ಸುದ್ದಿ

ಶಾಲೆಯ ಬಾಗಿಲಿನ ಬಳಿ ನಿಂತ ಬಾಲಕಿ. ಫೋಟೋ ವೈರಲ್ ಆಗ್ತಿದ್ದಂತೆ ಅದೇ ಶಾಲೆಯಲ್ಲಿ ಅಡ್ಮಿಶನ್.

40

ಈಚೆ ಶಾಲೆಯ ಬಾಗಿಲಿನ ಬಳಿ ಬಾಲಕಿಯೊಬ್ಬಳು ತನ್ನ ಕೈಯಲ್ಲಿ ಖಾಲಿ ಬಟ್ಟಲು ಹಿಡಿದುಕೊಂಡು ತರಗತಿ ಹೊರಗೆ ನಿಂತು ಇಣುಕಿ ನೋಡುತ್ತಿರುವ ಫೋಟೋವೊಂದು ತುಂಬಾ ವೈರಲ್ ಆಗಿತ್ತು. ಫೋಟೋ ವೈರಲ್ ಆದ ಬಳಿಕ ಬಾಲಕಿಗೆ ಅದೇ ಶಾಲೆಯಲ್ಲಿ ದಾಖಲಾತಿ ಮಾಡಿಕೊಂಡಿದ್ದಾರೆ.

ದಿವ್ಯಾ ಗುಡಿಸುವವನ ಮಗಳಾಗಿದ್ದು, ಶಾಲೆಯ ಹತ್ತಿರದಲ್ಲಿಯೇ ಇರುವ ಸ್ಲಂನಲ್ಲಿ ವಾಸಿಸುತ್ತಿದ್ದಳು. ಪೋಷಕರು ಆಕೆಯನ್ನು ಮನೆಯಲ್ಲಿಯೇ ಬಿಟ್ಟು ಕೆಲಸಕ್ಕೆ ಹೋದಾಗ ದಿವ್ಯಾ ಊಟ ಸಿಗಬಹುದೆಂಬ ಭರವಸೆಯಿಂದ ಪ್ರತಿದಿನ ಶಾಲೆಯ ಬಳಿ ಹೋಗುತ್ತಿದ್ದಳು. ಈ ಸಮಯದಲ್ಲಿ  ಅವುಲಾ ಶ್ರೀನಿವಾಸ್  ಎಂಬುವವರು ಈ ಫೋಟೋವನ್ನು ಕ್ಲಿಕ್ಕಿಸಿದ್ದು. ಅವುಲಾ ಈ ಫೋಟೋವನ್ನು ಸೋಶಿಯಲ್ ಮೀಡಿಯಾದಲ್ಲಿ ಪ್ರಕಟಿಸಿ  ಅದಕ್ಕೆ ‘ಹಸಿವಿನ ನೋಟ’ ಎಂದು ಟೈಟಲ್ ಕೊಟ್ಟಿದ್ದರು.

ಈ ಫೋಟೋವನ್ನು ಹೈದರಾಬಾದ್‍ನ ಗುಡಿಮಲಕಪುರದ ದೇವಲ್ ಜಾಮ್ ಸಿಂಗ್ ಸರ್ಕಾರಿ ಶಾಲೆಯಲ್ಲಿ ಕ್ಲಿಕ್ಕಿಸಲಾಗಿದೆ. ತರಗತಿ ಹೊರಗೆ ನಿಂತಿದ್ದ ಬಾಲಕಿ ಮೋತಿ ದಿವ್ಯಾ ತರಗತಿ ಹೊರಗೆ ನಿಂತಿದ್ದ ಮನಕಲಕುವ ಫೋಟೋವನ್ನು ತೆಲುಗು ಪ್ರತಿಕೆಯೊಂದು ಪ್ರಕಟಿಸಿತ್ತು.

