ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸ್ಲೆಡ್ಜಿಂಗ್ ಸೈತಾನರ ಸೊಕ್ಕು ಮುರಿದ ಪಂದ್ಯ
ಪಡಿಕ್ಕಲ್ ಯಾವ್ ಬಸ್ಸನ್ನ ಹತ್ಕೊಂಡು ಬಂದ..? ಅರೆ ಇವ್ನು ರೆಡ್ಡಿಗಾರು ಎಲ್ಲಿಂದ ಬಂದ..? ರಾಣಾ ಇಲ್ಲೇನ್ ಮಾಡ್ತಾ ಇದಾನೆ..? ಧ್ರುವ ಜುರೇಲ್ ಕೂಡ ಆಡ್ತಾ ಇದಾನಾ..? ಅವರು ನೋಡಿದ್ರೆ ಅವರ ಬೆಸ್ಟ್ ಟೀಮ್ ತಂದಿದೆ. ಬೌಲಿಂಗ್ ಲೈನ್ ಅಪ್ ನೋಡಿದರೆ ಎದೆಯೊಳಗೆ ಜಲ್ಲಿ ಮಶೀನ್ ಆನ್ ಆದ ಹಾಗಿದೆ.
ಖವಾಜಾ, ಸ್ಮಿತ್, ಹೆಡ್, ಲಬುಶೇನ್, ಮಾರ್ಶ್, ಕ್ಯಾಪ್ಟನ್ ಕಮ್ಮಿನ್ಸ್, ಸ್ಟಾರ್ಕ್, ಹೆಜಲ್ವುಡ್, ನಥಾನ್ ಲಿನ್ ಯಪ್ಪ.. ಅನುಭವಿಗಳೇ ಎಲ್ ನೋಡಿದರೂ ಕಾಣೋದು. ಮೊದಲ ಮ್ಯಾಚ್ ದೇವರಿಗೆ ಅಂತ ಭಾರತದ ಮೊದಲ ಇನ್ನಿಂಗ್ಸ್ ನೋಡಿ ನನ್ನನ್ನೂ ಸೇರಿ ಅನೇಕರಿಗೆ ಅನಿಸಿರಬಹುದು. ಇದಕ್ಕೆ ಇನ್ನೊಂದು ಕಾರಣ ಟೀಮಲ್ಲಿ ಕಂಡ ಮುಖಗಳು.
ಆದ್ರೆ ಈ ಆಟದಲ್ಲಿ ಏನನ್ನೂ ಬೇಗ ನಿರ್ಧರಿಸಬಾರದು ಅನ್ನೋದನ್ನ ಈ ಹಿಂದೆ ಅನೇಕ ಪಂದ್ಯಗಳು ಸಾಬೀತು ಮಾಡಿವೆ. ಮೊದಲ ಇನ್ನಿಂಗ್ಸಲ್ಲಿ ನಮ್ದು 150..ಆಸ್ಟ್ರೇಲಿಯಾ 104..ಕೊನೆ ವಿಕೆಟಿಗೆ ಬಂದ 25 ರನ್ನುಗಳ ಪಾರ್ಟ್ನರ್ ಶಿಪ್ ಅತಿ ದೊಡ್ಡದು. ಬುಮ್ರಾ , ರಾಣಾ, ಸಿರಾಜ್ ಎಸೆದಿದ್ದು ಬೆಂಕಿ ಉಂಡೆಗಳನ್ನ. ಎರಡೂ ತಂಡದ ಮೊದಲ ಇನ್ನಿಂಗ್ಸ್ ಸೇರಿಸಿದ್ರೆ ಆಗೋದು 254 ರನ್ಸ್.. ಆದ್ರೆ ಈಗ ಭಾರತ ಗೆದ್ದ ಲೀಡ್ 295 ರನ್ಸ್.. 🔥
ಎರಡನೇ ಇನ್ನಿಂಗ್ಸ್ ತುಂಬಾ ವರ್ಷಗಳ ಕಾಲ ನೆನಪಲ್ಲಿ ಉಳಿಯೋ ಆಟ.. ಇಡೀ ದಿನ ಜೈಸ್ವಾಲ್ ಹಾಗೂ ರಾಹುಲ್ ಆ ದೈತ್ಯ ಬೌಲಿಂಗ್ ಲೈನ್ ಅಪ್ನ ಗೋಳಾಡಿಸಿದ್ರಲ್ಲ.. ಜೈಸ್ವಾಲ್ ಅಂತೂ ಬೌಲ್ ಮಾಡಿದ್ರೆ ಬ್ಯಾಟ್ ಮಾಡೋದು ಬಾಕಿ ಟೈಮಲ್ಲಿ ರೋಸ್ಟ್ ಮಾಡೋದು. ಅದು ಸ್ಟಾರ್ಕ್ಗೆ.. ಆತ್ಮವಿಶ್ವಾಸ ತುಂಬಿ ತುಳುಕ್ತಾ ಇದೆ. ಪಡಿಕ್ಕಲ್ ತನಗಿರೋ ಅನುಭಕ್ಕೆ ತಕ್ಕಂತೆ ಕೊಡುಗೆ ಕೊಟ್ಟ ಅನಿಸ್ತು..
