News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ವಿಜ್ಞಾನ

ಐಐಟಿ ಪ್ರಯೋಗ ಯಶಸ್ವಿಗೊಂಡಿದ್ದು, ಇನ್ಮುಂದೆ ಕೋಳಿಯ ಬದಲು ಗಿಡದಲ್ಲಿ ಮೊಟ್ಟೆಗಳು ಬೆಳೆಯಲಿವೆ ,.!

91

ನವದೆಹಲಿ, ಇಷ್ಟು ದಿನ ಮೊಟ್ಟೆ ಮಾಂಸಾಹಾರಿಯೋ,ಸಸ್ಯಾಹಾರಿಯೋ ಎಂಬ ವಾದ, ಪ್ರತಿವಾದಗಳು ಯಥೇಚ್ಚವಾಗಿ ನಡೆಯುತ್ತಿದ್ದವು. ಕೆಲವರು ಕೋಳಿಯ ಭ್ರೂಣವಾಗಿರುವುದರಿಂದ ಇದು ಮಾಂಸಾಹಾರ ಎಂದು ಹೇಳಿದರೆ, ಅದುಪೂರ್ತಿ ಕೋಳಿಯ ರೂಪು ಪಡೆದುಕೊಳ್ಳದ ಕಾರಣ ಅದು ಸಸ್ಯಾಹಾರಿ ಎಂದು ವಾದಿಸುವವರು ಅಧಿಕ ಸಂಖ್ಯೆಯಲ್ಲಿದ್ದರು. ಆದರೆ ಈಗ ಈ ಎಲ್ಲ ವಾದ ಪ್ರತಿವಾದಗಳಿಗೆ ಬ್ರೇಕ್​ ಹಾಕುವ ಮೂಲಕ ಶುದ್ಧ ಸಸ್ಯ ಜನ್ಯ ಮೊಟ್ಟೆಯನ್ನು ಬೆಳೆಯಬಹುದಾಗಿದೆ!

ದೆಹಲಿಯ ಇಂಡಿಯನ್​ ಇನ್​ಸ್ಟಿಟ್ಯೂಟ್​ ಆಫ್​ಟೆಕ್ನಾಲಜಿಯ (ಐಐಟಿ) ಸಂಶೋಧಕರು ಗಿಡದಲ್ಲಿಮೊಟ್ಟೆಯನ್ನು ಬೆಳೆದಿದ್ದಾರೆ. ನಾನ್​ ಸಾಯ್​, ಗ್ಲುಟೆನ್​ಮುಕ್ತವಾಗಿರುವ ಈ ಮೊಟ್ಟೆಯನ್ನು ದೆಹಲಿಐಐಟಿಯಲ್ಲಿ ಆಯೋಜನೆಗೊಂಡಿದ್ದ ಕೈಗಾರಿಕಾ ದಿನ-2019ರಲ್ಲಿ ಮೊದಲಬಾರಿಗೆ ಪ್ರದರ್ಶಿಸಲಾಯಿತು. ಈ ಮೊಟ್ಟೆಗಳು ಕೋಳಿಮೊಟ್ಟೆಯ ಆಕಾರದ ಬದಲು ಕ್ಯೂಬ್​(ಘನ) ಆಕಾರದಲ್ಲಿ ಲಭಿಸಲಿವೆ. ಇವನ್ನು ಸುಲಭವಾಗಿ ಪುಡಿಮಾಡಿ, ನೀರಿನಲ್ಲಿ ಬೆರೆಸಿ ಸಾಸ್​ಪಾನ್​ನಲ್ಲಿ ಹಾಕಿ ಆಮ್ಲೆಟ್​ಮಾಡಿಕೊಂಡು ತಿನ್ನಬಹುದಾಗಿದೆ! ಇದಕ್ಕೂ ಕೋಳಿ ಮೊಟ್ಟೆಗಳಿಂದತಯಾರಿಸುವ ಆಮ್ಲೆಟ್​ನಷ್ಟೇ ವೆಚ್ಚವಾಗಲಿದೆಯಂತೆ!

