ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬ್ಯುಸಿ ಜೀವನ ಶೈಲಿಯಲ್ಲಿ ನಮ್ಮ ಆರೋಗ್ಯದ ಬಗ್ಗೆ ಕಾಳಜಿ ತೋರಿಸೋಕೆ ಸಮಯ ಸಿಗ್ತಿಲ್ಲ. ಅದರಲ್ಲೂ ಇತ್ತೀಚಿನ ಕಾಲಘಟ್ಟದಲ್ಲಿ ಆರೋಗ್ಯಕರ ಆಹಾರಕ್ಕಿಂತ ಫಾಸ್ಟ್ ಫುಡ್ಗಳ ಹಾವಳಿಯೇ ಹೆಚ್ಚಾಗಿದೆ. ಆದ್ದರಿಂದ ಆರೋಗ್ಯಕರ ಆಹಾರಗಳು ಯಾವುದು? ಅದರ ಲಾಭಗಳೇನು..? ಎನ್ನುವ ವಿಷಯವೇ ಅನೇಕರಿಗೆ ತಿಳಿದಿಲ್ಲ. ಫಾಸ್ಟ್ ಫುಡ್ಸ್ ಗಳ ರುಚಿಗೆ ಮನಸೋತ ಮಂದಿಗೆ ಅದರಿಂದ ಅಷ್ಟೇ ಫಾಸ್ಟಾಗಿ ಆಗುವ ದುಷ್ಪರಿಣಾಮಗಳ ಬಗ್ಗೆ ತಿಳಿದಿರಲ್ಲ.

ಹೌದು, ಇಂತಹ ಆರೋಗ್ಯಕ್ಕೆ ಮಾರಕವಾದ ಜೀವನ ಶೈಲಿಯ ಮಧ್ಯೆ ಆರೋಗ್ಯಕರ ಆಹಾರಗಳನ್ನು ಜನ ಮರೆತಿದ್ದಾರೆ. ಸೊಪ್ಪು ತರಕಾರಿ, ಕಾಳುಗಳು ಆರೋಗ್ಯ ವೃದ್ಧಿಸುವಲ್ಲಿ ತುಂಬಾ ಉಪಯುಕ್ತ. ಅದರಲ್ಲೂ ಮೊಳಕೆ ಬಂದ ಕಾಳುಗಳ ಸೇವನೆಯಿಂದ ಎಷ್ಟು ಲಾಭ ಎನ್ನುವುದು ಹಲವರಿಗೆ ಗೊತ್ತಿರಲ್ಲ. ಕಾಳುಗಳನ್ನು ಹಾಗೆಯೇ ತಿನ್ನುವುದಕ್ಕಿಂತ ಅದನ್ನು ನೀರಲ್ಲಿ ನೆನಸಿಟ್ಟು, ಮೊಳಕೆ ಬಂದ ಮೇಲೆ ತಿಂದ್ರೆ ಅದರಲ್ಲಿ ಪೌಷ್ಟಿಕಾಂಶ ಜಾಸ್ತಿ ಇರುತ್ತದೆ. ಮೊಳಕೆ ಒಡೆದ ಕಾಳುಗಳನ್ನು ಬೇಯಿಸಿ ತಿನ್ನುವುದಕ್ಕಿಂದ ಹಸಿಯಾಗಿಯೇ ಸೇವಿಸುವುದು ಉತ್ತಮ. ಯಾಕೆಂದರೆ ಮೊಳಕೆ ಕಾಳುಗಳನ್ನು ಬೇಯಿಸಿದಾಗ ಅದರ ಪೌಷ್ಟಿಕತೆ ದೇಹಕ್ಕೆ ಸಿಗಲ್ಲ. ಮೊಳಕೆ ಕಾಳಲ್ಲಿ ಪ್ರೋಟಿನ್, ಫೈಬರ್, ವಿಟಮಿನ್ಸ್, ಕಬ್ಬಿಣದ ಅಂಶ, ಕ್ಯಾಲ್ಸಿಯಂ ಹೀಗೆ ದೇಹಕ್ಕೆ ಬೇಕಾದ ಆರೋಗ್ಯಕರ ಅಂಶಗಳು ಇರುತ್ತದೆ. ಆದ್ದರಿಂದ ಮೊಳಕೆ ಕಾಳು ದೇಹಕ್ಕೆ ಒಳ್ಳೆಯದು.
