News

ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ
ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ನೌಕರ ಸಂಘಟನೆಗಳ ಅಸಮಾಧಾನ
ಇತ್ತ ದುಡ್ಡು ಹೋಯ್ತು ಅತ್ತ ಮನೆಯೂ ಇಲ್ಲ; ಸ್ಲಂ ಬೋಡ್೯ ನಂಬಿ ಬೀದಿಗೆ ಬಿದ್ದ ನಿರಾಶ್ರಿತರು
ಚೀನಾದಲ್ಲೇ ಚೀನಾವನ್ನು ಮಣಿಸಿ ಚಿನ್ನ ಗೆದ್ದ ದೀಪಿಕಾ-ಅಂಕಿತಾ-ಕುಂಕುಮ್!
ಸ್ಮಾರ್ಟ್‌ಫೋನ್‌ ಬಳಕೆಯಿಂದಾಗಿ ಗಂಡ-ಹೆಂಡತಿ ಮಧ್ಯೆ ಬಿರುಕು
ಆರೋಗ್ಯ

ಮೊಳಕೆ ಬಂದ ಹೆಸರು ಕಾಳಿನ ಲಾಭಗಳೇನು? ಈ ಅರೋಗ್ಯ ಮಾಹಿತಿ ನೋಡಿ.

556

ಬ್ಯುಸಿ ಜೀವನ ಶೈಲಿಯಲ್ಲಿ ನಮ್ಮ ಆರೋಗ್ಯದ ಬಗ್ಗೆ ಕಾಳಜಿ ತೋರಿಸೋಕೆ ಸಮಯ ಸಿಗ್ತಿಲ್ಲ. ಅದರಲ್ಲೂ ಇತ್ತೀಚಿನ ಕಾಲಘಟ್ಟದಲ್ಲಿ ಆರೋಗ್ಯಕರ ಆಹಾರಕ್ಕಿಂತ ಫಾಸ್ಟ್ ಫುಡ್‍ಗಳ ಹಾವಳಿಯೇ ಹೆಚ್ಚಾಗಿದೆ. ಆದ್ದರಿಂದ ಆರೋಗ್ಯಕರ ಆಹಾರಗಳು ಯಾವುದು? ಅದರ ಲಾಭಗಳೇನು..? ಎನ್ನುವ ವಿಷಯವೇ ಅನೇಕರಿಗೆ ತಿಳಿದಿಲ್ಲ. ಫಾಸ್ಟ್ ಫುಡ್ಸ್ ಗಳ ರುಚಿಗೆ ಮನಸೋತ ಮಂದಿಗೆ ಅದರಿಂದ ಅಷ್ಟೇ ಫಾಸ್ಟಾಗಿ ಆಗುವ ದುಷ್ಪರಿಣಾಮಗಳ ಬಗ್ಗೆ ತಿಳಿದಿರಲ್ಲ.

ಹೌದು, ಇಂತಹ ಆರೋಗ್ಯಕ್ಕೆ ಮಾರಕವಾದ ಜೀವನ ಶೈಲಿಯ ಮಧ್ಯೆ ಆರೋಗ್ಯಕರ ಆಹಾರಗಳನ್ನು ಜನ ಮರೆತಿದ್ದಾರೆ. ಸೊಪ್ಪು ತರಕಾರಿ, ಕಾಳುಗಳು ಆರೋಗ್ಯ ವೃದ್ಧಿಸುವಲ್ಲಿ ತುಂಬಾ ಉಪಯುಕ್ತ. ಅದರಲ್ಲೂ ಮೊಳಕೆ ಬಂದ ಕಾಳುಗಳ ಸೇವನೆಯಿಂದ ಎಷ್ಟು ಲಾಭ ಎನ್ನುವುದು ಹಲವರಿಗೆ ಗೊತ್ತಿರಲ್ಲ. ಕಾಳುಗಳನ್ನು ಹಾಗೆಯೇ ತಿನ್ನುವುದಕ್ಕಿಂತ ಅದನ್ನು ನೀರಲ್ಲಿ ನೆನಸಿಟ್ಟು, ಮೊಳಕೆ ಬಂದ ಮೇಲೆ ತಿಂದ್ರೆ ಅದರಲ್ಲಿ ಪೌಷ್ಟಿಕಾಂಶ ಜಾಸ್ತಿ ಇರುತ್ತದೆ. ಮೊಳಕೆ ಒಡೆದ ಕಾಳುಗಳನ್ನು ಬೇಯಿಸಿ ತಿನ್ನುವುದಕ್ಕಿಂದ ಹಸಿಯಾಗಿಯೇ ಸೇವಿಸುವುದು ಉತ್ತಮ. ಯಾಕೆಂದರೆ ಮೊಳಕೆ ಕಾಳುಗಳನ್ನು ಬೇಯಿಸಿದಾಗ ಅದರ ಪೌಷ್ಟಿಕತೆ ದೇಹಕ್ಕೆ ಸಿಗಲ್ಲ. ಮೊಳಕೆ ಕಾಳಲ್ಲಿ ಪ್ರೋಟಿನ್, ಫೈಬರ್, ವಿಟಮಿನ್ಸ್, ಕಬ್ಬಿಣದ ಅಂಶ, ಕ್ಯಾಲ್ಸಿಯಂ ಹೀಗೆ ದೇಹಕ್ಕೆ ಬೇಕಾದ ಆರೋಗ್ಯಕರ ಅಂಶಗಳು ಇರುತ್ತದೆ. ಆದ್ದರಿಂದ ಮೊಳಕೆ ಕಾಳು ದೇಹಕ್ಕೆ ಒಳ್ಳೆಯದು.

