ಆರೋಗ್ಯ

ಮೊಳಕೆ ಬಂದ ಹೆಸರು ಕಾಳಿನ ಲಾಭಗಳೇನು? ಈ ಅರೋಗ್ಯ ಮಾಹಿತಿ ನೋಡಿ.

542

ಬ್ಯುಸಿ ಜೀವನ ಶೈಲಿಯಲ್ಲಿ ನಮ್ಮ ಆರೋಗ್ಯದ ಬಗ್ಗೆ ಕಾಳಜಿ ತೋರಿಸೋಕೆ ಸಮಯ ಸಿಗ್ತಿಲ್ಲ. ಅದರಲ್ಲೂ ಇತ್ತೀಚಿನ ಕಾಲಘಟ್ಟದಲ್ಲಿ ಆರೋಗ್ಯಕರ ಆಹಾರಕ್ಕಿಂತ ಫಾಸ್ಟ್ ಫುಡ್‍ಗಳ ಹಾವಳಿಯೇ ಹೆಚ್ಚಾಗಿದೆ. ಆದ್ದರಿಂದ ಆರೋಗ್ಯಕರ ಆಹಾರಗಳು ಯಾವುದು? ಅದರ ಲಾಭಗಳೇನು..? ಎನ್ನುವ ವಿಷಯವೇ ಅನೇಕರಿಗೆ ತಿಳಿದಿಲ್ಲ. ಫಾಸ್ಟ್ ಫುಡ್ಸ್ ಗಳ ರುಚಿಗೆ ಮನಸೋತ ಮಂದಿಗೆ ಅದರಿಂದ ಅಷ್ಟೇ ಫಾಸ್ಟಾಗಿ ಆಗುವ ದುಷ್ಪರಿಣಾಮಗಳ ಬಗ್ಗೆ ತಿಳಿದಿರಲ್ಲ.

ಹೌದು, ಇಂತಹ ಆರೋಗ್ಯಕ್ಕೆ ಮಾರಕವಾದ ಜೀವನ ಶೈಲಿಯ ಮಧ್ಯೆ ಆರೋಗ್ಯಕರ ಆಹಾರಗಳನ್ನು ಜನ ಮರೆತಿದ್ದಾರೆ. ಸೊಪ್ಪು ತರಕಾರಿ, ಕಾಳುಗಳು ಆರೋಗ್ಯ ವೃದ್ಧಿಸುವಲ್ಲಿ ತುಂಬಾ ಉಪಯುಕ್ತ. ಅದರಲ್ಲೂ ಮೊಳಕೆ ಬಂದ ಕಾಳುಗಳ ಸೇವನೆಯಿಂದ ಎಷ್ಟು ಲಾಭ ಎನ್ನುವುದು ಹಲವರಿಗೆ ಗೊತ್ತಿರಲ್ಲ. ಕಾಳುಗಳನ್ನು ಹಾಗೆಯೇ ತಿನ್ನುವುದಕ್ಕಿಂತ ಅದನ್ನು ನೀರಲ್ಲಿ ನೆನಸಿಟ್ಟು, ಮೊಳಕೆ ಬಂದ ಮೇಲೆ ತಿಂದ್ರೆ ಅದರಲ್ಲಿ ಪೌಷ್ಟಿಕಾಂಶ ಜಾಸ್ತಿ ಇರುತ್ತದೆ. ಮೊಳಕೆ ಒಡೆದ ಕಾಳುಗಳನ್ನು ಬೇಯಿಸಿ ತಿನ್ನುವುದಕ್ಕಿಂದ ಹಸಿಯಾಗಿಯೇ ಸೇವಿಸುವುದು ಉತ್ತಮ. ಯಾಕೆಂದರೆ ಮೊಳಕೆ ಕಾಳುಗಳನ್ನು ಬೇಯಿಸಿದಾಗ ಅದರ ಪೌಷ್ಟಿಕತೆ ದೇಹಕ್ಕೆ ಸಿಗಲ್ಲ. ಮೊಳಕೆ ಕಾಳಲ್ಲಿ ಪ್ರೋಟಿನ್, ಫೈಬರ್, ವಿಟಮಿನ್ಸ್, ಕಬ್ಬಿಣದ ಅಂಶ, ಕ್ಯಾಲ್ಸಿಯಂ ಹೀಗೆ ದೇಹಕ್ಕೆ ಬೇಕಾದ ಆರೋಗ್ಯಕರ ಅಂಶಗಳು ಇರುತ್ತದೆ. ಆದ್ದರಿಂದ ಮೊಳಕೆ ಕಾಳು ದೇಹಕ್ಕೆ ಒಳ್ಳೆಯದು.

