ಆರೋಗ್ಯ

ಮೊಳಕೆ ಬಂದ ಹೆಸರು ಕಾಳಿನ ಲಾಭಗಳೇನು? ಈ ಅರೋಗ್ಯ ಮಾಹಿತಿ ನೋಡಿ.

513

ಬ್ಯುಸಿ ಜೀವನ ಶೈಲಿಯಲ್ಲಿ ನಮ್ಮ ಆರೋಗ್ಯದ ಬಗ್ಗೆ ಕಾಳಜಿ ತೋರಿಸೋಕೆ ಸಮಯ ಸಿಗ್ತಿಲ್ಲ. ಅದರಲ್ಲೂ ಇತ್ತೀಚಿನ ಕಾಲಘಟ್ಟದಲ್ಲಿ ಆರೋಗ್ಯಕರ ಆಹಾರಕ್ಕಿಂತ ಫಾಸ್ಟ್ ಫುಡ್‍ಗಳ ಹಾವಳಿಯೇ ಹೆಚ್ಚಾಗಿದೆ. ಆದ್ದರಿಂದ ಆರೋಗ್ಯಕರ ಆಹಾರಗಳು ಯಾವುದು? ಅದರ ಲಾಭಗಳೇನು..? ಎನ್ನುವ ವಿಷಯವೇ ಅನೇಕರಿಗೆ ತಿಳಿದಿಲ್ಲ. ಫಾಸ್ಟ್ ಫುಡ್ಸ್ ಗಳ ರುಚಿಗೆ ಮನಸೋತ ಮಂದಿಗೆ ಅದರಿಂದ ಅಷ್ಟೇ ಫಾಸ್ಟಾಗಿ ಆಗುವ ದುಷ್ಪರಿಣಾಮಗಳ ಬಗ್ಗೆ ತಿಳಿದಿರಲ್ಲ.

ಹೌದು, ಇಂತಹ ಆರೋಗ್ಯಕ್ಕೆ ಮಾರಕವಾದ ಜೀವನ ಶೈಲಿಯ ಮಧ್ಯೆ ಆರೋಗ್ಯಕರ ಆಹಾರಗಳನ್ನು ಜನ ಮರೆತಿದ್ದಾರೆ. ಸೊಪ್ಪು ತರಕಾರಿ, ಕಾಳುಗಳು ಆರೋಗ್ಯ ವೃದ್ಧಿಸುವಲ್ಲಿ ತುಂಬಾ ಉಪಯುಕ್ತ. ಅದರಲ್ಲೂ ಮೊಳಕೆ ಬಂದ ಕಾಳುಗಳ ಸೇವನೆಯಿಂದ ಎಷ್ಟು ಲಾಭ ಎನ್ನುವುದು ಹಲವರಿಗೆ ಗೊತ್ತಿರಲ್ಲ. ಕಾಳುಗಳನ್ನು ಹಾಗೆಯೇ ತಿನ್ನುವುದಕ್ಕಿಂತ ಅದನ್ನು ನೀರಲ್ಲಿ ನೆನಸಿಟ್ಟು, ಮೊಳಕೆ ಬಂದ ಮೇಲೆ ತಿಂದ್ರೆ ಅದರಲ್ಲಿ ಪೌಷ್ಟಿಕಾಂಶ ಜಾಸ್ತಿ ಇರುತ್ತದೆ. ಮೊಳಕೆ ಒಡೆದ ಕಾಳುಗಳನ್ನು ಬೇಯಿಸಿ ತಿನ್ನುವುದಕ್ಕಿಂದ ಹಸಿಯಾಗಿಯೇ ಸೇವಿಸುವುದು ಉತ್ತಮ. ಯಾಕೆಂದರೆ ಮೊಳಕೆ ಕಾಳುಗಳನ್ನು ಬೇಯಿಸಿದಾಗ ಅದರ ಪೌಷ್ಟಿಕತೆ ದೇಹಕ್ಕೆ ಸಿಗಲ್ಲ. ಮೊಳಕೆ ಕಾಳಲ್ಲಿ ಪ್ರೋಟಿನ್, ಫೈಬರ್, ವಿಟಮಿನ್ಸ್, ಕಬ್ಬಿಣದ ಅಂಶ, ಕ್ಯಾಲ್ಸಿಯಂ ಹೀಗೆ ದೇಹಕ್ಕೆ ಬೇಕಾದ ಆರೋಗ್ಯಕರ ಅಂಶಗಳು ಇರುತ್ತದೆ. ಆದ್ದರಿಂದ ಮೊಳಕೆ ಕಾಳು ದೇಹಕ್ಕೆ ಒಳ್ಳೆಯದು.

