News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
inspirational

ಸ್ಲೆಡ್ಜಿಂಗ್ ಸೈತಾನರ ಸೊಕ್ಕು ಮುರಿದ ಪಂದ್ಯ

76

ಸ್ಲೆಡ್ಜಿಂಗ್ ಸೈತಾನರ ಸೊಕ್ಕು ಮುರಿದ ಪಂದ್ಯ

ಪಡಿಕ್ಕಲ್ ಯಾವ್ ಬಸ್ಸನ್ನ ಹತ್ಕೊಂಡು ಬಂದ..? ಅರೆ ಇವ್ನು ರೆಡ್ಡಿಗಾರು ಎಲ್ಲಿಂದ ಬಂದ..? ರಾಣಾ ಇಲ್ಲೇನ್ ಮಾಡ್ತಾ ಇದಾನೆ..? ಧ್ರುವ ಜುರೇಲ್ ಕೂಡ ಆಡ್ತಾ ಇದಾನಾ..? ಅವರು ನೋಡಿದ್ರೆ ಅವರ ಬೆಸ್ಟ್ ಟೀಮ್ ತಂದಿದೆ. ಬೌಲಿಂಗ್ ಲೈನ್ ಅಪ್ ನೋಡಿದರೆ ಎದೆಯೊಳಗೆ ಜಲ್ಲಿ ಮಶೀನ್ ಆನ್ ಆದ ಹಾಗಿದೆ.

ಖವಾಜಾ, ಸ್ಮಿತ್, ಹೆಡ್, ಲಬುಶೇನ್, ಮಾರ್ಶ್, ಕ್ಯಾಪ್ಟನ್ ಕಮ್ಮಿನ್ಸ್, ಸ್ಟಾರ್ಕ್, ಹೆಜಲ್ವುಡ್, ನಥಾನ್ ಲಿನ್ ಯಪ್ಪ.. ಅನುಭವಿಗಳೇ ಎಲ್ ನೋಡಿದರೂ ಕಾಣೋದು. ಮೊದಲ ಮ್ಯಾಚ್ ದೇವರಿಗೆ ಅಂತ ಭಾರತದ ಮೊದಲ ಇನ್ನಿಂಗ್ಸ್ ನೋಡಿ ನನ್ನನ್ನೂ ಸೇರಿ ಅನೇಕರಿಗೆ ಅನಿಸಿರಬಹುದು. ಇದಕ್ಕೆ ಇನ್ನೊಂದು ಕಾರಣ ಟೀಮಲ್ಲಿ ಕಂಡ ಮುಖಗಳು.

ಆದ್ರೆ ಈ ಆಟದಲ್ಲಿ ಏನನ್ನೂ ಬೇಗ ನಿರ್ಧರಿಸಬಾರದು ಅನ್ನೋದನ್ನ ಈ ಹಿಂದೆ ಅನೇಕ ಪಂದ್ಯಗಳು ಸಾಬೀತು ಮಾಡಿವೆ. ಮೊದಲ ಇನ್ನಿಂಗ್ಸಲ್ಲಿ ನಮ್ದು 150..ಆಸ್ಟ್ರೇಲಿಯಾ 104..ಕೊನೆ ವಿಕೆಟಿಗೆ ಬಂದ 25 ರನ್ನುಗಳ ಪಾರ್ಟ್​ನರ್ ಶಿಪ್ ಅತಿ ದೊಡ್ಡದು. ಬುಮ್ರಾ , ರಾಣಾ, ಸಿರಾಜ್ ಎಸೆದಿದ್ದು ಬೆಂಕಿ ಉಂಡೆಗಳನ್ನ. ಎರಡೂ ತಂಡದ ಮೊದಲ ಇನ್ನಿಂಗ್ಸ್ ಸೇರಿಸಿದ್ರೆ ಆಗೋದು 254 ರನ್ಸ್.. ಆದ್ರೆ ಈಗ ಭಾರತ ಗೆದ್ದ ಲೀಡ್ 295 ರನ್ಸ್.. 🔥