ಬಟ್ ಗರ್ಜಿಸುವಂತೆ ಮಾಡಿದ್ದು ಕೊಹ್ಲಿ ಶತಕ. ಕೊಹ್ಲಿ ಮತ್ತು ಆಸ್ಟ್ರೇಲಿಯಾ ಚಕಾಮಕಿ ತುಂಬಾ ಹಳೆಯದ್ದು.. ಎಂತದ್ದೇ ಅಸ್ತ್ರ ಹೂಡಿದ್ರೂ ಕೊಹ್ಲಿ ವಿಕೆಟ್ ಪಡೆಯೋಕೆ ಆಗಲೆ ಇಲ್ಲ. ಇನ್ನೊಂದು ಕಡೆಯಲ್ಲಿ ನಿತೀಶ್ ರೆಡ್ಡಿಯ ಆಟ.. ಮಕ ಮೂತಿ ನೋಡದೇ ಚಚ್ಚೋದು ಅಂತಾರಲ್ಲ.. ಅದನ್ನೇ ಮಾಡಿದ್ದು.. ಡಿಕ್ಲೇರ್ ಹೊತ್ತಿಗೆ ಆಸ್ಟ್ರೇಲಿಯಾ ಮುಂದೆ ದೊಡ್ಡ ಬೆಟ್ಟ.
ಬೆಟ್ಟ ಹತ್ತೋಕೆ ಬಂದ ಮೊದಲ ನಾಲ್ವರು ಡಬಲ್ ಡಿಜಿಟ್ ಚೆಂದವನ್ನೂ ಕಾಣೋಕೆ ಆಗಲಿಲ್ಲ. ಬುಮ್ರಾ ಸಿರಾಜ್ ಅಬ್ಬರವೇ ಹಾಗಿತ್ತು. ಇಲ್ಲಿ ತನಕ ಆಸ್ಟ್ರೇಲಿಯಾ ಪರ್ತ್ ಸ್ಟೇಡಿಯಂನಲ್ಲಿ ಸೋಲೇ ಕಂಡಿರ್ಲಿಲ್ಲವಂತೆ. ಅದನ್ನೂ ಕೂಡ ಮನೆಗೆ ಬಂದ ನೆಂಟರು ಉಡುಗೊರೆ ಕೊಟ್ಟಿದಾರೆ.
ಈ ಸಮಯದಲ್ಲಿ ಗಂಭೀರ್ ಕೂಡ ನೆನಪಾಗಲೇ ಬೇಕು. ಸೋತಾಗ ಮಾತ್ರ ನೆನಪಿಸಿಕೊಂಡ್ರೆ ಸರಿ ಅನಿಸೋದೇ ಇಲ್ಲ..
ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ ❤️🇮🇳
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಓದಿದ್ದು ಎಸ್ಸೆಸ್ಸೆಲ್ಸಿವರೆಗೆ. ಆದರೂ ಒಂದೇ ವರ್ಷದಲ್ಲಿ 7 ನೌಕರಿಗೆ ಅರ್ಹತೆ ಲಭಿಸಿತು. ಆಯ್ಕೆ ಮಾಡಿಕೊಂಡಿದ್ದು ಮಾತ್ರ ಪಿಎಸ್ಐ ಹುದ್ದೆ! ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕು ಮುದೂರ ಗ್ರಾಮದ ಕಾನ ಗೌಡ ಪಾಟೀಲ ಎಂಬುವರ ಪುತ್ರ ಪ್ರಶಾಂತ ಪಾಟೀಲ (38) ಎಂಬುವರು 15 ದಿನಗಳ ಹಿಂದಷ್ಟೇ ಪ್ರೊಬೇಷನರಿ ಅವಧಿ ಪೂರೈಸಿ ಬೆಂಗಳೂರಿನ ನಂದಿನಿ ಲೇಔಟ್ನಲ್ಲಿ ಎಸ್ಐ ಆಗಿ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದಾರೆ.