ಅನೇಕ ಅದ್ಭುತ ಲಾಭಗಳನ್ನು ತನ್ನೊಳಗೆ ಅಡಗಿಸಿಕೊಂಡಿರೋ ಮೊಳಕೆ ಕಾಳುಗಳಲ್ಲಿ ಮೊಳಕೆ ಒಡೆದ ಹೆಸರು ಕಾಳು ಒಂದು. ಈ ಮೊಳಕೆ ಒಡೆದ ಹೆಸರು ಕಾಳು ಆರೋಗ್ಯಕ್ಕೆ ಎಷ್ಟು ಉಪಯುಕ್ತ? ಅದರ ಲಾಭಗಳೇನು? ಅದನ್ನು ಯಾಕೆ ಸೇವಿಸಬೇಕು ಅನ್ನೋದರ ಸಂಪೂರ್ಣ ಮಾಹಿತಿ ಇಲ್ಲಿದೆ..

ಮೊಳಕೆ ಬಂದ ಹೆಸರು ಕಾಳಿನ ಲಾಭಗಳೇನು?

1. ಜೀರ್ಣಶಕ್ತಿ ವೃದ್ಧಿಸುತ್ತೆ
ಹೆಸರು ಕಾಳನ್ನು ನೀರಿನಲ್ಲಿ ನೆನಸಿಟ್ಟು, ಬಳಿಕ ಮೊಳಕೆ ಬಂದ ಮೇಲೆ ಸೇವಿಸುವುದರಿಂದ ಜೀರ್ಣಶಕ್ತಿ ಉತ್ತಮವಾಗುತ್ತೆ. ಇದರಲ್ಲಿರೋ ಪೌಷ್ಟಿಕಾಂಶ ಜೀರ್ಣಕ್ರಿಯೆಯನ್ನು ಸರಾಗ ಮಾಡುತ್ತದೆ. ಅಲ್ಲದೆ ಫೈಬರ್ ಅಂಶವು ದೇಹದಲ್ಲಿ ಆಹಾರದ ಸಂಚಾರ ಸರಿಯಾಗಿ ಆಗುವಂತೆ ನೋಡಿಕೊಂಡು ಮಲಬದ್ಧತೆ ತೊಂದರೆಯನ್ನು ನಿವಾರಿಸುತ್ತದೆ.

2. ಹೃದಯದ ಆರೋಗ್ಯ ಕಾಪಾಡುತ್ತೆ
ಮೊಳಕೆ ಬಂದ ಹೆಸರು ಕಾಳು ತಿನ್ನುವುದರಿಂದ ಹೃದಯದ ಆರೋಗ್ಯ ಉತ್ತಮವಾಗುತ್ತದೆ. ಇದರಲ್ಲಿರೋ ಒಮೇಗಾ ಫ್ಯಾಟೀ ಆಸಿಡ್ ದೇಹಕ್ಕೆ ಬೇಕಾದ ಒಳ್ಳೆಯ ಕೊಬ್ಬಿನ ಅಂಶ ನೀಡಿ ರಕ್ತನಾಳದ ಆರೋಗ್ಯ ಕಾಪಾಡುತ್ತೆ. ಇದರಲ್ಲಿನ ಆಂಟಿ ಇನ್ಪ್ಲಮೇಟರಿ ಗುಣ ರಕ್ತನಾಳಗಳ ಮೇಲಿರೋ ಒತ್ತಡವನ್ನೂ ಕಡಿಮೆ ಮಾಡುತ್ತದೆ. ರಕ್ತದ ಸಂಚಾರ ಹೆಚ್ಚಿಸಿ ದೇಹಕ್ಕೆ ಹೆಚ್ಚು ಆಕ್ಸಿಜನ್ ಸಿಗುವ ಹಾಗೆ ಮಾಡಿ ಸ್ಟ್ರೋಕ್ ಹಾಗೂ ಹೃದಯಾಘಾತ ಆಗದಂತೆ ನೋಡಿಕೊಳ್ಳುತ್ತದೆ.

