News

ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ
ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ನೌಕರ ಸಂಘಟನೆಗಳ ಅಸಮಾಧಾನ
ಇತ್ತ ದುಡ್ಡು ಹೋಯ್ತು ಅತ್ತ ಮನೆಯೂ ಇಲ್ಲ; ಸ್ಲಂ ಬೋಡ್೯ ನಂಬಿ ಬೀದಿಗೆ ಬಿದ್ದ ನಿರಾಶ್ರಿತರು
ಚೀನಾದಲ್ಲೇ ಚೀನಾವನ್ನು ಮಣಿಸಿ ಚಿನ್ನ ಗೆದ್ದ ದೀಪಿಕಾ-ಅಂಕಿತಾ-ಕುಂಕುಮ್!
ಸ್ಮಾರ್ಟ್‌ಫೋನ್‌ ಬಳಕೆಯಿಂದಾಗಿ ಗಂಡ-ಹೆಂಡತಿ ಮಧ್ಯೆ ಬಿರುಕು
TVK – 108 ಶಾಸಕರೂ ಸಾಮೂಹಿಕ ರಾಜೀನಾಮೆ ಎಚ್ಚರಿಕೆ..!
ಎಳನೀರು ಕತ್ತರಿಸಿದ ನಂತರ ಎಷ್ಟು ಕಾಲ ತಾಜಾ ಇರುತ್ತದೆ?
ಗೆಲುವಿನ ಖುಷಿಯಲ್ಲಿರುವ ವಿಜಯ್​​ಗೆ ಎದುರಾಯ್ತು ಬ್ಯಾಡ್ ನ್ಯೂಸ್! ಬರೋಬ್ಬರಿ ₹70 ಕೋಟಿ ನಷ್ಟ?
ಆರೋಗ್ಯ

ಮೊಳಕೆ ಬಂದ ಹೆಸರು ಕಾಳಿನ ಲಾಭಗಳೇನು? ಈ ಅರೋಗ್ಯ ಮಾಹಿತಿ ನೋಡಿ.

555

ಬ್ಯುಸಿ ಜೀವನ ಶೈಲಿಯಲ್ಲಿ ನಮ್ಮ ಆರೋಗ್ಯದ ಬಗ್ಗೆ ಕಾಳಜಿ ತೋರಿಸೋಕೆ ಸಮಯ ಸಿಗ್ತಿಲ್ಲ. ಅದರಲ್ಲೂ ಇತ್ತೀಚಿನ ಕಾಲಘಟ್ಟದಲ್ಲಿ ಆರೋಗ್ಯಕರ ಆಹಾರಕ್ಕಿಂತ ಫಾಸ್ಟ್ ಫುಡ್‍ಗಳ ಹಾವಳಿಯೇ ಹೆಚ್ಚಾಗಿದೆ. ಆದ್ದರಿಂದ ಆರೋಗ್ಯಕರ ಆಹಾರಗಳು ಯಾವುದು? ಅದರ ಲಾಭಗಳೇನು..? ಎನ್ನುವ ವಿಷಯವೇ ಅನೇಕರಿಗೆ ತಿಳಿದಿಲ್ಲ. ಫಾಸ್ಟ್ ಫುಡ್ಸ್ ಗಳ ರುಚಿಗೆ ಮನಸೋತ ಮಂದಿಗೆ ಅದರಿಂದ ಅಷ್ಟೇ ಫಾಸ್ಟಾಗಿ ಆಗುವ ದುಷ್ಪರಿಣಾಮಗಳ ಬಗ್ಗೆ ತಿಳಿದಿರಲ್ಲ.

