ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸ್ಲೆಡ್ಜಿಂಗ್ ಸೈತಾನರ ಸೊಕ್ಕು ಮುರಿದ ಪಂದ್ಯ

ಪಡಿಕ್ಕಲ್ ಯಾವ್ ಬಸ್ಸನ್ನ ಹತ್ಕೊಂಡು ಬಂದ..? ಅರೆ ಇವ್ನು ರೆಡ್ಡಿಗಾರು ಎಲ್ಲಿಂದ ಬಂದ..? ರಾಣಾ ಇಲ್ಲೇನ್ ಮಾಡ್ತಾ ಇದಾನೆ..? ಧ್ರುವ ಜುರೇಲ್ ಕೂಡ ಆಡ್ತಾ ಇದಾನಾ..? ಅವರು ನೋಡಿದ್ರೆ ಅವರ ಬೆಸ್ಟ್ ಟೀಮ್ ತಂದಿದೆ. ಬೌಲಿಂಗ್ ಲೈನ್ ಅಪ್ ನೋಡಿದರೆ ಎದೆಯೊಳಗೆ ಜಲ್ಲಿ ಮಶೀನ್ ಆನ್ ಆದ ಹಾಗಿದೆ.
ಖವಾಜಾ, ಸ್ಮಿತ್, ಹೆಡ್, ಲಬುಶೇನ್, ಮಾರ್ಶ್, ಕ್ಯಾಪ್ಟನ್ ಕಮ್ಮಿನ್ಸ್, ಸ್ಟಾರ್ಕ್, ಹೆಜಲ್ವುಡ್, ನಥಾನ್ ಲಿನ್ ಯಪ್ಪ.. ಅನುಭವಿಗಳೇ ಎಲ್ ನೋಡಿದರೂ ಕಾಣೋದು. ಮೊದಲ ಮ್ಯಾಚ್ ದೇವರಿಗೆ ಅಂತ ಭಾರತದ ಮೊದಲ ಇನ್ನಿಂಗ್ಸ್ ನೋಡಿ ನನ್ನನ್ನೂ ಸೇರಿ ಅನೇಕರಿಗೆ ಅನಿಸಿರಬಹುದು. ಇದಕ್ಕೆ ಇನ್ನೊಂದು ಕಾರಣ ಟೀಮಲ್ಲಿ ಕಂಡ ಮುಖಗಳು.
ಆದ್ರೆ ಈ ಆಟದಲ್ಲಿ ಏನನ್ನೂ ಬೇಗ ನಿರ್ಧರಿಸಬಾರದು ಅನ್ನೋದನ್ನ ಈ ಹಿಂದೆ ಅನೇಕ ಪಂದ್ಯಗಳು ಸಾಬೀತು ಮಾಡಿವೆ. ಮೊದಲ ಇನ್ನಿಂಗ್ಸಲ್ಲಿ ನಮ್ದು 150..ಆಸ್ಟ್ರೇಲಿಯಾ 104..ಕೊನೆ ವಿಕೆಟಿಗೆ ಬಂದ 25 ರನ್ನುಗಳ ಪಾರ್ಟ್ನರ್ ಶಿಪ್ ಅತಿ ದೊಡ್ಡದು. ಬುಮ್ರಾ , ರಾಣಾ, ಸಿರಾಜ್ ಎಸೆದಿದ್ದು ಬೆಂಕಿ ಉಂಡೆಗಳನ್ನ. ಎರಡೂ ತಂಡದ ಮೊದಲ ಇನ್ನಿಂಗ್ಸ್ ಸೇರಿಸಿದ್ರೆ ಆಗೋದು 254 ರನ್ಸ್.. ಆದ್ರೆ ಈಗ ಭಾರತ ಗೆದ್ದ ಲೀಡ್ 295 ರನ್ಸ್.. 🔥

ಎರಡನೇ ಇನ್ನಿಂಗ್ಸ್ ತುಂಬಾ ವರ್ಷಗಳ ಕಾಲ ನೆನಪಲ್ಲಿ ಉಳಿಯೋ ಆಟ.. ಇಡೀ ದಿನ ಜೈಸ್ವಾಲ್ ಹಾಗೂ ರಾಹುಲ್ ಆ ದೈತ್ಯ ಬೌಲಿಂಗ್ ಲೈನ್ ಅಪ್ನ ಗೋಳಾಡಿಸಿದ್ರಲ್ಲ.. ಜೈಸ್ವಾಲ್ ಅಂತೂ ಬೌಲ್ ಮಾಡಿದ್ರೆ ಬ್ಯಾಟ್ ಮಾಡೋದು ಬಾಕಿ ಟೈಮಲ್ಲಿ ರೋಸ್ಟ್ ಮಾಡೋದು. ಅದು ಸ್ಟಾರ್ಕ್ಗೆ.. ಆತ್ಮವಿಶ್ವಾಸ ತುಂಬಿ ತುಳುಕ್ತಾ ಇದೆ. ಪಡಿಕ್ಕಲ್ ತನಗಿರೋ ಅನುಭಕ್ಕೆ ತಕ್ಕಂತೆ ಕೊಡುಗೆ ಕೊಟ್ಟ ಅನಿಸ್ತು..