ಅನೇಕ ಅದ್ಭುತ ಲಾಭಗಳನ್ನು ತನ್ನೊಳಗೆ ಅಡಗಿಸಿಕೊಂಡಿರೋ ಮೊಳಕೆ ಕಾಳುಗಳಲ್ಲಿ ಮೊಳಕೆ ಒಡೆದ ಹೆಸರು ಕಾಳು ಒಂದು. ಈ ಮೊಳಕೆ ಒಡೆದ ಹೆಸರು ಕಾಳು ಆರೋಗ್ಯಕ್ಕೆ ಎಷ್ಟು ಉಪಯುಕ್ತ? ಅದರ ಲಾಭಗಳೇನು? ಅದನ್ನು ಯಾಕೆ ಸೇವಿಸಬೇಕು ಅನ್ನೋದರ ಸಂಪೂರ್ಣ ಮಾಹಿತಿ ಇಲ್ಲಿದೆ..

ಮೊಳಕೆ ಬಂದ ಹೆಸರು ಕಾಳಿನ ಲಾಭಗಳೇನು?

1. ಜೀರ್ಣಶಕ್ತಿ ವೃದ್ಧಿಸುತ್ತೆ
ಹೆಸರು ಕಾಳನ್ನು ನೀರಿನಲ್ಲಿ ನೆನಸಿಟ್ಟು, ಬಳಿಕ ಮೊಳಕೆ ಬಂದ ಮೇಲೆ ಸೇವಿಸುವುದರಿಂದ ಜೀರ್ಣಶಕ್ತಿ ಉತ್ತಮವಾಗುತ್ತೆ. ಇದರಲ್ಲಿರೋ ಪೌಷ್ಟಿಕಾಂಶ ಜೀರ್ಣಕ್ರಿಯೆಯನ್ನು ಸರಾಗ ಮಾಡುತ್ತದೆ. ಅಲ್ಲದೆ ಫೈಬರ್ ಅಂಶವು ದೇಹದಲ್ಲಿ ಆಹಾರದ ಸಂಚಾರ ಸರಿಯಾಗಿ ಆಗುವಂತೆ ನೋಡಿಕೊಂಡು ಮಲಬದ್ಧತೆ ತೊಂದರೆಯನ್ನು ನಿವಾರಿಸುತ್ತದೆ.

2. ಹೃದಯದ ಆರೋಗ್ಯ ಕಾಪಾಡುತ್ತೆ
ಮೊಳಕೆ ಬಂದ ಹೆಸರು ಕಾಳು ತಿನ್ನುವುದರಿಂದ ಹೃದಯದ ಆರೋಗ್ಯ ಉತ್ತಮವಾಗುತ್ತದೆ. ಇದರಲ್ಲಿರೋ ಒಮೇಗಾ ಫ್ಯಾಟೀ ಆಸಿಡ್ ದೇಹಕ್ಕೆ ಬೇಕಾದ ಒಳ್ಳೆಯ ಕೊಬ್ಬಿನ ಅಂಶ ನೀಡಿ ರಕ್ತನಾಳದ ಆರೋಗ್ಯ ಕಾಪಾಡುತ್ತೆ. ಇದರಲ್ಲಿನ ಆಂಟಿ ಇನ್ಪ್ಲಮೇಟರಿ ಗುಣ ರಕ್ತನಾಳಗಳ ಮೇಲಿರೋ ಒತ್ತಡವನ್ನೂ ಕಡಿಮೆ ಮಾಡುತ್ತದೆ. ರಕ್ತದ ಸಂಚಾರ ಹೆಚ್ಚಿಸಿ ದೇಹಕ್ಕೆ ಹೆಚ್ಚು ಆಕ್ಸಿಜನ್ ಸಿಗುವ ಹಾಗೆ ಮಾಡಿ ಸ್ಟ್ರೋಕ್ ಹಾಗೂ ಹೃದಯಾಘಾತ ಆಗದಂತೆ ನೋಡಿಕೊಳ್ಳುತ್ತದೆ.

