ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಂಗಳೂರು: ಐಎಂಎ ಜ್ಯುವೆಲ್ಲರಿಯಲ್ಲಿ ಹಣ ಹೂಡಿ ವಂಚನೆಗೆ ಒಳಗಾದವರು ಒಬ್ಬೊಬ್ಬರೇ ತಮ್ಮ ಸಂಕಟ ತೋಡಿಕೊಳ್ಳುತ್ತಿದ್ದಾರೆ. ಕಂಪನಿ ಮಾಲೀಕ ಮನ್ಸೂರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಬೆಂಗಳೂರಿನ ಶಿವಾಜಿನಗರದ ಐಎಂಎ ಜ್ಯುವೆಲ್ಲರಿ ಮಳಿಗೆ ಎದುರು ಮೋಸ ಹೋಗಿರುವ ಜನ ಎದುರು ಅಹೋರಾತ್ರಿ ಧರಣಿ ನಡೆಸಿದರು. ಬೆಳಗ್ಗೆ 11 ಗಂಟಗೆ ವಿಧಾನಸೌಧಕ್ಕೆ ಮುತ್ತಿಗೆ ಹಾಕಿ, ಪ್ರಕರಣದ ತೀವ್ರತೆಯನ್ನು ಸರ್ಕಾರಕ್ಕೆ ಮುಟ್ಟಿಸುತ್ತೇವೆ ಎಂದು ಪ್ರತಿಭಟನಾಕಾರರು ನಿರ್ಧರಿಸಿದ್ದಾರೆ. ಐಎಂಎ ಮಾಲೀಕನನ್ನು ಬಂಧಿಸಿ ಹಣ ಕಳೆದುಕೊಂಡಿರುವ ಅಮಾಯಕರಿಗೆ ಹಣ ಕೊಡಿಸುವಂತೆ ಗೃಹಸಚಿವರಲ್ಲಿ ಮನವಿ ಮಾಡಿಕೊಳ್ಳಲಿದ್ದಾರೆ.

ಇದನ್ನೂ ಓದಿ: ಐಎಂಎ ಮಾಲೀಕ ಆತ್ಮಹತ್ಯೆ ಮಾಡಿಕೊಂಡಿಲ್ವಂತೆ – ಲಾಭಾಂಶದ ಆಸೆಗೆ ಲಕ್ಷ, ಕೋಟಿ ಕಳೆದುಕೊಂಡ್ರು. ರಾತ್ರಿಯೆಲ್ಲಾ ಪೊಲೀಸರು ದೂರು ಸ್ವೀಕರಿಸಿದ್ದು, ಧೈರ್ಯ ಹೇಳುವ ಕೆಲಸವನ್ನೂ ಮಾಡಿದ್ದಾರೆ. ಜ್ಯುವೆಲ್ಲರಿ ಬಳಿ ಸಾವಿರಾರು ಜನ ಜಮಾಯಿಸಿದ್ದರಿಂದ ಪೊಲೀಸ್ ಭದ್ರತೆ ಒದಗಿಸಲಾಗಿದೆ. ಅಂದಹಾಗೆ, ಬೆಂಗಳೂರು ಮಾತ್ರ ಅಲ್ಲ, ರಾಜ್ಯಾದ್ಯಂತ ಮೋಸ ಹೋದವರು ಆತಂಕ್ಕೀಡಾಗಿದ್ದಾರೆ. ದಾವಣಗೆರೆಯಲ್ಲಿ ಜನ ಪ್ರತಿಭಟಿಸಿದ್ದಾರೆ. ದುಪ್ಪಟ್ಟು ಹಣದ ಆಸೆಯಿಂದ ಮಕ್ಕಳ ಶಾಲಾ ಶುಲ್ಕಗೆ ಸಹಾಯ ಆಗುತ್ತದೆ ಎಂದು 4 ಲಕ್ಷ ಹೂಡಿದ್ವಿ. 3 ಪರ್ಸೆಂಟ್ ಬಡ್ಡಿಯಲ್ಲಿ ಜೀವನ ಸಾಗಿಸ್ತಿದ್ವಿ. ಈಗ ನೋಡಿದ್ರೆ ಹಿಂಗಾಯ್ತು ಅಂತ ಸೊಹ್ರಾಬಾನು ಕಣ್ಣೀರು ಹಾಕ್ತಿದ್ದಾರೆ.