ಅನೇಕ ಅದ್ಭುತ ಲಾಭಗಳನ್ನು ತನ್ನೊಳಗೆ ಅಡಗಿಸಿಕೊಂಡಿರೋ ಮೊಳಕೆ ಕಾಳುಗಳಲ್ಲಿ ಮೊಳಕೆ ಒಡೆದ ಹೆಸರು ಕಾಳು ಒಂದು. ಈ ಮೊಳಕೆ ಒಡೆದ ಹೆಸರು ಕಾಳು ಆರೋಗ್ಯಕ್ಕೆ ಎಷ್ಟು ಉಪಯುಕ್ತ? ಅದರ ಲಾಭಗಳೇನು? ಅದನ್ನು ಯಾಕೆ ಸೇವಿಸಬೇಕು ಅನ್ನೋದರ ಸಂಪೂರ್ಣ ಮಾಹಿತಿ ಇಲ್ಲಿದೆ..

ಮೊಳಕೆ ಬಂದ ಹೆಸರು ಕಾಳಿನ ಲಾಭಗಳೇನು?
1. ಜೀರ್ಣಶಕ್ತಿ ವೃದ್ಧಿಸುತ್ತೆ
ಹೆಸರು ಕಾಳನ್ನು ನೀರಿನಲ್ಲಿ ನೆನಸಿಟ್ಟು, ಬಳಿಕ ಮೊಳಕೆ ಬಂದ ಮೇಲೆ ಸೇವಿಸುವುದರಿಂದ ಜೀರ್ಣಶಕ್ತಿ ಉತ್ತಮವಾಗುತ್ತೆ. ಇದರಲ್ಲಿರೋ ಪೌಷ್ಟಿಕಾಂಶ ಜೀರ್ಣಕ್ರಿಯೆಯನ್ನು ಸರಾಗ ಮಾಡುತ್ತದೆ. ಅಲ್ಲದೆ ಫೈಬರ್ ಅಂಶವು ದೇಹದಲ್ಲಿ ಆಹಾರದ ಸಂಚಾರ ಸರಿಯಾಗಿ ಆಗುವಂತೆ ನೋಡಿಕೊಂಡು ಮಲಬದ್ಧತೆ ತೊಂದರೆಯನ್ನು ನಿವಾರಿಸುತ್ತದೆ.
2. ಹೃದಯದ ಆರೋಗ್ಯ ಕಾಪಾಡುತ್ತೆ
ಮೊಳಕೆ ಬಂದ ಹೆಸರು ಕಾಳು ತಿನ್ನುವುದರಿಂದ ಹೃದಯದ ಆರೋಗ್ಯ ಉತ್ತಮವಾಗುತ್ತದೆ. ಇದರಲ್ಲಿರೋ ಒಮೇಗಾ ಫ್ಯಾಟೀ ಆಸಿಡ್ ದೇಹಕ್ಕೆ ಬೇಕಾದ ಒಳ್ಳೆಯ ಕೊಬ್ಬಿನ ಅಂಶ ನೀಡಿ ರಕ್ತನಾಳದ ಆರೋಗ್ಯ ಕಾಪಾಡುತ್ತೆ. ಇದರಲ್ಲಿನ ಆಂಟಿ ಇನ್ಪ್ಲಮೇಟರಿ ಗುಣ ರಕ್ತನಾಳಗಳ ಮೇಲಿರೋ ಒತ್ತಡವನ್ನೂ ಕಡಿಮೆ ಮಾಡುತ್ತದೆ. ರಕ್ತದ ಸಂಚಾರ ಹೆಚ್ಚಿಸಿ ದೇಹಕ್ಕೆ ಹೆಚ್ಚು ಆಕ್ಸಿಜನ್ ಸಿಗುವ ಹಾಗೆ ಮಾಡಿ ಸ್ಟ್ರೋಕ್ ಹಾಗೂ ಹೃದಯಾಘಾತ ಆಗದಂತೆ ನೋಡಿಕೊಳ್ಳುತ್ತದೆ.