ಎರಡನೇ ಇನ್ನಿಂಗ್ಸ್ ತುಂಬಾ ವರ್ಷಗಳ ಕಾಲ ನೆನಪಲ್ಲಿ ಉಳಿಯೋ ಆಟ.. ಇಡೀ ದಿನ ಜೈಸ್ವಾಲ್ ಹಾಗೂ ರಾಹುಲ್ ಆ ದೈತ್ಯ ಬೌಲಿಂಗ್ ಲೈನ್​ ಅಪ್​ನ ಗೋಳಾಡಿಸಿದ್ರಲ್ಲ.. ಜೈಸ್ವಾಲ್ ಅಂತೂ ಬೌಲ್ ಮಾಡಿದ್ರೆ ಬ್ಯಾಟ್ ಮಾಡೋದು ಬಾಕಿ ಟೈಮಲ್ಲಿ ರೋಸ್ಟ್ ಮಾಡೋದು. ಅದು ಸ್ಟಾರ್ಕ್​ಗೆ.. ಆತ್ಮವಿಶ್ವಾಸ ತುಂಬಿ ತುಳುಕ್ತಾ ಇದೆ. ಪಡಿಕ್ಕಲ್ ತನಗಿರೋ ಅನುಭಕ್ಕೆ ತಕ್ಕಂತೆ ಕೊಡುಗೆ ಕೊಟ್ಟ ಅನಿಸ್ತು..

ಬಟ್ ಗರ್ಜಿಸುವಂತೆ ಮಾಡಿದ್ದು ಕೊಹ್ಲಿ ಶತಕ. ಕೊಹ್ಲಿ ಮತ್ತು ಆಸ್ಟ್ರೇಲಿಯಾ ಚಕಾಮಕಿ ತುಂಬಾ ಹಳೆಯದ್ದು.. ಎಂತದ್ದೇ ಅಸ್ತ್ರ ಹೂಡಿದ್ರೂ ಕೊಹ್ಲಿ ವಿಕೆಟ್ ಪಡೆಯೋಕೆ ಆಗಲೆ ಇಲ್ಲ. ಇನ್ನೊಂದು ಕಡೆಯಲ್ಲಿ ನಿತೀಶ್ ರೆಡ್ಡಿಯ ಆಟ.. ಮಕ ಮೂತಿ ನೋಡದೇ ಚಚ್ಚೋದು ಅಂತಾರಲ್ಲ.. ಅದನ್ನೇ ಮಾಡಿದ್ದು.. ಡಿಕ್ಲೇರ್ ಹೊತ್ತಿಗೆ ಆಸ್ಟ್ರೇಲಿಯಾ ಮುಂದೆ ದೊಡ್ಡ ಬೆಟ್ಟ.

ಬೆಟ್ಟ ಹತ್ತೋಕೆ ಬಂದ ಮೊದಲ ನಾಲ್ವರು ಡಬಲ್ ಡಿಜಿಟ್ ಚೆಂದವನ್ನೂ ಕಾಣೋಕೆ ಆಗಲಿಲ್ಲ. ಬುಮ್ರಾ ಸಿರಾಜ್ ಅಬ್ಬರವೇ ಹಾಗಿತ್ತು. ಇಲ್ಲಿ ತನಕ ಆಸ್ಟ್ರೇಲಿಯಾ ಪರ್ತ್ ಸ್ಟೇಡಿಯಂನಲ್ಲಿ ಸೋಲೇ ಕಂಡಿರ್ಲಿಲ್ಲವಂತೆ. ಅದನ್ನೂ ಕೂಡ ಮನೆಗೆ ಬಂದ ನೆಂಟರು ಉಡುಗೊರೆ ಕೊಟ್ಟಿದಾರೆ.

ಈ ಸಮಯದಲ್ಲಿ ಗಂಭೀರ್ ಕೂಡ ನೆನಪಾಗಲೇ ಬೇಕು. ಸೋತಾಗ ಮಾತ್ರ ನೆನಪಿಸಿಕೊಂಡ್ರೆ ಸರಿ ಅನಿಸೋದೇ ಇಲ್ಲ..

ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ ❤️🇮🇳

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ..ಪಂಡಿತ್ ವಿಶ್ವರೂಪ ಆಚಾರ್ಯರವರಿಂದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ..