ಮೆಕ್ಯಾನಿಕ್ ಕೆಲಸ ಮಾಡುವ ಇಮ್ತಿಯಾಜ್ ಪಾಷಾ, ತಂಗಿಯ ಮದುವೆಗೆ ಅಂತಾ 1.5 ಲಕ್ಷ ಹೂಡಿಕೆ ಮಾಡಿದ್ದರು. ಇದೇ 10 ರಂದು ಹಣ ತೆಗೆಯಲು ಅರ್ಜಿ ಕೂಡ ಹಾಕಿದ್ದರು. ಅಷ್ಟರಲ್ಲಿ ಮನ್ಸೂರ್ ಖಾನ್ ಪರಾರಿ ಸುದ್ದಿ ನೋಡಿ ಕಂಗಾಲಾಗಿದ್ದಾರೆ. ಉಸ್ಮಾನ್ ಮತ್ತು ನಾಸಿರುದ್ದೀನ್ ಪ್ರತೀ ತಿಂಗಳು ಮನೆ ಬಾಡಿಗೆ ಕಟ್ಟಲು ಹಣ ಆಗಲಿ ಎಂದು ಹೂಡಿಕೆ ಮಾಡಿರುವುದಾಗಿ ತಿಳಿಸಿದ್ದಾರೆ.

ವಂಚನೆ ಹೇಗೆ? : ಐಎಂಎ ಜ್ಯುವೆಲ್ಸ್ ನಿಂದ ಚಿನ್ನ, ವಜ್ರ ಖರೀದಿಸುವ ಗ್ರಾಹಕರಿಗೆ ಮೇಕಿಂಗ್ ಹಾಗೂ ವೇಸ್ಟೇಜ್ ಶುಲ್ಕ ವಿಧಿಸುತ್ತಿರಲಿಲ್ಲ. ಈ ಪ್ರಕಟಣೆ ನೋಡಿ ಜನ ಚಿನ್ನ ಖರೀದಿ ಮಾಡುತ್ತಿದ್ದರು. ಖರೀದಿಗೆ ಬಂದ ಗ್ರಾಹಕರಿಗೆ ಕಂಪನಿಯಲ್ಲಿ ಹಣ ಹೂಡುವಂತೆ ಸಿಬ್ಬಂದಿ ಪುಸಲಾಯಿಸುತ್ತಿದ್ದರು. ಜ್ಯುವೆಲ್ಸ್ ಸಿಬ್ಬಂದಿಯ ಮಾತಿಗೆ ಮರುಳಾದ ಜನ ತಮ್ಮಲ್ಲಿದ್ದ ಹಣವನ್ನು ಹೂಡಿಕೆ ಮಾಡುತ್ತಿದ್ದರು. 1 ಲಕ್ಷ ರೂ. 3 ಸಾವಿರ ರೂ. ನಂತೆ ಕಂಪನಿ ಬಡ್ಡಿ ನೀಡುತಿತ್ತು. ಕಂಪನಿ ಸರಿಯಾದ ಸಮಯದಲ್ಲಿ ಲಾಭಾಂಶ ನೀಡುತ್ತಿದ್ದ ಕಾರಣ ವಿಶ್ವಾಸಾರ್ಹತೆ ಗಳಿಸಿಕೊಂಡಿತ್ತು. ಲಾಭಾಂಶ ಪಡೆದ ಗ್ರಾಹಕರು ಸ್ನೇಹಿತರಿಗೆ ಹೇಳುತ್ತಿದ್ದ ಕಾರಣ ಅವರು ಹೂಡಿಕೆ ಮಾಡತೊಡಗಿದರು. ಭಾರೀ ಪ್ರಚಾರ ಸಿಕ್ಕಿದ ಪರಿಣಾಮ ಹೂಡಿಕೆ ಹೆಚ್ಚಾಯಿತು. ಆದರೆ ಕಳೆದ 2-3 ತಿಂಗಳಿನಿಂದ ಸಂಸ್ಥೆ ಬಡ್ಡಿ ನೀಡಿರಲಿಲ್ಲ. ಈ ನಡುವೆ ಜೂನ್ 10 ರಂದು ಸಂಪೂರ್ಣ ಹಣ ನೀಡುವುದಾಗಿ ಭರವಸೆ ನೀಡಿತ್ತು. ಆದರೆ ಜೂ.9 ರಂದು ಮಾಲೀಕ ಮನ್ಸೂರ್ ಅಲಿ ಖಾನ್ ಆತ್ಮಹತ್ಯೆಯ ವಿಡಿಯೋ ವೈರಲ್ ಆದ ಬಳಿಕ ಮಳಿಗೆಯ ಮುಂದೆ ಜನರು ಜಮಾಯಿಸಿ ಹೂಡಿದ್ದ ಹಣವನ್ನು ಕೇಳಲು ಆರಂಭಿಸಿದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಂಚಾರಿ ಪೊಲೀಸರ ನೆರವಿನಿಂದ ಅವಳಿ ಮಕ್ಕಳನ್ನ ಅಂಬ್ಯುಲೆನ್ಸ್ ಸಿಬ್ಬಂದಿ ಹಾವೇರಿಯಿಂದ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಸೇರಿಸಿ ಜೀವ ಉಳಿಸಿದ್ದಾರೆ. ಹಾವೇರಿ ನಗರದ ನಿವಾಸಿ ಲಕ್ಷ್ಮಿ ಜಿಲ್ಲಾಸ್ಪತ್ರೆಯಲ್ಲಿ ಅವಳಿ ಮಕ್ಕಳಿಗೆ ಜನ್ಮ ನೀಡಿದ್ದರು. ಆದರೆ ಮಕ್ಕಳಲ್ಲಿ ತೀವ್ರತರದ ಸಮಸ್ಯೆ ಕಾಣಿಸಿಕೊಂಡಿತ್ತು. ಜಿಲ್ಲಾಸ್ಪತ್ರೆಯ ವೈದ್ಯರ ಸಲಹೆಯಂತೆ ಆದಷ್ಟು ಬೇಗ ನವಜಾತ ಶಿಶುಗಳನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಸೇರಿಸಬೇಕಾಗಿತ್ತು. ಈ ಹಿನ್ನೆಲೆಯಲ್ಲಿ ಪರಿಸ್ಥಿತಿ ಅರ್ಥಮಾಡಿಕೊಂಡ ಅಂಬ್ಯುಲೆನ್ಸ್ ಸಿಬ್ಬಂದಿ ಕೇವಲ 42 ನಿಮಿಷಗಳಲ್ಲಿ 80 ಕಿಮೀ ಕ್ರಮಿಸಿ ಮಕ್ಕಳನ್ನು ಕಿಮ್ಸ್ ಗೆ ದಾಖಲಿಸಿದ್ದಾರೆ….
ವಿಶ್ವಾದ್ಯಂತ ನಿನ್ನೆ ಬಿಡುಗಡೆಯಾದ ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ ಚಿತ್ರ ನಿರೀಕ್ಷೆಯಂತೆಯೇ ಬಾಕ್ಸ್ ಆಫೀಸ್ ನಲ್ಲಿ ಧೂಳೆಬ್ಬಿಸಿದ್ದು, ಕೇವಲ ಅಭಿಮಾನಿಗಳಿಂದ ಮಾತ್ರವಲ್ಲ ಇಡೀ ಸ್ಯಾಂಡಲ್ ವುಡ್ ಸ್ಟಾರ್ ಗಳೂ ಕೆಜಿಎಫ್ ಗೆ ಫಿದಾ ಆಗಿದ್ದಾರೆ. ಹೌದು.. ಕರ್ನಾಟಕ ಮಾತ್ರವಲ್ಲ ಇಡೀ ಭಾರತೀಯ ಚಿತ್ರರಂಗದಲ್ಲೇ ಬಾಹುಬಲಿ ಬಳಿಕ ಭಾರಿ ಹವಾ ಸೃಷ್ಟಿಸಿರುವ ಚಿತ್ರ ಕೆಜಿಎಫ್.. ಪ್ರಶಾಂತ್ ನೀಲ್ ನಿರ್ದೇಶನದ ಮತ್ತು ಯಶ್ ಅಭಿನಯದ ಕೆಜಿಎಫ್ ಚಿತ್ರ ಅಬ್ಬರದ ಪ್ರಚಾರದಂತೆಯೇ ಬಾಕ್ಸ್ ಆಫೀಸ್ ನಲ್ಲಿ ಧೂಳೆಬ್ಬಿಸಿದೆ. ಕೆಜಿಎಫ್ ಚಿತ್ರಕ್ಕೆ…
ಸುಂದರ್ ಪಿಚೈ ಅವರು ಮೊದಲು ಕಂಪನಿಯ ಇಂಟರ್ ನೆಟ್ ವ್ಯವಹಾರವನ್ನು ಉನ್ನತಮಟ್ಟಕ್ಕೇರಿಸುವ ನಿಟ್ಟಿನಲ್ಲಿ ಪ್ರಾಡಕ್ಟ್ ಮತ್ತು ಇಂಜಿನಿಯರಿಂಗ್ ವಿಭಾಗದ ಜವಾಬ್ದಾರಿಯನ್ನು ನೋಡಿಕೊಳ್ಳುತ್ತಿದ್ದರು.