ಆದರೆ ಇದೀಗ ಆ ಫೋಟೋದಿಂದ ಬಾಲಕಿಗೆ ಅದೇ ಶಾಲೆಯಲ್ಲಿ ಅಡ್ಮಿಶನ್ ಮಾಡಿಕೊಂಡಿದ್ದಾರೆ.  ಈ ವೈರಲ್ ಫೋಟೋ ವೆಂಕಟ್ ರೆಡ್ಡಿ ಎಂಬುವವರ ಕಣ್ಣಿಗೆ ಬಿದ್ದಿದೆ. ವೆಂಕಟ್ ರೆಡ್ಡಿ ಅವರು ಎಂವಿ ಫೌಂಡೇಶನ್‍ನಲ್ಲಿ ರಾಷ್ಟ್ರೀಯ ಕನ್ವೀನರ್ ಆಗಿದ್ದು, ಇದು ಹೆಣ್ಣು ಮಕ್ಕಳ ಹಕ್ಕುಗಳಿಗಾಗಿ ಕೆಲಸ ಮಾಡುವ ಎನ್‍ಜಿಓ. ಬಾಲಕಿ ತನ್ನ ಶಿಕ್ಷಣದ ಹಕ್ಕಿನಿಂದ ವಂಚಿತಳಾಗದಂತೆ ನೋಡಿಕೊಳ್ಳಲು ವೆಂಕಟ್ ರೆಡ್ಡಿ ತನ್ನ ಸಂಸ್ಥೆ ಮತ್ತು ಸ್ಥಳೀಯ ಸ್ವಯಂಸೇವಕರನ್ನು ಸಂಪರ್ಕಿಸಿದ್ದಾರೆ.

ವೆಂಕಟ್ ರೆಡ್ಡಿ ಈ ಫೋಟೋವನ್ನು ತಮ್ಮ ಫೇಸ್‍ಬುಕ್‍ನಲ್ಲಿ ಪೋಸ್ಟ್ ಮಾಡಿ ಅದಕ್ಕೆ, “ಯಾಕೆ ಈ ಬಾಲಕಿಗೆ ದಾಖಲಾತಿ ನೀಡಿಲ್ಲ. ಆ ಬಾಲಕಿಗೂ ಕೂಡ ಓದುವ ಹಾಗೂ ಊಟ ಮಾಡುವ ಅಧಿಕಾರ ಇದೆ. ಇದು ನಾಚಿಕೆಗೇಡಿನ ಸಂಗತಿ” ಎಂದು ಬರೆದು ಶೇರ್ ಮಾಡಿದ್ದಾರೆ. ಇದಾದ ನಂತರ 

ಸದ್ಯ ಬಾಲಕಿ ಈಗ ಅದೇ ಶಾಲೆಯಲ್ಲಿ ದಾಖಲಾಗಿ ಶಿಕ್ಷಣ ಪಡೆಯುತ್ತಿದ್ದಾಳೆ. ಬಳಿಕ ವೆಂಕಟ್ ಅವರು ದಿವ್ಯಾ ತನ್ನ ಪೋಷಕರೊಂದಿಗೆ ಮೊದಲನೇ ದಿನ ಶಾಲೆಗೆ ಹೋದ ಫೋಟೋವನ್ನು ಕ್ಲಿಕ್ಕಿಸಿ ಫೇಸ್‍ಬುಕ್‍ನಲ್ಲಿ ಹಂಚಿಕೊಂಡಿದ್ದರು. ಈ ಫೋಟೋದಲ್ಲಿ ದಿವ್ಯಾ ಶಾಲಾ ಯೂನಿಫಾರಂ ಧರಿಸಿದ್ದಳು. ಈ ಪೋಸ್ಟ್ ನೋಡಿ ಹಲವು ಮಂದಿ ವೆಂಕಟ್ ರೆಡ್ಡಿ ಹಾಗೂ ಫೋಟೋ ಕ್ಲಿಕ್ಕಿಸಿದ ಪತ್ರಕರ್ತನ ಬಗ್ಗೆ ಮೆಚ್ಚುಗೆಯ ಮಾತುಗಳನಾಡುತ್ತಿದ್ದಾರೆ. 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ದೀಪಾವಳಿ ಹಬ್ಬದಂದು ಕೆಲವು ನಿಷೇಧಿತ ಪ್ರದೇಶದಲ್ಲಿ ಪಟಾಕಿ ಬಳಸುವಂತಿಲ್ಲ…!ಯಾವ ಯಾವ ಸ್ಥಳ ಗೊತ್ತ?

