ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬ್ಯುಸಿ ಜೀವನ ಶೈಲಿಯಲ್ಲಿ ನಮ್ಮ ಆರೋಗ್ಯದ ಬಗ್ಗೆ ಕಾಳಜಿ ತೋರಿಸೋಕೆ ಸಮಯ ಸಿಗ್ತಿಲ್ಲ. ಅದರಲ್ಲೂ ಇತ್ತೀಚಿನ ಕಾಲಘಟ್ಟದಲ್ಲಿ ಆರೋಗ್ಯಕರ ಆಹಾರಕ್ಕಿಂತ ಫಾಸ್ಟ್ ಫುಡ್ಗಳ ಹಾವಳಿಯೇ ಹೆಚ್ಚಾಗಿದೆ. ಆದ್ದರಿಂದ ಆರೋಗ್ಯಕರ ಆಹಾರಗಳು ಯಾವುದು? ಅದರ ಲಾಭಗಳೇನು..? ಎನ್ನುವ ವಿಷಯವೇ ಅನೇಕರಿಗೆ ತಿಳಿದಿಲ್ಲ. ಫಾಸ್ಟ್ ಫುಡ್ಸ್ ಗಳ ರುಚಿಗೆ ಮನಸೋತ ಮಂದಿಗೆ ಅದರಿಂದ ಅಷ್ಟೇ ಫಾಸ್ಟಾಗಿ ಆಗುವ ದುಷ್ಪರಿಣಾಮಗಳ ಬಗ್ಗೆ ತಿಳಿದಿರಲ್ಲ.

ಹೌದು, ಇಂತಹ ಆರೋಗ್ಯಕ್ಕೆ ಮಾರಕವಾದ ಜೀವನ ಶೈಲಿಯ ಮಧ್ಯೆ ಆರೋಗ್ಯಕರ ಆಹಾರಗಳನ್ನು ಜನ ಮರೆತಿದ್ದಾರೆ. ಸೊಪ್ಪು ತರಕಾರಿ, ಕಾಳುಗಳು ಆರೋಗ್ಯ ವೃದ್ಧಿಸುವಲ್ಲಿ ತುಂಬಾ ಉಪಯುಕ್ತ. ಅದರಲ್ಲೂ ಮೊಳಕೆ ಬಂದ ಕಾಳುಗಳ ಸೇವನೆಯಿಂದ ಎಷ್ಟು ಲಾಭ ಎನ್ನುವುದು ಹಲವರಿಗೆ ಗೊತ್ತಿರಲ್ಲ. ಕಾಳುಗಳನ್ನು ಹಾಗೆಯೇ ತಿನ್ನುವುದಕ್ಕಿಂತ ಅದನ್ನು ನೀರಲ್ಲಿ ನೆನಸಿಟ್ಟು, ಮೊಳಕೆ ಬಂದ ಮೇಲೆ ತಿಂದ್ರೆ ಅದರಲ್ಲಿ ಪೌಷ್ಟಿಕಾಂಶ ಜಾಸ್ತಿ ಇರುತ್ತದೆ. ಮೊಳಕೆ ಒಡೆದ ಕಾಳುಗಳನ್ನು ಬೇಯಿಸಿ ತಿನ್ನುವುದಕ್ಕಿಂದ ಹಸಿಯಾಗಿಯೇ ಸೇವಿಸುವುದು ಉತ್ತಮ. ಯಾಕೆಂದರೆ ಮೊಳಕೆ ಕಾಳುಗಳನ್ನು ಬೇಯಿಸಿದಾಗ ಅದರ ಪೌಷ್ಟಿಕತೆ ದೇಹಕ್ಕೆ ಸಿಗಲ್ಲ. ಮೊಳಕೆ ಕಾಳಲ್ಲಿ ಪ್ರೋಟಿನ್, ಫೈಬರ್, ವಿಟಮಿನ್ಸ್, ಕಬ್ಬಿಣದ ಅಂಶ, ಕ್ಯಾಲ್ಸಿಯಂ ಹೀಗೆ ದೇಹಕ್ಕೆ ಬೇಕಾದ ಆರೋಗ್ಯಕರ ಅಂಶಗಳು ಇರುತ್ತದೆ. ಆದ್ದರಿಂದ ಮೊಳಕೆ ಕಾಳು ದೇಹಕ್ಕೆ ಒಳ್ಳೆಯದು.
