಾರವನ್ನು ಸರಿಯಾಗಿ ಅಗಿದು ತಿನ್ನಿ
ಆಹಾರವನ್ನು ನಿಧಾನವಾಗಿ,ಚೆನ್ನಾಗಿ ಅಗಿದು ಸೇವಿಸಿದಾಗ ಅದು ಜೀರ್ಣ ರಸಗಳು ಆಹಾರವನ್ನು ವಿಭಜಿಸಲು ಮತ್ತು ಅದನ್ನು ಜೀರ್ಣಗೊಳಿಸಲು ಸಾಕಷ್ಟು ಸಮಯಾವಕಾಶವನ್ನು ನೀಡುತ್ತವೆ. ಆದರೆ ಅವಸರದಿಂದ ಊಟ ಮಾಡಿದಾಗ ಅದು ಸರಿಯಾಗಿ ಜೀರ್ಣಗೊಳ್ಳುವುದಿಲ್ಲ ಮತ್ತು ಇದು ಅಜೀರ್ಣ,ಆಮ್ಲೀಯತೆ ಹಾಗೂ ಎದೆಯುರಿಗೆ ಕಾರಣವಾಗುತ್ತದೆ.
►ತಡರಾತ್ರಿ ಆಹಾರ ಸೇವನೆ ಬೇಡ
ಹೊತ್ತಲ್ಲದ ಹೊತ್ತಿಗೆ ಊಟ ಮಾಡುವುದು ಜೀರ್ಣ ಸಂಬಂಧಿ ಸಮಸ್ಯೆಗಳಿಗೆ ಪ್ರಮುಖ ಕಾರಣಗಳಲ್ಲೊಂದಾಗಿದೆ. ಕೆಲಸದ ಒತ್ತಡದಿಂದಲೋ ಅಥವಾ ಸಂಜೆಯ ಸಮಯದಲ್ಲಿ ಹೊಟ್ಟೆ ಬಿರಿಯುವುಷ್ಟು ತಿನಿಸುಗಳನ್ನು ಸೇವಿಸಿಯೋ ತಡರಾತ್ರಿಯಲ್ಲಿ ಊಟ ಮಾಡುವುದು ಎದೆಯುರಿಗೆ ಸುಲಭವಾಗಿ ತುತ್ತಾಗಿಸುತ್ತದೆ.
►ಹಸಿ ಈರುಳ್ಳಿಯಿಂದ ದೂರವಿರಿ
ಹೆಚ್ಚಿನ ಜನರು ಊಟದೊಂದಿಗೆ ಹಸಿ ಈರುಳ್ಳಿಯನ್ನು ಅಥವಾ ಅದನ್ನು ಸಲಾಡ್ನೊಂದಿಗೆ ಸೇರಿಸಿಕೊಂಡು ತಿನ್ನುವ ಅಭ್ಯಾಸವನ್ನು ಹೊಂದಿರುತ್ತಾರೆ. ಆದರೆ ನಿಮಗೆ ಆಮ್ಲೀಯತೆಯ ಸಮಸ್ಯೆಯಿದ್ದರೆ ಹಸಿ ಈರುಳ್ಳಿಯಿಂದ ದೂರವಿರಿ,ಏಕೆಂದರೆ ಅದು ಎದೆಯುರಿ ಮತ್ತು ತೇಗಿನ ಸಮಸ್ಯೆಯನ್ನು ಹೆಚ್ಚಿಸುತ್ತದೆ. ಹಸಿ ಈರುಳ್ಳಿಯು ಹುದುಗು ಬರುವ ನಾರನ್ನು ಹೆಚ್ಚಿನ ಪ್ರಮಾಣದಲ್ಲಿ ಒಳಗೊಂಡಿರುತ್ತದೆ ಮತ್ತು ಇದು ಜೀರ್ಣ ಸಂದರ್ಭದಲ್ಲಿ ಹೆಚ್ಚು ಅನಿಲವನ್ನು ಉತ್ಪಾದಿಸುತ್ತದೆ. ಅಲ್ಲದೆ ಹಸಿ ಈರುಳ್ಳಿಯಲ್ಲಿನ ಸಂಯುಕ್ತಗಳು ಅನ್ನನಾಳದ ಒಳಪದರವನ್ನು ಕೆರಳಿಸುವ ಮೂಲಕ ಪರಿಸ್ಥಿತಿಯನ್ನು ಇನ್ನಷ್ಟು ಹದಗೆಡಿಸುತ್ತವೆ.
