inspirational

ಸ್ಲೆಡ್ಜಿಂಗ್ ಸೈತಾನರ ಸೊಕ್ಕು ಮುರಿದ ಪಂದ್ಯ

73

ಸ್ಲೆಡ್ಜಿಂಗ್ ಸೈತಾನರ ಸೊಕ್ಕು ಮುರಿದ ಪಂದ್ಯ

ಪಡಿಕ್ಕಲ್ ಯಾವ್ ಬಸ್ಸನ್ನ ಹತ್ಕೊಂಡು ಬಂದ..? ಅರೆ ಇವ್ನು ರೆಡ್ಡಿಗಾರು ಎಲ್ಲಿಂದ ಬಂದ..? ರಾಣಾ ಇಲ್ಲೇನ್ ಮಾಡ್ತಾ ಇದಾನೆ..? ಧ್ರುವ ಜುರೇಲ್ ಕೂಡ ಆಡ್ತಾ ಇದಾನಾ..? ಅವರು ನೋಡಿದ್ರೆ ಅವರ ಬೆಸ್ಟ್ ಟೀಮ್ ತಂದಿದೆ. ಬೌಲಿಂಗ್ ಲೈನ್ ಅಪ್ ನೋಡಿದರೆ ಎದೆಯೊಳಗೆ ಜಲ್ಲಿ ಮಶೀನ್ ಆನ್ ಆದ ಹಾಗಿದೆ.

ಖವಾಜಾ, ಸ್ಮಿತ್, ಹೆಡ್, ಲಬುಶೇನ್, ಮಾರ್ಶ್, ಕ್ಯಾಪ್ಟನ್ ಕಮ್ಮಿನ್ಸ್, ಸ್ಟಾರ್ಕ್, ಹೆಜಲ್ವುಡ್, ನಥಾನ್ ಲಿನ್ ಯಪ್ಪ.. ಅನುಭವಿಗಳೇ ಎಲ್ ನೋಡಿದರೂ ಕಾಣೋದು. ಮೊದಲ ಮ್ಯಾಚ್ ದೇವರಿಗೆ ಅಂತ ಭಾರತದ ಮೊದಲ ಇನ್ನಿಂಗ್ಸ್ ನೋಡಿ ನನ್ನನ್ನೂ ಸೇರಿ ಅನೇಕರಿಗೆ ಅನಿಸಿರಬಹುದು. ಇದಕ್ಕೆ ಇನ್ನೊಂದು ಕಾರಣ ಟೀಮಲ್ಲಿ ಕಂಡ ಮುಖಗಳು.

ಆದ್ರೆ ಈ ಆಟದಲ್ಲಿ ಏನನ್ನೂ ಬೇಗ ನಿರ್ಧರಿಸಬಾರದು ಅನ್ನೋದನ್ನ ಈ ಹಿಂದೆ ಅನೇಕ ಪಂದ್ಯಗಳು ಸಾಬೀತು ಮಾಡಿವೆ. ಮೊದಲ ಇನ್ನಿಂಗ್ಸಲ್ಲಿ ನಮ್ದು 150..ಆಸ್ಟ್ರೇಲಿಯಾ 104..ಕೊನೆ ವಿಕೆಟಿಗೆ ಬಂದ 25 ರನ್ನುಗಳ ಪಾರ್ಟ್​ನರ್ ಶಿಪ್ ಅತಿ ದೊಡ್ಡದು. ಬುಮ್ರಾ , ರಾಣಾ, ಸಿರಾಜ್ ಎಸೆದಿದ್ದು ಬೆಂಕಿ ಉಂಡೆಗಳನ್ನ. ಎರಡೂ ತಂಡದ ಮೊದಲ ಇನ್ನಿಂಗ್ಸ್ ಸೇರಿಸಿದ್ರೆ ಆಗೋದು 254 ರನ್ಸ್.. ಆದ್ರೆ ಈಗ ಭಾರತ ಗೆದ್ದ ಲೀಡ್ 295 ರನ್ಸ್.. 🔥