ಹೌದು, ಇಂತಹ ಆರೋಗ್ಯಕ್ಕೆ ಮಾರಕವಾದ ಜೀವನ ಶೈಲಿಯ ಮಧ್ಯೆ ಆರೋಗ್ಯಕರ ಆಹಾರಗಳನ್ನು ಜನ ಮರೆತಿದ್ದಾರೆ. ಸೊಪ್ಪು ತರಕಾರಿ, ಕಾಳುಗಳು ಆರೋಗ್ಯ ವೃದ್ಧಿಸುವಲ್ಲಿ ತುಂಬಾ ಉಪಯುಕ್ತ. ಅದರಲ್ಲೂ ಮೊಳಕೆ ಬಂದ ಕಾಳುಗಳ ಸೇವನೆಯಿಂದ ಎಷ್ಟು ಲಾಭ ಎನ್ನುವುದು ಹಲವರಿಗೆ ಗೊತ್ತಿರಲ್ಲ. ಕಾಳುಗಳನ್ನು ಹಾಗೆಯೇ ತಿನ್ನುವುದಕ್ಕಿಂತ ಅದನ್ನು ನೀರಲ್ಲಿ ನೆನಸಿಟ್ಟು, ಮೊಳಕೆ ಬಂದ ಮೇಲೆ ತಿಂದ್ರೆ ಅದರಲ್ಲಿ ಪೌಷ್ಟಿಕಾಂಶ ಜಾಸ್ತಿ ಇರುತ್ತದೆ. ಮೊಳಕೆ ಒಡೆದ ಕಾಳುಗಳನ್ನು ಬೇಯಿಸಿ ತಿನ್ನುವುದಕ್ಕಿಂದ ಹಸಿಯಾಗಿಯೇ ಸೇವಿಸುವುದು ಉತ್ತಮ. ಯಾಕೆಂದರೆ ಮೊಳಕೆ ಕಾಳುಗಳನ್ನು ಬೇಯಿಸಿದಾಗ ಅದರ ಪೌಷ್ಟಿಕತೆ ದೇಹಕ್ಕೆ ಸಿಗಲ್ಲ. ಮೊಳಕೆ ಕಾಳಲ್ಲಿ ಪ್ರೋಟಿನ್, ಫೈಬರ್, ವಿಟಮಿನ್ಸ್, ಕಬ್ಬಿಣದ ಅಂಶ, ಕ್ಯಾಲ್ಸಿಯಂ ಹೀಗೆ ದೇಹಕ್ಕೆ ಬೇಕಾದ ಆರೋಗ್ಯಕರ ಅಂಶಗಳು ಇರುತ್ತದೆ. ಆದ್ದರಿಂದ ಮೊಳಕೆ ಕಾಳು ದೇಹಕ್ಕೆ ಒಳ್ಳೆಯದು.

ಅನೇಕ ಅದ್ಭುತ ಲಾಭಗಳನ್ನು ತನ್ನೊಳಗೆ ಅಡಗಿಸಿಕೊಂಡಿರೋ ಮೊಳಕೆ ಕಾಳುಗಳಲ್ಲಿ ಮೊಳಕೆ ಒಡೆದ ಹೆಸರು ಕಾಳು ಒಂದು. ಈ ಮೊಳಕೆ ಒಡೆದ ಹೆಸರು ಕಾಳು ಆರೋಗ್ಯಕ್ಕೆ ಎಷ್ಟು ಉಪಯುಕ್ತ? ಅದರ ಲಾಭಗಳೇನು? ಅದನ್ನು ಯಾಕೆ ಸೇವಿಸಬೇಕು ಅನ್ನೋದರ ಸಂಪೂರ್ಣ ಮಾಹಿತಿ ಇಲ್ಲಿದೆ..

ಮೊಳಕೆ ಬಂದ ಹೆಸರು ಕಾಳಿನ ಲಾಭಗಳೇನು?