►ಕಾರ್ಬನೀಕೃತ ಪಾನೀಯಗಳನ್ನು ನಿವಾರಿಸಿ
ಸೋಡಾದಂತಹ ಕಾರ್ಬನೀಕೃತ ಪಾನೀಯಗಳು ಎಲ್ಇಎಸ್ನ್ನು ತಾತ್ಕಾಲಿಕವಾಗಿ ದುರ್ಬಲಗೊಳಿಸುತ್ತವೆ ಮತ್ತು ಆಮ್ಲ ಹಿಮ್ಮುಖ ಹರಿವಿನಿಂದಾಗಿ ಪದೇ ಪದೇ ತೇಗನ್ನುಂಟು ಮಾಡುತ್ತವೆ. ಈ ಪಾನೀಯಗಳಲ್ಲಿರುವ ಕಾರ್ಬನ್ ಡೈಯಾಕ್ಸೈಡ್ ಅನ್ನನಾಳವನ್ನು ಪ್ರವೇಶಿಸುವ ಆಮ್ಲದ ಪ್ರಮಾಣವನ್ನು ಹೆಚ್ಚಿಸುತ್ತದೆ ಮತ್ತು ಇವೆಲ್ಲ ಎದೆಯುರಿಗೆ ಕಾರಣವಾಗುತ್ತವೆ.
►ಜೀರ್ಣಕ್ರಿಯೆಯನ್ನು ಹೆಚ್ಚಿಸಲು ಚ್ಯೂವಿಂಗ್ ಗಮ್ ಬಳಸಿ
ಸಕ್ಕರೆ ರಹಿತ ಚ್ಯೂಯಿಂಗ್ ಗಮ್ ಆಮ್ಲೀಯತೆಯ ಸಮಸ್ಯೆಯನ್ನು ನಿಭಾಯಿಸಲು ನೆರವಾಗುತ್ತದೆ ಎಂದು ಹಲವಾರು ಅಧ್ಯಯನಗಳು ತೋರಿಸಿವೆ. ಗಮ್ನ್ನು ಅಗಿಯುವಾಗ ಅದು ಹೆಚ್ಚಿನ ಪ್ರಮಾಣದಲ್ಲಿ ಜೊಲ್ಲು ಉತ್ಪತ್ತಿಯಾಗುವಂತೆ ಮಾಡುತ್ತದೆ ಮತ್ತು ಇದು ಅನ್ನನಾಳದಲ್ಲಿಯ ಹೆಚ್ಚುವರಿ ಆಮ್ಲವನ್ನು ನಿವಾರಿಸುತ್ತದೆ.
►ಕಾಫಿಯ ಸೇವನೆ ಮಿತವಾಗಿರಲಿ
ಆಮ್ಲ ಹಿಮ್ಮುಖ ಹರಿವಿಗೆ ಕಾರಣವಾಗಿರುವ ಆಹಾರಗಳ ಸೇವನೆಯಿಂದ ದೂರವಿರುವುದು ಎದೆಯುರಿಯನ್ನು ತಡೆಯಲು ಪ್ರಮುಖ ಮಾರ್ಗಗಳಲ್ಲೊಂದಾಗಿದೆ. ಕಾಫಿ ಇಂತಹ ಆಹಾರಗಳಲ್ಲಿ ಸೇರಿದೆ. ಕಾಫಿಯು ಎಲ್ಇಎಸ್ನ್ನು ತಾತ್ಕಾಲಿಕವಾಗಿ ದುರ್ಬಲಗೊಳಿಸುತ್ತದೆ ಮತ್ತು ಇದು ಆಮ್ಲ ಹಿಮ್ಮುಖ ಹರಿವಿನ ಅಪಾಯವನ್ನು ಹೆಚ್ಚಿಸುತ್ತದೆ.