3. ರೋಗ ನಿರೋಧಕ ಶಕ್ತಿ ಹೆಚ್ಚಿಸುತ್ತದೆ
ಇದರಲ್ಲಿರುವ ವಿಟಮಿನ್ ಸಿ ದೇಹಕ್ಕೆ ಇನ್ಫೆಕ್ಷನ್ ಆಗೋದನ್ನ ತಡೆಯುತ್ತದೆ. ಇದರ ಜೊತೆ ವಿಟಮಿನ್ ಎ ಅಂಶ ಕೂಡ ಹೆಚ್ಚಾಗಿ ಇರೋದ್ರಿಂದ ದೇಹಕ್ಕೆ ಹೆಚ್ಚಿನ ಆಂಟಿ ಆಕ್ಸಿಡೆಂಟ್ಸ್ ಸಿಗುವ ರೀತಿ ನಿಗಾವಹಿಸಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.

4. ಕ್ಯಾನ್ಸರ್ ಬಾರದ ಹಾಗೆ ನೋಡಿಕೊಳ್ಳುತ್ತದೆ
ವಿಟಮಿನ್ ಎ, ಸಿ, ಅಮಿನೋ ಆಸಿಡ್ಸ್ ಹಾಗೂ ಪ್ರೋಟಿನ್ ಅಂಶ ದೇಹದಲ್ಲಿ ಫ್ರೀ ರಾಡಿಕಲ್ಸ್ ಸೇರದ ಹಾಗೆ ನೋಡಿಕೊಳ್ಳುತ್ತದೆ. ದೇಹದಲ್ಲಿ ಆಗುವ ಹಲವಾರು ಕ್ರಿಯೆಗಳ ಪರಿಣಾಮವಾಗಿ ಫ್ರೀ ರಾಡಿಕಲ್ಸ್ ಉತ್ಪತ್ತಿ ಆಗುತ್ತದೆ. ಇದರಿಂದ ದೇಹಕ್ಕೆ ಕ್ಯಾನ್ಸರ್ ಸೆಲ್ಸ್ ಸೇರುತ್ತದೆ. ಅಷ್ಟೇ ಅಲ್ಲದೆ ಸಾಕಷ್ಟು ಕಾಯಿಲೆಗಳು ಬರೋದಕ್ಕೆ ಇದು ಕಾರಣವಾಗುತ್ತದೆ. ಬೇಗ ಸುಸ್ತಾಗೋದು, ಕಣ್ಣು ಮಂಜಾಗುವುದು, ಹೃದಯಕ್ಕೆ ಸಂಬಂಧ ಪಟ್ಟ ತೊಂದರೆ ಕಾಣಿಸಿಕೊಳ್ಳುತ್ತದೆ. ಆದ್ದರಿಂದ ಇಂತಹ ತೊಂದರೆಗಳಿಂದ ದೂರವಿರಲು ಮೊಳಕೆ ಬಂದ ಹೆಸರು ಕಾಳನ್ನು ಸೇವಿಸಬೇಕು.
