News

ಆರೋಗ್ಯ

ಮೊಳಕೆ ಬಂದ ಹೆಸರು ಕಾಳಿನ ಲಾಭಗಳೇನು? ಈ ಅರೋಗ್ಯ ಮಾಹಿತಿ ನೋಡಿ.

554

ಬ್ಯುಸಿ ಜೀವನ ಶೈಲಿಯಲ್ಲಿ ನಮ್ಮ ಆರೋಗ್ಯದ ಬಗ್ಗೆ ಕಾಳಜಿ ತೋರಿಸೋಕೆ ಸಮಯ ಸಿಗ್ತಿಲ್ಲ. ಅದರಲ್ಲೂ ಇತ್ತೀಚಿನ ಕಾಲಘಟ್ಟದಲ್ಲಿ ಆರೋಗ್ಯಕರ ಆಹಾರಕ್ಕಿಂತ ಫಾಸ್ಟ್ ಫುಡ್‍ಗಳ ಹಾವಳಿಯೇ ಹೆಚ್ಚಾಗಿದೆ. ಆದ್ದರಿಂದ ಆರೋಗ್ಯಕರ ಆಹಾರಗಳು ಯಾವುದು? ಅದರ ಲಾಭಗಳೇನು..? ಎನ್ನುವ ವಿಷಯವೇ ಅನೇಕರಿಗೆ ತಿಳಿದಿಲ್ಲ. ಫಾಸ್ಟ್ ಫುಡ್ಸ್ ಗಳ ರುಚಿಗೆ ಮನಸೋತ ಮಂದಿಗೆ ಅದರಿಂದ ಅಷ್ಟೇ ಫಾಸ್ಟಾಗಿ ಆಗುವ ದುಷ್ಪರಿಣಾಮಗಳ ಬಗ್ಗೆ ತಿಳಿದಿರಲ್ಲ.

ಹೌದು, ಇಂತಹ ಆರೋಗ್ಯಕ್ಕೆ ಮಾರಕವಾದ ಜೀವನ ಶೈಲಿಯ ಮಧ್ಯೆ ಆರೋಗ್ಯಕರ ಆಹಾರಗಳನ್ನು ಜನ ಮರೆತಿದ್ದಾರೆ. ಸೊಪ್ಪು ತರಕಾರಿ, ಕಾಳುಗಳು ಆರೋಗ್ಯ ವೃದ್ಧಿಸುವಲ್ಲಿ ತುಂಬಾ ಉಪಯುಕ್ತ. ಅದರಲ್ಲೂ ಮೊಳಕೆ ಬಂದ ಕಾಳುಗಳ ಸೇವನೆಯಿಂದ ಎಷ್ಟು ಲಾಭ ಎನ್ನುವುದು ಹಲವರಿಗೆ ಗೊತ್ತಿರಲ್ಲ. ಕಾಳುಗಳನ್ನು ಹಾಗೆಯೇ ತಿನ್ನುವುದಕ್ಕಿಂತ ಅದನ್ನು ನೀರಲ್ಲಿ ನೆನಸಿಟ್ಟು, ಮೊಳಕೆ ಬಂದ ಮೇಲೆ ತಿಂದ್ರೆ ಅದರಲ್ಲಿ ಪೌಷ್ಟಿಕಾಂಶ ಜಾಸ್ತಿ ಇರುತ್ತದೆ. ಮೊಳಕೆ ಒಡೆದ ಕಾಳುಗಳನ್ನು ಬೇಯಿಸಿ ತಿನ್ನುವುದಕ್ಕಿಂದ ಹಸಿಯಾಗಿಯೇ ಸೇವಿಸುವುದು ಉತ್ತಮ. ಯಾಕೆಂದರೆ ಮೊಳಕೆ ಕಾಳುಗಳನ್ನು ಬೇಯಿಸಿದಾಗ ಅದರ ಪೌಷ್ಟಿಕತೆ ದೇಹಕ್ಕೆ ಸಿಗಲ್ಲ. ಮೊಳಕೆ ಕಾಳಲ್ಲಿ ಪ್ರೋಟಿನ್, ಫೈಬರ್, ವಿಟಮಿನ್ಸ್, ಕಬ್ಬಿಣದ ಅಂಶ, ಕ್ಯಾಲ್ಸಿಯಂ ಹೀಗೆ ದೇಹಕ್ಕೆ ಬೇಕಾದ ಆರೋಗ್ಯಕರ ಅಂಶಗಳು ಇರುತ್ತದೆ. ಆದ್ದರಿಂದ ಮೊಳಕೆ ಕಾಳು ದೇಹಕ್ಕೆ ಒಳ್ಳೆಯದು.

ಅನೇಕ ಅದ್ಭುತ ಲಾಭಗಳನ್ನು ತನ್ನೊಳಗೆ ಅಡಗಿಸಿಕೊಂಡಿರೋ ಮೊಳಕೆ ಕಾಳುಗಳಲ್ಲಿ ಮೊಳಕೆ ಒಡೆದ ಹೆಸರು ಕಾಳು ಒಂದು. ಈ ಮೊಳಕೆ ಒಡೆದ ಹೆಸರು ಕಾಳು ಆರೋಗ್ಯಕ್ಕೆ ಎಷ್ಟು ಉಪಯುಕ್ತ? ಅದರ ಲಾಭಗಳೇನು? ಅದನ್ನು ಯಾಕೆ ಸೇವಿಸಬೇಕು ಅನ್ನೋದರ ಸಂಪೂರ್ಣ ಮಾಹಿತಿ ಇಲ್ಲಿದೆ..

ಮೊಳಕೆ ಬಂದ ಹೆಸರು ಕಾಳಿನ ಲಾಭಗಳೇನು?

1. ಜೀರ್ಣಶಕ್ತಿ ವೃದ್ಧಿಸುತ್ತೆ
ಹೆಸರು ಕಾಳನ್ನು ನೀರಿನಲ್ಲಿ ನೆನಸಿಟ್ಟು, ಬಳಿಕ ಮೊಳಕೆ ಬಂದ ಮೇಲೆ ಸೇವಿಸುವುದರಿಂದ ಜೀರ್ಣಶಕ್ತಿ ಉತ್ತಮವಾಗುತ್ತೆ. ಇದರಲ್ಲಿರೋ ಪೌಷ್ಟಿಕಾಂಶ ಜೀರ್ಣಕ್ರಿಯೆಯನ್ನು ಸರಾಗ ಮಾಡುತ್ತದೆ. ಅಲ್ಲದೆ ಫೈಬರ್ ಅಂಶವು ದೇಹದಲ್ಲಿ ಆಹಾರದ ಸಂಚಾರ ಸರಿಯಾಗಿ ಆಗುವಂತೆ ನೋಡಿಕೊಂಡು ಮಲಬದ್ಧತೆ ತೊಂದರೆಯನ್ನು ನಿವಾರಿಸುತ್ತದೆ.

2. ಹೃದಯದ ಆರೋಗ್ಯ ಕಾಪಾಡುತ್ತೆ
ಮೊಳಕೆ ಬಂದ ಹೆಸರು ಕಾಳು ತಿನ್ನುವುದರಿಂದ ಹೃದಯದ ಆರೋಗ್ಯ ಉತ್ತಮವಾಗುತ್ತದೆ. ಇದರಲ್ಲಿರೋ ಒಮೇಗಾ ಫ್ಯಾಟೀ ಆಸಿಡ್ ದೇಹಕ್ಕೆ ಬೇಕಾದ ಒಳ್ಳೆಯ ಕೊಬ್ಬಿನ ಅಂಶ ನೀಡಿ ರಕ್ತನಾಳದ ಆರೋಗ್ಯ ಕಾಪಾಡುತ್ತೆ. ಇದರಲ್ಲಿನ ಆಂಟಿ ಇನ್ಪ್ಲಮೇಟರಿ ಗುಣ ರಕ್ತನಾಳಗಳ ಮೇಲಿರೋ ಒತ್ತಡವನ್ನೂ ಕಡಿಮೆ ಮಾಡುತ್ತದೆ. ರಕ್ತದ ಸಂಚಾರ ಹೆಚ್ಚಿಸಿ ದೇಹಕ್ಕೆ ಹೆಚ್ಚು ಆಕ್ಸಿಜನ್ ಸಿಗುವ ಹಾಗೆ ಮಾಡಿ ಸ್ಟ್ರೋಕ್ ಹಾಗೂ ಹೃದಯಾಘಾತ ಆಗದಂತೆ ನೋಡಿಕೊಳ್ಳುತ್ತದೆ.

