News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ವಿಜ್ಞಾನ

ಐಐಟಿ ಪ್ರಯೋಗ ಯಶಸ್ವಿಗೊಂಡಿದ್ದು, ಇನ್ಮುಂದೆ ಕೋಳಿಯ ಬದಲು ಗಿಡದಲ್ಲಿ ಮೊಟ್ಟೆಗಳು ಬೆಳೆಯಲಿವೆ ,.!

88

ನವದೆಹಲಿ, ಇಷ್ಟು ದಿನ ಮೊಟ್ಟೆ ಮಾಂಸಾಹಾರಿಯೋ,ಸಸ್ಯಾಹಾರಿಯೋ ಎಂಬ ವಾದ, ಪ್ರತಿವಾದಗಳು ಯಥೇಚ್ಚವಾಗಿ ನಡೆಯುತ್ತಿದ್ದವು. ಕೆಲವರು ಕೋಳಿಯ ಭ್ರೂಣವಾಗಿರುವುದರಿಂದ ಇದು ಮಾಂಸಾಹಾರ ಎಂದು ಹೇಳಿದರೆ, ಅದುಪೂರ್ತಿ ಕೋಳಿಯ ರೂಪು ಪಡೆದುಕೊಳ್ಳದ ಕಾರಣ ಅದು ಸಸ್ಯಾಹಾರಿ ಎಂದು ವಾದಿಸುವವರು ಅಧಿಕ ಸಂಖ್ಯೆಯಲ್ಲಿದ್ದರು. ಆದರೆ ಈಗ ಈ ಎಲ್ಲ ವಾದ ಪ್ರತಿವಾದಗಳಿಗೆ ಬ್ರೇಕ್​ ಹಾಕುವ ಮೂಲಕ ಶುದ್ಧ ಸಸ್ಯ ಜನ್ಯ ಮೊಟ್ಟೆಯನ್ನು ಬೆಳೆಯಬಹುದಾಗಿದೆ!

ದೆಹಲಿಯ ಇಂಡಿಯನ್​ ಇನ್​ಸ್ಟಿಟ್ಯೂಟ್​ ಆಫ್​ಟೆಕ್ನಾಲಜಿಯ (ಐಐಟಿ) ಸಂಶೋಧಕರು ಗಿಡದಲ್ಲಿಮೊಟ್ಟೆಯನ್ನು ಬೆಳೆದಿದ್ದಾರೆ. ನಾನ್​ ಸಾಯ್​, ಗ್ಲುಟೆನ್​ಮುಕ್ತವಾಗಿರುವ ಈ ಮೊಟ್ಟೆಯನ್ನು ದೆಹಲಿಐಐಟಿಯಲ್ಲಿ ಆಯೋಜನೆಗೊಂಡಿದ್ದ ಕೈಗಾರಿಕಾ ದಿನ-2019ರಲ್ಲಿ ಮೊದಲಬಾರಿಗೆ ಪ್ರದರ್ಶಿಸಲಾಯಿತು. ಈ ಮೊಟ್ಟೆಗಳು ಕೋಳಿಮೊಟ್ಟೆಯ ಆಕಾರದ ಬದಲು ಕ್ಯೂಬ್​(ಘನ) ಆಕಾರದಲ್ಲಿ ಲಭಿಸಲಿವೆ. ಇವನ್ನು ಸುಲಭವಾಗಿ ಪುಡಿಮಾಡಿ, ನೀರಿನಲ್ಲಿ ಬೆರೆಸಿ ಸಾಸ್​ಪಾನ್​ನಲ್ಲಿ ಹಾಕಿ ಆಮ್ಲೆಟ್​ಮಾಡಿಕೊಂಡು ತಿನ್ನಬಹುದಾಗಿದೆ! ಇದಕ್ಕೂ ಕೋಳಿ ಮೊಟ್ಟೆಗಳಿಂದತಯಾರಿಸುವ ಆಮ್ಲೆಟ್​ನಷ್ಟೇ ವೆಚ್ಚವಾಗಲಿದೆಯಂತೆ!

ಹೆಸರುಬೇಳೆಆಧಾರಿತ ಮೊಟ್ಟೆ! : ಹೌದು. ದೆಹಲಿ ಐಐಟಿಯಗ್ರಾಮೀಣಾಭಿವೃದ್ಧಿ ಮತ್ತು ತಂತ್ರಜ್ಞಾನ ವಿಭಾಗದಸಹಾಯಕ ಪ್ರೊಫೆಸರ್​ ಕಾವ್ಯಾ ದಾಶೋಹರ ಅವರಪ್ರಕಾರ ಹೆಸರುಬೇಳೆ ಬೆಳೆ ಆಧಾರಿತವಾಗಿ ಸಸ್ಯಾಹಾರಮೊಟ್ಟೆಯನ್ನು ಬೆಳೆಯಲಾಗಿದೆ.