ಹೆಸರುಬೇಳೆಆಧಾರಿತ ಮೊಟ್ಟೆ! : ಹೌದು. ದೆಹಲಿ ಐಐಟಿಯಗ್ರಾಮೀಣಾಭಿವೃದ್ಧಿ ಮತ್ತು ತಂತ್ರಜ್ಞಾನ ವಿಭಾಗದಸಹಾಯಕ ಪ್ರೊಫೆಸರ್​ ಕಾವ್ಯಾ ದಾಶೋಹರ ಅವರಪ್ರಕಾರ ಹೆಸರುಬೇಳೆ ಬೆಳೆ ಆಧಾರಿತವಾಗಿ ಸಸ್ಯಾಹಾರಮೊಟ್ಟೆಯನ್ನು ಬೆಳೆಯಲಾಗಿದೆ.

ಭಾರತೀಯರು ಸಾಮಾನ್ಯವಾಗಿ ಬೇಳೆಕಾಳುಗಳ ಮೂಲಕ ಅಗತ್ಯವಾದ ಪೌಷ್ಟಿಕಾಂಶಗಳನ್ನು ಪಡೆದುಕೊಳ್ಳುತ್ತಾರೆ. ಹಾಗಾಗಿ, ನಾವು ಈ ನಿಟ್ಟಿನಲ್ಲಿ ಪ್ರಯೋಗಗಳನ್ನು ಆರಂಭಿಸಿದೆವು. ಹೆಸರುಬೇಳೆಯಲ್ಲಿ ಕೋಳಿ ಮೊಟ್ಟೆಯ ಬಿಳಿ ಭಾಗದಲ್ಲಿರುವಷ್ಟೇ ಪೌಷ್ಟಿಕಾಂಶ ಇರುವುದು ಖಚಿತವಾಯಿತು. ಆದ್ದರಿಂದ, ಹೆಸರುಬೇಳೆ ಗಿಡ ಆಧಾರಿತವಾದ ಸಸ್ಯಾಹಾರ ಮೊಟ್ಟೆಯನ್ನು ಬೆಳೆಯಲು ಮುಂದಾದೆವು ಎಂದು ತಿಳಿಸಿದರು. ಕೋಳಿ ಮೊಟ್ಟೆಯಲ್ಲಿ ಕೊಲೆಸ್ಟ್ರಾಲ್​ ಹಾಗೂ ಅಲರ್ಜಿ ಸಮಸ್ಯೆಗಳು ಇರುತ್ತವೆ. ಆದರೆ, ಸಸ್ಯಾಹಾರದ ಮೊಟ್ಟೆಯಲ್ಲಿ ಈ ಸಮಸ್ಯೆಗಳಿಲ್ಲ. ಜತೆಗೆ ಕೋಳಿ ಮೊಟ್ಟೆ ತಿನ್ನದೇ ಇರುವವರು ಸಸ್ಯಾಹಾರ ಮೊಟ್ಟೆಯನ್ನು ತಿಂದು, ಕೋಳಿ ಮೊಟ್ಟೆಯಲ್ಲಿ ದೊರೆಯುತ್ತಿದ್ದ ಎಲ್ಲ ಪೌಷ್ಟಿಕಾಂಶಗಳನ್ನು ಪಡೆದುಕೊಳ್ಳಬಹುದು ಎಂದರು. (ಏಜೆನ್ಸೀಸ್​)

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    MP ಪ್ರತಾಪ್ ಸಿಂಹರವರನ್ನು ಕಸ್ಟಡಿಗೆ ತೆಗೆದುಕೊಂಡ ಪೊಲೀಸರು!ಈ ಸುದ್ದಿ ನೋಡಿ…

