ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬ್ಯುಸಿ ಜೀವನ ಶೈಲಿಯಲ್ಲಿ ನಮ್ಮ ಆರೋಗ್ಯದ ಬಗ್ಗೆ ಕಾಳಜಿ ತೋರಿಸೋಕೆ ಸಮಯ ಸಿಗ್ತಿಲ್ಲ. ಅದರಲ್ಲೂ ಇತ್ತೀಚಿನ ಕಾಲಘಟ್ಟದಲ್ಲಿ ಆರೋಗ್ಯಕರ ಆಹಾರಕ್ಕಿಂತ ಫಾಸ್ಟ್ ಫುಡ್ಗಳ ಹಾವಳಿಯೇ ಹೆಚ್ಚಾಗಿದೆ. ಆದ್ದರಿಂದ ಆರೋಗ್ಯಕರ ಆಹಾರಗಳು ಯಾವುದು? ಅದರ ಲಾಭಗಳೇನು..? ಎನ್ನುವ ವಿಷಯವೇ ಅನೇಕರಿಗೆ ತಿಳಿದಿಲ್ಲ. ಫಾಸ್ಟ್ ಫುಡ್ಸ್ ಗಳ ರುಚಿಗೆ ಮನಸೋತ ಮಂದಿಗೆ ಅದರಿಂದ ಅಷ್ಟೇ ಫಾಸ್ಟಾಗಿ ಆಗುವ ದುಷ್ಪರಿಣಾಮಗಳ ಬಗ್ಗೆ ತಿಳಿದಿರಲ್ಲ.

ಹೌದು, ಇಂತಹ ಆರೋಗ್ಯಕ್ಕೆ ಮಾರಕವಾದ ಜೀವನ ಶೈಲಿಯ ಮಧ್ಯೆ ಆರೋಗ್ಯಕರ ಆಹಾರಗಳನ್ನು ಜನ ಮರೆತಿದ್ದಾರೆ. ಸೊಪ್ಪು ತರಕಾರಿ, ಕಾಳುಗಳು ಆರೋಗ್ಯ ವೃದ್ಧಿಸುವಲ್ಲಿ ತುಂಬಾ ಉಪಯುಕ್ತ. ಅದರಲ್ಲೂ ಮೊಳಕೆ ಬಂದ ಕಾಳುಗಳ ಸೇವನೆಯಿಂದ ಎಷ್ಟು ಲಾಭ ಎನ್ನುವುದು ಹಲವರಿಗೆ ಗೊತ್ತಿರಲ್ಲ. ಕಾಳುಗಳನ್ನು ಹಾಗೆಯೇ ತಿನ್ನುವುದಕ್ಕಿಂತ ಅದನ್ನು ನೀರಲ್ಲಿ ನೆನಸಿಟ್ಟು, ಮೊಳಕೆ ಬಂದ ಮೇಲೆ ತಿಂದ್ರೆ ಅದರಲ್ಲಿ ಪೌಷ್ಟಿಕಾಂಶ ಜಾಸ್ತಿ ಇರುತ್ತದೆ. ಮೊಳಕೆ ಒಡೆದ ಕಾಳುಗಳನ್ನು ಬೇಯಿಸಿ ತಿನ್ನುವುದಕ್ಕಿಂದ ಹಸಿಯಾಗಿಯೇ ಸೇವಿಸುವುದು ಉತ್ತಮ. ಯಾಕೆಂದರೆ ಮೊಳಕೆ ಕಾಳುಗಳನ್ನು ಬೇಯಿಸಿದಾಗ ಅದರ ಪೌಷ್ಟಿಕತೆ ದೇಹಕ್ಕೆ ಸಿಗಲ್ಲ. ಮೊಳಕೆ ಕಾಳಲ್ಲಿ ಪ್ರೋಟಿನ್, ಫೈಬರ್, ವಿಟಮಿನ್ಸ್, ಕಬ್ಬಿಣದ ಅಂಶ, ಕ್ಯಾಲ್ಸಿಯಂ ಹೀಗೆ ದೇಹಕ್ಕೆ ಬೇಕಾದ ಆರೋಗ್ಯಕರ ಅಂಶಗಳು ಇರುತ್ತದೆ. ಆದ್ದರಿಂದ ಮೊಳಕೆ ಕಾಳು ದೇಹಕ್ಕೆ ಒಳ್ಳೆಯದು.