ಅನೇಕ ಅದ್ಭುತ ಲಾಭಗಳನ್ನು ತನ್ನೊಳಗೆ ಅಡಗಿಸಿಕೊಂಡಿರೋ ಮೊಳಕೆ ಕಾಳುಗಳಲ್ಲಿ ಮೊಳಕೆ ಒಡೆದ ಹೆಸರು ಕಾಳು ಒಂದು. ಈ ಮೊಳಕೆ ಒಡೆದ ಹೆಸರು ಕಾಳು ಆರೋಗ್ಯಕ್ಕೆ ಎಷ್ಟು ಉಪಯುಕ್ತ? ಅದರ ಲಾಭಗಳೇನು? ಅದನ್ನು ಯಾಕೆ ಸೇವಿಸಬೇಕು ಅನ್ನೋದರ ಸಂಪೂರ್ಣ ಮಾಹಿತಿ ಇಲ್ಲಿದೆ..

ಮೊಳಕೆ ಬಂದ ಹೆಸರು ಕಾಳಿನ ಲಾಭಗಳೇನು?

1. ಜೀರ್ಣಶಕ್ತಿ ವೃದ್ಧಿಸುತ್ತೆ
ಹೆಸರು ಕಾಳನ್ನು ನೀರಿನಲ್ಲಿ ನೆನಸಿಟ್ಟು, ಬಳಿಕ ಮೊಳಕೆ ಬಂದ ಮೇಲೆ ಸೇವಿಸುವುದರಿಂದ ಜೀರ್ಣಶಕ್ತಿ ಉತ್ತಮವಾಗುತ್ತೆ. ಇದರಲ್ಲಿರೋ ಪೌಷ್ಟಿಕಾಂಶ ಜೀರ್ಣಕ್ರಿಯೆಯನ್ನು ಸರಾಗ ಮಾಡುತ್ತದೆ. ಅಲ್ಲದೆ ಫೈಬರ್ ಅಂಶವು ದೇಹದಲ್ಲಿ ಆಹಾರದ ಸಂಚಾರ ಸರಿಯಾಗಿ ಆಗುವಂತೆ ನೋಡಿಕೊಂಡು ಮಲಬದ್ಧತೆ ತೊಂದರೆಯನ್ನು ನಿವಾರಿಸುತ್ತದೆ.

