News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
inspirational

ಸ್ಲೆಡ್ಜಿಂಗ್ ಸೈತಾನರ ಸೊಕ್ಕು ಮುರಿದ ಪಂದ್ಯ

76

ಸ್ಲೆಡ್ಜಿಂಗ್ ಸೈತಾನರ ಸೊಕ್ಕು ಮುರಿದ ಪಂದ್ಯ

ಪಡಿಕ್ಕಲ್ ಯಾವ್ ಬಸ್ಸನ್ನ ಹತ್ಕೊಂಡು ಬಂದ..? ಅರೆ ಇವ್ನು ರೆಡ್ಡಿಗಾರು ಎಲ್ಲಿಂದ ಬಂದ..? ರಾಣಾ ಇಲ್ಲೇನ್ ಮಾಡ್ತಾ ಇದಾನೆ..? ಧ್ರುವ ಜುರೇಲ್ ಕೂಡ ಆಡ್ತಾ ಇದಾನಾ..? ಅವರು ನೋಡಿದ್ರೆ ಅವರ ಬೆಸ್ಟ್ ಟೀಮ್ ತಂದಿದೆ. ಬೌಲಿಂಗ್ ಲೈನ್ ಅಪ್ ನೋಡಿದರೆ ಎದೆಯೊಳಗೆ ಜಲ್ಲಿ ಮಶೀನ್ ಆನ್ ಆದ ಹಾಗಿದೆ.

ಖವಾಜಾ, ಸ್ಮಿತ್, ಹೆಡ್, ಲಬುಶೇನ್, ಮಾರ್ಶ್, ಕ್ಯಾಪ್ಟನ್ ಕಮ್ಮಿನ್ಸ್, ಸ್ಟಾರ್ಕ್, ಹೆಜಲ್ವುಡ್, ನಥಾನ್ ಲಿನ್ ಯಪ್ಪ.. ಅನುಭವಿಗಳೇ ಎಲ್ ನೋಡಿದರೂ ಕಾಣೋದು. ಮೊದಲ ಮ್ಯಾಚ್ ದೇವರಿಗೆ ಅಂತ ಭಾರತದ ಮೊದಲ ಇನ್ನಿಂಗ್ಸ್ ನೋಡಿ ನನ್ನನ್ನೂ ಸೇರಿ ಅನೇಕರಿಗೆ ಅನಿಸಿರಬಹುದು. ಇದಕ್ಕೆ ಇನ್ನೊಂದು ಕಾರಣ ಟೀಮಲ್ಲಿ ಕಂಡ ಮುಖಗಳು.

ಆದ್ರೆ ಈ ಆಟದಲ್ಲಿ ಏನನ್ನೂ ಬೇಗ ನಿರ್ಧರಿಸಬಾರದು ಅನ್ನೋದನ್ನ ಈ ಹಿಂದೆ ಅನೇಕ ಪಂದ್ಯಗಳು ಸಾಬೀತು ಮಾಡಿವೆ. ಮೊದಲ ಇನ್ನಿಂಗ್ಸಲ್ಲಿ ನಮ್ದು 150..ಆಸ್ಟ್ರೇಲಿಯಾ 104..ಕೊನೆ ವಿಕೆಟಿಗೆ ಬಂದ 25 ರನ್ನುಗಳ ಪಾರ್ಟ್​ನರ್ ಶಿಪ್ ಅತಿ ದೊಡ್ಡದು. ಬುಮ್ರಾ , ರಾಣಾ, ಸಿರಾಜ್ ಎಸೆದಿದ್ದು ಬೆಂಕಿ ಉಂಡೆಗಳನ್ನ. ಎರಡೂ ತಂಡದ ಮೊದಲ ಇನ್ನಿಂಗ್ಸ್ ಸೇರಿಸಿದ್ರೆ ಆಗೋದು 254 ರನ್ಸ್.. ಆದ್ರೆ ಈಗ ಭಾರತ ಗೆದ್ದ ಲೀಡ್ 295 ರನ್ಸ್.. 🔥