3. ರೋಗ ನಿರೋಧಕ ಶಕ್ತಿ ಹೆಚ್ಚಿಸುತ್ತದೆ
ಇದರಲ್ಲಿರುವ ವಿಟಮಿನ್ ಸಿ ದೇಹಕ್ಕೆ ಇನ್ಫೆಕ್ಷನ್ ಆಗೋದನ್ನ ತಡೆಯುತ್ತದೆ. ಇದರ ಜೊತೆ ವಿಟಮಿನ್ ಎ ಅಂಶ ಕೂಡ ಹೆಚ್ಚಾಗಿ ಇರೋದ್ರಿಂದ ದೇಹಕ್ಕೆ ಹೆಚ್ಚಿನ ಆಂಟಿ ಆಕ್ಸಿಡೆಂಟ್ಸ್ ಸಿಗುವ ರೀತಿ ನಿಗಾವಹಿಸಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.

4. ಕ್ಯಾನ್ಸರ್ ಬಾರದ ಹಾಗೆ ನೋಡಿಕೊಳ್ಳುತ್ತದೆ
ವಿಟಮಿನ್ ಎ, ಸಿ, ಅಮಿನೋ ಆಸಿಡ್ಸ್ ಹಾಗೂ ಪ್ರೋಟಿನ್ ಅಂಶ ದೇಹದಲ್ಲಿ ಫ್ರೀ ರಾಡಿಕಲ್ಸ್ ಸೇರದ ಹಾಗೆ ನೋಡಿಕೊಳ್ಳುತ್ತದೆ. ದೇಹದಲ್ಲಿ ಆಗುವ ಹಲವಾರು ಕ್ರಿಯೆಗಳ ಪರಿಣಾಮವಾಗಿ ಫ್ರೀ ರಾಡಿಕಲ್ಸ್ ಉತ್ಪತ್ತಿ ಆಗುತ್ತದೆ. ಇದರಿಂದ ದೇಹಕ್ಕೆ ಕ್ಯಾನ್ಸರ್ ಸೆಲ್ಸ್ ಸೇರುತ್ತದೆ. ಅಷ್ಟೇ ಅಲ್ಲದೆ ಸಾಕಷ್ಟು ಕಾಯಿಲೆಗಳು ಬರೋದಕ್ಕೆ ಇದು ಕಾರಣವಾಗುತ್ತದೆ. ಬೇಗ ಸುಸ್ತಾಗೋದು, ಕಣ್ಣು ಮಂಜಾಗುವುದು, ಹೃದಯಕ್ಕೆ ಸಂಬಂಧ ಪಟ್ಟ ತೊಂದರೆ ಕಾಣಿಸಿಕೊಳ್ಳುತ್ತದೆ. ಆದ್ದರಿಂದ ಇಂತಹ ತೊಂದರೆಗಳಿಂದ ದೂರವಿರಲು ಮೊಳಕೆ ಬಂದ ಹೆಸರು ಕಾಳನ್ನು ಸೇವಿಸಬೇಕು.