ಬೆಂಗಳೂರು: ನಮ್ಮ ಮೆಟ್ರೋ ಯೋಜನೆಗೆ ಈಗ ಕಾರ್ಪೊರೇಟ್ ಕಂಪನಿಗಳಿಂದ ಭಾರೀ ಆರ್ಥಿಕ ಬಲ ದೊರೆಯುತ್ತಿದೆ. ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆ (CSR) ನಿಧಿಗಳ ಮೂಲಕ ಸಾವಿರಾರು ಕೋಟಿ ರೂಪಾಯಿಗಳ ನೆರವು ಹರಿದುಬರುತ್ತಿದ್ದು, ಇದು ಬೆಂಗಳೂರು ಮೆಟ್ರೊ ರೈಲು ನಿಗಮ ಲಿಮಿಟೆಡ್ (ಬಿಎಂಆರ್ಸಿಎಲ್) ಮೇಲೆ ಇರುವ ಆರ್ಥಿಕ ಹೊರೆ ಕಡಿಮೆ ಮಾಡಲು ಪ್ರಮುಖ ಪಾತ್ರವಹಿಸುತ್ತಿದೆ. ಪ್ರಮುಖ ಅಂಶಗಳು (ಸುದ್ದಿಯ ಸಾರಾಂಶ) ಕಾರ್ಪೊರೇಟ್ ಕಂಪನಿಗಳಿಂದ ಸಾವಿರಾರು ಕೋಟಿ ರೂ. CSR ನೆರವು ನಿಲ್ದಾಣ ನಿರ್ಮಾಣ, ಸ್ಕೈವಾಕ್, ಹೆಸರಿನ ಹಕ್ಕು (naming rights)…
ಕೊರೊನಾ ಈ ದೇಶಕ್ಕೆ ಕಾಲಿಟ್ಟಾಗ ಹಳ್ಳಿಗಳು ಕೊರೊನಾ ವೈರಸ್ ನಿಂದ ಬಹುದೂರದಲ್ಲಿದ್ದವು. ಪೇಟೆಗಳಲ್ಲಿ ಮಾತ್ರ ಜನ ಕೊರೊನಾಕ್ಕೆ ಬಲಿ ಆಗ್ತಾ ಇದ್ರು. ಆದ್ರೆ ಕೊರೊನಾ ಎರಡನೇ ಅಲೆ ಹಳ್ಳಿಗರನ್ನು ತೀವ್ರವಾಗಿ ಬಾಧಿಸುತ್ತಿದೆ. ಇದಕ್ಕೆ ಹಳ್ಳಿಗರ ಸ್ವಯಂಕೃತ ಅಪರಾಧವೇ ಕಾರಣವಾಗಿದೆ.
ಇತ್ತೀಚಿನ ದಿನಮಾನಗಳಲ್ಲಿ ಮನುಷ್ಯನನ್ನ ಕಂಡರೆ ಮನುಷ್ಯನಿಗೆ ಆಗುವುದಿಲ್ಲ. ಒಬ್ಬರನ್ನ ಕಂಡು ಇನ್ನೊಬ್ಬರು ಹೊಟ್ಟೆ ಕಿಚ್ಚು ಪಡುವುದೇ ಹೆಚ್ಚು.