3. ರೋಗ ನಿರೋಧಕ ಶಕ್ತಿ ಹೆಚ್ಚಿಸುತ್ತದೆ
ಇದರಲ್ಲಿರುವ ವಿಟಮಿನ್ ಸಿ ದೇಹಕ್ಕೆ ಇನ್ಫೆಕ್ಷನ್ ಆಗೋದನ್ನ ತಡೆಯುತ್ತದೆ. ಇದರ ಜೊತೆ ವಿಟಮಿನ್ ಎ ಅಂಶ ಕೂಡ ಹೆಚ್ಚಾಗಿ ಇರೋದ್ರಿಂದ ದೇಹಕ್ಕೆ ಹೆಚ್ಚಿನ ಆಂಟಿ ಆಕ್ಸಿಡೆಂಟ್ಸ್ ಸಿಗುವ ರೀತಿ ನಿಗಾವಹಿಸಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.

4. ಕ್ಯಾನ್ಸರ್ ಬಾರದ ಹಾಗೆ ನೋಡಿಕೊಳ್ಳುತ್ತದೆ
ವಿಟಮಿನ್ ಎ, ಸಿ, ಅಮಿನೋ ಆಸಿಡ್ಸ್ ಹಾಗೂ ಪ್ರೋಟಿನ್ ಅಂಶ ದೇಹದಲ್ಲಿ ಫ್ರೀ ರಾಡಿಕಲ್ಸ್ ಸೇರದ ಹಾಗೆ ನೋಡಿಕೊಳ್ಳುತ್ತದೆ. ದೇಹದಲ್ಲಿ ಆಗುವ ಹಲವಾರು ಕ್ರಿಯೆಗಳ ಪರಿಣಾಮವಾಗಿ ಫ್ರೀ ರಾಡಿಕಲ್ಸ್ ಉತ್ಪತ್ತಿ ಆಗುತ್ತದೆ. ಇದರಿಂದ ದೇಹಕ್ಕೆ ಕ್ಯಾನ್ಸರ್ ಸೆಲ್ಸ್ ಸೇರುತ್ತದೆ. ಅಷ್ಟೇ ಅಲ್ಲದೆ ಸಾಕಷ್ಟು ಕಾಯಿಲೆಗಳು ಬರೋದಕ್ಕೆ ಇದು ಕಾರಣವಾಗುತ್ತದೆ. ಬೇಗ ಸುಸ್ತಾಗೋದು, ಕಣ್ಣು ಮಂಜಾಗುವುದು, ಹೃದಯಕ್ಕೆ ಸಂಬಂಧ ಪಟ್ಟ ತೊಂದರೆ ಕಾಣಿಸಿಕೊಳ್ಳುತ್ತದೆ. ಆದ್ದರಿಂದ ಇಂತಹ ತೊಂದರೆಗಳಿಂದ ದೂರವಿರಲು ಮೊಳಕೆ ಬಂದ ಹೆಸರು ಕಾಳನ್ನು ಸೇವಿಸಬೇಕು.