►ಮದ್ಯಪಾನ ಬೇಡ
ಮದ್ಯಪಾನ ಆರೋಗ್ಯಕ್ಕೆ ಕೆಟ್ಟದ್ದು ಎನ್ನುವುದನ್ನು ಪ್ರತ್ಯೇಕವಾಗಿ ಹೇಳಬೇಕಿಲ್ಲ ಮತ್ತು ವ್ಯಕ್ತಿಯು ಎದೆಯುರಿಯಿಂದ ಬಳಲುತ್ತಿದ್ದರೆ ಅದು ಇನ್ನೂ ಕೆಟ್ಟದ್ದು. ಮದ್ಯವು ಆಮ್ಲ ಹಿಮ್ಮುಖ ಹರಿವಿನ ಅಪಾಯವನ್ನು ಹೆಚ್ಚಿಸುವುದಷ್ಟೇ ಅಲ್ಲ, ಸ್ಥಿತಿಯನ್ನೂ ಇನ್ನಷ್ಟು ಹದಗೆಡಿಸುತ್ತದೆ. ಅದು ಜಠರಾಮ್ಲಗಳ ಉತ್ಪಾದನೆಯನ್ನು ಉತ್ತೇಜಿಸುತ್ತದೆ ಮತ್ತು ಆಮ್ಲವನ್ನು ನಿವಾರಿಸುವ ಎಲ್ಇಎಸ್ನ ಸಾಮರ್ಥ್ಯವನ್ನು ಕುಂದಿಸುತ್ತದೆ.
►ಆಹಾರ ಸೇವಿಸಿದ ತಕ್ಷಣ ವ್ಯಾಯಾಮ ಬೇಡ
ವ್ಯಾಯಮವು ನಾವು ಸೇವಿಸಿದ ಆಹಾರವು ಜೀರ್ಣಗೊಳ್ಳಲು ನೆರವಾಗುತ್ತದೆ,ಆದರೆ ಆಹಾರ ಸೇವಿಸಿದ ತಕ್ಷಣ ವ್ಯಾಯಾಮ ಮಾಡುವುದು ಒಳ್ಳೆಯದಲ್ಲ. ಹಾಗೆ ಮಾಡಿದರೆ ಜೀರ್ಣಕ್ರಿಯೆಗೆ ವ್ಯತ್ಯಯವುಂಟಾಗುತ್ತದೆ ಮತ್ತು ಅನ್ನನಾಳದಲ್ಲಿ ಆಮ್ಲ ಸಂಗ್ರಹಗೊಳ್ಳುತ್ತದೆ. ಇದು ಎದೆಯುರಿಗೆ ಕಾರಣವಾಗುತ್ತದೆ ಮತ್ತು ಈಗಾಗಲೇ ಎದೆಯುರಿಯಿಂದ ಬಳಲುತ್ತಿದ್ದರೆ ಸ್ಥಿತಿಯನ್ನು ಇನ್ನಷ್ಟು ಹದಗೆಡಿಸುತ್ತದೆ. ಹೀಗಾಗಿ ವ್ಯಾಯಾಮದಲ್ಲಿ ತೊಡಗಿಕೊಳ್ಳುವ ಮುನ್ನ ತನ್ನಲ್ಲಿರುವುದನ್ನು ಖಾಲಿ ಮಾಡಲು ಜಠರಕ್ಕೆ ಸ್ವಲ್ಪ ಸಮಯಾವಕಾಶ ನೀಡಿ.