ಅನೇಕ ಅದ್ಭುತ ಲಾಭಗಳನ್ನು ತನ್ನೊಳಗೆ ಅಡಗಿಸಿಕೊಂಡಿರೋ ಮೊಳಕೆ ಕಾಳುಗಳಲ್ಲಿ ಮೊಳಕೆ ಒಡೆದ ಹೆಸರು ಕಾಳು ಒಂದು. ಈ ಮೊಳಕೆ ಒಡೆದ ಹೆಸರು ಕಾಳು ಆರೋಗ್ಯಕ್ಕೆ ಎಷ್ಟು ಉಪಯುಕ್ತ? ಅದರ ಲಾಭಗಳೇನು? ಅದನ್ನು ಯಾಕೆ ಸೇವಿಸಬೇಕು ಅನ್ನೋದರ ಸಂಪೂರ್ಣ ಮಾಹಿತಿ ಇಲ್ಲಿದೆ..

ಮೊಳಕೆ ಬಂದ ಹೆಸರು ಕಾಳಿನ ಲಾಭಗಳೇನು?
1. ಜೀರ್ಣಶಕ್ತಿ ವೃದ್ಧಿಸುತ್ತೆ
ಹೆಸರು ಕಾಳನ್ನು ನೀರಿನಲ್ಲಿ ನೆನಸಿಟ್ಟು, ಬಳಿಕ ಮೊಳಕೆ ಬಂದ ಮೇಲೆ ಸೇವಿಸುವುದರಿಂದ ಜೀರ್ಣಶಕ್ತಿ ಉತ್ತಮವಾಗುತ್ತೆ. ಇದರಲ್ಲಿರೋ ಪೌಷ್ಟಿಕಾಂಶ ಜೀರ್ಣಕ್ರಿಯೆಯನ್ನು ಸರಾಗ ಮಾಡುತ್ತದೆ. ಅಲ್ಲದೆ ಫೈಬರ್ ಅಂಶವು ದೇಹದಲ್ಲಿ ಆಹಾರದ ಸಂಚಾರ ಸರಿಯಾಗಿ ಆಗುವಂತೆ ನೋಡಿಕೊಂಡು ಮಲಬದ್ಧತೆ ತೊಂದರೆಯನ್ನು ನಿವಾರಿಸುತ್ತದೆ.
2. ಹೃದಯದ ಆರೋಗ್ಯ ಕಾಪಾಡುತ್ತೆ
ಮೊಳಕೆ ಬಂದ ಹೆಸರು ಕಾಳು ತಿನ್ನುವುದರಿಂದ ಹೃದಯದ ಆರೋಗ್ಯ ಉತ್ತಮವಾಗುತ್ತದೆ. ಇದರಲ್ಲಿರೋ ಒಮೇಗಾ ಫ್ಯಾಟೀ ಆಸಿಡ್ ದೇಹಕ್ಕೆ ಬೇಕಾದ ಒಳ್ಳೆಯ ಕೊಬ್ಬಿನ ಅಂಶ ನೀಡಿ ರಕ್ತನಾಳದ ಆರೋಗ್ಯ ಕಾಪಾಡುತ್ತೆ. ಇದರಲ್ಲಿನ ಆಂಟಿ ಇನ್ಪ್ಲಮೇಟರಿ ಗುಣ ರಕ್ತನಾಳಗಳ ಮೇಲಿರೋ ಒತ್ತಡವನ್ನೂ ಕಡಿಮೆ ಮಾಡುತ್ತದೆ. ರಕ್ತದ ಸಂಚಾರ ಹೆಚ್ಚಿಸಿ ದೇಹಕ್ಕೆ ಹೆಚ್ಚು ಆಕ್ಸಿಜನ್ ಸಿಗುವ ಹಾಗೆ ಮಾಡಿ ಸ್ಟ್ರೋಕ್ ಹಾಗೂ ಹೃದಯಾಘಾತ ಆಗದಂತೆ ನೋಡಿಕೊಳ್ಳುತ್ತದೆ.
3. ರೋಗ ನಿರೋಧಕ ಶಕ್ತಿ ಹೆಚ್ಚಿಸುತ್ತದೆ
ಇದರಲ್ಲಿರುವ ವಿಟಮಿನ್ ಸಿ ದೇಹಕ್ಕೆ ಇನ್ಫೆಕ್ಷನ್ ಆಗೋದನ್ನ ತಡೆಯುತ್ತದೆ. ಇದರ ಜೊತೆ ವಿಟಮಿನ್ ಎ ಅಂಶ ಕೂಡ ಹೆಚ್ಚಾಗಿ ಇರೋದ್ರಿಂದ ದೇಹಕ್ಕೆ ಹೆಚ್ಚಿನ ಆಂಟಿ ಆಕ್ಸಿಡೆಂಟ್ಸ್ ಸಿಗುವ ರೀತಿ ನಿಗಾವಹಿಸಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.