2. ಹೃದಯದ ಆರೋಗ್ಯ ಕಾಪಾಡುತ್ತೆ
ಮೊಳಕೆ ಬಂದ ಹೆಸರು ಕಾಳು ತಿನ್ನುವುದರಿಂದ ಹೃದಯದ ಆರೋಗ್ಯ ಉತ್ತಮವಾಗುತ್ತದೆ. ಇದರಲ್ಲಿರೋ ಒಮೇಗಾ ಫ್ಯಾಟೀ ಆಸಿಡ್ ದೇಹಕ್ಕೆ ಬೇಕಾದ ಒಳ್ಳೆಯ ಕೊಬ್ಬಿನ ಅಂಶ ನೀಡಿ ರಕ್ತನಾಳದ ಆರೋಗ್ಯ ಕಾಪಾಡುತ್ತೆ. ಇದರಲ್ಲಿನ ಆಂಟಿ ಇನ್ಪ್ಲಮೇಟರಿ ಗುಣ ರಕ್ತನಾಳಗಳ ಮೇಲಿರೋ ಒತ್ತಡವನ್ನೂ ಕಡಿಮೆ ಮಾಡುತ್ತದೆ. ರಕ್ತದ ಸಂಚಾರ ಹೆಚ್ಚಿಸಿ ದೇಹಕ್ಕೆ ಹೆಚ್ಚು ಆಕ್ಸಿಜನ್ ಸಿಗುವ ಹಾಗೆ ಮಾಡಿ ಸ್ಟ್ರೋಕ್ ಹಾಗೂ ಹೃದಯಾಘಾತ ಆಗದಂತೆ ನೋಡಿಕೊಳ್ಳುತ್ತದೆ.

3. ರೋಗ ನಿರೋಧಕ ಶಕ್ತಿ ಹೆಚ್ಚಿಸುತ್ತದೆ
ಇದರಲ್ಲಿರುವ ವಿಟಮಿನ್ ಸಿ ದೇಹಕ್ಕೆ ಇನ್ಫೆಕ್ಷನ್ ಆಗೋದನ್ನ ತಡೆಯುತ್ತದೆ. ಇದರ ಜೊತೆ ವಿಟಮಿನ್ ಎ ಅಂಶ ಕೂಡ ಹೆಚ್ಚಾಗಿ ಇರೋದ್ರಿಂದ ದೇಹಕ್ಕೆ ಹೆಚ್ಚಿನ ಆಂಟಿ ಆಕ್ಸಿಡೆಂಟ್ಸ್ ಸಿಗುವ ರೀತಿ ನಿಗಾವಹಿಸಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.

4. ಕ್ಯಾನ್ಸರ್ ಬಾರದ ಹಾಗೆ ನೋಡಿಕೊಳ್ಳುತ್ತದೆ
ವಿಟಮಿನ್ ಎ, ಸಿ, ಅಮಿನೋ ಆಸಿಡ್ಸ್ ಹಾಗೂ ಪ್ರೋಟಿನ್ ಅಂಶ ದೇಹದಲ್ಲಿ ಫ್ರೀ ರಾಡಿಕಲ್ಸ್ ಸೇರದ ಹಾಗೆ ನೋಡಿಕೊಳ್ಳುತ್ತದೆ. ದೇಹದಲ್ಲಿ ಆಗುವ ಹಲವಾರು ಕ್ರಿಯೆಗಳ ಪರಿಣಾಮವಾಗಿ ಫ್ರೀ ರಾಡಿಕಲ್ಸ್ ಉತ್ಪತ್ತಿ ಆಗುತ್ತದೆ. ಇದರಿಂದ ದೇಹಕ್ಕೆ ಕ್ಯಾನ್ಸರ್ ಸೆಲ್ಸ್ ಸೇರುತ್ತದೆ. ಅಷ್ಟೇ ಅಲ್ಲದೆ ಸಾಕಷ್ಟು ಕಾಯಿಲೆಗಳು ಬರೋದಕ್ಕೆ ಇದು ಕಾರಣವಾಗುತ್ತದೆ. ಬೇಗ ಸುಸ್ತಾಗೋದು, ಕಣ್ಣು ಮಂಜಾಗುವುದು, ಹೃದಯಕ್ಕೆ ಸಂಬಂಧ ಪಟ್ಟ ತೊಂದರೆ ಕಾಣಿಸಿಕೊಳ್ಳುತ್ತದೆ. ಆದ್ದರಿಂದ ಇಂತಹ ತೊಂದರೆಗಳಿಂದ ದೂರವಿರಲು ಮೊಳಕೆ ಬಂದ ಹೆಸರು ಕಾಳನ್ನು ಸೇವಿಸಬೇಕು.

5. ತೂಕ ಕಡಿಮೆ ಮಾಡುತ್ತದೆ ಹಾಗೂ ತ್ವಚೆಯ ಆರೋಗ್ಯ ಕಾಪಾಡುತ್ತೆ
ಮೊಳಕೆ ಬಂದ ಹೆಸರು ಕಾಳಿನಲ್ಲಿ ಕ್ಯಾಲೋರೀಸ್ ಇಲ್ಲದ ಕಾರಣ ಇದನ್ನು ಎಷ್ಟು ತಿಂದರೂ ತೂಕ ಹೆಚ್ಚಾಗಲ್ಲ. ಬದಲಾಗಿ ತೂಕ ಕಡಿಮೆ ಆಗುತ್ತೆ. ಮೊಳಕೆ ಬಂದ ಹೆಸರು ಕಾಳನ್ನು ತಿನ್ನುವುದರಿಂದ ಇದರಲ್ಲಿರೋ ಫೈಬರ್ ನಿಮ್ಮ ದೇಹಕ್ಕೆ ಸೇರಿ ಹೊಟ್ಟೆ ತುಂಬುವ ಹಾಗೆ ಮಾಡುತ್ತೆ. ಆದರ ಜೊತೆ ಪದೇ ಪದೇ ಹಸಿವಾಗದ ರೀತಿ ನೋಡಿಕೊಳ್ಳುತ್ತದೆ. ಹಾಗೆಯೇ ಸ್ಥೂಲಕಾಯ ಮತ್ತು ಮಧುಮೇಹ ಕಾಯಿಲೆ ಬಾರದಂತೆ ನೋಡಿಕೊಳ್ಳುತ್ತದೆ. ಪ್ರತಿನಿತ್ಯ ಹೆಸರು ಕಾಳನ್ನು ತಿನ್ನುವುದರಿಂದ ತ್ವಚೆಯ ಆರೋಗ್ಯ ಕೂಡ ಚೆನ್ನಾಗಿರುತ್ತದೆ. ಅಲ್ಲದೆ ತ್ವಚೆಗೆ ಕಾಂತಿಯನ್ನು ನೀಡುತ್ತದೆ. ಇದರಿಂದ ಆಕರ್ಷಕ ಸೌಂದರ್ಯವನ್ನು ಕೂಡ ನೀವು ಪಡೆಯಬಹುದು.

ದುಬಾರಿ ಔಷಧಿಗಳ ಮೊರೆ ಹೋಗುವ ಬದಲು ಮೊಳಕೆ ಬಂದ ಕಾಳನ್ನು ಸೇವನೆ ಮಾಡುವುದು ಉತ್ತಮ. ಹೀಗಾಗಿ ಮೊಳಕೆ ಬಂದ ಕಾಳನ್ನು ಸೇವಿಸಿ ನಿಮ್ಮ ಆರೋಗ್ಯವನ್ನು ವೃದ್ಧಿಸಿಕೊಳ್ಳುವುದು ಒಳಿತು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ

    ಬಿಚ್ಚಮ್ಮ ಸನ್ನಿ ಲಿಯೋನ್ ಮೇಲೆ ಎಫ್‍ಐಆರ್!ಅಸಲಿ ಕಾರಣ ಏನು ಗೊತ್ತಾ?

    ಇತ್ತೀಚೆಗಷ್ಟೇ ಜೂನಿಯರ್ ಇಂಜಿನಿಯರ್ ಲಿಸ್ಟ್ ನಲ್ಲಿ ಟಾಪರ್ ಆಗಿ ಆಯ್ಕೆ ಆಗಿದ್ದ ಸನ್ನಿ ಲಿಯೋನ್ ವಿರುದ್ಧ ಈಗ ಎಫ್‍ಐಆರ್ ದಾಖಲಾಗಿದೆ. ಆದರೆ ಈ ಬಗ್ಗೆ ಸನ್ನಿ ಲಿಯೋನ್ ಅಭಿಮಾನಿಗಳು ಬೇಸರಗೊಳ್ಳುವ ಅಗತ್ಯವಿಲ್ಲ. ಏಕೆಂದರೆ ಕೇಸ್ ದಾಖಲಾಗಿರುವುದು “ಸನ್ನಿ ಲಿಯೋನ್” ಹೆಸರಿನಲ್ಲಿ ನಕಲಿ ದಾಖಲೆ ಸಲ್ಲಿಸಿ ಆಯ್ಕೆ ಆಗಿರುವ ಅಭ್ಯರ್ಥಿ ಮೇಲೆ. ಬಿಹಾರದ ಪಬ್ಲಿಕ್ ಹೆಲ್ತ್ ಇಂಜಿನಿಯರಿಂಗ್ ಡಿಪಾರ್ಟ್‍ಮೆಂಟ್ (ಪಿಎಚ್‍ಇಡಿ)ನ ಜೂನಿಯರ್ ಇಂಜಿನಿಯರ್ ಮೆರಿಟ್ ಲಿಸ್ಟ್ ನಲ್ಲಿ ಸನ್ನಿ ಲಿಯೋನ್ ಹೆಸರು ಟಾಪರ್ ಸ್ಥಾನದಲ್ಲಿತ್ತು. ಆಕೆ ಶೇ. 98.50…