1. ಜೀರ್ಣಶಕ್ತಿ ವೃದ್ಧಿಸುತ್ತೆ
ಹೆಸರು ಕಾಳನ್ನು ನೀರಿನಲ್ಲಿ ನೆನಸಿಟ್ಟು, ಬಳಿಕ ಮೊಳಕೆ ಬಂದ ಮೇಲೆ ಸೇವಿಸುವುದರಿಂದ ಜೀರ್ಣಶಕ್ತಿ ಉತ್ತಮವಾಗುತ್ತೆ. ಇದರಲ್ಲಿರೋ ಪೌಷ್ಟಿಕಾಂಶ ಜೀರ್ಣಕ್ರಿಯೆಯನ್ನು ಸರಾಗ ಮಾಡುತ್ತದೆ. ಅಲ್ಲದೆ ಫೈಬರ್ ಅಂಶವು ದೇಹದಲ್ಲಿ ಆಹಾರದ ಸಂಚಾರ ಸರಿಯಾಗಿ ಆಗುವಂತೆ ನೋಡಿಕೊಂಡು ಮಲಬದ್ಧತೆ ತೊಂದರೆಯನ್ನು ನಿವಾರಿಸುತ್ತದೆ.

2. ಹೃದಯದ ಆರೋಗ್ಯ ಕಾಪಾಡುತ್ತೆ
ಮೊಳಕೆ ಬಂದ ಹೆಸರು ಕಾಳು ತಿನ್ನುವುದರಿಂದ ಹೃದಯದ ಆರೋಗ್ಯ ಉತ್ತಮವಾಗುತ್ತದೆ. ಇದರಲ್ಲಿರೋ ಒಮೇಗಾ ಫ್ಯಾಟೀ ಆಸಿಡ್ ದೇಹಕ್ಕೆ ಬೇಕಾದ ಒಳ್ಳೆಯ ಕೊಬ್ಬಿನ ಅಂಶ ನೀಡಿ ರಕ್ತನಾಳದ ಆರೋಗ್ಯ ಕಾಪಾಡುತ್ತೆ. ಇದರಲ್ಲಿನ ಆಂಟಿ ಇನ್ಪ್ಲಮೇಟರಿ ಗುಣ ರಕ್ತನಾಳಗಳ ಮೇಲಿರೋ ಒತ್ತಡವನ್ನೂ ಕಡಿಮೆ ಮಾಡುತ್ತದೆ. ರಕ್ತದ ಸಂಚಾರ ಹೆಚ್ಚಿಸಿ ದೇಹಕ್ಕೆ ಹೆಚ್ಚು ಆಕ್ಸಿಜನ್ ಸಿಗುವ ಹಾಗೆ ಮಾಡಿ ಸ್ಟ್ರೋಕ್ ಹಾಗೂ ಹೃದಯಾಘಾತ ಆಗದಂತೆ ನೋಡಿಕೊಳ್ಳುತ್ತದೆ.

3. ರೋಗ ನಿರೋಧಕ ಶಕ್ತಿ ಹೆಚ್ಚಿಸುತ್ತದೆ
ಇದರಲ್ಲಿರುವ ವಿಟಮಿನ್ ಸಿ ದೇಹಕ್ಕೆ ಇನ್ಫೆಕ್ಷನ್ ಆಗೋದನ್ನ ತಡೆಯುತ್ತದೆ. ಇದರ ಜೊತೆ ವಿಟಮಿನ್ ಎ ಅಂಶ ಕೂಡ ಹೆಚ್ಚಾಗಿ ಇರೋದ್ರಿಂದ ದೇಹಕ್ಕೆ ಹೆಚ್ಚಿನ ಆಂಟಿ ಆಕ್ಸಿಡೆಂಟ್ಸ್ ಸಿಗುವ ರೀತಿ ನಿಗಾವಹಿಸಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.