►ಊಟವಾದ ತಕ್ಷಣ ನಿದ್ರಿಸಬೇಡಿ
ಊಟ ಮತ್ತು ನಿದ್ರೆಯ ನಡುವೆ ಕನಿಷ್ಠ ಮೂರು ಗಂಟೆಗಳ ಅಂತರವನ್ನು ಕಾಯ್ದುಕೊಳ್ಳುವುದು ಮುಖ್ಯವಾಗಿದೆ. ಊಟವಾದ ತಕ್ಷಣ ಹಾಸಿಗೆಯನ್ನು ಸೇರಿಕೊಂಡರೆ ಎಲ್ಇಎಸ್ ಮೇಲಿನ ಒತ್ತಡ ಹೆಚ್ಚುತ್ತದೆ ಮತ್ತು ಆಮ್ಲ ಹಿಮ್ಮುಖ ಹರಿವಿಗೆ ಸುಲಭದ ಗುರಿಯಾಗಿಸುತ್ತದೆ. ಊಟ ಮತ್ತು ನಿದ್ರೆಯ ಮಧ್ಯೆ ಅಂತರವನ್ನು ಕಾಯ್ದುಕೊಳ್ಳುವುದು ಆಹಾರವನ್ನು ಜೀರ್ಣಗೊಳಿಸಲು ಜಠರಕ್ಕೆ ನೆರವಾಗುತ್ತದೆ ಮತ್ತು ಎದೆಯುರಿಯನ್ನು ತಡೆಯುತ್ತದೆ.
►ಹಾಸಿಗೆಯ ತಲೆಭಾಗ ಎತ್ತರವಾಗಿರಲಿ
ವಿಶೇಷವಾಗಿ ರಾತ್ರಿಗಳಲ್ಲಿ ಎದೆಯುರಿಯುಂಟಾಗುತ್ತಿದ್ದರೆ ಅದಕ್ಕೆ ನಿಮ್ಮ ಹಾಸಿಗೆಯ ಭಂಗಿಯನ್ನು ದೂರಬೇಕಾಗುತ್ತದೆ. ಹಾಸಿಗೆಯ ತಲೆಭಾಗವನ್ನು ಎತ್ತರಿಸುವುದರಿಂದ ಜಠರಾಮ್ಲದ ನಿವಾರಣೆ ಉತ್ತಮಗೊಳ್ಳುತ್ತದೆ ಮತ್ತು ಆಮ್ಲ ಹಿಮ್ಮುಖ ಹರಿವಿನ ಆವರ್ತನಗಳನ್ನು ಕಡಿಮೆ ಮಾಡುತ್ತದೆ ಎನ್ನುವುದು ಅಧ್ಯಯನದಿಂದ ಬೆಳಕಿಗೆ ಬಂದಿದೆ.
►ಬಲಮಗ್ಗುಲಾಗಿ ನಿದ್ರಿಸಬೇಡಿ
ನೀವು ಮಲಗುವ ಭಂಗಿಯು ಜೀರ್ಣಸಂಬಂಧಿ ಸಮಸ್ಯೆಗಳಿಗೆ ಕಾರಣವಾಗುತ್ತದೆ ಎನ್ನುವುದನ್ನು ಎಂದಾದರೂ ಯೋಚಿಸಿದ್ದೀರಾ? ಎಡಮಗ್ಗುಲಾಗಿ ಮಲಗುವುದು ಎದೆಯುರಿಯನ್ನು ತಡೆಯುವ ಜೊತೆಗೆ ಒಳ್ಳೆಯ ನಿದ್ರೆಯನ್ನೂ ನೀಡುತ್ತದೆ. ಬಲಮಗ್ಗುಲಾಗಿ ಮಲಗುವುದು ಆಮ್ಲ ಹಿಮ್ಮುಖ ಹರಿವನ್ನು ಹೆಚ್ಚಿಸುತ್ತದೆ ಎನ್ನುವುದನ್ನು ಅಧ್ಯಯನಗಳು ತೋರಿಸಿವೆ. ಬಲಮಗ್ಗುಲಾಗಿ ಮಲಗುವುದರಿಂದ ಎಲ್ಇಎಸ್ ಮೂಲಕ ಆಮ್ಲ ಸೋರಿಕೆಯ ಸಾಧ್ಯತೆಯು ಹೆಚ್ಚಾಗಿರುತ್ತದೆ ಮತ್ತು ಇದು ಎದೆಯುರಿಯ ಅಪಾಯವನ್ನು ಹೆಚ್ಚಿಸುತ್ತದೆ.