  • ಸುದ್ದಿ

    ಜ್ಯೋತಿಷಿಗಳು ಹೇಳಿದ ಸಮಯದಲ್ಲೇ ಮಂಡ್ಯಕ್ಕೆ ಅಭ್ಯರ್ಥಿಯನ್ನು ಘೋಷಣೆ ಮಾಡಿದ ಜೆಡಿಯಸ್!

    ಮಂಡ್ಯದಲ್ಲಿ ನಡೆಯುತ್ತಿರುವ ಜೆಡಿಎಸ್ ಸಮಾವೇಶದಲ್ಲಿ ಸಾರಿಗೆ ಸಚಿವ ಡಿ ಸಿ ತಮ್ಮಣ್ಣ ಅವರು ಮಂಡ್ಯ ಲೋಕಸಭಾ ಕ್ಷೇತ್ರದ ಜೆಡಿಎಸ್‌ ಶಾಸಕರ ಸಮ್ಮುಖದಲ್ಲಿ ನಿಖಿಲ್‌ ಕುಮಾರಸ್ವಾಮಿ ಅವರ ಹೆಸರನ್ನು ಘೋಷಿಸಿದ್ದಾರೆ. ಅದರಲ್ಲೂ ವಾಸ್ತು, ಜೋತಿಷ್ಯಗಳಲ್ಲಿ ಹೆಚ್ಚು ನಂಬಿಕೆ ಇಟ್ಟಿರುವ ದೇವೇಗೌಡ ಕುಟುಂಬದವರು ಇಂದು ಶುಭ ಲಗ್ನವನ್ನು ನೋಡಿಕೊಂಡು ನಿಖಿಲ್ ಮಂಡ್ಯದ ಅಧಿಕೃತ ಜೆಡಿಎಸ್ ಅಭ್ಯರ್ಥಿ ಎಂದು ಘೋಷಣೆ ಮಾಡಿದ್ದಾರೆ.ಹೆಸರು ಘೋಷಣೆ ಮಾಡಿದ ನಂತರ ಮಧ್ಯಾಹ್ನ 12:01ಕ್ಕೆ ನಿಖಿಲ್ ವೇದಿಕೆ ಮೇಲೆ ಬಂದಿದ್ದಾರೆ. ರಾಜಕೀಯವಾಗಿ ಏರಬೇಕು, ಬೆಳಯಬೇಕು ಎನ್ನುವ ಉದ್ದೇಶದಿಂದ…

  • ಸುದ್ದಿ

    ಸೋತ ನಂತರ ಮದ್ಯ ಸೇವಿಸಿ ನಿಖಿಲ್ ರಂಪಾಟ, ಬಯಲಾಯ್ತು ಸುದ್ದಿಯ ಅಸಲಿಯತ್ತು…!

    ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಸ್ವತಂತ್ರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರ ವಿರುದ್ಧ ಪರಾಭವಗೊಂಡ ಸಿಎಂ ಪುತ್ರ ನಿಖಿಲ್ ಕುಮಾರ್ ಬೇಸರದಲ್ಲಿ ಮದ್ಯ ಸೇವಿಸಿ ರಂಪಾಟ ಮಾಡಿದ್ದಾರೆ ಎಂದು ಸುದ್ದಿಯಾಗಿದ್ದು, ಆದರೆ ಇದು ಸುಳ್ಳು ಸುದ್ದಿ ಎಂದು ಹೇಳಲಾಗಿದೆ. ನಿಖಿಲ್ ಸೋತ ನಂತರ ಮಾಜಿ ಪ್ರಧಾನಿ ದೇವೇಗೌಡರ ಮನೆಗೆ ತೆರಳಿ ಕೂಗಾಡಿದ್ದಾರೆ. ಅಲ್ಲದೆ, ಮೈಸೂರಿನ ಹೋಟೆಲ್ ನಲ್ಲಿ ತಂಗಿದ್ದ ಅವರು ಮದ್ಯ ಸೇವಿಸಿ ರಂಪಾಟ ಮಾಡಿದ್ದಾರೆ ಎಂದು ಪತ್ರಿಕೆಯೊಂದು ವರದಿ ಮಾಡಿತ್ತು. ಇದು ಸುಳ್ಳು ಸುದ್ದಿ ಎನ್ನುವುದು ಗೊತ್ತಾಗಿದೆ….