4. ಕ್ಯಾನ್ಸರ್ ಬಾರದ ಹಾಗೆ ನೋಡಿಕೊಳ್ಳುತ್ತದೆ
ವಿಟಮಿನ್ ಎ, ಸಿ, ಅಮಿನೋ ಆಸಿಡ್ಸ್ ಹಾಗೂ ಪ್ರೋಟಿನ್ ಅಂಶ ದೇಹದಲ್ಲಿ ಫ್ರೀ ರಾಡಿಕಲ್ಸ್ ಸೇರದ ಹಾಗೆ ನೋಡಿಕೊಳ್ಳುತ್ತದೆ. ದೇಹದಲ್ಲಿ ಆಗುವ ಹಲವಾರು ಕ್ರಿಯೆಗಳ ಪರಿಣಾಮವಾಗಿ ಫ್ರೀ ರಾಡಿಕಲ್ಸ್ ಉತ್ಪತ್ತಿ ಆಗುತ್ತದೆ. ಇದರಿಂದ ದೇಹಕ್ಕೆ ಕ್ಯಾನ್ಸರ್ ಸೆಲ್ಸ್ ಸೇರುತ್ತದೆ. ಅಷ್ಟೇ ಅಲ್ಲದೆ ಸಾಕಷ್ಟು ಕಾಯಿಲೆಗಳು ಬರೋದಕ್ಕೆ ಇದು ಕಾರಣವಾಗುತ್ತದೆ. ಬೇಗ ಸುಸ್ತಾಗೋದು, ಕಣ್ಣು ಮಂಜಾಗುವುದು, ಹೃದಯಕ್ಕೆ ಸಂಬಂಧ ಪಟ್ಟ ತೊಂದರೆ ಕಾಣಿಸಿಕೊಳ್ಳುತ್ತದೆ. ಆದ್ದರಿಂದ ಇಂತಹ ತೊಂದರೆಗಳಿಂದ ದೂರವಿರಲು ಮೊಳಕೆ ಬಂದ ಹೆಸರು ಕಾಳನ್ನು ಸೇವಿಸಬೇಕು.

5. ತೂಕ ಕಡಿಮೆ ಮಾಡುತ್ತದೆ ಹಾಗೂ ತ್ವಚೆಯ ಆರೋಗ್ಯ ಕಾಪಾಡುತ್ತೆ
ಮೊಳಕೆ ಬಂದ ಹೆಸರು ಕಾಳಿನಲ್ಲಿ ಕ್ಯಾಲೋರೀಸ್ ಇಲ್ಲದ ಕಾರಣ ಇದನ್ನು ಎಷ್ಟು ತಿಂದರೂ ತೂಕ ಹೆಚ್ಚಾಗಲ್ಲ. ಬದಲಾಗಿ ತೂಕ ಕಡಿಮೆ ಆಗುತ್ತೆ. ಮೊಳಕೆ ಬಂದ ಹೆಸರು ಕಾಳನ್ನು ತಿನ್ನುವುದರಿಂದ ಇದರಲ್ಲಿರೋ ಫೈಬರ್ ನಿಮ್ಮ ದೇಹಕ್ಕೆ ಸೇರಿ ಹೊಟ್ಟೆ ತುಂಬುವ ಹಾಗೆ ಮಾಡುತ್ತೆ. ಆದರ ಜೊತೆ ಪದೇ ಪದೇ ಹಸಿವಾಗದ ರೀತಿ ನೋಡಿಕೊಳ್ಳುತ್ತದೆ. ಹಾಗೆಯೇ ಸ್ಥೂಲಕಾಯ ಮತ್ತು ಮಧುಮೇಹ ಕಾಯಿಲೆ ಬಾರದಂತೆ ನೋಡಿಕೊಳ್ಳುತ್ತದೆ. ಪ್ರತಿನಿತ್ಯ ಹೆಸರು ಕಾಳನ್ನು ತಿನ್ನುವುದರಿಂದ ತ್ವಚೆಯ ಆರೋಗ್ಯ ಕೂಡ ಚೆನ್ನಾಗಿರುತ್ತದೆ. ಅಲ್ಲದೆ ತ್ವಚೆಗೆ ಕಾಂತಿಯನ್ನು ನೀಡುತ್ತದೆ. ಇದರಿಂದ ಆಕರ್ಷಕ ಸೌಂದರ್ಯವನ್ನು ಕೂಡ ನೀವು ಪಡೆಯಬಹುದು.

