ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಂಗಳೂರು: ಐಎಂಎ ಜ್ಯುವೆಲ್ಲರಿಯಲ್ಲಿ ಹಣ ಹೂಡಿ ವಂಚನೆಗೆ ಒಳಗಾದವರು ಒಬ್ಬೊಬ್ಬರೇ ತಮ್ಮ ಸಂಕಟ ತೋಡಿಕೊಳ್ಳುತ್ತಿದ್ದಾರೆ. ಕಂಪನಿ ಮಾಲೀಕ ಮನ್ಸೂರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಬೆಂಗಳೂರಿನ ಶಿವಾಜಿನಗರದ ಐಎಂಎ ಜ್ಯುವೆಲ್ಲರಿ ಮಳಿಗೆ ಎದುರು ಮೋಸ ಹೋಗಿರುವ ಜನ ಎದುರು ಅಹೋರಾತ್ರಿ ಧರಣಿ ನಡೆಸಿದರು. ಬೆಳಗ್ಗೆ 11 ಗಂಟಗೆ ವಿಧಾನಸೌಧಕ್ಕೆ ಮುತ್ತಿಗೆ ಹಾಕಿ, ಪ್ರಕರಣದ ತೀವ್ರತೆಯನ್ನು ಸರ್ಕಾರಕ್ಕೆ ಮುಟ್ಟಿಸುತ್ತೇವೆ ಎಂದು ಪ್ರತಿಭಟನಾಕಾರರು ನಿರ್ಧರಿಸಿದ್ದಾರೆ. ಐಎಂಎ ಮಾಲೀಕನನ್ನು ಬಂಧಿಸಿ ಹಣ ಕಳೆದುಕೊಂಡಿರುವ ಅಮಾಯಕರಿಗೆ ಹಣ ಕೊಡಿಸುವಂತೆ ಗೃಹಸಚಿವರಲ್ಲಿ ಮನವಿ ಮಾಡಿಕೊಳ್ಳಲಿದ್ದಾರೆ.

ಇದನ್ನೂ ಓದಿ: ಐಎಂಎ ಮಾಲೀಕ ಆತ್ಮಹತ್ಯೆ ಮಾಡಿಕೊಂಡಿಲ್ವಂತೆ – ಲಾಭಾಂಶದ ಆಸೆಗೆ ಲಕ್ಷ, ಕೋಟಿ ಕಳೆದುಕೊಂಡ್ರು. ರಾತ್ರಿಯೆಲ್ಲಾ ಪೊಲೀಸರು ದೂರು ಸ್ವೀಕರಿಸಿದ್ದು, ಧೈರ್ಯ ಹೇಳುವ ಕೆಲಸವನ್ನೂ ಮಾಡಿದ್ದಾರೆ. ಜ್ಯುವೆಲ್ಲರಿ ಬಳಿ ಸಾವಿರಾರು ಜನ ಜಮಾಯಿಸಿದ್ದರಿಂದ ಪೊಲೀಸ್ ಭದ್ರತೆ ಒದಗಿಸಲಾಗಿದೆ. ಅಂದಹಾಗೆ, ಬೆಂಗಳೂರು ಮಾತ್ರ ಅಲ್ಲ, ರಾಜ್ಯಾದ್ಯಂತ ಮೋಸ ಹೋದವರು ಆತಂಕ್ಕೀಡಾಗಿದ್ದಾರೆ. ದಾವಣಗೆರೆಯಲ್ಲಿ ಜನ ಪ್ರತಿಭಟಿಸಿದ್ದಾರೆ. ದುಪ್ಪಟ್ಟು ಹಣದ ಆಸೆಯಿಂದ ಮಕ್ಕಳ ಶಾಲಾ ಶುಲ್ಕಗೆ ಸಹಾಯ ಆಗುತ್ತದೆ ಎಂದು 4 ಲಕ್ಷ ಹೂಡಿದ್ವಿ. 3 ಪರ್ಸೆಂಟ್ ಬಡ್ಡಿಯಲ್ಲಿ ಜೀವನ ಸಾಗಿಸ್ತಿದ್ವಿ. ಈಗ ನೋಡಿದ್ರೆ ಹಿಂಗಾಯ್ತು ಅಂತ ಸೊಹ್ರಾಬಾನು ಕಣ್ಣೀರು ಹಾಕ್ತಿದ್ದಾರೆ.