5. ತೂಕ ಕಡಿಮೆ ಮಾಡುತ್ತದೆ ಹಾಗೂ ತ್ವಚೆಯ ಆರೋಗ್ಯ ಕಾಪಾಡುತ್ತೆ
ಮೊಳಕೆ ಬಂದ ಹೆಸರು ಕಾಳಿನಲ್ಲಿ ಕ್ಯಾಲೋರೀಸ್ ಇಲ್ಲದ ಕಾರಣ ಇದನ್ನು ಎಷ್ಟು ತಿಂದರೂ ತೂಕ ಹೆಚ್ಚಾಗಲ್ಲ. ಬದಲಾಗಿ ತೂಕ ಕಡಿಮೆ ಆಗುತ್ತೆ. ಮೊಳಕೆ ಬಂದ ಹೆಸರು ಕಾಳನ್ನು ತಿನ್ನುವುದರಿಂದ ಇದರಲ್ಲಿರೋ ಫೈಬರ್ ನಿಮ್ಮ ದೇಹಕ್ಕೆ ಸೇರಿ ಹೊಟ್ಟೆ ತುಂಬುವ ಹಾಗೆ ಮಾಡುತ್ತೆ. ಆದರ ಜೊತೆ ಪದೇ ಪದೇ ಹಸಿವಾಗದ ರೀತಿ ನೋಡಿಕೊಳ್ಳುತ್ತದೆ. ಹಾಗೆಯೇ ಸ್ಥೂಲಕಾಯ ಮತ್ತು ಮಧುಮೇಹ ಕಾಯಿಲೆ ಬಾರದಂತೆ ನೋಡಿಕೊಳ್ಳುತ್ತದೆ. ಪ್ರತಿನಿತ್ಯ ಹೆಸರು ಕಾಳನ್ನು ತಿನ್ನುವುದರಿಂದ ತ್ವಚೆಯ ಆರೋಗ್ಯ ಕೂಡ ಚೆನ್ನಾಗಿರುತ್ತದೆ. ಅಲ್ಲದೆ ತ್ವಚೆಗೆ ಕಾಂತಿಯನ್ನು ನೀಡುತ್ತದೆ. ಇದರಿಂದ ಆಕರ್ಷಕ ಸೌಂದರ್ಯವನ್ನು ಕೂಡ ನೀವು ಪಡೆಯಬಹುದು.

ದುಬಾರಿ ಔಷಧಿಗಳ ಮೊರೆ ಹೋಗುವ ಬದಲು ಮೊಳಕೆ ಬಂದ ಕಾಳನ್ನು ಸೇವನೆ ಮಾಡುವುದು ಉತ್ತಮ. ಹೀಗಾಗಿ ಮೊಳಕೆ ಬಂದ ಕಾಳನ್ನು ಸೇವಿಸಿ ನಿಮ್ಮ ಆರೋಗ್ಯವನ್ನು ವೃದ್ಧಿಸಿಕೊಳ್ಳುವುದು ಒಳಿತು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ದೇಶ-ವಿದೇಶ

    ಪೋಷಕರೇ ಹುಷಾರ್!ಈ ಗೇಮ್ ಆಡಿದ್ರೆ ನಿಮ್ಮ ಮಕ್ಕಳು ಪ್ರಾಣ ಕಳೆದುಕೊಳ್ಳಬಹುದು!ಈ ಲೇಖನಿ ಓದಿ, ಎಲ್ಲರಿಗೂ ಶೇರ್ ಮಾಡಿ…

    ಆಟವಾಡುವುದೆಂದರೆ…ಯಾವ ಮಕ್ಕಳಿಗೆ ತಾನೇ ಇಷ್ಟವಿಲ್ಲ ಹೇಳಿ.. ಒಂದು ಕಾಲದಲ್ಲಿ ಬಯಲಲ್ಲಿ ಆಟವಾಡುತ್ತಿದ್ದ ಮಕ್ಕಳು ಈಗ ನಾಲಕ್ಕು ಗೋಡೆಗಳ ಮಧ್ಯೆ, ಆನ್ ಲೈನ್ ಆಟಗಳನ್ನು ಆಡುತ್ತಿದ್ದಾರೆ. ಈಗಂತೂ ಸಂಪೂರ್ಣ ಡಿಜಿಟಲ್ ಜಮಾನ. ಎದ್ದರೂ ಕೂತರೂ ಮೊಬೈಲ್ ಕಂಪ್ಯೂಟರ್ಗಳದ್ಧೆ ಹವಾ.. ಅದರಲ್ಲೂ ಪುಟ್ಟ ಮಕ್ಕಳು ಆನ್ ಲೈನ್ ಗೇಮ್`ಗಳಿಗೆಂದರೆ ಇನ್ನಿಲ್ಲದಂತೆ ತೊಡಗಿಕೊಳ್ಳುತ್ತಿದ್ಧಾರೆ.