ಎರಡನೇ ಇನ್ನಿಂಗ್ಸ್ ತುಂಬಾ ವರ್ಷಗಳ ಕಾಲ ನೆನಪಲ್ಲಿ ಉಳಿಯೋ ಆಟ.. ಇಡೀ ದಿನ ಜೈಸ್ವಾಲ್ ಹಾಗೂ ರಾಹುಲ್ ಆ ದೈತ್ಯ ಬೌಲಿಂಗ್ ಲೈನ್​ ಅಪ್​ನ ಗೋಳಾಡಿಸಿದ್ರಲ್ಲ.. ಜೈಸ್ವಾಲ್ ಅಂತೂ ಬೌಲ್ ಮಾಡಿದ್ರೆ ಬ್ಯಾಟ್ ಮಾಡೋದು ಬಾಕಿ ಟೈಮಲ್ಲಿ ರೋಸ್ಟ್ ಮಾಡೋದು. ಅದು ಸ್ಟಾರ್ಕ್​ಗೆ.. ಆತ್ಮವಿಶ್ವಾಸ ತುಂಬಿ ತುಳುಕ್ತಾ ಇದೆ. ಪಡಿಕ್ಕಲ್ ತನಗಿರೋ ಅನುಭಕ್ಕೆ ತಕ್ಕಂತೆ ಕೊಡುಗೆ ಕೊಟ್ಟ ಅನಿಸ್ತು..

ಬಟ್ ಗರ್ಜಿಸುವಂತೆ ಮಾಡಿದ್ದು ಕೊಹ್ಲಿ ಶತಕ. ಕೊಹ್ಲಿ ಮತ್ತು ಆಸ್ಟ್ರೇಲಿಯಾ ಚಕಾಮಕಿ ತುಂಬಾ ಹಳೆಯದ್ದು.. ಎಂತದ್ದೇ ಅಸ್ತ್ರ ಹೂಡಿದ್ರೂ ಕೊಹ್ಲಿ ವಿಕೆಟ್ ಪಡೆಯೋಕೆ ಆಗಲೆ ಇಲ್ಲ. ಇನ್ನೊಂದು ಕಡೆಯಲ್ಲಿ ನಿತೀಶ್ ರೆಡ್ಡಿಯ ಆಟ.. ಮಕ ಮೂತಿ ನೋಡದೇ ಚಚ್ಚೋದು ಅಂತಾರಲ್ಲ.. ಅದನ್ನೇ ಮಾಡಿದ್ದು.. ಡಿಕ್ಲೇರ್ ಹೊತ್ತಿಗೆ ಆಸ್ಟ್ರೇಲಿಯಾ ಮುಂದೆ ದೊಡ್ಡ ಬೆಟ್ಟ.

ಬೆಟ್ಟ ಹತ್ತೋಕೆ ಬಂದ ಮೊದಲ ನಾಲ್ವರು ಡಬಲ್ ಡಿಜಿಟ್ ಚೆಂದವನ್ನೂ ಕಾಣೋಕೆ ಆಗಲಿಲ್ಲ. ಬುಮ್ರಾ ಸಿರಾಜ್ ಅಬ್ಬರವೇ ಹಾಗಿತ್ತು. ಇಲ್ಲಿ ತನಕ ಆಸ್ಟ್ರೇಲಿಯಾ ಪರ್ತ್ ಸ್ಟೇಡಿಯಂನಲ್ಲಿ ಸೋಲೇ ಕಂಡಿರ್ಲಿಲ್ಲವಂತೆ. ಅದನ್ನೂ ಕೂಡ ಮನೆಗೆ ಬಂದ ನೆಂಟರು ಉಡುಗೊರೆ ಕೊಟ್ಟಿದಾರೆ.

ಈ ಸಮಯದಲ್ಲಿ ಗಂಭೀರ್ ಕೂಡ ನೆನಪಾಗಲೇ ಬೇಕು. ಸೋತಾಗ ಮಾತ್ರ ನೆನಪಿಸಿಕೊಂಡ್ರೆ ಸರಿ ಅನಿಸೋದೇ ಇಲ್ಲ..

ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ ❤️🇮🇳

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ನೀವು ಎಲ್ಲಾದರೂ ಹಣ ಹೂಡಿಕೆ ಮಾಡುತ್ತೀರಾ,ಹಾಗಾದರೆ ಹೂಡಿಕೆಗೂ ಮುನ್ನ ನಿಮ್ಮನ್ನು ನೀವು ಈ ಪ್ರಶ್ನೆಗಳನ್ನು ಕೇಳಿಕೊಳ್ಳಿ,.!

    ಸಾಮಾನ್ಯವಾಗಿ  ಎಲ್ಲರೂ ಯಾವುದೊ ಒಂದು ಕಡೆ ಅಥವಾ ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡುತ್ತಾರೆ . ಮುಖ್ಯವಾಗಿ  ಹೆಚ್ಚಿನ ಆದಾಯ ಬರುವ  ಭರವಸೆಗಳನ್ನು ನೀಡುವ ಕಡೆ ಮೊರೆ ಹೋಗುತ್ತಾರೆ. ಆದಾಯವನ್ನು ನೋಡುತ್ತಾರೆ ಹೊರತು ಕಂಪನಿಗಳ ಬಗ್ಗೆ ಸಂಪೂರ್ಣ ಮಾಹಿತಿ ತಿಳಿದುಕೊಂಡಿರುವುದಿಲ್ಲ, ಮತ್ತು  ಏಜೆಂಟ್‌ಗಳ ಮೂಲಕ ತಮ್ಮಉತ್ಪನ್ನಗಳನ್ನು ಮಾರಾಟ ಮಾಡಿ ಮೋಸಮಾಡಿರುವ ಕಂಪನಿಗಳ ಉದಾಹರಣೆಯು  ಸಹ ಸಾಕಷ್ಟಿದೆ.ಹಣ ಹೂಡಿಕೆ ಮಾಡಿದ ನಂತರ ಲಾಭವನ್ನು ಗಳಿಸದೆ, ತಮ್ಮ ಅಗತ್ಯತೆಗಳನ್ನು ಪೂರೈಸಿಕೊಳ್ಳಲು ಸಾಧ್ಯವಾಗದೆ ಪರದಾಡುವ ಜನರು ಸಾಕಷ್ಟಿದ್ದಾರೆ. ಸಮಾಜದಲ್ಲಿ ಒಂದೇ ಬಾರಿಗೆ ಹಣ ಡಬಲ್ಆಗಬೇಕೆಂದು…

  • ಉಪಯುಕ್ತ ಮಾಹಿತಿ, ದೇಶ-ವಿದೇಶ

    ಪ್ರಧಾನಿ ನರೆಂದ್ರ ಮೋದಿ ಅವರ ಕನಸಿನ ಬುಲೆಟ್ ರೈಲು ಬಗ್ಗೆ ನಿಮಗೆ ಗೊತ್ತಾ..? ತಿಳಿಯಲು ಈ ಲೇಕನ ಓದಿ…

    ಪ್ರಧಾನಿ ನರೆಂದ್ರ ಮೋದಿ ಅವರ ಕನಸಿನ ಬುಲೆಟ್ ರೈಲು ಯೋಜನೆಗೆ ಗುರುವಾರ ಶಂಕುಸ್ಥಾಪನೆ ನಡೆಯಲಿದೆ. ಜಪಾನ್ ಪ್ರಧಾನಿ ಶಿಂಜೋ ಅಬೆ ಮತ್ತು ಮೋದಿ ಅವರು ಅಹಮದಾಬಾದ್‍ನಲ್ಲಿ ಅಡಿಗಲ್ಲು ಹಾಕುವ ಮೂಲಕ ಯೋಜನೆಗೆ ಚಾಲನೆ ಸಿಗಲಿದೆ.ಇದರ ಒಂದಿಷ್ಟು ಮಾಹಿತಿ ಇಲ್ಲಿದೆ ನೋಡಿ.

  • ಆರೋಗ್ಯ

    ಅವಧಿ ಮುಗಿದ ಔಷಧಿ ಬಳಸುತ್ತಿರುವ ಸರ್ಕಾರಿ ಆಸ್ಪತ್ರೆಯ ವೈದ್ಯರು ಮತ್ತು ಸಿಬ್ಬಂದಿಗಳು ,,ಜನರ ಜೀವದಜೊತೆ ಚೆಲ್ಲಾಟ..!

