ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬ್ಯುಸಿ ಜೀವನ ಶೈಲಿಯಲ್ಲಿ ನಮ್ಮ ಆರೋಗ್ಯದ ಬಗ್ಗೆ ಕಾಳಜಿ ತೋರಿಸೋಕೆ ಸಮಯ ಸಿಗ್ತಿಲ್ಲ. ಅದರಲ್ಲೂ ಇತ್ತೀಚಿನ ಕಾಲಘಟ್ಟದಲ್ಲಿ ಆರೋಗ್ಯಕರ ಆಹಾರಕ್ಕಿಂತ ಫಾಸ್ಟ್ ಫುಡ್ಗಳ ಹಾವಳಿಯೇ ಹೆಚ್ಚಾಗಿದೆ. ಆದ್ದರಿಂದ ಆರೋಗ್ಯಕರ ಆಹಾರಗಳು ಯಾವುದು? ಅದರ ಲಾಭಗಳೇನು..? ಎನ್ನುವ ವಿಷಯವೇ ಅನೇಕರಿಗೆ ತಿಳಿದಿಲ್ಲ. ಫಾಸ್ಟ್ ಫುಡ್ಸ್ ಗಳ ರುಚಿಗೆ ಮನಸೋತ ಮಂದಿಗೆ ಅದರಿಂದ ಅಷ್ಟೇ ಫಾಸ್ಟಾಗಿ ಆಗುವ ದುಷ್ಪರಿಣಾಮಗಳ ಬಗ್ಗೆ ತಿಳಿದಿರಲ್ಲ.

ಹೌದು, ಇಂತಹ ಆರೋಗ್ಯಕ್ಕೆ ಮಾರಕವಾದ ಜೀವನ ಶೈಲಿಯ ಮಧ್ಯೆ ಆರೋಗ್ಯಕರ ಆಹಾರಗಳನ್ನು ಜನ ಮರೆತಿದ್ದಾರೆ. ಸೊಪ್ಪು ತರಕಾರಿ, ಕಾಳುಗಳು ಆರೋಗ್ಯ ವೃದ್ಧಿಸುವಲ್ಲಿ ತುಂಬಾ ಉಪಯುಕ್ತ. ಅದರಲ್ಲೂ ಮೊಳಕೆ ಬಂದ ಕಾಳುಗಳ ಸೇವನೆಯಿಂದ ಎಷ್ಟು ಲಾಭ ಎನ್ನುವುದು ಹಲವರಿಗೆ ಗೊತ್ತಿರಲ್ಲ. ಕಾಳುಗಳನ್ನು ಹಾಗೆಯೇ ತಿನ್ನುವುದಕ್ಕಿಂತ ಅದನ್ನು ನೀರಲ್ಲಿ ನೆನಸಿಟ್ಟು, ಮೊಳಕೆ ಬಂದ ಮೇಲೆ ತಿಂದ್ರೆ ಅದರಲ್ಲಿ ಪೌಷ್ಟಿಕಾಂಶ ಜಾಸ್ತಿ ಇರುತ್ತದೆ. ಮೊಳಕೆ ಒಡೆದ ಕಾಳುಗಳನ್ನು ಬೇಯಿಸಿ ತಿನ್ನುವುದಕ್ಕಿಂದ ಹಸಿಯಾಗಿಯೇ ಸೇವಿಸುವುದು ಉತ್ತಮ. ಯಾಕೆಂದರೆ ಮೊಳಕೆ ಕಾಳುಗಳನ್ನು ಬೇಯಿಸಿದಾಗ ಅದರ ಪೌಷ್ಟಿಕತೆ ದೇಹಕ್ಕೆ ಸಿಗಲ್ಲ. ಮೊಳಕೆ ಕಾಳಲ್ಲಿ ಪ್ರೋಟಿನ್, ಫೈಬರ್, ವಿಟಮಿನ್ಸ್, ಕಬ್ಬಿಣದ ಅಂಶ, ಕ್ಯಾಲ್ಸಿಯಂ ಹೀಗೆ ದೇಹಕ್ಕೆ ಬೇಕಾದ ಆರೋಗ್ಯಕರ ಅಂಶಗಳು ಇರುತ್ತದೆ. ಆದ್ದರಿಂದ ಮೊಳಕೆ ಕಾಳು ದೇಹಕ್ಕೆ ಒಳ್ಳೆಯದು.