  • ಸುದ್ದಿ

    ಭಾರೀ ಮಳೆ ಗುಡುಗು, ಸಿಡಿಲು ಬಡಿದು ಪ್ರೇಮ ಸೌಧ ತಾಜ್ ಮಹಲ್‍ಗೆ ಹಾನಿ.

    ಉತ್ತರ ಪ್ರದೇಶದ ಕೆಲ ಪ್ರದೇಶಗಳಲ್ಲಿ ಭಾರೀ ಮಳೆಯಾಗಿದೆ. ಗುಡುಗು, ಸಿಡಿಲು ಸಹಿತ ವರುಣ ದೇವ ವಿಜೃಂಭಿಸಿದ ಕಾರಣ ಆಗ್ರಾದಲ್ಲಿರುವ ಐತಿಹಾಸಿಕ ಕಟ್ಟಡ ತಾಜ್‍ಮಹಲ್‍ಗೆ ಹಾನಿಯಾಗಿರುವ ಕುರಿತು ವರದಿಯಾಗಿದೆ. ಕಟ್ಟಡದ ಮುಖ್ಯಗೇಟ್ ಮತ್ತು ಎತ್ತರದ ಗುಮ್ಮಟದ ಕೆಳ ಭಾಗದ ಅಮೃತ ಶಿಲೆಯ ರೇಲಿಂಗ್‍ಗೆ ಹಾನಿಯಾಗಿರುವುದಾಗಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಸಮಾಧಿಯ ಮೇಲ್‍ಭಾಗಕ್ಕೆ ಹಾನಿಯಾಗಿದ್ದು, ತಾಜ್‍ಮಹಲ್ ಆವರಣದಲ್ಲಿದ್ದ ಕೆಲ ಮರಗಳು ಬುಡದ ಸಮೇತ ಕಿತ್ತು ಬಂದಿರುವುದಾಗಿ ಎಎಸ್‍ಐ ಅಧೀಕ್ಷಕ ಪುರಾತತ್ವ ಶಾಸ್ತ್ರಜ್ಞ ಬಸಂತ್ ಕುಮಾರ್ ಮಾಹಿತಿ ನೀಡಿದ್ದಾರೆ. ಈ ಹಿಂದೆಯೂ…

  • ಸುದ್ದಿ

    750 ಕೋಟಿ ರೂ. ವೆಚ್ಚದಲ್ಲಿ ಕಲಬುರಗಿಗೆ ಶಾಶ್ವತ ಕುಡಿಯವ ನೀರು ಯೋಜನೆ…!

    ಕಲಬುರಗಿ ಮಹಾನಗರಕ್ಕೆ ಶಾಶ್ವತ ಕುಡಿಯವ ನೀರು ಕಲ್ಪಿಸುವ ಸಂಬಂಧ 750 ಕೋಟಿ ರೂ.ಗಳ ವೆಚ್ಚದ ಯೋಜನೆಗೆ ಮುಂದಿನ ಮೂರು ತಿಂಗಳಲ್ಲಿ ಚಾಲನೆ ನೀಡಲಾಗುವುದು ಎಂದು ನಗರಾಭಿವೃದ್ಧಿ ಸಚಿವ ಯು.ಟಿ.ಖಾದರ್ ಅವರು ಘೋಷಿಸಿದ್ದಾರೆ. ಕಲಬುರಗಿ ಪಾಲಿಕೆಯ ಸ್ಮಾರಕ ಭವನ (ಟೌನ್‍ಹಾಲ್) ದಲ್ಲಿ ಮಂಗಳವಾರ ಜನಸ್ಪಂದನ ಕಾರ್ಯಕ್ರಮದ ಬಳಿಕ ಪತ್ರಕರ್ತರನ್ನು ಉದ್ದೇಶಿಸಿ ಅವರು ಮಾತನಾಡುತ್ತಿದ್ದರು. ಮುಂದಿನ 5 ವರ್ಷಗಳಲ್ಲಿ ಈ ಯೋಜನೆ ಪೂರ್ಣಗೊಳ್ಳಲಿದ್ದು, ಭೀಮಾ ನದಿ, ಬೆಣ್ಣೆತೊರಾವಲ್ಲದೆ, ನಗರದ ಕಲ್ಯಾಣಿಗಳು, ಬಾವಿಗಳು ಮುಂತಾದ ನೀರಿನ ಮೂಲಗಳನ್ನು ಪತ್ತೆ ಹಚ್ಚಿ ಯೋಜನೆ…

