ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಜೆ ಬಂದರೆ ಸಾಕು ಮನೆಯಲ್ಲಿ ಎಲ್ಲರು ಇರುತ್ತಾರೆ. ಒಂದು ಕಡೆ ಎಲ್ರೂ ಇದ್ದರೆ ಸಾಕು ಏನಾದರೂ ಸ್ಪೈಸಿಯಾಗಿ ತಿನ್ನಲೂ ಕೇಳುತ್ತಾರೆ. ಪ್ರತಿದಿನ ಅದೇ ತಿಂಡಿ ಅಂತ ಬೇಸರ ಮಾಡಿಕೊಂಡು ತಿನ್ನುವುದಿಲ್ಲ. ಹೀಗಾಗಿ ಬೇಗ ತಯಾರಾಗುವ ಎಗ್ ಪೆಪ್ಪರ್ ಫ್ರೈ ಮಾಡುವ ವಿಧಾನ..

ಬೇಕಾಗುವ ಸಾಮಾಗ್ರಿಗಳು 1. ಮೊಟ್ಟೆ – 4 3. ಎಣ್ಣೆ – 2-3 ಚಮಚ
3. ಮೆಣಸು – 1 ಚಮಚ 4. ಉಪ್ಪು – ರುಚಿಗೆ ತಕ್ಕಷ್ಟು
5. ಕೊತ್ತಂಬರಿ ಸೊಪ್ಪು -ಸ್ವಲ್ಪ 6. ಅರಿಶಿಣ – ಚಿಟಿಕೆ

* ಮೊದಲಿಗೆ ನಾಲ್ಕು ಮೊಟ್ಟೆಗಳನ್ನು ಒಂದು ಕುಕ್ಕರ್ ಗೆ ಹಾಕಿ, ಸ್ವಲ್ಪ ಉಪ್ಪು, ನೀರು ಹಾಕಿ ಒಂದು ವಿಶಲ್ ಕೂಗಿಸಿ ಬೇಯಿಸಿಕೊಳ್ಳಿ.
* ಈಗ ಮೊಟ್ಟೆ ಬಿಡಿಸಿ ಒಂದು ಮೊಟ್ಟೆಯನ್ನು ಎರಡು ಭಾಗ ಮಾಡಿ ಕಟ್ ಮಾಡಿಕೊಳ್ಳಿ.
* ಬಳಿಕ ಒಂದು ಪ್ಯಾನ್ ಗೆ ಎರಡು ಚಮಚ ಎಣ್ಣೆ ಹಾಕಿ, ಬಿಸಿ ಆದ ಮೇಲೆ ಕಟ್ ಮಾಡಿದ್ದ ಮೊಟ್ಟೆಯನ್ನು ಇಟ್ಟು 1 ನಿಮಿಷ ಬೇಯಿಸಿಕೊಳ್ಳಿ.
* ನಂತರ ಮೊಟ್ಟೆಯನ್ನು ಉಲ್ಟಾ ಮಾಡಿ ಸ್ವಲ್ಪ ಬ್ರೌನ್ ಬಣ್ಣ ಬರುವರೆಗೆ ಬೇಯಿಸಿಕೊಳ್ಳಿ.
* ಈಗ ಕಡಿಮೆ ಉರಿ ಇಟ್ಟು ಅದರ ಮೇಲೆ ಚಿಟಿಕೆ ಅರಿಶಿಣ ಉದುರುಸಿ.
* ಈಗ ಮೆಣಸು ಮತ್ತು ಉಪ್ಪನ್ನು ಪುಡಿ ಮಾಡಿಕೊಂಡು ಮೊಟ್ಟೆಯ ಮೇಲೆ ಉದುರಿಸಿ.
* ಮತ್ತೆ ಮೊಟ್ಟೆಯನ್ನು ಉಲ್ಟಾ ಮಾಡಿ ಮೆಣಸು ಮತ್ತು ಉಪ್ಪಿನ ಪುಡಿ ಉದುರಿಸಿ.