5. ತೂಕ ಕಡಿಮೆ ಮಾಡುತ್ತದೆ ಹಾಗೂ ತ್ವಚೆಯ ಆರೋಗ್ಯ ಕಾಪಾಡುತ್ತೆ
ಮೊಳಕೆ ಬಂದ ಹೆಸರು ಕಾಳಿನಲ್ಲಿ ಕ್ಯಾಲೋರೀಸ್ ಇಲ್ಲದ ಕಾರಣ ಇದನ್ನು ಎಷ್ಟು ತಿಂದರೂ ತೂಕ ಹೆಚ್ಚಾಗಲ್ಲ. ಬದಲಾಗಿ ತೂಕ ಕಡಿಮೆ ಆಗುತ್ತೆ. ಮೊಳಕೆ ಬಂದ ಹೆಸರು ಕಾಳನ್ನು ತಿನ್ನುವುದರಿಂದ ಇದರಲ್ಲಿರೋ ಫೈಬರ್ ನಿಮ್ಮ ದೇಹಕ್ಕೆ ಸೇರಿ ಹೊಟ್ಟೆ ತುಂಬುವ ಹಾಗೆ ಮಾಡುತ್ತೆ. ಆದರ ಜೊತೆ ಪದೇ ಪದೇ ಹಸಿವಾಗದ ರೀತಿ ನೋಡಿಕೊಳ್ಳುತ್ತದೆ. ಹಾಗೆಯೇ ಸ್ಥೂಲಕಾಯ ಮತ್ತು ಮಧುಮೇಹ ಕಾಯಿಲೆ ಬಾರದಂತೆ ನೋಡಿಕೊಳ್ಳುತ್ತದೆ. ಪ್ರತಿನಿತ್ಯ ಹೆಸರು ಕಾಳನ್ನು ತಿನ್ನುವುದರಿಂದ ತ್ವಚೆಯ ಆರೋಗ್ಯ ಕೂಡ ಚೆನ್ನಾಗಿರುತ್ತದೆ. ಅಲ್ಲದೆ ತ್ವಚೆಗೆ ಕಾಂತಿಯನ್ನು ನೀಡುತ್ತದೆ. ಇದರಿಂದ ಆಕರ್ಷಕ ಸೌಂದರ್ಯವನ್ನು ಕೂಡ ನೀವು ಪಡೆಯಬಹುದು.

ದುಬಾರಿ ಔಷಧಿಗಳ ಮೊರೆ ಹೋಗುವ ಬದಲು ಮೊಳಕೆ ಬಂದ ಕಾಳನ್ನು ಸೇವನೆ ಮಾಡುವುದು ಉತ್ತಮ. ಹೀಗಾಗಿ ಮೊಳಕೆ ಬಂದ ಕಾಳನ್ನು ಸೇವಿಸಿ ನಿಮ್ಮ ಆರೋಗ್ಯವನ್ನು ವೃದ್ಧಿಸಿಕೊಳ್ಳುವುದು ಒಳಿತು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • Animals

    ಆನೆಯ ಬಗ್ಗೆ ಆಸಕ್ತಿದಾಯಕ ಸಂಗತಿಗಳು

    ಪ್ರಾಣಿಶಾಸ್ತ್ರದ ಪ್ರಕಾರ ಆನೆ ಸಸ್ತನಿಗಳ ವರ್ಗದಲ್ಲಿ ಪ್ರೊಬೊಸಿಡಿಯ  ಉಪವರ್ಗದ ಒಂದು ಕುಟುಂಬ. ಹಿಂದೆ ಇವುಗಳನ್ನು ಪಾಚಿಡರ್ಮಾಟಾ ಎಂಬ ದಪ್ಪಚರ್ಮದ ಪ್ರಾಣಿಗಳ ಉಪವರ್ಗದಲ್ಲಿರಿಸಲಾಗಿತ್ತು. ಇಂದು 2 ತಳಿಗಳ ಆನೆಗಳು ಭೂಮಿಯ ಮೇಲೆ ಇವೆ. ಅವೆಂದರೆ: , ಆಫ್ರಿಕದ ಅರಣ್ಯದ ಆನೆ ಮತ್ತು ಏಷ್ಯಾದ  ಆನೆ. ಇವುಗಳಲ್ಲಿ ಮೊದಲೆರಡನ್ನು ಒಟ್ಟಾಗಿ ಆಫ್ರಿಕನ್ ಆನೆ ಎಂದು ಸಹ ಕರೆಯುವುದು ವಾಡಿಕೆ. ಏಷ್ಯಾದ ಆನೆಯನ್ನು ಭಾರತದ ಆನೆ ಎಂದು ಸಹ ಕರೆಯಲಾಗುತ್ತದೆ. ಸುಮಾರು ೧೦,೦೦೦ ವರ್ಷಗಳ ಹಿಂದೆ ಕೊನೆಗೊಂಡ ಹಿಮಯುಗದೊಂದಿಗೆ ಉಳಿದ ತಳಿಗಳ ಆನೆಗಳು ಭೂಮಿಯಿಂದ ಶಾಶ್ವತವಾಗಿ ಮರೆಯಾದುವು. ಇವುಗಳಲ್ಲಿ ಮ್ಯಾಮತ್ (ದೈತ್ಯ ಆನೆ) ಬಲು…