4. ಕ್ಯಾನ್ಸರ್ ಬಾರದ ಹಾಗೆ ನೋಡಿಕೊಳ್ಳುತ್ತದೆ
ವಿಟಮಿನ್ ಎ, ಸಿ, ಅಮಿನೋ ಆಸಿಡ್ಸ್ ಹಾಗೂ ಪ್ರೋಟಿನ್ ಅಂಶ ದೇಹದಲ್ಲಿ ಫ್ರೀ ರಾಡಿಕಲ್ಸ್ ಸೇರದ ಹಾಗೆ ನೋಡಿಕೊಳ್ಳುತ್ತದೆ. ದೇಹದಲ್ಲಿ ಆಗುವ ಹಲವಾರು ಕ್ರಿಯೆಗಳ ಪರಿಣಾಮವಾಗಿ ಫ್ರೀ ರಾಡಿಕಲ್ಸ್ ಉತ್ಪತ್ತಿ ಆಗುತ್ತದೆ. ಇದರಿಂದ ದೇಹಕ್ಕೆ ಕ್ಯಾನ್ಸರ್ ಸೆಲ್ಸ್ ಸೇರುತ್ತದೆ. ಅಷ್ಟೇ ಅಲ್ಲದೆ ಸಾಕಷ್ಟು ಕಾಯಿಲೆಗಳು ಬರೋದಕ್ಕೆ ಇದು ಕಾರಣವಾಗುತ್ತದೆ. ಬೇಗ ಸುಸ್ತಾಗೋದು, ಕಣ್ಣು ಮಂಜಾಗುವುದು, ಹೃದಯಕ್ಕೆ ಸಂಬಂಧ ಪಟ್ಟ ತೊಂದರೆ ಕಾಣಿಸಿಕೊಳ್ಳುತ್ತದೆ. ಆದ್ದರಿಂದ ಇಂತಹ ತೊಂದರೆಗಳಿಂದ ದೂರವಿರಲು ಮೊಳಕೆ ಬಂದ ಹೆಸರು ಕಾಳನ್ನು ಸೇವಿಸಬೇಕು.
5. ತೂಕ ಕಡಿಮೆ ಮಾಡುತ್ತದೆ ಹಾಗೂ ತ್ವಚೆಯ ಆರೋಗ್ಯ ಕಾಪಾಡುತ್ತೆ
ಮೊಳಕೆ ಬಂದ ಹೆಸರು ಕಾಳಿನಲ್ಲಿ ಕ್ಯಾಲೋರೀಸ್ ಇಲ್ಲದ ಕಾರಣ ಇದನ್ನು ಎಷ್ಟು ತಿಂದರೂ ತೂಕ ಹೆಚ್ಚಾಗಲ್ಲ. ಬದಲಾಗಿ ತೂಕ ಕಡಿಮೆ ಆಗುತ್ತೆ. ಮೊಳಕೆ ಬಂದ ಹೆಸರು ಕಾಳನ್ನು ತಿನ್ನುವುದರಿಂದ ಇದರಲ್ಲಿರೋ ಫೈಬರ್ ನಿಮ್ಮ ದೇಹಕ್ಕೆ ಸೇರಿ ಹೊಟ್ಟೆ ತುಂಬುವ ಹಾಗೆ ಮಾಡುತ್ತೆ. ಆದರ ಜೊತೆ ಪದೇ ಪದೇ ಹಸಿವಾಗದ ರೀತಿ ನೋಡಿಕೊಳ್ಳುತ್ತದೆ. ಹಾಗೆಯೇ ಸ್ಥೂಲಕಾಯ ಮತ್ತು ಮಧುಮೇಹ ಕಾಯಿಲೆ ಬಾರದಂತೆ ನೋಡಿಕೊಳ್ಳುತ್ತದೆ. ಪ್ರತಿನಿತ್ಯ ಹೆಸರು ಕಾಳನ್ನು ತಿನ್ನುವುದರಿಂದ ತ್ವಚೆಯ ಆರೋಗ್ಯ ಕೂಡ ಚೆನ್ನಾಗಿರುತ್ತದೆ. ಅಲ್ಲದೆ ತ್ವಚೆಗೆ ಕಾಂತಿಯನ್ನು ನೀಡುತ್ತದೆ. ಇದರಿಂದ ಆಕರ್ಷಕ ಸೌಂದರ್ಯವನ್ನು ಕೂಡ ನೀವು ಪಡೆಯಬಹುದು.