5. ತೂಕ ಕಡಿಮೆ ಮಾಡುತ್ತದೆ ಹಾಗೂ ತ್ವಚೆಯ ಆರೋಗ್ಯ ಕಾಪಾಡುತ್ತೆ
ಮೊಳಕೆ ಬಂದ ಹೆಸರು ಕಾಳಿನಲ್ಲಿ ಕ್ಯಾಲೋರೀಸ್ ಇಲ್ಲದ ಕಾರಣ ಇದನ್ನು ಎಷ್ಟು ತಿಂದರೂ ತೂಕ ಹೆಚ್ಚಾಗಲ್ಲ. ಬದಲಾಗಿ ತೂಕ ಕಡಿಮೆ ಆಗುತ್ತೆ. ಮೊಳಕೆ ಬಂದ ಹೆಸರು ಕಾಳನ್ನು ತಿನ್ನುವುದರಿಂದ ಇದರಲ್ಲಿರೋ ಫೈಬರ್ ನಿಮ್ಮ ದೇಹಕ್ಕೆ ಸೇರಿ ಹೊಟ್ಟೆ ತುಂಬುವ ಹಾಗೆ ಮಾಡುತ್ತೆ. ಆದರ ಜೊತೆ ಪದೇ ಪದೇ ಹಸಿವಾಗದ ರೀತಿ ನೋಡಿಕೊಳ್ಳುತ್ತದೆ. ಹಾಗೆಯೇ ಸ್ಥೂಲಕಾಯ ಮತ್ತು ಮಧುಮೇಹ ಕಾಯಿಲೆ ಬಾರದಂತೆ ನೋಡಿಕೊಳ್ಳುತ್ತದೆ. ಪ್ರತಿನಿತ್ಯ ಹೆಸರು ಕಾಳನ್ನು ತಿನ್ನುವುದರಿಂದ ತ್ವಚೆಯ ಆರೋಗ್ಯ ಕೂಡ ಚೆನ್ನಾಗಿರುತ್ತದೆ. ಅಲ್ಲದೆ ತ್ವಚೆಗೆ ಕಾಂತಿಯನ್ನು ನೀಡುತ್ತದೆ. ಇದರಿಂದ ಆಕರ್ಷಕ ಸೌಂದರ್ಯವನ್ನು ಕೂಡ ನೀವು ಪಡೆಯಬಹುದು.
ದುಬಾರಿ ಔಷಧಿಗಳ ಮೊರೆ ಹೋಗುವ ಬದಲು ಮೊಳಕೆ ಬಂದ ಕಾಳನ್ನು ಸೇವನೆ ಮಾಡುವುದು ಉತ್ತಮ. ಹೀಗಾಗಿ ಮೊಳಕೆ ಬಂದ ಕಾಳನ್ನು ಸೇವಿಸಿ ನಿಮ್ಮ ಆರೋಗ್ಯವನ್ನು ವೃದ್ಧಿಸಿಕೊಳ್ಳುವುದು ಒಳಿತು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೆಲವು ಹಣ್ಣುಗಳು ಕಂಡ್ ಕಂಡಲ್ಲಿ ಸಿಗೋಲ್ಲ. ವಿಪರೀತ ದುಬಾರಿ ಬೇರೆ. ಹಾಗಂತ ತಿನ್ನದೇ ಇರಬಹುದು. ಅದರಿಂದ ಆರೋಗ್ಯಕ್ಕೆ ಬಹಳಷ್ಟು ಲಾಭವಿರುತ್ತದೆ. ಅಂಥ ಹಣ್ಣುಗಳಲ್ಲಿ ಡ್ರಾಗನ್ ಫ್ರೂಟ್ ಒಂದು. ದುಬಾರಿಯಾದರೂ ಆರೋಗ್ಯವಾಗಿರಲು ಇದೊಂದು ಹಣ್ಣು ತಿಂದರೆ ಸಾಕು. ಕೊಲೆಸ್ಟ್ರಾಲ್, ಹೃದಯ ತೊಂದರೆ, ಡಯಾಬಿಟೀಸ್ನಂಥ ತೊಂದರೆಗಳನ್ನು ನಿವಾರಿಸಲು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಬಹುದು ಡ್ರಾಗನ್ ಫ್ರೂಟ್. ಭಾರತೀಯರಿಗೆ ಹೆಚ್ಚು ಪರಿಚಯವಿಲ್ಲದ ಹಣ್ಣಾದರೂ, ಮಾರುಕಟ್ಟೆಯಲ್ಲಿ ಅದರ ದುಬಾರಿ ಬೆಲೆಯಿಂದ ಎಲ್ಲರ ಗಮನ ಸೆಳೆದಿದೆ ಡ್ರ್ಯಾಗನ್ ಫ್ರೂಟ್. ಡ್ರಾಗನ್ ಫ್ರೂಟ್ ಹೆಚ್ಚಾಗಿ ಮರುಭೂಮಿಯಂಥ ಪ್ರದೇಶದಲ್ಲಿ ಬೆಳೆಯುತ್ತದೆ….