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಅಮೂಲ್ಯವಾದುದನ್ನು ಸಂರಕ್ಷ ಣೆ ಮಾಡಿಕೊಳ್ಳಿ. ಏಕಾಗ್ರತೆ ಕೊರತೆಯಿಂದ ನಷ್ಟಕ್ಕೆ ದಾರಿ ಮಾಡಿಕೊಳ್ಳದಿರಿ. ಯಾವುದೇ ಗುರುವಿನ ಮಂತ್ರವನ್ನು ಮನಸ್ಸಿನಲ್ಲಿ ಏಕಾಗ್ರತೆಯಿಂದ ನೆನಪಿಸಿಕೊಳ್ಳಿ. ಒಳಿತಾಗುವುದು.ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ…

  • ಹಣ ಕಾಸು

    ಚಿಲ್ಲರೆ ಅಭಾವ ತಪ್ಪಿಸಲು ಅತೀ ಶೀಘ್ರದಲ್ಲಿ ಬರಲಿವೆ 200 ರುಪಾಯಿ ನೋಟುಗಳು!

    ಜನರ ನಗದು ಚಲಾವಣೆಯನ್ನು ಸುಲಭವಾಗಿಸಲು 200 ರೂಪಾಯಿಯ ನೋಟುಗಳು ಸದ್ಯದಲ್ಲೇ ಚಲಾವಣೆಗೆ ಬರಲಿವೆ. 200 ರೂ. ಮುಖಬೆಲೆಯ ಹೊಸ ನೋಟುಗಳ ಮುದ್ರಣಕ್ಕೆ ಭಾರತೀಯ ರಿಸರ್ವ್ ಬ್ಯಾಂಕ್ ಆದೇಶ ಹೊರಡಿಸಿದೆ ಎಂದು ತಿಳಿದುಬಂದಿದೆ.

  • ಸುದ್ದಿ

    ಡಿಕೆಶಿ ಪುತ್ರಿಗೂ ಸಿದ್ದಾರ್ಥ ಅವರ ಪುತ್ರನಿಗೂ ಮದುವೆ ನಿಶ್ಚಯ, ಮದುವೆ ಯಾವಾಗ!

    ಇಂದು ಸರಳವಾಗಿ ನಡೆದ ಕಾರ್ಯಕ್ರಮದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರ ಮಗಳಿಗೂ ಹಾಗೂ ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ಅವರ ಮೊಮ್ಮಗನಿಗೂ ಮದುವೆ ನಿಶ್ಚಯವಾಗಿದೆ. ಮೂರು ದಿನಗಳ ಹಿಂದೆ ಎಸ್ ಎಂಕೆ ನಿವಾಸಕ್ಕೆ ಡಿಕೆಶಿ ಕುಟಂಬದವರು ಹೋಗಿದ್ದರು ಈಗ ಈ ಕಾರ್ಯಕ್ರಮಕ್ಕೆ ಡಿಕೆ ಶಿವಕುಮಾರ್ ಮನೆಗೆ ಎಂಸ್ ಕೃಷ್ಣ ಅವರ ಕುಟುಂಬ ಆಗಮಿಸಿದ್ದು ಗುರು ಹಿರಿಯ ಸಮ್ಮುಖದಲ್ಲಿ ಸಿದ್ದಾರ್ಥ ಅವರ ಪುತ್ರ ಅಮರ್ಥ್ಯ ಸುಬ್ರಮಣ್ಯಗೂ ಮತ್ತು ಡಿಕೆಶಿ ಪುತ್ರಿ ಐಶ್ವರ್ಯಗೂ ಮದುವೆ ಫಿಕ್ಸ್ ಆಗಿದೆ. ಡಿಕೆ…

  • ಆರೋಗ್ಯ

    ಕಡಿಮೆ ವೆಚ್ಚದಲ್ಲಿ ಮೂತ್ರ ಪಿಂಡ ಶುದ್ದೀಕರಿಸುವ ಮನೆಮದ್ದು. ಈ ಮಾಹಿತಿ ನೋಡಿ.