ಮೆಕ್ಯಾನಿಕ್ ಕೆಲಸ ಮಾಡುವ ಇಮ್ತಿಯಾಜ್ ಪಾಷಾ, ತಂಗಿಯ ಮದುವೆಗೆ ಅಂತಾ 1.5 ಲಕ್ಷ ಹೂಡಿಕೆ ಮಾಡಿದ್ದರು. ಇದೇ 10 ರಂದು ಹಣ ತೆಗೆಯಲು ಅರ್ಜಿ ಕೂಡ ಹಾಕಿದ್ದರು. ಅಷ್ಟರಲ್ಲಿ ಮನ್ಸೂರ್ ಖಾನ್ ಪರಾರಿ ಸುದ್ದಿ ನೋಡಿ ಕಂಗಾಲಾಗಿದ್ದಾರೆ. ಉಸ್ಮಾನ್ ಮತ್ತು ನಾಸಿರುದ್ದೀನ್ ಪ್ರತೀ ತಿಂಗಳು ಮನೆ ಬಾಡಿಗೆ ಕಟ್ಟಲು ಹಣ ಆಗಲಿ ಎಂದು ಹೂಡಿಕೆ ಮಾಡಿರುವುದಾಗಿ ತಿಳಿಸಿದ್ದಾರೆ.

ವಂಚನೆ ಹೇಗೆ? : ಐಎಂಎ ಜ್ಯುವೆಲ್ಸ್ ನಿಂದ ಚಿನ್ನ, ವಜ್ರ ಖರೀದಿಸುವ ಗ್ರಾಹಕರಿಗೆ ಮೇಕಿಂಗ್ ಹಾಗೂ ವೇಸ್ಟೇಜ್ ಶುಲ್ಕ ವಿಧಿಸುತ್ತಿರಲಿಲ್ಲ. ಈ ಪ್ರಕಟಣೆ ನೋಡಿ ಜನ ಚಿನ್ನ ಖರೀದಿ ಮಾಡುತ್ತಿದ್ದರು. ಖರೀದಿಗೆ ಬಂದ ಗ್ರಾಹಕರಿಗೆ ಕಂಪನಿಯಲ್ಲಿ ಹಣ ಹೂಡುವಂತೆ ಸಿಬ್ಬಂದಿ ಪುಸಲಾಯಿಸುತ್ತಿದ್ದರು. ಜ್ಯುವೆಲ್ಸ್ ಸಿಬ್ಬಂದಿಯ ಮಾತಿಗೆ ಮರುಳಾದ ಜನ ತಮ್ಮಲ್ಲಿದ್ದ ಹಣವನ್ನು ಹೂಡಿಕೆ ಮಾಡುತ್ತಿದ್ದರು. 1 ಲಕ್ಷ ರೂ. 3 ಸಾವಿರ ರೂ. ನಂತೆ ಕಂಪನಿ ಬಡ್ಡಿ ನೀಡುತಿತ್ತು. ಕಂಪನಿ ಸರಿಯಾದ ಸಮಯದಲ್ಲಿ ಲಾಭಾಂಶ ನೀಡುತ್ತಿದ್ದ ಕಾರಣ ವಿಶ್ವಾಸಾರ್ಹತೆ ಗಳಿಸಿಕೊಂಡಿತ್ತು. ಲಾಭಾಂಶ ಪಡೆದ ಗ್ರಾಹಕರು ಸ್ನೇಹಿತರಿಗೆ ಹೇಳುತ್ತಿದ್ದ ಕಾರಣ ಅವರು ಹೂಡಿಕೆ ಮಾಡತೊಡಗಿದರು. ಭಾರೀ ಪ್ರಚಾರ ಸಿಕ್ಕಿದ ಪರಿಣಾಮ ಹೂಡಿಕೆ ಹೆಚ್ಚಾಯಿತು. ಆದರೆ ಕಳೆದ 2-3 ತಿಂಗಳಿನಿಂದ ಸಂಸ್ಥೆ ಬಡ್ಡಿ ನೀಡಿರಲಿಲ್ಲ. ಈ ನಡುವೆ ಜೂನ್ 10 ರಂದು ಸಂಪೂರ್ಣ ಹಣ ನೀಡುವುದಾಗಿ ಭರವಸೆ ನೀಡಿತ್ತು. ಆದರೆ ಜೂ.9 ರಂದು ಮಾಲೀಕ ಮನ್ಸೂರ್ ಅಲಿ ಖಾನ್ ಆತ್ಮಹತ್ಯೆಯ ವಿಡಿಯೋ ವೈರಲ್ ಆದ ಬಳಿಕ ಮಳಿಗೆಯ ಮುಂದೆ ಜನರು ಜಮಾಯಿಸಿ ಹೂಡಿದ್ದ ಹಣವನ್ನು ಕೇಳಲು ಆರಂಭಿಸಿದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೀಪಾವಳಿ ಬಂದ್ರೆ ಸಾಕು ಮಹಿಳೆಯರಿಗೆ ಮನೆ ಮುಂದೆ ದೀಪಗಳನ್ನು ಜೋಡಿಸುವುದೇ ಒಂದು ಸಂಭ್ರಮ. ಬಾಗಿಲು, ಕಿಟಕಿ, ರಂಗೋಲಿ, ಕಾಂಪೌಂಡ್, ಹೂ ಕುಂಡಗಳಲ್ಲಿ ಹೀಗೆ ಅನಕೂಲವಾಗುವ ಸ್ಥಳಗಳಲ್ಲಿ ದೀಪಗಳನ್ನಿಟ್ಟು ಮನೆಯನ್ನು ಅಲಂಕರಿಸುತ್ತಾರೆ. ಆದ್ರೆ ದೀಪಗಳನ್ನು ಇಂತಿಷ್ಟೇ ಸಂಖ್ಯೆಯಲ್ಲಿ ಹಚ್ಚಬೇಕೆಂದು ನಿಯಮಾವಳಿಗಳಿವೆ. ಪೂಜಾ ಗೃಹದಲ್ಲಿ ಗಜಲಕ್ಷ್ಮಿ ಸ್ವರೂಪದಲ್ಲಿರುವ ಕಾಮಾಕ್ಷಿ ದೀಪಗಳನ್ನು ಹಚ್ಚಬೇಕು. ದೀಪಗಳಿಗೆ ಮೂರು ಅಥವಾ ಐದುಬಗೆಯ ಎಣ್ಣೆಯನ್ನು ಹಾಕುತ್ತಿರಬೇಕು. ಮನೆಯ ಮುಂಭಾಗ ಅಲಂಕರಿಸಲು ವ್ಯವಸ್ಥಿತ ದೀಪಗಳನ್ನು ಜೋಡಿಸಬೇಕೆಂದು ಹಿರಿಯರು ಹೇಳುತ್ತಾರೆ. ಹಾಗೆಯೇ ವ್ಯವಸ್ಥಿತವಾಗಿ ದೀಪಾಲಂಕಾರ ಮಾಡಬೇಕು. ನಿಮ್ಮ ಶಕ್ತಿಗನುಸಾರವಾಗಿ 12,…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಇಂಡಿಯನ್ ಪ್ರೀಮಿಯರ್ ಲೀಗ್ ನ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ಆಟಗಾರ ಆಂಡ್ರೆ ರಸ್ಸೆಲ್ ಸಿಕ್ಸರ್ ಕಿಂಗ್ ಆಗ್ತಿದ್ದಾರೆ. ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ನಡೆದ ಪಂದ್ಯದಲ್ಲಿ ಆಂಡ್ರೆ ರಸ್ಸೆಲ್ 11 ಸಿಕ್ಸರ್ ಬಾರಿಸಿ ಈ ಬಾರಿ ಐಪಿಎಲ್ ನಲ್ಲಿ ನಾನೇ ಸಿಕ್ಸರ್ ಕಿಂಗ್ ಎನ್ನುತ್ತಿದ್ದಾರೆ. ಆಂಡ್ರೆ ರಸ್ಸೆಲ್ ಸಿಕ್ಸರ್ ಕಿಂಗ್ ಆದ್ರೆ ಅವ್ರ ಪತ್ನಿ ಬಿಕಿನಿ ಕ್ವೀನ್ ಎನ್ನುತ್ತಿದ್ದಾರೆ ಜನರು. ಆಂಡ್ರೆ ರಸ್ಸೆಲ್ ಜಮೈಕಾದ ನಿವಾಸಿ. ಪತ್ನಿ ಲಾರಾ ಡೊಮಿನಿಕನ್…
ಒಂದು ಕಾಲದಲ್ಲಿ ಮಾಧ್ಯಮ ಎಂದರೆ ಜ್ಞಾನದ ಕಣಜ ಎಂದೇ ಕರೆಯಲಾಗುತ್ತಿತ್ತು. ವಿಶ್ವದ ಎಲ್ಲಾ ಆಗುಹೋಗುಗಳ ಜೊತೆ ಅವುಗಳ ಬಗೆಗಿನ ವಿಮರ್ಶಾತ್ಮಕ ದೃಷ್ಟಿಕೋನವನ್ನು ನೀಡುತ್ತಿದ್ದರು.