3. ರೋಗ ನಿರೋಧಕ ಶಕ್ತಿ ಹೆಚ್ಚಿಸುತ್ತದೆ
ಇದರಲ್ಲಿರುವ ವಿಟಮಿನ್ ಸಿ ದೇಹಕ್ಕೆ ಇನ್ಫೆಕ್ಷನ್ ಆಗೋದನ್ನ ತಡೆಯುತ್ತದೆ. ಇದರ ಜೊತೆ ವಿಟಮಿನ್ ಎ ಅಂಶ ಕೂಡ ಹೆಚ್ಚಾಗಿ ಇರೋದ್ರಿಂದ ದೇಹಕ್ಕೆ ಹೆಚ್ಚಿನ ಆಂಟಿ ಆಕ್ಸಿಡೆಂಟ್ಸ್ ಸಿಗುವ ರೀತಿ ನಿಗಾವಹಿಸಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.

4. ಕ್ಯಾನ್ಸರ್ ಬಾರದ ಹಾಗೆ ನೋಡಿಕೊಳ್ಳುತ್ತದೆ
ವಿಟಮಿನ್ ಎ, ಸಿ, ಅಮಿನೋ ಆಸಿಡ್ಸ್ ಹಾಗೂ ಪ್ರೋಟಿನ್ ಅಂಶ ದೇಹದಲ್ಲಿ ಫ್ರೀ ರಾಡಿಕಲ್ಸ್ ಸೇರದ ಹಾಗೆ ನೋಡಿಕೊಳ್ಳುತ್ತದೆ. ದೇಹದಲ್ಲಿ ಆಗುವ ಹಲವಾರು ಕ್ರಿಯೆಗಳ ಪರಿಣಾಮವಾಗಿ ಫ್ರೀ ರಾಡಿಕಲ್ಸ್ ಉತ್ಪತ್ತಿ ಆಗುತ್ತದೆ. ಇದರಿಂದ ದೇಹಕ್ಕೆ ಕ್ಯಾನ್ಸರ್ ಸೆಲ್ಸ್ ಸೇರುತ್ತದೆ. ಅಷ್ಟೇ ಅಲ್ಲದೆ ಸಾಕಷ್ಟು ಕಾಯಿಲೆಗಳು ಬರೋದಕ್ಕೆ ಇದು ಕಾರಣವಾಗುತ್ತದೆ. ಬೇಗ ಸುಸ್ತಾಗೋದು, ಕಣ್ಣು ಮಂಜಾಗುವುದು, ಹೃದಯಕ್ಕೆ ಸಂಬಂಧ ಪಟ್ಟ ತೊಂದರೆ ಕಾಣಿಸಿಕೊಳ್ಳುತ್ತದೆ. ಆದ್ದರಿಂದ ಇಂತಹ ತೊಂದರೆಗಳಿಂದ ದೂರವಿರಲು ಮೊಳಕೆ ಬಂದ ಹೆಸರು ಕಾಳನ್ನು ಸೇವಿಸಬೇಕು.

5. ತೂಕ ಕಡಿಮೆ ಮಾಡುತ್ತದೆ ಹಾಗೂ ತ್ವಚೆಯ ಆರೋಗ್ಯ ಕಾಪಾಡುತ್ತೆ
ಮೊಳಕೆ ಬಂದ ಹೆಸರು ಕಾಳಿನಲ್ಲಿ ಕ್ಯಾಲೋರೀಸ್ ಇಲ್ಲದ ಕಾರಣ ಇದನ್ನು ಎಷ್ಟು ತಿಂದರೂ ತೂಕ ಹೆಚ್ಚಾಗಲ್ಲ. ಬದಲಾಗಿ ತೂಕ ಕಡಿಮೆ ಆಗುತ್ತೆ. ಮೊಳಕೆ ಬಂದ ಹೆಸರು ಕಾಳನ್ನು ತಿನ್ನುವುದರಿಂದ ಇದರಲ್ಲಿರೋ ಫೈಬರ್ ನಿಮ್ಮ ದೇಹಕ್ಕೆ ಸೇರಿ ಹೊಟ್ಟೆ ತುಂಬುವ ಹಾಗೆ ಮಾಡುತ್ತೆ. ಆದರ ಜೊತೆ ಪದೇ ಪದೇ ಹಸಿವಾಗದ ರೀತಿ ನೋಡಿಕೊಳ್ಳುತ್ತದೆ. ಹಾಗೆಯೇ ಸ್ಥೂಲಕಾಯ ಮತ್ತು ಮಧುಮೇಹ ಕಾಯಿಲೆ ಬಾರದಂತೆ ನೋಡಿಕೊಳ್ಳುತ್ತದೆ. ಪ್ರತಿನಿತ್ಯ ಹೆಸರು ಕಾಳನ್ನು ತಿನ್ನುವುದರಿಂದ ತ್ವಚೆಯ ಆರೋಗ್ಯ ಕೂಡ ಚೆನ್ನಾಗಿರುತ್ತದೆ. ಅಲ್ಲದೆ ತ್ವಚೆಗೆ ಕಾಂತಿಯನ್ನು ನೀಡುತ್ತದೆ. ಇದರಿಂದ ಆಕರ್ಷಕ ಸೌಂದರ್ಯವನ್ನು ಕೂಡ ನೀವು ಪಡೆಯಬಹುದು.