ಅನೇಕ ಅದ್ಭುತ ಲಾಭಗಳನ್ನು ತನ್ನೊಳಗೆ ಅಡಗಿಸಿಕೊಂಡಿರೋ ಮೊಳಕೆ ಕಾಳುಗಳಲ್ಲಿ ಮೊಳಕೆ ಒಡೆದ ಹೆಸರು ಕಾಳು ಒಂದು. ಈ ಮೊಳಕೆ ಒಡೆದ ಹೆಸರು ಕಾಳು ಆರೋಗ್ಯಕ್ಕೆ ಎಷ್ಟು ಉಪಯುಕ್ತ? ಅದರ ಲಾಭಗಳೇನು? ಅದನ್ನು ಯಾಕೆ ಸೇವಿಸಬೇಕು ಅನ್ನೋದರ ಸಂಪೂರ್ಣ ಮಾಹಿತಿ ಇಲ್ಲಿದೆ..

ಮೊಳಕೆ ಬಂದ ಹೆಸರು ಕಾಳಿನ ಲಾಭಗಳೇನು?
1. ಜೀರ್ಣಶಕ್ತಿ ವೃದ್ಧಿಸುತ್ತೆ
ಹೆಸರು ಕಾಳನ್ನು ನೀರಿನಲ್ಲಿ ನೆನಸಿಟ್ಟು, ಬಳಿಕ ಮೊಳಕೆ ಬಂದ ಮೇಲೆ ಸೇವಿಸುವುದರಿಂದ ಜೀರ್ಣಶಕ್ತಿ ಉತ್ತಮವಾಗುತ್ತೆ. ಇದರಲ್ಲಿರೋ ಪೌಷ್ಟಿಕಾಂಶ ಜೀರ್ಣಕ್ರಿಯೆಯನ್ನು ಸರಾಗ ಮಾಡುತ್ತದೆ. ಅಲ್ಲದೆ ಫೈಬರ್ ಅಂಶವು ದೇಹದಲ್ಲಿ ಆಹಾರದ ಸಂಚಾರ ಸರಿಯಾಗಿ ಆಗುವಂತೆ ನೋಡಿಕೊಂಡು ಮಲಬದ್ಧತೆ ತೊಂದರೆಯನ್ನು ನಿವಾರಿಸುತ್ತದೆ.
2. ಹೃದಯದ ಆರೋಗ್ಯ ಕಾಪಾಡುತ್ತೆ
ಮೊಳಕೆ ಬಂದ ಹೆಸರು ಕಾಳು ತಿನ್ನುವುದರಿಂದ ಹೃದಯದ ಆರೋಗ್ಯ ಉತ್ತಮವಾಗುತ್ತದೆ. ಇದರಲ್ಲಿರೋ ಒಮೇಗಾ ಫ್ಯಾಟೀ ಆಸಿಡ್ ದೇಹಕ್ಕೆ ಬೇಕಾದ ಒಳ್ಳೆಯ ಕೊಬ್ಬಿನ ಅಂಶ ನೀಡಿ ರಕ್ತನಾಳದ ಆರೋಗ್ಯ ಕಾಪಾಡುತ್ತೆ. ಇದರಲ್ಲಿನ ಆಂಟಿ ಇನ್ಪ್ಲಮೇಟರಿ ಗುಣ ರಕ್ತನಾಳಗಳ ಮೇಲಿರೋ ಒತ್ತಡವನ್ನೂ ಕಡಿಮೆ ಮಾಡುತ್ತದೆ. ರಕ್ತದ ಸಂಚಾರ ಹೆಚ್ಚಿಸಿ ದೇಹಕ್ಕೆ ಹೆಚ್ಚು ಆಕ್ಸಿಜನ್ ಸಿಗುವ ಹಾಗೆ ಮಾಡಿ ಸ್ಟ್ರೋಕ್ ಹಾಗೂ ಹೃದಯಾಘಾತ ಆಗದಂತೆ ನೋಡಿಕೊಳ್ಳುತ್ತದೆ.
