News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಆರೋಗ್ಯ

ಮೊಳಕೆ ಬಂದ ಹೆಸರು ಕಾಳಿನ ಲಾಭಗಳೇನು? ಈ ಅರೋಗ್ಯ ಮಾಹಿತಿ ನೋಡಿ.

585

ಬ್ಯುಸಿ ಜೀವನ ಶೈಲಿಯಲ್ಲಿ ನಮ್ಮ ಆರೋಗ್ಯದ ಬಗ್ಗೆ ಕಾಳಜಿ ತೋರಿಸೋಕೆ ಸಮಯ ಸಿಗ್ತಿಲ್ಲ. ಅದರಲ್ಲೂ ಇತ್ತೀಚಿನ ಕಾಲಘಟ್ಟದಲ್ಲಿ ಆರೋಗ್ಯಕರ ಆಹಾರಕ್ಕಿಂತ ಫಾಸ್ಟ್ ಫುಡ್‍ಗಳ ಹಾವಳಿಯೇ ಹೆಚ್ಚಾಗಿದೆ. ಆದ್ದರಿಂದ ಆರೋಗ್ಯಕರ ಆಹಾರಗಳು ಯಾವುದು? ಅದರ ಲಾಭಗಳೇನು..? ಎನ್ನುವ ವಿಷಯವೇ ಅನೇಕರಿಗೆ ತಿಳಿದಿಲ್ಲ. ಫಾಸ್ಟ್ ಫುಡ್ಸ್ ಗಳ ರುಚಿಗೆ ಮನಸೋತ ಮಂದಿಗೆ ಅದರಿಂದ ಅಷ್ಟೇ ಫಾಸ್ಟಾಗಿ ಆಗುವ ದುಷ್ಪರಿಣಾಮಗಳ ಬಗ್ಗೆ ತಿಳಿದಿರಲ್ಲ.

ಹೌದು, ಇಂತಹ ಆರೋಗ್ಯಕ್ಕೆ ಮಾರಕವಾದ ಜೀವನ ಶೈಲಿಯ ಮಧ್ಯೆ ಆರೋಗ್ಯಕರ ಆಹಾರಗಳನ್ನು ಜನ ಮರೆತಿದ್ದಾರೆ. ಸೊಪ್ಪು ತರಕಾರಿ, ಕಾಳುಗಳು ಆರೋಗ್ಯ ವೃದ್ಧಿಸುವಲ್ಲಿ ತುಂಬಾ ಉಪಯುಕ್ತ. ಅದರಲ್ಲೂ ಮೊಳಕೆ ಬಂದ ಕಾಳುಗಳ ಸೇವನೆಯಿಂದ ಎಷ್ಟು ಲಾಭ ಎನ್ನುವುದು ಹಲವರಿಗೆ ಗೊತ್ತಿರಲ್ಲ. ಕಾಳುಗಳನ್ನು ಹಾಗೆಯೇ ತಿನ್ನುವುದಕ್ಕಿಂತ ಅದನ್ನು ನೀರಲ್ಲಿ ನೆನಸಿಟ್ಟು, ಮೊಳಕೆ ಬಂದ ಮೇಲೆ ತಿಂದ್ರೆ ಅದರಲ್ಲಿ ಪೌಷ್ಟಿಕಾಂಶ ಜಾಸ್ತಿ ಇರುತ್ತದೆ. ಮೊಳಕೆ ಒಡೆದ ಕಾಳುಗಳನ್ನು ಬೇಯಿಸಿ ತಿನ್ನುವುದಕ್ಕಿಂದ ಹಸಿಯಾಗಿಯೇ ಸೇವಿಸುವುದು ಉತ್ತಮ. ಯಾಕೆಂದರೆ ಮೊಳಕೆ ಕಾಳುಗಳನ್ನು ಬೇಯಿಸಿದಾಗ ಅದರ ಪೌಷ್ಟಿಕತೆ ದೇಹಕ್ಕೆ ಸಿಗಲ್ಲ. ಮೊಳಕೆ ಕಾಳಲ್ಲಿ ಪ್ರೋಟಿನ್, ಫೈಬರ್, ವಿಟಮಿನ್ಸ್, ಕಬ್ಬಿಣದ ಅಂಶ, ಕ್ಯಾಲ್ಸಿಯಂ ಹೀಗೆ ದೇಹಕ್ಕೆ ಬೇಕಾದ ಆರೋಗ್ಯಕರ ಅಂಶಗಳು ಇರುತ್ತದೆ. ಆದ್ದರಿಂದ ಮೊಳಕೆ ಕಾಳು ದೇಹಕ್ಕೆ ಒಳ್ಳೆಯದು.