ಅನೇಕ ಅದ್ಭುತ ಲಾಭಗಳನ್ನು ತನ್ನೊಳಗೆ ಅಡಗಿಸಿಕೊಂಡಿರೋ ಮೊಳಕೆ ಕಾಳುಗಳಲ್ಲಿ ಮೊಳಕೆ ಒಡೆದ ಹೆಸರು ಕಾಳು ಒಂದು. ಈ ಮೊಳಕೆ ಒಡೆದ ಹೆಸರು ಕಾಳು ಆರೋಗ್ಯಕ್ಕೆ ಎಷ್ಟು ಉಪಯುಕ್ತ? ಅದರ ಲಾಭಗಳೇನು? ಅದನ್ನು ಯಾಕೆ ಸೇವಿಸಬೇಕು ಅನ್ನೋದರ ಸಂಪೂರ್ಣ ಮಾಹಿತಿ ಇಲ್ಲಿದೆ..

ಮೊಳಕೆ ಬಂದ ಹೆಸರು ಕಾಳಿನ ಲಾಭಗಳೇನು?
1. ಜೀರ್ಣಶಕ್ತಿ ವೃದ್ಧಿಸುತ್ತೆ
ಹೆಸರು ಕಾಳನ್ನು ನೀರಿನಲ್ಲಿ ನೆನಸಿಟ್ಟು, ಬಳಿಕ ಮೊಳಕೆ ಬಂದ ಮೇಲೆ ಸೇವಿಸುವುದರಿಂದ ಜೀರ್ಣಶಕ್ತಿ ಉತ್ತಮವಾಗುತ್ತೆ. ಇದರಲ್ಲಿರೋ ಪೌಷ್ಟಿಕಾಂಶ ಜೀರ್ಣಕ್ರಿಯೆಯನ್ನು ಸರಾಗ ಮಾಡುತ್ತದೆ. ಅಲ್ಲದೆ ಫೈಬರ್ ಅಂಶವು ದೇಹದಲ್ಲಿ ಆಹಾರದ ಸಂಚಾರ ಸರಿಯಾಗಿ ಆಗುವಂತೆ ನೋಡಿಕೊಂಡು ಮಲಬದ್ಧತೆ ತೊಂದರೆಯನ್ನು ನಿವಾರಿಸುತ್ತದೆ.
2. ಹೃದಯದ ಆರೋಗ್ಯ ಕಾಪಾಡುತ್ತೆ
ಮೊಳಕೆ ಬಂದ ಹೆಸರು ಕಾಳು ತಿನ್ನುವುದರಿಂದ ಹೃದಯದ ಆರೋಗ್ಯ ಉತ್ತಮವಾಗುತ್ತದೆ. ಇದರಲ್ಲಿರೋ ಒಮೇಗಾ ಫ್ಯಾಟೀ ಆಸಿಡ್ ದೇಹಕ್ಕೆ ಬೇಕಾದ ಒಳ್ಳೆಯ ಕೊಬ್ಬಿನ ಅಂಶ ನೀಡಿ ರಕ್ತನಾಳದ ಆರೋಗ್ಯ ಕಾಪಾಡುತ್ತೆ. ಇದರಲ್ಲಿನ ಆಂಟಿ ಇನ್ಪ್ಲಮೇಟರಿ ಗುಣ ರಕ್ತನಾಳಗಳ ಮೇಲಿರೋ ಒತ್ತಡವನ್ನೂ ಕಡಿಮೆ ಮಾಡುತ್ತದೆ. ರಕ್ತದ ಸಂಚಾರ ಹೆಚ್ಚಿಸಿ ದೇಹಕ್ಕೆ ಹೆಚ್ಚು ಆಕ್ಸಿಜನ್ ಸಿಗುವ ಹಾಗೆ ಮಾಡಿ ಸ್ಟ್ರೋಕ್ ಹಾಗೂ ಹೃದಯಾಘಾತ ಆಗದಂತೆ ನೋಡಿಕೊಳ್ಳುತ್ತದೆ.