ಬಿಗ್ ಬಾಸ್ ಸೀಸನ್ 7 ನೂರು ದಿನಗಳನ್ನ ಪೂರೈಸಿ 15 ನೇ ವರದ ಕೊನೆಗೆ ಬಂದು ತಲುಪಿದೆ, ಇನ್ನು ಕೇವಲ ಕೆಲವೇ ದಿನಗಳು ಮಾತ್ರ ಬಾಕಿ ಉಳಿದಿದ್ದು ಯಾರೆಲ್ಲ ಫಿನಾಲೆಯಲ್ಲಿ ಕಾಣಿಸಿಕೊಳ್ಳಲಿದ್ದಾರೆ ಅನ್ನುವ ಕುತೂಹಲ ಎಲ್ಲರಲ್ಲೂ ಮೂಡಿದೆ. ಇನ್ನು ಬಿಗ್ ಬಾಸ್ ನಲ್ಲಿ ಯಾರು ಊಹಿಸಿದ ಎಲಿಮಿನೇಷನ್ ಗಳು ಕೂಡ ನಡೆಯುತ್ತಿದ್ದು ಕೆಲವು ಅಭಿಮಾನಿಗಳಿಗೆ ತುಂಬಾ ಬೇಸರ ಆಗಿದೆ ಎಂದು ಹೇಳಿದರೆ ತಪ್ಪಾಗಲ್ಲ. ಇನ್ನು ಈ ವಾರ ಬಿಗ್ ಬಾಸ್ ನಲ್ಲಿ ಟಿಕೆಟ್ ಟು ಫೈನಲ್ ಟಾಸ್ಕ್…
ಭಾರತೀಯ ಜೀವ ವಿಮಾ ನಿಗಮ ಪಾಲಿಸಿ ಹೂಡಿಕೆದಾರರ ಹಣ ಭದ್ರವಾಗಿದೆ.ಸುಳ್ಳು ವದಂತಿಗಳನ್ನು ನಂಬಬೇಡಿ ಎಂದು ನಿಗಮದಿಂದ ಸ್ಪಷ್ಟನೆ ನೀಡಲಾಗಿದೆ. ಭಾರತೀಯ ವಿಜಯ ವಿಮಾ ನಿಗಮ(ಎಲ್ಐಸಿ) ನಷ್ಟದಲ್ಲಿದೆ ನಡೆಯುತ್ತಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿಗಳು ಹರಿದಾಡುತ್ತಿರುವುದರ ಕುರಿತಾಗಿ ಸ್ಪಷ್ಟನೆ ನೀಡಿರುವ ಎಲ್ಐಸಿ ಇದು ಸಂಪೂರ್ಣ ಸುಳ್ಳು ಎಂದು ಹೇಳಿಕೆ ನೀಡಿದೆ. ಎಲ್ಐಸಿ ಭಾರಿ ನಷ್ಟದಲ್ಲಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಸುದ್ದಿ ಸಂಪೂರ್ಣ ಸುಳ್ಳಾಗಿದೆ.ಪಾಲಿಸಿದಾರರು ಯಾವುದೇ ಆತಂಕ ಪಡುವ ಅಗತ್ಯವಿಲ್ಲ. ಸಂಸ್ಥೆಯ ಆರ್ಥಿಕ ಶಕ್ತಿ ಉತ್ತಮವಾಗಿದೆ ಎಂದುಹೇಳಲಾಗಿದೆ,ಸುಳ್ಳು…
ಮೂವರು ಅಪರಿಚಿತ ವ್ಯಕ್ತಿಗಳು ಸ್ಥಳೀಯ ಕ್ರಿಕೆಟಿಗನಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ವಾಣಿಜ್ಯ ನಗರಿ ಮುಂಬೈನ ಭಂಡುಪ್ ಪ್ರದೇಶದಲ್ಲಿ ನಡೆದಿದೆ. ಗುರುವಾರ ತಡರಾತ್ರಿ ಸುಮಾರು 12 ಗಂಟೆಯಲ್ಲಿ ಈ ಘಟನೆ ನಡೆದಿದ್ದು, ಮೃತ ಕ್ರಿಕೆಟಿಗನನ್ನು ರಾಕೇಶ್ ಪನ್ವಾರ್ ಎಂದು ಗುರುತಿಸಲಾಗಿದೆ. ಮೂವರು ದುಷ್ಕರ್ಮಿಗಳು ಬೈಕಿನಲ್ಲಿ ಬಂದು ರಾಕೇಶ್ಗೆ ಚಾಕು ಇರಿದು ಕೊಲೆ ಮಾಡಿ ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಮಾಹಿತಿ ತಿಳಿದ ತಕ್ಷಣ ಪೊಲೀಸರು ರಾಕೇಶ್ನನ್ನು ಸಮೀಪ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಅಷ್ಟರಲ್ಲಿ…