  • inspirational

    ನೀರೊಳಗಿರುವ ಟೈಟಾನಿಕ್ ಹಡಗನ್ನು ಮೇಲೆತ್ತುವ ಪ್ರಯತ್ನವನ್ನು ಯಾರು ಮಾಡುತ್ತಿಲ್ಲ ಏಕೆ? ರೋಚಕ ಸತ್ಯವನ್ನು ತಿಳಿಯಿರಿ.

    ಟೈಟಾನಿಕ್ ಸಿನಿಮಾವನ್ನ ಯಾರು ತಾನೇ ನೋಡಿಲ್ಲ ಹೇಳಿ, ಭಾರಿ ಗಾತ್ರದ ಈ ಹಡಗು ಪ್ರಯಾಣಿಸಿದ ರೀತಿ ಹಾಗು ಹೇಗೆ ಮುಳುಗಿತು ಎನ್ನುವುದನ್ನು ವಿವರವಾಗಿ ಹೇಳಿಕೊಟ್ಟ ಈ ಚಿತ್ರ ಇಂದಿಗೂ ದಾಖಲೆಯನ್ನು ಬರೆದಿದೆ. ಹಾಲಿವುಡ್ ನ ಸಿನಿಮಾ ನಿರ್ಮಾಣದ ರೂಪುರೇಷೆಯನ್ನೇ ಬದಲಿಸಿದ್ದ ಈ ಚಿತ್ರ ಅಂದಿನ ಕಾಲದ ಬಿಗ್ ಬಜೆಟ್ ಮೂವಿ ಆಗಿತ್ತು, ಚಿತ್ರ ನೋಡಿದವರು ಕೂಡ ಒಂದು ಕ್ಷಣ ದಂಗಾಗಿದ್ದರು, ಅಷ್ಟು ಎಫೆಕ್ಟ್ ನೀಡಿ ಇಡೀ ಚಿತ್ರ ತಂಡ ಇದೊಂದು ಘಟನೆಯನ್ನು ಜನರ ಮುಂದೆ ಇಡಲು ಪ್ರಯತ್ನಿಸಿದ್ದರು….

  • ಆರೋಗ್ಯ, ಉಪಯುಕ್ತ ಮಾಹಿತಿ

    ಮೆಂತ್ಯ ತಿನ್ನೋದ್ರಿಂದ ನಿಮ್ಮ ಆರೋಗ್ಯದ ಮೇಲೆ ಏನೆಲ್ಲಾ ಅದ್ಭುತ ಪ್ರಯೋಜನಗಳಾಗುತ್ತೆ ಗೊತ್ತಾ..!