3. ರೋಗ ನಿರೋಧಕ ಶಕ್ತಿ ಹೆಚ್ಚಿಸುತ್ತದೆ
ಇದರಲ್ಲಿರುವ ವಿಟಮಿನ್ ಸಿ ದೇಹಕ್ಕೆ ಇನ್ಫೆಕ್ಷನ್ ಆಗೋದನ್ನ ತಡೆಯುತ್ತದೆ. ಇದರ ಜೊತೆ ವಿಟಮಿನ್ ಎ ಅಂಶ ಕೂಡ ಹೆಚ್ಚಾಗಿ ಇರೋದ್ರಿಂದ ದೇಹಕ್ಕೆ ಹೆಚ್ಚಿನ ಆಂಟಿ ಆಕ್ಸಿಡೆಂಟ್ಸ್ ಸಿಗುವ ರೀತಿ ನಿಗಾವಹಿಸಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.

4. ಕ್ಯಾನ್ಸರ್ ಬಾರದ ಹಾಗೆ ನೋಡಿಕೊಳ್ಳುತ್ತದೆ
ವಿಟಮಿನ್ ಎ, ಸಿ, ಅಮಿನೋ ಆಸಿಡ್ಸ್ ಹಾಗೂ ಪ್ರೋಟಿನ್ ಅಂಶ ದೇಹದಲ್ಲಿ ಫ್ರೀ ರಾಡಿಕಲ್ಸ್ ಸೇರದ ಹಾಗೆ ನೋಡಿಕೊಳ್ಳುತ್ತದೆ. ದೇಹದಲ್ಲಿ ಆಗುವ ಹಲವಾರು ಕ್ರಿಯೆಗಳ ಪರಿಣಾಮವಾಗಿ ಫ್ರೀ ರಾಡಿಕಲ್ಸ್ ಉತ್ಪತ್ತಿ ಆಗುತ್ತದೆ. ಇದರಿಂದ ದೇಹಕ್ಕೆ ಕ್ಯಾನ್ಸರ್ ಸೆಲ್ಸ್ ಸೇರುತ್ತದೆ. ಅಷ್ಟೇ ಅಲ್ಲದೆ ಸಾಕಷ್ಟು ಕಾಯಿಲೆಗಳು ಬರೋದಕ್ಕೆ ಇದು ಕಾರಣವಾಗುತ್ತದೆ. ಬೇಗ ಸುಸ್ತಾಗೋದು, ಕಣ್ಣು ಮಂಜಾಗುವುದು, ಹೃದಯಕ್ಕೆ ಸಂಬಂಧ ಪಟ್ಟ ತೊಂದರೆ ಕಾಣಿಸಿಕೊಳ್ಳುತ್ತದೆ. ಆದ್ದರಿಂದ ಇಂತಹ ತೊಂದರೆಗಳಿಂದ ದೂರವಿರಲು ಮೊಳಕೆ ಬಂದ ಹೆಸರು ಕಾಳನ್ನು ಸೇವಿಸಬೇಕು.