ದುಬಾರಿ ಔಷಧಿಗಳ ಮೊರೆ ಹೋಗುವ ಬದಲು ಮೊಳಕೆ ಬಂದ ಕಾಳನ್ನು ಸೇವನೆ ಮಾಡುವುದು ಉತ್ತಮ. ಹೀಗಾಗಿ ಮೊಳಕೆ ಬಂದ ಕಾಳನ್ನು ಸೇವಿಸಿ ನಿಮ್ಮ ಆರೋಗ್ಯವನ್ನು ವೃದ್ಧಿಸಿಕೊಳ್ಳುವುದು ಒಳಿತು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ದೇಶದಲ್ಲಿ ಮಹಿಳೆಯರು ಹೆಚ್ಚು ಮೇಕಪ್ ಮಾಡಿಕೊಂಡರೆ ಕಠಿಣ ಶಿಕ್ಷೆಗೆ ವಿಧಿಸಲಾಗುತ್ತದೆ. ಸಂಪ್ರದಾಯ ದೇಶ ಸೌದಿ ಅರೇಬಿಯಾದಲ್ಲಿ ಪುರುಷರಂತೆ ಮಹಿಳೆಯರಿಗೆ ಸಮಾನ ಹಕ್ಕುಗಳು ಇಲ್ಲ. ಈ ದೇಶದಲ್ಲಿ ಶರ್ಯ ಕಾನೂನುಗಳನ್ನು ಕಟ್ಟು ನಿಟ್ಟಾಗಿ ಪಾಲಿಸಲಾಗುತ್ತದೆ.ಷ್ಟರ ಮಟ್ಟಿಗೆ ಎಂದರೆ ಮಹಿಳೆಯರು ತಾವು ಹಾಕಿಕೊಳ್ಳುವ ಬಟ್ಟೆಯಿಂದ ಹಿಡಿದು ತಮ್ಮ ಗಂಡನ ಆಯ್ಕೆಯನ್ನು ಕೂಡ ಮಾಡಿಕೊಳ್ಳಲು ಇಲ್ಲಿ ಸ್ವತಂತ್ರ ಇಲ್ಲ. ಅಂತ ಕಟ್ಟು ಪಾಡುಗಳನ್ನು ಮೀರಿದರೆ ಕಠಿಣವಾಗಿ ಶಿಕ್ಷೆ ಅನುಭವಿಸ ಬೇಕಾಗುತ್ತದೆ ಸೌದಿ ಹೆಣ್ಣು ಮಕ್ಕಳು ತಮ್ಮ ಸೌಂದರ್ಯ ಪ್ರದರ್ಶಿಸುವ ಹಾಗೆ ಇಲ್ಲ.ಹೌದು…
ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರ ಜನರಿಗೆ ಉಪಯೋಗವಾಗಲೆಂದು ಅನೇಕ ಯೋಜನೆಗಳನ್ನು ಮಾಡುತ್ತಾ ಬಂದಿದೆ.. ಅದರಲ್ಲೂ ಬಿ ಪಿ ಎಲ್ ಕಾರ್ಡ್ ಹೊಂದಿರುವವರಿಗೆ ಯೋಜನೆಗಳಿಂದ ಅನೇಕ ಅನುಕೂಲಗಳಾಗಿವೆ..ಅದರಲ್ಲೊಂದು ಪ್ರಮುಖ ವಾದ ಯೋಜನೆ ಮೂಲಕ ಉಚಿತ ಗ್ಯಾಸ್ ಸಂಪರ್ಕವನ್ನು ಪಡೆಯಬಹುದಾಗಿದೆ..
