ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಂಗಳೂರು: ಐಎಂಎ ಜ್ಯುವೆಲ್ಲರಿಯಲ್ಲಿ ಹಣ ಹೂಡಿ ವಂಚನೆಗೆ ಒಳಗಾದವರು ಒಬ್ಬೊಬ್ಬರೇ ತಮ್ಮ ಸಂಕಟ ತೋಡಿಕೊಳ್ಳುತ್ತಿದ್ದಾರೆ. ಕಂಪನಿ ಮಾಲೀಕ ಮನ್ಸೂರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಬೆಂಗಳೂರಿನ ಶಿವಾಜಿನಗರದ ಐಎಂಎ ಜ್ಯುವೆಲ್ಲರಿ ಮಳಿಗೆ ಎದುರು ಮೋಸ ಹೋಗಿರುವ ಜನ ಎದುರು ಅಹೋರಾತ್ರಿ ಧರಣಿ ನಡೆಸಿದರು. ಬೆಳಗ್ಗೆ 11 ಗಂಟಗೆ ವಿಧಾನಸೌಧಕ್ಕೆ ಮುತ್ತಿಗೆ ಹಾಕಿ, ಪ್ರಕರಣದ ತೀವ್ರತೆಯನ್ನು ಸರ್ಕಾರಕ್ಕೆ ಮುಟ್ಟಿಸುತ್ತೇವೆ ಎಂದು ಪ್ರತಿಭಟನಾಕಾರರು ನಿರ್ಧರಿಸಿದ್ದಾರೆ. ಐಎಂಎ ಮಾಲೀಕನನ್ನು ಬಂಧಿಸಿ ಹಣ ಕಳೆದುಕೊಂಡಿರುವ ಅಮಾಯಕರಿಗೆ ಹಣ ಕೊಡಿಸುವಂತೆ ಗೃಹಸಚಿವರಲ್ಲಿ ಮನವಿ ಮಾಡಿಕೊಳ್ಳಲಿದ್ದಾರೆ.

ಇದನ್ನೂ ಓದಿ: ಐಎಂಎ ಮಾಲೀಕ ಆತ್ಮಹತ್ಯೆ ಮಾಡಿಕೊಂಡಿಲ್ವಂತೆ – ಲಾಭಾಂಶದ ಆಸೆಗೆ ಲಕ್ಷ, ಕೋಟಿ ಕಳೆದುಕೊಂಡ್ರು. ರಾತ್ರಿಯೆಲ್ಲಾ ಪೊಲೀಸರು ದೂರು ಸ್ವೀಕರಿಸಿದ್ದು, ಧೈರ್ಯ ಹೇಳುವ ಕೆಲಸವನ್ನೂ ಮಾಡಿದ್ದಾರೆ. ಜ್ಯುವೆಲ್ಲರಿ ಬಳಿ ಸಾವಿರಾರು ಜನ ಜಮಾಯಿಸಿದ್ದರಿಂದ ಪೊಲೀಸ್ ಭದ್ರತೆ ಒದಗಿಸಲಾಗಿದೆ. ಅಂದಹಾಗೆ, ಬೆಂಗಳೂರು ಮಾತ್ರ ಅಲ್ಲ, ರಾಜ್ಯಾದ್ಯಂತ ಮೋಸ ಹೋದವರು ಆತಂಕ್ಕೀಡಾಗಿದ್ದಾರೆ. ದಾವಣಗೆರೆಯಲ್ಲಿ ಜನ ಪ್ರತಿಭಟಿಸಿದ್ದಾರೆ. ದುಪ್ಪಟ್ಟು ಹಣದ ಆಸೆಯಿಂದ ಮಕ್ಕಳ ಶಾಲಾ ಶುಲ್ಕಗೆ ಸಹಾಯ ಆಗುತ್ತದೆ ಎಂದು 4 ಲಕ್ಷ ಹೂಡಿದ್ವಿ. 3 ಪರ್ಸೆಂಟ್ ಬಡ್ಡಿಯಲ್ಲಿ ಜೀವನ ಸಾಗಿಸ್ತಿದ್ವಿ. ಈಗ ನೋಡಿದ್ರೆ ಹಿಂಗಾಯ್ತು ಅಂತ ಸೊಹ್ರಾಬಾನು ಕಣ್ಣೀರು ಹಾಕ್ತಿದ್ದಾರೆ.