ಭಾರತೀಯರು ಸಾಮಾನ್ಯವಾಗಿ ಬೇಳೆಕಾಳುಗಳ ಮೂಲಕ ಅಗತ್ಯವಾದ ಪೌಷ್ಟಿಕಾಂಶಗಳನ್ನು ಪಡೆದುಕೊಳ್ಳುತ್ತಾರೆ. ಹಾಗಾಗಿ, ನಾವು ಈ ನಿಟ್ಟಿನಲ್ಲಿ ಪ್ರಯೋಗಗಳನ್ನು ಆರಂಭಿಸಿದೆವು. ಹೆಸರುಬೇಳೆಯಲ್ಲಿ ಕೋಳಿ ಮೊಟ್ಟೆಯ ಬಿಳಿ ಭಾಗದಲ್ಲಿರುವಷ್ಟೇ ಪೌಷ್ಟಿಕಾಂಶ ಇರುವುದು ಖಚಿತವಾಯಿತು. ಆದ್ದರಿಂದ, ಹೆಸರುಬೇಳೆ ಗಿಡ ಆಧಾರಿತವಾದ ಸಸ್ಯಾಹಾರ ಮೊಟ್ಟೆಯನ್ನು ಬೆಳೆಯಲು ಮುಂದಾದೆವು ಎಂದು ತಿಳಿಸಿದರು. ಕೋಳಿ ಮೊಟ್ಟೆಯಲ್ಲಿ ಕೊಲೆಸ್ಟ್ರಾಲ್​ ಹಾಗೂ ಅಲರ್ಜಿ ಸಮಸ್ಯೆಗಳು ಇರುತ್ತವೆ. ಆದರೆ, ಸಸ್ಯಾಹಾರದ ಮೊಟ್ಟೆಯಲ್ಲಿ ಈ ಸಮಸ್ಯೆಗಳಿಲ್ಲ. ಜತೆಗೆ ಕೋಳಿ ಮೊಟ್ಟೆ ತಿನ್ನದೇ ಇರುವವರು ಸಸ್ಯಾಹಾರ ಮೊಟ್ಟೆಯನ್ನು ತಿಂದು, ಕೋಳಿ ಮೊಟ್ಟೆಯಲ್ಲಿ ದೊರೆಯುತ್ತಿದ್ದ ಎಲ್ಲ ಪೌಷ್ಟಿಕಾಂಶಗಳನ್ನು ಪಡೆದುಕೊಳ್ಳಬಹುದು ಎಂದರು. (ಏಜೆನ್ಸೀಸ್​)

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ

    ಆಯುರ್ವೇದ ಪ್ರಕಾರ ಈರುಳ್ಳಿ ಮತ್ತು ಬೆಲ್ಲ ಡೆಂಘಿ ಜ್ವರಕ್ಕೆ ಒಂದು ರಾಮಭಾಣವಂತೆ..? ಹೇಗೆಂದು ತಿಳಿಯಲು ಇದನ್ನು ಓದಿ…

    ಹೌದು ಆಯುರ್ವೇದದಲ್ಲಿ ಹೇಳಿರುವಂತೆ ಹಲವು ರೋಗಗಳಿಗೆ ಹಲವು ರೀತಿಯ ಮದ್ದುಗಳನ್ನು ನೀಡಲಾಗಿದೆ. ಆದ್ರೆ ರೀತಿಯಾಗಿ ಡೆಂಘಿ ಜ್ವರಕ್ಕೆ ಒಂದು ರಾಮಭಾಣವಾಗಿ ಈ ಬೆಲ್ಲ ಮತ್ತು ಈರುಳ್ಳಿ ಸಹಾಯವಾಗಿದೆ. ಇದಕ್ಕೆ ಉದಾಹರಣೆಯಾಗಿ ಅರೋಗ್ಯ ಇಲಾಖೆಯ ಇದರ ಬಗ್ಗೆ ಮಾಹಿತಿ ನೀಡಿದ್ದಾರೆ.

  • ಆರೋಗ್ಯ

    ಕಾಡುವ ಡ್ಯಾಂಡ್ರಫ್‌ಗೆ ಇಲ್ಲಿದ ಮನೆ ಮದ್ದು, ಒಮ್ಮೆ ಟ್ರೈ ಮಾಡಿ ನೋಡಿ.

