inspirational

ಸ್ಲೆಡ್ಜಿಂಗ್ ಸೈತಾನರ ಸೊಕ್ಕು ಮುರಿದ ಪಂದ್ಯ

63

ಸ್ಲೆಡ್ಜಿಂಗ್ ಸೈತಾನರ ಸೊಕ್ಕು ಮುರಿದ ಪಂದ್ಯ

ಪಡಿಕ್ಕಲ್ ಯಾವ್ ಬಸ್ಸನ್ನ ಹತ್ಕೊಂಡು ಬಂದ..? ಅರೆ ಇವ್ನು ರೆಡ್ಡಿಗಾರು ಎಲ್ಲಿಂದ ಬಂದ..? ರಾಣಾ ಇಲ್ಲೇನ್ ಮಾಡ್ತಾ ಇದಾನೆ..? ಧ್ರುವ ಜುರೇಲ್ ಕೂಡ ಆಡ್ತಾ ಇದಾನಾ..? ಅವರು ನೋಡಿದ್ರೆ ಅವರ ಬೆಸ್ಟ್ ಟೀಮ್ ತಂದಿದೆ. ಬೌಲಿಂಗ್ ಲೈನ್ ಅಪ್ ನೋಡಿದರೆ ಎದೆಯೊಳಗೆ ಜಲ್ಲಿ ಮಶೀನ್ ಆನ್ ಆದ ಹಾಗಿದೆ.

ಖವಾಜಾ, ಸ್ಮಿತ್, ಹೆಡ್, ಲಬುಶೇನ್, ಮಾರ್ಶ್, ಕ್ಯಾಪ್ಟನ್ ಕಮ್ಮಿನ್ಸ್, ಸ್ಟಾರ್ಕ್, ಹೆಜಲ್ವುಡ್, ನಥಾನ್ ಲಿನ್ ಯಪ್ಪ.. ಅನುಭವಿಗಳೇ ಎಲ್ ನೋಡಿದರೂ ಕಾಣೋದು. ಮೊದಲ ಮ್ಯಾಚ್ ದೇವರಿಗೆ ಅಂತ ಭಾರತದ ಮೊದಲ ಇನ್ನಿಂಗ್ಸ್ ನೋಡಿ ನನ್ನನ್ನೂ ಸೇರಿ ಅನೇಕರಿಗೆ ಅನಿಸಿರಬಹುದು. ಇದಕ್ಕೆ ಇನ್ನೊಂದು ಕಾರಣ ಟೀಮಲ್ಲಿ ಕಂಡ ಮುಖಗಳು.

ಆದ್ರೆ ಈ ಆಟದಲ್ಲಿ ಏನನ್ನೂ ಬೇಗ ನಿರ್ಧರಿಸಬಾರದು ಅನ್ನೋದನ್ನ ಈ ಹಿಂದೆ ಅನೇಕ ಪಂದ್ಯಗಳು ಸಾಬೀತು ಮಾಡಿವೆ. ಮೊದಲ ಇನ್ನಿಂಗ್ಸಲ್ಲಿ ನಮ್ದು 150..ಆಸ್ಟ್ರೇಲಿಯಾ 104..ಕೊನೆ ವಿಕೆಟಿಗೆ ಬಂದ 25 ರನ್ನುಗಳ ಪಾರ್ಟ್​ನರ್ ಶಿಪ್ ಅತಿ ದೊಡ್ಡದು. ಬುಮ್ರಾ , ರಾಣಾ, ಸಿರಾಜ್ ಎಸೆದಿದ್ದು ಬೆಂಕಿ ಉಂಡೆಗಳನ್ನ. ಎರಡೂ ತಂಡದ ಮೊದಲ ಇನ್ನಿಂಗ್ಸ್ ಸೇರಿಸಿದ್ರೆ ಆಗೋದು 254 ರನ್ಸ್.. ಆದ್ರೆ ಈಗ ಭಾರತ ಗೆದ್ದ ಲೀಡ್ 295 ರನ್ಸ್.. 🔥