ಮೆಕ್ಯಾನಿಕ್ ಕೆಲಸ ಮಾಡುವ ಇಮ್ತಿಯಾಜ್ ಪಾಷಾ, ತಂಗಿಯ ಮದುವೆಗೆ ಅಂತಾ 1.5 ಲಕ್ಷ ಹೂಡಿಕೆ ಮಾಡಿದ್ದರು. ಇದೇ 10 ರಂದು ಹಣ ತೆಗೆಯಲು ಅರ್ಜಿ ಕೂಡ ಹಾಕಿದ್ದರು. ಅಷ್ಟರಲ್ಲಿ ಮನ್ಸೂರ್ ಖಾನ್ ಪರಾರಿ ಸುದ್ದಿ ನೋಡಿ ಕಂಗಾಲಾಗಿದ್ದಾರೆ. ಉಸ್ಮಾನ್ ಮತ್ತು ನಾಸಿರುದ್ದೀನ್ ಪ್ರತೀ ತಿಂಗಳು ಮನೆ ಬಾಡಿಗೆ ಕಟ್ಟಲು ಹಣ ಆಗಲಿ ಎಂದು ಹೂಡಿಕೆ ಮಾಡಿರುವುದಾಗಿ ತಿಳಿಸಿದ್ದಾರೆ.

ವಂಚನೆ ಹೇಗೆ? : ಐಎಂಎ ಜ್ಯುವೆಲ್ಸ್ ನಿಂದ ಚಿನ್ನ, ವಜ್ರ ಖರೀದಿಸುವ ಗ್ರಾಹಕರಿಗೆ ಮೇಕಿಂಗ್ ಹಾಗೂ ವೇಸ್ಟೇಜ್ ಶುಲ್ಕ ವಿಧಿಸುತ್ತಿರಲಿಲ್ಲ. ಈ ಪ್ರಕಟಣೆ ನೋಡಿ ಜನ ಚಿನ್ನ ಖರೀದಿ ಮಾಡುತ್ತಿದ್ದರು. ಖರೀದಿಗೆ ಬಂದ ಗ್ರಾಹಕರಿಗೆ ಕಂಪನಿಯಲ್ಲಿ ಹಣ ಹೂಡುವಂತೆ ಸಿಬ್ಬಂದಿ ಪುಸಲಾಯಿಸುತ್ತಿದ್ದರು. ಜ್ಯುವೆಲ್ಸ್ ಸಿಬ್ಬಂದಿಯ ಮಾತಿಗೆ ಮರುಳಾದ ಜನ ತಮ್ಮಲ್ಲಿದ್ದ ಹಣವನ್ನು ಹೂಡಿಕೆ ಮಾಡುತ್ತಿದ್ದರು. 1 ಲಕ್ಷ ರೂ. 3 ಸಾವಿರ ರೂ. ನಂತೆ ಕಂಪನಿ ಬಡ್ಡಿ ನೀಡುತಿತ್ತು. ಕಂಪನಿ ಸರಿಯಾದ ಸಮಯದಲ್ಲಿ ಲಾಭಾಂಶ ನೀಡುತ್ತಿದ್ದ ಕಾರಣ ವಿಶ್ವಾಸಾರ್ಹತೆ ಗಳಿಸಿಕೊಂಡಿತ್ತು. ಲಾಭಾಂಶ ಪಡೆದ ಗ್ರಾಹಕರು ಸ್ನೇಹಿತರಿಗೆ ಹೇಳುತ್ತಿದ್ದ ಕಾರಣ ಅವರು ಹೂಡಿಕೆ ಮಾಡತೊಡಗಿದರು. ಭಾರೀ ಪ್ರಚಾರ ಸಿಕ್ಕಿದ ಪರಿಣಾಮ ಹೂಡಿಕೆ ಹೆಚ್ಚಾಯಿತು. ಆದರೆ ಕಳೆದ 2-3 ತಿಂಗಳಿನಿಂದ ಸಂಸ್ಥೆ ಬಡ್ಡಿ ನೀಡಿರಲಿಲ್ಲ. ಈ ನಡುವೆ ಜೂನ್ 10 ರಂದು