►ದೇಹದ ತೂಕವನ್ನು ಕಡಿಮೆ ಮಾಡಲು ಪ್ರಯತ್ನಿಸಿ
ನೀವು ಅಗತ್ಯಕ್ಕಿಂತ ಹೆಚ್ಚಿನ ದೇಹತೂಕವನ್ನು ಹೊಂದಿದ್ದರೆ ಮತ್ತು ಆಮ್ಲ ಹಿಮ್ಮುಖ ಹರಿವಿನಿಂದ ಬಳಲುತ್ತಿದ್ದರೆ ತೂಕವನ್ನು ಕಡಿಮೆ ಮಾಡಿಕೊಳ್ಳುವುದು ನಿಮ್ಮ ಆದ್ಯತೆಯಾಗಿರಬೇಕು. ಅತಿಯಾದ ಕೊಬ್ಬು,ವಿಶೇಷವಾಗಿ ಹೊಟ್ಟೆಯ ಭಾಗದಲ್ಲಿಯ ಕೊಬ್ಬು ಜಠರ ಮತ್ತು ಎಲ್ಇಎಸ್ ಮೇಲೆ ಒತ್ತಡವನ್ನುಂಟು ಮಾಡುತ್ತದೆ, ಇದರಿಂದಾಗಿ ಜಠರಾಮ್ಲವು ಮೇಲ್ಮುಖವಾಗಿ ತಳ್ಳಲ್ಪಡುತ್ತದೆ ಮತ್ತು ಎದೆಯುರಿಗೆ ಕಾರಣವಾಗುತ್ತದೆ.
►ನಿಮ್ಮ ಔಷಧಿಗಳನ್ನು ಪರಿಶೀಲಿಸಿ ಕೆಲವು ಔಷಧಿಗಳು ಆಮ್ಲ ಸಂಗ್ರಹಗೊಳ್ಳಲು ಅಥವಾ ಅನ್ನನಾಳದ ಉರಿಯೂತಕ್ಕೆ ಕಾರಣವಾಗುತ್ತವೆ ಮತ್ತು ಇದು ಎದೆಯುರಿಯನ್ನುಂಟು ಮಾಡುತ್ತದೆ ಅಥವಾ ಸ್ಥಿತಿಯನ್ನು ಇನ್ನಷ್ಟು ಹದಗೆಡಿಸುತ್ತದೆ. ಹೀಗಾಗಿ ವೈದ್ಯರು ನಿಮಗೆ ಸೂಚಿಸಿರುವ ಔಷಧಿಗಳು ಎದೆಯುರಿಯಂತಹ ಅಡ್ಡಪರಿಣಾಮಗಳನ್ನು ಹೊಂದಿವೆಯೇ ಎನ್ನುವುದನ್ನು ಅವರ ಬಳಿ ಕೇಳಿ ತಿಳಿದುಕೊಳ್ಳಿ. ಲಕ್ಷಣಗಳು ಮುಂದುವರಿದರೆ ಎದೆಯುರಿಯಿಂದ ಪಾರಾಗಲು ವೈದ್ಯರ ಸಲಹೆಯನ್ನು ಪಡೆದುಕೊಳ್ಳುವುದು ಬುದ್ಧಿವಂತಿಕೆಯಾಗುತ್ತದೆ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರಕೃತಿಯಲ್ಲಿ ಅದ್ಭುತ ವಿಷಯಗಳು ನೀವು ಅಸ್ತಿತ್ವದಲ್ಲಿ ನಂಬುವುದಿಲ್ಲಪ್ರಕೃತಿ ಅನಿರೀಕ್ಷಿತವಾಗಿದೆ, ಅದು ಸುಂದರವಾಗಿರುತ್ತದೆ ಮತ್ತು ವಿಶ್ರಾಂತಿ ಪಡೆಯುಬಹುದು.