ಎರಡನೇ ಇನ್ನಿಂಗ್ಸ್ ತುಂಬಾ ವರ್ಷಗಳ ಕಾಲ ನೆನಪಲ್ಲಿ ಉಳಿಯೋ ಆಟ.. ಇಡೀ ದಿನ ಜೈಸ್ವಾಲ್ ಹಾಗೂ ರಾಹುಲ್ ಆ ದೈತ್ಯ ಬೌಲಿಂಗ್ ಲೈನ್​ ಅಪ್​ನ ಗೋಳಾಡಿಸಿದ್ರಲ್ಲ.. ಜೈಸ್ವಾಲ್ ಅಂತೂ ಬೌಲ್ ಮಾಡಿದ್ರೆ ಬ್ಯಾಟ್ ಮಾಡೋದು ಬಾಕಿ ಟೈಮಲ್ಲಿ ರೋಸ್ಟ್ ಮಾಡೋದು. ಅದು ಸ್ಟಾರ್ಕ್​ಗೆ.. ಆತ್ಮವಿಶ್ವಾಸ ತುಂಬಿ ತುಳುಕ್ತಾ ಇದೆ. ಪಡಿಕ್ಕಲ್ ತನಗಿರೋ ಅನುಭಕ್ಕೆ ತಕ್ಕಂತೆ ಕೊಡುಗೆ ಕೊಟ್ಟ ಅನಿಸ್ತು..

ಬಟ್ ಗರ್ಜಿಸುವಂತೆ ಮಾಡಿದ್ದು ಕೊಹ್ಲಿ ಶತಕ. ಕೊಹ್ಲಿ ಮತ್ತು ಆಸ್ಟ್ರೇಲಿಯಾ ಚಕಾಮಕಿ ತುಂಬಾ ಹಳೆಯದ್ದು.. ಎಂತದ್ದೇ ಅಸ್ತ್ರ ಹೂಡಿದ್ರೂ ಕೊಹ್ಲಿ ವಿಕೆಟ್ ಪಡೆಯೋಕೆ ಆಗಲೆ ಇಲ್ಲ. ಇನ್ನೊಂದು ಕಡೆಯಲ್ಲಿ ನಿತೀಶ್ ರೆಡ್ಡಿಯ ಆಟ.. ಮಕ ಮೂತಿ ನೋಡದೇ ಚಚ್ಚೋದು ಅಂತಾರಲ್ಲ.. ಅದನ್ನೇ ಮಾಡಿದ್ದು.. ಡಿಕ್ಲೇರ್ ಹೊತ್ತಿಗೆ ಆಸ್ಟ್ರೇಲಿಯಾ ಮುಂದೆ ದೊಡ್ಡ ಬೆಟ್ಟ.

ಬೆಟ್ಟ ಹತ್ತೋಕೆ ಬಂದ ಮೊದಲ ನಾಲ್ವರು ಡಬಲ್ ಡಿಜಿಟ್ ಚೆಂದವನ್ನೂ ಕಾಣೋಕೆ ಆಗಲಿಲ್ಲ. ಬುಮ್ರಾ ಸಿರಾಜ್ ಅಬ್ಬರವೇ ಹಾಗಿತ್ತು. ಇಲ್ಲಿ ತನಕ ಆಸ್ಟ್ರೇಲಿಯಾ ಪರ್ತ್ ಸ್ಟೇಡಿಯಂನಲ್ಲಿ ಸೋಲೇ ಕಂಡಿರ್ಲಿಲ್ಲವಂತೆ. ಅದನ್ನೂ ಕೂಡ ಮನೆಗೆ ಬಂದ ನೆಂಟರು ಉಡುಗೊರೆ ಕೊಟ್ಟಿದಾರೆ.

ಈ ಸಮಯದಲ್ಲಿ ಗಂಭೀರ್ ಕೂಡ ನೆನಪಾಗಲೇ ಬೇಕು. ಸೋತಾಗ ಮಾತ್ರ ನೆನಪಿಸಿಕೊಂಡ್ರೆ ಸರಿ ಅನಿಸೋದೇ ಇಲ್ಲ..

ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ ❤️🇮🇳

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ಈ ಡೇಟ್ ನಂದು ಹುಟ್ಟಿದ ಹೆಣ್ಣುಮಕ್ಕಳು ತುಂಬಾ ಭಾಗ್ಯಶಾಲಿಯಾಗಿರುತ್ತಾರೆ!ಹಾಗಾದ್ರೆ ನೀವು ಹುಟ್ಟಿದ ದಿನ ಯಾವುದು ನೋಡಿ?