ಅನೇಕ ಅದ್ಭುತ ಲಾಭಗಳನ್ನು ತನ್ನೊಳಗೆ ಅಡಗಿಸಿಕೊಂಡಿರೋ ಮೊಳಕೆ ಕಾಳುಗಳಲ್ಲಿ ಮೊಳಕೆ ಒಡೆದ ಹೆಸರು ಕಾಳು ಒಂದು. ಈ ಮೊಳಕೆ ಒಡೆದ ಹೆಸರು ಕಾಳು ಆರೋಗ್ಯಕ್ಕೆ ಎಷ್ಟು ಉಪಯುಕ್ತ? ಅದರ ಲಾಭಗಳೇನು? ಅದನ್ನು ಯಾಕೆ ಸೇವಿಸಬೇಕು ಅನ್ನೋದರ ಸಂಪೂರ್ಣ ಮಾಹಿತಿ ಇಲ್ಲಿದೆ..

ಮೊಳಕೆ ಬಂದ ಹೆಸರು ಕಾಳಿನ ಲಾಭಗಳೇನು?

1. ಜೀರ್ಣಶಕ್ತಿ ವೃದ್ಧಿಸುತ್ತೆ
ಹೆಸರು ಕಾಳನ್ನು ನೀರಿನಲ್ಲಿ ನೆನಸಿಟ್ಟು, ಬಳಿಕ ಮೊಳಕೆ ಬಂದ ಮೇಲೆ ಸೇವಿಸುವುದರಿಂದ ಜೀರ್ಣಶಕ್ತಿ ಉತ್ತಮವಾಗುತ್ತೆ. ಇದರಲ್ಲಿರೋ ಪೌಷ್ಟಿಕಾಂಶ ಜೀರ್ಣಕ್ರಿಯೆಯನ್ನು ಸರಾಗ ಮಾಡುತ್ತದೆ. ಅಲ್ಲದೆ ಫೈಬರ್ ಅಂಶವು ದೇಹದಲ್ಲಿ ಆಹಾರದ ಸಂಚಾರ ಸರಿಯಾಗಿ ಆಗುವಂತೆ ನೋಡಿಕೊಂಡು ಮಲಬದ್ಧತೆ ತೊಂದರೆಯನ್ನು ನಿವಾರಿಸುತ್ತದೆ.

2. ಹೃದಯದ ಆರೋಗ್ಯ ಕಾಪಾಡುತ್ತೆ
ಮೊಳಕೆ ಬಂದ ಹೆಸರು ಕಾಳು ತಿನ್ನುವುದರಿಂದ ಹೃದಯದ ಆರೋಗ್ಯ ಉತ್ತಮವಾಗುತ್ತದೆ. ಇದರಲ್ಲಿರೋ ಒಮೇಗಾ ಫ್ಯಾಟೀ ಆಸಿಡ್ ದೇಹಕ್ಕೆ ಬೇಕಾದ ಒಳ್ಳೆಯ ಕೊಬ್ಬಿನ ಅಂಶ ನೀಡಿ ರಕ್ತನಾಳದ ಆರೋಗ್ಯ ಕಾಪಾಡುತ್ತೆ. ಇದರಲ್ಲಿನ ಆಂಟಿ ಇನ್ಪ್ಲಮೇಟರಿ ಗುಣ ರಕ್ತನಾಳಗಳ ಮೇಲಿರೋ ಒತ್ತಡವನ್ನೂ ಕಡಿಮೆ ಮಾಡುತ್ತದೆ. ರಕ್ತದ ಸಂಚಾರ ಹೆಚ್ಚಿಸಿ ದೇಹಕ್ಕೆ ಹೆಚ್ಚು ಆಕ್ಸಿಜನ್ ಸಿಗುವ ಹಾಗೆ ಮಾಡಿ ಸ್ಟ್ರೋಕ್ ಹಾಗೂ ಹೃದಯಾಘಾತ ಆಗದಂತೆ ನೋಡಿಕೊಳ್ಳುತ್ತದೆ.