5. ತೂಕ ಕಡಿಮೆ ಮಾಡುತ್ತದೆ ಹಾಗೂ ತ್ವಚೆಯ ಆರೋಗ್ಯ ಕಾಪಾಡುತ್ತೆ
ಮೊಳಕೆ ಬಂದ ಹೆಸರು ಕಾಳಿನಲ್ಲಿ ಕ್ಯಾಲೋರೀಸ್ ಇಲ್ಲದ ಕಾರಣ ಇದನ್ನು ಎಷ್ಟು ತಿಂದರೂ ತೂಕ ಹೆಚ್ಚಾಗಲ್ಲ. ಬದಲಾಗಿ ತೂಕ ಕಡಿಮೆ ಆಗುತ್ತೆ. ಮೊಳಕೆ ಬಂದ ಹೆಸರು ಕಾಳನ್ನು ತಿನ್ನುವುದರಿಂದ ಇದರಲ್ಲಿರೋ ಫೈಬರ್ ನಿಮ್ಮ ದೇಹಕ್ಕೆ ಸೇರಿ ಹೊಟ್ಟೆ ತುಂಬುವ ಹಾಗೆ ಮಾಡುತ್ತೆ. ಆದರ ಜೊತೆ ಪದೇ ಪದೇ ಹಸಿವಾಗದ ರೀತಿ ನೋಡಿಕೊಳ್ಳುತ್ತದೆ. ಹಾಗೆಯೇ ಸ್ಥೂಲಕಾಯ ಮತ್ತು ಮಧುಮೇಹ ಕಾಯಿಲೆ ಬಾರದಂತೆ ನೋಡಿಕೊಳ್ಳುತ್ತದೆ. ಪ್ರತಿನಿತ್ಯ ಹೆಸರು ಕಾಳನ್ನು ತಿನ್ನುವುದರಿಂದ ತ್ವಚೆಯ ಆರೋಗ್ಯ ಕೂಡ ಚೆನ್ನಾಗಿರುತ್ತದೆ. ಅಲ್ಲದೆ ತ್ವಚೆಗೆ ಕಾಂತಿಯನ್ನು ನೀಡುತ್ತದೆ. ಇದರಿಂದ ಆಕರ್ಷಕ ಸೌಂದರ್ಯವನ್ನು ಕೂಡ ನೀವು ಪಡೆಯಬಹುದು.
ದುಬಾರಿ ಔಷಧಿಗಳ ಮೊರೆ ಹೋಗುವ ಬದಲು ಮೊಳಕೆ ಬಂದ ಕಾಳನ್ನು ಸೇವನೆ ಮಾಡುವುದು ಉತ್ತಮ. ಹೀಗಾಗಿ ಮೊಳಕೆ ಬಂದ ಕಾಳನ್ನು ಸೇವಿಸಿ ನಿಮ್ಮ ಆರೋಗ್ಯವನ್ನು ವೃದ್ಧಿಸಿಕೊಳ್ಳುವುದು ಒಳಿತು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮದುವೆಯ ಪರ್ಫೆಕ್ಟ್ ವಯಸ್ಸು ಯಾವುದು ಎಂಬುದರ ಬಗ್ಗೆ ಯಾವಾಗಲೂ ಪ್ರಶ್ನೆ ಮೂಡುತ್ತದೆ? ಅದಕ್ಕೆ ಸರಿಯಾದ ಉತ್ತರ ಇಲ್ಲಿವರೆಗೆ ಸಿಕ್ಕಿಲ್ಲ. ಕೆಲವೊಂದು ಸರ್ವೆಗಳು ಮದುವೆಯಾಗಲು ಸರಿಯಾದ ವಯಸ್ಸು 29 ಎನ್ನುತ್ತಾರೆ. ಆದರೆ ಒಬ್ಬೊಬ್ಬರ ಮದುವೆ ಒಂದೊಂದು ವಯಸ್ಸಿನಲ್ಲಿ ಆಗುತ್ತದೆ. ಕೆಲವರು 20 ರಿಂದ 30 ವರ್ಷದೊಳಗೆ ಮದುವೆಯಾದರೆ, ಇನ್ನೂ ಕೆಲವರು 30 ರಿಂದ 40 ವರ್ಷದೊಳಗೆ ಮದುವೆಯಾಗುತ್ತಾರೆ.