    ಜಗತ್ತಿನಲ್ಲಿ ಅನೇಕ ಹುಡುಗಿಯರು ತುಂಬಾ ಅದೃಷ್ಟವಂತರಾಗಿದ್ದಾರೆ. ಮತ್ತೆ ಕೆಲ ಹುಡುಗಿಯರು ದುರಾದೃಷ್ಟಕ್ಕೆ ಕಣ್ಣೀರು ಹಾಕ್ತಾರೆ. ಅದೃಷ್ಟವಂತರಾಗಲು ಅವ್ರ ಜನ್ಮ ದಿನಾಂಕ ಕಾರಣ. ಜ್ಯೋತಿಷ್ಯ ಶಾಸ್ತ್ರದಲ್ಲಿ ಜನ್ಮ ದಿನಾಂಕ ಹಾಗೂ ಹುಡುಗಿಯರ ಅದೃಷ್ಟ, ದುರಾದೃಷ್ಟದ ಬಗ್ಗೆ ವಿವರಿಸಲಾಗಿದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಯಾವುದೇ ತಿಂಗಳ 5 ನೇ ತಾರೀಕಿನಂದು ಜನಿಸಿದ ಹುಡುಗಿಯರು ಅದೃಷ್ಟವಂತರಾಗಿರುತ್ತಾರೆ. ಈ ದಿನ ಗ್ರಹದಲ್ಲಿ ಬದಲಾವಣೆಯಾಗುತ್ತದೆ. ಈ ದಿನ ಹುಟ್ಟಿದ ಹುಡುಗಿಯರು ಸುಲಭವಾಗಿ ಯಶಸ್ಸು ಗಳಿಸ್ತಾರೆ. ಸಾಧನೆ ಶಿಖರಕ್ಕೇರುತ್ತಾರೆ. ಸುಖ-ಸಮೃದ್ಧಿ ನೆಲೆಸಿರುತ್ತದೆ. ಎಲ್ಲ ಕೆಲಸ ಯಶಸ್ವಿಯಾಗಿ…

  • ಸುದ್ದಿ

    ಇಂದು ಚಂದನ್ ಶೆಟ್ಟಿ-ನಿವೇದಿತಾ ಗೌಡ ನಿಶ್ಚಿತಾರ್ಥ..ಎಲ್ಲಿ ಗೊತ್ತ ?

    ಗಾಯಕ ಚಂದನ್ ಶೆಟ್ಟಿ ಹಾಗೂ ಬಿಗ್ ಬಾಸ್ ಸ್ಪರ್ಧಿ ನಿವೇದಿತಾ ಗೌಡ ನಿಶ್ಚಿತಾರ್ಥ ಇಂದು (ಸೋಮವಾರ) ನಡೆಯಲಿದೆ. ಮೈಸೂರಿನ ಖಾಸಗಿ ಹೋಟೆಲ್ ನಲ್ಲಿ ಈ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದೆ. ಕುಟುಂಬ ಸದಸ್ಯರು ಹಾಗೂ ಸ್ನೇಹಿತರು ಮಾತ್ರ ಭಾಗಿಯಾಗಲಿದ್ದಾರೆ. ಖಾಸಗಿ ವಾಹಿನಿಯ ರಿಯಾಲಿಟಿ ಶೋನಲ್ಲಿ ಭಾಗಿಯಾಗಿದ್ದ ನಿವೇದಿತಾ ಮತ್ತು ಚಂದನ್ ಪ್ರೇಮ ಜೋಡಿಗಳ ರೀತಿಯಲ್ಲಿಯೇ ಬಿಂಬಿತವಾಗಿದ್ದರು. ರಿಯಾಲಿಟಿ ಶೋ ಬಳಿಕ ನಾವಿಬ್ಬರು ಜಸ್ಟ್ ಫ್ರೆಂಡ್ಸ್ ಅಂತಾ ಹೇಳಿದ್ದರು. ಕಳೆದ ಎರಡು ವರ್ಷಗಳಿಂದ ಚಂದನ್ ಮತ್ತು ನಿವೇದಿತಾ ನಡುವೆ ಪ್ರೇಮಾಂಕುರವಾಗಿದೆ…