ಬಟ್ ಗರ್ಜಿಸುವಂತೆ ಮಾಡಿದ್ದು ಕೊಹ್ಲಿ ಶತಕ. ಕೊಹ್ಲಿ ಮತ್ತು ಆಸ್ಟ್ರೇಲಿಯಾ ಚಕಾಮಕಿ ತುಂಬಾ ಹಳೆಯದ್ದು.. ಎಂತದ್ದೇ ಅಸ್ತ್ರ ಹೂಡಿದ್ರೂ ಕೊಹ್ಲಿ ವಿಕೆಟ್ ಪಡೆಯೋಕೆ ಆಗಲೆ ಇಲ್ಲ. ಇನ್ನೊಂದು ಕಡೆಯಲ್ಲಿ ನಿತೀಶ್ ರೆಡ್ಡಿಯ ಆಟ.. ಮಕ ಮೂತಿ ನೋಡದೇ ಚಚ್ಚೋದು ಅಂತಾರಲ್ಲ.. ಅದನ್ನೇ ಮಾಡಿದ್ದು.. ಡಿಕ್ಲೇರ್ ಹೊತ್ತಿಗೆ ಆಸ್ಟ್ರೇಲಿಯಾ ಮುಂದೆ ದೊಡ್ಡ ಬೆಟ್ಟ.
ಬೆಟ್ಟ ಹತ್ತೋಕೆ ಬಂದ ಮೊದಲ ನಾಲ್ವರು ಡಬಲ್ ಡಿಜಿಟ್ ಚೆಂದವನ್ನೂ ಕಾಣೋಕೆ ಆಗಲಿಲ್ಲ. ಬುಮ್ರಾ ಸಿರಾಜ್ ಅಬ್ಬರವೇ ಹಾಗಿತ್ತು. ಇಲ್ಲಿ ತನಕ ಆಸ್ಟ್ರೇಲಿಯಾ ಪರ್ತ್ ಸ್ಟೇಡಿಯಂನಲ್ಲಿ ಸೋಲೇ ಕಂಡಿರ್ಲಿಲ್ಲವಂತೆ. ಅದನ್ನೂ ಕೂಡ ಮನೆಗೆ ಬಂದ ನೆಂಟರು ಉಡುಗೊರೆ ಕೊಟ್ಟಿದಾರೆ.
ಈ ಸಮಯದಲ್ಲಿ ಗಂಭೀರ್ ಕೂಡ ನೆನಪಾಗಲೇ ಬೇಕು. ಸೋತಾಗ ಮಾತ್ರ ನೆನಪಿಸಿಕೊಂಡ್ರೆ ಸರಿ ಅನಿಸೋದೇ ಇಲ್ಲ..
ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ ❤️🇮🇳
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸರ್ಕಾರ ಉಳಿಸಿಕೊಳ್ಳಲು ಕಾಂಗ್ರೆಸ್ ನಾಯಕರು ಮುಂದಾಗಿದ್ದು, ಡಿಸಿಎಂ ಜಿ.ಪರಮೇಶ್ವರ್ ಸೇರಿದಂತೆ ಮಾಜಿ ಸಿಎಂ ಆಪ್ತರೆಲ್ಲ ರಾಜೀನಾಮೆ ನೀಡಿದ್ದಾರೆ. ಇಂದು ಬೆಳಗ್ಗೆ ಪರಮೇಶ್ವರ್ ಅವರು ಕರೆದ ಉಪಹಾರ ಕೂಟಕ್ಕೆ ಆಗಮಿಸಿದ್ದ ಎಲ್ಲ ಸಚಿವರು ತಮ್ಮ ಶಾಸಕಾಂಗ ಸಭೆಯ ನಾಯಕ ಸಿದ್ದರಾಮಯ್ಯರಿಗೆ ರಾಜೀನಾಮೆ ನೀಡಿದ್ದಾರೆ. ಜಿ.ಪರಮೇಶ್ವರ್, ಡಿ.ಕೆ.ಶಿವಕುಮಾರ್, ಎಂ.ಬಿ.ಪಾಟೀಲ್, ಕೆ.ಜೆ.ಜಾರ್ಜ್, ಕೃಷ್ಣೆಬೈರೇಗೌಡರು ಸೇರಿದಂತೆ ಎಲ್ಲ 22 ಸಚಿವರು ತಮ್ಮ ರಾಜೀನಾಮೆಯನ್ನು ಪಕ್ಷದ ಅಧ್ಯಕ್ಷರಿಗೆ ನೀಡಿದ್ದಾರೆ. ಇತ್ತ ರಾಜೀನಾಮೆ ನೀಡಿ ಹೊರ ಬಂದು ಮಾತನಾಡಿದ ಸಚಿವ ರಹೀಂಖಾನ್, ಪಕ್ಷದ ಅಧ್ಯಕ್ಷರಿಗೆ ರಾಜೀನಾಮೆ…
ಮೈಸೂರಿನ ಅಧಿದೇವತೆ ಶ್ರೀ ಚಾಮುಂಡೇಶ್ವರಿಯ ಆರಾಧನೆಯೊಡನೆ ಆರಂಭವಾಗುವ ನವರಾತ್ರಿ ವೈಭವದ ವಿಜಯ ದಶಮಿಯ ಮೈಸೂರು ದಸರಾ ಮಹೋತ್ಸವಕ್ಕೆ ಅದರದೇ ಆದ ಐತಿಹಾಸಿಕ ಪರಂಪರೆ ಹಾಗೂ ಸಾಂಸ್ಕೃತಿಕ ಹಿರಿಮೆ ಇದೆ. ವಿಜಯನಗರ ಸಾಮ್ರಾಜ್ಯದ ಅರಸರ ಕಾಲದಲ್ಲಿ ಆರಂಭಗೊಂಡು ಆಚರಿಸಲ್ಪಡುತ್ತಿದ್ದ ನವರಾತ್ರಿ ಉತ್ಸವದ ವಿಜಯ ದಶಮಿಯ ದಸರಾ ಹಬ್ಬಕ್ಕೆ ಇನ್ನೂ ಹೆಚ್ಚಿನ ವೈಭವದ ವರ್ಣಮಯ ಕಳೆ ತಂದುಕೊಟ್ಟವರು ವಿಜಯನಗರ ಅರಸರಲ್ಲೇ ಅತ್ಯಂತ ಪ್ರಖ್ಯಾತರಾಗಿದ್ದ ಶ್ರೀ ಕೃಷ್ಣದೇವರಾಯರು. ಆಗ ಹಂಪೆಯಲ್ಲಿರುವ ಮಹಾನವಮಿ ದಿಬ್ಬ ಮತ್ತು ವಿಜಯ ವಿಠಲ ದೇವಾಲಯಗಳು ಈ ಮಹೋತ್ಸವದ…
ವಯಸ್ಸಿಗೂ ಬುದ್ದಿವನ್ತಿಕೆಗೂ ಏನೂ ಸಂಭಂದವಿಲ್ಲ ಅಂತಾರೆ. ಇಂತಹವರನ್ನೂ ನೋಡಿಯೇ ಇಂತಹ ಮಾತು ಹೇಳಿದ್ದಾರೆ ಅನಿಸುತ್ತದೆ. ಏಕೆಂದರೆ, ನೀವು ಶಾಕ್ ಆಗ್ತೀರ, ಇನ್ನೂ ಹತ್ತನೇ ತರಗತಿ ಓದುತ್ತಿರುವ ಹರ್ಷವರ್ಧನ್ ಜಾಲಾ ಏರೋಬಾಟಿಕ್ಸ್ 7 ಟೆಕ್ ಸೊಲ್ಯೂಷನ್ಸ್ ಎಂಬ ಸಂಸ್ಥೆಯ ವ್ಯವಸ್ಥಾಪಕ, ಸಿಇಓ.