ಈ ಜಗತ್ತು ಅದ್ಭುತಗಳಿಂದ ತುಂಬಿದೆ, ನಾವು ಎಲ್ಲೆಡೆಯೂ ಒಂದು ಮಂತ್ರವಿದ್ಯೆಯನ್ನು ನೋಡಬಹುದು. ಪ್ರಕೃತಿ ಅದ್ಭುತ ವಿಷಯಗಳಿಂದ ತುಂಬಿದೆ, ಅವುಗಳಲ್ಲಿ ಕೆಲವು ನಂಬಲಾಗದವು. 1.ಮಾಲ್ಡೋವ್ಸ್ನ ವಾಧೋವಿನ ಹೊಳೆಯುವ ಶೋರ್ಗಳು:- ಇದು ಒಂದು ಬೆಳಕಿನ ಪ್ರದರ್ಶನವೆಂದು ಕಂಡುಬರುತ್ತದೆ, ಅದು ನಂಬಲಾಗದದು. 2.ಕೈಲೂವಾ, ಹವಾಯಿನಲ್ಲಿ ಮಳೆಬಿಲ್ಲು ಗಮ್:- ಇದು ಸಾಮಾನ್ಯವಾಗಿ ರೇನ್ಬೋ ಯೂಕಲಿಪ್ಟಸ್ ಎಂದು ಕರೆಯಲ್ಪಡುವ ಒಂದು ಎತ್ತರದ ಮರವಾಗಿದೆ. 3.ದೆವ್ವದ ಮರಗಳು,ಪಾಕಿಸ್ತಾನ:- 2010 ರ ಪ್ರವಾಹದಿಂದಾಗಿ…
ಪ್ರತಿದಿನ ಅರಿಶಿನ ಬೆರೆಸಿದ ಒಂದು ಲೋಟ ಹಾಲು ಕುಡಿದ್ರೆ ನೀವು ಆರೋಗ್ಯವಾಗಿರಬಹುದು. ಹಾಲು ಮತ್ತು ಅರಿಶಿನ ಎರಡೂ ನೈಸರ್ಗಿಕ ಆ್ಯಂಟಿಬಯೋಟಿಕ್ ಇದ್ದಂತೆ. ಹಲವು ಅಂಟುರೋಗಗಳು ಬರದಂತೆ ಇದು ತಡೆಯುತ್ತದೆ.
ಈ ಮದುವೆ ಅನ್ನುವುದೇ ವಿಚಿತ್ರ ನೋಡ್ರಿ.ಯಾರು ಯಾವಾಗ ಯಾರನ್ನ,ಏತಕ್ಕೆ ಮದ್ವೆ ಆಗ್ತಾರೆ ಅಂತ ಹೇಳೋದಕ್ಕೆ ಆಗಲ್ಲ.ಇದು ದೇಶ,ಭಾಷೆ ಸಂಸ್ಕೃತಿ ಎಲ್ಲವನ್ನು ಮೀರಿದ್ದು.