  • ಸುದ್ದಿ

    ಪುಟ್ಟ ಮಕ್ಕಳಿಗೆ ವಿಳ್ಯೆದೆಲೆ ಯನ್ನು ಹೊಟ್ಟೆಗೆ ಅಂಟಿಸುವುದರಿಂದ ಎಷ್ಟೆಲ್ಲಾ ಲಾಭವಿದೆ ಗೊತ್ತಾ,.!ಇದನೊಮ್ಮೆ ತಿಳಿಯಿರಿ.

    ಹೌದು ಹುಟ್ಟಿದ ಮಕ್ಕಳಿಗೆ ಒಂದು ತಿಂಗಳಿನಿಂದ ವಿಳ್ಯೆದೆಲೆಯನ್ನು ಹೊಟ್ಟೆಗೆ ಅಂಟಿಸುತ್ತಾರೆ.. ಇದನ್ನು ಸಾಮಾನ್ಯವಾಗಿ 1 ವರ್ಷದವರೆಗೂ ಮುಂದುವರೆಸುತ್ತಾರೆ.. ಇದಕ್ಕೆ ಕಾರಣ ಮತ್ತು ಉಪಯೋಗ ಇಲ್ಲಿದೆ ನೋಡಿ.. ಹುಟ್ಟಿದ ಮಕ್ಕಳು ಸೂಕ್ಷ್ಮವಾಗಿರುತ್ತವೆ.. ಜೊತೆಗೆ ಗರ್ಭದಿಂದ ಹೊರ ಬಂದು ವಾತಾವರಣಕ್ಕೆ ಹೊಂದಿಕೊಳ್ಳಬೇಕು.. ಪುಟ್ಟ ಮಕ್ಕಳಿಗೆ ಆರೋಗ್ಯ ಕೆಟ್ಟರೆ ಚೇತರಿಸಿಕೊಳ್ಳುವುದು ಬಲು ಕಷ್ಟ.. ಅದಕ್ಕಾಗಿಯೇ ಮಕ್ಕಳ ಆರೋಗ್ಯ ಕೆಡದೇ ಇರುವ ರೀತಿಯಲ್ಲಿ ನೋಡಿಕೊಳ್ಳಬೇಕು. ಸಾಮಾನ್ಯವಾಗಿ ಅಜೀರ್ಣದ ಸಮಸ್ಯೆ ಮಕ್ಕಳಲ್ಲಿ ಬೇಗ ಕಾಣಿಸಿಕೊಳ್ಳುತ್ತವೆ. ಮಲ ಮೂತ್ರ ವಿಸರ್ಜಿಸಲು ತುಂಬಾ ಕಷ್ಟ ಪಡುತ್ತವೆ.. ಇದಕ್ಕಾಗಿಯೇ…

  • ಜ್ಯೋತಿಷ್ಯ

    ದಿನ ಭವಿಷ್ಯ ಸೋಮವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ಯಾವುದು ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(1 ಏಪ್ರಿಲ್, 2019) ನಿಮ್ಮ ಆರೋಗ್ಯವನ್ನು ನಿರ್ಲಕ್ಷ್ಯ ಮಾಡಬೇಡಿ ವಿಶೇಷವಾಗಿ ಮದ್ಯಪಾನ ಮಾಡಬೇಡಿ. ಇದು ಮತ್ತೊಂದು ಚೈತನ್ಯದಾಯಕ…

  • ಸುದ್ದಿ

    ಅಧ್ಯಯನ ಮುಂದುವರೆಸಿದ ಇಸ್ರೋ HOPE FOR THE BEST ಎಂದ ಮೋದಿ,..!