    ದೀಪಾವಳಿ ಹಬ್ಬ ಸಮೀಪಿಸುತ್ತಿದ್ದು, ಸಾರ್ವಜನಿಕ ಆಸ್ತಿ ಮತ್ತು ಆರೋಗ್ಯದ ರಕ್ಷಣೆ, ಪರಿಸರ ಮಾಲಿನ್ಯ ಮತ್ತು ಶಬ್ದ ಮಾಲಿನ್ಯ ನಿಯಂತ್ರಣದಲ್ಲಿಡುವ ನಿಟ್ಟಿನಿಂದ ಪರಿಸರ ಸಂರಕ್ಷಣೆ ನಿಯಮಾವಳಿಗಳು 1999 ರ ಅನ್ವಯ ಹಾಗೂ ಮಾನ್ಯ ಸರ್ವೋಚ್ಛ ನ್ಯಾಯಾಲಯದ ಆದೇಶದ ಪ್ರಕಾರ 125 ಆb (ಂI) ಅಥವಾ 145 ಆb(ಅ) ಠಿಞ ಕ್ಕಿಂತ , ಪಟಾಕಿ ಸಿಡಿಸುವ ಸ್ಥಳದಿಂದ 4 ಮೀಟರ್ ಅಂತರದಲ್ಲಿ ಹೆಚ್ಚು ಶಬ್ದ ಮಾಡುವ ಪಟಾಕಿ ಹಾಗೂ ಸಿಡಿಮದ್ದುಗಳನ್ನು ಮಾರಾಟ ಮಾಡುವುದಾಗಲಿ ಮತ್ತು ಉಪಯೋಗಿಸುವುದಾಗಲಿ ನಿಷೇಧಿಸಲ್ಪಟ್ಟಿದೆ. ಆದುದರಿಂದ ಸಾರ್ವಜನಿಕರು…

  • ಸುದ್ದಿ

    ಭಾರತೀಯ ಸೇನೆಗಾಗಿ ವಿಶೇಷವಾಗಿ ತಯಾರಾದ ಈ ಬೈಕ್ ವಿಶೇಷತೆ ಏನು ಗೊತ್ತಾ?

    ಭಾರತೀಯ ಸೇನಗಾಗಿ ಟಾಟಾ ಮೋಟಾರ್ಸ್ ತಮ್ಮ ಸಫಾರಿ ಸ್ಟೋರ್ಮ್ ಕಾರನ್ನು ತಯಾರಿಸಿ ನೀಡುತ್ತಿರುವ ಬಗ್ಗೆ ನಾವು ಈಗಾಗಲೇ ತಿಳಿದಿದ್ದೇವೆ. ಆದ್ರೆ ಸೇನೆಯಲ್ಲಿ ಬಳಸಲಾಗುತ್ತಿರವ ದ್ವಿಚಕ್ರ ವಾಹನಗಳು ಕಡಿಮೆ ಶಕ್ತಿಶಾಲಿಯಾದ ಕಾರಣ ಚತ್ತೀಸ್‍ಗಢ್‍ನ ಯುವಕನೊಬ್ಬ 800ಸಿಸಿ ಸಾಮರ್ಥ್ಯವಿರುವ ವಿಶೇಷ ಬೈಕ್ ಒಂದನ್ನ ತಯಾರು ಮಾಡಿದ್ದಾನೆ.ಪ್ರಸ್ತುತ ಭಾರತೀಯ ಸೇನೆಯಲ್ಲಿ ರಾಯಲ್ ಎನ್‍ಫೀಲ್ಡ್ ಸಂಸ್ಥೆಯ 350ಸಿಸಿ ಮತ್ತು 500ಸಿಸಿ ಬೈಕ್‍ಗಳನ್ನು ಬಳಸಲಾಗುತ್ತಿದ್ದು, ಅಮೆರಿಕನ್ ಸೇನೆಯು ಹೆಚ್ಚು ಸಾಮರ್ಥ್ಯವಿರುವ ಯುನೈಟೆಡ್ ಮೋಟಾರ್ಸ್‍ನ ಮತ್ತು ಹಾರ್ಲೇ ಡೇವಿಡ್ಸನ್ ಸಂಸ್ಥೆಯ ಅಧಿಕ ಸಾಮರ್ಥ್ಯವಿರುವ ಬೈಕ್‍ಗಳನ್ನು ಬಳಸುತ್ತಿದ್ದಾರೆ….