ಸಂಪೂರ್ಣ ಹಣ ನೀಡುವುದಾಗಿ ಭರವಸೆ ನೀಡಿತ್ತು. ಆದರೆ ಜೂ.9 ರಂದು ಮಾಲೀಕ ಮನ್ಸೂರ್ ಅಲಿ ಖಾನ್ ಆತ್ಮಹತ್ಯೆಯ ವಿಡಿಯೋ ವೈರಲ್ ಆದ ಬಳಿಕ ಮಳಿಗೆಯ ಮುಂದೆ ಜನರು ಜಮಾಯಿಸಿ ಹೂಡಿದ್ದ ಹಣವನ್ನು ಕೇಳಲು ಆರಂಭಿಸಿದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೌದು, ನೀವು ಕೇಳಿದ್ದು ನಿಜ…ಈ ಜಗತ್ತಿನಲ್ಲಿ ಏನೆಲ್ಲಾ ವಿಸ್ಮಯ ಅಚ್ಚರಿಗಳು ನಡೆಯುತ್ತವೆ ಎಂಬುದಕ್ಕೆ ಇದು ಒಂದು ಉದಾಹರಣೆಯಾಗಿದೆ.ನಾವೆಲ್ಲಾ ಕೋಳಿ,ಪಕ್ಷಿಗಳು,ಹಾವುಗಳು ಹಾಗೂ ಕೆಲವೊಂದು ಜೀವಿಗಳು ಮೊಟ್ಟೆ ಇಡುವುದನ್ನು ಕೇಳಿದ್ದೇವೆ.ಆದರೆ ಮನುಷ್ಯ ಮೊಟ್ಟೆ ಇದುತ್ತಾನೆಂದ್ರೆ ಇದು ಎಂತಹವರಿಗೂ ನಂಬೋದಕ್ಕೆ ಅಸಾಧ್ಯ ಆಲ್ವಾ…
ಪರೀಕ್ಷೆ ಎಲ್ಲ ಮುಗಿಯಿತು. ಇನ್ನಿರುವುದು ಮುಂದಿನ ಆಯ್ಕೆ ಬಗ್ಗೆ. ಹಲವಾರು ಕೋರ್ಸ್ಗಳಿವೆ. ಆದರೆ ಸರಿಯಾದ ಆಯ್ಕೆ ಹೇಗೆ ಮಾಡಲಿ ಎಂಬ ಗೊಂದಲ ಮನದಲ್ಲಿ ಎದ್ದಾಗಿದೆ. ಹೆತ್ತವರ ಸಲಹೆ ಒಂದಾದರೆ, ಮಕ್ಕಳದ್ದು ಇನ್ನೊಂದು. ಈ ನಡುವೆ ಹುಟ್ಟಿದ ಹಲವಾರು ಅನುಮಾನಗಳು. ಯಾವುದು, ಎಲ್ಲಿ, ಏನು, ಹೇಗೆ…? ಇದಕ್ಕಾಗಿಯೇ ಒಂದಷ್ಟು ಮಾಹಿತಿ ಇಲ್ಲಿವೆ.
ಮಕ್ಕಳು ಹುಟ್ಟುವಾಗ ಅವರ ತಲೆಯಲ್ಲಿ ತುಂಬಾನೆ ಕೂದಲು ಇರುತ್ತದೆ, ಇಲ್ಲವಾದರೆ ಸ್ವಲ್ಪವೇ ಸ್ವಲ್ಪ ಕೂದಲು ಇರುತ್ತದೆ. ಆದರೆ ಯಾವುದೆ ಮಕ್ಕಳು ಹುಟ್ಟುವಾಗ ಬಕ್ಕ ತಲೆಯೊಂದಿಗೆ ಹುಟ್ಟಿರುವುದನ್ನು ನೋಡಿರೋದು ಕಡಿಮೆ.