    ದೇಶದ ಮಹತ್ವದ ಚಂದ್ರಯಾನ-2 ದ ವಿಕ್ರಂ ಲ್ಯಾಂಡರ್​  ಸಂಪರ್ಕ ಕಡಿತಗೊಂಡಿದ್ದರೂ ನೀರಿಕ್ಷೆಗಳು ಮುಗಿದಿಲ್ಲ. ಹೌದು ಇಸ್ರೋ ಚಂದ್ರಾನ್ವೇಷಣೆ ಯತ್ನದಲ್ಲಿ ಇನ್ನೂ ಕೊನೆಯ ನಿರೀಕ್ಷೆಗಳು ಇದ್ದೇ ಇವೆ. ಕೊನೆ ಹಂತದಲ್ಲಿ ಸಂಪರ್ಕ ಕಡಿದುಕೊಂಡ ವಿಕ್ರಮ್​​ ಲ್ಯಾಂಡರ್​​​ ಬಗ್ಗೆ ಇಸ್ರೋ ಅಧ್ಯಯನ ಮುಂದುವರೆಸಿದ್ದು, ಯಾವುದೇ ಕ್ಷಣದಲ್ಲಾದರೂ ವಿಕ್ರಮ್​ ಲ್ಯಾಂಡರ್​ ಮಾಹಿತಿ ರವಾನಿಸಬಹುದೆಂಬ ನೀರಿಕ್ಷೆಯಲ್ಲಿದೆ ಇಸ್ರೋ. ಚಂದ್ರನ ದಕ್ಷಿಣ ಧ್ರುವಕ್ಕೆ ಸ್ಪರ್ಶ ಮಾಡುವ ಹಂತದಲ್ಲಿ ವಿಕ್ರಂ ಲ್ಯಾಂಡರ್​​​​​​​ ಸಂಪರ್ಕ ಕಡಿತಕೊಂಡಿತ್ತು. 2.1 ಕಿಲೋ ಮೀಟರ್​ ದೂರದಲ್ಲಿ ಇಸ್ರೋ ಹಿಡಿತಕ್ಕೆ ಸಿಗದೇ ಮುಂಜಾನೆ 1.55ರ…

  • ಸುದ್ದಿ

    ಉದ್ಯೋಗದ ನಿರೀಕ್ಷೆಯಲ್ಲಿರುವ ಕನ್ನಡಿಗರಿಗೆ ಇಲ್ಲಿದೆ ಶುಭ ಸುದ್ದಿ, ಇನ್ಮುಂದೆ ಖಾಸಗಿ ವಲಯದಲ್ಲೂ ಮೀಸಲಾತಿ…!

    ಉದ್ಯೋಗದ ನಿರೀಕ್ಷೆಯಲ್ಲಿದ್ದ ಕನ್ನಡಿಗರಿಗೆ ಶುಭ ಸುದ್ದಿ ಇಲ್ಲಿದೆ. ಖಾಸಗಿ ವಲಯದ ಉದ್ಯೋಗದಲ್ಲಿ ಕನ್ನಡಿಗರಿಗೆ ಮೀಸಲಾತಿ ನೀಡುವ ಕುರಿತು ಅಧಿಸೂಚನೆ ಹೊರಬಿದ್ದಿದೆ. ಸರೋಜಿನಿ ಮಹಿಷಿ ವರದಿಯನ್ನು ಪರಿಷ್ಕರಿಸಿ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಸರ್ಕಾರಕ್ಕೆ ವರದಿ ಸಲ್ಲಿಸಿದೆ. ಹಿಂದಿನ ಸರ್ಕಾರದ ಬಜೆಟ್ ನಲ್ಲಿ ಕನ್ನಡಿಗರಿಗೆ ಉದ್ಯೋಗ ನೀಡುವ ಬಗ್ಗೆ ಘೋಷಣೆ ಮಾಡಲಾಗಿತ್ತು. ನಂತರದಲ್ಲಿ ಚರ್ಚೆಗಳು ನಡೆದು ಅಧಿಸೂಚನೆ ಹೊರಡಿಸಲಾಗಿದೆ. ಅನೇಕ ಕೈಗಾರಿಕೋದ್ಯಮಿಗಳೊಂದಿಗೆ ಸರ್ಕಾರ ಈಗಾಗಲೇ ಚರ್ಚೆ ನಡೆಸಿದ್ದು, ಕರ್ನಾಟಕ ಕೈಗಾರಿಕಾ ಉದ್ಯೋಗ(ಸ್ಥಾಯಿ ಆದೇಶಗಳು) ನಿಯಮ 1969 ತಿದ್ದುಪಡಿ ತರುತ್ತಿದೆ. ಇದರ…