  • ಸುದ್ದಿ

    ನೀವು ನಿದ್ದೆ ಮಾಡುವಾಗ ಎಡಗೈ ಮೇಲೆ ಮಲಗುತ್ತೀರಾ ಹಾಗಾದರೆ ಇದನ್ನೊಮ್ಮೆ ತಪ್ಪದೆ ಓದಿ,.!

    ನಾವು ಮಧ್ಯಾಹ್ನ ಅಥವಾ ರಾತ್ರಿ  ಮಲಗುವಾಗ ನಮ್ಮ ಕೈ ಮೇಲೆ ತಲೆನ ಹಾಕಿಕೊಂಡು ಮಲಗುತ್ತೇವೆ ಅದು ನಿಮಗೂ ಗೊತ್ತು, ನಿದ್ದೆ ಮನುಷ್ಯನಿಗೆ ವರದಾನವಾಗಿದೆ, ಇತ್ತೀಚಿನ ದಿನಗಳಲ್ಲಿ ಅತಿ ಹೆಚ್ಚು ಕೆಲಸ ಮಾಡುವವರು ನಿದ್ರೆ ಕಡೆ ಗಮನ ಕೊಡುತ್ತಿಲ್ಲ ತುಂಬಾ ಕೆಲಸದ ಕಡೆ ಗಮನ ಕೊಡುತ್ತಿದ್ದಾರೆ ಇದರಿಂದ ನಮ್ಮ  ಆರೋಗ್ಯದ  ಮೇಲೆ ತುಂಬಾನೇ  ಪರಿಣಾಮ ಬೀರುತ್ತದೆ. ಇದರಿಂದ  ರಾತ್ರಿ ಮಲಗುವ  ನಿದ್ದೆ  ಸಾಕಾಗುವುದಿಲ್ಲ ಹಾಗಾಗಿ  ಮಧ್ಯಾಹ್ನವೂ ಕೂಡ ಮಲಗುತ್ತಾರೆ,  ಮತ್ತು  ಹೆಚ್ಚಾಗಿ ನಿದ್ರೆ ಮಾಡುವವರನ್ನು ಸೋಂಬೇರಿಗಳು ಅಂತಾನೂ  ಕರೆಯುತ್ತಾರೆ….

  • India, Sports, ಕ್ರೀಡೆ

    ಭಾರತ ಮತ್ತು ದಕ್ಷಿಣ ಆಫ್ರಿಕಾ ವಿರುದ್ಧದ 2ನೇಟೆಸ್ಟ್‌ಗೆ ಮಳೆ ಕಾಟ

    ಭಾರತ ಮತ್ತು ದಕ್ಷಿಣ ಆಫ್ರಿಕಾ ವಿರುದ್ಧದ 2ನೇ ಟೆಸ್ಟ್ ಪಂದ್ಯದ 4ದಿನ ಮಳೆ ಕಾಟದಿಂದಾಗಿ ದಿನದಾಟ ಆರಂಭ ವಾಗಿಲ್ಲ ಈ ಪಂದ್ಯದಲ್ಲಿ ಜಯವನ್ನು ಸಾಧಿಸಲು ದಕ್ಷಿಣ ಆಫ್ರಿಕಾಕ್ಕೆ  122ರನ್ ಅಗತ್ಯ ಇದೆ.ಮಳೆಯಿಂದಾಗಿ ಭಾರತ ತಂಡಕ್ಕೆ ಜಯಗಳಿಸುವ ಅವಕಾಶವನ್ನು ಒದಗಿಸುತ್ತದೆ.ಭಾರತ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿ 202ರನ್ ಗಳಿಸಿತು.ದಕ್ಷಿಣ ಆಫ್ರಿಕಾ 229ರನ್ ಗಳಿಸಿತು. ಇದಕ್ಕೆ ಉತ್ತರವಾಗಿ ಭಾರತ 266ರನ್ಗಳಿಸಿತು.ಭಾರತ ದಕ್ಷಿಣ ಆಫ್ರಿಕಾಕ್ಕೆ 240ಗುರಿ ನೀಡಿದೆ.ಇದಕ್ಕುತ್ತರವಾಗಿ ದಕ್ಷಿಣ ಆಫ್ರಿಕಾ 118/2 ಗಳಿಸಿದೆ