ಎರಡನೇ ಇನ್ನಿಂಗ್ಸ್ ತುಂಬಾ ವರ್ಷಗಳ ಕಾಲ ನೆನಪಲ್ಲಿ ಉಳಿಯೋ ಆಟ.. ಇಡೀ ದಿನ ಜೈಸ್ವಾಲ್ ಹಾಗೂ ರಾಹುಲ್ ಆ ದೈತ್ಯ ಬೌಲಿಂಗ್ ಲೈನ್​ ಅಪ್​ನ ಗೋಳಾಡಿಸಿದ್ರಲ್ಲ.. ಜೈಸ್ವಾಲ್ ಅಂತೂ ಬೌಲ್ ಮಾಡಿದ್ರೆ ಬ್ಯಾಟ್ ಮಾಡೋದು ಬಾಕಿ ಟೈಮಲ್ಲಿ ರೋಸ್ಟ್ ಮಾಡೋದು. ಅದು ಸ್ಟಾರ್ಕ್​ಗೆ.. ಆತ್ಮವಿಶ್ವಾಸ ತುಂಬಿ ತುಳುಕ್ತಾ ಇದೆ. ಪಡಿಕ್ಕಲ್ ತನಗಿರೋ ಅನುಭಕ್ಕೆ ತಕ್ಕಂತೆ ಕೊಡುಗೆ ಕೊಟ್ಟ ಅನಿಸ್ತು..

ಬಟ್ ಗರ್ಜಿಸುವಂತೆ ಮಾಡಿದ್ದು ಕೊಹ್ಲಿ ಶತಕ. ಕೊಹ್ಲಿ ಮತ್ತು ಆಸ್ಟ್ರೇಲಿಯಾ ಚಕಾಮಕಿ ತುಂಬಾ ಹಳೆಯದ್ದು.. ಎಂತದ್ದೇ ಅಸ್ತ್ರ ಹೂಡಿದ್ರೂ ಕೊಹ್ಲಿ ವಿಕೆಟ್ ಪಡೆಯೋಕೆ ಆಗಲೆ ಇಲ್ಲ. ಇನ್ನೊಂದು ಕಡೆಯಲ್ಲಿ ನಿತೀಶ್ ರೆಡ್ಡಿಯ ಆಟ.. ಮಕ ಮೂತಿ ನೋಡದೇ ಚಚ್ಚೋದು ಅಂತಾರಲ್ಲ.. ಅದನ್ನೇ ಮಾಡಿದ್ದು.. ಡಿಕ್ಲೇರ್ ಹೊತ್ತಿಗೆ ಆಸ್ಟ್ರೇಲಿಯಾ ಮುಂದೆ ದೊಡ್ಡ ಬೆಟ್ಟ.

ಬೆಟ್ಟ ಹತ್ತೋಕೆ ಬಂದ ಮೊದಲ ನಾಲ್ವರು ಡಬಲ್ ಡಿಜಿಟ್ ಚೆಂದವನ್ನೂ ಕಾಣೋಕೆ ಆಗಲಿಲ್ಲ. ಬುಮ್ರಾ ಸಿರಾಜ್ ಅಬ್ಬರವೇ ಹಾಗಿತ್ತು. ಇಲ್ಲಿ ತನಕ ಆಸ್ಟ್ರೇಲಿಯಾ ಪರ್ತ್ ಸ್ಟೇಡಿಯಂನಲ್ಲಿ ಸೋಲೇ ಕಂಡಿರ್ಲಿಲ್ಲವಂತೆ. ಅದನ್ನೂ ಕೂಡ ಮನೆಗೆ ಬಂದ ನೆಂಟರು ಉಡುಗೊರೆ ಕೊಟ್ಟಿದಾರೆ.

ಈ ಸಮಯದಲ್ಲಿ ಗಂಭೀರ್ ಕೂಡ ನೆನಪಾಗಲೇ ಬೇಕು. ಸೋತಾಗ ಮಾತ್ರ ನೆನಪಿಸಿಕೊಂಡ್ರೆ ಸರಿ ಅನಿಸೋದೇ ಇಲ್ಲ..

ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ ❤️🇮🇳

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಮೊದಲ ಬಾರಿ ಸರ್ಕಾರಿ ಶಾಲೆಯಲ್ಲಿ ಎಸ್‍ಪಿ ರವಿ ಚನ್ನಣ್ಣನವರ್ ಗ್ರಾಮ ವಾಸ್ತವ್ಯ. ಇದರ ಹಿನ್ನೆಲೆಯೇನು.

    ರಾಜಕಾರಣಿಗಳಾಯಿತು ಇದೀಗ ಐಪಿಎಸ್ ಅಧಿಕಾರಿಯ ಸರದಿ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಎಸ್‍ಪಿ ರವಿ ಡಿ ಚನ್ನಣ್ಣನವರ್ ಇದೇ ಮೊದಲ ಬಾರಿಗೆ ಗ್ರಾಮ ವಾಸ್ತವ್ಯ ಮಾಡಿದ್ದಾರೆ. ಬೆಂಗಳೂರು ಹೊರವಲಯದ ನೆಲಮಂಗಲ ತಾಲೂಕಿನ ಅರೇ ಬೊಮ್ಮನಹಳ್ಳಿ ಗ್ರಾಮದಲ್ಲಿ ಈದ್ ಮಿಲಾದ್ ಹಬ್ಬವಿರುವ ಹಿನ್ನೆಲೆಯಲ್ಲಿ ರವಿ ಚನ್ನಣ್ಣನವರ್ ಅವರು ಗ್ರಾಮ ವಾಸ್ತವ್ಯ ಮಾಡಿದ್ದಾರೆ. ಕೋಮು ಗಲಭೆ ತಡೆಯಲು ಈ ಪ್ರಯತ್ನ ಮಾಡಲಾಗಿದ್ದು, ಅವರಿಗಾಗಿ ಶಾಲೆಯಲ್ಲಿ ಬೆಡ್, ಬೆಡ್ ಶೀಟ್, ಇನ್ನಿತರ ವಸ್ತುಗಳ ಸಿದ್ಧತೆ ಮಾಡಲಾಗಿತ್ತು. ಇದೇ ಮೊದಲ ಬಾರಿಗೆ ಬೆಂಗಳೂರು ಗ್ರಾಮಾಂತರ…

  • ಜ್ಯೋತಿಷ್ಯ

    ನಂಜುಂಡೇಶ್ವರನನ್ನು ನೆನೆಯುತ್ತಾ ನಿಮ್ಮ ಇಂದಿನ ರಾಶಿ ಭವಿಷ್ಯದ ಬಗ್ಗೆ ತಿಳಿಯಿರಿ

    ಮೇಷ ರಾಶಿ ಭವಿಷ್ಯ (Monday, November 29, 2021) ಆಶಾವಾದಿಗಳಾಗಿರಿ ಮತ್ತು ಜೀವನದ ಉಜ್ವಲ ಬದಿಯನ್ನು ನೋಡಿ. ನಿಮ್ಮ ಆತ್ಮವಿಶ್ವಾಸಭರಿತ ನಿರೀಕ್ಷೆಗಳು ನಿಮ್ಮ ಭರವಸೆಗಳು ಮತ್ತು ಆಸೆಗಳನ್ನು ಸಾಕ್ಷಾತ್ಕಾರಗೊಳಿಸಲು ಸಹಾಯ ಮಾಡುತ್ತವೆ. ಇಂದು ಹೂಡಿಕೆಗಳನ್ನು ಮಾಡಬಾರದು. ಸಾಮಾಜಿಕ ಕೂಟಗಳಲ್ಲಿ ನಿಮ್ಮ ಹಾಸ್ಯದ ಪ್ರಕೃತಿ ನಿಮ್ಮನ್ನು ಜನಪ್ರಿಯಗೊಳಿಸುತ್ತದೆ. ಇಂದು, ನಿಮ್ಮ ಪ್ರೀತಿ ಸಂಗಾತಿ ಶಾಶ್ವತತೆ ತನಕ ನೀವು ಪ್ರೀತಿ ಯಾರು ಒಂದು ಎಂದು ತಿಳಿಯುವುದಿಲ್ಲ. ನಿಮ್ಮ ವೃತ್ತಿಪರ ತಡೆಗಳನ್ನು ಪರಿಹರಿಸಲು ನಿಮ್ಮ ಅನುಭವವನ್ನು ಬಳಸಿ. ನಿಮ್ಮ ಸ್ವಲ್ಪ ಪ್ರಯತ್ನ…