ದುಬಾರಿ ಔಷಧಿಗಳ ಮೊರೆ ಹೋಗುವ ಬದಲು ಮೊಳಕೆ ಬಂದ ಕಾಳನ್ನು ಸೇವನೆ ಮಾಡುವುದು ಉತ್ತಮ. ಹೀಗಾಗಿ ಮೊಳಕೆ ಬಂದ ಕಾಳನ್ನು ಸೇವಿಸಿ ನಿಮ್ಮ ಆರೋಗ್ಯವನ್ನು ವೃದ್ಧಿಸಿಕೊಳ್ಳುವುದು ಒಳಿತು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • KOLAR NEWS PAPER

    ಯೋಗಥಾನ್ ಕಾರ್ಯಕ್ರಮ: ಪೂರ್ವ ಸಿದ್ಧತೆ ಪರಿಶೀಲನೆ

    ಜಿಲ್ಲೆಯಲ್ಲಿ ಜನವರಿ 15 ರಂದು ಬೆಳಿಗ್ಗೆ 6.00 ಗಂಟೆಗೆ ಕೋಲಾರ ನಗರದ ಸರ್ ಎಂ.ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಜಿಲ್ಲಾ ಮಟ್ಟದ ಯೋಗಥಾನ್ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮದ ಪೂರ್ವ ಸಿದ್ಧತೆಯನ್ನು ಹಾಗೂ ಯೋಗ ತಾಲೀಮು ಪರಿಶೀಲಿಸಿ ಎಲ್ಲಾ ವ್ಯವಸ್ಥೆಗಳು ಸರಿಯಾಗಿವೆಯೇ ಎಂದು ಖುದ್ದು ಜಿಲ್ಲಾಧಿಕಾರಿಗಳಾದ ವೆಂಕಟ್ ರಾಜಾ ಅವರು ಇಂದು ಪರಿಶೀಲನೆ ನಡೆಸಿದರು. 15ನೇ ಜನವರಿಯಂದು ಜಿಲ್ಲಾ ಮಟ್ಟದಲ್ಲಿ ನಡೆಯುವ ಯೋಗಥಾನ್ ಕಾರ್ಯಕ್ರಮದಲ್ಲಿ ಜಿಲ್ಲೆಯ ಆಯ್ದ ಶಾಲಾ ವಿದ್ಯಾರ್ಥಿಗಳು, ದೈಹಿಕ ಶಿಕ್ಷಕರು, ಯೋಗಪಟುಗಳು ಸೇರಿದಂತೆ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ…

  • ಜ್ಯೋತಿಷ್ಯ

    ನಿತ್ಯ ಭವಿಷ್ಯ ಶನಿವಾರ, ಈ ದಿನದ ರಾಶಿ ಭವಿಷ್ಯದಲ್ಲಿ ಈ ರಾಶಿಗಳಿಗಿದೆ ವಿಪೀತ ಧನಲಾಭ..!ಇದ್ರಲ್ಲಿ ನಿಮ್ಮ ರಾಶಿಯೂ ಇದೆಯಾ ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ(1 ಡಿಸೆಂಬರ್, 2018) ನೀವು ಅತ್ಯಂತ ಅನಿರೀಕ್ಷಿತ ಮೂಲಗಳಿಂದಗಳಿಕೆಯ ಸಾಧ್ಯತೆಯನ್ನು ಹೊಂದಿದ್ದೀರಿ. ನಿಮ್ಮ ಸಂಗಾತಿ ಬೆಂಬಲ ನೀಡುತ್ತಾರೆ ಹಾಗೂ ಸಹಾಯ ಮಾಡುತ್ತಾರೆ. ಪ್ರೀತಿ…