ದುಬಾರಿ ಔಷಧಿಗಳ ಮೊರೆ ಹೋಗುವ ಬದಲು ಮೊಳಕೆ ಬಂದ ಕಾಳನ್ನು ಸೇವನೆ ಮಾಡುವುದು ಉತ್ತಮ. ಹೀಗಾಗಿ ಮೊಳಕೆ ಬಂದ ಕಾಳನ್ನು ಸೇವಿಸಿ ನಿಮ್ಮ ಆರೋಗ್ಯವನ್ನು ವೃದ್ಧಿಸಿಕೊಳ್ಳುವುದು ಒಳಿತು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    2019ರ ಈ ವರ್ಷದಲ್ಲಿ ಈ ರಾಶಿಗಳಿಗೆ ರಾಜಯೋಗ ಬರಲಿದೆ..!ನಿಮ್ಮ ರಾಶಿ ಯಾವುದು ನೋಡಿ…

    ಹೊಸ ವರ್ಷ ಹೊಸದಾಗಿರಲಿ ಎಂಬುದು ಪ್ರತಿಯೊಬ್ಬರ ಆಸೆ. ಜ್ಯೋತಿಷ್ಯ ಶಾಸ್ತ್ರ ಕೂಡ ಈ ವರ್ಷ ಯಾವ ರಾಶಿಯವರಿಗೆ ರಾಜಯೋಗ ಎಂಬುದನ್ನು ಹೇಳಿದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ 2019 ಕುಂಭ ರಾಶಿಯವರಿಗೆ ಶುಭ ಫಲಗಳನ್ನು ನೀಡಲಿದೆಯಂತೆ. ಕುಂಭ ರಾಶಿಯವರ ಪ್ರತಿಯೊಂದು ಸಮಸ್ಯೆ ದೂರವಾಗಿ ಯಶಸ್ಸು ಅರಸಿ ಬರಲಿದೆಯಂತೆ. ಸಂತೋಷ ಎಲ್ಲೆಲ್ಲೂ ಮನೆ ಮಾಡಿರಲಿದೆಯಂತೆ. 2019 ಕುಂಭ ರಾಶಿಯವರಿಗೆ ಸರಳ ಹಾಗೂ ಸುಲಭವಾಗಿರಲಿದೆಯಂತೆ. ಮಂಗಳಕರ ಘಟನೆಗಳು ನಡೆಯಲಿದ್ದು, ಉದ್ಯೋಗ, ಬಡ್ತಿ ಪ್ರಾಪ್ತಿಯಾಗಲಿದೆಯಂತೆ. ಕಂಕಣ ಬಲ ಕೂಡಿ ಬರಲಿದೆಯಂತೆ. ಮಾನ, ಸನ್ಮಾನ,…

  • ರಾಜಕೀಯ

    ಮಣ್ಣಿನ ಮಗ ಮಾಜಿ ಪ್ರಧಾನಿ “ಹೆಚ್.ಡಿ.ದೇವೇಗೌಡ”ರಿಗೆ “ರಾಷ್ಟ್ರಪತಿ” ಸ್ಥಾನಕ್ಕೆ ಸ್ಪರ್ಧಿಸುವಂತೆ ಆಹ್ವಾನ

    ರಾಷ್ಟ್ರಪತಿ ಸ್ಥಾನಕ್ಕೆ ಸ್ಪರ್ಧಿಸುವಂತೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರಿಗೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಆಹ್ವಾನ ನೀಡಿದ್ದಾರೆ.

  • ಸುದ್ದಿ

    ಟ್ರಾಫಿಕ್ ಪೊಲೀಸ್ ಹಾಕಿದ ದುಬಾರಿ ದಂಡ ಕೇಳಿ ತನ್ನ ಬೈಕನ್ನೇ ಸುಟ್ಟ ಸವಾರ…!