3. ರೋಗ ನಿರೋಧಕ ಶಕ್ತಿ ಹೆಚ್ಚಿಸುತ್ತದೆ
ಇದರಲ್ಲಿರುವ ವಿಟಮಿನ್ ಸಿ ದೇಹಕ್ಕೆ ಇನ್ಫೆಕ್ಷನ್ ಆಗೋದನ್ನ ತಡೆಯುತ್ತದೆ. ಇದರ ಜೊತೆ ವಿಟಮಿನ್ ಎ ಅಂಶ ಕೂಡ ಹೆಚ್ಚಾಗಿ ಇರೋದ್ರಿಂದ ದೇಹಕ್ಕೆ ಹೆಚ್ಚಿನ ಆಂಟಿ ಆಕ್ಸಿಡೆಂಟ್ಸ್ ಸಿಗುವ ರೀತಿ ನಿಗಾವಹಿಸಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.

4. ಕ್ಯಾನ್ಸರ್ ಬಾರದ ಹಾಗೆ ನೋಡಿಕೊಳ್ಳುತ್ತದೆ
ವಿಟಮಿನ್ ಎ, ಸಿ, ಅಮಿನೋ ಆಸಿಡ್ಸ್ ಹಾಗೂ ಪ್ರೋಟಿನ್ ಅಂಶ ದೇಹದಲ್ಲಿ ಫ್ರೀ ರಾಡಿಕಲ್ಸ್ ಸೇರದ ಹಾಗೆ ನೋಡಿಕೊಳ್ಳುತ್ತದೆ. ದೇಹದಲ್ಲಿ ಆಗುವ ಹಲವಾರು ಕ್ರಿಯೆಗಳ ಪರಿಣಾಮವಾಗಿ ಫ್ರೀ ರಾಡಿಕಲ್ಸ್ ಉತ್ಪತ್ತಿ ಆಗುತ್ತದೆ. ಇದರಿಂದ ದೇಹಕ್ಕೆ ಕ್ಯಾನ್ಸರ್ ಸೆಲ್ಸ್ ಸೇರುತ್ತದೆ. ಅಷ್ಟೇ ಅಲ್ಲದೆ ಸಾಕಷ್ಟು ಕಾಯಿಲೆಗಳು ಬರೋದಕ್ಕೆ ಇದು ಕಾರಣವಾಗುತ್ತದೆ. ಬೇಗ ಸುಸ್ತಾಗೋದು, ಕಣ್ಣು ಮಂಜಾಗುವುದು, ಹೃದಯಕ್ಕೆ ಸಂಬಂಧ ಪಟ್ಟ ತೊಂದರೆ ಕಾಣಿಸಿಕೊಳ್ಳುತ್ತದೆ. ಆದ್ದರಿಂದ ಇಂತಹ ತೊಂದರೆಗಳಿಂದ ದೂರವಿರಲು ಮೊಳಕೆ ಬಂದ ಹೆಸರು ಕಾಳನ್ನು ಸೇವಿಸಬೇಕು.