    ಅವಧಿ ಮುಗಿದು ತಿಂಗಳು ಕಳೆದ ಗ್ಲೂಕೋಸ್ ಬಾಟೆಲ್ ಗಳನ್ನು ರೋಗಿಗಳಿಗೆ ಇಂಜೆಕ್ಟ್ ಮಾಡಿ ರೋಗಿಗಳ ಜೀವದೊಂದಿಗೆ ಸರ್ಕಾರಿ ಆಸ್ಪತ್ರೆಯ ವೈದ್ಯರು ಮತ್ತು ಸಿಬ್ಬಂದಿ ಚೆಲ್ಲಾಟವಾಡುತ್ತಿರುವ ಘಟನೆ ಬೆಳಕಿಗೆ ಬಂದಿದೆ. ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ತೊರೆಮೂಡಲಪಾಳ್ಯ ಗ್ರಾಮದ ವೆಂಕಟಮ್ಮ ಎಂಬ ವಯೋವೃದ್ದೆ, ವಿಪರೀತ ಸುಸ್ತು ಕಂಡ ಹಿನ್ನೆಲೆ ನೆಲಮಂಗಲ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದರು, ಈ ವೇಳೆಯಲ್ಲಿಅವಧಿ ಮೀರಿದ ಗ್ಲೂಕೋಸ್ ಬಾಟೆಲ್ ಗಳನ್ನು ಇಲ್ಲಿನ ನಸ್೯ಗಳು ನೀಡಿದ್ದಾರೆ. ಇನ್ನೂ ಈ ಸಮಸ್ಯೆಯನ್ನು ಪ್ರಶ್ನಿಸಿದರೇ ಅವಧಿ ಮುಗಿದು ಮೂರು ತಿಂಗಳುವರೆಗೂ…

  • National, News Paper, ಉಪಯುಕ್ತ ಮಾಹಿತಿ

    ಪಿಎಂ ಕಿಸಾನ್ ಸಮ್ಮನ್ ನಿಧಿಯೋಜನೆ

    ದೇಶದ ರೈತರ ಕಷ್ಟವನ್ನು ಕಡಿಮೆ ಮಾಡಲು, ಪಿಎಂ ಕಿಸಾನ್ ಯೋಜನೆ ಅಡಿಯಲ್ಲಿ, 2,000 ರೂಪಾಯಿಗಳನ್ನು ಕೇಂದ್ರ ಸರ್ಕಾರ ರೈತರ ಖಾತೆಗೆ ವರ್ಗಾಯಿಸಲಾಗುತ್ತದೆ. ಪಿಎಂ ಕಿಸಾನ್ ಸಮ್ಮನ್ ನಿಧಿ ಯೋಜನೆಯನ್ನು ಮೋದಿ ಸರ್ಕಾರವು ಫೆಬ್ರವರಿ 24, 2019 ರಂದು ಪ್ರಾರಂಭಿಸಿತು. ಈ ಯೋಜನೆಯಡಿ ಸರ್ಕಾರ ಪ್ರತಿ ವರ್ಷ 3 ಕಂತುಗಳಲ್ಲಿ 6000 ರುಪಾಯಿ ಮೊದಲ ಕಂತು ಡಿಸೆಂಬರ್ 1 ರಿಂದ ಮಾರ್ಚ್ 31 ರವರೆಗೆ ನೀಡಲಾಗುತ್ತದೆ. ಅದೇ ಸಮಯದಲ್ಲಿ, ಎರಡನೇ ಕಂತನ್ನು ನೇರವಾಗಿ ಏಪ್ರಿಲ್ 1 ರಿಂದ ಜುಲೈ…