ಬ್ಯಾಂಕ್ ಗ್ರಾಹಕರಿಗೆ ಶುಭ ಸುದ್ದಿ ನೀಡಿರುವ ಆರ್ಬಿಐ
ಮಲಗುವುದಕ್ಕೂ ಮುನ್ನ ಹಿತವಾದ, ಧ್ಯಾನ, ಯೋಗ ಸಂಗೀತವನ್ನು ಆಲಿಸುವುದರಿಂದ ಹೃದಯದ ಆರೋಗ್ಯ ಉತ್ತಮವಾಗಿರುತ್ತದೆ ಎಂದು ಭಾರತೀಯ ಸಂಶೋಧಕರು ಹೇಳಿದ್ದಾರೆ. ಈ ರೀತಿಯ ಮ್ಯೂಸಿಕ್ ಥೆರೆಪಿಯನ್ನು ಆಸ್ಪತ್ರೆಗಳಲ್ಲಿ ಪ್ರಯೋಗಿಸಲಾಗುತ್ತಿದ್ದು, ಯೋಗ ಸಂಗೀತವನ್ನು ಮಲಗುವುದಕ್ಕೂ ಮುನ್ನ ಆಲಿಸುವುದು ಹೃದಯ ಬಡಿತದ ವ್ಯತ್ಯಾಸಗಳ ಮೇಲೆ ಪರಿಣಾಮ ಬೀರಿದೆ ಎಂದು ರಾಜಸ್ಥಾನದ ಜೈಪುರದ ಹೆಚ್ ಜಿ ಎಸ್ಎಂಎಸ್ ಆಸ್ಪತ್ರೆಯ ನರೇಶ್ ಸೇನ್ ಹೇಳಿದ್ದಾರೆ. ಈ ಅಧ್ಯಯನವನ್ನು ಜರ್ಮನಿಯಲ್ಲಿರುವ ಯುರೋಪಿಯನ್ ಸೊಸೈಟಿ ಆಫ್ ಕಾರ್ಡಿಯಾಲಜಿ ಕಾಂಗ್ರೆಸ್ 2018 ರಲ್ಲಿ ಮಂಡಿಸಲಾಗಿದೆ. ಆರೋಗ್ಯಕರವಾಗಿದ್ದ ಸುಮಾರು 149…
ಸೌತೆಕಾಯಿಗಳು 95% ನೀರನ್ನು ಒಳಗೊಂಡಿರುತ್ತವೆ ಮತ್ತು ಇದು ಅವರಿಗೆ ಸೂಕ್ತವಾದ ಹೈಡ್ರೇಟಿಂಗ್ ಮತ್ತು ತಂಪಾಗಿಸುವ ಆಹಾರವಾಗಿಸುತ್ತದೆ. ಸೌತೆಕಾಯಿಗಳು ಫಿಸೆಟಿನ್ ಎಂಬ ಉರಿಯೂತದ ಫ್ಲೇವನಾಲ್ ಅನ್ನು ಹೊಂದಿರುತ್ತವೆ, ಇದು ನಿಮ್ಮ ಮೆದುಳಿನ ಆರೋಗ್ಯವನ್ನು ನೋಡಿಕೊಳ್ಳುವಲ್ಲಿ ಪ್ರಮುಖ ಪಾತ್ರವಹಿಸುತ್ತದೆ. ಸೌತೆಕಾಯಿಗಳಲ್ಲಿ ಲಿಗ್ನಾನ್ಸ್ ಎಂಬ ಪಾಲಿಫಿನಾಲ್ಗಳಿವೆ, ಇದು ಸ್ತನ, ಗರ್ಭಾಶಯ, ಅಂಡಾಶಯ ಮತ್ತು ಪ್ರಾಸ್ಟೇಟ್ ಕ್ಯಾನ್ಸರ್ ಅಪಾಯಗಳನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಸೌತೆಕಾಯಿ ಸಾರವು ಅನಗತ್ಯ ಉರಿಯೂತವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಉರಿಯೂತದ ಪರ ಕಿಣ್ವಗಳ ಚಟುವಟಿಕೆಯನ್ನು ತಡೆಯುವ…
ಪುರಾತನ ಕಾಲದಿಂದಲೂ ಆಯುರ್ವೇದ ಪದ್ದತಿಯಲ್ಲಿ ಹೆಚ್ಚು ಉಪಯೋಗಿಸಲ್ಟಡುತ್ತಿದ್ದ ಔಷದೀಯ ಸಸ್ಯ ಅಶ್ವಗಂಧ. ಈಗಲೂ ಅನೇಕ ಔಷಧಿಗಳಲ್ಲಿ ಅಶ್ವಗಂಧವನ್ನು ಉಪಯೋಗಿಸಲಾಗುತ್ತಿದೆ.
ಅಶ್ವಗಂಧಾ ಎಂಬುದು ಒಂದು ಔಷಧಿಗಿಡ. ಹಿರಿಯರಿಂದ ‘ಹಿರೇಮದ್ದು’ ಎಂದೇ ಕರೆಸಿಕೊಳ್ಳುವ ಈ ಸಸ್ಯ, ನರಸಂಬಂಧಿ, ಕಫ ವಾತ ಸಂಬಂಧಿ ದೋಷಗಳನ್ನು ಕಿತ್ತು ಕಳೆಯಬಲ್ಲ ಗುಣವಿದೆ.