3. ರೋಗ ನಿರೋಧಕ ಶಕ್ತಿ ಹೆಚ್ಚಿಸುತ್ತದೆ
ಇದರಲ್ಲಿರುವ ವಿಟಮಿನ್ ಸಿ ದೇಹಕ್ಕೆ ಇನ್ಫೆಕ್ಷನ್ ಆಗೋದನ್ನ ತಡೆಯುತ್ತದೆ. ಇದರ ಜೊತೆ ವಿಟಮಿನ್ ಎ ಅಂಶ ಕೂಡ ಹೆಚ್ಚಾಗಿ ಇರೋದ್ರಿಂದ ದೇಹಕ್ಕೆ ಹೆಚ್ಚಿನ ಆಂಟಿ ಆಕ್ಸಿಡೆಂಟ್ಸ್ ಸಿಗುವ ರೀತಿ ನಿಗಾವಹಿಸಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.

4. ಕ್ಯಾನ್ಸರ್ ಬಾರದ ಹಾಗೆ ನೋಡಿಕೊಳ್ಳುತ್ತದೆ
ವಿಟಮಿನ್ ಎ, ಸಿ, ಅಮಿನೋ ಆಸಿಡ್ಸ್ ಹಾಗೂ ಪ್ರೋಟಿನ್ ಅಂಶ ದೇಹದಲ್ಲಿ ಫ್ರೀ ರಾಡಿಕಲ್ಸ್ ಸೇರದ ಹಾಗೆ ನೋಡಿಕೊಳ್ಳುತ್ತದೆ. ದೇಹದಲ್ಲಿ ಆಗುವ ಹಲವಾರು ಕ್ರಿಯೆಗಳ ಪರಿಣಾಮವಾಗಿ ಫ್ರೀ ರಾಡಿಕಲ್ಸ್ ಉತ್ಪತ್ತಿ ಆಗುತ್ತದೆ. ಇದರಿಂದ ದೇಹಕ್ಕೆ ಕ್ಯಾನ್ಸರ್ ಸೆಲ್ಸ್ ಸೇರುತ್ತದೆ. ಅಷ್ಟೇ ಅಲ್ಲದೆ ಸಾಕಷ್ಟು ಕಾಯಿಲೆಗಳು ಬರೋದಕ್ಕೆ ಇದು ಕಾರಣವಾಗುತ್ತದೆ. ಬೇಗ ಸುಸ್ತಾಗೋದು, ಕಣ್ಣು ಮಂಜಾಗುವುದು, ಹೃದಯಕ್ಕೆ ಸಂಬಂಧ ಪಟ್ಟ ತೊಂದರೆ ಕಾಣಿಸಿಕೊಳ್ಳುತ್ತದೆ. ಆದ್ದರಿಂದ ಇಂತಹ ತೊಂದರೆಗಳಿಂದ ದೂರವಿರಲು ಮೊಳಕೆ ಬಂದ ಹೆಸರು ಕಾಳನ್ನು ಸೇವಿಸಬೇಕು.