  • ಕಾನೂನು

    ಈ ರಾಜ್ಯಕ್ಕೆ ಅನ್ವಯವಾಗುವ ಕಾನೂನು ರೂಪಿಸುವ ಅಧಿಕಾರ ಭಾರತದ ಸಂಸತ್‌ಗಿಲ್ಲ.!ಈ ರಾಜ್ಯದವರು ತೆರಿಗೆ ಕಟ್ಟೋ ಆಗಿಲ್ಲ!ಯಾಕೆ ಗೊತ್ತಾ?ಮುಂದೆ ಓದಿ ಎಲ್ಲರಿಗೂ ಶೇರ್ ಮಾಡಿ…

    ಕಾಶ್ಮೀರಿ ದ೦ಗೆಕೋರರು ಮತ್ತು ಪಾಕಿಸ್ತಾನ ಸರ್ಕಾರವು ಕಾಶ್ಮೀರಿ ಪ್ರಾ೦ತ್ಯದ ಮೇಲೆ ನಿತ೦ತ್ರಣವನ್ನು ಹೊ೦ದಲು ಹವಣಿಸುತ್ತಿದೆ.ಅ೦ತರಾಜ್ಯ ಸಮಸ್ಯೆಗಳ೦ತೆ, ಭಾರತ ಮತ್ತು ಪಾಕಿಸ್ತಾನ ನಡುವೆ ಕಾಶ್ಮೀರದ ಬಿಕ್ಕಟ್ಟು 1947 ರಿಂದ ಉದ್ಬವಿಸಿದ ಸಮಸ್ಯೆಯಾಗಿದೆ. ಕಾಶ್ಮೀರದಲ್ಲಿನ ಕೆಲವು ಕೋಮುವಾದಿಗಳು ಕಾಶ್ಮೀರವನ್ನು ಪಾಕಿಸ್ತಾನಕ್ಕೆ ಸೇರಿಸುವ೦ತೆಯು,ಕೆಲವು ಕಾಶ್ಮೀರಿಗಳೂ ತಾವೇ ಸ್ವತ೦ತ್ರರಾಗಲು ಹವಣೀಸುತ್ತಿದ್ದಾರೆ. ಆದ ಕಾರಣ ಭಾರತ ಸರ್ಕಾರ ಕಾಶ್ಮೀರದ ಬಿಕ್ಕಟ್ಟನ್ನು ಪರಿಹರಿಸುವುದಕ್ಕಾಗಿಯೇ ಹಲವು ಕಾನೂನು ನಿಯಮಗಳನ್ನು ಜಾರಿಗೆ ತ೦ದಿದೆ. ಭಾರತದ ರಾಜ್ಯವಾಗಿ ಕಾಶ್ಮೀರ ಗುರುತಿಸಿಕೊಂಡಿದ್ದರೂ, ಈ ರಾಜ್ಯಕ್ಕೆ ಪ್ರತ್ಯೇಕ ಸ್ಥಾನಮಾನವಿದೆ. ಭಾರತದ ಬೇರೆ ರಾಜ್ಯಗಳಿರುವ ಕಾನೂನು ಈ…

  • ಸುದ್ದಿ

    ಹೈಕೋರ್ಟ್ ಮಹತ್ವದ ತೀರ್ಪು:LLR ಇದ್ದರೂ ಅಪಘಾತವಾದ ವೇಳೆ ಪರಿಹಾರ ನೀಡಬೇಕು…!