ಊಟಕ್ಕೆ ಗತಿಯಿಲ್ಲದ ಯುವಕರು ಸೇನೆಗೆ ಸೇರುತ್ತಾರೆ ಎಂದು ಸಿಎಂ ಕುಮಾರಸ್ವಾಮಿ ಹೇಳಿದ್ದು, ಇದಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಟೀಕೆ ವ್ಯಕ್ತವಾಗಿದೆ. ಬಿಜೆಪಿ ಸರಣಿ ಟ್ವೀಟ್ ಮೂಲಕ ಸಿಎಂ ಅವರನ್ನು ತರಾಟೆಗೆ ತೆಗೆದುಕೊಂಡಿದ್ದು, ಸೇನೆಗೆ ಸೇರುವವರು ಬಡ ಕುಟುಂಬದ ಯುವಕರೇ ಹೊರತು, ಶ್ರೀಮಂತರ ಮನೆಯ ಮಕ್ಕಳಲ್ಲ ಎನ್ನುವ ನೀವು ನಿಮ್ಮ ಮಗನಿಗೆ ಲೋಕಸಭೆ ಚುನಾವಣೆಯಲ್ಲಿ ಟಿಕೆಟ್ ಕೊಡಿಸುವಲ್ಲಿ ತೋರಿದ ಉತ್ಸಾಹವನ್ನು ಸೇನೆಗೆ ಸೇರಿಸಲು ಯಾಕೆ ತೋರಿಸಲಿಲ್ಲ ಎಂದು ಪ್ರಶ್ನಿಸಿದೆ. ಊಟಕ್ಕೆ ಗತಿ ಇಲ್ಲದ ಯುವಕರು ಸೇನೆಗೆ ಸೇರುತ್ತಾರೆ ಎಂದು…
ಮನುಷ್ಯ ಮರಣಿಸಿದ ನಂತರ ಆತನ ಶ್ರಾದ್ಧ ಕರ್ಮಗಳನ್ನು ಮಾಡುವವರೆಗೂ ಆತನ ಆತ್ಮ ಈ ಲೋಕದಲ್ಲೇ ತಿರುಗಾಡುತ್ತಿರುತ್ತದೆ ಎಂದು ಹಿಂದು ಪುರಾಣಗಳು ನಂಬುತ್ತವೆ.
ದಕ್ಷಿಣ ಭಾರತದ ಸ್ಟಾರ್ ನಟಿ ಅನುಷ್ಕಾ ಶೆಟ್ಟಿ ತೆಲುಗಿನ ಬಿಗ್ ಬಾಸ್ ಸೀಸನ್ -3 ರಿಯಾಲಿಟಿ ಶೋಗೆ ನಿರೂಪಣೆ ಮಾಡುತ್ತಾರೆ ಎಂಬ ಮಾತು ಟಿ-ಟೌನ್ನಲ್ಲಿ ಕೇಳಿಬರುತ್ತಿದೆ. ಬಿಗ್ ಬಾಸ್ ಮೊದಲ ಸೀಸನ್ ನಟ ಜೂ. ಎನ್ಟಿಆರ್ ಯಶಸ್ವಿಯಾಗಿ ನಡೆಸಿಕೊಟ್ಟಿದ್ದರು. ನಂತರ ಎರಡನೇ ಸೀಸನ್ ನಟ ನಾನಿ ನಿರೂಪಣೆ ಮಾಡಿದ್ದರು. ಈಗ ಮೂರನೇ ಸೀಸನ್ಗೆ ಜೂ. ಎನ್ಟಿಆರ್ ಅವರ ಜೊತೆ ಮಾತುಕತೆ ನಡೆಸಲಾಗಿತ್ತು. ಆದರೆ ಅವರು ರಾಜಮೌಳಿ ನಿರ್ದೇಶನದ ‘ಆರ್ಆರ್ಆರ್’ ಚಿತ್ರದಲ್ಲಿ ಬ್ಯುಸಿ ಇರುವ ಕಾರಣ ಈ ಶೋ…