5. ತೂಕ ಕಡಿಮೆ ಮಾಡುತ್ತದೆ ಹಾಗೂ ತ್ವಚೆಯ ಆರೋಗ್ಯ ಕಾಪಾಡುತ್ತೆ
ಮೊಳಕೆ ಬಂದ ಹೆಸರು ಕಾಳಿನಲ್ಲಿ ಕ್ಯಾಲೋರೀಸ್ ಇಲ್ಲದ ಕಾರಣ ಇದನ್ನು ಎಷ್ಟು ತಿಂದರೂ ತೂಕ ಹೆಚ್ಚಾಗಲ್ಲ. ಬದಲಾಗಿ ತೂಕ ಕಡಿಮೆ ಆಗುತ್ತೆ. ಮೊಳಕೆ ಬಂದ ಹೆಸರು ಕಾಳನ್ನು ತಿನ್ನುವುದರಿಂದ ಇದರಲ್ಲಿರೋ ಫೈಬರ್ ನಿಮ್ಮ ದೇಹಕ್ಕೆ ಸೇರಿ ಹೊಟ್ಟೆ ತುಂಬುವ ಹಾಗೆ ಮಾಡುತ್ತೆ. ಆದರ ಜೊತೆ ಪದೇ ಪದೇ ಹಸಿವಾಗದ ರೀತಿ ನೋಡಿಕೊಳ್ಳುತ್ತದೆ. ಹಾಗೆಯೇ ಸ್ಥೂಲಕಾಯ ಮತ್ತು ಮಧುಮೇಹ ಕಾಯಿಲೆ ಬಾರದಂತೆ ನೋಡಿಕೊಳ್ಳುತ್ತದೆ. ಪ್ರತಿನಿತ್ಯ ಹೆಸರು ಕಾಳನ್ನು ತಿನ್ನುವುದರಿಂದ ತ್ವಚೆಯ ಆರೋಗ್ಯ ಕೂಡ ಚೆನ್ನಾಗಿರುತ್ತದೆ. ಅಲ್ಲದೆ ತ್ವಚೆಗೆ ಕಾಂತಿಯನ್ನು ನೀಡುತ್ತದೆ. ಇದರಿಂದ ಆಕರ್ಷಕ ಸೌಂದರ್ಯವನ್ನು ಕೂಡ ನೀವು ಪಡೆಯಬಹುದು.
ದುಬಾರಿ ಔಷಧಿಗಳ ಮೊರೆ ಹೋಗುವ ಬದಲು ಮೊಳಕೆ ಬಂದ ಕಾಳನ್ನು ಸೇವನೆ ಮಾಡುವುದು ಉತ್ತಮ. ಹೀಗಾಗಿ ಮೊಳಕೆ ಬಂದ ಕಾಳನ್ನು ಸೇವಿಸಿ ನಿಮ್ಮ ಆರೋಗ್ಯವನ್ನು ವೃದ್ಧಿಸಿಕೊಳ್ಳುವುದು ಒಳಿತು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕಿಮೊಥೆರಪಿ ಹಾಗು ರೇಡಿಯೇಶನ್ ಥೆರಪಿ ಮಾಡಿಸಿಕೊಂಡಲ್ಲಿ ಕೂದಲು ಉದುರುವಿಕೆ ಅಥವಾ ಅಲೋಪಿಶಿಯಾವು ಒಂದು ಪ್ರಧಾನ ಅಡ್ಡ ಪರಿಣಾಮವಾಗಿ ಕಾಣಿಸಿಕೊಳ್ಳುತ್ತದೆ. ಕೆಲವೊಮ್ಮೆ ಕೂದಲು ಉದುರುವಿಕೆಯು ಭಾಗಶಃ ಕಾಣಿಸಿಕೊಳ್ಳಬಹುದು ಅಥವಾ ಮುಖ, ಕೈ, ತಲೆ, ಕಾಲು, ಕಂಕುಳು ಹಾಗು ಜನನಾಂಗದ ಭಾಗದ ಮೇಲಿರುವ ಕೂದಲುಗಳೆಲ್ಲಾ ಸಹ ಉದುರಲು ಆರಂಭಿಸಬಹುದು.