    ಹಲವಾರು ರೋಗಗಳಿಗೆ ಮನೆಯಲ್ಲೇ ಮದ್ದಿದೆ ಎಂಬುದು ಎಷ್ಟೋ ಜನಕ್ಕೆ ಗೊತ್ತಿದ್ದರೂ ಅದನ್ನು ಉಪಯೋಗ ಮಾಡಿಕೊಳ್ಳದಿರುವವರೇ ಹೆಚ್ಚು. ಇದಕ್ಕೆ ಕಾರಣವೂ ಇದೆ. ಆಧುನಿಕ ಯುಗದಲ್ಲಿ ತಂತ್ರಜ್ಞಾನಗಳೊಂದಿಗೆ ಸಾಗುತ್ತಿರುವ ನಾವು ನಮ್ಮಲ್ಲೇ ಇರುವ ನೈಸರ್ಗಿಕವಾದ ಔಷಧಿಗಳನ್ನು ಅರಿಯದೆ ಸಾಕಷ್ಟು ಸಮಸ್ಯೆಗಳನ್ನು ಸೃಷ್ಟಿಸಿಕೊಳ್ಳುತ್ತಿದ್ದೇವೆ. *ನೆನೆ ಹಾಕಿದ ಮೆಂತ್ಯವನ್ನು ನುಣ್ಣಗೆ ರುಬ್ಬಿ ಕುದಿಯುವ ಹಾಲಿನೊಂದಿಗೆ ಬೆರೆಸಿ ರಾತ್ರಿ ಮಲಗುವಾಗ ಹಚ್ಚಿ, ಬೆಳಿಗ್ಗೆ ಎದ್ದೊಡನೆ ಮುಖ ತೊಳೆದುಕೊಳ್ಳಬೇಕು. ಇದರಿಂದ ಚರ್ಮ ಸುಕ್ಕುಗಟ್ಟುವುದಿಲ್ಲ. *ಇದನ್ನು ಸೇವಿಸಿದರೆ ತಾಯಂದಿರಲ್ಲಿ ಎದೆ ಹಾಲು ಹೆಚ್ಚಿಸಲು ಸಹಾಯ ಮಾಡುತ್ತದೆ. *ಬೆಳಿಗ್ಗೆ…

  • ಸುದ್ದಿ

    ರಣಂ ಚಿತ್ರದ ಶೂಟಿಂಗ್ ಸಮಯದಲ್ಲಿ ಇಬ್ಬರ ದುರ್ಮರಣ ಪ್ರಕರಣ- ತನಿಖೆ ನಡೆಸುವವೇಳೆ ಸ್ಫೋಟಕ ಟ್ವಿಸ್ಟ್…….!

    ನಟ ಚಿರಂಜೀವಿ ಸರ್ಜಾ ಅಭಿನಯದ `ರಣಂ’ ಚಿತ್ರದ ಶೂಟಿಂಗ್ ವೇಳೆ ಇಬ್ಬರು ದುರ್ಮರಣಕ್ಕೀಡಾದ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಪೊಲೀಸಪ್ಪನ ಹಣದ ದಾಹಕ್ಕೆ ಇಬ್ಬರು ಅಮಾಯಕರು ಬಲಿಯಾಗಿರುವುದು ಆಂತರಿಕ ತನಿಖೆ ವೇಳೆ ಸ್ಫೋಟಕ ಸತ್ಯ ಬಯಲಾಗಿದೆ.ಶೂಟಿಂಗ್ಗೆ ಅನುಮತಿ ಇಲ್ಲದೇ ಹೋದರೂ 5 ಸಾವಿರ ಹಣ ಪಡೆದು ಪೇದೆ ಶೂಟಿಂಗ್ ಮಾಡಿಸಿದ್ದನು. ತನಿಖಾ ವರದಿ ಕೈ ಸೇರುತ್ತಿದ್ದಂತೆಯೇ ಪೊಲೀಸ್ ಪೇದೆಯನ್ನು ಅಮಾನತು ಮಾಡುವಂತೆ ಈಶಾನ್ಯ ವಿಭಾಗದ ಡಿಸಿಪಿ ಕಲಾ ಕೃಷ್ಣಸ್ವಾಮಿ ಅವರು ಆದೇಶ ಹೊರಡಿಸಿದ್ದಾರೆ. ಬಾಗಲೂರು ಠಾಣೆಯ ಪೇದೆಯಾಗಿದ್ದ ಭೀಮಾ…

  • ಸುದ್ದಿ

    ಚಾಲೆಂಜಿಂಗ್ ಸ್ಟಾರ್ ದರ್ಶನ್ :ಅಂಬರೀಶ್ ನಂತರ ಶಿವಣ್ಣರಿಗೆ ಅಪ್ಪಾಜಿ ಸ್ಥಾನ ಕೊಟ್ಟಿದ್ಯಾಕೆ? ದರ್ಶನ್ ಹೇಳಿದ ಈ ಮಾತುಗಳನ್ನು ಕೇಳಿ,