    ಬಹುಭಾಷ ನಟ ಪ್ರಕಾಶ್ ರೈ ಸಲ್ಲಿಸಿದ್ದ ಮಾನನಷ್ಟ ಕೇಸಿನಲ್ಲಿ ಬಿಜೆಪಿ ಸಂಸದ ಪ್ರತಾಪ್ ಸಿಂಹ ಅವರನ್ನು ಪೊಲೀಸ್ ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ. ಮೈಸೂರು ಸಂಸದ ಪ್ರತಾಪ್ ಸಿಂಹ ವಿರುದ್ಧ ಕೋರ್ಟ್ ಜಾಮೀನು ರಹಿತ ವಾರೆಂಟ್ ಜಾರಿ ಮಾಡಿತ್ತು. ಇಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಪ್ರತಾಪ್ ಸಿಂಹ ಹಾಜರಾಗಿದ್ದರು. ಈ ಹಿನ್ನೆಲೆಯಲ್ಲಿ ನ್ಯಾಯಾಧೀಶರ ಆದೇಶದ ಮೇರೆಗೆ ಪೊಲೀಸರು ಪ್ರತಾಪ್ ಸಿಂಹ ಅವರನ್ನು ಕಸ್ಟಡಿಗೆ ಪಡೆದು ಕೂರಿಸಿದ್ದಾರೆ. ಮತ್ತೆ ರೀ ಕಾಲ್ ಮಾಡುವವರೆಗೆ ಕಸ್ಟಡಿಗೆ ಪಡೆಯುವಂತೆ ಪೊಲೀಸರಿಗೆ ಕೋರ್ಟ್ ಸೂಚನೆ ನೀಡಿದೆ….

  • ಉಪಯುಕ್ತ ಮಾಹಿತಿ, ಸಿನಿಮಾ

    ತನ್ನ ನೆಚ್ಚಿನ ನಟಿಯ ಮೇಲಿನ ಆಭಿಮಾನದಿಂದ,ಹೇಗಿದ್ದವಳು ,ಹೇಗಾಗಿದ್ದಾಳೆ ಗೊತ್ತಾ..?ತಿಳಿಯಲು ಈ ಲೇಖನ ಓದಿ ..

    ಹಾಲಿವುಡ್ ನಟಿ ಆ್ಯಂಜಲೀನಾ ಜೋಲಿಯಂತೆ ಕಾಣಲು ಇರಾನಿನ ಯುವತಿಯೊಬ್ಬಳು 50 ಬಾರಿ ಪ್ಲಾಸ್ಟಿಕ್ ಸರ್ಜರಿ ಮಾಡಿಸಿಕೊಂಡಿದ್ದಾಳೆ ಎಂಬ ಸುದ್ದಿ ಕೇಳಿ ಜನ ದಂಗಾಗಿದ್ದಾರೆ.

  • ಸಿನಿಮಾ

    ಕನ್ನಡಕ್ಕೆ ಬಾಹುಬಲಿಯ “ಬಲ್ಲಾಳದೇವ”

    ಜಗತ್ತಿನಾದ್ಯಂತ ದಾಖಲೆ ಕಲೆಕ್ಷನ್ ಮಾಡುತ್ತಿರುವ ಬಾಹುಬಲಿ ಚಿತ್ರದ ಖಳನಟ ಬಲ್ಲಾಳದೇವ ಪಾತ್ರದಲ್ಲಿ ಮಿಂಚಿದ ರಾಣಾ ದಗ್ಗುಬಾಟಿ ಕನ್ನಡ ಚಿತ್ರದಲ್ಲಿ ಅಭಿನಯಿಸಲಿದ್ದು, ಈ ಬಗ್ಗೆ ಅಧಿಕೃತ ಘೋಷಣೆಯೊಂದೇ ಬಾಕಿ ಇದೆ.

  • ಸಿನಿಮಾ

    ಕನ್ನಡ ಚಿತ್ರಗಳ ಹಿಂದಿನ ಎಲ್ಲಾ ದಾಖಲೆಗಳು ದೂಳಿಪಟ!ಕೆಜಿಎಫ್ ಚಿತ್ರದ ಮೊದಲ ದಿನದ ಕಲೆಕ್ಷನ್ ಎಷ್ಟು ಗೊತ್ತಾ?