ವಿದ್ಯಾರ್ಥಿಗಳು ಕಾಪಿ ಮಾಡುತ್ತಾರೆ ಎಂದು ಕಾಲೇಜು ಆಡಳಿತ ಮಂಡಳಿ ವಿದ್ಯಾರ್ಥಿಗಳ ತಲೆಗೆ ಡಬ್ಬ ಕಟ್ಟಿ ಪರೀಕ್ಷೆ ಬರೆಸಿರುವ ಘಟನೆ ಹಾವೇರಿಯ ಭಗತ್ ಪಿಯುಸಿ ಕಾಲೇಜಿನಲ್ಲಿ ನಡೆದಿದೆ. ಪರೀಕ್ಷಾ ಹಾಲ್ ನಲ್ಲಿ ವಿದ್ಯಾರ್ಥಿಗಳು ಕಾಪಿ ಹೊಡೆಯದಂತೆ ಕಾವಲುಗಾರನಾಗಿ ಸಿಸಿಟಿವಿ ಕ್ಯಾಮೆರಾ ನೋಡಿದ್ದೆವೆ. ಆದರೆ ಹಾವೇರಿಯ ನಗರದ ದನದ ಮಾರುಕಟ್ಟೆಯ ಎದುರಿಗಿರುವ ಭಗತ್ ಪಿಯುಸಿ ಕಾಲೇಜಿನಲ್ಲಿ ಮಕ್ಕಳು ಕಾಪಿ ಮಾಡಬಾರದು ಎಂದು ತಲೆಗೆ ಡಬ್ಬ ಕಟ್ಟಿ ಪರೀಕ್ಷೆ ಬರೆಸಿದ್ದಾರೆ. ಗುರುವಾರ ನಡೆದ ಪಿಯುಸಿ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳ ತಲೆಗೆ ಡಬ್ಬ ಕಟ್ಟಿ…
ಬಿಗ್ ಬಾಸ್ ಮನೆಯಲ್ಲಿ ಕೋಪ, ಜಗಳ, ಲವ್, ಕೇರ್ ಇವೆಲ್ಲಾ ಮಾಮೂಲಿ.ಅದರಲ್ಲೂ ನಟ-ನಟಿಯರು ಬೇಗ ಗಂಟು ಹಾಕಿಕೊಳ್ಳುತ್ತಾರೆ ಎಂಬುವುದು ವೀಕ್ಷಕರ ಅಭಿಪ್ರಾಯ. ಮೊದಲ ವಾರದಲ್ಲೇ ಅತಿ ಹೆಚ್ಚು ವೋಟ್ ಪಡೆದು ನಾಮಿನೇಶನ್ ಪಟ್ಟಿಯಲ್ಲಿ ಸೇರಿಕೊಂಡಿರುವ ಸ್ಪರ್ಧಿ ಚೈತ್ರಾ ಕೊಟ್ಟೂರ್ ಟಾಸ್ಕ್ ನಡೆದ ನಂತರ ಮಧ್ಯರಾತ್ರಿ ‘ಲಕ್ಷ್ಮಿ ಬಾರಮ್ಮ’ ಖ್ಯಾತಿಯ ಶೈನ್ ಶೆಟ್ಟಿ ಜೊತೆ ಕುಳಿತು ಮಾತನಾಡುತ್ತಿರುತ್ತಾರೆ. ಆಗ ಮನಸ್ಸಲ್ಲಿದ್ದ ಲವ್ ವಿಚಾರವನ್ನು ತೆರೆದಿಟ್ಟಿದ್ದಾರೆ. ಬಿಗ್ ಬಾಸ್ ಮನೆಗೆ ಪ್ರವೇಶಿಸಿದ ಬಳಿಕ ಶೈನ್ ಶೆಟ್ಟಿ ಜೊತೆ ಕಾಣಿಸಿಕೊಳ್ಳದ ಚೈತ್ರಾ…
‘ನಮ್ಮ ಮುಂದೆ ಇರುವ ಅವಘಡಗಳಿಗೆ, ಹೆಚ್ಚು ಅಪಾಯ ತರುವ ಅಂಶಗಳಿಗೆಯಾವಾಗಲೂ ನಾವೇ ಕಾರಣರಾಗಿರುತ್ತೇವೆ’.ಶೇ.80 ರಷ್ಟು ಕ್ಯಾನ್ಸರ್ಗಳಿಗೆ ಕಾರಣ ನಮ್ಮ ಜೀವನಶೈಲಿ (ಧೂಮಪಾನ, ಮದ್ಯಪಾನ, ಆಹಾರಾಭ್ಯಾಸ) ಭಾರತದಲ್ಲಿ ಪುರುಷರಲ್ಲಿ ಶೇ.50ರಷ್ಟು ಮತ್ತು ಮಹಿಳೆಯರಲ್ಲಿ ಶೇ.20 ರಷ್ಟು ಕ್ಯಾನ್ಸರ್ಗಳಿಗೆ ತಂಬಾಕು ಬಳಕೆಯೇ ಕಾರಣ.
