ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸ್ಲೆಡ್ಜಿಂಗ್ ಸೈತಾನರ ಸೊಕ್ಕು ಮುರಿದ ಪಂದ್ಯ

ಪಡಿಕ್ಕಲ್ ಯಾವ್ ಬಸ್ಸನ್ನ ಹತ್ಕೊಂಡು ಬಂದ..? ಅರೆ ಇವ್ನು ರೆಡ್ಡಿಗಾರು ಎಲ್ಲಿಂದ ಬಂದ..? ರಾಣಾ ಇಲ್ಲೇನ್ ಮಾಡ್ತಾ ಇದಾನೆ..? ಧ್ರುವ ಜುರೇಲ್ ಕೂಡ ಆಡ್ತಾ ಇದಾನಾ..? ಅವರು ನೋಡಿದ್ರೆ ಅವರ ಬೆಸ್ಟ್ ಟೀಮ್ ತಂದಿದೆ. ಬೌಲಿಂಗ್ ಲೈನ್ ಅಪ್ ನೋಡಿದರೆ ಎದೆಯೊಳಗೆ ಜಲ್ಲಿ ಮಶೀನ್ ಆನ್ ಆದ ಹಾಗಿದೆ.
ಖವಾಜಾ, ಸ್ಮಿತ್, ಹೆಡ್, ಲಬುಶೇನ್, ಮಾರ್ಶ್, ಕ್ಯಾಪ್ಟನ್ ಕಮ್ಮಿನ್ಸ್, ಸ್ಟಾರ್ಕ್, ಹೆಜಲ್ವುಡ್, ನಥಾನ್ ಲಿನ್ ಯಪ್ಪ.. ಅನುಭವಿಗಳೇ ಎಲ್ ನೋಡಿದರೂ ಕಾಣೋದು. ಮೊದಲ ಮ್ಯಾಚ್ ದೇವರಿಗೆ ಅಂತ ಭಾರತದ ಮೊದಲ ಇನ್ನಿಂಗ್ಸ್ ನೋಡಿ ನನ್ನನ್ನೂ ಸೇರಿ ಅನೇಕರಿಗೆ ಅನಿಸಿರಬಹುದು. ಇದಕ್ಕೆ ಇನ್ನೊಂದು ಕಾರಣ ಟೀಮಲ್ಲಿ ಕಂಡ ಮುಖಗಳು.
ಆದ್ರೆ ಈ ಆಟದಲ್ಲಿ ಏನನ್ನೂ ಬೇಗ ನಿರ್ಧರಿಸಬಾರದು ಅನ್ನೋದನ್ನ ಈ ಹಿಂದೆ ಅನೇಕ ಪಂದ್ಯಗಳು ಸಾಬೀತು ಮಾಡಿವೆ. ಮೊದಲ ಇನ್ನಿಂಗ್ಸಲ್ಲಿ ನಮ್ದು 150..ಆಸ್ಟ್ರೇಲಿಯಾ 104..ಕೊನೆ ವಿಕೆಟಿಗೆ ಬಂದ 25 ರನ್ನುಗಳ ಪಾರ್ಟ್ನರ್ ಶಿಪ್ ಅತಿ ದೊಡ್ಡದು. ಬುಮ್ರಾ , ರಾಣಾ, ಸಿರಾಜ್ ಎಸೆದಿದ್ದು ಬೆಂಕಿ ಉಂಡೆಗಳನ್ನ. ಎರಡೂ ತಂಡದ ಮೊದಲ ಇನ್ನಿಂಗ್ಸ್ ಸೇರಿಸಿದ್ರೆ ಆಗೋದು 254 ರನ್ಸ್.. ಆದ್ರೆ ಈಗ ಭಾರತ ಗೆದ್ದ ಲೀಡ್ 295 ರನ್ಸ್.. 🔥

ಎರಡನೇ ಇನ್ನಿಂಗ್ಸ್ ತುಂಬಾ ವರ್ಷಗಳ ಕಾಲ ನೆನಪಲ್ಲಿ ಉಳಿಯೋ ಆಟ.. ಇಡೀ ದಿನ ಜೈಸ್ವಾಲ್ ಹಾಗೂ ರಾಹುಲ್ ಆ ದೈತ್ಯ ಬೌಲಿಂಗ್ ಲೈನ್ ಅಪ್ನ ಗೋಳಾಡಿಸಿದ್ರಲ್ಲ.. ಜೈಸ್ವಾಲ್ ಅಂತೂ ಬೌಲ್ ಮಾಡಿದ್ರೆ ಬ್ಯಾಟ್ ಮಾಡೋದು ಬಾಕಿ ಟೈಮಲ್ಲಿ ರೋಸ್ಟ್ ಮಾಡೋದು. ಅದು ಸ್ಟಾರ್ಕ್ಗೆ.. ಆತ್ಮವಿಶ್ವಾಸ ತುಂಬಿ ತುಳುಕ್ತಾ ಇದೆ. ಪಡಿಕ್ಕಲ್ ತನಗಿರೋ ಅನುಭಕ್ಕೆ ತಕ್ಕಂತೆ ಕೊಡುಗೆ ಕೊಟ್ಟ ಅನಿಸ್ತು..