    ಮನುಷ್ಯನ ದೇಹದಲ್ಲಿ ಪ್ರತಿ ಅಂಗಾಂಗಗಳು ಕೂಡ ಹೆಚ್ಚಿನ ಮಹತ್ವವನ್ನು ವಹಿಸುತ್ತವೆ. ಹಾಗಾಗಿ ಕೆಲವರಿಗೆ ಈ ಮೂತ್ರ ಪಿಂಡದ ಸಮಸ್ಯೆ ಇರುತ್ತದೆ ಇದಕ್ಕೆ ಮನೆಯಲ್ಲಿಯೇ ಮನೆಮದ್ದನ್ನು ತಯಾರಿಸಿ ಸದುಪಯೋಗ ಪಡೆದುಕೊಳ್ಳಬಹುದಾಗಿದೆ. ನಮ್ಮ ದೇಹಕ್ಕೆ ಮೂತ್ರಪಿಂಡಗಳು ತುಂಬಾನೇ ಮುಖ್ಯವಾದ ಭಾಗವಾಗಿದೆ ನಮ್ಮ ದೇಹದಲ್ಲಿ ಸಂಗ್ರಹಿತವಾಗುವ ಅನಪೇಕ್ಷಿತ ಲವಣಗಳನ್ನು ಹಾಗೂ ಸೂಕ್ಷ್ಮಜೀವಿಗಳನ್ನು ತನ್ನಲ್ಲಿ ತಡೆ ಹಿಡಿದು ನಮ್ಮ ಆರೋಗ್ಯರಕ್ಷಣೆ ಮಾಡುತ್ತಿರುತ್ತದೆ. ಅಂತಹ ಅತಿ ಮುಖ್ಯ ಅಂಗ ಮೂತ್ರಪಿಂಡವನ್ನು ಅತೀ ಕಡಿಮೆ ವೆಚ್ಚದಲ್ಲಿ ನಿಮ್ಮ ಮನೆಗಳಲ್ಲೇ ಶುದ್ಧೀಕರಿಸುವ ಸರಳ ವಿಧಾನ ಹೀಗಿದೆ. ಒಂದು…

  • ಸುದ್ದಿ

    ಮೀನಿಗೆ ಬಲೇ ಬಿಸಿದಾಗ ಈತನಿಗೆ ಸಿಕ್ಕಿದ್ದು ಎಷ್ಟು ಕೋಟಿ ರೂಪಾಯಿ ಗೊತ್ತಾ.

    ಸ್ನೇಹಿತರೆ ಅದೃಷ್ಟ ಅನ್ನುವುದು ಯಾವಾಗ ಬರುತ್ತದೆ ಮತ್ತು ಯಾವಾಗ ಹೋಗುತ್ತದೆ ಅನ್ನುವುದನ್ನ ಊಹೆ ಮಾಡಲು ಸಾಧ್ಯವಿಲ್ಲ ಮತ್ತು ಕೆಲವೊಮ್ಮೆ ಅದೃಷ್ಟ ನಮ್ಮ ಸುತ್ತಮುತ್ತ ಇದ್ದರೂ ಕೂಡ ನಮಗೆ ತಿಳಿಯುವುದಿಲ್ಲ. ನಾವು ಹೇಳುವ ಈತನ ವಿಷಯದಲ್ಲಿ ನಡೆದಿದ್ದು ಮಾತ್ರ ಒಂದು ದೊಡ್ಡ ವಿಚಿತ್ರ ಎಂದು ಹೇಳಿದರೆ ತಪ್ಪಾಗಲ್ಲ, ಅದೃಷ್ಟ ಈತನ ಕೈ ಹಿಡಿದರೂ ಕೂಡ ಅದರ ಬಗ್ಗೆ ಅವನಿಗೆ ತಿಳಿಯದೆ ಪ್ರತಿದಿನ ಎಂದಿನಂತೆ ಕಷ್ಟಪಡುತ್ತಿದ್ದ. ಹಾಗಾದರೆ ಅಲ್ಲಿ ನಡೆದಿದ್ದು ಏನು ಮತ್ತು ಆ ಅದೃಷ್ಟ ಆತನಿಗೆ ಯಾವ ರೂಪದಲ್ಲಿ…

  • ಸಿನಿಮಾ

    ಸೆಂಚುರಿ ಸ್ಟಾರ್ ಶಿವಣ್ಣನ ವಿರುದ್ದ, ಹುಚ್ಚ ವೆಂಕಟ್ ತಿರುಗಿ ಬಿದ್ದಿದೇಕೆ.!

    ‘ನನ್ ಎಕ್ಕಡ’ ಡೈಲಾಗ್’ನಿಂದ್ಲೇ ಫೇಮಸ್ ಆಗಿರುವ ಹುಚ್ಚ ವೆಂಕಟ್ ಹ್ಯಾಟ್ರಿಕ್ ಹಿರೋ, ಸೆಂಚುರಿ ಸ್ಟಾರ್ ಶಿವಣ್ಣ ವಿರುದ್ದ ವೀಡಿಯೋ ಮೂಲಕ ತಿರುಗಿ ಬಿದ್ದಿದ್ದಾರೆ.