    ತಲೆ ಹೊಟ್ಟಿನ (Dandruff) ಕಿರಿಕಿರಿ ಎಲ್ಲರನ್ನೂ ಒಂದಲ್ಲ ಒಂದು ವೇಳೆ ಕಾಡಿಯೇ ಕಾಡುತ್ತೆ. ಇದಕ್ಕಿದೆ ಸರಳ ಪರಿಹಾರ. ಮೆಂತ್ಯಪುಡಿಯನ್ನು ತುಸು ಕಾಲ ನೆನೆಸಿಟ್ಟು, ನೆಲ್ಲಿಕಾಯಿ ಪುಡಿಯೊಂದಿಗೆ ಕಲೆಸಿ, ಕೂದಲಿನ ಬುಡಕ್ಕೆ ಹಚ್ಚಿ ಅರ್ಧಗಂಟೆ ನಂತರ ತೊಳೆದುಕೊಳ್ಳಿ. ಲೋಳೆಸರದ ಬಿಳಿ ತಿರುಳನ್ನು ನೆನೆಸಿ, ದಾಸವಾಳದ ಎಲೆಯೊಂದಿಗೆ ರುಬ್ಬಿ ಹಚ್ಚಿಕೊಳ್ಳಿ. ಮೊಸರಿನೊಂದಿಗೆ ಹಚ್ಚಿಕೊಂಡರೆ ಮೆಹಂದಿಯೂ ಪರಿಣಾಮಕಾರಿ. ಕಡಲೆಹಿಟ್ಟು ಸೀಗೆಯೊಂದಿಗೆ ನಂತರ ತಲೆ ತೊಳೆದುಕೊಳ್ಳಬೇಕು. ಬಿಲ್ವಪತ್ರೆ ಕಾಯಿಯನ್ನು ಬೇಯಿಸಿ ಸುಟ್ಟು, ತಿರುಳನ್ನು ತೆಗೆದು ರುಬ್ಬಿ ಕೂದಲಿನ ಬುಡಕ್ಕೆ ಲೇಪಿಸಿಕೊಳ್ಳಿ. ಕೊಬ್ಬರಿ ಎಣ್ಣೆ…

  • ಸುದ್ದಿ

    ಇನ್ಮುಂದೆ ಭರಚುಕ್ಕಿಯನ್ನು ನೋಡಬಯಸುವರು ಬಯೋ ಡೈವರ್ಸಿಟಿ ಪಾರ್ಕ್‌ಗೂ ಹೋಗಿ ಬರುವ ಅವಕಾಶ,.!ಏನಿದು ಬಯೋ ಡೈವರ್ಸಿಟಿ ಪಾರ್ಕ್‌ ಗೊತ್ತಾ?

    ಭರಚುಕ್ಕಿ ಎಂದರೆ ಎಲ್ಲರಿಗು ಇಷ್ಟವಾದ ಜಾಗ ಎನ್ನಬಹುದು ಯಾಕೆಂದರೆ ಇಲ್ಲಿನ ಸೊಬಗು ನೋಡಲುತುಂಬಾ ಆಕರ್ಷಕವಾಗಿರುತ್ತದೆ ಮತ್ತು ಎತ್ತರದಿಂದ ಹರಿಯುವ ನೀರನ್ನು ನೋಡಲು ಜನರು ಸಾಕಷ್ಟು ದೂರದಿಂದ ಬರುತ್ತಾರೆ. ಈ ಸೊಬಗನ್ನು ಧಾರೆಯೆರೆಯುತ್ತಿದ್ದ ಭರಚುಕ್ಕಿ ಈಗ ಮತ್ತಷ್ಟು ರೋಮಾಂಚಕ ಅನುಭವ ನೀಡಲು ಸಜ್ಜಾಗುತ್ತಿದೆ. ಗಡಿಜಿಲ್ಲೆ ಚಾಮರಾಜನಗರದ ಕೊಳ್ಳೇಗಾಲ ತಾಲೂಕಿನಲ್ಲಿರುವ ಶಿವನಸಮುದ್ರ ಬಳಿಯ ಭರಚುಕ್ಕಿ ಜಲಪಾತವಿಶ್ವದ ಗಮನ ಸೆಳೆಯಲು ಅಣಿಯಾಗುತ್ತಿದೆ.ಶೀಘ್ರದಲ್ಲೇ ಇಲ್ಲಿ ಪ್ರವಾಸಿ ಆಕರ್ಷಣೆಯೊಂದು ಸೇರ್ಪಡೆಗೊಳ್ಳಲಿದ್ದು, ರಾಜ್ಯ ಅರಣ್ಯ ಇಲಾಖೆ ಮತ್ತು ಪ್ರವಾಸೋದ್ಯಮ ಇಲಾಖೆ ಜತೆಗೂಡಿ ಭರಚುಕ್ಕಿ ಬಯೋಡೈವರ್ಸಿಟಿ ಪಾರ್ಕ್‌…