ಬೆಳಿಗ್ಗೆ ಚೆನ್ನಾಗಿದ್ದರೆ ಇಡೀ ದಿನ ಚೆನ್ನಾಗಿರುತ್ತೆ ಎಂಬ ಮಾತಿದೆ. ಇದು ನೂರಕ್ಕೆ ನೂರು ಸತ್ಯ. ಬೆಳಿಗ್ಗೆ ನಮ್ಮ ಮೂಡ್ ಹಾಳಾದ್ರೆ ಇಡೀ ದಿನ ಮನಸ್ಸು ಅಶಾಂತವಾಗಿರುತ್ತೆ. ಹಾಗಾಗಿ ಬೆಳಿಗ್ಗೆ ಎದ್ದ ತಕ್ಷಣ ಏನು ಮಾಡಬೇಕು ಅನ್ನೋದನ್ನು ವಾಸ್ತು ಶಾಸ್ತ್ರದಲ್ಲಿ ವಿಸ್ತಾರವಾಗಿ ಹೇಳಲಾಗಿದೆ. ಬೆಳಿಗ್ಗೆ ಎದ್ದ ತಕ್ಷಣ ಏನು ಮಾಡಬೇಕು, ಬೆಳಿಗ್ಗೆ ತಕ್ಷಣ ಏನು ಮಾಡಬಾರದು ಎಂಬುದನ್ನು ಹೇಳಲಾಗಿದೆ. ವಾಸ್ತು ಶಾಸ್ತ್ರದ ಪ್ರಕಾರ ಬೆಳಗ್ಗೆ ಎದ್ದ ತಕ್ಷಣ ಕನ್ನಡಿಯನ್ನು ಮಾತ್ರ ನೋಡಬೇಡಿ. ಬೆಳಿಗ್ಗೆ ಎದ್ದ ತಕ್ಷಣ ಕನ್ನಡಿ ನೋಡೋದು…
ಅಂತರ್ಜಾತಿ ವಿವಾಹವಾದರೆ 3 ಲಕ್ಷ ರೂ. ಪ್ರೋತ್ಸಾಹ ಧನ ನೀಡಲಾಗುವುದು. ಅಂತರ್ಜಾತಿ ವಿವಾಹವಾಗುವ ಪರಿಶಿಷ್ಟ ಜಾತಿಯವರಿಗೆ ಪ್ರೋತ್ಸಾಹಧನ ನೀಡುತ್ತಿದ್ದು, ಇದನ್ನು ಪರಿಶಿಷ್ಟ ಪಂಗಡದ ಸಮುದಾಯಕ್ಕೂ ನೀಡಬೇಕೆಂದು ಬೇಡಿಕೆ ಇಡಲಾಗಿತ್ತು. ಪರಿಶಿಷ್ಟ ಪಂಗಡದವರಿಗೆ ಅಂತರ್ಜಾತಿ ವಿವಾಹವಾದರೆ 3 ಲಕ್ಷ ರೂ. ನೀಡುವ ಯೋಜನೆಯನ್ನು ಸರ್ಕಾರ ಜಾರಿಗೊಳಿಸಿದೆ. ಈ ಮೊದಲು 2 ಲಕ್ಷ ರೂ. ನೀಡಲಾಗುತ್ತಿತ್ತು. ಅದನ್ನು 3 ಲಕ್ಷ ರೂ.ಗೆ ಏರಿಕೆ ಮಾಡಲಾಗಿದೆ. ಪರಿಶಿಷ್ಟ ಪಂಗಡ ಸಮುದಾಯದ 51 ಜಾತಿಯವರು ಯೋಜನೆಯ ಲಾಭ ಪಡೆದುಕೊಳ್ಳಬಹುದಾಗಿದೆ. ಎಸ್.