ನಮ್ಮ ದೇಶದಲ್ಲಿ ಮಳೆ ಬರುವಂತೆ ಪ್ರಾರ್ಥಿಸಿ ಕತ್ತೆ, ಕಪ್ಪೆ ಹಾಗೂ ಇತರ ಪ್ರಾಣಿಗಳ ಜೊತೆ ಮಾಡುವೆ ಮಾಡುವುದು ಸಾಮಾನ್ಯವಾಗಿದೆ. ಈ ಪ್ರಾಣಿಗಳ ಜೊತೆ ಮದುವೆ ಮಾಡಿಕೊಂಡು ಮೆರೆವಣಿಗೆ ಮಾಡೋದು ಎಲ್ಲರಿಗು ಗೊತ್ತಿರುವ ವಿಚಾರ.ಹೀಗೆ ವಿದೇಶಗಳಲ್ಲಿ ಇಂತಹ ಸಂಪ್ರದಾಯಗಳು ಚಾಲ್ತಿಯಲ್ಲಿವೆ.
ನಿಮಗೆ ಯಾವುದಾದರೂ ಕಾಯಿಲೆ ಬಗ್ಗೆ ಮಾಹಿತಿ ಬೇಕಾ? ಯಾವುದಾದರೂ ಸ್ಥಳದ ವಿಶೇಷತೆ ಹುಡುಕಬೇಕಾ? ವಿಶೇಷ ವ್ಯಕ್ತಿಯ ಬಗ್ಗೆ ಮಾಹಿತಿ ಬೇಕಾ? ಹೀಗೆ ನಿಮ್ಮ ಯಾವುದೇ ಅಗತ್ಯಕ್ಕೆ ತಕ್ಷಣ ಉತ್ತರ ಒದಗಿಸಬಲ್ಲ ಬೆರಳಂಚಿನ ಮಾಂತ್ರಿಕ ಗೂಗಲ್ ಸರ್ಚ್ ಇಂಜಿನ್. ಬಹುಷಃ ಗೂಗಲ್ ಬರೋದಿಕ್ಕೆ ಮೊದಲು ನಮ್ಮ ಪಾಡು ಹೇಗಿತ್ತು ಎಂಬುದನ್ನು ಊಹಿಸಲೂ ಸಾಧ್ಯವಾಗದಷ್ಟು ದಟ್ಟವಾಗಿ ಗೂಗಲ್ ನಮ್ಮನ್ನು ಆವರಿಸಿದೆ. ಇಂತಹ ಗೂಗಲ್ ಸರ್ಚ್ ಇಂಜಿನ್ ಗೆ ಇಂದು ಹುಟ್ಟುಹಬ್ಬದ ಸಂಭ್ರಮ.ಅದಕ್ಕೆ ಗೂಗಲ್ ವಿನೂತನ ಡೂಡಲ್ ಮೂಲಕ ಗೌರವ ಸಮರ್ಪಿಸಿದೆ….