    ಟ್ರಾಫ್ರಿಕ್ ನಿಯಮ ಉಲ್ಲಂಘಿಸಿ,  ದುಬಾರಿ ದಂಡ ಕಟ್ಟಲು ಸಾಧ್ಯವಾಗದೇ ಗೋಗೆರೆದ, ಮನವಿ ಮಾಡಿದ, ಪೊಲೀಸರಿಂದ ತಪ್ಪಿಸಿಕೊಂಡು ಹೋದ ಘಟನೆಗಳು ವರಿದಿಯಾಗಿದೆ. ಆದರೆ ದಂಡ ಮೊತ್ತ ಕೇಳಿ ತನ್ನ ಬೈಕನ್ನೇ ಸುಟ್ಟ ಘಟನೆ ನಡೆದಿದೆ. ಹೆಲ್ಮೆಟ್ ಹಾಕದೆ, ಸಿಗ್ನಲ್ ನೋಡದೆ, ಒನ್ ವೇ, ಪಾರ್ಕಿಂಗ್ ಗಮನಿಸದೆ, ನಾವು ನಡೆದಿದ್ದೇ ದಾರಿ ಎಂದು ಸವಾರಿ ಮಾಡುತ್ತಿದ್ದ ವಾಹನ ಸವಾರರು ಇದೀಗ ಟ್ರಾಫಿಕ್ ನಿಯಮ ಪಾಲಿಸುವಂತಾಗಿದೆ. ಒಂದೆರಡು ಸಿಗ್ನಲ್ ಜಂಪ್ ಮಾಡಿದರೆ ಸಾಕು ದಂಡ 20,000 ರೂಪಾಯಿ ದಾಟಿರುತ್ತೆ. ಹೀಗೆ ನಿಯಮ…

  • KOLAR NEWS PAPER

    ಯೋಗಥಾನ್ ಕಾರ್ಯಕ್ರಮ: ಪೂರ್ವ ಸಿದ್ಧತೆ ಪರಿಶೀಲನೆ

    ಜಿಲ್ಲೆಯಲ್ಲಿ ಜನವರಿ 15 ರಂದು ಬೆಳಿಗ್ಗೆ 6.00 ಗಂಟೆಗೆ ಕೋಲಾರ ನಗರದ ಸರ್ ಎಂ.ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಜಿಲ್ಲಾ ಮಟ್ಟದ ಯೋಗಥಾನ್ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮದ ಪೂರ್ವ ಸಿದ್ಧತೆಯನ್ನು ಹಾಗೂ ಯೋಗ ತಾಲೀಮು ಪರಿಶೀಲಿಸಿ ಎಲ್ಲಾ ವ್ಯವಸ್ಥೆಗಳು ಸರಿಯಾಗಿವೆಯೇ ಎಂದು ಖುದ್ದು ಜಿಲ್ಲಾಧಿಕಾರಿಗಳಾದ ವೆಂಕಟ್ ರಾಜಾ ಅವರು ಇಂದು ಪರಿಶೀಲನೆ ನಡೆಸಿದರು. 15ನೇ ಜನವರಿಯಂದು ಜಿಲ್ಲಾ ಮಟ್ಟದಲ್ಲಿ ನಡೆಯುವ ಯೋಗಥಾನ್ ಕಾರ್ಯಕ್ರಮದಲ್ಲಿ ಜಿಲ್ಲೆಯ ಆಯ್ದ ಶಾಲಾ ವಿದ್ಯಾರ್ಥಿಗಳು, ದೈಹಿಕ ಶಿಕ್ಷಕರು, ಯೋಗಪಟುಗಳು ಸೇರಿದಂತೆ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ…

  • ಸುದ್ದಿ

    ಸರ್ಕಾರಿ ನೌಕರರಿಗೆ ಭರ್ಜರಿ ಕೊಡುಗೆ ನೀಡಿದ ಮೋದಿ ಸರ್ಕಾರ,.!!