    Loading

  • ಉಪಯುಕ್ತ ಮಾಹಿತಿ

    ನಿಮ್ಗೆ ಹಾಗೂ ನಿಮ್ಗೆ ಗೊತ್ತಿರುವವರಿಗೆ ಮಧುಮೇಹ ಹಾಗೂ ಮಂಡಿ ನೋವು ಸಮಸ್ಯೆ ಇದ್ರೆ 4 ತಲೆಮಾರಿನ ರಾಮಭಾಣದಂತಹ ಔಷಧಿಗಾಗಿ ಈ ಪುತ್ತೂರು ನಾಟಿ ವೈದ್ಯರನ್ನು ಸಂಪರ್ಕಿಸಿ…

    ನನ್ನ ಹೆಸರು ಮಂಜುನಾಥ್ ನನ್ನ ಮೊಬೈಲ್ ನಂಬರ್ 9740093720,ನಮ್ಮದು ಶಿಡ್ಲಘಟ್ಟ ಬಳಿ ಯಣ್ಣಂಗುರೂ,ವೃತ್ತಿಯಲ್ಲಿ ವೆಲ್ಡಿಂಗ್ ಕೆಲಸ ಮಾಡುವುದು,ನಮ್ಮ ತಾಯಿಯವರಿಗೆ ಸುಮಾರು ವರ್ಷಗಳಿಂದ ಮಂಡಿ ನೋವು ಇತ್ತು,ಆರು ತಿಂಗಳ ಹಿಂದೆ ನೋವು ಹೆಚ್ಚಾಗಿ

  • inspirational

    ದರ್ಶನ್‌ ಮತ್ತು ಸುದೀಪ್ ಒಟ್ಟಿಗೆ ನಟಿಸಬೇಕಾಗಿದ್ದ ಆ ಸಿನಿಮಾ ನಿಂತಿದ್ದೇಕೆ? ಇಂದ್ರಜಿತ್ ಬಿಚ್ಚಿಟ್ರು ಮೂಲ ಕಾರಣ.

    ಕನ್ನಡ ಸಿನಿಪ್ರಿಯರ ಬಹುದಿನಗಳ ಕನಸು ಏನೆಂದರೆ, ದರ್ಶನ್‌ ಮತ್ತು ಸುದೀಪ್ ಒಟ್ಟಿಗೆ ನಟಿಸುವುದು! ಬೆಳ್ಳಿತೆರೆ ಮೇಲೆ ಅವರಿಬ್ಬರನ್ನು ಏಕಕಾಲಕ್ಕೆ ನೋಡಲು ಅಭಿಮಾನಿಗಳು ಕಾದಿದ್ದಾರೆ. ಇಬ್ಬರು ಕನ್ನಡದ ಸ್ಟಾರ್ ನಟರು. ಅವರದ್ದೇ ಆದ ಬಹುದೊಡ್ಡ ಅಭಿಮಾನಿ ಬಳಗವನ್ನು ಹೊಂದಿದ್ದಾರೆ. ಹೀಗಿರುವಾಗ ಅವರಿಬ್ಬರು ಒಟ್ಟಿಗೆ ನಟಿಸಿಬಿಟ್ಟರೆ? ಅದು ಅಭಿಮಾನಿಗಳಿಗೆ ಹಬ್ಬವೇ ಸರಿ. ಅದಿನ್ನೂ ಸಾಧ್ಯವಾಗಿಲ್ಲ. ಮುಂದೆ ಯಾವತ್ತು ಆಗುತ್ತದೆಯೋ ಅದು ಗೊತ್ತಿಲ್ಲ. ಆದರೆ, ಬಹುವರ್ಷಗಳ ಈ ಹಿಂದೆ ಸ್ಟಾರ್ ನಟರನ್ನು ಒಟ್ಟಿಗೆ ಇಟ್ಟುಕೊಂಡು ಸಿನಿಮಾ ಮಾಡುವ ಪ್ರಯತ್ನವೊಂದು ನಡೆದಿತ್ತು! ಅವರಿಬ್ಬರು…