  • ಸಿನಿಮಾ

    ಗಜಕೇಸರಿ, ಐರಾವತ ಬಂದ್ರೂ ಗೆಲ್ಲೋದು ‘ಅಭಿಮನ್ಯು’?ದಚ್ಚು ಪ್ರಚಾರ ಮಾಡಿದ್ರೆ ಸೋಲ್ತಾರೆ ಎಂದ್ರು..?

    ಮಂಡ್ಯ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲಿರುವ ಸುಮಲತಾ ಅಂಬರೀಶ್ ಪರವಾಗಿ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ರಾಕಿಂಗ್ ಸ್ಟಾರ್ ಯಶ್ ಪ್ರಚಾರ ನಡೆಸಲಿದ್ದಾರೆ. ಇದಕ್ಕೆ ಮಂಡ್ಯ ಜೆಡಿಎಸ್ ಕಾರ್ಯಕರ್ತರಿಂದ ವಿರೋಧ ವ್ಯಕ್ತವಾಗಿದ್ದು, ಸಿನಿಮಾ ರಂಗದವರು ಬಂದರೆ ಮಂಡ್ಯದ ಜನ ಮರುಳಾಗುವುದಿಲ್ಲ ಎಂದು ಹೇಳಿದ್ದಾರೆ. ‘ಗಜಕೇಸರಿ’, ‘ಐರಾವತ’ ಬಂದರೂ, ಗೆಲ್ಲುವುದು ‘ಅಭಿಮನ್ಯು’ ನಿಖಿಲ್ ಎಂದು ಜೆಡಿಎಸ್ ಕಾರ್ಯಕರ್ತರು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹಾಕುತ್ತಿದ್ದಾರೆ. ದರ್ಶನ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರಚಾರ ಮಾಡಿ ಸಿದ್ದರಾಮಯ್ಯ, ಆನಂದ ಅಪ್ಪುಗೋಳ, ಕೆ….

  • ಸುದ್ದಿ

    ಅಧಿಕಾರಿಗಳ ನಿರ್ಲಕ್ಷ್ಯದಿಂದ ರೈತರ ನೂರಾರು ಎಕರೆ ಬೆಳೆ ನಾಶ…!

    ಅಧಿಕಾರಿಗಳ ನಿರ್ಲಕ್ಷ್ಯದಿಂದ ಕಾಮಗಾರಿ ಹಂತದ ಕಾಲುವೆಗೆ ನೀರು ಬಿಟ್ಟ ಹಿನ್ನೆಲೆ ಕಾಲುವೆ ಒಡೆದು ನೂರಾರು ಎಕರೆ ಬೆಳೆ ಹಾಳಾಗಿದೆ. ರಾಯಚೂರಿನ ಗೋನಾಳ ಬಳಿ ನಿರ್ಮಾಣ ಹಂತದಲ್ಲಿರುವ ನಾರಾಯಣಪುರ ಬಲದಂಡೆ ಕಾಲುವೆಗೆ ನೀರನ್ನು ಹರಿಸಿರುವುದರಿಂದ ಹತ್ತಿ, ತೊಗರಿ ಸೇರಿ ಲಕ್ಷಾಂತರ ರೂಪಾಯಿ ಬೆಳೆ ಹಾಳಾಗಿದೆ. ಕೃಷ್ಣ ಮೇಲ್ದಂಡೆ ಯೋಜನೆಯ ಮೂರನೇ ಹಂತದ ಕಾಮಗಾರಿ 126 ಕಿ.ಮೀ ನಿಂದ 186 ಕಿ.ಮೀ ವರೆಗಿನ ನಾರಾಯಣಪುರ ಬಲದಂಡೆ ಕಾಲುವೆ ವಿಸ್ತರಣೆ ಇನ್ನೂ ನಡೆದಿದೆ. ಅಧಿಕಾರಿಗಳು ಕಾಲುವೆಯಲ್ಲಿ ನೀರಿನ ಹರಿವಿನ ಪ್ರಮಾಣ ಹೆಚ್ಚಾಗಿದ್ದರಿಂದ…