ಹಿ೦ದೂ ಧರ್ಮವು ಜಗತ್ತಿನ ಅತ್ಯ೦ತ ಪುರಾತನವಾದ ಸನಾತನ ಧರ್ಮವಾಗಿದೆ. ವೈವಿಧ್ಯಮಯವಾದ ರೀತಿನೀತಿ, ಆಚರಣೆಗಳು, ಸ೦ಪ್ರದಾಯಗಳು, ಕಲ್ಪನೆಗಳು, ಇವೆಲ್ಲವುಗಳ ಸ೦ಯೋಜನೆಯಾಗಿರುವ ಹಿ೦ದೂ ಪದ್ಧತಿಯು ಎ೦ದೆ೦ದಿಗೂ ಅತ್ಯ೦ತ ರೋಮಾ೦ಚಕವಾಗಿರುವ ನ೦ಬಿಕೆಯಾಗಿದೆ.
ಮಂಗಳೂರು ಹಾಗೂ ಮುಂಬೈಗೆ ಭಾರೀ ಅಪಾಯವೊಂದು ಕಾದಿದೆ. ಸಮುದ್ರ ತೀರಕ್ಕೆ ಎರಡೂ ನಗರಗಳು ಹತ್ತಿರದಲ್ಲಿರುವುದರಿಂದ ಅಪಾಯದ ಅಂಚಿನಲ್ಲಿದೆ. ಅಂಟಾರ್ಕಿಟಿಕಾದಲ್ಲಿ ಹಿಮ ಕರುಗುತ್ತಿರುವುದರಿಂದ ಸಮುದ್ರ ಮಟ್ಟ ದಿನೇ ದಿನೇ ಹೆಚ್ಚಾಗುತ್ತಿದ್ದು ಸಮುದ್ರದ ಅಕ್ಕಪಕ್ಕ ಇರುವ ನಗರಗಳಿಗೆ ಅಪಾಯ ಕಾದಿದೆ ಎಂದು ನಾಸಾ ಹೊರ ತಂದಿರುವ ಡೇಟಾ ಪ್ರಕಾರ ನ್ಯೂಯಾರ್ಕ್ ಪತ್ರಿಕೆ ವರದಿ ಮಾಡಿದೆ.
ಯಲಹಂಕ ಸಾಂಪ್ರದಾಯಿಕ ಸಿರಿಯನ್ನು ಹೊಂದಿರುವ ಕ್ಷೇತ್ರ. ಈ ಹಿಂದೆ 2008ರ ನಂತರ ಇಂದು ಪ್ರತಿಷ್ಠಿತ ಕ್ಷೇತ್ರವಾಗಿ ಮಾರ್ಪಟ್ಟಿದೆ.
ನಾವು ಸಾಮಾನ್ಯವಾಗಿ ಬಾಳೆ ಹಣ್ಣನ್ನು ತಿಂದು ಸಿಪ್ಪೆಯನ್ನು ಬಿಸಾಕುತ್ತೆವೆ.ಆದರೆ ಬಾಳೆಹಣ್ಣಿನ ಸಿಪ್ಪೆಯಿಂದ ಆಗೋ ಉಪಯೋಗ ತಿಳಿದುಕೊಂಡರೆ ನೀವು ಸಿಪ್ಪೆಯನ್ನು ಎಸೆಯುವುದಿರಲಿ ಅದನ್ನೇ ಕಾಪಾಡಿಕೊಳ್ಳುತ್ತಿರ..ಹೇಗೆ ಉಪಯೋಗ ಅನ್ನೋ ಕುತೂಹಲವೇ ಇದನ್ನು ಓದಿ
ಭಾರತವು ವಿಭಿನ್ನ ಧರ್ಮಗಳ, ನಂಬಿಕೆಗಳು, ಆಚರಣೆಗಳ ನೆಲೆಬೀಡಾಗಿದ್ದು, ಇಲ್ಲಿ ಎಷ್ಟೋ ಸಾಧು,ಸಂತರು,ಮಹಾನ್ ದಾರ್ಶನಿಕರು ಜನಿಸಿದ್ದಾರೆ. ತಮ್ಮ ಸಾಮಾನ್ಯ ಜೀವನ ಕ್ರಮದಿಂದ ಧರ್ಮವನ್ನು ಭೋದಿಸಿ,ಪವಾಡಗಳನ್ನು ಮಾಡಿ ಜನಮಾನಸದಲ್ಲಿ ಸ್ಥಾಯಿಯಾಗಿ ವಿರಾಜಮಾನರಾಗಿದ್ದಾರೆ.