  • inspirational

    ಮಾಲೂರು ನಾಗರಸಭೆಯಿಂದ ಪ್ಲಾಸ್ಟಿಕ್ ನಿಷೇಧ ಉಲ್ಲಂಘನೆಗೆ ದಂಡ

    ಮಾಲೂರು: ಪರಿಸರ ಸಂರಕ್ಷಣೆಗಾಗಿ ಸರ್ಕಾರದಿಂದ ನಿಷೇಧಿತ ಪ್ಲಾಸ್ಟಿಕ್ ಬಳಕೆಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತಿದೆ. ಈ ಹಿನ್ನೆಲೆಯಲ್ಲಿ Malur ನಗರದ ನಾಗರಸಭೆ ಅಧಿಕಾರಿಗಳು ವ್ಯಾಪಕ ತಪಾಸಣೆ ನಡೆಸಿದ್ದಾರೆ. ತಪಾಸಣೆ ವೇಳೆ ಹಲವು ಅಂಗಡಿಗಳು ನಿಷೇಧಿತ ಪ್ಲಾಸ್ಟಿಕ್ ಕ್ಯಾರಿ ಬ್ಯಾಗ್‌ಗಳನ್ನು ಬಳಸುತ್ತಿರುವುದು ಪತ್ತೆಯಾಗಿದೆ. ನಿಯಮ ಉಲ್ಲಂಘಿಸಿದ ಅಂಗಡಿಗಳಿಗೆ ನಾಗರಸಭೆ ಅಧಿಕಾರಿಗಳು ತಕ್ಷಣ ದಂಡ ವಿಧಿಸಿದ್ದಾರೆ. ಹಲವು ಅಂಗಡಿಗಳಿಗೆ ನೋಟಿಸ್ ನೀಡಲಾಗಿದ್ದು, ಸಾವಿರಾರು ರೂಪಾಯಿಗಳ ದಂಡ ಸಂಗ್ರಹಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ನಾಗರಸಭೆ ಅಧಿಕಾರಿಗಳು ವ್ಯಾಪಾರಿಗಳಿಗೆ ಎಚ್ಚರಿಕೆ ನೀಡಿದ್ದು, ಮುಂದಿನ ದಿನಗಳಲ್ಲಿ…

  • ಜ್ಯೋತಿಷ್ಯ

    ನೀವು ಇಷ್ಟಪಡುವ ದೇವರನ್ನು ನೆನಯುತ್ತ ನಿಮ್ಮ ಇಂದಿನ ಭವಿಷ್ಯ ಹೇಗಿದೆ ನೋಡಿರಿ

    ಮೇಷ ರಾಶಿ ಭವಿಷ್ಯ (Friday, December 10, 2021) ಸರ್ವತೋಮುಖ ಅಭಿವೃದ್ಧಿ ಸಾಧ್ಯವಿದ್ದಾಗ ಮಾತ್ರ ಮಾನಸಿಕ ಮತ್ತು ನೈತಿಕ ಶಿಕ್ಷಣದ ಜೊತೆ ದೈಹಿಕ ಶಿಕ್ಷಣವನ್ನೂ ತೆಗೆದುಕೊಳ್ಳಿ. ಆರೋಗ್ಯಕರ ಮನಸ್ಸು ಯಾವಾಗಲೂ ಆರೋಗ್ಯಕರ ದೇಹದಲ್ಲಿ ಪರ್ಯವಸಾನವಾಗುತ್ತದೆಂದು ನೆನಪಿಡಿ. ಹಿಂದೆ ತಮ್ಮ ಹಣವನ್ನು ಹೂಡಿಕೆ ಮಾಡಿದ ಜನರು ಇಂದು ಆ ಹಣದಿಂದ ಲಾಭ ಪಡೆಯುವ ಸಾಧ್ಯತೆಯಿದೆ. ಪತ್ನಿಯ ವ್ಯವಹಾರಗಳಲ್ಲಿ ನಿಮ್ಮ ಹಸ್ತಕ್ಷೇಪ ಅವಳಿಗೆ ಕಿರಿಕಿರಿ ಮಾಡಬಹುದು. ಕೋಪ ಭುಗಿಲೇಳುವುದನ್ನು ತಪ್ಪಿಸಲು ಅವಳ ಅನುಮತಿ ತೆಗೆದುಕೊಳ್ಳಿ. ನೀವು ಸುಲಭವಾಗಿ ಸಮಸ್ಯೆಯನ್ನು ತಪ್ಪಿಸಬಹುದು….