ಟಿ. ಸಮುದಾಯದ ಹೆಣ್ಣುಮಕ್ಕಳನ್ನು…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಹಲವು ಹೆಸರುಗಳಿಂದ ಕರೆಯಲ್ಪಡುವ ಆಂಜನೇಯನ ವಿಶೇಷತೆ ಮಹತ್ವ ಪೂರ್ಣವಾದದ್ದು. ರಾಮನ ಪರಮ ಭಕ್ತನಾದ ಹನುಮಂತನಿಗೆ ಅಪಾರ ಸಂಖ್ಯೆಯ ಭಕ್ತರು… ಮೊದಲಿಗೆ ಪಂಚಮುಖಿ ಆಂಜನೇಯನ ಅವತಾರವಾಗಿದ್ದು ಹೇಗೆ ಎಂದು ತಿಳಿಯೋಣ… ರಾಮಾಯಣದ ಯದ್ಧದಲ್ಲಿ ರಾಮ ರಾವಣರು ಯುದ್ದ ಮಾಡುತ್ತಿರುವಾಗ, ರಾವಣನು ಪಾತಾಳಲೋಕದ ದೊರೆಯಾದ ಅಹಿರಾವಣನ ಸಹಾಯ ಪಡೆಯುತ್ತಾನೆ ಹನುಮಂತನು ರಾಮ ಲಕ್ಷ್ಮಣರ ರಕ್ಷಣೆಗೆ ನಿಲ್ಲುತ್ತಾನೆ. ಹನುಮಂತನು ರಾಮ ಲಕ್ಷ್ಮಣರನ್ನು ರಕ್ಷಿಸಲು ಬೃಹತ್ ಆಕಾರ ತಳೆಯುತ್ತಾನೆ, ಅಹಿರಾವಣನು ರಾವಣನ ತಮ್ಮನಾದ ವಿಭೀಷಣನ…
ಇದು ಮಹಾದೇವ ಶಿವನ ಪಂಚಾಕ್ಷರಿ ಮಂತ್ರ, ಜಪಿಸಿದರೆ ಮನಸ್ಸಿಗೆ ನೆಮ್ಮದಿ ಸಿಗುತ್ತದೆ.
ಬೆಂಗಳೂರು, ವಿಕ್ರಮ್ ಲ್ಯಾಂಡರ್ನ್ನು ಚಂದ್ರನಿಗೆ ಮತ್ತಷ್ಟುಸಮೀಪಕ್ಕೆ ಕಳುಹಿಸುವ ಪ್ರಯತ್ನ ಇಂದು ಮತ್ತೊಮ್ಮೆಯಶಸ್ವಿಯಾಗಿದ್ದು, ಕೊನೆಯ ಕ್ಷಣದ ಕಾರ್ಯಚರಣೆಗಳನ್ನುಇದೀಗ ಎದುರು ನೋಡಲಾಗುತ್ತಿದೆ ಬುಧವಾರ ಬೆಳಿಗ್ಗೆ 3:42 ನಿಮಿಷಕ್ಕೆ ನೌಕೆಯಲ್ಲಿನ ಇಂಜಿನ್ನ್ನು 9 ಸೆಕೆಂಡುಗಳ ಕಾಲ ಉರಿಸಿ ಚಂದ್ರನಿಗೆ ಮತ್ತಷ್ಟು ಸಮೀಪದ ಕಕ್ಷೆಯಲ್ಲಿ ವಿಕ್ರಮ್ ಲ್ಯಾಂಡರ್ (ಪ್ರಗ್ಯಾನ್ ರೋವರ್ ಇದರ ಒಳಗಿದೆ)ನ್ನು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ನೆಲೆಗೊಳಿಸಿದೆ. ಸದ್ಯ ವಿಕ್ರಮ್ ಲ್ಯಾಂಡರ್35ಕಿ.ಮೀ x 101 ಕಿ.ಮೀ ಕಕ್ಷೆಯಲ್ಲಿದೆ. ಇನ್ನೊಂದು ಕಡೆ ಚಂದ್ರಯಾನ 2 ಕ್ಷಕೆಗಾಮಿಯು96 ಕಿ.ಮೀ x 125 ಕಿ.ಮೀ…