  • ಆರೋಗ್ಯ

    ಚಳ್ಳೆ ಹಣ್ಣನ್ನು ತಿಂದಿದೀರಾ, ಈ ಚಳ್ಳೆಹಣ್ಣಿನ ಔಷಧಿಯ ಗುಣಗಳು ಹಲವು ಜನರಿಗೆ ತಿಳಿದಿಲ್ಲ, ಈ ಮಾಹಿತಿ ನೋಡಿ.!

    ಈ ಹಣ್ಣನ್ನು ಸಾಮಾನ್ಯವಾಗಿ ಕೆಲವರು ತಿನ್ನುತ್ತಿರುತ್ತಾರೆ, ಗ್ರಾಮೀಣ ಪ್ರದೇಶದ ಜನರಿಗೆ ಹೆಚ್ಚು ಚಿರಪರಿಚಿತ, ಸಾಮಾನ್ಯವಾಗಿ ಈ ಹಣ್ಣು  ಇದರ ಹೆಸರು ಚಳ್ಳೆಹಣ್ಣು ಎಂಬುದಾಗಿ ಇದನ್ನು ಅಡುಗೆಗೆ ಹಾಗೂ ಮತ್ತಿತರ ಕೆಲಸಕ್ಕೆ ಹಾಗೂ ಮನೆಮದ್ದುಗಳಿಗೆ ಔಷಧಿಯಾಗಿ ಕೂಡ ಬಳಸಲಾಗುತ್ತದೆ. ಅದ್ರಲ್ಲೂ ಇದರ ಉಪ್ಪಿನ ಕಾಯಿ ಸೇವನೆ ಅತಿ ಹೆಚ್ಚು ಬಳಕೆಯಲ್ಲಿದೆ ಕೆಲವು ಕಡೆ. ಈ ಚಳ್ಳೆಹಣ್ಣು ಯಾವೆಲ್ಲ ಉಪಯೋಗಕಾರಿ ಅಂಶಗಳನ್ನು ಹೊಂದಿದೆ ಹಾಗೂ ಇದರಿಂದ ದೇಹಕ್ಕೆ ಯಾವೆಲ್ಲ ಆರೋಗ್ಯಕಾರಿ ಅಂಶಗಳನ್ನು ಪಡೆಯಬಹುದಾಗಿದೆ,ಹಾಗೂ ಇದರ ಬಳಕೆಯನ್ನು ಹೇಗೆ ಮಾಡಬಹುದು ಯಾವ…

  • ರಾಜಕೀಯ

    ನೆಹರೂ, ಇಂದಿರಾಗಾಂಧಿ ನಂತರ ಸ್ಪಷ್ಟ ಬಹುಮತ ಪಡೆದ ಮೊದಲ ಪ್ರಧಾನಿ ನರೇಂದ್ರ ಮೋದಿ…!

    ಈ ಬಾರಿ ಲೋಕಸಭಾ ಚುನಾವಣೆಯಲ್ಲಿ 302 ಸ್ಥಾನಗಳನ್ನು ಪಡೆದು ಸ್ಪಷ್ಟ ಬಹುಮತದೊಂದಿಗೆ ಮತ್ತೆ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದೆ. ಈ ಮೂಲಕ ಮಾಜಿ ಪ್ರಧಾನಿಗಳಾದ ದಿವಂಗತ ಜವಹರ್ ಲಾಲ್ ನೆಹರೂ ಹಾಗೂ ಇಂದಿರಾ ಗಾಂಧಿ ಬಳಿಕ ಸ್ಪಷ್ಟ ಬಹುಮತದೊಂದಿಗೆ ಅಧಿಕಾರ ಪಡೆಯುತ್ತಿರುವ ಮೊದಲ ಪ್ರಧಾನಿ ಎಂಬ ಹೆಗ್ಗಳಿಕೆಗೆ ನರೇಂದ್ರ ಮೋದಿ ಅವರು ಪಾತ್ರರಾಗಿದ್ದಾರೆ. ಹೌದು. 48 ವರ್ಷಗಳ ಬಳಿಕ ಸ್ಪಷ್ಟ ಬಹುಮತದ ಬಳಿಕ ಮೋದಿ ಅವರು ಮತ್ತೆ ಅಧಿಕಾರದ ಚುಕ್ಕಾಣಿ ಹಿಡಿದಿದ್ದಾರೆ. ದೇಶದೆಲ್ಲೆಡೆ ಎದ್ದಿದ್ದ ಮೋದಿ ಸುನಾಮಿಗೆ…