    ಕನ್ನಡ ಚಿತ್ರರಂಗ ಮಾತ್ರವಲ್ಲ ಇಡೀ ಭಾರತೀಯ ಚಿತ್ರರಂಗದ ಗಮನ ಸೆಳೆದಿದ್ದ ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹು ನಿರೀಕ್ಷಿತ ಚಿತ್ರ ಕೆಜಿಎಫ್ ಶುಕ್ರವಾರದಂದು ವಿಶ್ವದಾದ್ಯಂತ ತೆರೆಕಂಡಿದ್ದು, ಸಿನಿ ಪ್ರೇಕ್ಷಕರಿಂದ ಫುಲ್ ಮಾರ್ಕ್ಸ್ ಪಡೆದಿದೆ. ಕನ್ನಡ ಚಿತ್ರವೊಂದು ಇದೇ ಮೊದಲ ಬಾರಿಗೆ ಐದು ಭಾಷೆಗಳಲ್ಲಿ ಎರಡು ಸಾವಿರಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿದ್ದು, ಈ ಚಿತ್ರದ ಮೊದಲ ದಿನದ ಕಲೆಕ್ಷನ್ ಬರೋಬ್ಬರಿ 25 ಕೋಟಿ ರೂಪಾಯಿಗಳೆಂದು ಹೇಳಲಾಗಿದೆ. ಕೆಜಿಎಫ್ ಚಿತ್ರ 100 ಕೋಟಿ ಕ್ಲಬ್ ಸೇರುವುದರಲ್ಲಿ ಯಾವುದೇ ಅನುಮಾನವಿಲ್ಲವೆಂದು ಚಿತ್ರ…

  • ಸುದ್ದಿ

    ಧೋನಿ ನಿವೃತ್ತಿಗೆ ಕೊಹ್ಲಿ ಪ್ರತಿಕ್ರಿಯೆ…..!

    ವಿಶ್ವಕಪ್ ಟೂರ್ನಿಯ ಲೀಗ್ ಪಂದ್ಯಗಳಲ್ಲಿ ಎಂ.ಎಸ್.ಧೋನಿ ಸ್ಲೋ ಬ್ಯಾಟಿಂಗ್ ಟೀಕೆಗೆ ಗುರಿಯಾಗಿತ್ತು. ಇಷ್ಟೇ ಅಲ್ಲ ಧೋನಿ ನಿವೃತ್ತಿಗೂ ಒತ್ತಡ ಕೇಳಿ ಬಂದಿತ್ತು. ಆದರೆ ನ್ಯೂಜಿಲೆಂಡ್ ವಿರುದ್ಧದ ಫೈನಲ್ ಪಂದ್ಯದಲ್ಲಿ ಧೋನಿ ಎಲ್ಲಾ ಟೀಕಿಗೆ ಉತ್ತರಿಸಿದ್ದಾರೆ. 50 ರನ್ ಸಿಡಿಸೋ ಮೂಲಕ ಭಾರತದ ದಿಟ್ಟ ಹೋರಾಟದಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದರು. ಆದರೆ ಪಂದ್ಯ ಗೆಲ್ಲಲಿಲ್ಲ ಅನ್ನೋ ಕೊರಗು ಇನ್ನು ಮಾಸಿಲ್ಲ. ಇದರ ನಡುವೆ ಮತ್ತೆ ಧೋನಿ ನಿವೃತ್ತಿ ಪಶ್ನೆ ಎದ್ದಿದೆ. ಇದಕ್ಕೆ ನಾಯಕ ವಿರಾಟ್ ಕೊಹ್ಲಿ ಪ್ರತಿಕ್ರಿಯೆ ನೀಡಿದ್ದಾರೆ….