ಬಟ್ ಗರ್ಜಿಸುವಂತೆ ಮಾಡಿದ್ದು ಕೊಹ್ಲಿ ಶತಕ. ಕೊಹ್ಲಿ ಮತ್ತು ಆಸ್ಟ್ರೇಲಿಯಾ ಚಕಾಮಕಿ ತುಂಬಾ ಹಳೆಯದ್ದು.. ಎಂತದ್ದೇ ಅಸ್ತ್ರ ಹೂಡಿದ್ರೂ ಕೊಹ್ಲಿ ವಿಕೆಟ್ ಪಡೆಯೋಕೆ ಆಗಲೆ ಇಲ್ಲ. ಇನ್ನೊಂದು ಕಡೆಯಲ್ಲಿ ನಿತೀಶ್ ರೆಡ್ಡಿಯ ಆಟ.. ಮಕ ಮೂತಿ ನೋಡದೇ ಚಚ್ಚೋದು ಅಂತಾರಲ್ಲ.. ಅದನ್ನೇ ಮಾಡಿದ್ದು.. ಡಿಕ್ಲೇರ್ ಹೊತ್ತಿಗೆ ಆಸ್ಟ್ರೇಲಿಯಾ ಮುಂದೆ ದೊಡ್ಡ ಬೆಟ್ಟ.
ಬೆಟ್ಟ ಹತ್ತೋಕೆ ಬಂದ ಮೊದಲ ನಾಲ್ವರು ಡಬಲ್ ಡಿಜಿಟ್ ಚೆಂದವನ್ನೂ ಕಾಣೋಕೆ ಆಗಲಿಲ್ಲ. ಬುಮ್ರಾ ಸಿರಾಜ್ ಅಬ್ಬರವೇ ಹಾಗಿತ್ತು. ಇಲ್ಲಿ ತನಕ ಆಸ್ಟ್ರೇಲಿಯಾ ಪರ್ತ್ ಸ್ಟೇಡಿಯಂನಲ್ಲಿ ಸೋಲೇ ಕಂಡಿರ್ಲಿಲ್ಲವಂತೆ. ಅದನ್ನೂ ಕೂಡ ಮನೆಗೆ ಬಂದ ನೆಂಟರು ಉಡುಗೊರೆ ಕೊಟ್ಟಿದಾರೆ.
ಈ ಸಮಯದಲ್ಲಿ ಗಂಭೀರ್ ಕೂಡ ನೆನಪಾಗಲೇ ಬೇಕು. ಸೋತಾಗ ಮಾತ್ರ ನೆನಪಿಸಿಕೊಂಡ್ರೆ ಸರಿ ಅನಿಸೋದೇ ಇಲ್ಲ..
ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ ❤️🇮🇳
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹುಟ್ಟುಹಬ್ಬದಂದು ಸ್ನೇಹಿತರು ಎಲ್ಲ ಸೇರಿ ಯುವಕನಿಗೆ ಬರ್ತ್ ಡೇ ಬಂಪ್ಸ್ ಕೊಟ್ಟಿದ್ದು, ಇದರಿಂದ ವಿದ್ಯಾರ್ಥಿ ಮೃತಪಟ್ಟ ಘಟನೆ ತಮಿಳುನಾಡಿದ ಚೆನ್ನೈನಲ್ಲಿ ನಡೆದಿದೆ. ಕಳೆದ ಎರಡು ತಿಂಗಳ ಹಿಂದೆ ಈ ಘಟನೆ ನಡೆದಿದ್ದು, ಈಗ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಮೃತಪಟ್ಟ ಯುವಕ ಬೆಂಗಳೂರಿನ ಐಐಎಂ ವಿದ್ಯಾರ್ಥಿ ಎಂದು ತಿಳಿದು ಬಂದಿದೆ. ಯುವಕ ಎರಡು ತಿಂಗಳ ಹಿಂದೆ ತನ್ನ ಹುಟ್ಟುಹಬ್ಬವನ್ನು ಸ್ನೇಹಿತರ ಜೊತೆ ಆಚರಿಸಿಕೊಂಡಿದ್ದನು. ಈ ವೇಳೆ ಸ್ನೇಹಿತರು ಎಲ್ಲರು ಸೇರಿ ಆತನಿಗೆ ಬರ್ತ್ ಡೇ…
ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಭಿನಯದ ‘ಪೈಲ್ವಾನ್’ ಬಿಡುಗಡೆಯಾದಲ್ಲೆಲ್ಲ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಬೆಳಗಿನ ಜಾವದಿಂದಲೇ ಪ್ರದರ್ಶನ ಆರಂಭವಾಗುವ ಮೂಲಕ ಭರ್ಜರಿ ಓಪನಿಂಗ್ ಪಡೆದುಕೊಂಡಿದೆ. ಚಿತ್ರದ ಮೊದಲ ದಿನದ ಗಳಿಕೆ ಕುರಿತಾಗಿ ಲೆಕ್ಕಾಚಾರ ನಡೆದಿದೆ. ಕರ್ನಾಟಕದ 450 ಸ್ಕ್ರೀನ್ ಗಳು, ಅಮೆರಿಕದ 50 ಕ್ಕೂ ಹೆಚ್ಚು ಥಿಯೇಟರ್ ಗಳಲ್ಲಿ ‘ಪೈಲ್ವಾನ್’ ತೆರೆಕಂಡಿದೆ. ರಾಜ್ಯ ಮಾತ್ರವಲ್ಲದೇ, ದೇಶ, ವಿದೇಶಗಳಲ್ಲಿಯೂ ‘ಪೈಲ್ವಾನ್’ ಅಬ್ಬರ ಜೋರಾಗಿದೆ. ಕನ್ನಡ, ತೆಲುಗು ಸೇರಿ ಬಹುಭಾಷೆಗಳಲ್ಲಿ ನಿರ್ಮಾಣವಾಗಿರುವ ‘ಪೈಲ್ವಾನ್’ 3000 ಕ್ಕೂ ಅಧಿಕ ಸ್ಕ್ರೀನ್ ಗಳಲ್ಲಿ…
ಕಠಿಣ ಪರಿಶ್ರಮ ಹಾಗೂ ಪ್ರಯತ್ನದ ಫಲವಾಗಿ ರ್ಯಾಪರ್ ಚಂದನ್ ಶೆಟ್ಟಿ ಸ್ಯಾಂಡಲ್ವುಡ್ ನಲ್ಲಿ ಒಂದು ಹೆಸರು ಪಡೆದು ಇದೀಗ ದೊಡ್ಡ ಮಟ್ಟದ ಸಂಭಾವನೆ ಪಡೆಯುವ ಮೂಲಕ ಸಾಧನೆಯ ಹಾದಿಯಲ್ಲಿ ಮತ್ತೊಂದು ಹೆಜ್ಜೆ ಮುಂದಿಟ್ಟಿದ್ದಾರೆ.. ಹೌದು, ದಂಗಾಗುವಂತಿದೆ ಚಂದನ್ ಶೆಟ್ಟಿ ಸಂಭಾವನೆ. ಹೌದು, ಕನ್ನಡ ರ್ಯಾಪರ್ ಚಂದನ್ ಶೆಟ್ಟಿ ‘ಬಿಗ್ ಬಾಸ್’ನಿಂದ ಬಂದ ಬಳಿಕ ಫುಲ್ ಬ್ಯುಸಿಯಾಗಿದ್ದಾರೆ. ವಿವಿಧೆಡೆ ಕಾರ್ಯಕ್ರಮ ನೀಡುವ ಚಂದನ್ ಶೆಟ್ಟಿ ಅವರ ಅಭಿಮಾನಿಗಳ ಸಂಖ್ಯೆ ಭಾರೀ ಜಾಸ್ತಿಯಾಗಿದೆ. ರಿಯಾಲಿಟಿ ಶೋ, ಸಿನಿಮಾಗಳಲ್ಲಿಯೂ ಅವರು ಬ್ಯುಸಿಯಾಗಿದ್ದಾರೆ….
ಮೊಟ್ಟೆ ಪೌಸ್ಟಿಕವಾದ ಆಹಾರ.ನಾವು ಸಾಮಾನ್ಯವಾಗಿ ಮೊಟ್ಟೆ ಬೇಯಿಸಿದಾಗ ಅಥವಾ ಆಮ್ಲೆಟ್ ಮಾಡಲು ಹೋದಾಗ ಮೊಟ್ಟೆ ಹೊಡೆದು ಮೊಟ್ಟೆ ಚಿಪ್ಪನ್ನು ಬಿಸಾಡುತ್ತೇವೆ.
ಇದು ಬಾಲಗಂಗಾಧರನಾಥ ಸ್ವಾಮೀಜಿ ಮಹಾ ಸಮಾಧಿಯಾದ ಬಳಿಕ ಆದಿ ಚುಂಚನಗಿರಿ ಮಠದ 72ನೇ ಪೀಠಾಧಿಕಾರಿಯಾದ ನಿರ್ಮಲಾನಂದನಾಥ ಸ್ವಾಮೀಜಿ ಪೂರ್ವಾಶ್ರಮದ ವೃತ್ತಾಂತ.
ಯಲಹಂಕ ಸಾಂಪ್ರದಾಯಿಕ ಸಿರಿಯನ್ನು ಹೊಂದಿರುವ ಕ್ಷೇತ್ರ. ಈ ಹಿಂದೆ 2008ರ ನಂತರ ಇಂದು ಪ್ರತಿಷ್ಠಿತ ಕ್ಷೇತ್ರವಾಗಿ ಮಾರ್ಪಟ್ಟಿದೆ.