5. ತೂಕ ಕಡಿಮೆ ಮಾಡುತ್ತದೆ ಹಾಗೂ ತ್ವಚೆಯ ಆರೋಗ್ಯ ಕಾಪಾಡುತ್ತೆ
ಮೊಳಕೆ ಬಂದ ಹೆಸರು ಕಾಳಿನಲ್ಲಿ ಕ್ಯಾಲೋರೀಸ್ ಇಲ್ಲದ ಕಾರಣ ಇದನ್ನು ಎಷ್ಟು ತಿಂದರೂ ತೂಕ ಹೆಚ್ಚಾಗಲ್ಲ. ಬದಲಾಗಿ ತೂಕ ಕಡಿಮೆ ಆಗುತ್ತೆ. ಮೊಳಕೆ ಬಂದ ಹೆಸರು ಕಾಳನ್ನು ತಿನ್ನುವುದರಿಂದ ಇದರಲ್ಲಿರೋ ಫೈಬರ್ ನಿಮ್ಮ ದೇಹಕ್ಕೆ ಸೇರಿ ಹೊಟ್ಟೆ ತುಂಬುವ ಹಾಗೆ ಮಾಡುತ್ತೆ. ಆದರ ಜೊತೆ ಪದೇ ಪದೇ ಹಸಿವಾಗದ ರೀತಿ ನೋಡಿಕೊಳ್ಳುತ್ತದೆ. ಹಾಗೆಯೇ ಸ್ಥೂಲಕಾಯ ಮತ್ತು ಮಧುಮೇಹ ಕಾಯಿಲೆ ಬಾರದಂತೆ ನೋಡಿಕೊಳ್ಳುತ್ತದೆ. ಪ್ರತಿನಿತ್ಯ ಹೆಸರು ಕಾಳನ್ನು ತಿನ್ನುವುದರಿಂದ ತ್ವಚೆಯ ಆರೋಗ್ಯ ಕೂಡ ಚೆನ್ನಾಗಿರುತ್ತದೆ. ಅಲ್ಲದೆ ತ್ವಚೆಗೆ ಕಾಂತಿಯನ್ನು ನೀಡುತ್ತದೆ. ಇದರಿಂದ ಆಕರ್ಷಕ ಸೌಂದರ್ಯವನ್ನು ಕೂಡ ನೀವು ಪಡೆಯಬಹುದು.

ದುಬಾರಿ ಔಷಧಿಗಳ ಮೊರೆ ಹೋಗುವ ಬದಲು ಮೊಳಕೆ ಬಂದ ಕಾಳನ್ನು ಸೇವನೆ ಮಾಡುವುದು ಉತ್ತಮ. ಹೀಗಾಗಿ ಮೊಳಕೆ ಬಂದ ಕಾಳನ್ನು ಸೇವಿಸಿ ನಿಮ್ಮ ಆರೋಗ್ಯವನ್ನು ವೃದ್ಧಿಸಿಕೊಳ್ಳುವುದು ಒಳಿತು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಅಪ್ಪಿತಪ್ಪಿಯೂ ʼಆಪಲ್ʼ ಬೀಜಗಳನ್ನು ತಿನ್ನಬೇಡಿ..!ಅದರ ಪರಿಣಾಮವೇನು ಗೊತ್ತ?

    ಹಣ್ಣುಗಳ ಬೀಜಗಳಲ್ಲಿ ಪೋಷಕಗಳಿರುತ್ತವೆ ಎಂದು ಎಲ್ಲಾ ಹಣ್ಣಿನ ಬೀಜಗಳನ್ನು ತಿನ್ನುವುದು ಸರಿಯಲ್ಲ. ಏಕೆಂದರೆ ಕೆಲ ಹಣ್ಣಿನ ಬೀಜಗಳು ಪ್ರಯೋಜನಕ್ಕೆ ಬರುವುದಿಲ್ಲ. ಅದರಲ್ಲೂ ಸೇಬು ಹಣ್ಣಿನ ಬೀಜಗಳನ್ನು ಮರೆತೂ ತಿನ್ನಬಾರದು. ಒಂದು ವೇಳೆ ಹಲ್ಲಿಗೆ ಸಿಕ್ಕಿಹಾಕಿಕೊಂಡರೆ ಗಾಬರಿ ಪಡದೆ ತಕ್ಷಣವೇ ಬಿಸಾಡಬೇಕು. ಏಕೆಂದರೆ ಈ ಬೀಜಗಳಲ್ಲಿ ಅಮೈಡಾಲಿನ್ ಎಂಬ ಪದಾರ್ಥ ಇರುತ್ತದೆ. ಇದು ದೇಹಕ್ಕೆ ಒಳ್ಳೆಯದಲ್ಲ. ಹೀಗಾಗಿ ಈ ಬೀಜಗಳನ್ನು ತಿಂದರೆ ಉಸಿರಾಟದ ತೊಂದರೆ ಎದುರಿಸಬೇಕಾಗುತ್ತದೆ. ಅಷ್ಟೇ ಅಲ್ಲ ತಲೆನೋವು, ವಾಂತಿ, ಬಲಹೀನತೆ, ತಲೆಸುತ್ತು ಇತ್ಯಾದಿ ಲಕ್ಷಣಗಳು ಉಂಟಾಗಬಹುದು….