  • ಸುದ್ದಿ

    ನಿಮ್ಮ ಅದೃಷ್ಟವನ್ನು ಬದಲಾಯಿಸಿಕೊಳ್ಳಬೇಕೇ; ಹಾಗಾದರೆ ಅಮಾವಾಸ್ಯೆಯಂದು ಹೀಗೆ ಮಾಡಿದರೆ ಸಾಕು,..

    ಹಿಂದಿನ ಕಾಲದಲ್ಲಿ ಹಿಂದೂ ಸಮಾಜದಲ್ಲಿ ಅಮಾವಾಸ್ಯೆಯಂದು ತಿಂಗಳ ರಜೆಯನ್ನಾಗಿ ನೀಡಲಾಗುತ್ತಿತ್ತು. ಪ್ರತಿತಿಂಗಳೂ ಅವಮಾಸ್ಯೆಯಂದು ರಜೆ ಇತ್ತು. ಅಮಾವಾಸ್ಯೆಯು ಶುಭವಲ್ಲವೆಂದು ಯಾರೂ ಕೆಲಸ ಮಾಡುತ್ತಿರಲಿಲ್ಲ. ಪ್ರಯಾಣವನ್ನೂ ಕೂಡಾ ಅಮವಾಸ್ಯೆಯಂದು ಮಾಡುತ್ತಿರಲಿಲ್ಲ.ಚಂದ್ರನ ಚಕ್ರವು ಜಲಮೂಲಗಳ ಮೇಲೆಯೂಪ್ರಭಾವ ಬೀರುತ್ತದೆ ಇದರಿಂದಾಗಿ ಸಮುದ್ರದಲ್ಲೂ ಉಬ್ಬರವಿಳಿತಗಳೂ ಕಂಡು ಬರುತ್ತದೆ. ಮನುಷ್ಯನನಡವಳಿಕೆಯ ಮೇಲೂ ಚಂದ್ರನು ಪ್ರಭಾವಬೀರುವುದರಿಂದ ವ್ಯಕ್ತಿಯು ಪ್ರಕ್ಷುಬ್ಧನಾಗಬಹುದು, ಇತರರಿಗೆ ಕಿರಿಕಿರಿಯುಂಟು ಮಾಡಬಹುದುಅಥವಾ ಇತರರಿಗೆ ಕೆಟ್ಟವನಾಗಬಹುದು. ಆದ್ದರಿಂದ ಅಮಾವಾಸ್ಯೆ ಹಾಗೂ ಹುಣ್ಣಿಯ ಕುರಿತುಹಲವಾರು ಆಚರಣೆಗಳು, ನಂಬಿಕೆಗಳು ಇವೆ. ಅಮಾವಾಸ್ಯೆ ಒಳ್ಳೆಯದೇ? : ಅನೇಕರಲ್ಲಿ ಅಮಾವಾಸ್ಯೆಯ ದಿನ ಒಳ್ಳೆಯದಲ್ಲ ಎಂಬ…

  • ಆರೋಗ್ಯ

    ಬೆಳ್ಳುಳ್ಳಿಯನ್ನು ಹಾಲಿನಲ್ಲಿ ಕುದಿಸಿ ಕುಡಿದ್ರೆ,ನಮ್ಮ ಆರೋಗ್ಯದ ಮೇಲೆ, ಏನೆಲ್ಲಾ ಪ್ರಯೋಜನ ಆಗುತ್ತೆ ಗೊತ್ತಾ?ತಿಳಿಯಲು ಮುಂದೆ ಓದಿ ಶೇರ್ ಮಾಡಿ…

    ನಾವು ದಿನನಿತ್ಯ ಹಾಲನ್ನು ಕುಡಿಯುತ್ತೇವೆ. ಹಾಗೆಯೇ ಬೆಳ್ಳುಳ್ಳಿಯನ್ನು ಸಹ ಊಟದ ಮುಖಾಂತರ ಸೇವಿಸುತ್ತೇವೆ. ಆದ್ರೆ ಅದೇ ಬೆಳ್ಳುಳ್ಳಿಯನ್ನು ಜಜ್ಜಿ ಹಾಲಿನ ಮುಖಾಂತರ ಸೇವಿಸಿದ್ರೆ ಏನೆಲ್ಲಾ ಪ್ರಯೋಜನ ಇದೆ ಗೊತ್ತಾ?