    ವಾಹನ ಕಲಿಕಾ ಪರವಾನಗಿ (ಎಲ್ಎಲ್ಆರ್) ಹೊಂದಿದ್ದು, ಅಂತಹ ಸಂದರ್ಭದಲ್ಲಿ ಅಪಘಾತವಾದರೆ ವಿಮಾ ಕಂಪನಿಗಳು ಪರಿಹಾರ ನೀಡಬೇಕು ಎಂದು ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಹತ್ತು ವರ್ಷಗಳ ಹಿಂದಿನ ಪ್ರಕರಣವೊಂದರ ತೀರ್ಪು ಈಗ ಹೊರಬಿದ್ದಿದ್ದು, ಎಲ್ಎಲ್ಆರ್ ಇದ್ದ ವೇಳೆ ಅಂತವರು ವಾಹನ ಚಾಲನೆ ಮಾಡುವಾಗ ಡಿಎಲ್ ಹೊಂದಿದ ಪರಿಣಿತರು ಇರಬೇಕೆಂಬ ನಿಯಮವಿದೆ. ಆದರೆ ಇದು ದ್ವಿಚಕ್ರವಾಹನಕ್ಕೋ ಅಥವಾ ನಾಲ್ಕು ಚಕ್ರ ವಾಹನಕ್ಕೋ ಎಂಬುದರ ಕುರಿತು ಸ್ಪಷ್ಟತೆ ಇಲ್ಲ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಈ ನಿಯಮ ನಾಲ್ಕು ಚಕ್ರ ವಾಹನಗಳಿಗೆ…

  • ಸುದ್ದಿ

    ವಾಸುಕಿ ಪ್ರಿಯಾಂಕಳನ್ನು ತಬ್ಬಿಕೊಂಡಿದಕ್ಕೆ ಕೋಪಗೊಂಡ ಭೂಮಿ ಮಾಡಿದ್ದೇನು ಗೊತ್ತಾ?

    ಬಿಗ್ ಬಾಸ್ ಮನೆಯಲ್ಲಿ ಈ ಸೀಸನ್ ನಲ್ಲಿ ಯಾವುದೇ ಲವ್ವು ಇಲ್ಲ ಅಂದುಕೊಂಡವರಿಗೆ ವಾಸುಕಿ‌ ಶಾಕ್ ನೀಡುತ್ತಾ ಬರುತ್ತಿರೋದು ಇವರೇನಾ ವಾಸುಕಿ ವೈಭವ್ ಎನ್ನುವಂತಾಗಿರೋದು ಸುಳ್ಳಲ್ಲ. ಆದರೆ ಸದ್ಯ ಚಂದನ ವಿಷಯ ಮುಗಿಸಿ ಭೂಮಿ ಜೊತೆ ಮನೆಯಲ್ಲಿ ಅಡ್ಡಾಡುತ್ತಾ ಹೆಡ್ ಮಸಾಜ್ ಮಾಡಿಸಿಕೊಳ್ಳುತ್ತಿರುವ ವಾಸುಕಿ ಬಗ್ಗೆ ಮನೆಯಲ್ಲೇ ದೂರುಗಳು ಹೆಚ್ಚಾಗಿದೆ. ಹೌದು, ನಿನ್ನೆ ಬಿಗ್ ಬಾಸ್ ಮನೆಯಲ್ಲಿ ಲೈಟ್ ಆಫ್ ಆದಮೇಲೆ ಪ್ರಿಯಾಂಕ ಶೈನ್ ಹಾಗೂ ವಾಸುಕಿ ಅವರು ಲಿವಿಂಗ್ ಏರಿಯಾದಲ್ಲಿ ಮಾತನಾಡುವಾಗ. ಇತ್ತೀಚೆಗೆ ವಾಸುಕಿ ಅವರು ಎಲ್ಲರನ್ನು…