  • ಸುದ್ದಿ

    ತಮಿಳು ಚಿತ್ರರಂಗದವರು ಈ ಹೆಸರು ಕೇಳಿದ್ರೆ ಬೆಚ್ಚಿಬೀಳುತ್ತರೆ…!ಯಾಕೆ ಗೊತ್ತ?

    ತಮಿಳು ರಾಕರ್ಸ್ ಈ ಹೆಸರನ್ನು ಕೇಳಿದರೆ ಸಾಕು ಇಡೀ ತಮಿಳು ಚಿತ್ರೋದ್ಯಮ ಬೆಚ್ಚಿ ಬೀಳುತ್ತದೆ. ಏಕೆಂದರೆ ನೂರಾರು ಕೋಟಿ ರೂಪಾಯಿ ಸುರಿದು ವರ್ಷಗಟ್ಟಲೆ ಸಿನಿಮಾ ಮಾಡಿ ಬಿಡುಗಡೆಯಾದ ದಿನವೇ ಮಧ್ಯಾಹ್ನದ ವೇಳೆಗೆ ಆ ಚಿತ್ರವನ್ನು ಮೊಬೈಲ್ ನಲ್ಲಿ ಲಭ್ಯವಾಗುವಂತೆ ಮಾಡುತ್ತಿದ್ದಾರೆ ಈ ತಮಿಳು ರಾಕರ್ಸ್.ಅಂದರೆ ಇವರ ದಂಧೆಯೇ ಹೊಸ ಹೊಸ ಚಿತ್ರಗಳನ್ನು ಪೈರಸಿ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿ ಬಿಡುವುದಾಗಿದೆ. ಈ ತಮಿಳು ರಾಕರ್ಸ್ ಕೇವಲ ತಮಿಳು ಚಿತ್ರೋದ್ಯಮಕ್ಕಷ್ಟೇ ಅಲ್ಲ ಕನ್ನಡ, ತೆಲುಗು, ಮಲಯಾಳಂ ಸೇರಿದಂತೆ ಇತರೆ…

  • ಆಧ್ಯಾತ್ಮ

    ಶ್ರೀ ಲಲಿತಾಸಹಸ್ರನಾಮ ಸ್ತೋತ್ರಂ ಅರ್ಥ

    ಪಂಡಿತ್ ರಾಘವೇಂದ್ರ ಸ್ವಾಮಿಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ…

  • ವಿಜ್ಞಾನ

    ಐಐಟಿ ಪ್ರಯೋಗ ಯಶಸ್ವಿಗೊಂಡಿದ್ದು, ಇನ್ಮುಂದೆ ಕೋಳಿಯ ಬದಲು ಗಿಡದಲ್ಲಿ ಮೊಟ್ಟೆಗಳು ಬೆಳೆಯಲಿವೆ ,.!