* ನಂತರ ಸಣ್ಣಗೆ ಕಟ್ ಮಾಡಿದ್ದ ಕೊತ್ತಂಬರಿ ಸೊಪ್ಪನ್ನು ಹಾಕಿದರೆ ಸ್ಪೈಸಿ ಸ್ಪೈಸಿಯಾಗಿ ಎಗ್ ಪೆಪ್ಪರ್ ಫ್ರೈ ತಿನ್ನಲು ಸಿದ್ಧ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಾಮಾನ್ಯವಾಗಿ ಕಿಡ್ನಿ ಸ್ಟೋನ್ ಅನ್ನುವುದು ಈಗ ಎಲ್ಲರಿಗು ಸಾಮಾನ್ಯವಾದ ವಿಷಯ ಇದಕ್ಕೆ ಎಲ್ಲರು ಹಾಸ್ಪಿಟಲ್ಗೆ ಹೋಗಿ ಚಿಕಿತ್ಸೆ ಪಡೆಯುತ್ತಾರೆ ಮತ್ತು ಇನ್ನು ಸ್ವಲ್ಪ ಜನ ನಾಟಿ ಔಷದಿ ಪಡೆಯುತ್ತಾರೆ. ಆದರೆ ಇಲ್ಲಿದೆ ನೋಡಿ ಈ ಒಂದು ಪಲ್ಯ ತಿಂದರೆ ಸಾಕು ಕಿಡ್ನಿಯಲ್ಲಿರುವ ಕಲ್ಲು ಹೊರಗೆ ಬರುತ್ತದೆ.ಇದಕ್ಕೆ ನೀವು ಜಾಸ್ತಿ ಏನು ಖರ್ಚು ಮಾಡಬೇಕಿಲ್ಲ. ಅದ್ಬುತವಾದ ಪಲ್ಯ ಮಾಡೊದು ಹೇಗೆ ಎಂದು ತಿಳಿಯಲು ಇದನ್ನೊಮ್ಮೆ ಓದಿ.ಬಾಳೆದಿಂಡಿನ ಪಲ್ಯವನ್ನು ಮಾಡುವುದು ಹೇಗೆ ಎಂಬುದನ್ನು ನಾನು ನಿಮಗೆ ತಿಳಿಸುತ್ತೇನೆ ಮೊದಲಿಗೆ ಬಾಳೆದಿಂಡನ್ನು…
ನಮ್ಮ ಕಣ್ಣ ಮುಂದಯೇ ಅನೇಕ ಚಿಕ್ಕ ಪುಟ್ಟ ವಿಷಯಗಳು ನಡೆಯುತ್ತಿರುತ್ತವೆ.ಅವನ್ನು ನೋಡಿಯೂ ನೋಡದಂತಯೂ ಇರುತ್ತೇವೆ.ಒಂದು ವೇಳೆ ಗಮನಿಸಿದರೂ ಸಹ ಅದರ ಬಗ್ಗೆ ತಿಳಿದುಕೊಳ್ಳುವ ಗೋಜಿಗೆ ನಾವು ಹೋಗುವುದಿಲ್ಲ.ಏಕೆ ಹೀಗೆ ಮಾಡುತ್ತಾರೆ ಎನ್ನುವ ಕಾರಣ ಗೊತ್ತಿಲ್ಲದಿದ್ರೂ ತಿಳಿದುಕೊಳ್ಳುವ ಯಾವುದೇ ಆಲೋಚನೆ ನಮ್ಮಲ್ಲಿ ಬರುವುದೇ ಇಲ್ಲ. ಇಂತಹ ಅನೇಕ ಚಿಕ್ಕ ಪುಟ್ಟ ವಿಷಯಗಳಲ್ಲಿ ಸತ್ತ ದೇಹದ ಮೂಗಿಗೆ ಮತ್ತು ಕಿವಿಗೆ ಹತ್ತಿ ಇಡುವುದು.ಹೌದು ಹಿಂದೂ ಧರ್ಮದಲ್ಲಿ ಮನುಷ್ಯ ತೀರಿಕೊಂಡ ನಂತರ ಮೃತದೇಹದ ಕಿವಿ ಮತ್ತು ಮೂಗಿಗೆ ಹತ್ತಿ ಇಡುತ್ತಾರೆ. ಇದನ್ನು…
ಥೈಲ್ಯಾಂಡ್ ನ ವ್ಯಕ್ತಿಯೊಬ್ಬ ತನ್ನ ಮಗಳನ್ನು ಮದುವೆಯಾಗುವ ವ್ಯಕ್ತಿಗೆ ಅನನ್ಯ ಮತ್ತು ಆಸಕ್ತಿದಾಯಕ ಷರತ್ತು ವಿಧಿಸಿದ್ದಾನೆ. ಈತನ ಮಗಳನ್ನು ಮದುವೆಯಾದ್ರೆ 2 ಕೋಟಿ ರೂಪಾಯಿ ಹಣವನ್ನು ತಂದೆ ನೀಡಲಿದ್ದಾನಂತೆ. ಥೈಲ್ಯಾಂಡ್ ನ ಶ್ರೀಮಂತ ವ್ಯಕ್ತಿ, ಮಗಳ ಸುರಕ್ಷತೆ ಜವಾಬ್ದಾರಿಯನ್ನು ಹೊತ್ತಿದ್ದಾನೆ. ಮಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಈ ಆಪರ್ ನೀಡಿದ್ದಾನೆ. ತಂದೆಯ ಪ್ರಕಟಣೆ ನಂತ್ರ ಅನೇಕ ಯುವಕರು ಮದುವೆಯಾಗಲು ಮುಂದೆ ಬಂದಿದ್ದಾರೆ. ಈವರೆಗೆ 10,000 ಹುಡುಗ್ರು ಮದುವೆಯಾಗಲು ಆಸಕ್ತಿ ತೋರಿಸಿದ್ದಾರಂತೆ. 58 ವರ್ಷದ ತಂದೆ ಮಿಸ್ಟರ್ ರಾತೊಂಗ್ ನನ್ನು…
ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಮತ್ತು ಪತ್ನಿ ಪ್ರಿಯಾ ಸುದೀಪ್ ಅವರು ಇಂದು ತಮ್ಮ 18ನೇ ವಿವಾಹ ವಾರ್ಷಿಕೋತ್ಸವದ ಸಂಭ್ರಮದಲ್ಲಿದ್ದಾರೆ. ಸುದೀಪ್ ಹಾಗೂ ಪ್ರಿಯಾ ಅಕ್ಟೋಬರ್ 18, 2001ರಲ್ಲಿ ಮದುವೆಯಾಗಿದ್ದರು. ಇಂದಿಗೆ ಸುದೀಪ್ ಮತ್ತು ಪ್ರಿಯಾ ಅವರು ಮದುವೆಯಾಗಿ 18 ವರ್ಷಗಳು ಕಳೆದಿವೆ. ಹೀಗಾಗಿ ಅಭಿಮಾನಿಗಳು ಸಾಮಾಜಿಕ ಜಾಲತಾಣದ ಮೂಲಕ ಇಬ್ಬರಿಗೂ ಶುಭಾಶಯ ತಿಳಿಸುತ್ತಿದ್ದಾರೆ. ನೆಚ್ಚಿನ ನಟ ವಿವಾಹ ವಾರ್ಷಿಕೋತ್ಸವ ಇರುವ ಹಿನ್ನೆಲೆಯಲ್ಲಿ ಸುದೀಪ್ ಅಭಿಮಾನಿಗಳ ಸಂಘಗಳು ಸಾಮಾಜಿಕ ಜಾಲತಾಣಗಳಲ್ಲಿ ವಿಧ ವಿಧವಾದ ಪೋಸ್ಟರ್ ಗಳನ್ನು ಪೋಸ್ಟ್…
ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಪ್ರತಿ ತಿಂಗಳ ನಾಲ್ಕನೇ ಶನಿವಾರ ರಜೆ ನೀಡಲು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ನೇತೃತ್ವದಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ. ಸಂಪುಟ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಕೃಷ್ಣ ಭೈರೇಗೌಡ ಅವರು, 17 ರಾಜ್ಯಗಳಲ್ಲಿ ಪ್ರತಿ ಶನಿವಾರ ರಜೆ ಜಾರಿಯಲ್ಲಿದೆ. 4 ರಾಜ್ಯಗಳಲ್ಲಿ ತಿಂಗಳಲ್ಲಿ ಎರಡು ಶನಿವಾರ ರಜೆ ಇದೆ. ಅದೇ ರೀತಿ ನಮ್ಮ ರಾಜ್ಯದಲ್ಲೂ ರಜೆಗೆ ಒತ್ತಾಯ ಇತ್ತು. ಜಯಂತಿಗಳು, ಹಬ್ಬಗಳನ್ನು ಕಡಿತ ಮಾಡಬೇಕಾ…
ಗುಜರಾತ್ ನ ಸೂರತ್ ನಲ್ಲಿ ನಡೆದ ಭೀಕರ ಕಟ್ಟಡ ಅಗ್ನಿ ಅಘಡದಲ್ಲಿ ಸಾವಿಗೀಡಾದವರ ಸಂಖ್ಯೆ 20ಕ್ಕೆ ಏರಿಕೆಯಾಗಿದ್ದು, ಹಲವರು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದುಬಂದಿದೆ.ಸೂರತ್ ಸಾರ್ತನ ಪ್ರದೇಶದ ತಕ್ಷಶಿಲಾ ಆರ್ಕೇಡ್ ಕಟ್ಟಡದ ಮೂರನೇ ಮಹಡಿಯಲ್ಲಿದ್ದ ಕೋಚಿಂಗ್ ಸೆಂಟರ್ ನಲ್ಲಿ ಇಂದು ಮಧ್ಯಾಹ್ನ 3.30ರ ಸುಮಾರಿನಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಈ ಅಗ್ನಿ ಅವಘಡ ಸಂಭವಿಸಿದೆ. ಮೂಲಗಳ ಪ್ರಕಾರ ಘಟನೆಯಲ್ಲಿ ಈ ವರೆಗೂ ಸುಮಾರು 20 ಮಂದಿ ಸಾವಿಗೀಡಾಗಿದ್ದು, ಮೃತರಲ್ಲಿ ಬಹುತೇಕರು ವಿದ್ಯಾರ್ಥಿಗಳು ಎಂದು…