ಹೌದು ಇವತ್ತಿನ ದಿನಗಳಲ್ಲಿ ನಾನು ಸುಂದರವಾಗಿ ಕಾಣಬೇಕು ಅಂತ ಸಿಕ್ಕಾಪಟ್ಟೆ ಹಣ ಖರ್ಚು ಮಾಡಿ ಇರೋ ಬಾರೋ ಮೇಕಪ್ ಕ್ರೀಮ್ ಬಳಸುತ್ತಾರೆ ಆದ್ರೂ ಅವರು ಮೊದಲಿನ ಹಾಗೆ ಇರುತ್ತಾರೆ. ಆದ್ರೆ ಈ ಪರಂಗಿ ಹಣ್ಣಿನಲ್ಲಿರುವ ಗುಣಗಳು ನಿಮ್ಮನ್ನು ಯಾವ ರೀತಿ ಕಾಣುವಂತೆ ಮಾಡುತ್ತೆ ಅನ್ನೋದು ಇಲ್ಲಿದೆ ನೋಡಿ. ಪರಂಗಿ ಹಣ್ಣನ್ನು ರುಬ್ಬಿ. ಅದರ ಮಿಶ್ರಣವನ್ನು ಪ್ರತಿನಿತ್ಯಾ ಮುಖಕ್ಕೆ ಹಚ್ಚುವುದರಿಂದ ಮುಖದಲ್ಲಿ ಹೊಳಪು ಬರುತ್ತದೆ. ಪರಂಗಿ ಹಣ್ಣಿನ ತಿರುಳನ್ನು ತೆಗೆದುಕೊಂಡು ಅದಕ್ಕೆ ಸ್ವಲ್ಪ ಜೇನುತುಪ್ಪ ಹಾಕಿ ಇದನ್ನು ಫೇಸ್…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(12 ಏಪ್ರಿಲ್, 2019) ಇದು ನಿಮ್ಮ ಆರೋಗ್ಯದ ಬಗ್ಗೆ ಚಿಂತಿಸಬೇಕಾಗಿಲ್ಲ. ನಿಮ್ಮ ಸುತ್ತಲಿನ ಜನರು ನಿಮ್ಮ ಸ್ಥೈರ್ಯ ಮತ್ತು…
ಮಂಗಳ ಮಂಗಳ ಗ್ರಹವು ಸೊರ್ಯನಿಂದ ನಾಲ್ಕನೇ ಗ್ರಹವಾಗಿದ್ದು , ನಮ್ಮ ಸೌರಮಂಡಲದ ಎರಡನೆಯ ಅತಿ ಚಿಕ್ಕ ಗ್ರಹವಾಗಿದೆ ಮರಕ್ಯೊರಿಯ ನಂತರ. ಇಂಗ್ಲೀಷ್ ನಲ್ಲಿ ಇದನ್ನು ಮಾರ್ಸ್ ಎಂದು ಕರೆಯಲಾಗುತ್ತದೆ. ಮಾರ್ಸ ಇದು ರೋಮನ್ನರ್ ದೇವರ ಯುಧದ್ದ ದೇವತೆ ಮಾಡಿದೆ.ಇದನ್ನು ಕೆಂಪು ಗ್ರಹ ಎಂದು ಕರೆಯಲಾಗುತ್ತದೆ.[ಭೂಮಿ]]ಗಿಂತ ದೂರದಲ್ಲಿದ್ದು, ಗುರು ಗ್ರಹಕ್ಕಿಂತ ಹತ್ತಿರದಲ್ಲಿದೆ.ಆಂಗ್ಲ ಭಾಷೆಯಲ್ಲಿ ‘ಮಾರ್ಸ್'(Mars) ಎಂದು ಕರೆಯುತ್ತಾರೆ. ಸುಮಾರು ಭೂಮಿಯ ಅರ್ಧದಷ್ಟು ವ್ಯಾಸವುಳ್ಳ ಈ ಗ್ರಹ ತನ್ನ ಅಕ್ಷವನ್ನು ಸುಮಾರು ೨೪ ಘಂಟೆಗಳಲ್ಲಿ ಸುತ್ತುತ್ತದೆ. ಆದರೆ ಸೂರ್ಯನ ಸುತ್ತ ಪ್ರದಕ್ಷಿಣೆ ಹಾಕಲು…