    ನವದೆಹಲಿ, ಇಷ್ಟು ದಿನ ಮೊಟ್ಟೆ ಮಾಂಸಾಹಾರಿಯೋ,ಸಸ್ಯಾಹಾರಿಯೋ ಎಂಬ ವಾದ, ಪ್ರತಿವಾದಗಳು ಯಥೇಚ್ಚವಾಗಿ ನಡೆಯುತ್ತಿದ್ದವು. ಕೆಲವರು ಕೋಳಿಯ ಭ್ರೂಣವಾಗಿರುವುದರಿಂದ ಇದು ಮಾಂಸಾಹಾರ ಎಂದು ಹೇಳಿದರೆ, ಅದುಪೂರ್ತಿ ಕೋಳಿಯ ರೂಪು ಪಡೆದುಕೊಳ್ಳದ ಕಾರಣ ಅದು ಸಸ್ಯಾಹಾರಿ ಎಂದು ವಾದಿಸುವವರು ಅಧಿಕ ಸಂಖ್ಯೆಯಲ್ಲಿದ್ದರು. ಆದರೆ ಈಗ ಈ ಎಲ್ಲ ವಾದ ಪ್ರತಿವಾದಗಳಿಗೆ ಬ್ರೇಕ್​ ಹಾಕುವ ಮೂಲಕ ಶುದ್ಧ ಸಸ್ಯ ಜನ್ಯ ಮೊಟ್ಟೆಯನ್ನು ಬೆಳೆಯಬಹುದಾಗಿದೆ! ದೆಹಲಿಯ ಇಂಡಿಯನ್​ ಇನ್​ಸ್ಟಿಟ್ಯೂಟ್​ ಆಫ್​ಟೆಕ್ನಾಲಜಿಯ (ಐಐಟಿ) ಸಂಶೋಧಕರು ಗಿಡದಲ್ಲಿಮೊಟ್ಟೆಯನ್ನು ಬೆಳೆದಿದ್ದಾರೆ. ನಾನ್​ ಸಾಯ್​, ಗ್ಲುಟೆನ್​ಮುಕ್ತವಾಗಿರುವ ಈ ಮೊಟ್ಟೆಯನ್ನು…

  • ಜ್ಯೋತಿಷ್ಯ

    ದಿನ ಭವಿಷ್ಯ ಸೋಮವಾರ, ರಾಶಿ ಭವಿಷ್ಯದ ಜೊತೆಗೆ ಅದೃಷ್ಟದ ಸಂಖ್ಯೆ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(25 ಮಾರ್ಚ್, 2019) ವಿಶ್ರಾಂತಿಯ ಸಲುವಾಗಿ ನಿಕಟ ಸ್ನೇಹಿತರೊಂದಿಗೆ ಸ್ವಲ್ಪ ಸಮಯ ಕಳೆಯಿರಿ. ನೀವು ನಿಮ್ಮನ್ನು ಒಂದು…

  • ಆರೋಗ್ಯ, ಉಪಯುಕ್ತ ಮಾಹಿತಿ

    ನಿಮಗೆ ಗೊತ್ತಿರದ ಈ ಬೀಜಗಳಲ್ಲಿದೆ ನಿಮ್ಮ ದೇಹದ ತೂಕ ಕಡಿಮೆ ಮಾಡುವ ತಾಕತ್ತು.!ತಿಳಿಯಲು ಈ ಮಾಹಿತಿ ನೋಡಿ..

    ಹಣ್ಣು, ತರಕಾರಿ ಆರೋಗ್ಯಕ್ಕೆ ಒಳ್ಳೆಯದು. ಇವು ದೇಹಕ್ಕೆ ಬೇಕಾಗುವ ಪೋಷಕಾಂಶಗಳನ್ನು ನೀಡುತ್ತವೆ. ತರಕಾರಿ ಹಾಗೂ ಹಣ್ಣನ್ನು ತಿಂದು ಅದ್ರ ಬೀಜವನ್ನು ನಾವು ಕಸದ ಬುಟ್ಟಿಗೆ ಹಾಕ್ತೇವೆ. ನೆನಪಿರಲಿ ಈ ಬೀಜದಲ್ಲಿಯೂ ಸಾಕಷ್ಟು ಔಷಧಿ ಗುಣವಿದೆ. ಕೆಲವೊಂದು ಬೀಜಗಳು ನಮ್ಮ ತೂಕ ಕಡಿಮೆ ಮಾಡಲು ನೆರವಾಗುತ್ತವೆ. *ಸಾಮಾನ್ಯವಾಗಿ ಕಲ್ಲಂಗಡಿ ಹಣ್ಣಿನ ಬೀಜ ಕಸದ ಬುಟ್ಟಿ ಸೇರುತ್ತೆ. ಆದ್ರೆ ಕಲ್ಲಂಗಡಿ ಬೀಜ ಬಹಳ ಒಳ್ಳೆಯದು. ಹಾಲು ಅಥವಾ ನೀರಿನ ಜೊತೆ ಸೇವನೆ ಮಾಡಬಹುದು. ಇದರಿಂದ ನಿಮ್ಮ ತೂಕ ಕಡಿಮೆಯಾಗುತ್ತದೆ. *ಕಲ್ಲಂಗಡಿ…