ಮೇಷ ಹಳೆಯ ಷೇರುಗಳ ಮಾರಾಟ ಅಥವಾ ಖರೀದಿಗೂ ಮುನ್ನ ಎಲ್ಲಾ ರೀತಿಯ ಸಾಧಕ ಬಾಧಕಗಳನ್ನು ಲೆಕ್ಕಾಚಾರ ಹಾಕಿ. ಪೂರ್ವ ಯೋಜನೆಯಿಲ್ಲದೆ ಹಣ ಹೂಡಿದಲ್ಲಿ ಅಧಿಕ ಹಾನಿಯನ್ನು ಅನುಭವಿಸುವಿರಿ. ವೃಷಭ ಕೆಲಸದ ಸ್ಥಳದಲ್ಲಿ ಉತ್ಸಾಹದಾಯಕ ಹಾಗೂ ಚೈತನ್ಯದಾಯಕ ಪ್ರಚೋದಕ ಬೆಳವಣಿಗೆಗಳು ಉಂಟಾಗುವವು. ನಿಮಗೆ ಸಹಾಯ ಸಹಕಾರ ನೀಡಿದ ಗುರುಹಿರಿಯರನ್ನುಗೌರವಿಸಿ ಮುಂದೆ ಉತ್ತಮ ದಿನಗಳಿವೆ. ಮಿಥುನ ಆರೋಗ್ಯದ ವಿಷಯದಲ್ಲಿ ಉದಾಸೀನ ಬೇಡ. ಸಣ್ಣಪುಟ್ಟ ಜ್ವರಾದಿಗಳು ಬಂದರೂ ನಿಮ್ಮ ಮನೆ ವೈದ್ಯರ ಸಲಹೆ ಪಡೆಯಿರಿ. ದೈವಬಲ ಇರುವುದರಿಂದ ಅತಿ ಚಿಂತೆ ಬೇಡ….
ಸೀತಾಫಲ… ಈ ಕಾಲದಲ್ಲಿ ನಮಗೆ ಲಭಿಸುವ ಹಣ್ಣುಗಳಲ್ಲಿ ಇದೂ ಒಂದು. ಇದರಲ್ಲಿ ವಿಟಮಿನ್ ಎ, ಮೆಗ್ನಿಷಿಯಮ್, ಪೊಟ್ಯಾಷಿಯಂ, ಫೈಬರ್, ವಿಟಮಿನ್ ಬಿ6, ಕ್ಯಾಲ್ಸಿಯಂ,ವಿಟಮಿನ್ ಸಿ, ಐರನ್ನಂತಹ ಅತ್ಯಂತ ಮುಖ್ಯವಾದ ಪೋಷಕಗಳು ಅದೆಷ್ಟೋ ಇವೆ.
ಬಿಲ್ವಪತ್ರೆ ಎಲೆಯನ್ನು ನಾವು ಶಿವಪೂಜೆಗೆ ಉಪಯೋಗಿಸುತ್ತೇವೆ. ಆದರೆ ಅದರ ಹಣ್ಣಿನ ಬಗ್ಗೆ ಹೆಚ್ಚಿನ ಜನರಿಗೆ ಗೊತ್ತಿಲ್ಲ. ಈ ಬಿಲ್ವ ಪತ್ರೆ ಹಣ್ಣು ದೇಹಕ್ಕೆ ತಂಪು ಮತ್ತು ಹೊಟ್ಟೆಗೆ ಸಂಬಂಧಪಟ್ಟ ಸಮಸ್ಯೆಗಳಿಗೆ ಉತ್ತಮವಾದ ಔಷಧಿ. ಬೇಸಿಗೆ ಕಾಲದಲ್ಲಿ ಈ ಹಣ್ಣಿನ ಸೇವನೆ ಉತ್ತಮ. ಅಲ್ಲದೆ ಹಲವು ಆರೋಗ್ಯ ಸಮಸ್ಯೆಗಳಿಗೆ ರಾಮಬಾಣ. ಗ್ಯಾಸ್ಟ್ರಿಕ್, ಅಲ್ಸರ್, ಮೂತ್ರಪಿಂಡದ ಸಮಸ್ಯೆ, ಮಲಬದ್ಧತೆ, ಅಜೀರ್ಣ ಸಮಸ್ಯೆಯಿದ್ದರೆ ಈ ಹಣ್ಣನ್ನು ತಿನ್ನಬಹುದು. ಇದೊಂದು ಎನರ್ಜಿ ಡ್ರಿಂಕ್ ಅಂತಲೇ ಹೇಳಲಾಗುತ್ತದೆ. ತೂಕ ಇಳಿಸಲು ಬಯಸುವವರು ಈ ಹಣ್ಣನ್ನು…