  • ಕವಿ

    ಜ್ಞಾನಪೀಠ ಪ್ರಶಸ್ತಿ ಪಡೆದ ಶಿವರಾಮ ಕಾರಂತ ಬಗ್ಗೆ ನಿಮ್ಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ಶಿವರಾಮ ಕಾರಂತ (ಅಕ್ಟೋಬರ್ 10, 19೦6-ಸೆಪ್ಟೆಂಬರ್ 16, 1997)- “ಕಡಲತೀರದ ಭಾರ್ಗವ”, “ನಡೆದಾಡುವ ವಿಶ್ವಕೋಶ” ಎಂದೇ ಖ್ಯಾತರಾಗಿದ್ದ ಕನ್ನಡ ಸಾಹಿತ್ಯ-ಸಂಸ್ಕೃತಿಯ ವಕ್ತಾರ, ಕವಿ, ಕಾದಂಬರಿಕಾರ, ನಾಟಕಕಾರ, ಅನುವಾದಕ, ವೈಜ್ಞಾನಿಕ ಬರಹಗಾರ. ಆಡುಮುಟ್ಟದ ಸೊಪ್ಪಿಲ್ಲ. ಹಾಗೇಯೆ ಕಾರಂತರು ಬರೆಯದ ಸಾಹಿತ್ಯ ಪ್ರಕಾರವೇ ಇಲ್ಲವೆನ್ನಲಾಗಿದೆ. ವಿಶ್ವ ವಿದ್ಯಾನಿಲಯಗಳಲ್ಲಿ ಪದವಿ, ಸ್ನಾತಕೋತ್ತರ ಪದವಿ ಪಡೆದಿಲ್ಲದಿದ್ದರೂ, ಅವರ ಸಾಹಿತ್ಯ ಪರಿಶ್ರಮ ಅಪಾರವಾದುದು. ಜ್ಞಾನಪೀಠ, ಪದ್ಮಭೂಷಣ, ಪಂಪ ಪ್ರಶಸ್ತಿ, ನಾಡೋಜ ಪುರಸ್ಕಾರ, ಎಂಟು ವಿಶ್ವವಿದ್ಯಾಲಯಗಳು ಗೌರವ ಡಾಕ್ಟರೇಟ್‌ಗಳನ್ನಿತ್ತು ಪುರಸ್ಕರಿಸಿವೆ.   ಜೀವನ:- ಜ್ಞಾನಪೀಠಪುರಸ್ಕೃತ ಡಾ. ಶಿವರಾಮ ಕಾರಂತರು ಹುಟ್ಟಿದ್ದು ಉಡುಪಿ ಜಿಲ್ಲೆಯ ಕೋಟದಲ್ಲಿ ೧೯೦೨, ಅಕ್ಟೋಬರ್ ೧೦ರಂದು. ಒಂದು ಶತಮಾನಕ್ಕೆ ನಾಲ್ಕು ವರ್ಷಗಳಷ್ಟೇ…

  • ಆರೋಗ್ಯ

    ನರುಲಿಗಳನ್ನು ನಿವಾರಿಸಲು ಇಲ್ಲಿವೆ ಸುಲಭದ ಉಪಾಯಗಳು..!ತಿಳಿಯಲು ಈ ಲೇಖನ ಓದಿ …

    ವಾರ್ಟ್ ಅಥವಾ ನರುಲಿಗಳು ವೈರಲ್ ಸೋಂಕುಗಳಿಂದ ಉಂಟಾಗುತ್ತವೆ. ಈ ಗಂಟುಗಳು ದೇಹದ ಯಾವುದೇ ಭಾಗದ ಚರ್ಮದ ಹೊರಪದರದ ಮೇಲೆ ಕಾಣಿಸಿಕೊಳ್ಳುತ್ತವೆ.