  • ಜ್ಯೋತಿಷ್ಯ

    ದಿನ ಭವಿಷ್ಯ …..ಪಂಡಿತ್ ವಿಶ್ವರೂಪ ಆಚಾರ್ಯರವರಿಂದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ..

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ನಿಮ್ಮನ್ನು ವಿಚಲಿತಗೊಳಿಸಲು ವಿರೋಧಿಗಳು ಸನ್ನದ್ಧರಾಗಿಯೇ ಆಟ ಆಡುತ್ತಾರೆ. ಆದಷ್ಟು ಎಚ್ಚರಿಕೆಯಿಂದ ಹೆಜ್ಜೆ ಇಡಿ. ಜನತೆಗೆ ಕೈಲಾಗದ ಭರವಸೆಗಳನ್ನು ನೀಡಬೇಡಿ. ಇದರಿಂದ ಅಪಹಾಸ್ಯಕ್ಕೆ ಗುರಿಯಾಗುವಿರಿ..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ…

  • ಸುದ್ದಿ

    ‘ಪ್ರವಾಸೋದ್ಯಮ ಇಲಾಖೆಯಲ್ಲಿ 243 ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ’…!

    ಪ್ರವಾಸೋದ್ಯಮ ಇಲಾಖೆಯೂ 40 ಪ್ರಮುಖ ಪ್ರವಾಸಿ ವರ್ತುಲ ಕೇಂದ್ರಗಳನ್ನು ಗುರುತಿಸಲಾಗಿದೆ ಎಂದು ಪ್ರವಾಸೋದ್ಯಮ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸಿ.ಟಿ ರವಿ ಅವರು ಗುರುವಾರ ಹೇಳಿದರು. ವಿಕಾಸಸೌಧದಲ್ಲಿಂದು ನಡೆದ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಕರ್ನಾಟಕದಲ್ಲಿ ಪ್ರವಾಸೋದ್ಯಮಕ್ಕೆ ವಿಫಲ ಅವಕಾಶವಿದೆ, ಪ್ರಧಾನ ಮಂತ್ರಿಗಳು ದೇಶವನ್ನು ಟೂರಿಸ್ಟ್ ಹಬ್ ಮಾಡಲು ಉಲ್ಲೇಖ ಮಾಡಿದ್ದಾರೆ ಹೀಗಾಗಿ ದೇಶದ್ಯಂತ ಪ್ರಮುಖವಾಗಿ 17 ಸ್ಥಳಗಳನ್ನು ಗುರುತಿಸಿದ್ದಾರೆ ಅದರಲ್ಲಿ ಕರ್ನಾಟಕದ ಹಂಪಿ ಕೂಡ ಸೇರಿದೆ ಎಂದು ಅವರು ಮಾಹಿತಿ ನೀಡಿದರು. ಇದೇ ವಿಷಯಕ್ಕೆ…

  • karnataka, ವಿಶೇಷ ಲೇಖನ

    ನಿಮ್ಮ ಜ್ಞಾನಕ್ಕೆ ಮತ್ತಷ್ಟು ಬಲ KAS ಅಥವಾ ಕೋಟ್ಯಾದಿ ಪತಿಗೆ ಇದು ತುಂಬ ಸಹಾಯ ಮಾಡಲಿದೆ ಲೇಖನ ಓದಿ

    ನಿಮ್ಮ ಜ್ಞಾನಕ್ಕೆ ಮತ್ತಷ್ಟು ಬಲ KAS ಅಥವಾ ಕೋಟ್ಯಾದಿ ಪತಿಗೆ ಇದು ತುಂಬ ಸಹಾಯ ಮಾಡಲಿದೆ ಲೇಖನ ಓದಿ.
    ನಮ್ಮ ದೇಶದ ಸಂಪೂರ್ಣ ಮಾಹಿತಿ ಹೆಮ್ಮೆಯಿಂದ ಶೇರ್ ಮಾಡಿ ಫ್ರೆಂಡ್ಸ್