ಐಎಸ್ಸಿ ಪರೀಕ್ಷೆಯಲ್ಲಿ ದೇಶಕ್ಕೆ 4ನೇ ಸ್ಥಾನ ಪಡೆದ ವಿದ್ಯಾರ್ಥಿನಿ ಒಬ್ಬಳಿಗೆ ಒಂದು ದಿನದ ಮಟ್ಟಿಗೆ ಕೊಲ್ಕತ್ತಾ ಡಿಸಿಪಿ ಆಗುವ ಯೋಗ ಒದಗಿ ಬಂದಿದೆ. ಈ ಸಾಧನೆ ಮಾಡಿರುವ ವಿಧ್ಯಾರ್ಥಿನಿಯ ಹೆಸರು ರೀಚಾ ಸಿಂಗ್ ಎಂದು. ಈ ಪ್ರತಿಭಾನ್ವಿತ ವಿಧ್ಯಾರ್ಥಿನಿಯ ಸಾಧನೆಯನ್ನು ಶ್ಲಾಘಿಸುವ ಸಲುವಾಗಿ ಒಂದು ದಿನದ ಮಟ್ಟಿಗೆ ಕೊಲ್ಕತ್ತಾ ಉಪ ಪೊಲೀಸ್ ಕಮಿಷನರ್ ಆಗುವ ಅವಕಾಶ ನೀಡಲಾಗಿತ್ತು. ಕೊಲ್ಕತ್ತಾದ ಜಿ.ಡಿ. ಬಿರ್ಲಾ ಸೆಂಟರ್ ಫಾರ್ ಎಜುಕೇಷನ್ನಲ್ಲಿ ವಿಧ್ಯಾಭ್ಯಾಸ ಮಾಡಿರೋ ರಿಚಾ, ಪ್ಲಸ್ 2 ಪರೀಕ್ಷೆಯಲ್ಲಿ ಶೇ. 99.25…
ಯಶ್ ಅಭಿನಯದ ಕೆಜಿಎಫ್ ಚಿತ್ರ ವಿಶ್ವದಾದ್ಯಂತ ಬಿಡುಗಡೆಯಾಗಿ ಬಿರುಗಾಳಿಯಂತೆ ಮುನ್ನುಗ್ಗುತ್ತಿದೆ. ಮೊದಲ ಬಾರಿಗೆ ಕನ್ನಡ ಚಿತ್ರವೊಂದು ಕನ್ನಡ ಚಿತ್ರರಂಗವನ್ನು ಮತ್ತೊಂದು ನೆಕ್ಸ್ಟ್ ಲೆವೆಲ್ ಗೆ ತೆಗೆದುಕೊಂಡುಹೋಗಿರುವುದು ಸುಳ್ಳಲ್ಲ. ಈಗ ಕನ್ನಡ ಚಿತ್ರರಂಗದ ಸುದೀಪ್ ಅಭಿನಯದ ಮತ್ತೊಂದು ಬಹು ನಿರೀಕ್ಷಿತ ಚಿತ್ರ ಪೈಲ್ವಾನ್ ನೂತನ ದಾಖಲೆ ಬರೆಯಲು ಸಜ್ಜಾಗಿದೆ. ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ ಚಿತ್ರದ ಐದು ಭಾಷೆಗಳಲ್ಲಿ ತೆರೆಕಂಡು ಧೂಳೆಬ್ಬಿಸುತ್ತಿದ್ದು ಎಲ್ಲೆಡೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಕನ್ನಡ ಚಿತ್ರಕ್ಕೆ ಹೊಸ ಮಾರುಕಟ್ಟೆಯನ್ನು ಕೆಜಿಎಫ್ ಚಿತ್ರ ತೋರಿಸಿಕೊಟ್ಟಿದೆ….
ಮಂಡ್ಯ ಲೋಕಸಭಾ ಕ್ಷೇತ್ರದ ಚುನಾವಣಾ ಪ್ರಚಾರ ತಾರಕಕ್ಕೇರಿದ್ದು ವೈಯಕ್ತಿಕ ಆರೋಪ-ಪ್ರತ್ಯಾರೋಪಗಳು ಮುಗಿಲು ಮುಟ್ಟಿದ್ದು, ಈ ಮಧ್ಯೆ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್, ಜೆಡಿಎಸ್ ನಾಯಕರ ವಿರುದ್ಧ ಮಾಡಿರುವ ಆರೋಪ, ರಾಜ್ಯ ರಾಜಕಾರಣದಲ್ಲಿ ಅಲ್ಲೋಲಕಲ್ಲೋಲಕ್ಕೆ ಕಾರಣವಾಗಿದೆ. ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿರುವ ಸುಮಲತಾ ಅಂಬರೀಶ್, ಹತಾಶೆಗೊಳಗಾಗಿರುವ ಜೆಡಿಎಸ್ ನಾಯಕರು ಈಗ ತಮ್ಮ ವಿರುದ್ಧ ವೈಯಕ್ತಿಕ ಜೀವನದ ಕುರಿತು ದಾಳಿ ನಡೆಸಲು ಮುಂದಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಇದಕ್ಕಾಗಿ ಫೋಟೋ ಹಾಗೂ ವಿಡಿಯೋ ಮಾರ್ಫ್ ಮಾಡುವ ಕುರಿತು ಅವರುಗಳು ಸಮಾಲೋಚನೆ…