    ನವದೆಹಲಿ, ಅಕ್ಟೋಬರ್ 04:ಪ್ರಧಾನಿ ನರೇಂದ್ರ ಮೋದಿ ನೇತೃತ್ವದ 2.0 ಸರ್ಕಾರದ ಮೊದಲ ಬಜೆಟ್ ನಲ್ಲಿ ಕೇಂದ್ರ ಸರ್ಕಾರಿ ನೌಕರರಿಗೆ7ನೇ ವೇತನ ಆಯೋಗದ ಶಿಫಾರಸ್ಸಿನಂತೆ ತುಟ್ಟಿಭತ್ಯೆ ಹೆಚ್ಚಳವಾಗಲಿದೆ. ಶೇ 05ರಷ್ಟು ತುಟ್ಟಿಭತ್ಯೆ ಹೆಚ್ಚಳಖಾತ್ರಿಯಾಗಿದೆ. ಇದರ ಜೊತೆಗೆ 7ನೇ ವೇತನಾ ಆಯೋಗದ ಅನ್ವಯ ಕೇಂದ್ರ ಸರ್ಕಾರ ಸ್ವಾಮ್ಯದ ಆರೋಗ್ಯ ಸಂಸ್ಥೆಗಳನೌಕರರಿಗೆ ಸಂಬಳ ಏರಿಕೆ, ಬಾಕಿ ಮೊತ್ತ(Arrears) ಕೂಡಾ ಲಭಿಸುತ್ತಿದೆ. ಆದರೆ, ಸರ್ಕಾರಿ ನೌಕರರ ಬೇಡಿಕೆಗಳುಇನ್ನು ಕಡಿಮೆಯಾಗಿಲ್ಲ. ಪ್ರಮುಖ ಬೇಡಿಕೆಗಳು ಈಡೇರಿಲ್ಲ. ಬೇಡಿಕೆಗೆ ಅನುಸಾರವಾಗಿ ಮೂಲ ವೇತನವನ್ನುಏರಿಕೆ ಮಾಡುವುದು ಹಾಗೂ ಫಿಟ್ಮೆಂಟ್…

  • ಜ್ಯೋತಿಷ್ಯ

    ಗಂಡನನ್ನು ಹೆಚ್ಚಾಗಿ ಪ್ರೀತಿಸುವ ವಿಚಾರದಲ್ಲಿ ಈ ರಾಶಿಗಳ ಹುಡುಗಿಯರು ತುಂಬಾ ಮುಂದು…ಇದರಲ್ಲಿ ನಿಮ್ಮ ರಾಶಿಯೂ ಇದೆಯಾ ನೋಡಿ

    ಪ್ರತಿಯೊಬ್ಬರ ನಡವಳಿಕೆಯನ್ನು ಅವ್ರ ರಾಶಿ ಆಧಾರದ ಮೇಲೆ ಹೇಳಬಹುದು. ವ್ಯಕ್ತಿ ವರ್ತನೆಗೂ ರಾಶಿಗೂ ಸಂಬಂಧವಿದೆ. ಯಾವ ವ್ಯಕ್ತಿ ಕೋಪಿಷ್ಟ? ಯಾವ ವ್ಯಕ್ತಿ ಅದೃಷ್ಟವಂತ ಎಂಬುದನ್ನು ರಾಶಿ ನೋಡಿಯೇ ಪಂಡಿತರು ಹೇಳ್ತಾರೆ. ರಾಶಿ ಹಾಗೂ ಪ್ರಣಯಕ್ಕೂ ಸಂಬಂಧವಿದೆ. ಯಾವ ಹುಡುಗಿಯರು ಮದುವೆಯಾದ್ಮೇಲೆ ಸಂಗಾತಿಯನ್ನು ಅತಿ ಹೆಚ್ಚು ತೃಪ್ತಿಪಡಿಸ್ತಾರೆ? ಸಂಗಾತಿ ಜೊತೆ ಉತ್ತಮ ಸಂಬಂಧ ಹೊಂದಿರುತ್ತಾರೆ ಎಂಬುದನ್ನು ರಾಶಿ ಮೂಲಕವೇ ಹೇಳಬಹುದು. ಮಕರ ರಾಶಿಯ ಹುಡುಗಿಯರು ಪ್ರೀತಿ ವಿಚಾರದಲ್ಲಿ ಎಂದೂ ಮೋಸ ಮಾಡುವುದಿಲ್ಲವಂತೆ. ಪತಿಯನ್ನು ನಿಷ್ಠೆಯಿಂದ ಪ್ರೀತಿ ಮಾಡುತ್ತಾರಂತೆ. ಮದುವೆಯಾದ್ಮೇಲೆ…