  • ಸುದ್ದಿ

    ಸರ್ಕಾರಿ ಶಾಲೆಯನ್ನು ದತ್ತು ಪಡೆದುಕೊಂಡು ಅಭಿವೃದ್ಧಿಗೆ ಮುಂದಾದ ಡಿಬಾಸ್ ಫ್ಯಾನ್ಸ್,.!

    ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿಮಾನಿಗಳ ಸಂಘ ‘ಡಿ ಕಂಪನಿ’ ಜಿಲ್ಲೆಯ ಕುಗ್ರಾಮವೊಂದರ ಸರ್ಕಾರಿ ಶಾಲೆಯನ್ನು ದತ್ತು ಪಡೆದುಕೊಂಡಿದ್ದು ಸಾರ್ವಜನಿಕರ ಪ್ರಶಂಸೆಗೆ ಕಾರಣವಾಗಿದೆ. ಸಕಲೇಶಪುರ ತಾಲೂಕಿನ ರಾಮೇನಹಳ್ಳಿ ಗ್ರಾಮದ ಸರ್ಕಾರಿ ಶಾಲೆಯನ್ನು ಎರಡು ವರ್ಷಕ್ಕೆ ದತ್ತು ಪಡೆದಿರುವ ದರ್ಶನ್ ಅಭಿಮಾನಿಗಳು ಶಾಲಾ ಅಭಿವೃದ್ಧಿಗೆ ಮುಂದಾಗಿದ್ದಾರೆ. ಶಾಲೆಯ ಮಕ್ಕಳಿಗೆ ಸಮವಸ್ತ್ರಗಳು, ಪುಸ್ತಕ, ಶಾಲಾ ಕಟ್ಟಡಕ್ಕೆ ಬಣ್ಣ, ಪೀಠೋಪಕರಣ ಸೇರಿದಂತೆ ಅಗತ್ಯ ಮೂಲ ಸೌಕರ್ಯಗಳನ್ನು ನೀಡುವ ವಾಗ್ದಾನವನ್ನು ದರ್ಶನ್ ಅಭಿಮಾನಿಗಳು ನೀಡಿದ್ದಾರೆ. ಈ ನಿಟ್ಟಿನಲ್ಲಿ ಡಿ ಕಂಪನಿ ಈಗಾಗಲೇ ಶಿಕ್ಷಣ ಇಲಾಖೆಯಿಂದ…

  • ಆರೋಗ್ಯ

    ನಿಂಬೆಹಣ್ಣಿನ ಈ ಉಪಯೋಗಗಳನ್ನು ಕೇಳಿದ್ರೆ, ನೀವ್ ಉಪಯೋಗಿಸದೆ ಸುಮ್ನೆ ಇರಲ್ಲ..!

    ದೇವರ ಪೂಜೆಗೆ, ಅಡುಗೆ ತಯಾರಿಕೆಗೆ, ವಾಮಾಚಾರಕ್ಕೆ, ಶುಭ ಕಾರ್ಯಗಳಿಗೆ, ಅಶುಭ ಕಾರ್ಯಗಳಿಗೆ ಬಹುತೇಕ ಎಲ್ಲಾ ಕೆಲಸಗಳಿಗೂ ನಿಂಬೆ ಹಣ್ಣು ಬೇಕೇ ಬೇಕು.ನಿಂಬೆಹಣ್ಣಿನ ಉಪಯೋಗ ಕೇವಲ ಅಡುಗೆ ಮಾಡಲಿಕ್ಕೆ, ಇಲ್ಲವೇ ಮಾಟ ಮಂತ್ರ ಮಾಡಲಿಕ್ಕೆ ಮಾತ್ರ ಸೀಮಿತವಲ್ಲ.