    ಸ್ಯಾಂಡಲ್ ವುಡ್ ದಿಗ್ಗಜ ನಟರಿಬ್ಬರು (ದರ್ಶನ್ ಮತ್ತು ಶಿವಣ್ಣ) ಒಂದೇ ವೇದಿಕೆಯಲ್ಲಿ ಇಂದು ಸಿನಿಮಾ ಒಂದರ ಮೂಹೂರ್ತದಲ್ಲಿ ಕಾಣಿಸಿಕೊಂಡು ತಮ್ಮ ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ. ಅಣ್ಣಾವ್ರ ಸಂಬಂಧಿಕರು ಪಾರ್ವತಮ್ಮ ರಾಜಕುಮಾರ್ ಸಹೋದರಿಯ ಮಗ ಆಗಿರುವ ಧ್ರುವನ್ ಅವರ ಚಿತ್ರಕ್ಕೆ  ಕಂಠೀರವ ಸ್ಟುಡಿಯೋದಲ್ಲಿ ಇಂದು ಮುಹೂರ್ತ ನಡೆದಿದ್ದು ಅಲ್ಲಿ ಹ್ಯಾಟ್ರಿಕ್ ಹೀರೋ ಕರುನಾಡ ಚಕ್ರವರ್ತಿ ಡಾ. ಶಿವರಾಜ್ ಕುಮಾರ್ ಹಾಗೂ ಡಿ ಬಾಸ್ ದರ್ಶನ್ ಇಬ್ಬರೂ ಒಟ್ಟಿಗೆ ಕಾಣಿಸಿಕೊಂಡಿದ್ದು ನೋಡುಗರನ್ನು ಅಚ್ಚರಿ ಪಡುವಂತೆ ಮಾಡಿತು.‌ ಧ್ರುವನ್ ಅವರು‌…

  • ಸುದ್ದಿ

    ಮಂಡ್ಯದ ಗ್ರಾಮವೊಂದರಲ್ಲಿ ಜೆಡಿಎಸ್ ಕಾರ್ಯಕರ್ತರನ್ನು ಕೂಡಿಹಾಕಿದ ಪೊಲೀಸರು!ಕಾರಣ ಏನು ಗೊತ್ತಾ?

    ಮಂಡ್ಯ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರು ಇಂದು ನಾಗಮಂಗಲ ತಾಲೂಕಿನಲ್ಲಿ ಬಿರುಸಿನ ಪ್ರಚಾರ ನಡೆಸಿದರು. ಹೀಗಾಗಿ ಯಾವುದೇ ಅಹಿತಕರ ಘಟನೆ ನಡೆಯಬಾರದೆಂದು, ಪೊಲೀಸರು ಸುಮಲತಾ ಅವರು ಬರುವ ದಾರಿಯಲ್ಲಿದ್ದ ಜೆಡಿಎಸ್ ಕಾರ್ಯಕರ್ತರನ್ನು ಸ್ವಲ್ಪ ಹೊತ್ತು ಕೂಡಿ ಹಾಕಿದ್ದರು. ನಾಗಮಂಗಲದ ಚಾಮಲಾಪುರ ಗ್ರಾಮದಲ್ಲಿ ನಿಖಿಲ್ ಕುಮಾರಸ್ವಾಮಿ ಅವರು ಪ್ರಚಾರ ನಡೆಸುತ್ತಿದ್ದ ಹಿನ್ನೆಲೆ ಈ ಗ್ರಾಮದಲ್ಲಿ ಜೆಡಿಎಸ್ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿದ್ದರು. ಇದೇ ವೇಳೆ ಸುಮಲತಾ ಅವರು ಕೂಡ ಚಾಮಲಾಪುರ ಮಾರ್ಗವಾಗಿ ಬೆಳ್ಳೂರು ಕಡೆಗೆ ಹೋಗುತ್ತಿದ್ದರು. ಹೀಗಾಗಿ…