ರಾಜಧಾನಿ ಬೆಂಗಳೂರು ಸ್ಮಾರ್ಟ್ ಸಿಟಿಯಾಗಿ ಬೆಳೆಯುತ್ತಿದ್ದರೆ ಮತ್ತೊಂದೆಡೆ ಸ್ಮಾರ್ಟ್ ಖದೀಮರು ಹೆಚ್ಚಾಗಿದ್ದಾರೆ. ಕೋಟಿ ಕೋಟಿ ಲೂಟಿಯ ಐಎಂಎ ಪ್ರಕರಣ ಮಾಸುವ ಮುನ್ನವೇ ರಾಜಧಾನಿ ಬೆಚ್ಚಿಬೀಳುವಂತ ಘಟನೆ ಇದಾಗಿದೆ. ಬೆಂಗಳೂರು ಹೊರವಲಯ ನೆಲಮಂಗಲ ಪಟ್ಟಣದ ಐಸಿಐಸಿಐ ಬ್ಯಾಂಕಿಗೆ 1 ಕೋಟಿ 90 ಲಕ್ಷ ಹಣ ತುಂಬಲು ಬಂದಾಗ ಆರೋಪಿಗಳು ನೆಲಮಂಗಲ ಪೊಲೀಸರ ಅತಿಥಿಗಳಾಗಿದ್ದಾರೆ. ಆನ್ ಲೈನ್ನಲ್ಲಿ ಅಕೌಂಟ್ಗೆ ಸಂಬಂಧಪಟ್ಟ ಮೊಬೈಲ್ ನಂಬರ್ ಚೇಂಜ್ ಮಾಡಿ ಬರೋಬ್ಬರಿ 3ಕೋಟಿ ಹಣವನ್ನು ಡ್ರಾ ಮಾಡಿದ್ದ ಆರೋಪಿಗಳು, ಆ ಹಣವನ್ನು ಬ್ಯಾಂಕ್ನಲ್ಲಿ ಜಮೆ…
ಪರಿಸರ ದಿನಾಚರಣೆಗೆ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ವಿಶ್ವ ಪರಿಸರ ದಿನಾಚರಣೆ ಆಚರಿಸಲು ಲಕ್ಷ ಲಕ್ಷ ದುಡ್ಡು ವೆಚ್ಚ ಮಾಡಲಾಗಿದೆ ಎಂಬ ಆರೋಪ ಕೇಳಿಬರುತ್ತಿದೆ. ಪರಿಸರ ದಿನಾಚರಣೆಗಾಗಿ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಬರೋಬ್ಬರಿ 20 ಲಕ್ಷ ರೂಪಾಯಿ ಖರ್ಚು ಮಾಡಿದೆ ಎಂದು ತಿಳಿದು ಬಂದಿದೆ. ಜೂನ್ 5 ರಂದು ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಪರಿಸರ ದಿನಾಚರಣೆ ಕಾರ್ಯಕ್ರಮವನ್ನು ಮಾಡಲಾಗಿತ್ತು.ಸರಳವಾಗಿ ಆಚರಿಸಬೇಕಿದ್ದ ಪರಿಸರ ದಿನಾಚರಣೆಗೆ 20.45 ಲಕ್ಷ ರೂ. ಹಣ ಖರ್ಚಾಗಿದೆ. ಮಲ್ಲೇಶ್ವರದ ಚೌಡಯ್ಯ ಮೆಮೋರಿಯಲ್ ಹಾಲ್ನಲ್ಲಿ…